ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು
ಹೈದರಾಬಾದ್, ಜೂನ್ 2: ಜನ ಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಹೇಳಿಕೆಗಳು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. “ತೆಲಂಗಾಣದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ತೆಲಂಗಾಣ ನಿಮ್ಮ ಕುಟುಂಬದ ಭೂಮಿಯೇ? ತೆಲಂಗಾಣದಲ್ಲೂ ಜನಸೇನಾ ಪಕ್ಷ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. ನಾವು ಮುಂದಿನ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಸ್ಪರ್ಧಿಸುತ್ತೇವೆ. ನಾನೇ ತೆಲಂಗಾಣದಲ್ಲಿ ಸಂಚಾರ ಮಾಡಿ ಜನರನ್ನು ತಲುಪುತ್ತೇನೆ” ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು,…