Headlines

ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ

ಟೆಹ್ರಾನ್, ಜುಲೈ 18: ಇರಾಕ್‌ನ ಕುರ್ದಿಸ್ತಾನ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಇರಾನ್‌ನ ತೀವ್ರ ದಾಳಿಗೆ ತುತ್ತಾಗಿವೆ. ಅಮೆರಿಕ-ಇರಾನ್ ಯುದ್ಧ ತೀವ್ರಗೊಂಡಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಹೈಪರ್ಸಾನಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗಳನ್ನು ಮುಂದುವರೆಸಿದೆ. ಇರಾನ್‌ನ ಈ ದಾಳಿಗಳಿಂದ ಅಮೆರಿಕಾದ ಸಂವಹನ ವ್ಯವಸ್ಥೆಗಳು, ಇಂಧನ ಡಿಪೋಗಳು, ಶಸ್ತ್ರಾಸ್ತ್ರಗಳ ಸಂಗ್ರಹಣೆ ಘಟಕಗಳು ಮತ್ತು ಯಂತ್ರೋಪಕರಣಗಳ ಘಟಕಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ. ಇರಾಕ್‌ನ ಕುರ್ದಿಸ್ತಾನ ಪ್ರದೇಶದ ಮೇಲೆ ಇರಾನ್ ಭಾರಿ ದಾಳಿ ನಡೆಸಿದೆ. ಇರಾಕ್‌ನಲ್ಲಿರುವ ಅಮೆರಿಕಾದ…

Read More

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ! – Kannada News | CBI Registers Case Against Bengaluru GST Officer for Rs 1 Crore Bribe

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ ಮೈಸೂರು, ಜುಲೈ 18: ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ. ಈ ಅಧಿಕಾರಿ 21 ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಮೈಸೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು? ಬೆಂಗಳೂರಿನ ಕೇಂದ್ರ ಜಿಎಸ್‌ಟಿ ಘಟಕದ ಸೀನಿಯರ್…

Read More

ಟೀಮ್ ಇಂಡಿಯಾ ಆಯ್ಕೆಗಾರರ ವರ್ತನೆಗೆ ಬಿಸಿಸಿಐ ತೀವ್ರ ಅಸಮಾಧಾನ! – Kannada News | BCCI unhappy with selectors over Rohit Sharma retirement buzz

ಭಾರತ ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ನಿವೃತ್ತಿಯ ಕುರಿತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ. ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಅನಗತ್ಯ ಗೊಂದಲ ಮೂಡಿಸಿರುವ ಆಯ್ಕೆಗಾರರ ಧೋರಣೆಗೆ ಬಿಸಿಸಿಐ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆಯ್ಕೆಗಾರರ ವಿರುದ್ಧ ಬಿಸಿಸಿಐ ಗರಂ ಆಗಿದ್ದೇಕೆ? ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ…

Read More

ವಾಟರ್ ಪಾರ್ಕ್​ನಲ್ಲಿ ಎಂಜಾಯ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ; ಚರ್ಮ ಮತ್ತು ಕೂದಲಿಗೆ ಹಾನಿ ಆಗಬಹುದು – Kannada News | Water park skin hair care tips before after swimming pool

ಬೇಸಿಗೆಯಲ್ಲಿ (Summer) ಅಥವಾ ವಿಶ್ರಾಂತಿಗಾಗಿ ಹಲವರು ಸ್ವಿಮ್ಮಿಂಗ್ ಪೂಲ್‌, ವಾಟರ್ ಪಾರ್ಕ್​ನಲ್ಲಿ ಆನಂದಿಸಲು ಮಾಡಲು ಇಷ್ಟಪಡುತ್ತಾರೆ. ಈಜುವುದು ಆರೋಗ್ಯಕ್ಕೆ ಉತ್ತಮ ವ್ಯಾಯಾಮವಾಗಿದ್ದರೂ, ಪೂಲ್‌ನಲ್ಲಿರುವ ಕ್ಲೋರಿನ್ ಮತ್ತು ಇತರ ರಾಸಾಯನಿಕಗಳು ಚರ್ಮ ಹಾಗೂ ಕೂದಲಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಚರ್ಮ ಒಣಗುವುದು, ತುರಿಕೆ, ಅಲರ್ಜಿ, ಕೂದಲು ಒಡೆಯುವುದು ಮತ್ತು ಕೂದಲು ಉದುರುವ ಸಮಸ್ಯೆಗಳು ಕಾಣಿಸಬಹುದು ಎಂದು ಚರ್ಮರೋಗ ತಜ್ಞರು ಎಚ್ಚರಿಸುತ್ತಾರೆ. ತಜ್ಞರ ಪ್ರಕಾರ, ಸ್ವಿಮ್ಮಿಂಗ್ ಪೂಲ್‌ ಅಥವಾ ವಾಟರ್ ಪಾರ್ಕ್​ಗೆ…

Read More

‘ವಾರಣಾಸಿ’: ಪ್ರಿಯಾಂಕಾ ಚೋಪ್ರಾ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ರಾಜಮೌಳಿ – Kannada News | SS Rajamouli shared new look poster of Priyanka Chopra from Varanasi

ಹಾಲಿವುಡ್ (Hollywood) ಮತ್ತು ಭಾರತೀಯ ಚಿತ್ರರಂಗ ಎರಡರಲ್ಲೂ ಬ್ಯುಸಿಯಾಗಿರುವ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಹುಟ್ಟುಹಬ್ಬದ ಇಂದು (ಜುಲೈ 18). ಪ್ರಿಯಾಂಕಾ ಚೋಪ್ರಾ, ಭಾರತದ ಬಹು ನಿರೀಕ್ಷಿತ ಸಿನಿಮಾ ‘ವಾರಣಾಸಿ’ಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಿರ್ವಹಿಸಿರುವ ಪಾತ್ರದ ಲುಕ್ ಅನ್ನು ರಿಲೀಸ್ ಮಾಡಿದ್ದಾರೆ. ಈ ಹಿಂದೆ ಪ್ರಿಯಾಂಕಾ ಚೋಪ್ರಾ ಹಳದಿ ಬಣ್ಣದ ಸೀರೆಯುಟ್ಟು ಸಖತ್ ಸ್ಟೈಲ್ ಆಗಿ ಗನ್ ಫೈರ್ ಮಾಡುತ್ತಿರುವ…

Read More

ಕಾರವಾರ: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಆರೋಗ್ಯ ಇಲಾಖೆ ವಸತಿಗೃಹಗಳು; ಮಜಾ ಮಾಡಲು ಹುಡುಗ-ಹುಡುಗಿಯರು ಬರ್ತಾರೆ – Kannada News | Uttar Kannada: Hattikeri PHC Ruins a Haven for Crime; Residents Demand Demolition Now

ಕಾರವಾರ, ಜು.18: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ಸುತ್ತಮುತ್ತಲಿನ ಜಾಗದಲ್ಲಿರುವ ಆರೋಗ್ಯ ಇಲಾಖೆಯ ಸರ್ಕಾರಿ ವಸತಿಗೃಹಗಳು ಸಂಪೂರ್ಣ ಪಾಳುಬಿದ್ದಿದ್ದು, ಸದ್ಯ ಸಮಾಜಘಾತುಕ ಹಾಗೂ ಅನೈತಿಕ ಚಟುವಟಿಕೆಗಳ ಪ್ರಮುಖ ತಾಣವಾಗಿ ಮಾರ್ಪಟ್ಟಿವೆ. ಹಗಲೊತ್ತಿನಲ್ಲೇ ಈ ಭಾಗದಲ್ಲಿ ಒಂಟಿಯಾಗಿ ಓಡಾಡಲು ಮಹಿಳೆಯರು ಮತ್ತು ಸಾರ್ವಜನಿಕರು ತೀವ್ರ ಭಯ ಪಡುವಂತಹ ಭೀಕರ ವಾತಾವರಣ ಸೃಷ್ಟಿಯಾಗಿದ್ದು, ಆರೋಗ್ಯ ಇಲಾಖೆ ಸಚಿವ ಯು.ಟಿ. ಖಾದರ್ ಅವರು ತಕ್ಷಣವೇ ಈ ಕಡೆ ಗಮನ ಹರಿಸಬೇಕಾದ ಅನಿವಾರ್ಯತೆ ಎದುರಾಗಿದೆ….

Read More

ಮೈಸೂರಿನಲ್ಲಿ ಗುತ್ತಿಗೆದಾರನ ಅಪಹರಣ: 16 ಲಕ್ಷ ರೂ. ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ – Kannada News | Mysuru Contractor Kidnapped, Gang Robs Rs 16 Lakh Cash and Gold Worth Rs 3.5 Lakh; Three Police Teams Formed

ಗುತ್ತಿಗೆದಾರನ ಕಿಡ್ನಾಪ್ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಂದ ಪರಿಶೀಲನೆImage Credit source: tv9 ಮೈಸೂರು, ಜುಲೈ 18: ಮೈಸೂರು (Mysuru) ನಗರದ ಹೊರವಲಯದಲ್ಲಿ ಗುತ್ತಿಗೆದಾರನೊಬ್ಬನನ್ನು ಅಪಹರಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ತಾಲೂಕಿನ ಮುದ್ದೇಗೌಡನ ದೊಡ್ಡಿ ಗ್ರಾಮದ ನಿವಾಸಿ ರಾಮು ಅಪಹರಣಕ್ಕೊಳಗಾದ ಗುತ್ತಿಗೆದಾರ. ಜುಲೈ 15ರಂದು ತೋಟದಿಂದ ಮನೆಗೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ರಾಮುವನ್ನು…

Read More

ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ನೀಡಿ: ಹಂಸಲೇಖ ಪರ ನಟ ಪ್ರೇಮ್ ಅಭಿಯಾನ – Kannada News | Nenapirali Prem started campaign demanding Padma award to Hamsalekha

ಅಭಿಮಾನಿಗಳಿಂದ ನಾದಬ್ರಹ್ಮ ಎಂದು ಕರೆಸಿಕೊಳ್ಳುವ ಸಂಗೀತ ನಿರ್ದೇಶಕ, ಗೀತ ಸಾಹಿತಿ ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗದಲ್ಲಿ ಅರ್ಧ ಶತಮಾನದಿಂದಲೂ ಸಂಗೀತ ಕೃಷಿಯಲ್ಲಿದ್ದಾರೆ. ಸಾವಿರಾರು ಅತ್ಯದ್ಭುತ ಹಾಡುಗಳನ್ನು ಹಂಸಲೇಖ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ದೊಡ್ಡ ಮಟ್ಟದ ಅಭಿಮಾನಿಗಳ ಪ್ರೀತಿ, ಗೌರವ, ವಿಶ್ವಾಸಗಳನ್ನು ಗಳಿಸಿರುವ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಧಕ್ಕಿಲ್ಲ. ಅವರ ಸಮಕಾಲೀನ ಮತ್ತು ಅವರಿಗಿಂತಲೂ ಕಿರಿಯರಾದ ಕೆಲವು ಸಂಗೀತ ನಿರ್ದೇಶಕರಿಗೆ, ಗೀತ ಸಾಹಿತಿಗಳಿಗೆ ಈಗಾಗಲೇ ಪದ್ಮ ಪ್ರಶಸ್ತಿಗಳು ದೊರೆತಿವೆ. ಇದೀಗ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ…

Read More

EA ಸ್ಪೋರ್ಟ್ಸ್ ಭವಿಷ್ಯವಾಣಿ: ಈ ಬಾರಿ ಕಪ್ ಯಾರಿಗೆ ಗೊತ್ತಾ? – Kannada News | EA Sports FC predicted Spain to win the 2026 FIFA World Cup

2026ರ ಫಿಫಾ ವಿಶ್ವಕಪ್ ಚಾಂಪಿಯನ್ ಪಟ್ಟ ಯಾರಿಗೆ ಒಲಿಯಲಿದೆ? ಈ ಪ್ರಶ್ನೆಗೆ EA ಸ್ಪೋರ್ಟ್ಸ್ ಭವಿಷ್ಯವಾಣಿ ಇದೀಗ ಉತ್ತರವಾಗಿ ಸಿಗುತ್ತಿದೆ. ಕಳೆದ ನಾಲ್ಕು ವಿಶ್ವಕಪ್ ಆವೃತ್ತಿಗಳಲ್ಲಿ ಯಾರೂ ಊಹಿಸದ ನಿಖರ ಫಲಿತಾಂಶ ನೀಡಿ ಕ್ರೀಡಾಲೋಕವನ್ನು ಬೆರಗುಗೊಳಿಸಿದ್ದ ಇಎ ಸ್ಪೋರ್ಟ್ಸ್ (EA Sports) ಸೂಪರ್ ಕಂಪ್ಯೂಟರ್, ಇದೀಗ ಮತ್ತೊಮ್ಮೆ ತನ್ನ ಅಂತಿಮ ಭವಿಷ್ಯವನ್ನು ಹೊರಹಾಕಿದೆ. ಈ ಭವಿಷ್ಯವಾಣಿಯಂತೆ ಈ ಬಾರಿ ಸ್ಪೇನ್ ಚಾಂಪಿಯನ್ ಪಟ್ಟಕ್ಕೇರಲಿದೆ. ಸತತ 4 ಬಾರಿ ನಿಖರ ಭವಿಷ್ಯ! EA ಸ್ಪೋರ್ಟ್ಸ್‌ನ ಈ ಭವಿಷ್ಯವಾಣಿಯನ್ನು ಕ್ರೀಡಾ…

Read More

Planetary Transit: ಇಂದಿನಿಂದ ಈ 5 ರಾಶಿಯಲ್ಲಿ ಮಹತ್ತರ ಬದಲಾವಣೆ; ಧನಲಾಭ, ವೃತ್ತಿಜೀವನದಲ್ಲಿ ಅನಿರೀಕ್ಷಿತ ಯಶಸ್ಸು! – Kannada News | July 18 Astrology: 5 Zodiac Signs to Gain Wealth and Career Success from Planetary Transit

ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಕೋನದಿಂದ ಜುಲೈ 18 ಅತ್ಯಂತ ವಿಶೇಷ ಹಾಗೂ ಮಹತ್ವದ ದಿನವಾಗಿದೆ. ಧಾರ್ಮಿಕ ಮತ್ತು ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಈ ದಿನ ಸಂಭವಿಸಲಿರುವ ಗ್ರಹಗಳ ವಿಶೇಷ ಜಂಟಿ ಸಂಚಾರ ಹಾಗೂ ಸ್ಥಾನ ಪಲ್ಲಟಗಳು 5 ರಾಶಿಗಳ ಜನರ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತರಲಿವೆ. ಇಂದಿನಿಂದ ಈ ರಾಶಿಯವರಿಗೆ ವ್ಯಾಪಾರದಲ್ಲಿ ಭಾರಿ ಧನಲಾಭ, ಬಾಕಿ ಇರುವ ಕೆಲಸಗಳ ಪೂರ್ಣಾವತಿ ಮತ್ತು ವೃತ್ತಿ ಬದುಕಿನಲ್ಲಿ ಅನಿರೀಕ್ಷಿತ ಯಶಸ್ಸು ಸಿಗುವ ಬಲವಾದ ಯೋಗವಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬ…

Read More