ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ – Kannada News | Bengaluru temperature: Fog and misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ

ಬೆಂಗಳೂರು, ಜನವರಿ 30: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದ್ದು, ಬೆಳಗ್ಗೆ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ – Kannada News | Overloaded Sugarcane Truck Overturns onto School Van in UP’s Lakhimpur Kheri

ಉತ್ತರ ಪ್ರದೇಶ, ಜನವರಿ 30: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. ಟ್ರಕ್ ಪಲ್ಟಿ ಹೊಡೆಯುತ್ತಿದ್ದಂತೆ, ಸ್ಥಳೀಯರು ಓಡಿ ಬಂದು ಯಾವುದೇ ಸರ್ಕಾರದ ನಿರ್ದೇಶನಗಳಿಗೆ ಕಾಯದೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ವ್ಯಾನ್ ಮೇಲೆ ಬಿದ್ದ ಕಬ್ಬುಗಳೆಲ್ಲವನ್ನು ಬದಿಗೆ ಹಾಕಿ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು ಅವರ ಪೋಷಕರು ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Source link

ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ! – Kannada News | Union Budget 2026: What Karnataka Can Expect from Nirmala Sitharaman’s Budget? Know details here

ಬೆಂಗಳೂರು, ಜನವರಿ 30: ಒಂದು ಕಡೆ ಪಂಚರಾಜ್ಯಗಳ ಚುನಾವಣಾ ಅಬ್ಬರ, ಇನ್ನೊಂದೆಡೆ ಭರಪೂರ ನಿರೀಕ್ಷೆಯಲ್ಲಿರುವ ಕರ್ನಾಟಕ. ಹೀಗಿರುವಾಗ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ (Union Budget) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ದೇಶದಲ್ಲಿ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಮತ್ತು ನನೆಗುದಿಗೆ ಬಿದ್ದಿರುವ ಬೃಹತ್ ಯೋಜನೆಗಳಿಗೆ ಮರುಜೀವ ನೀಡುವುದು ಕೇಂದ್ರಕ್ಕೆ ಈಗ ದೊಡ್ಡ ಸವಾಲಾಗಿದೆ.

ಕೇಂದ್ರ ಬಜೆಟ್​: ಕರ್ನಾಟಕದ ಬೇಡಿಕಗಳೇನು?

  • ನೀರಾವರಿ: ಕೃಷ್ಣಾ ಮೇಲ್ದಂಡೆ, ಎತ್ತಿನಹೊಳೆ, ಮಹದಾಯಿ ಯೋಜನೆಗೆ ‘ರಾಷ್ಟ್ರೀಯ ಯೋಜನೆ’ ಮಾನ್ಯತೆ ನಿರೀಕ್ಷೆ.
  • ಭದ್ರಾ ಮೇಲ್ದಂಡೆ: 2023ರಲ್ಲಿ ಘೋಷಣೆಯಾಗಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆಗೆ ಆಗ್ರಹ.
  • ಬೆಂಗಳೂರು ಮೆಟ್ರೋ: ನಮ್ಮ ಮೆಟ್ರೋ 3ನೇ ಹಂತದ ವಿಸ್ತರಣೆಗೆ ಕೇಂದ್ರದ ಆರ್ಥಿಕ ನೆರವು. ಸಬ್ ಅರ್ಬನ್ ರೈಲಿಗೆ ಹೆಚ್ಚಿನ ಅನುದಾನ.
  • ಹೈಸ್ಪೀಡ್ ರೈಲು: ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲ್ವೆ ಯೋಜನೆಗೆ ಗ್ರೀನ್ ಸಿಗ್ನಲ್.
  • ಹಾಸನ ಐಐಟಿ, ಶಿರಾಡಿ ಸುಂರಂಗ, ರಾಯಚೂರು ಏಮ್ಸ್, ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆಗೆ ಮರುಜೀವ ನಿರೀಕ್ಷೆ.
  • ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ನಿರೀಕ್ಷೆ, ಮೈಸೂರು- ಕುಶಾಲನಗರ ಹೊಸ ರೈಲು ಯೋಜನೆ.

ಅನುದಾನ ಕೊರತೆಯಿಂದ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನ ಬಾಕಿ ಉಳಿದಿವೆ. ರಾಜ್ಯದ ಕೆಲವು ನೀರಾವರಿ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿದರೆ ಶೇ 90ರಷ್ಟು ಅನುದಾನ ಕೇಂದ್ರದಿಂದಲೇ ಸಿಗಲಿದೆ. ಇದು ಬರಪೀಡಿತ 23 ಜಿಲ್ಲೆಗಳ 150ಕ್ಕೂ ಹೆಚ್ಚು ತಾಲೂಕುಗಳಿಗೆ ವರದಾನವಾಗಲಿದೆ.

2023ರಲ್ಲಿ ಚುನಾವಣೆ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಸ್ವತಃ ಕೇಂದ್ರ ಸರಕಾರವೇ ಘೋಷಣೆ ಮಾಡಿದ್ದ 5,300 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ. ಹಣಬಿಡುಗಡೆ ಮಾಡುವಂತೆ ರಾಜ್ಯ ಸಾಕಷ್ಟು ಬಾರಿ ಮನವಿ ಮಾಡಿದೆ. ಘೋಷಣೆ ಮಾಡಿದ್ದ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ. ಈ ಬಜೆಟ್ ನಲ್ಲಿ ಉತ್ತರ ಸಿಗಬಹುದಾ ಎಂಬ ನಿರೀಕ್ಷೆ ರಾಜ್ಯದ ಜನರಿಗಿದೆ. ಇನ್ನು ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಅನುಷ್ಠಾನಕ್ಕೆ ಕೇಂದ್ರ ಸರಕಾರ ಅಧಿಕೃತ ಮುದ್ರೆ ಒತ್ತಬೇಕಿದೆ.

ರೈಲ್ವೆ ಮತ್ತು ಕರಾವಳಿ ಅಭಿವೃದ್ಧಿಗೆ ಬೂಸ್ಟ್?

ರಾಜ್ಯದ ರೈಲ್ವೆ ಯೋಜನೆಗಳಿಗೆ ಈ ಬಾರಿ ಹೆಚ್ಚಿನ ಬಲ ಸಿಗುವ ಸಾಧ್ಯತೆಯಿದೆ. ಧಾರವಾಡ-ಕಿತ್ತೂರು-ಬೆಳಗಾವಿ, ಗಿಣಿಗೇರಾ-ರಾಯಚೂರು ಮಾರ್ಗಗಳ ಜೊತೆಗೆ ಕಲಬುರಗಿ ರೈಲ್ವೆ ವಿಭಾಗದ ಕನಸು ನನಸಾಗಬೇಕಿದೆ. ಇನ್ನು 360 ಕಿಲೋ ಮೀಟರ್ ಉದ್ದದ ಕಡಲ ತೀರ ಹೊಂದಿದ್ದರೂ ಅಭಿವೃದ್ಧಿ ಕಾಣದ ಕರ್ನಾಟಕದ ಬಂದರುಗಳಿಗೆ ಸಾಗರಮಾಲಾ ಯೋಜನೆಯಡಿ ವಿಶೇಷ ಪ್ಯಾಕೇಜ್ ಸಿಗುವ ನಿರೀಕ್ಷೆಯಿದೆ. ಜೊತೆಗೆ ಕೈಗಾರಿಕೆಗಳಿಗೆ ಪೂರಕವಾಗಿ ಉಕ್ಕಿನ ಪೂರೈಕೆಗೆ ರಿಯಾಯಿತಿ ಸಿಗಬಹುದು ಎನ್ನಲಾಗುತ್ತಿದೆ.

ಅತಿವೃಷ್ಟಿ,ಬರ ಮತ್ತು ಆರ್ಥಿಕ ಸವಾಲುಗಳು

ರಾಜ್ಯದಲ್ಲಿ ಸಾಲದ ಹೊರೆ ಹೆಚ್ಚುತ್ತಿದೆ, ನಿರಂತರ ಅತಿವೃಷ್ಟಿ ಮತ್ತು ಪ್ರವಾಹದಿಂದ ಆರ್ಥಿಕತೆ ನಲುಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ನಿಧಿ ಹಂಚಿಕೆಯಾಗಬೇಕಿದೆ. ಗುಜರಾತ್, ಯುಪಿ ಮಾದರಿಯಲ್ಲಿ ಕರ್ನಾಟಕಕ್ಕೂ ಬೃಹತ್ ತಾಂತ್ರಿಕ ಯೋಜನೆಗಳನ್ನು ನೀಡುವ ಮೂಲಕ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಬೇಕೆಂಬುದು ಉದ್ಯಮ ಕ್ಷೇತ್ರದ ಒತ್ತಾಯವಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ 2026: ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

ಒಟ್ಟಿನಲ್ಲಿ 2026ರ ಬಜೆಟ್ ಕರ್ನಾಟಕದ ಪಾಲಿಗೆ ಕೇವಲ ಭರವಸೆಯ ಮೂಟೆಯಾಗುತ್ತಾ ಅಥವಾ ನಿಜವಾಗಿಯೂ ಅಭಿವೃದ್ಧಿಯ ಹಾದಿ ತೆರೆಯುತ್ತಾ ಎಂಬುದು ಭಾನುವಾರ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ.

ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು. ಭೀಷ್ಮ ದ್ವಾದಶಿ ಮತ್ತು ಭೀಷ್ಮ ಸೇನ ಜಯಂತಿಯ ಶುಭ ದಿನವೂ ಸಹ. ತೊಂಡನೂರಿನಲ್ಲಿ ರಥೋತ್ಸವ ಮತ್ತು ಗೊಂದಾವಲಿ ಬ್ರಹ್ಮ ಚೈತನ್ಯ ಮಹಾರಾಜರ ಜಯಂತೋತ್ಸವ ನಡೆಯಲಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಸಂಬಂಧಗಳು, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾರ್ಗದರ್ಶನ ನೀಡಿದ್ದಾರೆ.

 

 

 

 

Source link

ಜಾಹೀರಾತು ಜಟಾಪಟಿಗೆ ತಿರುಗಿದ ನರೇಗಾ ಯುದ್ಧ: ಅಧಿವೇಶನದಲ್ಲೂ ‘ಗಾಂಧಿ Vs ಸಂಘಪ್ಪ’ ಸಮರ! – Kannada News | Row Over NREGA Advertisement Using Mahatma Gandhi Sparks Heated Debate in Karnataka Assembly

ಬೆಂಗಳೂರು, ಜನವರಿ 30: ಖಾಕಿ ಪ್ಯಾಂಟ್ ಅಥವಾ ಖಾಕಿ ಚಡ್ಡಿ ಮತ್ತು ಬಿಳಿ ಅಂಗಿ ಹಾಕಿದ ವ್ಯಕ್ತಿ ಮಹಾತ್ಮ ಗಾಂಧೀಜಿ (Mahatma Gandhi) ಜೊತೆಗೆ ಸಂಭಾಷಣೆ ಮಾಡುತ್ತಿದ್ದಾರೆ. ಗಾಂಧಿ ಎದುರಿಗಿರುವ ವ್ಯಕ್ತಿಯನ್ನು ಸಂಘಪ್ಪ ಎಂದು ಕರೆಯಲಾಗಿದೆ. ಇಡೀ ಜಾಹಿರಾತಿನಲ್ಲಿ ಮನ್ರೇಗಾ (MNAREGA) ಯೋಜನೆಯನ್ನ ಗಾಂಧೀಜಿ ಸಮರ್ಥಿಸಿಕೊಂಡಂತೆ ಹಾಗೂ ಎದುರಿಗಿರುವ ವ್ಯಕ್ತಿ ಜಿ ರಾಮ್ ಜಿ ಪರವಾಗಿ ಮಾತನಾಡಿದಂತೆ ತೋರಿಸಲಾಗಿದೆ. ಇದೇ ಜಾಹೀರಾತು ಈಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ವಿಧಾನಸಭೆಯೊಳಗೆ (Assembly Session) ಇದೇ ವಿಚಾರಕ್ಕೆ ಭಾರಿ ಮಾತಿನ ಯುದ್ಧವೇ ನಡೆದಿದೆ.

ಶಾಸಕ ಸುರೇಶ್‌ ಕುಮಾರ್‌ ವಿಷಯ ಪ್ರಸ್ತಾಪಿಸಿದರೆ, ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ, ‘ಯಾವ ನಿಯಮ ಉಲ್ಲಂಘನೆ ಆಗಿದೆ ಹೇಳಿ’ ಎಂದು ಸವಾಲು ಹಾಕಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್ ಸುಪ್ರೀಂಕೋರ್ಟ್​​ ಆದೇಶವನ್ನ ಓದಿ, ನಿಯಮ ಉಲ್ಲಂಘನೆ ಆಗಿದೆ ಎಂದಿದ್ದಾರೆ. ಆದರೆ, ಜಾಹೀರಾತಿನಲ್ಲಿ ತೋರಿಸಿರುವ ವ್ಯಕ್ತಿ ಯಾರು ಎಂಬ ಬಗ್ಗೆಯೂ ಭಾರಿ ವಾಕ್ಸಮರ ನಡೆದಿದೆ.

ರಾಜ್ಯ ಸರ್ಕಾರದ ಕಡೆಯಿಂದ ಜಾಹೀರಾತು ನೀಡಿರುವುದಕ್ಕೂ ಬಿಜೆಪಿ ಆಕ್ಷೇಪ ಎತ್ತಿದೆ. ಪಕ್ಷದಿಂದ ಬೇಕಿದ್ದರೆ ಜಾಹಿರಾತು ಕೊಡಿ, ಸರ್ಕಾರದಿಂದ ಕೊಡಬೇಡಿ ಎಂದು ಶಾಸಕ ಸುನಿಲ್ ಕುಮಾರ್ ಗರಂ ಆದರು. ಸುನೀಲ್‌ ಕುಮಾರ್‌ ಮಾತಿಗೆ ಖಡಕ್ ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ, ಈ ಹಿಂದಿನ ಬಿಜೆಪಿ ಸರ್ಕಾರಗಳ ಜಾಹೀರಾತು ನೆನಪಿಸಿದರು.

ಇದನ್ನೂ ಓದಿ: ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಜಾಹೀರಾತು ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮದೇ ಆದ ರೀತಿಯಲ್ಲಿ ನಾವು ಜಾಹೀರಾತು ನೀಡಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಸದ್ಯ ನರೇಗಾ ಮಹಾಯುದ್ಧ ಈಗ ಜಾಹೀರಾತು ಜಟಾಪಟಿಯತ್ತ ತಿರುಗಿದೆ. ಈ ಮಧ್ಯೆ ವಿಶೇಷ ಅಧಿವೇಶನವನ್ನು ಫೆಬ್ರವರಿ ನಾಲ್ಕರವರೆಗೆ ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಆಡಳಿತ ವಿಪಕ್ಷಗಳ ಸಂಘರ್ಷ ಮತ್ತಷ್ಟು ತಾರಕಕ್ಕೆ ಏರುವುದರಲ್ಲಿ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 30ರ ದಿನಭವಿಷ್ಯ

ನೀವು ಯಾರ ಜತೆಗೆ ನಿತ್ಯ ವ್ಯವಹರಿಸುತ್ತೀರೋ ಅಥವಾ ನೀವು ಕೆಲಸ ಮಾಡುವ ಸ್ಥಳವೋ ಬಹಳ ಬುದ್ಧಿವಂತಿಕೆಯಿಂದ ಮಾತನಾಡುತ್ತಾ ಇದ್ದಾರೆ, ನೀವು ಪಡುವ ಶ್ರಮಕ್ಕೆ ಹಾಗೂ ಬರುವ ಫಲಿತಾಂಶಕ್ಕೆ ಇನ್ನೊಂದಿಷ್ಟು ಸ್ಮಾರ್ಟ್ ವರ್ಕ್ ಮಾಡಬೇಕು ಎಂದೇನಾದರೂ ಅನಿಸುತ್ತಾ ಇದ್ದಲ್ಲಿ ‘ಗ್ರೀನ್ ಅವೆಂಚೂರಿಯನ್’ ಧರಿಸಿ. ನಿಮ್ಮಲ್ಲಿ ಆಗುವ ಬದಲಾವಣೆ ಕಂಡು ಬೇರೆಯವರು ಆಶ್ಚರ್ಯಕ್ಕೆ ಒಳಗಾಗುತ್ತಾರೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಯಾರಿಗಾದರೂ ಸಾಲ ನೀಡಿದ್ದಲ್ಲಿ ಒಂದಲ್ಲ ಒಂದು ಕಾರಣ ಕೊಡುತ್ತಾ ವಾಯಿದೆ ಮುಂದಕ್ಕೆ ಹಾಕುತ್ತಾ ಬರುತ್ತಿದ್ದಾರೆ ಎಂದಾದಲ್ಲಿ ಈ ದಿನ ಗಟ್ಟಿಯಾಗಿ ಪ್ರಯತ್ನಿಸಿ. ಸ್ವಲ್ಪ ಗಟ್ಟಿಯಾದ ಧ್ವನಿಯಲ್ಲಿ ಕೇಳಿದರೂ ಅಡ್ಡಿಯಿಲ್ಲ, ಆ ಸಾಲ ವಸೂಲಿ ಆಗುವ ಅವಕಾಶ ಹೆಚ್ಚಿದೆ. ದಿಢೀರ್ ದೂರ ಪ್ರಯಾಣ ಮಾಡಬೇಕಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಉದ್ಯೋಗ ಮಾಡುತ್ತಿದ್ದವರು ಏನಾದರೊಂದು ಕಾರಣಕ್ಕೆ ಕೆಲಸವನ್ನು ಬಿಟ್ಟು, ಗ್ಯಾಪ್ ಬಂದಿದೆ ಎಂದಾದಲ್ಲಿ ಈಗೇನಾದರೂ ಮತ್ತೆ ಪ್ರಯತ್ನ ಮಾಡುತ್ತಾ ಇದ್ದರೆ ಈ ದಿನ ಹೆಚ್ಚು ಪ್ರಯತ್ನವನ್ನು ಮಾಡಿ. ನಿಮಗೆ ಬರುವಂಥ ರೆಫರೆನ್ಸ್ ಗಳನ್ನು ಗಂಭೀರವಾಗಿ ಪರಿಗಣಿಸಿ. ದೀರ್ಘಾವಧಿಗೆ ಸಹಾಯ ಆಗುವಂಥ ಬೆಳವಣಿಗೆಗಳು ಆಗಲಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನನಗೆ ಗೊತ್ತಿರುವ ವಿಚಾರ ಇಷ್ಟೇ ಅಂತ ನೀವೇ ಒಂದು ಕಂಫರ್ಟ್ ಝೋನ್ ಒಳಗೆ ಇದ್ದು ಬಿಟ್ಟಿದ್ದಲ್ಲಿ ಅದರಿಂದ ಹೊರಗೆ ಬರುವಂಥ ದಿನ ಇದಾಗಿರುತ್ತದೆ. ಹೊಸ ಕಾಂಟ್ಯಾಕ್ಟ್ ಗಳು ಸಹಾಯಕ್ಕೆ ಬರುತ್ತವೆ. ಬಹಳ ಸಮಯದಿಂದ ನೀವು ಆಸೆ ಪಟ್ಟಿದಂಥ ವಸ್ತುವೊಂದು ಖರೀದಿ ಮಾಡುವಂಥ ಯೋಗ ಈ ದಿನ ನಿಮಗೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಹಣಕಾಸಿನ ಹರಿವಿನಲ್ಲಿ ಸ್ಥಿರತೆ ಕಾಣುತ್ತಾ ಇಲ್ಲ. ಆದಾಯ ಸಹ ಅಂದುಕೊಳ್ಳುವ ಮಟ್ಟದಲ್ಲಿ ಇಲ್ಲ. ಈ ಕಾರಣಕ್ಕೆ ಕೆಲವು ವ್ಯಾಪಾರ- ವ್ಯವಹಾರದ ಐಡಿಯಾ ಇದ್ದರೂ ಅದನ್ನು ಬಳಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ‘ಓಪಲ್ ಫೈರ್’ ಸ್ಟೋನ್ ಬಳಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಮಾಡಿಕೊಂಡಂಥ ಒಪ್ಪಂದಗಳು ಏರಿಳಿತದ ಆದಾಯ ತರುತ್ತಿದೆ ಎಂಬುದು ನಿಮ್ಮ ಚಿಂತೆಗೆ ಕಾರಣ ಆಗಲಿದೆ. ಚರ್ಮಕ್ಕೆ ಸಂಬಂಧಿಸಿದ ಸಣ್ಣ- ಪುಟ್ಟ ಅಲರ್ಜಿಗಳು ದಿನದ ಮಟ್ಟಿಗೆ ನಿಮ್ಮನ್ನು ಆತಂಕಕ್ಕೆ ದೂಡಬಹುದು. ಸೂಕ್ತ ಔಷಧೋಪಚಾರ ಅಗತ್ಯವಿದೆ ಎಂದೆನಿಸಿದಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಇನ್ ಟ್ಯೂಷನ್ ಈ ದಿನ ಬಹಳ ಚೆನ್ನಾಗಿ ಕೆಲಸ ಮಾಡಲಿದೆ. ಭವಿಷ್ಯದಲ್ಲಿ ನಿಮಗೆ ತೆರೆದುಕೊಳ್ಳಬಹುದಾದ ಅವಕಾಶಗಳ ಸೂಚನೆ ದೊರೆಯಲಿದೆ. ಶಾಲೆ- ಕಾಲೇಜು ಅಥವಾ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ಶುರು ಮಾಡಬೇಕು ಎಂದಿರುವವರಿಗೆ ಅನುಕೂಲಗಳು ಒದಗಲಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನೀವು ಮಾಡುವ ಉದ್ಯೋಗ, ವೃತ್ತಿ ಅಥವಾ ವ್ಯವಹಾರಗಳ ಬಗ್ಗೆ ಹೊಸ ಚಿಂತನೆ ಅಳವಡಿಸಿಕೊಳ್ಳುತ್ತೀರಿ. ನಿಮ್ಮ ಆದಾಯ ಅಥವಾ ಲಾಭಕ್ಕೆ ಅಡೆತಡೆಯಾಗಿ ಇರುವಂಥ ಅಂಶವನ್ನು ಬಗೆಹರಿಸಿಕೊಳ್ಳಲು ಈ ದಿನ ಮಹತ್ತರವಾದ ಹೆಜ್ಜೆಯನ್ನು ಇಡಲಿದ್ದೀರಿ. ಸ್ನೇಹಿತರು- ಸಂಬಂಧಿಗಳ ನೆರವು ದೊರೆಯಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ ಮಾಡಿದಂಥ ಹೂಡಿಕೆಗಳು ಇದ್ದಲ್ಲಿ ಅದರಲ್ಲಿ ಉತ್ತಮ ಲಾಭ ನಿಮ್ಮ ಕೈ ಸೇರಲಿದೆ. ವಿಪರೀತ ಮಾತನಾಡುವ ಸ್ವಭಾವ ನಿಮ್ಮದಾಗಿದ್ದಲ್ಲಿ ಅದರಲ್ಲಿ ಬದಲಾವಣೆ ಮಾಡಿಕೊಳ್ಳಲೇ ಬೇಕು. ಮಕ್ಕಳ ಶಿಕ್ಷಣ ವಿಚಾರ ಚಿಂತೆಗೆ ಕಾರಣ ಆಗಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನೀವೇ ಈ ಹಿಂದೆ ಸ್ನೇಹಿತರಿಗೆ ನೀಡಿದ್ದ ಸಲಹೆ ತಲೆನೋವಾಗಿ ಪರಿಣಮಿಸಲಿದೆ. ಆ ಕಾರಣಕ್ಕೆ ವಿಪರೀತ ದೊಡ್ಡ ಜವಾಬ್ದಾರಿಯೊಂದು ತಲೆ ಮೇಲೆ ಬರಲಿದೆ. ಈ ದಿನ ಪೂರ್ಣ ಮಾಡಲೇಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ. ಎಲ್ಲಿಗೆ ಹೋಗಬೇಕು, ಯಾರನ್ನು ಭೇಟಿ ಆಗಬೇಕು ಎಂಬ ಬಗ್ಗೆ ವೇಳಾಪಟ್ಟಿಯಂತೆ ನಡೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಮನೆಯ ಸ್ವಚ್ಛತಾ ಕೆಲಸಗಳನ್ನು ಮಾಡಿ ಮಗಿಸುವುದು ಮುಖ್ಯವಾಗಿ ಕಂಡುಬರಲಿದೆ. ಮದುವೆಗಾಗಿ ಪ್ರಯತ್ನಿಸುತ್ತಾ ಇರುವ ವಿವಾಹ ವಯಸ್ಕರಿಗೆ ಶುಭವಾ ಬೆಳವಣಿಗೆ ನಿರೀಕ್ಷೆ ಮಾಡಬಹುದು. ದುಬಾರಿ ಶೂ ಅಥವಾ ವಾಚ್ ಖರೀದಿಗೆ ಹೆಚ್ಚಿನ ಹಣವನ್ನು ವೆಚ್ಚ ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಅಂತಾದಲ್ಲಿ ಮನಸ್ಸು ಹತೋಟಿಯಲ್ಲಿ ಇರಲಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 30 January: ಇಂದು ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಕಾಡಲಿದೆ – Kannada News | Horoscope Today: January 30, Friday 2026 Daily Zodiac Predictions and Lucky Signs

ಮೇಷ ರಾಶಿ:

ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು.

ವೃಷಭ ರಾಶಿ:

ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ ನಿಮಗೆ ಅರಿವಿರದು. ಕೃತಜ್ಞತೆಯನ್ನು ಸ್ಮರಿಸಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವಿರಿ.‌ ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ.

ಮಿಥುನ ರಾಶಿ:

ಸಮರ್ಥರ ಜೊತೆ ವಾಗ್ವಾದ ನಡೆಸುವಿರಿ. ವೃತ್ತಿಯಲ್ಲಿ ಸುಲಭದ ಕಾರ್ಯವನ್ನು ನೀವು ಆರಿಸಿಕೊಳ್ಳುವಿರಿ. ಆತ್ಮವಿಶ್ವಾಸದ ಕೊರೆತೆಯು ಕಾಣಿಸುವುದು. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ವಿವಾಹ ಸಂಬಂಧಕ್ಕೆ ನಿಮ್ಮ ಪೂರ್ಣ ಸಹಮತ ಇರದು. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ.

ಕರ್ಕಾಟಕ ರಾಶಿ:

ಭೇದಭಾವವನ್ನು ಮರೆತು ಅಲ್ಪಕಾಲವಾದರು ಬಂಧುಗಳ ಜೊತೆ ಇರಬೇಕಾದೀತು. ಹಠದಿಂದ ಏನನ್ನೂ ಸಾಧಿಸಲಾಗದು ಎಂಬುದು ನಿಮಗೇ ಮನವರಿಕೆಯಾಗಲಿದೆ. ಉದ್ಯೋಗಮಿತ್ರರು ನಿಮ್ಮ ಕಾರ್ಯಗಳಿಗೆ ಸಹಕಾರ ನೀಡುವರು. ಶತ್ರುಗಳು ಸಹಿಸಲಾಗದೇ ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಎಲ್ಲ ಕಡೆ ನೀವೇ ಕಾಣಿಸಿಕೊಳ್ಳಬೇಕು ಎಂಬ ಧೋರಣೆ ಕಾಣಿಸುವುದು.

ಸಿಂಹ ರಾಶಿ:

ಪರರ ಬಗ್ಗೆ ಅನುಕಂಪ ಉಂಟಾಗುವುದು. ಮಾನಸಿಕ ಸ್ಥೈರ್ಯದಿಂದ ಎಲ್ಲ ಕೆಲಸವನ್ನು ಮಾಡಿಕೊಳ್ಳುವಿರಿ. ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾಗುವ ಸಂಭವವಿದೆ. ಸದ್ಯೋ ಭವಿಷ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಎದುರಾಳಿಗಳು ತಯಾರಾಗುವ ಸಾಧ್ಯತೆ ಇದೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು.

ಕನ್ಯಾ ರಾಶಿ:

ಆರೋಗ್ಯದ ರಕ್ಷಣೆಗೆ ಉಳಿತಾಯದ ಬಗ್ಗೆ ಗಮನ ಕೊಡುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರ್ಕಾರಿ ಉದ್ಯೋಗಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಧೈರ್ಯವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ.

ತುಲಾ ರಾಶಿ:

ನಿಮ್ಮ ಒತ್ತಡದ ಸ್ಥಿತಿಯಲ್ಲಿ ಯಾರಾದರೂ ಜೊತೆಗೆ ಬರುವರು. ಆದರೆ ಅದರ ದುರುಪಯೋಗ ಮಾಡಿಕೊಳ್ಳಬಹುದು. ವೃತ್ತಿಯಲ್ಲಿ ಪರಿಣಿತಿಯನ್ನು ಸಾಧಿಸಿಕೊಳ್ಳುವಿರಿ. ಸಹೋದ್ಯೋಗಿಗಳಿಂದ ಒತ್ತಡವು ಬರಬಹುದು. ವಿವಾಹದ‌ ಮಾತುಕತೆಗೆ ಹಿರಿಯರನ್ನು ಮುಂದಿಟ್ಟುಕೊಳ್ಳಬೇಕು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ.

ವೃಶ್ಚಿಕ ರಾಶಿ:

ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಸಹಜ. ದೊಡ್ಡ ಉದ್ದೇಶಕ್ಕೆ ಅದನ್ನು ಗೌಣ ಮಾಡಿಕೊಂಡರೆ ಮಾನಸಿಕ ಆರೋಗ್ಯದಲ್ಲಿ ಚೇತರಿಕೆ. ಹೂಡಿಕೆಯಿಂದ ಲಾಭವು ಸಿಗುವ ನಿರೀಕ್ಷೆಯಲ್ಲಿ ಇರುವಿರಿ. ಅನಿರೀಕ್ಷಿತವಾಗಿ ದೂರಪ್ರಯಾಣ ಮಾಡಬೇಕಾದೀತು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಯೋಜನೆ ಮಾಡಬೇಕು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ.

ಧನು ರಾಶಿ:

ಯಶಸ್ಸಿನ ಅಪೇಕ್ಷೆ ಉಳ್ಳವರು ಮತ್ತೊಬ್ಬರ ಒಳ್ಳೆಯದನ್ನೂ ಕೀರ್ತನೆ ಮಾಡಬೇಕು. ಶೀಘ್ರಫಲಾಪೇಕ್ಷೆಯಿಂದ ಅನಾಹುತವು ಸಂಭವಿಸೀತು. ಗಾಯಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ವಿಷಯಕ್ಕೆ ತಕ್ಕಂತೆ ಮಾತಿನಲ್ಲಿ ಏರಿಳಿತವಿರಲಿ. ಆತ್ಮಸಂತೋಷವು ನಿಮ್ಮ ಕಾರ್ಯಕ್ಕೆ ಇನ್ನಷ್ಟು ಉತ್ಸಾಹವನ್ನು ಕೊಡುವುದು. ಯಾರಿಲ್ಲಿರುವ ನ್ಯೂನತೆಯನ್ನು ಸಹಜವಾಗಿ ಸ್ವೀಕರಿಸುವ ಸ್ವಭಾವ ಉತ್ತಮ.

ಮಕರ ರಾಶಿ:

ಗೌಪ್ಯ ವ್ಯವಹಾರದಲ್ಲಿ ತೊಂದರೆ ಕಾಣಿಸುವುದು. ಮಾಡುವ ಕಾರ್ಯದಲ್ಲಿರುವ ಆರಂಭಶೂರತ್ವವು ಕೊನೆಗೆ ಇರಲಾರದು. ಸಿದ್ಧವಸ್ತುಗಳ ಮಾರಾಟದಿಂದ ಲಾಭವನ್ನು ಕಾಣುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಕೌಶಲವನ್ನು ಕರಗತ ಮಾಡಿಕೊಳ್ಳುವಿರಿ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ.

ಕುಂಭ ರಾಶಿ:

ನಿಮ್ಮ ಉದ್ಯೋಗಕ್ಕೆ ಆರ್ಥಿಕ ಬೆಂಬಲ ಸಿಗದಿದ್ದರೂ ನೈತಿಕ ಬೆಂಬಲ ಸಿಗಲಿದೆ. ಇಂದು ನಿಮ್ಮ ಉದ್ಯಮದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಕಷ್ಟವಾದೀತು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಉತ್ಪನ್ನಗಾರರಿಗೆ ಸಂತೋಷದ ದಿನವು ಇದಾಗಲಿದೆ. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ.

ಮೀನ ರಾಶಿ:

ಇಂದು ನಿಮ್ಮ ಸಂಗಾತಿಯಾಗುವವರ ಜೊತೆ ಹೆಚ್ಚು ಸಮಯ ಕಳೆದು, ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರು. ಆಗಿಹೋದ ಕಾಯಗಳನ್ನು ನೆನೆದುಕೊಂಡು ಸಂತೃಪ್ತಿಪಡುವಿರಿ. ನಿಮಗೆ ನೀಡಿದ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಬಾಂಧವ್ಯವನ್ನು ಬೆಸೆಯಲು ಒಳ್ಳೆಯ ಸನ್ನಿವೇಶ ಸೃಷ್ಟಿಯಾಗುವುದು. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು.

ಜನವರಿ 30,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಐಂದ್ರ, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 21 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:12 – 12:38, ಯಮಗಂಡ ಕಾಲ 15:39- 16:56, ಗುಳಿಕ ಕಾಲ 08:20 – 09:46

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ – Kannada News | Central Govt not allowing screening of Palestinian films: Prakash Raj expresses displeasure

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ, ನಿರ್ಮಾಪಕನಾಗಿ, ವಿತರಕನಾಗಿ ಈಗ ಚಲನಚಿತ್ರೋತ್ಸವದ ರಾಯಭಾರಿ ಆಗಿ ನಿಮ್ಮ ಮುಂದೆ ನಿಂತಿದ್ದೇನೆ. ಒಂದು ಅನುಭವ ಹಂಚಿಕೊಳ್ಳುತ್ತೇನೆ’ ಎಂದು ಪ್ರಕಾಶ್ ರಾಜ್ (Prakash Raj) ಅವರು ಮಾತು ಆರಂಭಿಸಿದರು.

‘ಮೊನ್ನೆ ಒಂದು ಅಂತಾರಾಷ್ಟ್ರೀಯ ಸಾಹಿತ್ಯ ಉತ್ಸವಕ್ಕೆ ಹೋಗಿದ್ದೆ. ಅಲ್ಲಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬಂದರು. ಮಕ್ಕಳು, ಯುವಕರು ಅವರನ್ನು ನೋಡುವ ಕಾತರದಲ್ಲಿ ಇದ್ದರು. ಅವರಿಗೆ ಒಂದು ಮಾತು ಕೇಳಿದೆ. ಮೇಲಿಂದ ಈ ಭೂಮಿ ನೋಡಿದರೆ ಏನು ಎನಿಸುತ್ತದೆ ಅಂತ ಕೇಳಿದೆ. ಅಲ್ಲಿಂದ ಭೂಮಿ ಪುಟ್ಟದು ಎನಿಸುತ್ತದೆ. ಅಲ್ಲಿ ಮನುಷ್ಯರ ಜನಸಂಖ್ಯೆ ಕಡಿಮೆ. ಬೇರೆ ಎಲ್ಲ ಪ್ರಾಣಿಗಳದ್ದು ಈ ಭೂಮಿ. ಆದರೆ ಮನುಷ್ಯರು ಯಾಕೆ ಜಗಳ ಆಡುತ್ತಿದ್ದಾರೆ ಎನಿಸಿತು ಅಂತ ಅವರು ಹೇಳಿದರು’ ಎಂದಿದ್ದಾರೆ ಪ್ರಕಾಶ್ ರಾಜ್.

‘ಮಾನವೀಯ ಬಾಂಧವ್ಯ ಬೆಳೆಯಲು ಈ ರೀತಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳು ಕಾರಣ ಆಗುತ್ತವೆ. ಆದರೆ ಇತ್ತೀಚೆಗೆ ಬೆಂಗಳೂರು ಚಲನಚಿತ್ರೋತ್ಸವದಲ್ಲಿ ರಾಜಕೀಯ ಪ್ರವೇಶ ಮಾಡಿದೆ. ಇದರಿಂದ ಪ್ಯಾಲೆಸ್ತೀನ್ ಸಿನಿಮಾಗಳನ್ನು ಪ್ರದರ್ಶನ ಮಾಡಲು ನಮ್ಮ ಕೇಂದ್ರ ಸರ್ಕಾರ ಬಿಡುತ್ತಿಲ್ಲ. ಮುಖ್ಯಮಂತ್ರಿಗಳಾದ ನೀವು ಇದರ ಬಗ್ಗೆ ಒಂದು ದೊಡ್ಡ ನಿಲುವು ತೆಗೆದುಕೊಳ್ಳಬೇಕು ಅಂತ ರಾಯಭಾರಿಯಾಗಿ ನಾನು ಕೇಳಿಕೊಳ್ಳುತ್ತಿದ್ದೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

‘ನಮ್ಮ ಮಣ್ಣಿನ ಕಥೆಯಾದ ಎದೆಯ ಹಣತೆ ಪುಸ್ತಕ ಬೇರೆ ಭಾಷೆಗೆ ತರ್ಜುಮೆ ಆಗಿ ಬೂಕರ್ ಪ್ರಶಸ್ತಿ ಬಂದರೆ ನಾವು ಸಂಭ್ರಮಿಸುತ್ತೇನೆ. ನಮ್ಮ ನೆಲಕ್ಕೆ ಇನ್ನೊಬ್ಬರ ಕಥೆಯನ್ನು ತರೋಕೆ ಆಗಲ್ಲ ಎಂಬುದನ್ನು ಹೇಗೆ ಒಪ್ಪಿಕೊಳ್ಳೋಕೆ ಸಾಧ್ಯ? ಮೊನ್ನೆ ಕೇರಳದ ಸರ್ಕಾರ ಮುಂದೆ ನಿಂತು, ಪ್ರದರ್ಶನಗಳಿಗೆ ಅನುವು ಮಾಡಿಕೊಟ್ಟಿದೆ. ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ನಿಮ್ಮ ರಾಜಕೀಯ ಹುನ್ನಾರ ನಡೆಯೋದಿಲ್ಲ ಎಂಬುದನ್ನು ಕರ್ನಾಟಕ ಸರ್ಕಾರ, ಚಲನಚಿತ್ರ ಅಕಾಡೆಮಿ ಪ್ರತಿಭಟಿಸಬೇಕು ಅಂತ ನಾನು ರಾಯಭಾರಿಯಾಗಿ ಒತ್ತಾಯಿಸುತ್ತೇನೆ’ ಎಂದಿದ್ದಾರೆ ಪ್ರಕಾಶ್ ರಾಜ್.

ಇದನ್ನೂ ಓದಿ: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ?

‘ನನ್ನ ನೋವುಗಳಿಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ನಮ್ಮ ಕೆನ್ನೆಗೆ ಇದ್ದರೆ ಸಾಲದು. ಇನ್ನೊಬ್ಬರ ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯವನ್ನು ನಮ್ಮ ಕೆನ್ನೆಗಳಿಗೆ ಮಾಡಿಸಿದರೆ ಮಾತ್ರ ನಾವು ಮನುಷ್ಯರು. ನೀವು ಪ್ಯಾಲೆಸ್ತೀನ್ ಸಿನಿಮಾಗಳನ್ನು ಇಲ್ಲಿ ಪ್ರದರ್ಶಿಸೋಕೆ ಬಿಡದೇ ಇದ್ದರೆ ನಾನು ಈ ವೇದಿಕೆಯಲ್ಲಿ ಅಲ್ಲಿನ ನೋವಿನ ಪದ್ಯವನ್ನು ಓದುತ್ತೇನೆ. ಆ ಮೂಲಕ ನನ್ನ ಪ್ರತಿರೋಧ ವ್ಯಕ್ತಪಡಿಸುತ್ತೇನೆ’ ಎಂದು ಪ್ರಕಾಶ್ ರಾಜ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version