Headlines

ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ! – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. “ಹೋರಾಡುತ್ತೇವೆ ಇಲ್ಲವೇ ಸಾಯುತ್ತೇವೆ” ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು ಮತ್ತು 3 ಸಂಸದರು ಮಾತ್ರ ಹಾಜರಾಗುವ ಮೂಲಕ ಮಮತಾ ಬ್ಯಾನರ್ಜಿಗೆ ಸ್ವಪಕ್ಷದವರಿಂದಲೇ ಭಾರಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣ…

Read More

ಪ್ರತಿಷ್ಠಿತ ‘ಫೋರ್ಬ್ಸ್ 30 ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ದಿವಾ ಉತ್ಕರ್ಷ – Kannada News

ಡಯಾಬಿಟಿಸ್ ಪರೀಕ್ಷೆಯ ಚಿತ್ರImage Credit source: Getty Images ಬೆಂಗಳೂರು, ಜೂನ್ 2: ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ (NPS) ವಿದ್ಯಾರ್ಥಿನಿಯಾದ 17 ವರ್ಷದ ದಿವಾ ಉತ್ಕರ್ಷ (Divaa Uthkarsha) ಅವರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಫೋರ್ಬ್ಸ್ ಏಷ್ಯಾ ಪಟ್ಟಿಯ ‘ಫೋರ್ಬ್ಸ್ 30 ಅಂಡರ್ 30’ (Forbes 30 Under 30 Asia) ರಕ್ಷಣಾ ಮತ್ತು ವಿಜ್ಞಾನ ವಿಭಾಗದಲ್ಲಿ ದಿವಾ ಅವರು…

Read More

ಭಾರತ-ನೇಪಾಳ ಗಡಿ ವಿಷಯದಲ್ಲಿ ಮೂರನೇ ದೇಶದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ; ಭಾರತದ ಖಡಕ್ ಸಂದೇಶ – Kannada News

ನವದೆಹಲಿ, ಜೂನ್ 2: ಭಾರತ ಮತ್ತು ನೇಪಾಳದ (Nepal Border) ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಅತ್ಯಂತ ಕಠಿಣ ನಿಲುವು ತಳೆದಿದೆ. ನೇಪಾಳದ ಪ್ರಧಾನಿಯವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ಭಾರತ, “ಎರಡು ದೇಶಗಳ ನಡುವಿನ ಶೇ. 98ರಷ್ಟು ಗಡಿ ಗುರುತಿಸುವಿಕೆ (Demarcation) ಈಗಾಗಲೇ ಯಶಸ್ವಿಯಾಗಿ ಮುಗಿದಿದೆ. ಉಳಿದ ವಿಷಯಗಳನ್ನು ದ್ವಿಪಕ್ಷೀಯ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ದೇಶದ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಭಾರತ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

‘ವಿನ್ನರ್ ವಿನ್ನರ್, ಚಿಕನ್ ಡಿನ್ನರ್’ ಯಶ್ ದನಿಯಲ್ಲಿ ಬಿಜಿಎಂಐ – Kannada News

ಆನ್​​ಲೈನ್ ಗೇಮಿಂಗ್ ಲೋಕದಲ್ಲಿ ಬಿಜಿಎಂಐ ಗೊತ್ತಿಲ್ಲದವರು ಯಾರು. ಭಾರತದಲ್ಲಿ ಪಬ್ ಜಿ ಬ್ಯಾನ್ ಆದ ಬಳಿಕ ಆ ಸ್ಥಾನಕ್ಕೆ ಬಂದ ಬಿಜಿಎಂಐ, ಭಾರತದಲ್ಲಿ ಅತಿ ಹೆಚ್ಚು ಆಡಲಾಡುವ ಆನ್​​ಲೈನ್ ಆಕ್ಷನ್ ಗೇಮ್ ಆಗಿದೆ. ಭಾರತದಲ್ಲಿ ಸುಮಾರು 27 ಕೋಟಿಗೂ ಹೆಚ್ಚು ಡೌನ್​​ಲೋಡ್​​ಗಳನ್ನು ಹಾಗೂ ಸಕ್ರಿಯ ಆಟಗಾರರನ್ನು ಈ ಗೇಮ್ ಹೊಂದಿದೆ. ಇದೀಗ ಬಿಜಿಎಂಐಗೆ ರಾಕಿಭಾಯ್ ಯಶ್ (Yash) ಎಂಟ್ರಿ ಕೊಟ್ಟಿದ್ದಾರೆ. ‘ಟಾಕ್ಸಿಕ್’ ಮತ್ತು ಬಿಜಿಎಂಐ ಪರಸ್ಪರ ಕೊಲ್ಯಾಬರೇಟ್ ಆಗಿದ್ದು, ಬಿಜಿಎಂಐ ಹೊಸ ಆವೃತ್ತಿಗೆ ನಟ ಯಶ್ ತಮ್ಮ…

Read More

Video: ಕೈಗೆ ಕೋಟಿ ರೂ ಸಿಗುತ್ತಿದ್ದಂತೆ ಭಾರತೀಯರು ಭಾರತಕ್ಕೆ ಮರಳುವುದು ಅಸಾಧ್ಯ; ಅನಿವಾಸಿ ಭಾರತೀಯ ಹೀಗೆಂದಿದ್ದೇಕೆ? – Kannada News

ಕೆಲವರಿಗೆ ವಿದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಹೆಚ್ಚಿನವರ ಭಾವನೆ. ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಅಮೆರಿಕದಲ್ಲಿ (America) ವಾಸಿಸುವ ಅನಿವಾಸಿ ಭಾರತೀಯರೊಬ್ಬರು, ಮನೆಗೆ ಮರಳುವ ಕನಸಿನೊಂದಿಗೆ ವಿದೇಶಕ್ಕೆ ತೆರಳುವ ಅನೇಕ ಭಾರತೀಯರು ವರ್ಷಗಳ ಕಾಲ ಅಲ್ಲಿಯೇ ಉಳಿಯುತ್ತಾರೆ ಎಂದಿದ್ದಾರೆ. ಈ ವಿಡಿಯೋ ಆನ್ಲೈನ್ ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ನಿತಿನ್ ಎಂಬ ಬಳಕೆದಾರರು desidad_in_america ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್‌ನಲ್ಲಿ…

Read More

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು? – Kannada News

ಡಿಕೆಶಿ ಕುರಿತು ಮಾಹಿತಿ ನೀಡಿದ ಶಿವಶಂಕರ್‌ ಶರ್ಮಾImage Credit source: Tv9 Kannada ಬೆಂಗಳೂರು ದಕ್ಷಿಣ (ರಾಮನಗರ), ಜೂನ್​​ 02: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂ.03) ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅವರ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಗ್ರಾಮದ ಹಿರಿಯ ಮುಖಂಡ ಶಿವಶಂಕರ್‌ ಶರ್ಮಾ, ಡಿಕೆಶಿ ಗುಣಗಾನ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ತಂದೆ ದೊಡ್ಡಲಹಳ್ಳಿ ಕೆಂಪೇಗೌಡರಿಗೆ ತಮ್ಮ ಮಗ ಒಂದು…

Read More

ಅಮಿತ್ ಶಾ ಜೊತೆ ಅಣ್ಣಾಮಲೈ ಮಾತುಕತೆ; ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಕಸರತ್ತು – Kannada News

ನವದೆಹಲಿ, ಜೂನ್ 2: ಬಿಜೆಪಿಗೆ ರಾಜೀನಾಮೆ ನೀಡಿ ಸ್ವತಂತ್ರ ಹಾದಿ ಹಿಡಿಯಲು ನಿರ್ಧರಿಸಿರುವ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಣ್ಣಾಮಲೈ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಅಣ್ಣಾಮಲೈ ಆಗಲಿ ಅಥವಾ ಬಿಜೆಪಿ ನಾಯಕರಾಗಲಿ ಇದುವರೆಗೂ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ…

Read More

Karnataka Weather Forecast: ಮೇ 26ಕ್ಕೆ ಕೈಕೊಟ್ಟ ಮುಂಗಾರು, ಜೂ.4ಕ್ಕೆ ಪ್ರವೇಶ: ಕರ್ನಾಟಕದಲ್ಲಿ ಮುಂದಿನ 9 ದಿನ ಭಾರೀ ಮಳೆ – Kannada News

ಬೆಂಗಳೂರು (ಜೂ.02): ನೈಋತ್ಯ ಮುಂಗಾರು (monsoon)  ಪ್ರವೇಶದ ಹಿನ್ನೆಲೆಯಲ್ಲಿ, ಚಂಡಮಾರುತದ ಸುಳಿ ಹಾಗೂ ಟ್ರಫ್ ಪ್ರಭಾವದಿಂದಾಗಿ ಕರ್ನಾಟಕದಾದ್ಯಂತ ಇಂದಿನಿಂದ ಅಂದರೆ ಜೂನ್ 2ರಿಂದ 9 ದಿನಗಳ ಕಾಲ  ಭಾರೀ ಮಳೆಯಾಗುವ (Karnataka Rain) ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre)  ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಸಲಾಗಿದೆ. ಇನ್ನು ಮೇ 26ಕ್ಕೆ ಮುಂಗಾರು ಪ್ರವೇಶಿಸಲಿದೆ…

Read More

1 ಕೋಟಿ ಕೊಟ್ಟು ಗಣೇಶನ ಪುಟ್ಟ ಮೂರ್ತಿ ಖರೀದಿಸಿದ ಹಾಲಿವುಡ್ ಸ್ಟಾರ್ – Kannada News

ಭಾರತೀಯರು ಮಾತ್ರವಲ್ಲ ಹಲವು ಹಾಲಿವುಡ್ (Hollywood) ಸ್ಟಾರ್ ನಟ, ನಟಿಯರು, ಉದ್ಯಮಿಗಳು, ಕೆಲ ವಿಜ್ಞಾನಿಗಳು ಸಹ ಹಿಂದೂ ದೇವತೆಗಳಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ಬಗ್ಗೆ ಹಲವರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ ಅವರಲ್ಲಿ ಪ್ರಮುಖರೆಂದರೆ ಸ್ಟಾರ್ ನಟಿ ಜೂಲಿಯಾ ರಾಬರ್ಟ್ಸ್, ನಟ ರಸಲ್ ಬ್ರ್ಯಾಂಡ್, ರಾಬರ್ಟ್ ಡೌನಿ ಜೂನಿಯರ್ (ಐರನ್ ಮ್ಯಾನ್) ಇನ್ನೂ ಹಲವು ಹಾಲಿವುಡ್ ಸ್ಟಾರ್ ನಟ, ನಟಿಯರು ತಾವು ಹಿಂದೂ ದೇವತೆಗಳ ಆರಾಧಕರು ಎಂದು ಹೇಳಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಖ್ಯಾತ ಹಾಲಿವುಡ್ ನಟ, ಆಸ್ಕರ್ ವಿಜೇತ ವಿಲ್…

Read More