ಸುಡು ಬಿಸಿಲಿಗೆ ಬಸವಳಿದ ಮೂಕ ಜೀವಿಗಳಿಗೆ ಈ ರೀತಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ – Kannada News | How can we care stray animals and birds during the summer?

ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಆರೈಕೆImage Credit source: Getty Images

ಮನುಷ್ಯರಾದ ನಾವು ಏನೋ ಸರ್ಕಸ್‌ ಮಾಡಿ ಈಗಿರುವ ಸುಡು ಬಿಸಿಲ ತಾಪದಿಂದ ರಕ್ಷಣೆ ಪಡೆದುಕೊಳ್ಳುತ್ತಿದ್ದೇವೆ. ದಾಹ ನೀಗಿಸಿಕೊಳ್ಳಲು ನೀರು, ಎಳನೀರು ಅಂತೆಲ್ಲಾ ಬಗೆ ಬಗೆಯ ಪಾನೀಯಗಳನ್ನು ಸೇವನೆ ಮಾಡುತ್ತೇವೆ. ಆದರೆ ಬೇಸಿಗೆಯ ತಾಪಕ್ಕೆ (Summer heat) ಬಸವಳಿದ ಮೂಕ ಪ್ರಾಣಿ ಪಕ್ಷಿಗಳು ನಮಗೆ ನೀರು, ಆಹಾರ ಕೊಡಿ, ಸುಡು ಬಿಸಿಲಿಗೆ ಬಸವಳಿದಿದ್ದೇವೆ ರಕ್ಷಣೆ ಕೊಡಿ ಎಂದು ಹೇಗೆ ಕೇಳಿಯಾವು? ಅದರಲ್ಲೂ ಹಲವು ಕಡೆ ನೀರಿನ ಮೂಲಗಳೇ ಬರಿದಾಗಿದ್ದು, ನೀರು ಆಹಾರ ಸಿಗದೆ ಪ್ರಾಣಿ-ಪಕ್ಷಿ ಸಂಕುಲವೇ ತತ್ತರಿಸಿ ಹೋಗಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎಲ್ಲಾ ಬಲ್ಲವರಾದ ನಾವು ಮೂಕ ಜೀವಿಗಳ ರಕ್ಷಣೆಗಾಗಿ ಸಣ್ಣ ಅಳಿಲು ಸೇವೆಯನ್ನು ಮಾಡಬಹುದು. ಹೀಗೆ ಈ ಬೇಸಿಗೆಯಲ್ಲಿ ಮೂಕ ಪ್ರಾಣಿ ಪಕ್ಷಿಗಳಿಗೆ ಯಾವ ರೀತಿ ಎಲ್ಲಾ ನಿಮ್ಮ ಕೈಲಾದಷ್ಟು ಸಹಾಯ ಮಾಡಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೇಸಿಗೆಯಲ್ಲಿ ಬಸವಳಿದ ಪ್ರಾಣಿ-ಪಕ್ಷಿಗಳಿಗೆ ನಾವು ಹೇಗೆಲ್ಲಾ ಸಹಾಯ ಮಾಡಬಹುದು?

ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ: ಈ ಸುಡು ಬೇಸಿಗೆಯಲ್ಲಿ ಬಾಯಾರಿಕೆ ತೀರಾ ಹೆಚ್ಚು. ಹಾಗಾಗಿ ಮನೆಯ ಕಾಂಪೌಂಡ್‌ ಹೊರಗಡೆ, ಕಾಂಪೌಂಡ್‌ ಮೇಲೆ ಸಣ್ಣ ಬಕೆಟ್‌ಗಳಲ್ಲಿ ಪ್ರಾಣಿ ಪಕ್ಷಿಗಳಿಗಾಗಿ ನೀರಿಡಿ.  ಹೀಗೆ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೂ ಕುಡಿಯಲು ಸಾಕಷ್ಟು ಪ್ರಮಾಣದ ನೀರು ಸಿಗುತ್ತದೆ. ಇದರಿಂದ ಸುಡುವ ಶಾಖದಲ್ಲೂ ಪ್ರಾಣಿಗಳಿಗೆ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

ಪ್ರಾಣಿಗಳಿಗೆ ನೆರಳು ಒದಗಿಸಿ: ಈ ಸುಡು ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳು ನೆರಳನ್ನು ಹರಸುತ್ತಾ ಅಲೆದಾಡುತ್ತಿರುತ್ತವೆ. ಹೀಗಿರುವಾಗ ನಿಮ್ಮ ಮನೆಯ ಹೊರಗಡೆ ಪುಟ್ಟ ಜಾಗದಲ್ಲಿ ಬಟ್ಟೆ, ಕಾರ್ಡ್‌ಬೋರ್ಡ್ ಅಥವಾ ಛತ್ರಿಗಳನ್ನು ಬಳಸಿ ನೆರಳಿನ, ತಂಪಾದ ಜಾಗವನ್ನು ಸೃಷ್ಟಿಸಿ, ಇದು ಪ್ರಾಣಿಗಳಿಗೆ ವಿಶ್ರಾಂತಿ ಪಡೆಯಲು ಸಹಾಯವಾಗುತ್ತದೆ. ಮುಖ್ಯವಾಗಿ ನೆರಳಿರುವ ಜಾಗದಲ್ಲಿ ವಿಶ್ರಾಂತಿ ಪಡೆಯುವ ಬೀಡಾಡಿ ಪ್ರಾಣಿಗಳನ್ನು ಕಲ್ಲು ಹೊಡೆದು ಓಡಿಸುವ ತಪ್ಪನ್ನೂ ಮಾಡದಿರಿ.

ಪ್ರಾಣಿಗಳಿಗೆ ಆಹಾರ ನೀಡಿ: ಬೆಳಗಿನ ಜಾವ ಅಥವಾ ಸಂಜೆ ಸಮಯದಲ್ಲಿ ಬೀಡಾಡಿ ಪ್ರಾಣಿಗಳಿಗೆ ಆಹಾರವನ್ನು ನೀಡಿ. ಈ ಸಮಯದಲ್ಲಿ ಆಹಾರ ನೀಡುವುದರಿಂದ ಮಧ್ಯಾಹ್ನದ ತೀವ್ರ ಶಾಖವನ್ನು ತಪ್ಪಿಸಲು ಅವುಗಳಿಗೆ ಸಹಾಯವಾಗುತ್ತದೆ. ಮುಖ್ಯವಾಗಿ ನೆರಳಿನ ಪ್ರದೇಶದಲ್ಲಿ ಅವುಗಳಿಗೆ ಆಹಾರವನ್ನು ಇಟ್ಟುಬಿಡಿ.

ಪಕ್ಷಿಗಳಿಗೆ ನೀರು ಒದಗಿಸಿ: ಬೇಸಿಗೆಯ ಸಮಯದಲ್ಲಿ ಗುಬ್ಬಚ್ಚಿ ಮುಂತಾದ ಸಣ್ಣ ಪಕ್ಷಿಗಳಿಗೆ ಕುಡಿಯಲು ನೀರನ್ನು ಒದಸಿ, ಇದಕ್ಕಾಗಿ ಛಾವಣಿಯ ಮೇಲೆ ನೀರಿನಿಂದ ತುಂಬಿದ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಹಾಗೂ ಕಾಳುಗಳನ್ನು ಇಡಬಹುದು.

ಇದನ್ನೂ ಓದಿ: ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ

ದುರ್ಬಲ ಅಥವಾ ಗಾಯಗೊಂಡ ಪ್ರಾಣಿಗಳಿಗೆ ಸಹಾಯ ಮಾಡಿ: ಶಾಖದ ಅಲೆ ತೀವ್ರವಿರುವ ಸಮಯದಲ್ಲಿ ಯಾವುದಾದರೂ  ದುರ್ಬಲ ಅಥವಾ ಗಾಯಗೊಂಡ ಪ್ರಾಣಿಯನ್ನು ನೀವು ನೋಡಿದರೆ, ಅದಕ್ಕೆ ನೀರುಣಿಸಿ ಮತ್ತು ಕೈಲಾದ ಸಹಾಯವನ್ನು ಮಾಡಿ.

ನೀರುಣಿಸಲು ಮಣ್ಣಿನ ಪಾತ್ರೆಗಳನ್ನೇ ಬಳಸಿ: ಮಣ್ಣಿನ ಮಡಕೆಗಳು ನೀರನ್ನು ದೀರ್ಘಕಾಲ ತಂಪಾಗಿರಿಸುತ್ತವೆ, ಮಣ್ಣಿನ ಪಾತ್ರೆಗಳ ನೀರು ಸೇವನೆ ಮಾಡುವುದರಿಂದ ಪ್ರಾಣಿ ಪಕ್ಷಿಗಳ ದೇಹವೂ ತಂಪಾಗಿರುತ್ತವೆ.

ಇತರರನ್ನೂ ಪ್ರೋತ್ಸಾಹಿಸಿ: ನೆರೆಹೊರೆಯವರು ಮತ್ತು ಸ್ನೇಹಿತರಿಗೂ ಪ್ರಾಣಿ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಒದಗಿಸುವಂತೆ ಪ್ರೋತ್ಸಾಹಿಸುವುದರಿಂದ  ಬೀಡಾಡಿ ಪ್ರಾಣಿಗಳಿಗೆ ಸುರಕ್ಷಿತ ತಾಣಗಳನ್ನು ಸೃಷ್ಟಿಸಲು ಸಹಾಯವಾಗುತ್ತದೆ. ಅಲ್ಲದೆ ನೀವು ನಿಮ್ಮ ಮನೆ ಸುತ್ತಲೂ ಮರಗಿಡಗಳನ್ನೂ ನೆಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’ – Kannada News | Chargesheet 03 08 Kannada movie based on Eye Witness book by SK Umesh

ನಿಜ ಜೀವನದಲ್ಲಿ ನಡೆದ ಕ್ರೈಂ ಘಟನೆಗಳನ್ನು ಆಧರಿಸಿದ ‘ಚಾರ್ಜ್‌ಶೀಟ್ 03-08’ (Chargesheet 03-08) ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಸಿನಿಮಾದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಬೆಚ್ಚಿಬೀಳಿಸುವ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ (Kannada Cinema) ನಿರ್ಮಾಣ ಆಗುತ್ತಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ (SK Umesh) ಬರೆದ ‘ಐ ವಿಟ್ನೆಸ್’ ಕೃತಿ ಆಧರಿಸಿ ಈ ಸಿನಿಮಾವನ್ನು ಮಾಡಲಾಗುತ್ತಿದೆ.

2003ರಲ್ಲಿ ಬೆಂಗಳೂರಿನಲ್ಲಿ ನಡೆದ ನಿಜ ಘಟನೆಯ ಆಧಾರದ ಮೇಲೆ ರೂಪುಗೊಂಡಿರುವ ಸಿನಿಮಾ ಇದು. ನೈಜ ಘಟನೆಗೆ ಸಿನಿಮೀಯ ಸ್ಪರ್ಶ ನೀಡಲಾಗುತ್ತಿದೆ. ಉಮೇಶ್ ಅವರ ನೈಜ ಅನುಭವಗಳನ್ನು ತೆರೆಯ ಮೇಲೆ ತೋರಿಸಲಾಗುತ್ತದೆ. ಪೋಸ್ಟರ್‌ನಲ್ಲಿ ಮೂಡಿಬಂದಿರುವ ಗಂಭೀರ ವಾತಾವರಣ, ರಹಸ್ಯಮಯ ದೃಶ್ಯ ವಿನ್ಯಾಸ ಹಾಗೂ ತನಿಖೆಯ ತೀವ್ರತೆಯನ್ನು ಸೂಚಿಸುವ ದೃಶ್ಯಗಳು ಕೌತುಕ ಮೂಡಿಸಿವೆ.

ಚಿತ್ರತಂಡ ಹೇಳುವ ಪ್ರಕಾರ, ‘ಚಾರ್ಜ್‌ಶೀಟ್ 03-08’ ಕೇವಲ ಒಂದು ಸಿನಿಮಾ ಅಲ್ಲ. ಇದು ನ್ಯಾಯಕ್ಕಾಗಿ ನಡೆದ ಹೋರಾಟದ ದಾಖಲೆ. ಸಮಾಜದ ಕತ್ತಲೆ ಮುಖವನ್ನೂ, ಸತ್ಯದ ದಾರಿಯಲ್ಲಿನ ಸಂಕಷ್ಟಗಳನ್ನೂ ಬಿಂಬಿಸುವ ಈ ಸಿನಿಮಾ ಪ್ರೇಕ್ಷಕರ ಮನಸ್ಸನ್ನು ನಡುಗಿಸುವ ಶಕ್ತಿಯನ್ನು ಹೊಂದಿದೆ ಎಂದು ಚಿತ್ರತಂಡ ಹೇಳಿದೆ. ಸಿನಿಮಾದ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಲಕ್ಷ್ಮಣ್ ಮತ್ತು ದಿನೇಶ್ ಅವರು ನಿರ್ಮಾಣ ಮಾಡಿರುವ ‘ಚಾರ್ಜ್‌ಶೀಟ್ 03-08’ ಸಿನಿಮಾದಲ್ಲಿ ಸುಂದರ್ ರಾಜ್, ಹರ್ಷಾರ್ಜುನ್, ಸತ್ಯಶ್ರೀ, ಅಮರ್, ಚೇತನಾ ಖೋಟ್, ಡಾ. ಪ್ರಮೋದ್ ಹಿರೇಮಠ್, ವೆಂಕಟ್ ಭರದ್ವಾಜ್, ಡಾ. ಸುಧಾಕರ್ ಶೆಟ್ಟಿ, ರೂಪೇಶ್ ಮುಂತಾದವರು ನಟಿಸಿದ್ದಾರೆ. ಎಸ್.ಕೆ. ಉಮೇಶ್ ಬರೆದ ಕಥೆಗೆ ವೆಂಕಟ್ ಭಾರದ್ವಾಜ್ ಅವರು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ನಟಿಯ ಪರ್ಸ್​​ನಿಂದ ಮಾಯವಾಯ್ತು 50 ಸಾವಿರ; ಕಳ್ಳ ಯಾರು?

‘ಚಾರ್ಜ್‌ಶೀಟ್ 03-08’ ಸಿನಿಮಾಗೆ ಸಮೀರ್ ಕುಲಕರ್ಣಿ ಅವರು ಸಂಗೀತ ನೀಡಿದ್ದಾರೆ. ಶಮೀಕ್ ವಿ. ಭಾರದ್ವಾಜ್ ಅವರು ಸಂಕಲನ ಮಾಡಿದ್ದಾರೆ. ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ‘ಅರ್ಜುನ್ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ.

ಇಂದು (ಏಪ್ರಿಲ್ 21) ಬೆಂಗಳೂರಿನಲ್ಲಿ ಮಾತನಾಡಿದ ರಾಜಣ್ಣ, ನನ್ನ ಅನುಭವದ ಪ್ರಕಾರ ನಾನು ಸಿಎಂ ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಸಿಎಂ ಇಷ್ಟೊಂದು ಅಸಹಾಯಕರಾಗಿದ್ದಾರೆ ಅನ್ನೋದನ್ನ ನೋಡಿದ್ರೆ ಅವರ ಮೇಲೆ ಯಾರಾದ್ರು ಮಾಟ ಮಂತ್ರ ಮಾಡಿದ್ದಾರೋ ಎನೋ ಅನ್ನಿಸುತ್ತಿದೆ. ಆ ಬಗ್ಗೆ ನಾನು ವಿಚಾರ ಮಾಡುತ್ತಿದ್ದೇನೆ. ಅದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ. ಮನುಷ್ಯರ ಮೇಲೆ ಪರಿಣಾಮ ಆಗಬೇಕು ಅಂದ್ರೆ ಅವರು ಆಸ್ತಿಕರಾಗಿರಬೇಕು ಅಂತ ಇಲ್ಲ. ಸಿಎಂ ಹಾಗೂ ನಾನು ಮಾಟ ಮಂತ್ರದಲ್ಲಿ ನಂಬಿಕೆ ಇಲ್ಲದವರು. ನಾನು ಸಿಎಂ ಅವರು ಅಸಹಾಯಕರು ಅಂತಾ ಹೇಳಿದ ಮೇಲೆ ಅವರು ಕರೆದು ಮಾತನಾಡಿದ್ದಾರೆ. ಗಟ್ಟಿಯಾಗಿ ನಿಲ್ಲಿ ಅಂತ ಹೇಳಿಸಿಕೊಳ್ಳುವಷ್ಟು ಅಸಹಾಯಕತೆ ಸಿಎಂಗೆ ಬಂದಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ? – Kannada News | India’s New Test Era: Maiden Call ups for Domestic Stars

ಐಪಿಎಲ್ 2026ರ ಬೆನ್ನಲ್ಲೇ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ (BCCI) ಚಿಂತಿಸುತ್ತಿದೆ. ಅದರಂತೆ ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ನಾಲ್ವರು ಹೊಸ ಮುಖಗಳು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆ ಐವರು ಆಟಗಾರರ ಹೆಸರು ಈ ಕೆಳಗಿನಂತಿದೆ…

  • ಹರ್ಷ್ ದುಬೆ (ವಿದರ್ಭ)
  • ಮಾನವ್ ಸುತಾರ್ (ರಾಜಸ್ಥಾನ್)
  • ಆಖಿಬ್ ನಬಿ (ಜಮ್ಮು-ಕಾಶ್ಮೀರ)
  • ಗುರ್ನೂರ್ ಬ್ರಾರ್ (ಪಂಜಾಬ್)

ಪಡಿಕ್ಕಲ್ ಕಂಬ್ಯಾಕ್:

ಕರ್ನಾಟಕದ ಪ್ರತಿಭಾನ್ವಿತ ಬ್ಯಾಟರ್ ದೇವದತ್ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. 2024ರ ಮಾರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಪಡಿಕ್ಕಲ್,  ತಮ್ಮ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ 65 ರನ್ ಗಳಿಸಿದ್ದರು. ಅಲ್ಲದೆ ಈವರೆಗೆ 2 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು 3 ಇನಿಂಗ್ಸ್‌ಗಳಿಂದ ಅವರು ಒಟ್ಟು 90 ರನ್ ಗಳಿಸಿದ್ದಾರೆ. ಇದೀಗ ಎರಡು ವರ್ಷಗಳ ಬಳಿಕ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

ಸ್ಟಾರ್ ಆಟಗಾರರಿಗೆ ವಿಶ್ರಾಂತಿ:

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಪ್ಲೇಆಫ್​ನಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಭಾರತ ಟೆಸ್ಟ್ ತಂಡದ ನಾಯಕ ಶುಭ್​​ಮನ್ ಗಿಲ್, ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಸೇರಿದಂತೆ ಟೆಸ್ಟ್ ತಂಡದ ಸ್ಟಾರ್ ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ವಿಶ್ರಾಂತಿ ನೀಡಲು ಕಾರಣವೇನು?

ಐಪಿಎಲ್ ಫೈನಲ್ ಮುಗಿದ ಕೇವಲ 6 ದಿನಗಳಲ್ಲಿ ಈ ಟೆಸ್ಟ್ ಆರಂಭವಾಗುತ್ತಿರುವುದರಿಂದ ಆಟಗಾರರ ಕೆಲಸದ ಹೊರೆ ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಈ ಪಂದ್ಯದ ಫಲಿತಾಂಶವು WTC ಪಾಯಿಂಟ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.

ಅಫ್ಘಾನಿಸ್ತಾನ್ ಸರಣಿ ಯಾವಾಗ?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಸರಣಿಯು ಜೂನ್ 6 ರಿಂದ ಶುರುವಾಗಲಿದೆ. ನ್ಯೂ ಚಂಡೀಗಢ್​ನ ಮಹಾರಾಜ ಯಾದವಿಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದ ಬಳಿಕ ಉಭಯ ತಂಡಗಳ ನಡುವೆ 3 ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದೆ.

ಇದನ್ನೂ ಓದಿ: ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

  • ಜೂನ್ 6 – 10: ಏಕೈಕ ಟೆಸ್ಟ್ (ಮುಲ್ಲನ್‌ಪುರ)
  • ಜೂನ್ 14: ಮೊದಲ ಏಕದಿನ ಪಂದ್ಯ (ಧರ್ಮಶಾಲಾ)
  • ಜೂನ್ 17: ಎರಡನೇ ಏಕದಿನ ಪಂದ್ಯ (ಲಕ್ನೋ)
  • ಜೂನ್ 20: ಮೂರನೇ ಏಕದಿನ ಪಂದ್ಯ (ಚೆನ್ನೈ)

Source link

ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ – Kannada News | Bengaluru IT Employee’s ₹27L Card Fraud: Blackmail, Suicide Threats & Obscenities

ಐಟಿ ಉದ್ಯೋಗಿಯ ಸಾಂದರ್ಭಿಕ ಚಿತ್ರImage Credit source: AI/Mediaforge/TV9

ಬೆಂಗಳೂರು, ಏಪ್ರಿಲ್ 21: ಐಟಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ (Corporate credit card) ಅನ್ನು ದುರ್ಬಳಕೆ ಮಾಡಿ ಸಿಕ್ಕಿಬಿದ್ದರೂ ಹಿರಿಯ ಅಧಿಕಾರಿಗಳಿಗೆ ಆತ್ಮಹತ್ಯೆಯ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಎನ್​ಡಿಟಿವಿ ವರದಿಯೊಂದರ ಪ್ರಕಾರ ಆರೋಪಿ ಐಟಿ ಉದ್ಯೋಗಿಯು ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್​ನಿಂದ 27 ಲಕ್ಷ ರೂ ದುರ್ಬಳಕೆ ಮಾಡಿಕೊಂಡಿದ್ದಾರೆ. ಅದನ್ನು ವಾಪಸ್ ಕೇಳಿದ ಕಾರಣಕ್ಕೆ ಹಿರಿಯ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ವರ್ತೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿತ ಉದ್ಯೋಗಿಗೆ ಕೆಲಸಕ್ಕೆ ಸಂಬಧಿಸಿದ ವೆಚ್ಚಗಳನ್ನು ಭರಿಸಲು 2 ಲಕ್ಷ ರೂ ವೆಚ್ಚ ಮಿತಿ ಇರುವ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ನೀಡಲಾಗಿರುತ್ತದೆ. 2023ರ ಅಕ್ಟೋಬರ್​ನಿಂದ 2024ರ ಜನವರಿವರೆಗೆ ನಾಲ್ಕು ತಿಂಗಳಲ್ಲಿ ಯಾವುದೇ ಅನುಮೋದನೆ ಇಲ್ಲದೆ ಈ ಕಾರ್ಡ್​ನಿಂದ 27,01,139 ರೂ ಟ್ರಾನ್ಸಾಕ್ಷನ್ ಆಗಿರುವುದು ಆಂತರಿಕ ಹಣಕಾಸು ಸಮೀಕ್ಷೆ ವೇಳೆ ಮ್ಯಾನೇಜ್ಮೆಂಟ್ ಗಮನಕ್ಕೆ ಬಂದಿದೆ.

ಇದನ್ನೂ ಓದಿ: ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ

ಇದಾದ ಬಳಿಕ 2024ರ ಜನವರಿ 12ರಂದು ಈ ಅನಧಿಕೃತ ವಹಿವಾಟುಗಳ ಕುರಿತು ವಿವರಣೆ ಕೇಳಿ ಆ ಉದ್ಯೋಗಿಗೆ ಇಮೇಲ್ ಕಳುಹಿಸಲಾಗುತ್ತದೆ. ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾಗಿ ಆತ ಒಪ್ಪಿಕೊಳ್ಳುತ್ತಾನೆ.

ಚೀನಾ ಮತ್ತು ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳ ಬೆದರಿಕೆಗೆ ಹೆದರಿ ಈ ವಹಿವಾಟು ನಡೆಸಬೇಕಾಯಿತು ಎಂದು ಕಾರಣ ನೀಡಿದ ಈ ಉದ್ಯೋಗಿಯು, ಆ ಹಣವನ್ನು ಕಂತುಗಳಲ್ಲಿ ತೀರಿಸುವುದಾಗಿ ಪ್ರಸ್ತಾಪ ಮಾಡುತ್ತಾನೆ. ಅದರಂತೆ, ಫೆಬ್ರುವರಿ ಎರಡನೇ ವಾರದಲ್ಲಿ 10 ಲಕ್ಷ ರೂ ನೀಡುವುದು, ಉಳಿದವನ್ನು ಕ್ರಮೇಣವಾಗಿ ತೀರಿಸುವುದಾಗಿ ಆತ ಜನವರಿ 29ರಂದು ಹೇಳಿರುತ್ತಾನೆ. ಅದಕ್ಕೆ ಕಂಪನಿಯೂ ಒಪ್ಪಿರುತ್ತದೆ.

ಭರವಸೆ ಕೊಟ್ಟಂತೆ ಉದ್ಯೋಗಿಯು ಕಂಪನಿಗೆ ಹಣ ಮರಳಿಸುವುದಿಲ್ಲ. ಕಂಪನಿಯೂ ಕೂಡ ಸೌಹಾರ್ದಯುತವಾಗಿ ಈ ಸಮಸ್ಯೆ ಬಗೆಹರಿಸಲು ಯತ್ನಿಸುತ್ತದೆ. ಆದರೆ, 2024ರ ಫೆಬ್ರುವರಿ 9ರಂದು ಉದ್ಯೋಗಿಯು ತನ್ನ ಹಿರಿಯ ಅಧಿಕಾರಿಗೆ ಅಶ್ಲೀಲ ಫೋಟೋಗಳನ್ನು ಕಳುಹಿಸಿದ್ದಾನೆ. ಅಷ್ಟೇ ಅಲ್ಲ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಬೆದರಿಕೆ ಹಾಕುತ್ತಾನೆ.

ಇದನ್ನೂ ಓದಿ: ಆಪಲ್ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಾರಥಿ

ಈ ಹಂತದಲ್ಲಿ ಎಚ್ಚೆತ್ತುಕೊಂಡ ಕಂಪನಿಯು ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸುತ್ತದೆ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ – Kannada News | PM Modi is a terrorist; Mallikarjun Kharge sparks New Controversy BJP Demands Apology

ಚೆನ್ನೈ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕ್ಷಣಗಣನೆ ಶುರುವಾಗಿದೆ. ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಏಪ್ರಿಲ್ 23ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು. ಈ ವೇಳೆ ಅವರು “ಪ್ರಧಾನಿ ನರೇಂದ್ರ ಮೋದಿ (PM Narendra Modi) ಓರ್ವ ಭಯೋತ್ಪಾದಕ” ಎಂದು ಹೇಳಿಕೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ ಮತ್ತು ಭಯಪಡಿಸುತ್ತಾರೆ. ಅವರೊಬ್ಬ ಭಯೋತ್ಪಾದಕ ಎಂದು ಖರ್ಗೆ ಹೇಳುವ ಮೂಲಕ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಅಣ್ಣಾದೊರೈ ಅವರ ಫೋಟೋ ಹಾಕುವ ಈ ಎಐಎಡಿಎಂಕೆ ಜನರು ಮೋದಿಯೊಂದಿಗೆ ಹೇಗೆ ಕೈಜೋಡಿಸುತ್ತಾರೆ? ಎಐಎಡಿಎಂಕೆ ಮೋದಿಯೊಂದಿಗೆ ಹೇಗೆ ಕೈ ಜೋಡಿಸಿದರು? ಅವರೊಬ್ಬ ಭಯೋತ್ಪಾದಕ. ಅವರು ಸಮಾನತೆಯನ್ನು ನಂಬುವುದಿಲ್ಲ. ಅವರ ಪಕ್ಷವೆಂದೂ ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ. ಅಂತಹ ಬಿಜೆಪಿಯೊಂದಿಗೆ ಎಐಎಡಿಎಂಕೆ ಸೇರುತ್ತಿದೆ. ಅಂದರೆ ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ‘ಝಲ್ಮುರಿ’ ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ

ಈ ಹೇಳಿಕೆ ಕೂಡಲೇ ದೊಡ್ಡ ವಿವಾದವಾಗಿ ಪರಿವರ್ತನೆಯಾಗಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚನೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸಿದೆ.

ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಕೂಡಲೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, “ಪ್ರಧಾನಿ ಮೋದಿ ಯಾವಾಗಲೂ ನಮಗೆ ಬೆದರಿಕೆ ಹಾಕುತ್ತಾರೆ ಎಂದು ನಾನು ಹೇಳಿದ್ದೇನೆ. ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಇತರ ಸಂಸ್ಥೆಗಳು ಅವರ ಕೈಯಲ್ಲಿವೆ ಎಂದು ನಾನು ಹೇಳಿದ್ದೆ. ಅವರು ಭಯೋತ್ಪಾದಕ ಎಂದು ನಾನು ಖಂಡಿತವಾಗಿಯೂ ಹೇಳಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಸುದ್ದಿಗೋಷ್ಠಿಯ ವಿಡಿಯೋದಲ್ಲಿ ಖರ್ಗೆ ಭಯೋತ್ಪಾದಕ ಎಂಬ ಪದವನ್ನು ಬಳಸಿರುವುದು ದಾಖಲಾಗಿರುವುದರಿಂದ ಬಿಜೆಪಿ ಕ್ಷಮೆಯಾಚನೆಗೆ ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ – Kannada News | Youth Climbs 9 Story Building in Devanahalli Demanding Justice and District Collector’s Presence

ದೇವನಹಳ್ಳಿ, ಏಪ್ರಿಲ್​​ 21: ನನಗೆ ನ್ಯಾಯ ಬೇಕು, ಡಿಸಿ ಕರೆಸಿ ಎಂದು ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ದೇವನಹಳ್ಳಿ ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಪೋಕ್ಸೋ ಕೇಸ್​​ನ ಆರೋಪಿ ಆನಂದ್ ಎಂಬ ಯುವಕ ಈ ರೀತಿ ಹುಚ್ಚಾಟ ನಡೆಸಿದ್ದು, ಸ್ಥಳಕ್ಕೆ ಬಂದ ಪೊಲೀಸರ ಮನವೊಲಿಕೆಗೂ ಈತ ಬಗ್ಗಿಲ್ಲ. ಇಲ್ಲಿಗೆ ಡಿಸಿ ಬರಲೇ ಬೇಕು ಎಂದು ಪಟ್ಟುಹಿಡಿದಿರುವ ಈತ, ಸ್ಥಳಕ್ಕೆ ಬಂದ ತಾಯಿಯ ಮನವಿಗೂ ಕ್ಯಾರೇ ಎಂದಿಲ್ಲ. ಎಷ್ಟೇ ಮನವೊಲಿಕೆ ಮಾಡಿದ್ರೂ ಈತ ತನ್ನ ಹಠ ಬಿಡದ ಹಿನ್ನೆಲೆ ಪೊಲೀಸರಿಗೂ ಈತನ ಹೈಡ್ರಾಮಾ ತಲನೋವಾಗಿ ಮಾರ್ಪಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಮಿನಿ ವ್ಯಾನ್ ಪುಡಿಪುಡಿ, ಬೈಕ್ ಸವಾರನ ಮೇಲೆ ಹರಿದ ವಾಹನ; ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Horrific Highway Accident: Lorry Crushes Mini Van, Hits Biker; CCTV Footage

ಹೆದ್ದಾರಿಯಲ್ಲಿ ಮಿನಿ ವ್ಯಾನ್ ಒಂದು ತಿರುವು ಪಡೆಯುತ್ತಿದ್ದ ಸಂದರ್ಭದಲ್ಲೇ, ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಮೃತ್ಯುವಿನಂತೆರಗಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ವ್ಯಾನ್ ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿದ ವಾಹನವು ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೂ ಜೋರಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ವ್ಯಾನ್‌ನಲ್ಲಿದ್ದ ವಸ್ತುಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೈಕ್ ಸವಾರ ವಾಹನದ ಅಡಿಯಲ್ಲಿ ಸಿಲುಕಿರುವ ದೃಶ್ಯ ಎದೆ ನಡುಗಿಸುವಂತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಈ ಇಡೀ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಚಾಲಕರ ಅಜಾಗರೂಕತೆ ಮತ್ತು ಅತಿ ವೇಗವೇ ಇಂತಹ ಅನಾಹುತಗಳಿಗೆ ಕಾರಣ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಒದಿ: ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ

 

Source link

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ – Kannada News | Byadarahalli Incident: Lover’s Suicide by Fire, Attempted Murder on Girlfriend

ಲವರ್​​ ಮನೆಯಲ್ಲಿ ಬೆಂಕಿ ಹಚ್ಚಿಕೊಂಡ ಯುವಕ Image Credit source: Tv9 kannada

ಬೆಂಗಳೂರಿನ, ಏ.21: ರಾಜ್ಯದಲ್ಲಿ ಪ್ರೀತಿ-ಪ್ರೇಮಗಳಿಂದ ಉಂಟಾಗುವ ಅವಾಂತರಗಳು ಒಂದೆರಡಲ್ಲ, ಸಂಬಂಧಗಳ ನಡುವೆ ನಂಬಿಕೆಗಳು ಇಲ್ಲದಾಗ ಇಂತಹ ಘಟನೆಗಳು ಇದೆ. ಪ್ರೀತಿಗಾಗಿ ಗಂಡನನ್ನು ಕೊಲೆ ಮಾಡುವುದು, ಪ್ರೀತಿಸಿದವರು ಸಿಕ್ಕಿಲ್ಲ ಎಂದು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳು ಹೆಚ್ಚಾಗಿದೆ. ಇದೀಗ ಇಂತಹದೇ ಒಂದು ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿಗೂ ಬೆಂಕಿ ಹಚ್ಚಲು ಯತ್ನಿಸಿದ ಭೀಕರ ಘಟನೆ ಮಂಗಳವಾರ (ಏಪ್ರಿಲ್ 21) ನಡೆದಿದೆ.

ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಇಂದು ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ ಕಿರಣ್, ಮಾತನಾಡಲೆಂದು ಆಕೆಯ ಮನೆಗೆ ತೆರಳಿದ್ದಾನೆ. ಮನೆಗೆ ಪೆಟ್ರೋಲ್ ಸಮೇತ ಬಂದಿದ್ದ ಕಿರಣ್, ಯುವತಿಯೊಂದಿಗೆ ಜೋರಾಗಿ ಗಲಾಟೆ ಮಾಡಿಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದಾಗ ತಾನು ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ

ಅಷ್ಟಕ್ಕೇ ನಿಲ್ಲದ ಕಿರಣ್, ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ಕಿರುಚಾಡುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಸಣ್ಣಪುಟ್ಟ ಸುಟ್ಟಗಾಯಗಳಾಗಿವೆ. ಬೆಂಕಿಯ ತೀವ್ರತೆಗೆ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೀತಿಯಲ್ಲಿ ಮನಸ್ತಾಪವಾಗಿದೆ ಆ ಕಾರಣಕ್ಕೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version