Headlines

5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಗಾಜಿಯಾಬಾದ್, ಏಪ್ರಿಲ್ 4: ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 35 ವರ್ಷದ ವ್ಯಕ್ತಿಯ ಮೇಲೆ ಗುರುವಾರ (ಏಪ್ರಿಲ್ 2) ರಾತ್ರಿ ಗಾಜಿಯಾಬಾದ್‌ನ ಮೋದಿನಗರದಲ್ಲಿರುವ ರಸ್ತೆಬದಿಯ ಡಾಬಾ ಹೊರಗೆ 5 ಬಾರಿ ಗುಂಡು (Shootout) ಹಾರಿಸಲಾಗಿತ್ತು. ಇದರಿಂದ ಅವರಿಗೆ ತೀವ್ರ ರಕ್ತಸ್ರಾವವಾಗಿತ್ತು. ಅಷ್ಟಾದರೂ ಆ ವ್ಯಕ್ತಿ ತಾವೇ ಕಾರು ಚಲಾಯಿಸಿಕೊಂಡು ಹೋಗಿ 25 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. 35 ವರ್ಷದ ರಾಹುಲ್ ಚೌಧರಿ 25 ಕಿ.ಮೀ.ಗಿಂತ ದೂರದ ಆಸ್ಪತ್ರೆಗೆ ತಲುಪುವಲ್ಲಿ ಯಶಸ್ವಿಯಾದರು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ…

Read More

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳವೊಂದರಲ್ಲಿ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕಂಡುಬರುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದ ಯುವಕರ ಮೇಲೆ ದಾಳಿ ಮಾಡುತ್ತದೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು…

Read More

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್​​ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್​​ ನೀಡಿದ್ದಾರೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಚೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಚೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಬಹಳಷ್ಟು ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶಗಳೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣ್​​ಬೀರ್ ಕಪೂರ್ (Ranbir Kapoor), ಯಶ್ (Yash) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯುಸಿನೆಸ್ ಅನ್ನು ಸಿನಿಮಾದ…

Read More

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್​​ 04: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ…

Read More

ಬೆಂಗಳೂರಿನಲ್ಲಿ ಮೆಗಾ ಡಿಪೋರ್ಟೇಷನ್ ಆಪರೇಷನ್: ಬರೋಬ್ಬರಿ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು, ಏಪ್ರಿಲ್​ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ (Bangladeshi Illegal Immigrants) ಮೇಲೆ ಸಿಸಿಬಿ ಮತ್ತು ನಗರ ಪೊಲೀಸರು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೆ ಬರೋಬ್ಬರಿ 272 ಜನರನ್ನು ಬೆಂಗಳೂರಿನಿಂದ ಯಶಸ್ವಿಯಾಗಿ ಗಡಿಪಾರು ಮಾಡಲಾಗಿದೆ. 272 ಜನರ ಗಡಿಪಾರು  ಮಾರ್ಚ್ ಮೊದಲ ವಾರದಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಐವರು ಬಾಂಗ್ಲಾ ಮೂಲದ ಉಗ್ರರ ಬಂಧನದ ಬೆನ್ನಲ್ಲೇ ದೇಶದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸೂಚಿಸಲಾಗಿತ್ತು. ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ…

Read More

ಮೊಮ್ಮಗನ ಅಜಾಗರೂಕತೆಗೆ ಬಲಿಯಾದ ಅಜ್ಜಿ: ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ

ಫರೂಕಾಬಾದ್, ಏ.4: ಉತ್ತರ ಪ್ರದೇಶದ ಮಸೈನಿಯಲ್ಲಿ ನಡೆದ ಘಟನೆಯೊಂದು ಯಾರಿಗಾದರೂ ಎದೆ ನಡುಗಿಸುವಂತಿದೆ. ಮನೆಯೊಳಗೆ ಥಾರ್ (Thar) ವಾಹನವನ್ನು ಪಾರ್ಕ್ ಮಾಡುವ ಸಂದರ್ಭದಲ್ಲಿ ನಡೆದ ಸಣ್ಣ ತಪ್ಪು ಒಬ್ಬ ವೃದ್ಧೆಯ ಪ್ರಾಣವನ್ನೇ ಬಲಿಪಡೆದಿದೆ. ಮನೆಯ ಆವರಣದೊಳಗೆ ಥಾರ್ ವಾಹನವನ್ನು ಪಾರ್ಕ್ ಮಾಡುವಾಗ ಈ ಘಟನೆ ಸಂಭವಿಸಿದೆ. ಚಾಲನೆ ಮಾಡುತ್ತಿದ್ದ ಮೊಮ್ಮಗ ಅಜಾಗರೂಕತೆಯಿಂದ ವಾಹನವನ್ನು ಒಮ್ಮೆಗೆ ರಿವರ್ಸ್ ಗೇರ್ ಹಾಕಿದ್ದಾನೆ. ಈ ವೇಳೆ ಮನೆಯ ಗೇಟ್ ಹಾಕಲು ಬಂದಿದ್ದ ವೃದ್ಧೆ, ವೇಗವಾಗಿ ಬಂದ ವಾಹನ ಮತ್ತು ಗೋಡೆಯ ನಡುವೆ…

Read More

Recruitment 2026: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R.A.D.C.L) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಪ್ರಸ್ತುತ ಕಾನೂನು ಸಲಹೆಗಾರರು (Legal Advisor) ಮತ್ತು ಕಂಪನಿ ಕಾರ್ಯದರ್ಶಿ (Company Secretary) ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿ ಅಭಿಯಾನದ ಮೂಲಕ…

Read More

ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ವಾಷಿಂಗ್ಟನ್, ಏ.4: ದಶಕಗಳ ಕಾಲದ ಹುಡುಕಾಟ, ಕಳೆದು ಹೋದ ಹುಡುಗಿ ಮತ್ತೆ ಸಿಗುತ್ತಾಳೆ ಎಂಬ ಭರವಸೆ, ನಿರಂತರ ಅನಿಶ್ಚಿತತೆಯ ನಂತರ ಅಮೆರಿಕದಲ್ಲಿ ಒಂದು ದೊಡ್ಡ ಪವಾಡ ನಡೆದಿದೆ. 13 ವರ್ಷದವಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಮೂರು ದಶಕಗಳ (30 ವರ್ಷ) ನಂತರ ಜೀವಂತವಾಗಿ ಪತ್ತೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇದೀಗ ಈ ವಿಚಾರ ಭಾರೀ ವೈರಲ್​ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಅಂದರೆ ಮೇ 1994 ರಲ್ಲಿ ಈ ಬಾಲಕಿ ತನ್ನ ಮನೆಯ ಸಮೀಪದಿಂದಲೇ ಕುದುರೆ…

Read More

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ: ಆರೋಪಿಗಳ ವಿರುದ್ಧ ಕೇಸ್​​ ದಾಖಲು

ಕಾರವಾರ, ಏಪ್ರಿಲ್​​ 03: ಕೊಟ್ಟ ಹಣ ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರನ್ನು ಗ್ಯಾಂಗ್​​ ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನೆಹರು ನಗರದಲ್ಲಿ ನಡೆದಿದೆ. ಯಲ್ಲಾಪುರದ ಮಹಿಳೆಯರಾದ ಆಯಿಷಾ ಮತ್ತು ಗೀತಾ ಎಂಬವರ ಮೇಲೆ ಮೊಹ್ಮದ್ ಸಲ್ಮಾನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಗ್ಯಾಂಗ್​​ ಮಹಿಳೆಯರ ಖಾಸಗಿ ಭಾಗದ ಮೇಲೆ ಅಟ್ಯಾಕ್​​ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ…

Read More