ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach
ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…