ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ತಿರುವಲ್ಲಾ, ಏಪ್ರಿಲ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪುದುಚೆರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಇಂದು ಕೇರಳಕ್ಕೆ (ಕೇರಳಂ) ತೆರಳಿದ್ದಾರೆ. ಕೇರಳದ ತಿರುವಲ್ಲಾದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಎಡ ಮತ್ತು ಕಾಂಗ್ರೆಸ್ ವಿರುದ್ಧ ನಡೆದ ವಾಗ್ದಾಳಿಯ ನಂತರ ಪ್ರಧಾನಿ ಮೋದಿ ಕೇರಳದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ.

“ತಿರುವಲ್ಲಾದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನರು ಎನ್‌ಡಿಎ ಮೇಲಿನ ನಿಮ್ಮ ನಂಬಿಕೆಯನ್ನು ತೋರಿಸುತ್ತಿದೆ. ನನ್ನ ತಾಯಂದಿರು ಮತ್ತು ಸಹೋದರಿಯರು ತೋರಿಸಿದ ಪ್ರೀತಿ ಮತ್ತು ವಿಶ್ವಾಸವು ಇಂದು ಕೇರಳದಾದ್ಯಂತ ಇದೇ ರೀತಿಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ಹೀಗಾಗಿ ಸರಿಯಾದ ಆರೈಕೆ, ಪೌಷ್ಟಿಕ ಆಹಾರ ಮತ್ತು ಉತ್ತಮ ಜೀವನಶೈಲಿ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಡಿಲಿವರಿ ಮೊದಲು ಯಾವ ರೀತಿಯ ವಿಷಯಗಳು ಮುಖ್ಯವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಿಲಿವರಿ ಮೊದಲು ಗಮನಿಸಬೇಕಾದ ವಿಷಯಗಳು:

ಪೌಷ್ಟಿಕ ಆಹಾರ ಸೇವನೆ: ಪ್ರೋಟೀನ್, ಐರನ್ ಮತ್ತು ಕ್ಯಾಲ್ಸಿಯಂಯುಕ್ತ ಆಹಾರವನ್ನು ಸೇವಿಸಬೇಕು
ಸಾಕಷ್ಟು ನೀರು ಕುಡಿಯುವುದು: ದೇಹವನ್ನು ಹೈಡ್ರೇಟ್ ಆಗಿರಿಸಬೇಕು
ನಿಯಮಿತ ವೈದ್ಯಕೀಯ ತಪಾಸಣೆ: ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು
ಲಘು ವ್ಯಾಯಾಮ: ವಾಕಿಂಗ್ ಮಾಡುವುದು ಅಥವಾ ಸಣ್ಣ ವ್ಯಾಯಾಮಗಳನ್ನು ವೈದ್ಯರ ಸಲಹೆಯಂತೆ ಪಾಲಿಸಬೇಕು
ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ: ಮನಸ್ಸನ್ನು ಶಾಂತವಾಗಿಡಲು ಪ್ರಯತ್ನಿಸಬೇಕು
ಅಗತ್ಯ ಸಾಮಗ್ರಿ ಸಿದ್ಧತೆ: ಡಿಲಿವರಿ ಸಮಯಕ್ಕೆ ಬೇಕಾದ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳಬೇಕು

ಇದನ್ನೂ ಓದಿ: ಗರ್ಭಿಣಿಯರು ಎಲ್ಲಾದ್ರೂ ಪ್ರಯಾಣಿಸುವಾಗ ಈ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಲೇಬೇಕು

ಯಾವ ವಿಷಯಗಳಿಂದ ದೂರವಿರಬೇಕು?

  • ಡಿಲಿವರಿ ಮೊದಲು ಕೆಲವು ವಿಷಯಗಳನ್ನು ತಪ್ಪಿಸುವುದು ಅಗತ್ಯ
  • ಹೆಚ್ಚು ಮಸಾಲೆ, ಕರಿದ ಮತ್ತು ಜಂಕ್ ಫುಡ್ ಸೇವನೆ ಮಾಡಬೇಡಿ
  • ಕೆಫೀನ್ ಮತ್ತು ತಂಪು ಪಾನೀಯಗಳ ಅಧಿಕ ಸೇವನೆ ಮಾಡಬಾರದು
  • ಭಾರವಾದ ವಸ್ತುಗಳನ್ನು ಎತ್ತುವುದು
  • ಹೆಚ್ಚು ಶ್ರಮದ ಕೆಲಸಗಳು
  • ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವನೆ
  • ಧೂಮಪಾನ ಮತ್ತು ಮದ್ಯಪಾನ

ಮಾನಸಿಕ ಸಿದ್ಧತೆಯೂ ಮುಖ್ಯ:

ಡಿಲಿವರಿ ಮೊದಲು ಮಾನಸಿಕವಾಗಿ ಸಿದ್ಧರಾಗಿರುವುದು ಬಹಳ ಮುಖ್ಯ. ಕುಟುಂಬದ ಬೆಂಬಲ ಮತ್ತು ಪಾಸಿಟಿವ್ ವಾತಾವರಣ ಗರ್ಭಿಣಿಗೆ ಆತ್ಮವಿಶ್ವಾಸ ನೀಡುತ್ತದೆ. ಆಸ್ಪತ್ರೆ ಮತ್ತು ವೈದ್ಯರನ್ನು ಮುಂಚಿತವಾಗಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಅದೇ ರೀತಿ ಅಗತ್ಯ ದಾಖಲೆಗಳನ್ನು ಮೊದಲೇ ಸಿದ್ಧವಾಗಿಟ್ಟುಕೊಳ್ಳಬೇಕು. ಡಿಲಿವರಿ ಲಕ್ಷಣಗಳ ಬಗ್ಗೆ ತಿಳಿದಿರುವುದು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಹೋಗುವುದಕ್ಕೆ ಸಹಾಯ ಮಾಡುತ್ತದೆ. ಒಟ್ಟಿನಲ್ಲಿ, ಸರಿಯಾದ ಮಾಹಿತಿ, ಉತ್ತಮ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಡಿಲಿವರಿ ಪ್ರಕ್ರಿಯೆಯನ್ನು ಸುರಕ್ಷಿತ ಮತ್ತು ಸುಲಭವಾಗಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 4: ಕೇರಳದಲ್ಲಿ ವಿಧಾನಸಭಾ ಚುನಾವಣೆ (Keralam Assembly Elections)  ನಡೆಯಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ (PM Modi) ತಿರುವಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಪಶ್ಚಿಮ ಏಷ್ಯಾದ ದೇಶಗಳು ಭಾರತವನ್ನು ತಮ್ಮ ಶತ್ರುವೆಂದು ಪರಿಗಣಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ನಾವು ಇಲ್ಲಿ ಅಂತಹ ಹೇಳಿಕೆ ನೀಡಿದರೆ ಭಾರತೀಯರನ್ನು ಗಲ್ಫ್ ದೇಶಗಳಿಂದ ಹೊರಹಾಕಲಾಗುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಪಕ್ಷವು ಗಲ್ಫ್ ರಾಷ್ಟ್ರಗಳನ್ನು ಕೆರಳಿಸುವ ಹೇಳಿಕೆಗಳನ್ನು ನೀಡುತ್ತಿದೆ” ಎಂದು ಮೋದಿ ಟೀಕಿಸಿದ್ದಾರೆ.

“ರಾಜಕೀಯ ಒಂದೇ ಮುಖ್ಯವಲ್ಲ. ಚುನಾವಣೆಗಳು ಬರುತ್ತವೆ ಹೋಗುತ್ತವೆ, ನನಗೆ ಕೇರಳದ ಜನರ ಸುರಕ್ಷತೆಯೇ ಪ್ರಮುಖ ಆದ್ಯತೆ. ನಾನು ಅದಕ್ಕೆ ಬದ್ಧನಾಗಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದರು. ಕೇರಳದಲ್ಲಿ ಅಧಿಕಾರದಲ್ಲಿರುವ ಸರ್ಕಾರವಾದ ಎಲ್‌ಡಿಎಫ್ ಮೇಲೆಯೂ ಅವರು ತೀವ್ರ ವಾಗ್ದಾಳಿ ನಡೆಸಿದರು. ಮುಂಬರುವ ಮೇ 4ರಂದು ನಡೆಯುವ ಚುನಾವಣೆ ದಶಕಗಳ ದುರಾಡಳಿತದ ಅಂತ್ಯವನ್ನು ಸೂಚಿಸಲಿದೆ. ಈ ಬಾರಿ ಕೇರಳದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದರು.

 

ಇದನ್ನೂ ಓದಿ: Video: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ

ಎಲ್‌ಡಿಎಫ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದು ಖಚಿತ. ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ-ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಕೇರಳದ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ಸಿಲುಕಿಕೊಂಡಿದೆ. ಈ ಬಾರಿ ಕೇರಳದ ಜನರು ಎರಡೂ ಪಕ್ಷಗಳನ್ನು ಅಧಿಕಾರದಿಂದ ದೂರ ಇಡುತ್ತಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಎಲ್‌ಡಿಎಫ್-ಯುಡಿಎಫ್ ಸರ್ಕಾರಗಳು ಈ ಪ್ರದೇಶದ ಬಗ್ಗೆ ಎಂದಿಗೂ ಕಾಳಜಿ ವಹಿಸಿಲ್ಲ. ಸಂಪರ್ಕ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ವರ್ಷಗಳಲ್ಲಿ ಒಂದೇ ಒಂದು ಪ್ರಮುಖ ಸೇತುವೆಯನ್ನು ನಿರ್ಮಿಸಿಲ್ಲ. ವೈದ್ಯಕೀಯ ಕಾಲೇಜು ಕೆಟ್ಟ ಸ್ಥಿತಿಯಲ್ಲಿದೆ. ಮೂಲಭೂತ ಮೂಲಸೌಕರ್ಯಗಳ ಕೊರತೆಯಿರುವ ಈ ಪ್ರದೇಶದ ಜೀವನ ಮಟ್ಟವನ್ನು ಯಾರಾದರೂ ಊಹಿಸಬಹುದು. ಈ ಎಲ್ಲಾ ವಿಷಯಗಳ ಕುರಿತು ಕೆಲಸ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್​​ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್​​ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್​​ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್​​ ಮಾಡಿ ಎಂದು ಆರ್​​ಎಸ್​​ಎಸ್​​ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಿಂದಿನ ಉಪ ಚುನಾವಣೆಗಳಂತೆ ಈಗಿನ ಎರಡೂ ಬೈ ಎಲೆಕ್ಷನ್​​ಗಳಲ್ಲಿಯೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಸಿಎಂ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಲ್ಲ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿತ್ತು. ಇದೀಗ ಅದೆಲ್ಲದಕ್ಕೂ ರಾಜ್ಯ ಸಾರಿಗೆ ಇಲಾಖೆ ತೆರೆ ಎಳೆದಿದೆ.

ಇದನ್ನೂ ಓದಿ: ನಂಬರ್ ​ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ

ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಪ್ರಕಟಣೆಯಲ್ಲಿ ಏನಿದೆ?

ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​​ಪಿ ಅಳವಡಿಕೆ ಕಡ್ಡಾಯ ಮಾಡಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮ ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019ರ ಏಪ್ರಿಲ್ 1ರ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.

ಇದನ್ನೂ ಓದಿ: ವಾಹನ ಮಾಲೀಕರಿಗೆ ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಹೆಚ್ಎಸ್ಆರ್​ಪಿ ಅಳವಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸುವಂತೆ ಸೂಚಿಸಿತ್ತು. ಇದೇ ಸಂದರ್ಭದಲ್ಲಿ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್​ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿರುವ ಆರ್​ಸಿಬಿ, ಇದೀಗ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ವೀಕ್ಷಿಸಬಹುದು.

ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್​ಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.

GT vs RR IPL 2026 Live Score: ರಾಜಸ್ಥಾನ್ ಮೊದಲ ವಿಕೆಟ್ ಪತನ

ಮುಖಾಮುಖಿ ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇದುವರೆಗೆ 35 ಪಂದ್ಯಗಳು ನಡೆದಿವೆ. ಇದರಲ್ಲಿ ಸಿಎಸ್​ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಆದಾಗ್ಯೂ ಕಳೆದ ಆವೃತ್ತಿಯಿಂದ ಆರ್​ಸಿಬಿ ಬಲಿಷ್ಠವಾಗಿ ಕಾಣುತ್ತಿದ್ದು, ಸಿಎಸ್​ಕೆ ವಿರುದ್ಧ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ.

ಸಂಭಾವ್ಯ ಪ್ಲೇಯಿಂಗ್ 11

ಚೆನ್ನೈ ಸೂಪರ್ ಕಿಂಗ್ಸ್‌: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯಾಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ.

ಬಸ್​​ ಸಂಚರಿಸಲಿರುವ ಮಾರ್ಗಗಳು

  • ಚಿನ್ನಸ್ವಾಮಿ ಸ್ಟೇಡಿಯಂ ಟು ಕಾಡುಗೋಡಿ ಬಸ್ ನಿಲ್ದಾಣ, HAL ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಸರ್ಜಾಪುರ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಎಲೆಕ್ಟ್ರಾನಿಕ್ ಸಿಟಿ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
  • ಚಿನ್ನಸ್ವಾಮಿ ಸ್ಟೇಡಿಯಂ ಟು ಜನಪ್ರಿಯ ಟೌನ್​ಶಿಪ್, ಮಾಗಡಿ ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಆರ್.ಕೆ.ಹೆಗಡೆ ನಗರ, ಯಲಹಂಕ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಹೊಸಕೋಟೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನಶಂಕರಿ

ಇದನ್ನೂ ಓದಿ: ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​; ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಈ ವಿಶೇಷ ಬಿಎಂಟಿಸಿ ಬಸ್​​ಗಳು ಸಿ.ಟಿ.ಒ ಜಂಕ್ಷನ್​​ನಿಂದ ಬಿ.ಆರ್.ವಿ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಸ್ಟೇಡಿಯಂಗೆ ಕೆಲ ವಸ್ತುಗಳನ್ನು ತರುವುದು ನಿಷೇಧ

ಸುರಕ್ಷತೆ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳು ಕೆಲ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದೂ ಪೊಲೀಸರು ಮನವಿ ಮಾಡಿದ್ದಾರೆ. ಸಂಶಯಾಸ್ಪದ ವಸ್ತುಗಳು ಕಂಡಿಬಂದಲ್ಲಿ ಅವನ್ನು ವಶಕ್ಕೆ ಪಡೆಯುವುದಾಗಿಯೂ ಮುನ್ನೆಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ತಮಿಳುನಾಡು ಸಿಎಂ ಸ್ಟಾಲಿನ್ ಭಾಷಾ ಹೇರಿಕೆ ಆರೋಪಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು

ನವದೆಹಲಿ, ಏಪ್ರಿಲ್ 4: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತ್ರಿಭಾಷಾ ಸೂತ್ರದ ಕುರಿತು ನೀಡಿದ ಹೇಳಿಕೆಗಳನ್ನು ಟೀಕಿಸಿದ್ದಾರೆ. “ತ್ರಿಭಾಷಾ ಹೇರಿಕೆ” ಹೇಳಿಕೆಯನ್ನು ರಾಜಕೀಯ ನ್ಯೂನತೆಗಳನ್ನು ಮುಚ್ಚಲು ಮಾಡುತ್ತಿರುವ “ವಿಫಲ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಸಿಎಂ ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಷ್ಟ್ರೀಯ ಶಿಕ್ಷಣ ನೀತಿ, 2020 ಭಾಷಾ ವಿಮೋಚನೆಗಾಗಿ ಪ್ರಣಾಳಿಕೆಯಾಗಿದೆ. ಇದು ಮಾತೃಭಾಷೆಗೆ ಆದ್ಯತೆ ನೀಡುತ್ತದೆ. ಆದ್ದರಿಂದ ಪ್ರತಿ ತಮಿಳು ಮಗುವೂ ತಮ್ಮದೇ ಆದ ಅದ್ಭುತ ಭಾಷೆಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಬಹುಭಾಷಾವಾದವನ್ನು ಬೆದರಿಕೆಯಾಗಿ ಚಿತ್ರಿಸುವುದು ತಪ್ಪು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಪಾದಿಸಿದ್ದಾರೆ. ತಮಿಳು ಭಾಷಿಕರು ಬಹುಭಾಷಾ, ಆತ್ಮವಿಶ್ವಾಸ ಮತ್ತು ಭಾಷಾಶಾಸ್ತ್ರೀಯವಾಗಿ ಸಬಲೀಕರಣಗೊಂಡಾಗ ಆ ಭಾಷೆ ಶ್ರೀಮಂತವಾಗುತ್ತದೆ ಎಂದು ಹೇಳಿದ್ದಾರೆ. NEP ಎಲ್ಲಾ ಭಾಷೆಗಳನ್ನು ಸಮಾನವಾಗಿ ಉತ್ತೇಜಿಸುವ ಮೂಲಕ ಸಾಂವಿಧಾನಿಕ ತತ್ವಗಳನ್ನು ಎತ್ತಿಹಿಡಿಯುತ್ತದೆ ಮತ್ತು ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯ ಮಿತಿಗಳನ್ನು ಪರಿಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಶಿಕ್ಷಾ, ಶಿಕ್ಷಕರ ತರಬೇತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರಿಗೆ ರಾಷ್ಟ್ರೀಯ ವೃತ್ತಿಪರ ಮಾನದಂಡಗಳು ಮತ್ತು ಮಾರ್ಗದರ್ಶನಕ್ಕಾಗಿ ರಾಷ್ಟ್ರೀಯ ಮಿಷನ್‌ನಂತಹ ರಾಷ್ಟ್ರೀಯ ಚೌಕಟ್ಟುಗಳಂತಹ ಉಪಕ್ರಮಗಳ ಮೂಲಕ ಅದರ ಅನುಷ್ಠಾನವನ್ನು ಧರ್ಮೇಂದ್ರ ಪ್ರಧಾನ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಭಾರತದ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದ್ದರೂ ಡಿಎಂಕೆ ಸರ್ಕಾರವು ಶೈಕ್ಷಣಿಕ ಸಮಾನತೆಗಿಂತ ರಾಜಕೀಯ ನಿರೂಪಣೆಗಳಿಗೆ ಆದ್ಯತೆ ನೀಡುತ್ತಾ ಅವುಗಳ ಅನುಷ್ಠಾನಕ್ಕೆ ಅಡ್ಡಿಯಾಗುತ್ತಲೇ ಇದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಸಿಗದಷ್ಟು ಸಂಭಾವನೆ ಪಡೆದ ಎಆರ್ ರೆಹಮಾನ್

ಭಾರತೀಯ ಸಿನಿಮಾಗಳಲ್ಲಿ (Indian Cinema) ಸ್ಟಾರ್ ನಟರಿಗೆ ಸಿಕ್ಕಷ್ಟು ಸಂಭಾವನೆ, ಮಾನ್ಯತೆ ಸಿನಿಮಾದ ಇನ್ಯಾವುದೇ ವಿಭಾಗದ ಇನ್ಯಾವುದೇ ತಂತ್ರಜ್ಞರಿಗೆ ದೊರೆಯುವುದಿಲ್ಲ. ಸಂಗೀತ ನಿರ್ದೇಶಕರನ್ನಂತೂ ಕೇಳುವವರೇ ಇಲ್ಲ. ಎಷ್ಟೋ ಬಾರಿ ಕೇವಲ ಸಂಗೀತದಿಂದಲೇ ಸಿನಿಮಾಗಳು ಗೆದ್ದಿರುವುದುಂಟು. ಆದರೂ ಸಹ ಸಂಗೀತ ನಿರ್ದೇಶಕರಿಗೆ ಅವರ ಪ್ರತಿಭೆಗೆ ತಕ್ಕಷ್ಟು ಸೂಕ್ತ ಸಂಭಾವನೆ ದೊರೆಯುವುದಿಲ್ಲ. ಇದೀಗ ಎಆರ್ ರೆಹಮಾನ್ ಅವರಿಗೆ ಭಾರಿ ಮೊತ್ತದ ಸಂಭಾವನೆ ದೊರೆತಿದ್ದು, ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಇಷ್ಟು ದೊಡ್ಡ ಸಂಭಾವನೆ ದೊರೆತಿಲ್ಲ ಎನ್ನಲಾಗುತ್ತಿದೆ.

ವರದಿಗಳ ಪ್ರಕಾರ, ‘ರಾಮಾಯಣ’ ಸಿನಿಮಾಕ್ಕಾಗಿ ಎಆರ್ ರೆಹಮಾನ್ ಅವರು 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಭಾರತದ ಯಾವುದೇ ಸಂಗೀತ ನಿರ್ದೇಶಕರು ಇದುವರೆಗೆ ಪಡೆದ ಅತಿ ದೊಡ್ಡ ಸಂಭಾವನೆ ಪಡೆದಿದ್ದೇ ಇಲ್ಲ. ಅವರು ಮಾತ್ರವೇ ಅಲ್ಲದೆ ಸಿನಿಮಾಕ್ಕೆ ಸಂಗೀತ ನೀಡಿರುವ ಹಾನ್ಸ್ ಜಿಮ್ಮರ್ ಸಹ ಭಾರಿ ಮೊತ್ತದ ಸಂಭಾವನೆಯನ್ನು ಈ ಸಿನಿಮಾಕ್ಕೆ ಪಡೆಯುತ್ತಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾಕ್ಕೆ ನಾಲ್ಕು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದು ಕಲಾವಿದರು ಮತ್ತು ತಂತ್ರಜ್ಞರಿಗೆ ದೊಡ್ಡ ಮೊತ್ತದ ಸಂಭಾವನೆಯನ್ನೇ ನೀಡಲಾಗಿದೆ.

ಎಆರ್ ರೆಹಮಾನ್ ಈ ಚಿತ್ರಕ್ಕಾಗಿ ಸುಮಾರು 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿರುವ ಜೊತೆಗೆ ಒಪ್ಪಂದದಲ್ಲಿ ಪಾಲು ಸಹ ಪಡೆಯಲಿದ್ದಾರೆ. ಆಡಿಯೋ ಹಕ್ಕುಗಳು ಮಾರಾಟವಾಗುವ ಮೊತ್ತದಲ್ಲಿ ಸಹ ಎಆರ್ ರೆಹಮಾನ್ ಅವರಿಗೆ ನಿರ್ದಿಷ್ಟ ಪಾಲು ಸಿಗಲಿದೆ ಎನ್ನಲಾಗುತ್ತಿದೆ. ‘ರಾಮಾಯಣ’ ಚಿತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವುದರಿಂದ, ಹ್ಯಾನ್ಸ್ ಜಿಮ್ಮರ್ ಅವರನ್ನು ಸಹ ಸಂಗೀತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ:‘ಧುರಂಧರ್’ ರೆಹಮಾನ್ ಡಕಾಯಿತ್ ಪಾತ್ರದ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ರಾಮಾಯಣ’ ಸಿನಿಮಾವು ಭಾರತದ ಈ ವರೆಗೆ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾಕ್ಕೆ 4000 ಕೋಟಿ ಬಜೆಟ್ ಹೂಡಲಾಗಿದೆ. ಸಿನಿಮಾದ ನಾಯಕ ರಣ್​​ಬೀರ್ ಕಪೂರ್ ಅವರಿಗೆ 150 ಕೋಟಿಗೂ ಹೆಚ್ಚು ಸಂಭಾವನೆ ನೀಡಲಾಗಿದೆಯಂತೆ. ಇನ್ನು ನಟ ಯಶ್​​ಗೆ ಸುಮಾರು 100 ಕೋಟಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ. ನಿರ್ದೇಶಕ ನಿತೀಶ್ ತಿವಾರಿಗೆ 50 ಕೋಟಿ ಸಂಭಾವನೆ ಕೊಡಲಾಗಿದೆಯಂತೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಮೊದಲ ಭಾಗ ದೀಪಾವಳಿಯಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version