Headlines

ಮಹಾರಾಷ್ಟ್ರದಲ್ಲಿ ಬಿರುಗಾಳಿ ಎಬ್ಬಿಸಿದ ಶರದ್ ಪವಾರ್ ಮೌನ: ಎನ್‌ಡಿಎ ಸೇರ್ಪಡೆ ಕುರಿತು ಹಿರಿಯ ಮುತ್ಸದ್ದಿ ಮಾರ್ಮಿಕ ನುಡಿ – Kannada News | Sharad Pawar’s Silence on NDA Entry Fuels Maharashtra Political Tensions

ಮುಂಬೈ,ಜುಲೈ 18: ಮಹಾರಾಷ್ಟ್ರ ರಾಜಕೀಯದ ಚದುರಂಗದಾಟ ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಶರದ್ ಪವಾರ್(Sharad Pawar) ನೇತೃತ್ವದ ಎನ್‌ಸಿಪಿ ಬಣವು ಆಡಳಿತಾರೂಢ ಎನ್‌ಡಿಎ (NDA) ಮೈತ್ರಿಕೂಟವನ್ನು ಸೇರಲಿದೆಯೇ ಎಂಬ ಊಹಾಪೋಹಗಳು ದೇಶಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ, ಖುದ್ದಾಗಿ ಎನ್‌ಸಿಪಿ (SP) ಮುಖ್ಯಸ್ಥ ಶರದ್ ಪವಾರ್ ಈ ಬಗ್ಗೆ ನಿಗೂಢ ಮೌನ ವಹಿಸಿದ್ದಾರೆ. ಮಾಧ್ಯಮಗಳು ಈ ಕುರಿತು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದ ಅವರು, ಈ ಸಮಯದಲ್ಲಿ ಇಂತಹ ಪ್ರಶ್ನೆಗಳನ್ನು ಕೇಳುವುದು ಸೂಕ್ತವಲ್ಲ ಎಂದು ಮಾರ್ಮಿಕವಾಗಿ ಹೇಳಿ ಜಾರಿಕೊಂಡಿದ್ದಾರೆ….

Read More

ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ – Kannada News | Sanjayanagar Safety Scandal: Open Drain Injures BJP Leader, Exposing GBA’s Public Peril

ಬೆಂಗಳೂರು, ಜು.18: ರಾಜಧಾನಿಯ ಸಂಜಯನಗರದಲ್ಲಿ ಮಹಾನಗರ ಜಂಟಿ ಆಡಳಿತ (ಜಿಬಿಎ) ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮತ್ತೊಂದು ಸಾರ್ವಜನಿಕ ಅವಘಡ ಸಂಭವಿಸಿದೆ. ಚರಂಡಿಯ ಹೂಳು ಎತ್ತಿದ ಬಳಿಕ ಚೇಂಬರ್ ಅನ್ನು ಮುಚ್ಚದೇ ಹಾಗೇ ಬಿಟ್ಟಿದ್ದರಿಂದಾಗಿ, ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕರ್ನಾಟಕ ರಾಜ್ಯ ಕರಕುಶಲ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆರು ಅಡಿ ಆಳದ ಚರಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ನಿನ್ನೆ ರಾತ್ರಿ ಸಂಜಯನಗರದ ಡಾಲರ್ಸ್ ಕಾಲೋನಿ ಬಳಿ ಈ ಆಘಾತಕಾರಿ…

Read More

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ – Kannada News | ICC Confirms 12 Direct Qualifiers and New Format for 2028 T20 World Cup

ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್  ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ… (PC: ICC) Source link

Read More

FIFA World Cup 2026: ಯಾರಿಗೆ ಸಿಗಲಿದೆ ಗೋಲ್ಡನ್ ಬೂಟ್? – Kannada News | FIFA World Cup 2026 Golden Boot Contenders

FIFA World Cup 2026: ಫಿಫಾ ವಿಶ್ವಕಪ್ ಮುಕ್ತಾಯದ ಹಂತಕ್ಕೆ ತಲುಪಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಪಂದ್ಯಗಳ ಮೂಲಕ ಈ ಬಾರಿಯ ಗೋಲ್ಡನ್ ಬೂಟ್ ಯಾರಿಗೆ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ. ಸದ್ಯ ಈ ಪ್ರಶಸ್ತಿಗಾಗಿ ಐವರು ಆಟಗಾರರ ನಡುವೆ ಪೈಪೋಟಿಯಿದ್ದು, ಇವರಲ್ಲಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಮುಂಚೂಣಿಯಲ್ಲಿದ್ದಾರೆ. ಏನಿದು ಗೋಲ್ಡನ್ ಬೂಟ್? ಗೋಲ್ಡನ್ ಬೂಟ್ ಎಂಬುದು ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ಗೋಲುಗಳನ್ನು ಗಳಿಸಿದ ಆಟಗಾರನಿಗೆ ನೀಡಲಾಗುವ ಅತ್ಯುನ್ನತ…

Read More

PSI Recruitment 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ! – Kannada News | Karnataka PSI Recruitment 2026: 253 Civil Sub Inspector Vacancies Announced

ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಬಯಸುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಪ್ರಮುಖ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ಹುದ್ದೆಗಳ ಭರ್ತಿಗೆ ಭರ್ಜರಿ ಚಾಲನೆ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ತುಂಬಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು 600 ಹುದ್ದೆಗಳಿಗೆ ಅನುಮತಿ, 253 ಹುದ್ದೆಗಳ ಭರ್ತಿ: ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 600 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಅನುಮತಿ ದೊರೆತಿದೆ. ಈ…

Read More

Protest Against Kambala: ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಮೈಸೂರು, ಜುಲೈ 18: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಕಂಬಳ ನಡೆಯುವ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಕರಾವಳಿ ಭಾಗದಿಂದ 300 ಕಿಲೋಮೀಟರ್ ದೂರದಿಂದ ಕೋಣಗಳನ್ನು ಕರೆತರುವುದು, ಜಾಗವನ್ನು ಹಾಳು ಮಾಡುವುದು ಮತ್ತು ಮರಗಳನ್ನು ಕಡಿಯುವುದು ಪರಿಸರಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಮರಗಳನ್ನು ಕಡಿಯಲು ಪರಿಸರ ಇಲಾಖೆಯಿಂದ ಅನುಮತಿ ಕೇಳಿರುವುದು…

Read More

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು? – Kannada News | Shiva Rajkumar watched and praised Mother Promise movie

ಡಾಲಿ ಧನಂಜಯ್ (Daali Dhananjaya) ನಿರ್ಮಿಸಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರು ಸಹ ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ….

Read More

ವೈಷ್ಣೋದೇವಿ ದೇವಾಲಯದಲ್ಲಿ 500 ಕೋಟಿ ರೂ. ದೇಣಿಗೆ ಹಗರಣ, 70 ಕೆಜಿಯಲ್ಲಿ ಕೇವಲ 3 ಕೆಜಿ ಮಾತ್ರ ನಿಜವಾದ ಬೆಳ್ಳಿ – Kannada News | Vaishno Devi Temple: Rs500 Crore Silver Donation Scam Exposed, 70kg Yields Only 3kg Real

ಮ್ಮು, ಜುಲೈ 18: ಜಮ್ಮುವಿನಲ್ಲಿರುವ ಅತ್ಯಂತ ಶ್ರೀಮಂತ ಮತ್ತು ಕೋಟ್ಯಂತರ ಭಕ್ತರು ಭೇಟಿ ನೀಡುವ ವೈಷ್ಣೋದೇವಿ ಮಂದಿರದಲ್ಲಿ ರಾಮ ಮಂದಿರದಂತೆಯೇ ದೇಣಿಗೆ ಹಗರಣ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ’ (SMVDSB) ಈಗ ಭಾರಿ ವಿವಾದದ ಕೇಂದ್ರಬಿಂದುವಾಗಿದೆ. ಭಕ್ತರು ವರ್ಷಗಳಿಂದ ದೇವಿಗೆ ಅರ್ಪಿಸಿದ ಸುಮಾರು 500 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿಯು ನಾಪತ್ತೆಯಾಗಿದೆ ಅಥವಾ ಕಳಪೆ ಲೋಹಕ್ಕೆ ಬದಲಾಯಿಸಲ್ಪಟ್ಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಮಹಾ ವಂಚನೆ ಪ್ರಕರಣ ಈಗ…

Read More

ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ! – Kannada News | Rare Vijayanagara Era Jain Inscription Discovered in Ballari Sandur

ಬಳ್ಳಾರಿ, ಜುಲೈ 18: ಜಿಲ್ಲೆಯ ಸಂಡೂರು ತಾಲ್ಲೂಕಿನ ಡಿ. ಅಂತಾಪುರ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯದ ಇತಿಹಾಸ ಹಾಗೂ ಜೈನ ಧರ್ಮದ ಬೆಳವಣಿಗೆಯ ಮೇಲೆ ಬೆಳಕು ಚೆಲ್ಲುವ ಅತ್ಯಂತ ಅಪರೂಪದ ಜೈನ ದಾನಶಾಸನವೊಂದು ಪತ್ತೆಯಾಗಿದೆ. ‘ವಿಜಯನಗರ ತಿರುಗಾಟ’ ಸಂಶೋಧನಾ ತಂಡವು ಈ ಮಹತ್ವದ ಐತಿಹಾಸಿಕ ಸಾಕ್ಷ್ಯವನ್ನು ಶೋಧಿಸಿದೆ. ಪ್ರೊ. ಎಚ್. ತಿಪ್ಪೇಸ್ವಾಮಿ ನೇತೃತ್ವದ ಸಂಶೋಧನಾ ತಂಡವು ಡಿ. ಅಂತಾಪುರ ಗ್ರಾಮದ ನಿವಾಸಿ ಗ್ಯಾನಪ್ಪ ಎಂಬುವವರ ಹೊಲದಲ್ಲಿ ಈ ಗ್ರಾನೈಟ್ (ಕಣಶಿಲೆ) ಶಾಸನವನ್ನು ಪತ್ತೆಹಚ್ಚಿದೆ. ಈ ಶಾಸನವು ಕ್ರಿ.ಶ. 1395ರ…

Read More

ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್ – Kannada News | Karnataka KSTDC Package: Explore Jog Falls and Sigandur Temple with LTC Option

ಬೆಂಗಳೂರು, ಜು.18: ವೀಕೆಂಡ್‌ನಲ್ಲಿ ಎಲ್ಲಾದರೂ ಸುಂದರ ಪ್ರಕೃತಿಯ ಮಡಿಲಿಗೆ ಸಾಗಬೇಕು, ಜೊತೆಗೆ ದೇವರ ದರ್ಶನ ಪಡೆಯಬೇಕು ಎಂದು ಯೋಜಿಸುತ್ತಿರುವ ಪ್ರವಾಸಿಗರಿಗೆ ಸುವರ್ಣಾವಕಾಶವೊಂದು ಇಲ್ಲಿದೆ ನೋಡಿ. ಭಾರತದ ಎರಡನೇ ಅತಿ ಎತ್ತರದ ಜಲಪಾತವಾದ ವಿಶ್ವಪ್ರಸಿದ್ಧ ಜೋಗ ಜಲಪಾತ (Jog Falls) ಹಾಗೂ ಶರಾವತಿಯ ಹಿನ್ನೀರಿನ ನಡುವೆ ಕಂಗೊಳಿಸುವ ಸಿಗಂದೂರು (Siganduru) ಕ್ಷೇತ್ರಕ್ಕೆ ಅತ್ಯಾಕರ್ಷಕ ಪ್ರವಾಸ ಪ್ಯಾಕೇಜ್​​ನ್ನು kstdc ಘೋಷಣೆ ಮಾಡಿದೆ. ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳು: ಜೋಗ ಜಲಪಾತ: ಶರಾವತಿ ನದಿಯು ಬರೋಬ್ಬರಿ 830 ಅಡಿ ಎತ್ತರದಿಂದ…

Read More