ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ.

ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್ ಬಳಸಿ ಸೇವೆ ಒದಗಿಲು ಖಾಸಗಿ ಸಂಸ್ಥೆಗಳಿಗೆ ಅನುವು ಮಾಡಿಕೊಡಲಾಗುತ್ತದೆ. ಈ ಮಾಹಿತಿಯನ್ನು ಹೊಸ ಆಧಾರ್ ಆ್ಯಪ್ ಬಿಡುಗಡೆ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಸಚಿವಾಲಯದ ಕಾರ್ಯದರ್ಶಿ ಎಸ್ ಕೃಷ್ಣನ್ ತಿಳಿಸಿದರು.

ಇದನ್ನೂ ಓದಿ: ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ…

ಆಧಾರ್ ಅನ್ನು ವಯಸ್ಸು ದೃಢೀಕರಣಕ್ಕೆ ಬಳಸಲಾಗುತ್ತದೆ. ಈ ವೇಳೆ, ಆಧಾರ್​ನ ಇತರ ಮಾಹಿತಿಯೂ ರವಾನೆಯಾಗುವ ಸಾಧ್ಯತೆ ಇರುತ್ತದೆ. ಹೊಸ ಆಧಾರ್ ಆ್ಯಪ್​ನಲ್ಲಿ ವಯಸ್ಸಿನ ದೃಢೀಕರಣ ಮಾತ್ರವೇ ಮಾಡಬಹುದು. ಸೋಷಿಯಲ್ ಮೀಡಿಯಾ, ಗೇಮ್ಸ್, ಇಕಾಮರ್ಸ್ ಇತ್ಯಾದಿ ಆನ್ಲೈನ್ ಪ್ಲಾಟ್​ಫಾರ್ಮ್​ಗಳು ತಮ್ಮ ಬಳಕೆದಾರರ ವಯಸ್ಸನ್ನು ದೃಢೀಕರಿಸಲು ಆಧಾರ್​ನ ಏಜ್ ಗೇಟಿಂಗ್ ಫೀಚರ್ ಬಳಸಬಹುದು.

ಏಜ್ ವೆರಿಫಿಕೇಶನ್ ಸಾಧ್ಯವಾದರೆ ಆನ್​ಲೈನ್ ಪ್ಲಾಟ್​ಫಾರ್ಮ್​ಗಳು ಇನ್ನಷ್ಟು ಉಪಯುಕ್ತವಾಗಿ ಸರ್ವಿಸ್ ನೀಡಬಹುದು. ಬಳಕೆದಾರರು ಮಕ್ಕಳಾಗಿದ್ದರೆ ಅವರ ವಯಸ್ಸಿಗೆ ಸೂಕ್ತವಲ್ಲದ ಕಂಟೆಂಟ್ ಅಥವಾ ಪ್ರಾಡಕ್ಟ್ ಅನ್ನು ಪ್ರದರ್ಶಿಸದಿರಬಹುದು.

ಇದನ್ನೂ ಓದಿ: ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ

ಹೊಸ ಆಧಾರ್ ಆ್ಯಪ್ ಏಜ್ ಗೇಟಿಂಗ್​ಗೆ ಮಾತ್ರವೇ ಬಳಕೆ ಆಗುವಂಥದ್ದಲ್ಲ. ವ್ಯಕ್ತಿಯ ಗುರುತಿನ ಕಾರ್ಡ್ ರೀತಿ ಡಿಜಿಟಲ್ ಅಗಿ ಬಳಸಬಹುದು. ಹೋಟೆಲ್, ಚಿತ್ರಮಂದಿರ ಇತ್ಯಾದಿ ಸ್ಥಳಗಳಲ್ಲಿ ವ್ಯಕ್ತಿಯ ಗುರುತನ್ನು ಪರಿಶೀಲಿಸಲು ಅವರ ಈ ಆಧಾರ್ ಆ್ಯಪ್ ಅನ್ನು ಪರಿಶೀಲಿಸಬಹುದು. ಭೌತಿಕವಾಗಿ ಆಧಾರ್ ದಾಖಲೆ ಕೇಳುವ ಯಾವುದೇ ಸಂಸ್ಥೆಗೂ ಡಿಜಿಟಲ್ ಆಗಿ ಆಧಾರ್ ದೃಢೀಕರಣ ಕೊಡಲು ಈ ಹೊಸ ಆ್ಯಪ್ ನೆರವಾಗುತ್ತದೆ. ಆಧಾರ್ ಕಾಯ್ದೆ ಪ್ರಕಾರ ಖಾಸಗಿ ಸಂಸ್ಥೆಗಳು ಯಾವುದೇ ವ್ಯಕ್ತಿಯ ಆಧಾರ್ ದತ್ತಾಂಶವನ್ನು ಸಂಗ್ರಹಿಸುವಂತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ; ವಿಡಿಯೋ – Kannada News | Team India in Kerala: Samson’s Special Home Match and suryakumar’s Guard Act Goes Viral

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಕೇರಳದ ತಿರುವನಂತಪುರಂಗೆ ಆಗಮಿಸಿದ್ದಾರೆ. ಪ್ರಸ್ತುತ ಭಾರತ ತಂಡದಲ್ಲಿರುವ ಸಂಜು ಸ್ಯಾಮ್ಸನ್ ಕೇರಳದ ತಿರುವನಂತಪುರದವರಾಗಿದ್ದಾರೆ. ಅಲ್ಲದೆ ಸಂಜು ಸ್ಯಾಮ್ಸನ್ ಇದೇ ಮೊದಲ ಬಾರಿಗೆ ತನ್ನ ತವರಿನಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ಸಂಜು ಆಟವನ್ನು ನೋಡಲು ಕಾಯುತ್ತಿದ್ದಾರೆ. ತವರಿನಲ್ಲಿ ಮೊದಲ ಪಂದ್ಯವನ್ನಾಡಲು ಬಂದ ಸಂಜುಗೆ ವಿಶೇಷ ಸ್ವಾಗತ ಸಿಕ್ಕಿದೆ. ಅಭಿಮಾನಿಗಳಿಂದ ಮಾತ್ರವಲ್ಲದೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಕೂಡ ಸಂಜುಗೆ ವಿಶೇಷ ರೀತಿಯ ಸ್ವಾಗತ ನೀಡಿದ್ದಾರೆ.

ಟೀಂ ಇಂಡಿಯಾ ಆಟಗಾರರು ಕೇರಳದ ತಿರುವನಂತಪುರಂಗೆ ಆಗಮಿಸುತ್ತಿರುವ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿದೆ. ಅದರಲ್ಲಿ ಸೂರ್ಯ ಮತ್ತು ಸ್ಯಾಮ್ಸನ್ ನಡುವಿನ ತಮಾಷೆಯ ಕ್ಷಣಗಳು ಹೈಲೈಟ್ ಆಗಿವೆ. ತಿರುವನಂತಪುರಂ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದ ಸಂಜು ಸ್ಯಾಮ್ಸನ್ ಅವರನ್ನು ಸೂರ್ಯಕುಮಾರ್ ಯಾದವ್ ವಿಶೇಷವಾಗಿ ಸ್ವಾಗತಿಸಿದ್ದಾರೆ. ಸಂಜುಗೆ ಅಂಗರಕ್ಷಕನಂತೆ ನಟಿಸಿರುವ ಸೂರ್ಯ, ದಾರಿ ಬಿಡಿ ದಾರಿ ಬಿಡಿ, ಚೇಟ (ಸಂಜು) ಅವರಿಗೆ ತೊಂದರೆಕೊಡಬೇಡಿ, ಅವರ ಫೋಟೋ ತೆಗೆಯಬೇಡಿ ಎಂದಿದ್ದಾರೆ. ಸೂರ್ಯ, ಸಂಜು ಅವರ ಕಾಲೆಳೆಯಲು ಈ ರೀತಿಯಾಗಿ ನಟಿಸಿದ್ದು, ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

Source link

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ – Kannada News | Lokayukta Caught KP agrahara Police Inspector Red Handed While Accepting Bribe Of Rs 4 Lakh, video goes viral

ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

Source link

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ – Kannada News | Hassan: Garbage Dumped Back at Offenders’ Homes for Littering in Public Places

ಹಾಸನ, ಜನವರಿ 30: ಮಹಾನಗರ ಪಾಲಿಕೆಯ ಸಿಬ್ಬಂದಿ ಒಂದು ಲೋಡ್ ಕಸವನ್ನು ಮನೆಯ ಕಾಂಪೌಂಡ್‌ ಒಳಗೆ ಸುರಿಯುವ ಮೂಲಕ ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆ ರಸ್ತೆಯಲ್ಲಿ ಘಟನೆ ನಡೆದಿದೆ. ಕರಿಯಪ್ಪ ಮತ್ತು ದ್ಯಾವಮ್ಮ ಎಂಬುವವರ ಮನೆ ಮುಂದೆ ಕಸ ಸುರಿಯಲಾಗಿದೆ. ರಸ್ತೆ ಬದಿ ಕಸ ಸುರಿಯುತ್ತಿದ್ದ ಬಗ್ಗೆ ಮನೆ ಮಾಲೀಕರ ವಿರುದ್ಧ ಆರೋಪಗಳು ಕೇಳಿಬಂದ ಹಿನ್ನೆಲೆ ಪಾಲಿಕೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಇದಕ್ಕೆ ಕ್ಯಾರೆ ಎನ್ನದೆ ರಸ್ತೆ ಬದಿ ಕಸ ಎಸೆಯುತ್ತಿದ್ದರು. ಅವರಿಗೆ ಪಾಠ ಕಲಿಸಲೆಂದೇ ಇಂದು ಬೆಳಿಗ್ಗೆ ಒಂದು ಲೋಡ್ ಕಸವನ್ನು ಅವರ ಮನೆಯ ಆವರಣದಲ್ಲಿ ಸುರಿಯಲಾಗಿದೆ. ಹೀಗಾಗಿ ಪಾಲಿಕೆ ಸಿಬ್ಬಂದಿ ಹಾಗೂ ಮಹಿಳೆ‌ ನಡುವೆ ವಾಗ್ವಾದ ಉಂಟಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬೇಡ ಅಂದ್ರೂ ಮುಸ್ಲಿಂ ಹುಡುಗನ ಮದ್ವೆಯಾದೆ, ಮಕ್ಕಳಾದ್ಮೇಲೆ ಇನ್ನೊಬ್ಬಳನ್ನ ಕಟ್ಟುಕೊಂಡವ್ನೆ – Kannada News | A Muslim Man cheating Wife after His converted to Islam at bengaluru

ಬೆಂಗಳೂರು (ಜನವರಿ 30): ಬೆಂಗಳೂರಿನಲ್ಲಿ ಮತಾಂತರದ (Conversion) ಆರೋಪವೊಂದು ಕೇಳಿ ಬಂದಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ (Muslim Religion) ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅಂದು ರೀಟಾ ಆಗಿದ್ದ ಮಹಿಳೆ ಇಂದು ಸಾದಿಯಾ ತಬುಸಮ್ ಎಂದು ಮತಾಂತರ ಮಾಡಿದ್ದಾರೆ ಎಂದು ಮೋಸ ಹೋದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜೀವನಹಳ್ಳಿಯ ರೀಟಾ ಎಂಬ ಯುವತಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪರ್ವೇಜ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಒಂದೇ ಕಾಲೇಜಿನವರಾಗಿದ್ದರಂತೆ. ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ರೀಟಾಳ ಹಿಂದೆ ಬಿದ್ದಿದ್ದ ಪರ್ವೇಜ್, ಪ್ರೀತಿ-ಪ್ರೇಮ ಅಂತ ಆಕೆಯ ತಲೆ ಕೆಡಿಸಿದ್ದ ಎಂದು ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Source link

ಹೈಜಾಕ್ ಬೆದರಿಕೆ: ಕುವೈತ್-ದೆಹಲಿ ಇಂಡಿಗೋ ವಿಮಾನ ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ – Kannada News | IndiGo Flight Diverted to Ahmedabad After Threat Note Found Onboard

ಅಹಮದಾಬಾದ್, ಜನವರಿ 30: ಕುವೈತ್​ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ(IndiGo) ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಳಗ್ಗೆ 6.40 ರ ಸುಮಾರಿಗೆ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನವು 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಅವರೆಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು ಮತ್ತು ವಿವರವಾದ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ವಿಮಾನವನ್ನು ಅಪಹರಿಸುವ ಮತ್ತು ಸ್ಫೋಟಿಸುವ ಬೆದರಿಕೆ ಬರೆದಿರುವ ಟಿಶ್ಯೂ ಪೇಪರ್ ವಿಮಾನದೊಳಗೆ ಕಂಡುಬಂದ ಬಳಿಕ ಕೋಲಾಹಲ ಸೃಷ್ಟಿಯಾಗತ್ತು. ಪೈಲಟ್‌ಗಳು ವಿಮಾನವನ್ನು ವಿಳಂಬವಿಲ್ಲದೆ ಅಹಮದಾಬಾದ್‌ಗೆ ವಿಮಾನವನ್ನು ತಿರುಗಿಸಲಾಯಿತು.
ವಿಮಾನ ಇಳಿದ ಕೂಡಲೇ ಭದ್ರತಾ ಸಂಸ್ಥೆಗಳು ಅದನ್ನು ಸುತ್ತುವರೆದವು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು ಮತ್ತು ಇಬ್ಬರೂ ಪ್ರಯಾಣಿಕರು ಮತ್ತು ಅವರ ಸಾಮಾನುಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು.

ಪ್ರತಿಯೊಬ್ಬ ಪ್ರಯಾಣಿಕರನ್ನು ಪ್ರತ್ಯೇಕವಾಗಿ ಪರೀಕ್ಷಿಸಲಾಗುತ್ತಿದೆ ಮತ್ತು ಪ್ರಮಾಣಿತ ಬೆದರಿಕೆ-ಪ್ರತಿಕ್ರಿಯೆ ಪ್ರೋಟೋಕಾಲ್‌ನ ಭಾಗವಾಗಿ ಗುರುತಿಸಲಾಗುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.
ಜನವರಿ 22 ರಂದು ಇದೇ ರೀತಿಯ ಘಟನೆಯಲ್ಲಿ, ದೆಹಲಿಯಿಂದ ಪುಣೆಗೆ ಹೋಗುವ ಇಂಡಿಗೋ ವಿಮಾನದಲ್ಲಿ ನಡೆದಿತ್ತು.ಪುಣೆ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಬಾಂಬ್ ಬೆದರಿಕೆ ಮಾಹಿತಿ ಬಂದಿತ್ತು.

ಮತ್ತಷ್ಟು ಓದಿ: ಇಂಡಿಗೋ ವಿಮಾನ ವ್ಯತ್ಯಯ ಎಫೆಕ್ಟ್; ಪಿಜಿ ನೀಟ್​ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಆದರೆ ಸಂಪೂರ್ಣ ತಪಾಸಣೆಯ ನಂತರ ಅನುಮಾನಾಸ್ಪದ ಏನೂ ಪತ್ತೆಯಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೌಲ್ಯಮಾಪನದ ನಂತರ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್) ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿತು ಎಂದು ಅಧಿಕಾರಿ ಹೇಳಿದ್ದಾರೆ.
ವಿಧಾನಗಳು ಪೂರ್ಣಗೊಂಡ ನಂತರ, ವಿಮಾನವನ್ನು ತೆರವುಗೊಳಿಸಲಾಯಿತು ಮತ್ತು ಸಾಮಾನ್ಯ ಕಾರ್ಯಾಚರಣೆಗೆ ಬಿಡುಗಡೆ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ! – Kannada News | Kotturu Family Murder: A Man Brutal Killed his Parents, Sister in Vijayanagara

ವಿಜಯನಗರ, ಜನವರಿ 30: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್​ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪೊಲೀಸ್​​ ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟ ಪುತ್ರ

ಇನ್ನು ಅನುಮಾನಗೊಂಡ ತಿಲಕ್​ನಗರ ಠಾಣೆ ಪೊಲೀಸರು ಪುತ್ರನ ವಿಚಾರಣೆ ಮಾಡಿದ್ದಾರೆ. ಈ ವೇಳೆ ಕೊಲೆ ಬಗ್ಗೆ ಅಸ್ಪಷ್ಟ ಹೇಳಿಕೆ ನೀಡಿದ್ದಾನೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮನೆಯಲ್ಲಿ ಮೂವರನ್ನು ಕೊಂದು ಹೂತಿದ್ದಾಗಿ ಒಮ್ಮೆ ಹೇಳಿಕೆ ನೀಡಿದರೆ, ಮತ್ತೊಮ್ಮೆ ಸಂಡೂರಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ: ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿ!

ಸದ್ಯ ವ್ಯಕ್ತಿ ನೀಡಿದ ಅಸ್ಪಷ್ಟ ಹೇಳಿಕೆ ಬಗ್ಗೆ ಕೊಟ್ಟೂರು ಠಾಣೆಗೆ ತಿಲಕ್​ನಗರ ಠಾಣೆ ಪೊಲೀಸರಿಂದ ಮಾಹಿತಿ ನೀಡಿದ್ದು, ಆ ಮಾಹಿತಿ ಆಧರಿಸಿ ವ್ಯಕ್ತಿ ಹೇಳಿರುವ ಸ್ಥಳದಲ್ಲಿ ಶವಗಳಿಗಾಗಿ ಕೊಟ್ಟೂರು ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

ಬೈಕ್​ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಪ್ರಾಧ್ಯಾಪಕ ಸಾವು

ಬೈಕ್​ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ಹೊಸ ಆರ್​ಟಿಒ ಕಚೇರಿ ಬಳಿ ಘಟನೆ ನಡೆದಿತ್ತು.

ಇದನ್ನೂ ಓದಿ: ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅಧ್ಯಾಪಕರ ಬೇಡಿಕೆಗಾಗಿ ವಿವಿಧ ಹೋರಾಟಗಳಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ… – Kannada News | These apps can leak data from your phone, tech tips and tricks

ಸ್ಮಾರ್ಟ್‌ಫೋನ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಸಾಮಾನ್ಯ. ಖಾಸಗಿ ಫೋಟೋಗಳು, ವಿಡಿಯೋಗಳಿಂದ ಹಿಡಿದು ಗೌಪ್ಯ ಮಾಹಿತಿಯವರೆಗೂ ಫೋನ್​ನಲ್ಲಿ ಇರುತ್ತವೆ. ಫೋನ್ ಕಳುವಾಗದಂತೆ ಜೋಪಾನವಾಗಿಟ್ಟುಕೊಂಡರೆ ಸಾಕು ಎಂದು ನಾವೆಲ್ಲರೂ ಭಾವಿಸಿರುತ್ತೇವೆ. ಆದರೆ, ವಾಸ್ತವವೆಂದರೆ ನಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಮಾಹಿತಿ ನಮಗೆ ಗೊತ್ತಿಲ್ಲದಂತೆ ಸೋರಿಕೆ ಆಗುತ್ತಿರಬಹುದು. ನಾವು ಇನ್​ಸ್ಟಾಲ್ ಮಾಡಿಕೊಂಡಿರುವ ಕೆಲ ಆ್ಯಪ್​ಗಳು ನಮ್ಮ ಡಾಟಾವನ್ನು ಕದ್ದು ಸಾಗಿಸುತ್ತಿರುವ ಸಾಧ್ಯತೆ ಹೆಚ್ಚಿರುತ್ತದೆ. ಫೋನ್​ನಲ್ಲಿರುವ ಫೋಟೋ, ವಿಡಿಯೋ, ನಾವಿರುವ ಸ್ಥಳ, ನಾವು ಅಡ್ಡಾಡಿರುವ ಸ್ಥಳ, ಮೊಬೈಲ್​ನ ಮಾಹಿತಿ, ಬ್ರೌಸಿಂಗ್ ಹಿಸ್ಟರಿ, ನಮ್ಮ ಫೋನ್ ಕಾಲ್ ಇತ್ಯಾದಿ ನಾನಾ ಮಾಹಿತಿಯನ್ನು ನಮಗೆ ಅರಿವಾಗದಂತೆ ಲಪಟಾಯಿಸಬಹುದು.

ನಮ್ಮ ಡಾಟಾ ತೆಗೆದುಕೊಂಡು ಏನು ಮಾಡುತ್ತಾರೆ?

ನಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಮಾಹಿತಿಯನ್ನು ಕದಿಯುವ ಆ್ಯಪ್​ಗಳು, ಅದನ್ನು ಥರ್ಡ್ ಪಾರ್ಟಿ ಸರ್ವರ್​ಗಳಿಗೆ ರವಾನಿಸುತ್ತದೆ. ಆ್ಯಡ್ ಸರ್ವಿಸ್​ನಿಂದ ಹಿಡಿದು ಪ್ರೊಫೈಲಿಂಗ್​ವರೆಗೂ ಎಲ್ಲದಕ್ಕೂ ಈ ಮಾಹಿತಿಯನ್ನು ಬಳಲಾಗುತ್ತದೆ. ಇದಕ್ಕೆ ಸಾಕ್ಷಿ ಎಂದರೆ, ನೀವು ಯಾವುದಾದರೂ ವಿಚಾರದ ಬಗ್ಗೆ ಫೋನ್​ನಲ್ಲಿ ಬ್ರೌಸ್ ಮಾಡಿದಾಗ, ಆ ವಿಚಾರಕ್ಕೆ ಸಂಬಂಧಿಸಿದ ಜಾಹೀರಾತು ನಿಮಗೆ ಕಾಣುತ್ತದೆ. ಇದು ಯಾಕೆಂದರೆ, ನಿಮ್ಮ ಬ್ರೌಸಿಂಗ್ ಮಾಹಿತಿಯನ್ನು ಆ್ಯಪ್​ಗಳು ಜಾಹೀರಾತು ಏಜೆನ್ಸಿಗಳಿಗೆ ಮಾರಿಬಿಟ್ಟಿರಬಹುದು. ಹೀಗಾಗಿ, ತೀರಾ ವೈಯಕ್ತೀಕರಿಸಿದ ಜಾಹೀರಾತು ಕಾಣುತ್ತವೆ. ನಿಮ್ಮ ಸೂಕ್ಷ್ಮ ದತ್ತಾಂಶವನ್ನು ಕದಿಯಬಲ್ಲ ಆ್ಯಪ್​ಗಳು ಎಂಥವಿರಬಹುದು?

ಇದನ್ನೂ ಓದಿ: ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ

1. ಉಚಿತ VPN ಅಪ್ಲಿಕೇಶನ್‌ಗಳು

ಉಚಿತ VPN ಆ್ಯಪ್​ಗಳು ಬಹಳ ರಿಸ್ಕಿ ಎನಿಸುತ್ತವೆ. ವಿಪಿಎನ್ ಕನೆಕ್ಷನ್​ನಲ್ಲಿ ನಿಮ್ಮ ಗುರುತು ಮತ್ತು ಸ್ಥಳ ಮರೆಮಾಚಿ ಇಂಟರ್ನೆಟ್ ಅನ್ನು ಗೌಪ್ಯವಾಗಿ ವೀಕ್ಷಿಸಲು ಸಾಧ್ಯ. ಆದರೆ, ಉಚಿತ ವಿಪಿಎನ್​ಗಳು ನಿಮ್ಮ ಎಲ್ಲಾ ಬ್ರೌಸಿಂಗ್ ಡಾಟಾ, ನಿಮ್ಮ ಸ್ಥಳ ಇತ್ಯಾದಿಯನ್ನು ಹೊರಗೆಲ್ಲೂ ತೋರಿಸದೇ ಹೋದರೂ ತನ್ನ ಸರ್ವರ್​ನಲ್ಲೇ ಸಂಗ್ರಹಿಸಿಕೊಳ್ಳಬಹುದು. ಈ ಮಾಹಿತಿ ಕಣಜವನ್ನು ಹಣಕ್ಕಾಗಿ ಮಾರಿ, ಅವು ಆದಾಯ ಮಾಡಿಕೊಳ್ಳುತ್ತವೆ.

2. ಅನಗತ್ಯ ಯುಟಿಲಿಟಿ ಆ್ಯಪ್​ಗಳು

ಫ್ಲ್ಯಾಶ್‌ಲೈಟ್, ಕ್ಲೀನರ್ ಮತ್ತು ಬೂಸ್ಟರ್‌ನಂತಹ ಅಪ್ಲಿಕೇಶನ್‌ಗಳು ಸಹ ಅಪಾಯ ಎನಿಸುತ್ತವೆ. ಇಂದು ಎಲ್ಲಾ ಸ್ಮಾರ್ಟ್‌ಫೋನ್‌ಗಳು ಫ್ಲ್ಯಾಶ್‌ಲೈಟ್ ಅನ್ನು ಇನ್​ಬ್ಯುಲ್ಟ್ ಆಗಿ ಹೊಂದಿರುತ್ತವೆ. ಬೇರೆ ಬೇರೆ ಆಕರ್ಷಣೆಯೊಂದಿಗೆ ಥರ್ಡ್ ಪಾರ್ಟಿ ಫ್ಲ್ಯಾಷ್​ಲೈಟ್ ಆ್ಯಪ್​ಗಳೂ ಮಾರುಕಟ್ಟೆಯಲ್ಲಿವೆ. ಇವು ನಿಮ್ಮ ಡಾಟಾ ಕದಿಯುವ ಅವಕಾಶ ಹೆಚ್ಚು. ಇನ್ನು, ಉಚಿತವಾಗಿ ಸಿಗುವ ಕ್ಲೀನರ್ ಆ್ಯಪ್​ಗಳು ನಿಮ್ಮ ಫೋನ್ ಕ್ಲೀನಪ್ ಮಾಡುವುದರ ಜೊತೆಗೆ ಬ್ರೌಸಿಂಗ್ ಡಾಟಾದಿಂದ ಹಿಡಿದು ಹಲವಾರು ಸೂಕ್ಷ್ಮ ಮಾಹಿತಿಯನ್ನು ಕದಿಯಬಹುದು ಎಂಬುದು ತಜ್ಞರ ಅನಿಸಿಕೆ.

3. ಎಡಿಟಿಂಗ್ ಅಂಡ್ ಫೇಸ್ ಫಿಲ್ಟರ್ ಆ್ಯಪ್​ಗಳು

ಈಗಂತೂ ಫೇಸ್ ಫಿಲ್ಟರ್ ಆ್ಯಪ್​ಗಳು, ಫೋಟೋ ಎಡಿಟಿಂಗ್, ವಿಡಿಯೋ ಎಡಿಟಿಂಗ್ ಆ್ಯಪ್​ಗಳು ಜನಪ್ರಿಯವಾಗಿವೆ. ಜನರು ತಮ್ಮ ರೀಲ್ಸ್ ವಿಡಿಯೋಗಳು ಮತ್ತು ಫೋಟೋವನ್ನು ಎಡಿಟಿಂಗ್ ಮಾಡಲು ಇಂಥ ಆ್ಯಪ್​ಗಳನ್ನು ಬಳಸುವುದು ಹೆಚ್ಚಾಗಿದೆ. ನಿಮ್ಮ ಮುಖ ಚಹರೆಯ ಸೂಕ್ಷ್ಮ ಮಾಹಿತಿಯು ಈ ಆ್ಯಪ್​ಗಳ ಮೂಲಕ ಯಾವುದೋ ಸರ್ವರ್​ಗಳಲ್ಲಿ ಸ್ಟೋರ್ ಆಗಿ ಇನ್ಯಾವುದಕ್ಕಾದರೂ ಅವುಗಳ ದುರ್ಬಳಕೆ ಆಗಬಹುದು.

ಇದನ್ನೂ ಓದಿ: ಎಐ ಕ್ಷೇತ್ರದ ಭಾರತೀಯ ಕಂಪನಿಗಳ ಸಿಇಒಗಳು, ಪರಿಣಿತರ ಜೊತೆ ಪ್ರಧಾನಿ ಮೋದಿ ಸಭೆ

ಅವಶ್ಯಕವಿರುವುದಕ್ಕೆ ಮಾತ್ರವೇ ಅನುಮತಿಸಿ

ಕೆಲ ಆ್ಯಪ್​ಗಳು ಎಲ್ಲಾ ಅಕ್ಸೆಸ್​ಗಳಿಗೂ ಅನುಮತಿ ಕೇಳುತ್ತವೆ. ಫೋಟೋ, ಫೋನ್ ಕಾಲ್, ಸೆಟ್ಟಿಂಗ್ಸ್, ಕ್ಯಾಮರಾ, ಮೆಸೇಜ್, ಬ್ರೌಸಿಂಗ್ ಡಾಟಾ ಇತ್ಯಾದಿ ಎಲ್ಲಾ ಪಡೆಯಲು ಪರ್ಮಿಷನ್ ಕೇಳುತ್ತವೆ. ಒಂದು ಫೋಟೋ ಎಡಿಟಿಂಗ್ ಆ್ಯಪ್​ಗೆ ನಿಮ್ಮ ಮೆಸೇಜ್​ಗಳು ಯಾಕೆ ಬೇಕಾಗುತ್ತವೆ? ಹೀಗಾಗಿ, ಆ್ಯಪ್​ಗಳು ಪರ್ಮಿಷನ್ ಕೇಳಿದಾಗ ಎಲ್ಲದಕ್ಕೂ ಅನುಮತಿಸಬೇಡಿ. ಹಾಗೆಯೇ, ಗಮನಿಸಬೇಕಾದ ಸಂಗತಿ ಎಂದರೆ ನೀವು ಹೊಸ ಆ್ಯಪ್​ವೊಂದನ್ನು ಡೌನ್​ಲೋಡ್ ಮಾಡುತ್ತಿದ್ದರೆ ಮೊದಲು ಪ್ಲೇಸ್ಟೋರ್​ನಲ್ಲಿ ಆ ಆ್ಯಪ್​ಗೆ ರಿವ್ಯೂ ಹೇಗಿದೆ ಎಂದು ನೋಡಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ – Kannada News | Pakistani drones spotted flying in Kashmir Indian Army opens fire

ಶ್ರೀನಗರ, ಜನವರಿ 30: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪ್ರದೇಶದೊಳಗೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ (Indian Army) ಇಂದು ಹಿಮ್ಮೆಟ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು.

ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರಕ್ಷಣಾ ಸಚಿವಾಲಯವು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಇದನ್ನೂ ಓದಿ: Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಭಾರತೀಯ ಸೇನೆಯ 6ನೇ ರಾಷ್ಟ್ರೀಯ ರೈಫಲ್ಸ್‌ನ ಸಿಬ್ಬಂದಿ ವಾಯುಪ್ರದೇಶದಲ್ಲಿ ಡ್ರೋನ್‌ಗಳನ್ನು ಗಮನಿಸಿ ಗುಂಡು ಹಾರಿಸಿದರು ಎಂದು ಮೂಲಗಳು ತಿಳಿಸಿವೆ. ಸೇನೆಯ ಪ್ರತಿಕ್ರಿಯೆಯ ನಂತರ ಎಲ್ಲಾ ಡ್ರೋನ್‌ಗಳು ಹಿಂದೆ ಸರಿದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೈಲು ವಾರ್ಡನ್ ನನ್ನು ವರ್ಗಾವಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಕರ್ತವ್ಯಲೋಪ ಬೆಳಕಿಗೆ ಬಂದಿದೆ. ಕೂಡಲೇ ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್​ ಪ್ರಭುಶಂಕರ ಚೌಹಾಣ್​ ಎನ್ನುವರನ್ನು ಚಾಮರಾಜನಗರ ಕಾರಾಗೃಹಕ್ಕೆ ಎತ್ತಂಗಡಿ ಮಾಡಿದ್ದಾರೆ. ಅಲ್ಲದೇ ಇಲಾಖೆ ತನಿಖೆಗೆ ಸೂಚಿಸಿದ್ದಾರೆ.

ನಡೆದಿದ್ದೇನು?

ಕಳೆದ ಜನವರಿ 24 ರಂದು ಯಲಹಂಕ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಒಬ್ಬರು ಬೇರೊಂದು ಪ್ರಕರಣದ ಆರೋಪಿಗಳನ್ನು ಜೈಲಿಗೆ ಬಿಡಲು ಪರಪ್ಪನ ಅಗ್ರಹಾರಕ್ಕೆ ಬಂದಿದ್ದರು. ಈ ವೇಳೆ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ ವಾರ್ಡರ್ ಪ್ರಭಾಕರ್ ಚೌಹಾನ್ ಬಳಿ, ನನಗೆ ನಟ ದರ್ಶನ್ ಅವರನ್ನು ನೋಡಬೇಕು ತೋರಿಸಿ ಪ್ಲೀಸ್ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿದ ಪ್ರಭಾಕರ್, ಸಿಸಿಟಿವಿ ಕ್ಯಾಮರಾಗಳ ಕಣ್ಣು ತಪ್ಪಿಸಿ ರಹಸ್ಯವಾಗಿ ಪೇದೆಯನ್ನು ದರ್ಶನ್ ಇದ್ದ ಬ್ಯಾರಕ್‌ ಬಳಿ ಕರೆದೊಯ್ದಿದ್ದರು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್

ಜೈಲು ಸಿಬ್ಬಂದಿ ಎತ್ತಂಗಡಿ!

ಪ್ರಕರಣವೊಂದರ ಆರೋಪಿಯನ್ನು ಜೈಲಿಗೆ ಬಿಡಲು ಯಲಹಂಕ ಕಾನ್ಸ್​​ಟೇಬಲ್ ಗಣೇಶ್ ಎಂಬುವವರು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದು, ಈ ವೇಳೆ ಈ ವೇಳೆ ನಟ ದರ್ಶನ್ ನನ್ನು ತೋರಿಸುವಂತೆ ಮನವಿ ಮಾಡಿದ್ದಾರೆ. ಬಳಿಕ ವಾರ್ಡನ್​ ಪ್ರಭುಶಂಕರ ಚೌಹಾಣ್​, ಸಿಸಿ ಕ್ಯಾಮರಾ ಕಣ್ತಪ್ಪಿಸಿ ಪೇದೆಯನ್ನು ದರ್ಶನ್​ ಇರುವ ಬ್ಯಾರಕ್​​​ಗೆ ಬಳಿ ಕರೆದುಕೊಂಡು ಹೋಗಿದ್ದಾರೆ.ಈ ವಿಚಾರ ತಿಳಿದ ಡಿಜಿಪಿ ಅಲೋಕ್ ಕುಮಾರ್, ವಾರ್ಡನ್​​ ಪ್ರಭುಶಂಕರ ಚೌಹಾಣ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಚಾಮರಾಜನಗರ ಕಾರಾಗೃಹಕ್ಕೆ ವರ್ಗಾವಣೆ ಮಾಡಿದ್ದಾರೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಇನ್ನು ದರ್ಶನ್​​​ ನೋಡಲು ಹೋಗಿದ್ದ ಕಾನ್ಸ್​​ಟೇಬಲ್ ವಿರುದ್ಧದವೂ ಸಹ ಕ್ರಮಕ್ಕೆ ಸೂಚಿಸಿದ್ದಾರೆ.

ಪೇದೆ ವಿರುದ್ಧವೂ ಕ್ರಮಕ್ಕೆ ಸೂಚನೆ

ಕೇವಲ ಜೈಲು ಸಿಬ್ಬಂದಿ ಮಾತ್ರವಲ್ಲದೆ, ಅನಧಿಕೃತವಾಗಿ ದರ್ಶನ್ ನೋಡಲು ಹೋದ ಯಲಹಂಕದ ಪೊಲೀಸ್ ಪೇದೆಯ ವಿರುದ್ಧವೂ ಶಿಸ್ತು ಕ್ರಮ ಜರುಗಿಸುವಂತೆ ಈಶಾನ್ಯ ವಿಭಾಗದ ಡಿಸಿಪಿಗೆ ಅಲೋಕ್ ಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಈ ಮೂಲಕ ಜೈಲಿನೊಳಗೆ ಎಷ್ಟೇ ದೊಡ್ಡ ಸೆಲೆಬ್ರಿಟಿ ಇದ್ದರೂ ನಿಯಮಗಳು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಡಿಜಿಪಿ ಅಲೋಕ್ ಕುಮಾರ್ ಈ ಕ್ರಮದ ಮೂಲಕ ರವಾನಿಸಿದ್ದಾರೆ.

ತಮ್ಮ ಕಚೇರಿಯಿಂದ ವೀಕ್ಷಿಸಿದ್ದ ಡಿಜಿಪಿ

ತಮ್ಮ ಕಚೇರಿಯಲ್ಲಿ ಅಳವಡಿಸಿರುವ ಸಿಸಿಟಿವಿಗಳಿಂದ ದರ್ಶನ್ ಸೆಲ್‌ಗೆ ಖಾಕಿ ಸಮವಸ್ತ್ರದಲ್ಲಿದ್ದ ಸಿಬ್ಬಂದಿ ಭೇಟಿಯನ್ನು ಡಿಜಿಪಿ ಅಲೋಕ್ ಕುಮಾರ್ ವೀಕ್ಷಿಸಿದ್ದರು. ಬಳಿಕ ಗಣರಾಜ್ಯೋತ್ಸವ ನಿಮಿತ್ತ ಜೈಲಿಗೆ ತೆರಳಿದ್ದಾಗ ದರ್ಶನ್‌ಗೆ ತಮ್ಮ ಭೇಟಿಗೆ ಬಂದಿದ್ದವರ ಬಗ್ಗೆ ಡಿಜಿಪಿ ವಿಚಾರಿಸಿದ್ದಾರೆ. ಆಗ ತಮಗೆ ಪರಿಚಯದವರಲ್ಲ. ಬಂದು ಹಾಯ್ ಹೇಳಿದರು. ನಾನು ಮಾತನಾಡಿಸಿದೆ ಅಷ್ಟೇ ಎಂದಿದ್ದಾರೆ. ಆಗ ವಾರ್ಡನ್‌ ಪ್ರಭುರನ್ನು ಕರೆಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 2:57 pm, Fri, 30 January 26

Source link

Exit mobile version