Vastu Tips: ಮನೆಯಲ್ಲಿ ತಪ್ಪಿಯೂ ಈ ಎರಡು ಜಾಗಗಳಲ್ಲಿ ಕೀಲಿಗಳನ್ನು ಇಡಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu for Keys: How Key Placement Attracts Negative Energy and Disrupts Home Peace

ಮನೆಯಲ್ಲಿ ಸಣ್ಣಪುಟ್ಟ ವಿಷಯಗಳು ಕೂಡ ದೊಡ್ಡ ಮಟ್ಟದ ವಾಸ್ತು ದೋಷಗಳಿಗೆ ಕಾರಣವಾಗಬಹುದು. ನಮಗೆ ಅರಿವಿಲ್ಲದೆಯೇ ನಾವು ಮಾಡುವ ಕೆಲವು ತಪ್ಪುಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತವೆ. ಅಂತಹ ವಸ್ತುಗಳಲ್ಲಿ ಮನೆಯ ಕೀಲಿಗಳು (Key bundle) ಕೂಡ ಒಂದು! ಹೌದು, ಕೀಲಿಗಳನ್ನು ಸರಿಯಾದ ಜಾಗದಲ್ಲಿ ಇಡದಿದ್ದರೆ ಅಥವಾ ಅನಗತ್ಯ ಕೀಲಿಗಳನ್ನು ಮನೆಯಲ್ಲಿಟ್ಟುಕೊಂಡರೆ ಅದು ಕುಟುಂಬದ ಪ್ರಗತಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸಬಹುದು. ಮನೆಯಲ್ಲಿ ವಾಸ್ತು ಸಮತೋಲನವನ್ನು ಕಾಯ್ದುಕೊಳ್ಳಲು ಕೀಲಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಳೆಯ ಮತ್ತು ತುಕ್ಕು ಹಿಡಿದ ಕೀಲಿ:

ಬಳಕೆಯಲ್ಲಿಲ್ಲದ, ಕಳೆದುಹೋದ ಬೀಗಗಳ ಕೀಲಿಗಳು ಅಥವಾ ಹಳೆಯ ಕೀಲಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ವಾಸ್ತು ಪ್ರಕಾರ ಸರಿಯಲ್ಲ. ಇಂತಹ ಕೀಲಿಗಳು ಮನೆಯಲ್ಲಿ ಭಾರವಾದ ವಾತಾವರಣವನ್ನು ಸೃಷ್ಟಿಸುತ್ತವೆ ಮತ್ತು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ. ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತಿಲ್ಲ ಎಂದಾದರೆ, ಒಮ್ಮೆ ನಿಮ್ಮ ಮನೆಯಲ್ಲಿರುವ ಅನಗತ್ಯ ಕೀಲಿಗಳನ್ನು ಪರಿಶೀಲಿಸಿ ಹೊರಹಾಕಿ.

ತುಕ್ಕು ಹಿಡಿದ ಕೀಲಿಗಳಿಂದ ಶನಿ ದೋಷದ ಭೀತಿ:

ತುಕ್ಕು ಹಿಡಿದ ಕೀಲಿಗಳನ್ನು ಮನೆಯಲ್ಲಿ ಇಡುವುದರಿಂದ ಶನಿ ಗ್ರಹದ ದುಷ್ಪರಿಣಾಮ ಎದುರಾಗಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಕ್ಷೀಣಿಸುವಂತೆ ಮಾಡುವುದಲ್ಲದೆ, ಮಾನಸಿಕ ನೆಮ್ಮದಿಯನ್ನು ಭಂಗಗೊಳಿಸಬಹುದು. ತುಕ್ಕು ಹಿಡಿದ ಕೀಲಿಯನ್ನು ಸ್ವಚ್ಛಗೊಳಿಸಿ ಮತ್ತೆ ಬಳಸಲು ಪ್ರಯತ್ನಿಸುವುದಕ್ಕಿಂತ, ಅದನ್ನು ಸಂಪೂರ್ಣವಾಗಿ ವಿಲೇವಾರಿ ಮಾಡುವುದೇ ಶ್ರೇಯಸ್ಕರ.

ಅನುಪಯುಕ್ತ ವಾಹನ ಮತ್ತು ಬೀಗಗಳ ಕೀಲಿಗಳ ಅಪಾಯ:

ಸಾಮಾನ್ಯವಾಗಿ ಬಳಕೆಯಲ್ಲಿಲ್ಲದ ಮೋಟಾರ್ ಸೈಕಲ್, ಕಾರು ಅಥವಾ ಹಳೆಯ ಬೀಗಗಳ ಕೀಲಿಗಳನ್ನು ‘ಮುಂದೆಂದಾದರೂ ಬೇಕಾಗಬಹುದು’ ಎಂದು ಮನೆಗಳಲ್ಲಿ ಎತ್ತಿಡಲಾಗುತ್ತದೆ. ಆದರೆ, ಈ ಕೀಲಿಗಳು ಅಸ್ಥಿರ ಶಕ್ತಿಯನ್ನು (Unstable Energy) ಉತ್ಪಾದಿಸುತ್ತವೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಉದ್ಯೋಗ-ವ್ಯವಹಾರಗಳಲ್ಲಿ ಪ್ರಗತಿ ಕಾಣಲು ಇವುಗಳನ್ನು ತಕ್ಷಣವೇ ವಿಲೇವಾರಿ ಮಾಡಿ.

ಇದನ್ನೂ ಓದಿ: ತಪ್ಪಿಯೂ ಈ ದಿನ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಡಿ; ಸರಿಯಾದ ನಿಯಮ ಇಲ್ಲಿದೆ

ಕೀಲಿಗಳನ್ನು ಇಡಲು ಪಶ್ಚಿಮ ದಿಕ್ಕು ಅತ್ಯಂತ ಮಂಗಳಕರ:

ಕೀಲಿಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಎಸೆಯುವುದು ಶಕ್ತಿಯ ಹರಿವಿಗೆ ಅಡಚಣೆ ಉಂಟುಮಾಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೀಲಿಗಳನ್ನು ಇಡಲು ಪಶ್ಚಿಮ ದಿಕ್ಕು ಅತ್ಯಂತ ಮಂಗಳಕರವಾಗಿದೆ. ಕೀಲಿಗಳನ್ನು ಸರಿಯಾದ ದಿಕ್ಕಿನಲ್ಲಿ ಸೂಕ್ತವಾದ ಕೀ-ಸ್ಟ್ಯಾಂಡ್‌ನಲ್ಲಿ ಇಡುವುದರಿಂದ ಮನೆಯಲ್ಲಿ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿ ನೆಲೆಸುತ್ತದೆ.

ಪೂಜಾ ಕೊಠಡಿ ಮತ್ತು ಅಡುಗೆಮನೆಯಲ್ಲಿ ಕೀಲಿ ಇಡಲೇಬೇಡಿ:

ಪೂಜಾ ಕೊಠಡಿಯು ಅತ್ಯಂತ ಪವಿತ್ರವಾದ ಸ್ಥಳವಾಗಿದ್ದು, ಅಲ್ಲಿ ಕೀಲಿಗಳಂತಹ ವಸ್ತುಗಳನ್ನು ಇಡಬಾರದು. ಅದೇ ರೀತಿ, ಅಡುಗೆಮನೆಯಲ್ಲಿ ಕೀಲಿಗಳನ್ನು ಇಡುವುದರಿಂದ ಅಲ್ಲಿನ ಅಗ್ನಿ ತತ್ವದ ಮೇಲೆ ಪ್ರಭಾವ ಉಂಟಾಗುತ್ತದೆ. ಇದು ಕುಟುಂಬದ ಸದಸ್ಯರ ಆರೋಗ್ಯದ ಮೇಲೆ ಹಾಗೂ ಮನೆಯಲ್ಲಿ ತಯಾರಿಸುವ ಆಹಾರದ ಶುದ್ಧತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಹೀಗಾಗಿ, ಈ ಎರಡೂ ಪ್ರದೇಶಗಳಿಂದ ಕೀಲಿಗಳನ್ನು ದೂರವಿಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶೈಕ್ಷಣಿಕ ವರ್ಷ ಆರಂಭವಾಗಿ 2.5 ತಿಂಗಳು ಕಳೆದರೂ ಸಿಗದ ಶೂ-ಸಾಕ್ಸ್: ಬರಿಗಾಲಲ್ಲೇ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು – Kannada News | Shoe Socks Scheme Fails Karnataka Students: Yadgir Children Attend School Barefoot

ಶೂ-ಸಾಕ್ಸ್ ಯೋಜನೆ ವಿಳಂಬImage Credit source: Tv9 kannada

ಯಾದಗಿರಿ, ಆ.14: ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಲ್ಲಿ ಯಾವುದೇ ರೀತಿಯ ಭೇದಭಾವ ಮೂಡಬಾರದು ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗಬೇಕು ಎಂಬ ಉದಾತ್ತ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಶೂ-ಸಾಕ್ಸ್ ಯೋಜನೆ’ ಈ ಬಾರಿ ವಿಳಂಬದ ನೀತಿಯಿಂದಾಗಿ ಹಳಿ ತಪ್ಪಿದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಬರೋಬ್ಬರಿ ಎರಡುವರೆ ತಿಂಗಳು ಕಳೆಯುತ್ತಾ ಬಂದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣೆಯಾಗಿಲ್ಲ.

ಇದರಿಂದಾಗಿ ಯಾದಗಿರಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳ ಶಾಲೆಗಳಿಗೆ ಆಗಮಿಸುವ ಬಡ ವಿದ್ಯಾರ್ಥಿಗಳು ಅನಿವಾರ್ಯವಾಗಿ ಬರಿಗಾಲಿನಲ್ಲೇ ಶಾಲೆಗಳಿಗೆ ಬರುವಂತ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದ ಬಡ ಕುಟುಂಬಗಳ ಪೋಷಕರಿಗೆ ಮಕ್ಕಳಿಗೆ ಪ್ರತ್ಯೇಕವಾಗಿ ಚಪ್ಪಲಿ ಅಥವಾ ಶೂ ಖರೀದಿಸಿಕೊಡುವ ಆರ್ಥಿಕ ಶಕ್ತಿಯಿಲ್ಲ. ಸರ್ಕಾರವೇ ಉಚಿತವಾಗಿ ಶೂ-ಸಾಕ್ಸ್ ನೀಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಈಗ ತೀವ್ರ ನಿರಾಶೆಯಾಗಿದೆ.

ಆರ್ಥಿಕವಾಗಿ ಸಬಲರಾಗಿರುವ ಪೋಷಕರು ತಮ್ಮ ಮಕ್ಕಳಿಗೆ ಚಪ್ಪಲಿ ಕೊಡಿಸಿದ್ದಾರೆ. ಆದರೆ ಬಡತನದಲ್ಲಿರುವ ಕುಟುಂಬಗಳ ಮಕ್ಕಳು ಬರಿಗಾಲಿನಲ್ಲೇ ನಡೆದುಕೊಂಡು ಶಾಲೆಗೆ ತಲುಪುತ್ತಿದ್ದಾರೆ. ಈ ವರ್ಷ ಸರ್ಕಾರದ ಯೋಜನೆ ಕೇವಲ ಅಧಿಕೃತ ಆದೇಶ ಹಾಗೂ ಸುತ್ತೋಲೆಗಳಿಗೆ ಮಾತ್ರ ಸೀಮಿತವಾಗಿದೆಯೇ ಹೊರತು ಶಾಲಾ ಅಂಗಳಕ್ಕೆ ತಲುಪಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಈ ಹಿಂದೆ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಮೂಲಕ ಶಾಲಾ ಮಟ್ಟದಲ್ಲೇ ಸ್ಥಳೀಯವಾಗಿ ಶೂ ಹಾಗೂ ಸಾಕ್ಸ್ ಖರೀದಿಸಲು ಶಿಕ್ಷಣ ಇಲಾಖೆ ಅನುದಾನ ನೀಡಿ ಅವಕಾಶ ಕಲ್ಪಿಸಿತ್ತು. ಇದರಿಂದ ಶಾಲೆ ಆರಂಭವಾದ ದಿನಗಳಲ್ಲೇ ಮಕ್ಕಳಿಗೆ ಶೂ ಸಿಗುತ್ತಿತ್ತು. ಈ ಬಾರಿ ರಾಜ್ಯ ಸರ್ಕಾರ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ರಾಜ್ಯಮಟ್ಟದ ಕೇಂದ್ರೀಕೃತ ಟೆಂಡರ್ ಕರೆದಿದೆ. ಈ ಬೃಹತ್ ಟೆಂಡರ್ ಪ್ರಕ್ರಿಯೆಯಲ್ಲಿ ಉಂಟಾಗಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಳಂಬವೇ ಪ್ರಸ್ತುತ ಮಕ್ಕಳಿಗೆ ಶೂ-ಸಾಕ್ಸ್ ಸಿಗದಿರಲು ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಉತ್ತರಾಖಂಡದ ಚಮೋಲಿ ಸುರಂಗಕ್ಕೆ ದಿಢೀರ್ ನೀರು-ತ್ಯಾಜ್ಯ ಪ್ರವಾಹ: 7ಕಾರ್ಮಿಕರ ದಾರುಣ ಸಾವು, 14 ಗಾಯಾಳುಗಳು

ಪ್ರಸ್ತುತ ಮೊದಲ ಸೆಮೆಸ್ಟರ್ (ಅರ್ಧವಾರ್ಷಿಕ) ಪರೀಕ್ಷೆಗಳು ಹತ್ತಿರವಾಗುತ್ತಿದ್ದರೂ ಶೂ-ಸಾಕ್ಸ್ ಸುಳಿವೇ ಇಲ್ಲ. “ಕೊಡುತ್ತೇವೆ ಎಂದು ಹೇಳಿದ್ದಾರೆ, ಆದರೆ ಇನ್ನು ಕೊಟ್ಟಿಲ್ಲ” ಎಂದು ಶಾಲಾ ವಿದ್ಯಾರ್ಥಿನಿ ಸಾವಿತ್ರಿ ಹಾಗೂ ಸಹಪಾಠಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಸಮಾನತೆ ತರಲು ರೂಪಿಸಿದ ಒಳ್ಳೆಯ ಯೋಜನೆಯೊಂದು, ಶಿಕ್ಷಣ ಇಲಾಖೆಯ ಸಮಯಪ್ರಜ್ಞೆಯಿಲ್ಲದ ಆಡಳಿತ ವೈಖರಿಯಿಂದಾಗಿ ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೋಗುವ ಮಹಿಳೆಯರೇ ಹುಷಾರ್! ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್ – Kannada News | Chain Snatchers Brutally Attack Woman in Peenya; CCTV Video Goes Viral

ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್

ಬೆಂಗಳೂರು, ಆಗಸ್ಟ್ 14: ನಗರದಲ್ಲಿ (Bengaluru) ಒಂಟಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚೈನ್ ಸ್ನಾಚರ್‌ಗಳ ಹಾವಳಿ ಮಿತಿಮೀರಿದೆ. ಬೆಳ್ಳಂಬೆಳಿಗ್ಗೆ ವಾಕಿಂಗ್ ಹೋಗುವ ಹಾಗೂ ಕೆಲಸಕ್ಕೆ ಹೊರಡುವ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಮೃಗಗಳಂತೆ ಮುಗಿಬೀಳುತ್ತಿರುವ ದೃಶ್ಯಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಇತ್ತೀಚೆಗೆ ನಗರದ ನೆಲಗದರನಹಳ್ಳಿಯಲ್ಲಿ ನಡೆದಿರುವ ಚೈನ್ ಸ್ನಾಚಿಂಗ್ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಎದೆ ಝಲ್ ಎನ್ನಿಸುವಂತಿವೆ.

ಒಂಟಿ ಮಹಿಳೆ ಮೇಲೆ ಅಟ್ಯಾಕ್

ನೆಲಗದರನಹಳ್ಳಿಯಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿರುವ ರವಿಕುಮಾರ್ ಹಾಗೂ ಅವರ ಪತ್ನಿ ವಿಜಯಮ್ಮ ಎಂದಿನಂತೆ ಮುಂಜಾನೆ 4 ಗಂಟೆಗೆ ವ್ಯಾಪಾರಕ್ಕೆ ತೆರಳಿದ್ದರು. ಬೆಳಿಗ್ಗೆ ಸುಮಾರು 5:15ರ ವೇಳೆಗೆ ವಿಜಯಮ್ಮ ಅವರು ಒಬ್ಬರೇ ಮನೆಗೆ ವಾಪಸ್ ಆಗುತ್ತಿದ್ದಾಗ, ಬೈಕಿನಲ್ಲಿ ಬಂದ ಇಬ್ಬರು ಕಿರಾತಕರು ಆಕೆಯನ್ನು ಹಿಂಬಾಲಿಸಿದ್ದಾರೆ. ರಸ್ತೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿ, ಮುಖವಾಡ ಧರಿಸಿದ್ದ ಆರೋಪಿಯೊಬ್ಬ ಏಕಾಏಕಿ ವಿಜಯಮ್ಮ ಅವರ ಮೇಲೆ ಮೃಗದಂತೆ ಎರಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ.

ಕ್ಷಣಾರ್ಧದಲ್ಲಿ ಬೈಕ್ ಹತ್ತಿ ಎಸ್ಕೇಪ್

ಮತ್ತೋರ್ವ ಆರೋಪಿ ಬೈಕ್ ಮೇಲಿಂದಲೇ ಆಕೆಗೆ ಕಾಲಿನಿಂದ ಒದ್ದು ಮೃಗೀಯವಾಗಿ ಹಲ್ಲೆ ನಡೆಸಿದ್ದಾನೆ. ನಡುರಸ್ತೆಯಲ್ಲೇ ವಿಜಯಮ್ಮ ಅವರು ಪ್ರಾಣಭಯದಿಂದ ಜೋರಾಗಿ ಚೀರಾಡಿದ್ದಾರೆ. ಈ ಆಕ್ರಂದನ ಕೇಳಿ ಸ್ಥಳೀಯ ರಸ್ತೆಯಲ್ಲಿದ್ದ ಬೀದಿ ನಾಯಿಯೊಂದು ಮಹಿಳೆಯ ಸಹಾಯಕ್ಕೆ ಓಡಿಬಂದು, ಆರೋಪಿಗೆ ಕಚ್ಚಲು ಮುಂದಾಗಿದೆ. ಆದರೂ ಬಿಡದ ದುಷ್ಕರ್ಮಿಗಳು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಕ್ಷಣಾರ್ಧದಲ್ಲಿ ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾರೆ.

ಆರೋಪಿಗಳು ಪೊಲೀಸರ ಕಣ್ಣು ತಪ್ಪಿಸಲು ಬೈಕ್‌ನ ನಂಬರ್ ಪ್ಲೇಟ್ ಅನ್ನು ಮೊದಲೇ ತೆಗೆದುಹಾಕಿ ಈ ಕೃತ್ಯ ಎಸಗಿದ್ದಾರೆ. ನಡುರಸ್ತೆಯಲ್ಲೇ ಹೆಣ್ಣುಮಗಳ ಮೇಲೆ ನಡೆದಿರುವ ಈ ದೌರ್ಜನ್ಯ ಸದ್ಯ ಇಡೀ ನಗರದ ಮಹಿಳೆಯರಲ್ಲಿ ಭಯ ಹುಟ್ಟಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಸದ್ಯ ಚಾಣಾಕ್ಷ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಚಿತ್ರದಲ್ಲಿ ಒಂದಲ್ಲ, ಎರಡಲ್ಲ ಹತ್ತು ಹಾಡುಗಳು; ಅಚ್ಚರಿಯ ವಿಷಯ ರಿವೀಲ್ – Kannada News | Yash Toxic Movie Songs: 10 Tracks, 40 Minute Music, and Runtime Details Revealed

ಯಾವುದೇ ಸಿನಿಮಾ ಹಿಟ್ ಆಗಬೇಕು ಎಂದರೆ ಹಾಡುಗಳು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಸಾಂಗ್ ಹಿಟ್ ಆದರೆ ಸಿನಿಮಾ ಕೂಡ ಅರ್ಧ ಹಿಟ್ ಆದಂತೆ. ಇತ್ತೀಚೆಗೆ ರಿಲೀಸ್ ಆದ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಯಶಸ್ಸು ಕಾಣಲು ಸಿನಿಮಾದ ಹಾಡುಗಳು ಕೂಡ ಪ್ರಮುಖ ಕಾರಣ ಆಗಿದ್ದವು. ಈಗ ‘ಟಾಕ್ಸಿಕ್’ ಸಿನಿಮಾದ (Toxic Movie) ಎರಡು ಹಾಡು ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದಿದೆ. ಹೀಗಿರುವಾಗಲೇ ಈ ಚಿತ್ರದಲ್ಲಿರುವ ಹಾಡುಗಳ ಸಂಖ್ಯೆ ಗಮನ ಸೆಳೆದಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಬರೋಬ್ಬರಿ 10 ಹಾಡುಗಳು ಇರಲಿವೆಯಂತೆ. ಸೋಶಿಯಲ್ ಮೀಡಿಯಾದಲ್ಲಿ ಇದಕ್ಕೆ ಸಂಬಂಧಿಸಿದಂತೆ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋ ಗಮನ ಸೆಳೆದಿದೆ.ಫ್ಯಾನ್ಸ್ ಇದಕ್ಕೆ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಿನಿಮಾ ರಿಲೀಸ್​ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಮತ್ತಷ್ಟು ಹಾಡುಗಳನ್ನು ತಂಡ ಬಿಡುಗಡೆ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಸಿನಿಮಾದ ಅವಧಿ ಮೂರು ಗಂಟೆ ಹದಿನಾಲ್ಕು ನಿಮಿಷ ಇದೆ ಎನ್ನಲಾಗಿದೆ. ಇದರಲ್ಲಿ ಸುಮಾರು 40 ನಿಮಿಷಗಳ ಹಾಡು ಇರಲಿದೆ ಎಂದು ಹೇಳಲಾಗುತ್ತಾ ಇದೆ. ಕೆಲವು ಹಾಡುಗಳು ಬ್ಯಾಕ್​ಗ್ರೌಂಡ್​ನಲ್ಲಿ ಬರುವ ನಿರೀಕ್ಷೆಯೂ ಇದೆ. ಸಿನಿಮಾ ನೋಡಿದ ಬಳಿಕ ಇದು ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ರಾರಾಜಿಸುತ್ತಿದೆ ಟಾಕ್ಸಿಕ್ ಪೋಸ್ಟರ್; ಯಶ್ ಅಭಿಮಾನಿಗಳಿಗೆ ಹಬ್ಬ

‘ಕೆಜಿಎಫ್ 2’ ಯಶಸ್ಸಿನ ನಂತರ ಯಶ್ ಅವರ 19ನೇ ಸಿನಿಮಾವಾಗಿ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಮೂಡಿಬರುತ್ತಿದೆ. ಈ ಚಿತ್ರವನ್ನು ಗೀತು ಮೋಹನ್‌ದಾಸ್ ಅವರು ನಿರ್ದೇಶಿಸುತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿವೆ. ಡಾರ್ಕ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಗೆ ವಿಶಾಲ್ ಮಿಶ್ರಾ ಮೊದಲಾದವರು ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಯಶ್ ಅವರ ಜೊತೆಗೆ ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಸೇರಿದಂತೆ ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ. ಈ ಚಿತ್ರ ಆಗಸ್ಟ್ 26ರಂದು ತೆರೆಗೆ ಬರಲಿದೆ.

ಪ್ರಶ್ನೆ: ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರ ಪಾತ್ರದ ಹೆಸರೇನು?
ಉತ್ತರ: ರಾಯ ಹಾಗೂ ಟಿಕೆಟ್

ಪ್ರಶ್ನೆ: ಟಾಕ್ಸಿಕ್ ರಿಲೀಸ್ ದಿನಾಂಕ ಏನು?
ಉತ್ತರ: 
ಆಗಸ್ಟ್ 26

ಪ್ರಶ್ನೆ: ಟಾಕ್ಸಿಕ್ ಚಿತ್ರದ ನಿರ್ದೇಶಕರು ಯಾರು?
ಉತ್ತರ: 
ಗೀತು ಮೋಹನ್​ ದಾಸ್

Source link

ಉತ್ತರಾಖಂಡದ ಚಮೋಲಿ ಸುರಂಗಕ್ಕೆ ದಿಢೀರ್ ನೀರು-ತ್ಯಾಜ್ಯ ಪ್ರವಾಹ: 7ಕಾರ್ಮಿಕರ ದಾರುಣ ಸಾವು, 14 ಗಾಯಾಳುಗಳು – Kannada News | Uttarakhand hydropower project tunnel accident dead 14 injured in chamoli debris ingress

ಡೆಹ್ರಾಡೂನ್, ಆ.14: ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು ಹಾಗೂ ಕಸ-ಬಂಡೆಗಳ ತ್ಯಾಜ್ಯ (debris) ನುಗ್ಗಿದ ಪರಿಣಾಮ 7 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ ಸೇರಿದ ‘ವಿಷ್ಣುಗಡ-ಪೀಪಲ್‌ಕೋಟಿ’ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಅಗ್ರಸ್ಥಾನದ ಕಾಮಗಾರಿ ನಡೆಯುತ್ತಿದ್ದಾಗ, ಗುರುವಾರ ಸಂಜೆ ಭಾರಿ ಪ್ರಮಾಣದ ನೀರು ಮತ್ತು ಮಣ್ಣು-ಕಲ್ಲುಗಳ ಮಿಶ್ರಣ ಒಳನುಗ್ಗಿದೆ.

ಘಟನೆ ಸಂಭವಿಸಿದಾಗ ಸ್ಥಳದಲ್ಲಿ ಒಟ್ಟು 22 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ನೀರಿನ ರಭಸಕ್ಕೆ ಹಲವರು ಸುರಂಗದ ಹೊರಭಾಗಕ್ಕೆ ತಳ್ಳಲ್ಪಟ್ಟಿದ್ದರೆ, ಹಲವರು ಒಳಭಾಗದಲ್ಲೇ ಸಿಲುಕಿಕೊಂಡಿದ್ದರು. ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF), ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF), ಐಟಿಬಿಪಿ (ITBP), ಸೇನೆ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ 20ಕ್ಕೂ ಹೆಚ್ಚು ಜನರನ್ನು ಹೊರತೆಗೆದಿದ್ದಾರೆ. 14 ಗಾಯಾಳುಗಳನ್ನು ಗೋಪೇಶ್ವರ ಮತ್ತು ಪೀಪಲ್‌ಕೋಟಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನ ವಿಪತ್ತು ನಿರ್ವಹಣಾ ಕೇಂದ್ರದಿಂದ ನೇರ ಪರಿಶೀಲನೆ ನಡೆಸುತ್ತಿದ್ದು, ರಕ್ಷಣಾ ಕಾರ್ಯಕ್ಕೆ ವೇಗ ನೀಡುವಂತೆ ಆದೇಶಿಸಿದ್ದಾರೆ. ದುರಂತದಲ್ಲಿ ಜಾರ್ಖಂಡ್ ಹಾಗೂ ಛತ್ತೀಸ್‌ಗಢ ಮೂಲದ ಕಾರ್ಮಿಕರೂ ಗಾಯಗೊಂಡಿರುವುದರಿಂದ, ಸಿಎಂ ಧಾಮಿ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹಾಗೂ ಛತ್ತೀಸ್‌ಗಢ ಸಿಎಂ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಮತ್ತು ಸಹಾಯದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು

ಕಳೆದ ಕೆಲವು ದಿನಗಳಿಂದ ಚಮೋಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇತ್ತೀಚೆಗೆ ನೀತಿ ಕಣಿವೆ ಪ್ರದೇಶದಲ್ಲಿ ನದಿಯ ರಭಸಕ್ಕೆ ಸೇತುವೆಯೊಂದು ಕೊಚ್ಚಿಹೋಗಿದ್ದ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ – Kannada News | Karnataka Weather Update August 14: Heavy Rain and High Wind Alert in Coastal, Interior Districts

ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ

ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಆಗಸ್ಟ್ 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Monsoon) ಮುನ್ಸೂಚನೆ ನೀಡಲಾಗಿದೆ. ಮಳೆಯ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಿದೆ.

ಉತ್ತರ ಒಳನಾಡು ಕರ್ನಾಟಕ

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಕರ್ನಾಟಕ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಮಳೆಯ ಸಂದರ್ಭದಲ್ಲಿ ಅನಗತ್ಯವಾಗಿ ಪ್ರಯಾಣಿಸುವುದನ್ನು ತಪ್ಪಿಸುವುದು ಹಾಗೂ ಗಾಳಿ-ಮಳೆಯ ವೇಳೆ ಮರಗಳು ಮತ್ತು ವಿದ್ಯುತ್ ಕಂಬಗಳ ಸಮೀಪ ನಿಲ್ಲದಿರುವುದು ಸೂಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ: ಯಾರಿಗೆ ಧನಲಾಭ? – Kannada News | Zodiac Sign Effects: Dr. Basavaraj Guruji Presents Daily Horoscope for 14 08 2026

ಬೆಂಗಳೂರು, ಆ.14: ಪ್ರಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 14, 2026ರ ಶುಕ್ರವಾರದ ದ್ವಾದಶ ರಾಶಿಗಳ ದೈನಂದಿನ ಫಲಾಫಲಗಳ ಬಗ್ಗೆ ಹೇಳಿದ್ದಾರೆ. ಈ ದಿನವು ಶುಕ್ರವಾರವಾಗಿದ್ದು, ಸಾಕ್ಷಾತ್ ಮಹಾಲಕ್ಷ್ಮಿ ಮತ್ತು ಅಷ್ಟ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತವಾದ ಶುಭ ದಿನವಾಗಿದೆ. ಚಂದ್ರ ದರ್ಶನವೂ ಸಹ ಬಹಳ ಶುಭಕರವಾದದ್ದು. ಇಂದು ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯ ಮಖಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೂ ಆರ್ಥಿಕ, ಕೌಟುಂಬಿಕ, ವೃತ್ತಿ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಕೆಲವು ರಾಶಿಗಳಿಗೆ ಆದಾಯದಲ್ಲಿ ಏರಿಕೆ, ಹೊಸ ಅವಕಾಶಗಳು ಮತ್ತು ಸುಧಾರಿತ ಆರೋಗ್ಯದಂತಹ ಶುಭಫಲಗಳು ಕಾದಿವೆ. ಇನ್ನು ಕೆಲವು ರಾಶಿಗಳಿಗೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಅನಗತ್ಯ ಕಲಹಗಳು ಮತ್ತು ಪ್ರಯಾಣದಲ್ಲಿ ತೊಂದರೆಗಳ ಸಾಧ್ಯತೆ ಇರುತ್ತದೆ. ಪ್ರತಿ ರಾಶಿಯವರಿಗೂ ಅದೃಷ್ಟದ ಬಣ್ಣ, ಅದೃಷ್ಟದ ಸಂಖ್ಯೆ ಮತ್ತು ಪಠಿಸಬೇಕಾದ ಮಂತ್ರಗಳನ್ನು ಸೂಚಿಸಲಾಗಿದ್ದು, ಸವಾಲುಗಳನ್ನು ನಿವಾರಿಸಿ ಶುಭ ಫಲಗಳನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿದೆ. ಕುಂಕುಮ, ಹೂವು ಅಥವಾ ದೀಪಕ್ಕೆ ಎಣ್ಣೆಯನ್ನು ದೇವರಿಗೆ ಅರ್ಪಿಸುವ ಮೂಲಕ ಸಂಕಲ್ಪಗಳು ಈಡೇರಬಹುದು ಎಂದು ಗುರೂಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಪ್ಪನ ಅಗ್ರಹಾರದಲ್ಲಿ ಅಕ್ರಮ: ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು – Kannada News | Contraband Discovery in Bengaluru Prison: Second FIR Lodged Following CCB and Jail Authority Operations

ಬೆಂಗಳೂರು, ಆ.14: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌ಗಳು ಮತ್ತು ಪೆನ್ ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 11ರ ರಾತ್ರಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದರು. ಸಿಸಿಬಿ ದಾಳಿಯ ನಂತರ ಜೈಲು ಅಧಿಕಾರಿಗಳು ಕೂಡ ಮತ್ತೊಂದು ದಾಳಿ ನಡೆಸಿದ್ದರು. ಈ ಎರಡು ದಾಳಿಗಳ ವೇಳೆ ಜೈಲಿನ ಆವರಣದಲ್ಲಿ ಎರಡು ಮೊಬೈಲ್ ಫೋನ್‌ಗಳು ಮತ್ತು 32 GB ಸಾಮರ್ಥ್ಯದ ಒಂದು ಪೆನ್ ಡ್ರೈವ್ ಪತ್ತೆಯಾಗಿವೆ. ಜೈಲಿನ ಆವರಣದಲ್ಲಿ ಅಕ್ರಮ ವಸ್ತುಗಳು ಪತ್ತೆಯಾದ ಬಗ್ಗೆ ಕಾರಾಗೃಹದ ಪ್ರಭಾರ ಅಧೀಕ್ಷಕರು ನೀಡಿದ ದೂರಿನ ಅನ್ವಯ ಹೊಸ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಎಫ್‌ಐಆರ್ ದಾಖಲಾಗಿದ್ದು, ಇದು ಎರಡನೇ ಎಫ್‌ಐಆರ್ ಆಗಿದೆ. ಈ ಘಟನೆ ಜೈಲುಗಳಲ್ಲಿನ ಭದ್ರತಾ ಲೋಪಗಳು ಮತ್ತು ಅಕ್ರಮ ಚಟುವಟಿಕೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನಭವಿಷ್ಯ: ಇಂದು ಈ ರಾಶಿಯವರಿಹೆ ಸ್ವಯಂಕೃತ ಅಪರಾಧದಿಂದ ಶಿಕ್ಷೆ.‌‌.. – Kannada News | Daily Horoscope for August 14, 2026: Dakshinayana Greeshma season, Shravana Masa shukla Paksha Friday astrology

ಮೇಷ ರಾಶಿ:

ಮನಸ್ಸಿನ ಚಾಂಚಲ್ಯವನ್ನು ಕಡಿಮೆ‌ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಇಂದು ನೀವು ಕೆಲವು ಸಂದರ್ಭದಲ್ಲಿ ಮೌನ ವಹಿಸುವುದು ಉತ್ತಮ. ಬಳಕೆಯಲ್ಲಿ ಇಲ್ಲದೇ ನಿಮ್ಮ ಸಂಬಂಧಗಳು ಸಡಿಲಾಗಬಹುದು. ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರುವ ಸನ್ನಿವೇಶ ಬರಬಹುದು. ತಾವಾಡಬೇಕಾದ ಮಾತನ್ನು ನಿಮ್ಮಿಂದ ಆಡಿಸುವರು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು.

ವೃಷಭ ರಾಶಿ:

ನೀವು ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆಯನ್ನು ಮಾಡಿಕೊಳ್ಳುವಿರಿ. ಆದರೆ ನಿಮ್ಮ ನಿರ್ಧಾರವು ಅಚಲವಾಗಿರಲಿ. ಎಂದೋ ಆರಂಭವಾದ ಕಾರ್ಯವು ಕುಂಟುತ್ತಾ ಸಾಗವುದು. ವಿರುದ್ಧ ಪ್ರಯತ್ನದಿಂದ ನಿಮಗೆ ಶ್ರಮವೇ ಅಧಿಕ. ಆದರೂ ಅದರಲ್ಲಿಯೇ ಆಸಕ್ತಿ ಹೆಚ್ಚು. ಜಾಡ್ಯವನ್ನು ದೂರ ಮಾಡಿಕೊಳ್ಳುವತ್ತ ಗಮನವಿರಲಿದೆ. ಹೆಚ್ಚು ಸಮಯವನ್ನು ಕುಟುಂಬದೊಂದಿಗೆ ಕಳೆಯುವಿರಿ.

ಮಿಥುನ ರಾಶಿ:

ಗುರುವಿನ ಅಥವಾ ಗುರುಸದೃಶರ ಸನ್ನಿಧಿಯನ್ನು ನೀವು ಇಂದು ಬಯಸುವಿರಿ. ದೇವರಿಗೆ ಸಂಬಂಧಿಸಿದ ವಿಚಾರದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಬಹುದು. ಕೃಷಿಕರೆ ಆತಂಕ ಬರುವ ಸಂಭವ ಇದೆ. ಸ್ನೇಹಿತರು ಜಗಳವಾಡಿ ನಿಮ್ಮನ್ನು ಬಿಟ್ಟುಹೋಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಲು ಕಷ್ಟಪಡುವರು. ಮನೆಯಲ್ಲಿ ಸಂತೋಷಕೂಟವು ನಿರ್ಮಾಣವಾಗುವುದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ.

ಕರ್ಕಾಟಕ ರಾಶಿ:

ಬೇರೆಯವರಿಗೆ ಅಪಕೀರ್ತಿ ತರಲು ಹೋಗಿ ನಿಮ್ಮ ಯಶಸ್ಸನ್ನೇ ಹಾಳುಮಾಡಿಕೊಳ್ಳಬೇಕಾಗುವುದು. ಇಂದ್ರಿಯ ಸಂಯಮವನ್ನು ಸಾಧಿಸುವುದು ಕಷ್ಟವಾದೀತು. ಒತ್ತಾಯಕ್ಕೆ ಮಣಿದು ನಿಮ್ಮ ಪೂರ್ವಯೋಜನೆಯನ್ನು ಬದಲಿಸುವಿರಿ. ಏನನ್ನೋ ಸಾಧಿಸಿದವರಂತೆ ಬೀಗುವುದು ಬೇಡ. ದೊಡ್ಡವರ ವಿಚಾರದಲ್ಲಿ ಮೂಗುತೂರಿಸುವಿರಿ. ಆತ್ಮವಿಶ್ವಾಸದ ಕೊರತೆ ಎದ್ದು ಕಾಣುವುದು. ಆಕಸ್ಮಿಕ ವಿಚಾರಕ್ಕೆ ಗಲಿಬಿಲಿಯಾಗುವಿರಿ.

ಸಿಂಹ ರಾಶಿ:

ಮಕ್ಕಳಿಂದ ನಿಮಗೆ ಶುಭವಾರ್ತಯನ್ನು ನಿರೀಕ್ಷಿಸಿ. ಸರ್ಕಾರದಿಂದ ಆಗಬೇಕಾದ ಕೆಲಸವನ್ನು ನೀವು ಮಾಡಿಸಿಕೊಳ್ಳಲು ನೀವು ಶ್ರಮಪಡಬೇಕಾದೀತು. ಪ್ರಭಾವಿ ವ್ಯಕ್ತಿಗಳ ಸಂಪರ್ಕವಾಗಲಿದೆ. ವ್ಯಕ್ತಿಗತ ಕೋಪವನ್ನು ಬಿಟ್ಟು ವಿಷಯಕ್ಕೆ ಬೇಕಾದ ಮಹತ್ತ್ವವನ್ನು ನೀಡುವಿರಿ. ನಿಮ್ಮದಲ್ಲದ ವಸ್ತುವನ್ನು ಬಯಸಿ ಪಡೆದುಕೊಳ್ಳಲು ಕಷ್ಟಪಡುವಿರಿ. ಅನ್ನಿಸಿದ್ದನ್ನು ಹೇಳುವ ರೀತಿಯಲ್ಲಿ ಹೇಳಿ. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು.

ಕನ್ಯಾ ರಾಶಿ:

ಅವಮಾನದವನ್ನು ನೀವು ಅನುಭವಿಸುವ ಪ್ರಸಂಗವೂ ಬರಬಹುದು. ಪ್ರತ್ಯೇಕವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಬಯಸುವಿರಿ. ನಿಮ್ಮ ಮಾತುಗಳು ನಿಮಗೆ ತಿರುಗುಬಾಣವಾಗಿ ಬರಬಹುದು.‌ ಸಂಗಾತಿಯು ಉದ್ಯಮದಲ್ಲಿ ಪ್ರವೇಶ ಮಾಡಬಹುದು. ಆಪತ್ಕಾಲದ ಸಂಪತ್ತನ್ನು ಇಂದು ಬಳಸಿಕೊಳ್ಳುವಿರಿ. ನಷ್ಟವಾದುದರ ಅನುಭವವು ನಿಮಗಾಗುವುದು. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಕಷ್ಟದ ಫಲವು ನಿಮಗೆ ಇಂದು ಗೊತ್ತಾಗಲಿದೆ.

ತುಲಾ ರಾಶಿ:

ನಿಮ್ಮ ಚಂಚಲವಾದ ಮನಸ್ಸನ್ನು ನಿಗ್ರಹಿಸಲು ನಿಮಗೆ ಕಷ್ಟವಾದೀತು. ಕೃಷಿಕರಿಗೆ ಹೆಚ್ಚಿನ ಆದಾಯವು ಬರಬಹುದು. ಭೂಮಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕಲಾವಿದರಿಗೆ ಪ್ರೋತ್ಸಾಹ ಸಿಗದೇ ಬೇಸರ ಮಾಡಿಕೊಳ್ಳಬೇಕಾಗಬಹುದು. ಸುಪ್ತಪ್ರಜ್ಞೆ ನಿಮ್ಮನ್ನು ಒಳಿತಿನ ಕಡೆಗೆ ಒಯ್ಯುವುದು. ಏಕಾಂತದಲ್ಲಿ ಸಮಯವನ್ನು ಕಳೆಯುವಿರಿ. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಆಪ್ತರ ಭೇಟಿಯು ಬಹಳ ದಿನಗಳ ಅನಂತರ ಆಗಬಹುದು.

ವೃಶ್ಚಿಕ ರಾಶಿ:

ನೀವು ಎಲ್ಲರ ವಿರೋಧದ ನಡುವೆಯೂ ನೀವು ಮಾಡಬೇಕಾದುದನ್ನು ಮಾಡುವಿರಿ. ಹೊಸ ಪ್ರೇಮಾಂಕುರವು ಹುಟ್ಟಿಕೊಳ್ಳಲಿದೆ. ಮನ ಬಂದಂತೆ ಮಾತನಾಡುವುದಕ್ಕೆ ಕಡಿವಾಣ ಬೀಳಲಿದೆ. ಇಂದಿನ ಕೆಲಸವನ್ನು ಬಹಳ ಶ್ರಮದಿಂದ ಮಾಡುವಿರಿ. ಸಹಿಸಿಕೊಳ್ಳಲಾಗದ ನೋವನ್ನು ನೀವು ಅನುಭವಿಸುವಿರಿ. ತಂದೆಯ ಮಾತನ್ನು ಗೌರವಿಸುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಭೂ ವ್ಯವಹಾರದಲ್ಲಿ ಯಶಸ್ಸು ಸಿಗುವುದು.

ಧನು ರಾಶಿ:

ನಿರುದ್ಯೋಗವು ನಿಮ್ಮನ್ನು ಉದ್ವೇಗಕ್ಕೆ ತಳ್ಳಬಹುದು. ಇಂದು ಸಭೆ ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಅನ್ಯರ ಮೂಲಕ ಇಂದು ಮಾಡಿಸಿದ ಎಲ್ಲ ಕೆಲಸಗಳು ಹಾಳಾಗಬಹುದು. ಪರರ ಸುಖದಿಂದ ಅಸೂಯೆಯಾಗಲಿದೆ. ಸ್ತ್ರೀಯರು ನೋವನ್ನು ಅನುಭವಿಸಬೇಕಾದೀತು. ಸಹೋದ್ಯೋಗಿಗಳು ನಿಮ್ಮ ಸಹಾಯಕ್ಕೆಂದು ಬರಬಹುದು. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ವಿದ್ಯಾಭ್ಯಾಸದಲ್ಲಾದ ಪ್ರಗತಿಯು ಖುಷಿ ಕೊಡುವುದು.

ಮಕರ ರಾಶಿ:

ಉದ್ಯಮದಲ್ಲಿ ಇರುವ ದೌರ್ಬಲ್ಯವನ್ನು ಸರಿ ಮಾಡಿಕೊಳ್ಳಿ. ಅದಕ್ಕಾಗಿ ದೇಹವನ್ನು ದೃಢವಾಗಿಸಿಕೊಳ್ಳುವ ಕುರಿತು ಪ್ರಯತ್ನಿಸುವಿರಿ. ಬೇಡದ ಕಡೆ ಹಣವನ್ನು ವ್ಯಯಿಸುವುದು ಮನೆಯವರಿಗೆ ಇಷ್ಟವಾಗದು. ದಿನದಿಂದ ದಿನಕ್ಕೆ ಸಾಮರ್ಥ್ಯ ಬೆಳೆಯುವತ್ತ ಗಮನವಿರಲಿ. ಉಳಿತಾಯ ಮಾಡದೇ ಖರ್ಚು ಮಾಡಿದ್ದಕ್ಕೆ ಇಂದು ಪಶ್ಚಾತ್ತಾಪ ಪಡಬೇಕಾದೀತು. ವಿದ್ಯಾರ್ಥಿಗಳಿಂದ ಸಮ್ಮಾನ ದೊರೆಯುವುದು. ಏನನ್ನಾದರೂ ಮಾತನಾಡಿ ಸಿಕ್ಕಿಬೀಳುವಿರಿ.

ಕುಂಭ ರಾಶಿ:

ನಿಮ್ಮ ಶತ್ರುಗಳು ರಾಜಿಯಾಗಲು ಇಂದು ಬರಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಕಾರ್ಯಗಳು ಮುನ್ನಡೆದರೆ ಒಳ್ಳೆಯದು. ದೂರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ವೃತ್ತಿಯು ಸಾಕೆನಿಸಬಹುದು. ಅಸಧುನಿಕ ಉಪಕರಣಗಳ ಬಳಕೆ ಹೆಚ್ಚಾಗುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ನೀವು ಇಂದು ಉದ್ಯಮಿಗಳ ಜೊತೆ ಮುಖಾಖಿಯಾಗಲಿದ್ದೀರಿ. ಬಂಧುಗಳ ವಿಚಾರಕ್ಕೆ ಆರ್ಥಿಕನಷ್ಟವಾಗುವುದು. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು.

ಮೀನ ರಾಶಿ:

ನೀವು ದಿನದ ಆರಂಭದಿಂದ ಕೊನೆಯ ತನಕ ಉತ್ಸಾಹವಿರುವುದು. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ನೀವು ಬುದ್ಧಿವಂತರೆಂದು ತಿಳಿದುಕೊಂಡಿದ್ದರೆ ಅದು ಸುಳ್ಳಾಗಬಹುದು. ಉದ್ಯಮವನ್ನು ವಿಸ್ತರಿಸುವ ಬಗ್ಗೆ ಸ್ಥಳ ಪರಿಶೀಲನೆ ಮಾಡುವಿರಿ. ಇನ್ನೊಬ್ಬರ ಹಿತಚಿಂತನೆಯಲ್ಲಿ ನೀವು ಭಾಗಿಯಾಗುವಿರಿ. ಕಳೆದ ಸಮಯದ ಮೆಲುಕನ್ನು ನೀವು ಹಾಕುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಶ್ರಾವಣ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಪರಿಘ, ಕರಣ : ವಣಿಜ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:50 – 12:24, ಯಮಗಂಡ ಕಾಲ 15:32 – 17:06, ಗುಳಿಕ ಕಾಲ 07:42 – 09:16

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:03 am, Fri, 14 August 26

Source link

IND vs SL: ಟೆಸ್ಟ್ ಸರಣಿಯಲ್ಲಿ ಶುಭ್​ಮನ್ ಗಿಲ್ ನಿರ್ಮಿಸಲಿರುವ ದಾಖಲೆಗಳಿವು – Kannada News | Shubman Gill’s Historic Chance: First Indian Captain to Score 1000 WTC Runs and 3000 Overall

ಗಿಲ್ ಪ್ರಸ್ತುತ ಡಬ್ಲ್ಯೂಟಿಸಿಯಲ್ಲಿ (2025-2027) 950 ರನ್ ಗಳಿಸಿದ್ದಾರೆ. ಅವರು ಇನ್ನೂ 40 ರನ್ ಗಳಿಸಿದರೆ, ಒಂದೇ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ನಾಯಕನಾಗಿ 1,000 ರನ್ ಗಳಿಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಕೊಹ್ಲಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, 2019-2021ರ ಮೊದಲ ಸೈಕಲ್‌ನಲ್ಲಿ ಕೊಹ್ಲಿ 934 ರನ್ ಕಲೆಹಾಕಿದ್ದರು. ಇದೀಗ ಗಿಲ್​ಗೆ 1000 ರನ್​ಗಳ ಗಡಿ ದಾಟುವ ಅವಕಾಶವಿದೆ(PC-PTI).

Source link

Exit mobile version