Hindu Tradition: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ? ಆಧ್ಯಾತ್ಮಿಕ ಜೀವನಕ್ಕೆ ಬೇಕಾದ ಗುಣಗಳು

Hindu Tradition: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ? ಆಧ್ಯಾತ್ಮಿಕ ಜೀವನಕ್ಕೆ ಬೇಕಾದ ಗುಣಗಳು

ಯಾರು ಬೇಕಾದರೂ ಸನ್ಯಾಸಿ ಆಗಬಹುದಾ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರವನ್ನು ನೀಡಿದ್ದಾರೆ. ಸನ್ಯಾಸಿಯಾಗಲು ಪ್ರಥಮ ಅರ್ಹತೆ ಅರಿಷಡ್ವರ್ಗಗಳನ್ನು ಜಯಿಸುವುದು. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳನ್ನು ಸಂಪೂರ್ಣವಾಗಿ ಗೆಲ್ಲುವವನು ಮಾತ್ರ ಈ ಪವಿತ್ರ ಮಾರ್ಗದಲ್ಲಿ ಮುನ್ನಡೆಯಲು ಅರ್ಹ. ಸನ್ಯಾಸಿಯು ಯಾವುದೇ ಸಂಬಂಧಗಳಿಗೆ ಅಂಟಿಕೊಳ್ಳದೆ ನಿರ್ಲಿಪ್ತನಾಗಿರಬೇಕು. ಅತಿಯಾದ ದುಃಖ ಅಥವಾ ಅತಿಯಾದ ಸಂತೋಷಕ್ಕೆ ಒಳಗಾಗದೆ, ಎರಡನ್ನೂ ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ರುಚಿಗಳ ವ್ಯಾಮೋಹ, ನಿರ್ದಿಷ್ಟ ಆಹಾರದ ಆಸೆಗಳು ಸನ್ಯಾಸಿಗೆ ಇರಬಾರದು. ಸಿಕ್ಕಿದ್ದನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಿ, ಆಹಾರಕ್ಕಾಗಿ ಹಂಬಲಿಸದೆ ಇರಬೇಕು.

ಹವಾಮಾನದ ಏರಿಳಿತಗಳಿಗೆ, ಅಂದರೆ ಚಳಿ, ಮಳೆ, ಬಿಸಿಲಿಗೆ ಆತಂಕ ಪಡದೆ, ಅವುಗಳನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು. ಸಮಾಜದಿಂದ ದೊರೆತದ್ದನ್ನು ತನ್ನಲ್ಲೇ ಬಚ್ಚಿಡದೆ, “ಕೆರೆಯ ನೀರನ್ನು ಕೆರೆಗೆ ಚೆಲ್ಲಿ” ಎಂಬಂತೆ ಅದನ್ನು ಇತರರಿಗೆ ಹಂಚುವ ಮನೋಭಾವ ಸನ್ಯಾಸಿಗಿರಬೇಕು. ದುಶ್ಚಟಗಳಾದ ಮಧ್ಯಸೇವನೆ, ಇತ್ಯಾದಿಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಪಾದರಕ್ಷೆಗಳು, ಛತ್ರಿ, ಮಂಚ, ತಲೆದಿಂಬುಗಳನ್ನು ತ್ಯಜಿಸಿ, ಸರಳವಾದ ನೆಲದಲ್ಲಿ ಮಲಗಿ, ಸಪ್ಪಲಿಗಳನ್ನು ಧರಿಸದೆ ಓಡಾಡಬೇಕು. ಬಂಗಾರ, ಬೆಳ್ಳಿ ಅಥವಾ ಯಾವುದೇ ಆಭರಣಗಳನ್ನು ಧರಿಸಬಾರದು.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಸನ್ಯಾಸಿಯು ಯಾವುದೇ ಪ್ರಾಣಿಗೆ ಹಾನಿ ಮಾಡಬಾರದು ಮತ್ತು ಕಷ್ಟದಲ್ಲಿರುವವರಿಗೆ ಸದಾ ಸ್ಪಂದಿಸಿ ಸೂಕ್ತ ಮಾರ್ಗವನ್ನು ತೋರಿಸಿಕೊಡಬೇಕು. ಸಾಂಸಾರಿಕ ವಿಷಯಗಳ, ಕಾದಂಬರಿಗಳ ಅಥವಾ ಮನರಂಜನೆಯ ಉದ್ದೇಶದಿಂದ ಸಿನಿಮಾ, ಟಿವಿ, ಮೊಬೈಲ್ ನೋಡುವ ಅಭ್ಯಾಸವನ್ನು ತ್ಯಜಿಸಬೇಕು. ಬದಲಿಗೆ, ರಾಮಾಯಣ, ಮಹಾಭಾರತದಂತಹ ಮಹಾ ಗ್ರಂಥಗಳನ್ನು ಅಧ್ಯಯನ ಮಾಡಬೇಕು. ಸೂರ್ಯೋದಯಕ್ಕೆ ಮುನ್ನ ಅಂದರೆ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ತಮ್ಮ ದಿನಚರಿಗಳನ್ನು ಮುಗಿಸಿಕೊಂಡು ಭಗವಂತನ ಆರಾಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾಫಿ, ಟೀ ಅಥವಾ ಅನಿಯಮಿತ ಆಹಾರ ಪದಾರ್ಥ ಸೇವನೆಯಿಂದ ದೂರವಿರಬೇಕು. ಈ ಎಲ್ಲಾ ಕಟ್ಟುಪಾಡುಗಳನ್ನು ಅನುಸರಿಸಿದಾಗ ಮಾತ್ರ ಆತನ ಮಾತು ವಾಕ್ಶುದ್ಧಿಯಾಗಿ, ಮುಖದಲ್ಲಿ ವಿಶೇಷವಾದ ಭಗವಂತನ ಕೃಪೆ ಮೂಡುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಫೌಜಿ’ ಸೆಟ್​ನಿಂದ ಪ್ರಭಾಸ್ ಫೋಟೋ ಲೀಕ್: ಅಭಿಮಾನಿಗಳಿಗೆ ಚಿತ್ರತಂಡದ ವಾರ್ನಿಂಗ್

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಹಾಗೂ ನಿರ್ದೇಶಕ ಹನು ರಾಘವಪುಡಿ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ‘ಫೌಜಿ’ (Fauzi) ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಇದು ಭರ್ಜರಿ ಆ್ಯಕ್ಷನ್ ಸಿನಿಮಾ ಆಗಿರಲಿದೆ. ಹಾಗಾಗಿ ಸಹಜವಾಗಿಯೇ ಹೈಪ್ ಹೆಚ್ಚಿದೆ. ಆದರೆ, ಇತ್ತೀಚೆಗೆ ಚಿತ್ರೀಕರಣದ ಸ್ಥಳದಿಂದ ಕೆಲವು ಫೋಟೋಗಳು ಲೀಕ್ ಆಗಿದ್ದು, ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಭಾಸ್ ಅವರ ಲುಕ್ ವೈರಲ್ ಆಗಿರುವುದರಿಂದ ‘ಫೌಜಿ’ ಚಿತ್ರತಂಡ ವಾರ್ನಿಂಗ್ ನೀಡಿದೆ.

ಮೊದಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪ್ರಭಾಸ್ ಅವರ ಈ ಸ್ಟೈಲಿಶ್ ಫೋಟೋಗಳನ್ನು ಕಂಡ ಪ್ರೇಕ್ಷಕರು ಇವು ಎಐ ಮೂಲಕ ಸೃಷ್ಟಿಸಿದ ಫೋಟೋಗಳು ಇರಬಹುದು ಎಂದು ಜನರು ಭಾವಿಸಿದ್ದರು. ಆದರೆ, ಚಿತ್ರತಂಡವು ಇದು ಚಿತ್ರೀಕರಣದ ನಿಜವಾದ ದೃಶ್ಯಗಳು ಎಂದು ಖಚಿತಪಡಿಸುತ್ತಿದ್ದಂತೆಯೇ ಫೋಟೋಗಳು ವೈರಲ್ ಆಗಿವೆ.

ಲೀಕ್ ಆಗಿರುವ ಫೋಟೋಗಳನ್ನು ಅಭಿಮಾನಿಗಳು ಸಿಕ್ಕಾಪಟ್ಟೆ ಶೇರ್ ಮಾಡಲು ಆರಂಭಿಸಿದ್ದಾರೆ. ಇದರಿಂದ ಚಿತ್ರದ ಮೇಲಿನ ಹೈಪ್ ಇನ್ನಷ್ಟು ಜಾಸ್ತಿ ಆಗಿದೆ ಎಂಬುದು ನಿಜ. ಆದರೂ ಲೀಕ್ ಬಗ್ಗೆ ಆಕ್ರೋಶಗೊಂಡಿರುವ ನಿರ್ಮಾಣ ಸಂಸ್ಥೆ, ‘ಈ ಫೋಟೋಗಳನ್ನು ಹಂಚಿಕೊಳ್ಳಬೇಡಿ, ಇದು ಚಿತ್ರದ ಅನುಭವವನ್ನು ಹಾಳುಮಾಡುತ್ತದೆ. ಫೋಟೋ ಶೇರ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಿರ್ದೇಶಕ ಹನು ರಾಘವಪುಡಿ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಾವು ಹಗಲಿರುಳು ಕಷ್ಟಪಟ್ಟು ಸಿನಿಮಾವನ್ನು ಅದ್ಭುತವಾಗಿ ರೂಪಿಸುತ್ತಿದ್ದೇವೆ. ದಯವಿಟ್ಟು ಲೀಕ್ ಮಾಡುವ ಮೂಲಕ ಆ ಮ್ಯಾಜಿಕ್ ಅನ್ನು ಹಾಳುಮಾಡಬೇಡಿ. ಚಿತ್ರಮಂದಿರದಲ್ಲೇ ಈ ಅದ್ಭುತವನ್ನು ಆನಂದಿಸಿ’ ಎಂದು ವಿನಂತಿಸಿದ್ದಾರೆ.

ಇದನ್ನೂ ಓದಿ: ‘ನಿವೃತ್ತಿ ದಿನ ಹತ್ತಿರ ಬಂತು’; ಪ್ರಭಾಸ್ ಹೊಸ ಲುಕ್ ನೋಡಿ ಬಂತು ಟೀಕೆ

‘ಫೌಜಿ’ ಚಿತ್ರವು ಬರೋಬ್ಬರಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಇಮಾನ್ವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿರಿಯ ನಟರಾದ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಜಯಪ್ರದಾ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಕನ್ನಡದ ನಟಿ ಚೈತ್ರಾ ಜೆ. ಆಚಾರ್ ಕೂಡ ಪಾತ್ರವರ್ಗದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ.

ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು ಎಂಬುದು ಈವರೆಗೆ ಖಾತ್ರಿಯಾಗಿಲ್ಲ. ಇವು ಯಾರಿಗೆ ಸೇರಿದ್ದೆಂದು ಯಾವೊಬ್ಬ ಕೈದಿಯೂ ಒಪ್ಪಿಕೊಳ್ಳದ ಕಾರಣ, ಬ್ಯಾರಕ್‌ನಲ್ಲಿದ್ದ ವಿನೋದ್, ದೀಪಕ್, ನಟರಾಜ, ಅಖೀಬ್, ಕಿರಣ್, ಸಾದಿಕ್, ಮೇಘರ್, ಭಗವಾನ್​ ದಾಸ್, ಚರಣಪ್ರಸಾದ್​, ವಂಶ, ಮಲ್ಲಿಕ್‌ಜಾನ್, ಅಶೋಕ ಹಾಗೂ ಮಹಾಂತೇಶ ಎಂಬ 13 ವಿಚಾರಣಾಧೀನ ಕೈದಿಗಳ ವಿರುದ್ಧ FIR ದಾಖಲಾಗಿದೆ. ಜೈಲು ಅಧೀಕ್ಷಕ ಶಹಾಬುದ್ದೀನ್ ಕಾಲೇಖಾನ್‌ ದೂರು ಆಧಿರಿಸಿ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸ್​​ ಆಗಿದೆ.

ಇದನ್ನೂ ಓದಿ: ‘ಸ್ಮಶಾನಕ್ಕೆ ಕಳುಹಿಸುತ್ತೇವೆ’; ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಹುತೇಕ ಫೋನ್‌ಗಳನ್ನು ಹಾಲಿನ ಕವರ್‌ಗಳಲ್ಲಿ ಮೊಬೈಲ್‌ಗಳನ್ನು ಪ್ಯಾಕ್ ಮಾಡಿ ಕೊಳಚೆ ನೀರು ಹರಿಯುವ ಪೈಪ್‌ಗಳಲ್ಲಿ ಖದೀಮರು ಮರೆಮಾಚಿ ಇಟ್ಟಿದ್ದರು. ಇವನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆಯನ್ನೂ ಹಾಕಿದ್ದರು. ಆ ಬೆನ್ನಲ್ಲೇ ಜೈಲಿನೊಳಗೆ ಜಾಮರ್ ವ್ಯವಸ್ಥೆ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದರ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದರಲ್ಲಿ ಜೈಲರ್‌ಗಳು ಹಾಗೂ ವಾರ್ಡರ್‌ಗಳ ಶಾಮೀಲು ಇರುವ ಶಂಕೆ ವ್ಯಕ್ತವಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸೂಚಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ರಾಜ್ಯದ ಮತ್ತೊಂದು ಜೈಲಿನಲ್ಲಿ ಈಗ ಮೊಬೈಲ್​​ಗಳು ಸಿಕ್ಕಿರೋದು, ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಮುಂದುವರಿದಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂಬಂತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಣರೋಚಕ ಪಂದ್ಯದ ಸೋಲಿಗೆ ಕಾರಣ ಬಿಚ್ಚಿಟ್ಟ ನಾಯಕ ರಶೀದ್ ಖಾನ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 204 ರನ್​ಗಳಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು.

ಈ ಸೋಲಿನ ಬಳಿಕ ಮಾತನಾಡಿದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್,  ತಂಡದ ಪ್ರದರ್ಶನಕ್ಕೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಸೋಲಿಗೆ ಕಾರಣವಾದ ಅಂಶಗಳ ಮುಂದಿಟ್ಟಿದ್ದಾರೆ.

ಬೌಲರ್‌ಗಳ ಶ್ರಮಕ್ಕೆ ಮೆಚ್ಚುಗೆ:

ಮೊದಲು ಬ್ಯಾಟಿಂಗ್ ಮಾಡಿದ ಎದುರಾಳಿ ತಂಡವನ್ನು 210 ರನ್‌ಗಳ ಒಳಗೆ ನಿಯಂತ್ರಿಸಿದ್ದು ಬೌಲರ್‌ಗಳ ದೊಡ್ಡ ಸಾಧನೆ. ಈ ಪಿಚ್‌ನಲ್ಲಿ ಆ ಮೊತ್ತವನ್ನು ಬೆನ್ನಟ್ಟುವುದು ಕಷ್ಟವಿರಲಿಲ್ಲ. ಇದಾಗ್ಯೂ ನಾವು ವಿಫಲವಾದೆವು ಎಂದು ರಶೀದ್ ಖಾನ್ ಹೇಳಿದ್ದಾರೆ.

ತಿರುವು ನೀಡಿದ ಆ ಎರಡು ಓವರ್‌ಗಳು:

ಬ್ಯಾಟಿಂಗ್‌ನಲ್ಲಿ ಆರಂಭಿಕರು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ, ಪಂದ್ಯದ 12 ಮತ್ತು 13ನೇ ಓವರ್‌ಗಳಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿದ್ದು ತಂಡಕ್ಕೆ ದೊಡ್ಡ ಹೊಡೆತ ನೀಡಿತು. “ಆ ಸಮಯದಲ್ಲಿ ನಾವು ಪಂದ್ಯದ ಮೇಲಿನ ಹಿಡಿತವನ್ನು ಕಳೆದುಕೊಂಡೆವು. ವಿಕೆಟ್ ಬೀಳದಿದ್ದರೆ ಪ್ರತಿ ಓವರ್‌ಗೆ 9-10 ರನ್ ಗಳಿಸುವುದು ಈ ಪಿಚ್‌ನಲ್ಲಿ ದೊಡ್ಡ ವಿಷಯವಾಗಿರಲಿಲ್ಲ” ಎಂದು ರಶೀದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಕೊನೆಯ ಓವರ್‌ನ ರೋಚಕತೆ:

ಕೊನೆಯ ಓವರ್‌ನಲ್ಲಿ ಕೇವಲ ಒಂದು ಬೌಂಡರಿ ಅಗತ್ಯವಿತ್ತು. ಎದುರಾಳಿ ಬೌಲರ್ ತುಷಾರ್ ದೇಶಪಾಂಡೆ ಅವರ ಅದ್ಭುತ ಯಾರ್ಕರ್ ಎಸೆತಗಳನ್ನು ರಶೀದ್ ಶ್ಲಾಘಿಸಿದರು. ಆದರೂ, ಬೌಲರ್ ಲಯ ತಪ್ಪಿದ ಒಂದು ಎಸೆತವನ್ನು ಸಿಕ್ಸರ್‌ಗೆ ಅಟ್ಟಲು ತಮಗೆ ಸಾಧ್ಯವಾಗಲಿಲ್ಲ. ಅಂತಿಮ ಎರಡು 2 ಓವರ್​ಗಳಲ್ಲಿ ಬೌಂಡರಿಗಳು ಬರದಿರುವುದು ನಮ್ಮ ಸೋಲಿಗೆ ಕಾರಣವಾಯಿತು ಎಂದು ರಶೀದ್ ಖಾನ್ ಹೇಳಿದ್ದಾರೆ.

ಶುಭ್​ಮನ್ ಗಿಲ್ ಬಗ್ಗೆ ಅಪ್‌ಡೇಟ್:

ಇದೇ ವೇಳೆ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರ ಫಿಟ್​ನೆಸ್ ಬಗ್ಗೆ ಅಪ್​ಡೇಟ್ ನೀಡಿದ ರಶೀದ್ ಖಾನ್,  “ಗಿಲ್ ಅವರಿಗೆ ಸ್ನಾಯು ಸೆಳೆತ (muscle spasm) ಉಂಟಾಗಿತ್ತು. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮುಂದಿನ ಪಂದ್ಯದ ವೇಳೆಗೆ ತಂಡಕ್ಕೆ ಮರಳುವ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ: ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

ಮುಂದಿನ ಪಂದ್ಯಕ್ಕೆ ಸಿದ್ಧತೆ:

ಈ  ಸೋಲಿನಿಂದ ಗುಜರಾತ್ ಟೈಟಾನ್ಸ್ ಕಂಗೆಟ್ಟಿಲ್ಲ. ಇದೊಂದು ದೀರ್ಘಾವಧಿಯ ಟೂರ್ನಿಯಾಗಿದ್ದು, ಮಾಡಿದ ತಪ್ಪುಗಳಿಂದ ಪಾಠ ಕಲಿಯುತ್ತೇವೆ ಮತ್ತು ಮುಂದಿನ ಪಂದ್ಯದಲ್ಲಿ ಬಲಿಷ್ಠವಾಗಿ ಮರಳುತ್ತೇವೆ ಎಂಬ ಭರವಸೆಯನ್ನು ರಶೀದ್ ಖಾನ್ ಅಭಿಮಾನಿಗಳಿಗೆ ನೀಡಿದ್ದಾರೆ.

 

Source link

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 05: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆ

ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು ಮತ್ತು ವಿಜಯನಗರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಕ್ಕಿಬಿದ್ದ ಒಬ್ಬ ವ್ಯಕ್ತಿ, ತಮ್ಮನ್ನು ಬಾಗಲಕೋಟೆಯ ಕಾಂಗ್ರೆಸ್ ಕಚೇರಿಗೆ ಕರೆದೊಯ್ಯಲಾಗಿತ್ತು ಎಂದು ಹೇಳಿದ್ದಾರೆ. ನಂತರ ಅವರನ್ನು ಕರಪತ್ರ ವಿತರಿಸಲು ಕ್ಯಾಂಪಸ್‌ಗೆ ಕಳುಹಿಸಲಾಯಿತು. ಆ ಕ್ಯಾಂಪಸ್‌ನ ವಿವರ ಅಥವಾ ಅಲ್ಲಿನ ಇತರೆ ವ್ಯಕ್ತಿಗಳ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಆ ವ್ಯಕ್ತಿ ತಿಳಿಸಿದ್ದಾರೆ. ಈ ಘಟನೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ರಾಜ್ಯದ ಎಲ್ಲೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ!

ಬೆಂಗಳೂರು, ಏಪ್ರಿಲ್ 05: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality)  ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 128ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –128
  • ಮಂಗಳೂರು-73
  • ಮೈಸೂರು –124
  • ಬೆಳಗಾವಿ – 74
  • ಕಲಬುರ್ಗಿ-114
  • ಶಿವಮೊಗ್ಗ – 80
  • ಬಳ್ಳಾರಿ – 81
  • ಹುಬ್ಬಳ್ಳಿ- 76
  • ಉಡುಪಿ –80
  • ವಿಜಯಪುರ –82

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

Source link

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ ನಂತರ ಬಾಲಕ ಈ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಎಸಿಪಿ ಹಿಮಾನಿ ಮಿಶ್ರಾ ಅವರ ಪ್ರಕಾರ, ಮೃತರನ್ನು ಸೌರಭ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಮೈಹಾರ್ ಮೂಲದವರಾಗಿದ್ದು, ನೆಹರು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಫಾರ್ಮಾ ವಿದ್ಯಾರ್ಥಿಯಾಗಿದ್ದರು. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಘಟನೆ ನಡೆದ ಸಮಯದಲ್ಲಿ, ಸೌರಭ್‌ನ ರೂಮ್‌ಮೇಟ್‌ಗಳು ಮುಂಭಾಗದ ಕೋಣೆಯಲ್ಲಿ ಲ್ಯಾಪ್‌ಟಾಪ್‌ನಲ್ಲಿ ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಅವನು ತನ್ನ ಕುಟುಂಬದೊಂದಿಗೆ ವೀಡಿಯೊ ಕರೆ ಮಾಡಲು ಹೋಗಿದ್ದ.

ಮತ್ತಷ್ಟು ಓದಿ: ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ಆತನ ರೂಮ್ ಮೇಟ್ ನಯನ್ ಮಾತನಾಡಿ, ನಮಗೆ ದೊಡ್ಡ ಶಬ್ದ ಕೇಳಿತ್ತು ಮೊದಲು ಮೊಬೈಲ್ ಫೋನ್ ಸ್ಫೋಟಗೊಂಡಿದೆ ಎಂದು ಭಾವಿಸಿದ್ದೆವು. ನಾವು ಅಡುಗೆಮನೆಗೆ ಬಂದಾಗ ಸೌರಭ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡೆವು. ಅವನು ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಿದರು.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ. ಸೌರಭ್ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ, ಅಷ್ಟೇ ಅಲ್ಲದೆ ಇದು ಇತ್ತೀಚೆಗೆ ಆಕೆಯ ಕುಟುಂಬದ ಗಮನಕ್ಕೆ ಇದು ಬಂದಿತ್ತು.

ಇದರ ನಂತರ, ಅವನ ತಂದೆ ಕಳೆದ 15 ದಿನಗಳಿಂದ ಅವನೊಂದಿಗೆ ಇದ್ದರು. ಸೌರಭ್ ಎಂದಿನಂತೆಯೇ ಒದ್ದ, ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಯಾವುದೇ ಲಕ್ಷಣಗಳೂ ಮುಖದಲ್ಲಿ ಗೋಚರಿಸಿರಲಿಲ್ಲ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ದಿನಕ್ಕೊಂದು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ. ಇತ್ತೀಚೆಗಷ್ಟೇ ಅಮೆರಿಕದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಣಬೀರ್ ಕಪೂರ್ (Ranbir Kapoor), ಈ ಸಿನಿಮಾದಲ್ಲಿ ತಾವು ಕೇವಲ ಶ್ರೀರಾಮನ ಪಾತ್ರ ಮಾತ್ರವಲ್ಲದೇ ಪರಶುರಾಮನ ಪಾತ್ರವನ್ನೂ ನಿರ್ವಹಿಸುತ್ತಿರುವುದಾಗಿ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಶ್ರೀರಾಮ ಮತ್ತು ಪರಶುರಾಮ ಇಬ್ಬರೂ ಭಗವಾನ್ ವಿಷ್ಣುವಿನ ಅವತಾರಗಳು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಇದೀಗ ರಣಬೀರ್ ಈ ಇಬ್ಬರೂ ದೈವಿಕ ಪುರುಷರ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಕುರಿತು ಮಾತನಾಡಿದ ರಣಬೀರ್, ‘ಭಗವಾನ್ ವಿಷ್ಣುವಿನ ಅವತಾರಗಳಲ್ಲಿ ಶ್ರೀರಾಮನಿಗಿಂತ ಮೊದಲು ಪರಶುರಾಮರು ಭೂಮಿಗೆ ಬಂದಿದ್ದರು. ಒಬ್ಬ ನಟನಾಗಿ ಈ ಇಬ್ಬರೂ ಮಹಾನ್ ವ್ಯಕ್ತಿಗಳ ಪಾತ್ರವನ್ನು ನಿರ್ವಹಿಸಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಮತ್ತು ಇದು ಸೃಜನಾತ್ಮಕವಾಗಿ ನನಗೆ ತುಂಬಾನೇ ತೃಪ್ತಿ ನೀಡಿದೆ’ ಎಂದು ಹೇಳಿದ್ದಾರೆ.

ಕೇವಲ ದೈಹಿಕ ಬದಲಾವಣೆಯಷ್ಟೇ ಅಲ್ಲದೇ, ಪಾತ್ರದ ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆಳವನ್ನು ಅರ್ಥಮಾಡಿಕೊಳ್ಳಲು ರಣಬೀರ್ ಸಾಕಷ್ಟು ಶ್ರಮವಹಿಸಿದ್ದಾರೆ. ‘ಪಾತ್ರದ ಬಾಡಿ ಲಾಂಗ್ವೇಜ್‌ಗಿಂತ ಹೆಚ್ಚಾಗಿ, ಅವರ ಉದ್ದೇಶಗಳು ಮತ್ತು ಆಧ್ಯಾತ್ಮಿಕ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಈ ಸಿನಿಮಾದ ಚಿತ್ರೀಕರಣ ಆರಂಭವಾಗುವ ಒಂದು ವರ್ಷದ ಮೊದಲೇ ನಾನು ಈ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅವರಿಬ್ಬರೂ ಏನನ್ನು ಪ್ರತಿನಿಧಿಸುತ್ತಾರೆ ಮತ್ತು ಅವರ ಜೀವನದ ಉದ್ದೇಶಗಳೇನು ಎಂಬುದನ್ನು ಅರಿಯಲು ಪ್ರಯತ್ನಿಸಿದ್ದೇನೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಚಿತ್ರವನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಬಳಸಿ ನಿರ್ಮಿಸುತ್ತಿದ್ದಾರೆ. ಇದು ಕೇವಲ ಭಾರತಕ್ಕೆ ಸೀಮಿತವಾಗದೇ ಜಾಗತಿಕ ಪ್ರೇಕ್ಷಕರನ್ನು ತಲುಪುವ ಗುರಿ ಹೊಂದಿದೆ. ಪರಶುರಾಮನ ಪಾತ್ರವು ಚಿತ್ರದಲ್ಲಿ ಅತಿಥಿ ಪಾತ್ರದಂತೆ ಕಾಣಿಸಿಕೊಂಡರೂ, ಕಥೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಒಟ್ಟಿನಲ್ಲಿ, ಶ್ರೀರಾಮನ ಸೌಮ್ಯತೆ ಮತ್ತು ಪರಶುರಾಮನ ಉಗ್ರತೆಯನ್ನು ರಣಬೀರ್ ಕಪೂರ್ ಬೆಳ್ಳಿತೆರೆಯ ಮೇಲೆ ಹೇಗೆ ಪ್ರಸ್ತುತಪಡಿಸಲಿದ್ದಾರೆ ಎಂಬ ಕುತೂಹಲ ಈಗ ಗಗನಕ್ಕೇರಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ‘ರಾಮಾಯಣ: ಪಾರ್ಟ್ 1’ ಸಿನಿಮಾ ಬಿಡುಗಡೆ ಆಗಲಿದೆ. ಯಶ್ ಅವರು ರಾವಣನ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version