ಒಂದೇ ಸಿನಿಮಾ ಮಾಡಿದ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್ – Kannada News

ಸೂಪರ್ ಸ್ಟಾರ್ ರಜನಿಕಾಂತ್ ಅವರ (Rajinikanth) ಮುಂದಿನ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ನಿರ್ದೇಶಕರು ಯಾರು ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ಸಿನಿರಂಗದಲ್ಲಿ ಭಾರಿ ಚರ್ಚೆ ಆಗಿತ್ತು. ಹಲವು ದೊಡ್ಡ ನಿರ್ದೇಶಕರ ಹೆಸರುಗಳು ಈ ಪ್ರಾಜೆಕ್ಟ್ ಜೊತೆ ಕೇಳಿಬರುತ್ತಿದ್ದವು. ಆದರೆ, ಈಗ ಈ ಎಲ್ಲಾ ಚರ್ಚೆ ಮತ್ತು ಸಸ್ಪೆನ್ಸ್‌ಗಳಿಗೆ ಚಿತ್ರತಂಡ ಅಧಿಕೃತವಾಗಿ ತೆರೆ ಎಳೆದಿದ್ದು, ಚಿತ್ರದ ಹೊಸ ಸಾರಥಿಯನ್ನು ಅದ್ಧೂರಿಯಾಗಿ ಪರಿಚಯಿಸಿದೆ.

ರಜನಿಕಾಂತ್ ಅವರ 173ನೇ ಸಿನಿಮಾವನ್ನು ಕಮಲ್ ಹಾಸನ್ ಅವರು ‘ರಾಜ್ ಕಮಲ್ ಫಿಲ್ಮ್ಸ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಯುವ ಹಾಗೂ ಪ್ರತಿಭಾವಂತ ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರು ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಈಗ ಬಹಿರಂಗವಾಗಿದೆ. ಈ ಹಿಂದೆ ‘ಓ ಮೈ ಕಡವಲೆ’ ಹೆಸರಿನ ಹಿಟ್ ಸಿನಿಮಾ ನೀಡಿದ್ದ ಅಶ್ವಥ್ ಮಾರಿಮುತ್ತು, ಈಗ ರಜನಿಕಾಂತ್-ಕಮಲ್ ಹಾಸನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಸುವರ್ಣ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

‘ರಾಜ್ ಕಮಲ್ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಒಂದು ವಿಶೇಷ ವಿಡಿಯೋ ಗುಟ್ಟನ್ನು ರಟ್ಟು ಮಾಡಿದೆ. ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರ ಜನ್ಮದಿನದ ಅಂಗವಾಗಿ ಚಿತ್ರತಂಡ ವಿಶೇಷ ಬರ್ತ್‌ಡೇ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋವನ್ನು ಈ ಹಿಂದೆ ಬಿಡುಗಡೆಯಾಗಿದ್ದ ‘ತಲೈವರ್ 173’ ಚಿತ್ರದ ಪ್ರಮೋ ಶೈಲಿಯಲ್ಲೇ ವಿನ್ಯಾಸಗೊಳಿಸಲಾಗಿದೆ. ಇದು ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದ್ದಂತೆ, ಚಿತ್ರದ ಚುಕ್ಕಾಣಿ ಹಿಡಿದಿರುವುದು ಅಶ್ವಥ್ ಅವರೇ ಎಂಬುದು ಅಭಿಮಾನಿಗಳಿಗೆ ಖಾತ್ರಿಯಾಗಿದೆ.

ಇದನ್ನೂ ಓದಿ: ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಈ ಹಿಂದೆ ಈ ಚಿತ್ರಕ್ಕೆ ಸಿ. ಸುಂದರ್ ನಿರ್ದೇಶನ ಮಾಡಬೇಕಿತ್ತು. ಅವರು ಸಿನಿಮಾದಿಂದ ಹೊರ ಹೋಗಿದ್ದಾರೆ. ಆದರೆ ಈಗ ನಡೆದಿರುವ ಈ ಬದಲಾವಣೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ತಲೈವರ್ ಹೊಸ ಅವತಾರದಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಈಗ ಪ್ರೇಕ್ಷಕರಲ್ಲಿ ಮನೆಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಸಿಸಿಯಿಂದ ಕ್ರಿಕೆಟ್ ಕೆನಡಾ ಸದಸ್ಯತ್ವ ಅಮಾನತು! – Kannada News

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕ್ರಿಕೆಟ್ ಕೆನಡಾ (Cricket Canada) ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಕೆನಡಾ ಕ್ರಿಕೆಟ್ ಮಂಡಳಿಯ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರದ ಆರೋಪಗಳು ಹಾಗೂ ನಿಯಮಾವಳಿಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ.

ಮೇ 31 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ಕೆನಡಾ ಕ್ರಿಕೆಟ್ ಮಂಡಳಿಯನ್ನು ಅಮಾನಲ್ಲಿಡಲಾಗಿದೆ. ಇದಕ್ಕೆ ಐಸಿಸಿ ನೀಡಿರುವ ಕಾರಣಗಳು ಈ ಕೆಳಗಿನಂತಿವೆ…

ಫಿಕ್ಸಿಂಗ್ ಆರೋಪ: ಕೆನಡಾದ ರಾಷ್ಟ್ರೀಯ ಮಾಧ್ಯಮವಾದ ಸಿಬಿಸಿ (CBC) ಪ್ರಸಾರ ಮಾಡಿದ ತನಿಖಾ ವರದಿಯಲ್ಲಿ ಕ್ರಿಕೆಟ್ ಕೆನಡಾ ಮಂಡಳಿಯ ಅಧಿಕಾರಿಗಳು ಭ್ರಷ್ಟಾಚಾರ ಮತ್ತು ಪಂದ್ಯದ ಫಲಿತಾಂಶ ಬದಲಿಸುವ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಆಯ್ಕೆಯಲ್ಲಿ ಹಸ್ತಕ್ಷೇಪ: ಇತ್ತೀಚೆಗೆ ಕೆನಡಾ ಮಾಜಿ ಮುಖ್ಯ ಕೋಚ್ ಖುರ್ರಮ್ ಚೋಹನ್ ಅವರ ಆಡಿಯೋ ಕ್ಲಿಪ್‌ ಒಂದು ಸೋರಿಕೆಯಾಗಿತ್ತು. ಅದರಲ್ಲಿ ಅಧಿಕಾರಿಗಳು ಬಲವಂತವಾಗಿ ತಂಡದ ಆಯ್ಕೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಐಸಿಸಿಯ ಭ್ರಷ್ಟಾಚಾರ ನಿಗ್ರಹ ದಳ (ACU) ತನಿಖೆಯನ್ನೂ ಕೂಡ ನಡೆಸಿದ್ದರು.

ಆರ್ಥಿಕ ಅಶಿಸ್ತು: ಕೆನಡಾ ಕ್ರಿಕೆಟ್ ಮಂಡಳಿಯು ತನ್ನ ಹಣಕಾಸು ವರದಿಗಳಲ್ಲಿ ಪಾರದರ್ಶಕತೆಯನ್ನು ಪಾಲಿಸಿಲ್ಲ.  ಹೀಗಾಗಿ ಕೆನಡಾ ಕ್ರೀಡಾ ಸಚಿವಾಲಯ ಮತ್ತು ಐಸಿಸಿ ಕೆನಾಡ ಕ್ರಿಕೆಟ್​ ಮಂಡಳಿಗೆ ನೀಡುತ್ತಿದ್ದ ಅನುದಾನವನ್ನು ತಡೆಹಿಡಿದಿದ್ದವು.

ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಇದೀಗ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಕೆನಡಾ ಕ್ರಿಕೆಟ್ ಮಂಡಳಿಯ ಸದಸ್ಯತ್ವವನ್ನು ಅಮಾನತಿನಲ್ಲಿಟ್ಟಿದೆ.

ಆಟಗಾರರಿಗೆ ಐಸಿಸಿ ಅಭಯ:

ಕೆನಡಾ ಕ್ರಿಕೆಟ್ ಮಂಡಳಿಯನ್ನು ಸದಸ್ಯತ್ವವನ್ನು ಅಮಾನತುಗೊಳಿಸಿದರೂ, ಐಸಿಸಿ ಕೆನಡಾ ತಂಡದ ಆಟಗಾರರಿಗೆ ಅಭಯಹಸ್ತ ಚಾಚಿದ್ದಾರೆ. ಅಂದರೆ ಯಾವುದೇ ಆತಂಕವಿಲ್ಲದೇ ಕ್ರಿಕೆಟ್​ನಲ್ಲಿ ಮುಂದುವರೆಯಬಹುದು ಎಂದು ತಿಳಿಸಲಾಗಿದೆ.

ಅದರಂತೆ ಕೆನಡಾದ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ತಂಡಗಳು ಎಂದಿನಂತೆ ಐಸಿಸಿ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಅವಕಾಶ ನೀಡುವುದಾಗಿ ತಿಳಿಸಲಾಗಿದೆ.

ಹಾಗೆಯೇ ಈ ಪಂದ್ಯಗಳ ಮತ್ತು ಪ್ರವಾಸದ ವೆಚ್ಚಗಳಿಗೆ ಐಸಿಸಿ ನೇರವಾಗಿ ಹಣಕಾಸಿನ ನೆರವು ನೀಡಲಿದ್ದು, ಈ ಮೂಲಕ ಕೆನಡಾ ತಂಡವನ್ನು ಮುಂದುವರೆಸಲು ನಿರ್ಧರಿಸಲಾಗಿದೆ.

ಐಸಿಸಿಯ ಮುಂದಿನ ನಡೆಯೇನು?

ಸದ್ಯ ಕೆನಡಾ ಕ್ರಿಕೆಟ್ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಐಸಿಸಿ, ಅಲ್ಲಿನ ಕ್ರಿಕೆಟ್ ವ್ಯವಸ್ಥೆಯನ್ನು ಸುಧಾರಿಸಲು ಶೀಘ್ರದಲ್ಲೇ  ‘ನಾರ್ಮಲೈಸೇಶನ್ ಕಮಿಟಿ’ ಯನ್ನು ನೇಮಿಸಲಿದೆ. ಅದರಂತೆ ‘ನಾರ್ಮಲೈಸೇಶನ್ ಕಮಿಟಿ’  ನೆರವಿನೊಂದಿಗೆ ಕೆನಡಾದಲ್ಲಿ ಕ್ರಿಕೆಟ್ ಆಡಳಿತ ಮುಂದುವರೆಯಲಿದೆ.

ಇದನ್ನೂ ಓದಿ: ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..!

ಅಲ್ಲದೆ ಐಸಿಸಿ ನೀಡಿರುವ ಎಲ್ಲಾ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದ ನಂತರವಷ್ಟೇ ಕೆನಡಾ ಕ್ರಿಕೆಟ್ ಮಂಡಳಿಯ ಅಮಾನತನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸುವುದಾಗಿ ಐಸಿಸಿ ತಿಳಿಸಿದೆ.

Published On – 1:06 pm, Tue, 2 June 26

Source link

ಡಿಕೆ ಶಿವಕುಮಾರ್ ಸಂಪುಟಕ್ಕೆ ಹೈಕಮಾಂಡ್‌ನಿಂದ ‘ಏಜ್ ಬೇಸ್ಡ್ ಫಾರ್ಮುಲಾ’: ಸಚಿವಾಕಾಂಕ್ಷಿಗಳಲ್ಲಿ ಢವಢವ – Kannada News

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9

ನವದೆಹಲಿ, ಜೂನ್ 2: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ಸ್ವೀಕರಿಸಲಿರುವ ಬೆನ್ನಲ್ಲೇ, ದೆಹಲಿಯಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಂತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಪ್ರತ್ಯೇಕ ಪಟ್ಟಿ ನೀಡಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ, ಆಕಾಂಕ್ಷಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ದಿಢೀರ್ ಬಿಗ್ ಶಾಕ್ ನೀಡಿದೆ. ಸಂಪುಟದಲ್ಲಿ ಯುವಕರು ಮತ್ತು ಹಿರಿಯ ನಾಯಕರ ನಡುವೆ ಸಮತೋಲನ ಕಾಯ್ದುಕೊಳ್ಳಲು ದೆಹಲಿ ನಾಯಕರು ಈ ಬಾರಿ ‘ಏಜ್ ಬೇಸ್ಡ್ ಫಾರ್ಮುಲಾ (ವಯೋಮಿತಿ ಆಧಾರಿತ ಸೂತ್ರ)’ ಎಂಬ ಹೊಸ ಸೂತ್ರವನ್ನು ಜಾರಿಗೆ ತಂದಿದ್ದಾರೆ.

ಮುಖ್ಯಾಂಶಗಳು

  • ಸಂಪುಟದಲ್ಲಿ ಯುವಕರು ಹಾಗೂ ಹಿರಿಯ ನಾಯಕರ ಬ್ಯಾಲೆನ್ಸ್​ಗೆ ಪ್ಲಾನ್.
  • ಹೈಕಮಾಂಡ್‌ನಿಂದ ಹೊಸ ವಯೋಮಿತಿ ಸೂತ್ರ.
  • 40 ವರ್ಷದೊಳಗಿನ ಯುವ ಶಾಸಕರಿಗೆ ಒಟ್ಟು 10 ಸಂಪುಟ ಸ್ಥಾನಗಳು ಹಾಗೂ ಹಿರಿಯರಿಗೆ 20 ಸ್ಥಾನಗಳನ್ನು ಮೀಸಲಿಡಲು ಪ್ಲ್ಯಾನ್.

ನಾಯಕರಲ್ಲಿ ಶುರುವಾದ ನಡುಕ, ಬಿರುಸಾದ ಲೆಕ್ಕಾಚಾರ

ಹೈಕಮಾಂಡ್‌ನ ಈ ಹೊಸ ಲೆಕ್ಕಾಚಾರದ ಪ್ರಕಾರ, 40 ವರ್ಷದೊಳಗಿನ ಯುವ ಶಾಸಕರಿಗೆ ಸಂಪುಟದಲ್ಲಿ 10 ಸ್ಥಾನಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ. ಇನ್ನು 50 ರಿಂದ 70 ವರ್ಷದೊಳಗಿನ ಹಿರಿಯ ಮತ್ತು ಅನುಭವಿ ಶಾಸಕರಿಗೆ 20 ಸ್ಥಾನಗಳನ್ನು ನೀಡಲು ವರಿಷ್ಠರು ಮುಂದಾಗಿದ್ದಾರೆ. ಈ ದಿಢೀರ್ ಸೂತ್ರದಿಂದಾಗಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ದೆಹಲಿಗೆ ದಂಡಯಾತ್ರೆ ನಡೆಸಿ ಬೀಡುಬಿಟ್ಟಿರುವ ಅನೇಕ ಮಧ್ಯ ವಯಸ್ಕ ಹಾಗೂ ಹಿರಿಯ ಆಕಾಂಕ್ಷಿಗಳಲ್ಲಿ ತೀವ್ರ ಆತಂಕ ಶುರುವಾಗಿದೆ.

ಇದನ್ನೂ ಓದಿ: ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!

ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್ ಅವರಂತಹ ಹಿರಿಯರ ಹೆಸರಿನ ಜೊತೆಗೆ ಯುವ ಶಾಸಕರಾದ ಪ್ರದೀಪ್ ಈಶ್ವರ್, ಯತೀಂದ್ರ ಸಿದ್ದರಾಮಯ್ಯ ಮುಂತಾದವರಿಗೂ ಮಂತ್ರಿಭಾಗ್ಯ ಒಲಿಯುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಈ ಹೊಸ ಸೂತ್ರದ ಬೆನ್ನಲ್ಲೇ ಯಾರಿಗೆ ಸ್ಥಾನ ಸಿಗಲಿದೆ, ಯಾರು ಕೈಬಿಡಲಿದ್ದಾರೆ ಎಂಬ ಹೊಸ ಲೆಕ್ಕಾಚಾರ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ರಾಹಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ! – Kannada News

ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ!
Image Credit source: gettyimages.com

ಬೆಂಗಳೂರು, ಜೂನ್ 02: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದರೂ, ಸಿಲಿಕಾನ್ ಸಿಟಿ ಬೆಂಗಳೂರಿನ ಗ್ರಾಹಕರಿಗೆ ಸದ್ಯಕ್ಕೆ ಯಾವುದೇ ಬೆಲೆ ಏರಿಕೆಯ ಬಿಸಿ ತಟ್ಟುವುದಿಲ್ಲ. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾಗಿದ್ದರೂ ಸಹ ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್‌ಗಳ ಮೆನು ದರವನ್ನು ಸದ್ಯಕ್ಕೆ ಪರಿಷ್ಕರಿಸದಿರಲು ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ.

ಮುಖ್ಯಾಂಶಗಳು

  • ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾದರೂ ಹೋಟೆಲ್ ದರ ಹೆಚ್ಚಳವಿಲ್ಲ.
  • ಗ್ರಾಹಕರಿಗೆ ಹೊರೆಯಾಗದಂತೆ ಹಳೆಯ ದರದಲ್ಲೇ ಮುಂದುವರಿಯಲು ಹೋಟೆಲ್ ಸಂಘದ ತೀರ್ಮಾನ.
  • ಮುಂದಿನ ದಿನಗಳಲ್ಲಿ ದಿನಸಿ ದರ ಹೆಚ್ಚಾದರೆ ಬೆಲೆ ಏರಿಕೆ ಅನಿವಾರ್ಯ.

ಸದ್ಯಕ್ಕೆ ಬೆಲೆ ಏರಿಕೆ ಮಾಡದಿರಲು ಕಾರಣಗಳೇನು?

ಬೆಂಗಳೂರು ಹೋಟೆಲ್‌ಗಳ ಸಂಘದ ಪದಾಧಿಕಾರಿಗಳ ಪ್ರಕಾರ, ಸಿಲಿಂಡರ್ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚವನ್ನು ಹೆಚ್ಚಿಸುವುದು ನಿಜ. ಆದರೆ, ಪದೇ ಪದೇ ಹೋಟೆಲ್ ತಿಂಡಿ-ಊಟದ ದರವನ್ನು ಹೆಚ್ಚಿಸಿದರೆ ಗ್ರಾಹಕರು ಹೋಟೆಲ್‌ಗಳಿಂದ ದೂರ ಸರಿಯುವ ಸಾಧ್ಯತೆ ಇರುತ್ತದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಮಧ್ಯಮ ವರ್ಗದ ಜನರಿಗೆ ಮತ್ತಷ್ಟು ಹೊರೆ ನೀಡಲು ಹೋಟೆಲ್ ಮಾಲೀಕರು ಇಷ್ಟಪಡುತ್ತಿಲ್ಲ. ಸದ್ಯಕ್ಕೆ ಪರಿಸ್ಥಿತಿಯನ್ನು ಅವಲೋಕಿಸಿ, ಲಾಭದ ಪ್ರಮಾಣವನ್ನು ಕೊಂಚ ಕಡಿತಗೊಳಿಸಿಕೊಂಡಾದರೂ ಹಳೆಯ ದರದಲ್ಲೇ ಉದ್ಯಮ ಮುಂದುವರಿಸಲು ತೀರ್ಮಾನಿಸಲಾಗಿದೆ.

ಹೋಟೆಲ್ ಉದ್ಯಮಿಗಳ ಮುಂದಿನ ನಡೆ

ಹೋಟೆಲ್ ಮಾಲೀಕರು ಸದ್ಯಕ್ಕೆ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಿದ್ದರೂ, ಸರ್ಕಾರದ ಧೋರಣೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಮೇಲಿನ ತೆರಿಗೆ ಮತ್ತು ಸತತ ದರ ಏರಿಕೆಯು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಊಟ-ತಿಂಡಿ ದರವೂ ಹೆಚ್ಚಾಗುತ್ತಾ? ಹೋಟೆಲ್ ಮಾಲೀಕರು ಏನಂತಾರೆ ನೋಡಿ

ಒಂದು ವೇಳೆ ಮುಂದಿನ ದಿನಗಳಲ್ಲಿ ಹಾಲಿನ ದರ, ತರಕಾರಿ ಹಾಗೂ ಇತರೆ ದಿನಸಿ ಪದಾರ್ಥಗಳ ಬೆಲೆಗಳೂ ಸಹ ಗಣನೀಯವಾಗಿ ಏರಿಕೆಯಾದರೆ, ಅನಿವಾರ್ಯವಾಗಿ ಮೆನು ದರವನ್ನು ಶೇ 5 ರಿಂದ 10ರಷ್ಟು ಹೆಚ್ಚಿಸಬೇಕಾಗಬಹುದು ಎಂದು ಹೋಟೆಲ್ ಸಂಘಟನೆಗಳು ಮುನ್ಸೂಚನೆ ನೀಡಿವೆ. ಅಲ್ಲಿಯವರೆಗೆ ಬೆಂಗಳೂರಿನ ಜನಪ್ರಿಯ ದೋಸೆ, ಇಡ್ಲಿ, ಕಾಫಿ ಮತ್ತು ಊಟದ ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಾನು, ಎಂಜಿಆರ್​ ಗಿಂತಲೂ ಗ್ರೇಟ್ ಎಂದರೇ ವಿಜಯ್: ಹೇಳಿದ್ದೇನು?

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ಇತಿಹಾಸ ಬರೆದಿದ್ದಾರೆ. ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಅವರಿಗೆ ವಿಜಯ್ ಧಕ್ಕಿದೆ. ಸಿಎಂ ಆದಬಳಿಕವೂ ಕೆಲ ಒಳ್ಳೆಯ ನಿರ್ಣಯಗಳನ್ನು ತೆಗೆದುಕೊಂಡು ಮೆಚ್ಚುಗೆ ಗಳಿಸಿಕೊಳ್ಳುತ್ತಿದ್ದಾರೆ. ವಿಜಯ್ ತಮ್ಮ ವಿನಯತೆ, ಗಾಂಭೀರ್ಯತೆಯಿಂದಲೂ ಗಮನ ಸೆಳೆಯುತ್ತಿದ್ದಾರೆ. ಇದೆಲ್ಲ ಇರುವಾಗ ಇದೀಗ ವಿಜಯ್ ನೀಡಿರುವ ಹೇಳಿಕೆ ಖುದ್ದು ಅವರ ಅಭಿಮಾನಿಗಳಿಗೇ ಇರುಸು-ಮುರುಸು ಉಂಟು ಮಾಡಿದೆ. ವಿನಯದಿಂದ ವರ್ತಿಸುವ ವಿಜಯ್, ತಮ್ಮನ್ನು ತಮಿಳು ಚಿತ್ರರಂಗದ ದಿಗ್ಗಜ, ಎಂಜಿಆರ್​​ ಜೊತೆಗೆ ಹೋಲಿಸಿಕೊಂಡಿರುವುದು ಮಾತ್ರವಲ್ಲ, ಪರೋಕ್ಷವಾಗಿ ತಾವು ಎಂಜಿಆರ್​​ಗಿಂತಲೂ ಗ್ರೇಟ್ ಎಂದಿದ್ದಾರೆ.

ಮುಖ್ಯಮಂತ್ರಿ ವಿಜಯ್ ಸಿಎಂ ಆದ ಬಳಿಕ ನಿನ್ನೆ (ಸೋಮವಾರ) ತಿರುಚಿರಾಪಳ್ಳಿಯಲ್ಲಿ ತಮ್ಮ ಮೊದಲ ಸಾರ್ವಜನಿಕ ರ್‍ಯಾಲಿ ನಡೆಸಿದರು. ಅಲ್ಲಿ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಗೆಲ್ಲಿಸಿದ್ದಕ್ಕೆ ಜನರಿಗೆ ಧನ್ಯವಾದ ಅರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ವಿರೋಧಿಗಳ ಲೇವಡಿ ಮಾಡಿದರು. ವಿರೋಧಿಗಳು ಮೊದಲ ಆರು ತಿಂಗಳು ಪರಿಸ್ಥಿತಿಯನ್ನು ಗಮನಿಸುವುದಾಗಿ ಹೇಳಿದ್ದರು, ಆದರೆ ಅವರಿಂದ 6 ದಿನಗಳೂ ಸಹ ಸುಮ್ಮನಿರಲು ಸಾಧ್ಯವಾಗಲಿಲ್ಲ ಎಂದು ಅವರು ಪರೋಕ್ಷವಾಗಿ ಮಾಜಿ ಸಿಎಂ ಸ್ಟಾಲಿನ್ ಅವರಿಗೆ ಟಾಂಗ್ ನೀಡಿದರು.

ತಮಿಳುನಾಡು ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ ಅವರು, ‘ದಿವಂಗತ, ಮಾಜಿ ಸಿಎಂ ಎಂಜಿಆರ್ ಕೂಡ ತಮ್ಮ ಮೊದಲ ಚುನಾವಣೆಯಲ್ಲಿ ಇಷ್ಟೊಂದು ಮತಗಳನ್ನು ಪಡೆದಿರಲಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಆದರೂ ಇಂದು ನೀವು ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಇಷ್ಟೊಂದು ಭಾರಿ ಬೆಂಬಲವನ್ನು ನೀಡಿದ್ದೀರಿ. ನಾನು ನನ್ನನ್ನು ಎಂಜಿಆರ್ ಅವರಿಗೆ ಹೋಲಿಸಿಕೊಳ್ಳುತ್ತಿಲ್ಲ. ಎಂಜಿಆರ್; ಎಂಜಿಆರ್ ಅವರೇ, ಆದರೆ ನಾನು ನಿಮ್ಮ ವಿಜಯ್. ಎಂಜಿಆರ್, ಅಣ್ಣಾ ಮತ್ತು ಪೆರಿಯಾರ್ ಅವರು ತೋರಿಸಿದ ಹಾದಿಯಲ್ಲಿ ಕೆಲಸ ಮಾಡಲು ನಾನು ಬಂದಿದ್ದೇನೆ’ ಎಂದರು.

ಇದನ್ನೂ ಓದಿ:ಸೂಟು-ಬೂಟು ಧರಿಸುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ವಿಜಯ್; ಕಾರಣ ಬೇರೆಯೇ ಇದೆ

ಎಂಜಿಆರ್ ಅವರು ಜೂನ್ 30, 1977 ರಿಂದ ಡಿಸೆಂಬರ್ 24, 1987 ರಲ್ಲಿ ತಮ್ಮ ನಿಧನದವರೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಭಾರತದಲ್ಲಿ ಮುಖ್ಯಮಂತ್ರಿಯಾದ ಮೊದಲ ಚಲನಚಿತ್ರ ನಟರಾಗಿದ್ದರು. ದಕ್ಷಿಣದಲ್ಲಿ ಸಿನಿಮಾ ನಟರು ಚುನಾವಣೆಗೆ ಧುಮುಕುವ ಪದ್ಧತಿಗೆ ಚಾಲನೆ ಕೊಟ್ಟವರು ಅವರೇ.

ಕಳೆದ ತಿಂಗಳು ನಡೆದ ತಮಿಳುನಾಡು ಚುನಾವಣೆ ಮತ ಎಣಿಕೆಯಲ್ಲಿ, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ರಾಜಕೀಯ ಮೈಲಿಗಲ್ಲು ಸೃಷ್ಟಿಸಿ ಸರ್ಕಾರವನ್ನು ರಚಿಸಿತು. ಈ ಚುನಾವಣೆಯಲ್ಲಿ ಟಿವಿಕೆ ನಾಯಕ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡರಲ್ಲೂ ಜಯ ದಾಖಲಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಿಢೀರ್​​ ಜಮೀರ್​ ಅಹ್ಮದ್​​ ಭೆಟಿಯಾದ ಡಿ.ಕೆ. ಸುರೇಶ್​​: ಕಾರಣ ಏನೆಂಬುದೇ ಕುತೂಹಲ – Kannada News

ಬೆಂಗಳೂರು, ಜೂನ್​​ 02: ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಹೋದರ ಡಿ.ಕೆ. ಸುರೇಶ್ ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಮೀರ್ ಅಹ್ಮದ್ ಉಪಮುಖ್ಯಮಂತ್ರಿ (DyCM) ಮತ್ತು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ನಡುವೆ ಇತ್ತೀಚೆಗೆ ದಾವಣಗೆರೆ ದಕ್ಷಿಣ ಉಪಚುನಾವಣೆ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ‘ಹೇಗಿದ್ದೀರಾ?’ ಎಂದು ಜೈಶಂಕರ್ ಅವರ ಕ್ಷೇಮ ಸಮಾಚಾರ ವಿಚಾರಿಸಿದ ಸಿದ್ದರಾಮಯ್ಯ, ಕೆಲ ಕ್ಷಣಗಳ ಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! – Kannada News

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ!

ಬೆಂಗಳೂರು, ಜೂನ್ 02: ನಗರದಲ್ಲಿ ರಾಜ್ಯಪಾಲರ (Governor) ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದ ಯುವಕನ ಪ್ರಕರಣ ಇದೀಗ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆ ಮತ್ತು ವಿಚಾರಣೆಯ ವೇಳೆ ಪ್ರತಿಭಟನೆ ನಡೆಸಿದ ವ್ಯಕ್ತಿ ಸಾರ್ವಜನಿಕವಾಗಿ ಹೈಡ್ರಾಮಾ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ಕಾರಿನಲ್ಲಿ ಆ ಸಮಯದಲ್ಲಿ ಯಾವ ಗರ್ಭಿಣಿಯೂ ಇರಲಿಲ್ಲ ಎಂಬ ಸತ್ಯವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಜ್ಯಪಾಲರ ಸಂಚಾರ ವೇಳೆ ನಡುರಸ್ತೆಯಲ್ಲಿ ಪ್ರತಿಭಟಿಸಿದ್ದ ಯುವಕನ ಹೈಡ್ರಾಮಾ ಬಯಲಾಗಿದೆ.
  • ಕಾರಿನಲ್ಲಿ ಗರ್ಭಿಣಿ ಪತ್ನಿ ಇರಲಿಲ್ಲ ಎಂದು ಒಪ್ಪಿಕೊಂಡ ಯುವಕ ಮೋಹಿತ್.
  • ಹೆಚ್‌ಎಎಲ್ ಪೊಲೀಸರು ಯುವಕನ ಹೇಳಿಕೆ ದಾಖಲಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಹೆಚ್‌ಎಎಲ್ (HAL) ಠಾಣೆಯ ಪೊಲೀಸರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದ ಮೋಹಿತ್ ಎಂಬ ಯುವಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾನು ಸುಳ್ಳು ಹೇಳಿದ್ದಾಗಿ ಮೋಹಿತ್ ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಮೋಹಿತ್ ಹೇಳಿದ್ದೇನು?

ಪ್ರತಿಭಟನೆಯ ಸಮಯದಲ್ಲಿ ಮೋಹಿತ್ ಜೊತೆ ಕಾರಿನಲ್ಲಿ ಆತನ ಪತ್ನಿ ಇರಲಿಲ್ಲ. ಆತ ಒಂಟಿಯಾಗಿಯೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂದು ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ನಾನು ಹೆಚ್‌ಎಎಲ್ ಇಸ್ರೋ (ISRO) ಜಂಕ್ಷನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ಟ್ರಾಫಿಕ್‌ನಲ್ಲಿ ಕಾಯುತ್ತಿದ್ದೆ. ವಿಐಪಿ ಮೂವ್‌ಮೆಂಟ್‌ನಿಂದಾಗಿ ವಾಹನಗಳನ್ನು ತಡೆ ಹಿಡಿಯಲಾಗಿತ್ತು. ನನಗೆ ಮನೆಗೆ ಹೋಗಲು ತಡವಾಗುತ್ತಿತ್ತು ಮತ್ತು ಮನೆಯಲ್ಲಿದ್ದ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ತುರ್ತು ಪರಿಸ್ಥಿತಿ ಇತ್ತು. ಆ ಒತ್ತಡದಲ್ಲಿ ಸಿಟ್ಟು ಬಂದು, ಪೊಲೀಸರು ದಾರಿ ಬಿಡಲಿ ಎಂಬ ಕಾರಣಕ್ಕೆ ಕಾರಿನಲ್ಲೇ ಪತ್ನಿ ಇದ್ದಾಳೆ ಎಂದು ಸುಳ್ಳು ಹೇಳಿ ವಾಗ್ವಾದ ನಡೆಸಿದೆ ಎಂದು ಮೋಹಿತ್ ತಿಳಿಸಿದ್ದಾನೆ. ಪೊಲೀಸರ ಮೇಲೆ ತನಗೆ ಯಾವುದೇ ವೈಯಕ್ತಿಕ ಟಾರ್ಗೆಟ್ ಇರಲಿಲ್ಲ ಎಂದು ಆತ ಸ್ಪಷ್ಟಪಡಿಸಿದ್ದಾನೆ.

ಇದನ್ನೂ ಓದಿ ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಸದ್ಯಕ್ಕೆ ಪ್ರಕರಣ ದಾಖಲಾಗಿಲ್ಲ

ಯುವಕನ ಹೈಡ್ರಾಮಾದಿಂದಾಗಿ ಇಡೀ ಪೊಲೀಸ್ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುವಂತಾಗಿತ್ತು. ಆದರೆ ಸದ್ಯಕ್ಕೆ ಪೊಲೀಸರು ಮೋಹಿತ್ ವಿರುದ್ಧ ಯಾವುದೇ ಅಧಿಕೃತ ಪ್ರಕರಣ ದಾಖಲಿಸಿಲ್ಲ. ಆತನ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡು, ಇನ್ನು ಮುಂದೆ ಇಂತಹ ಕೃತ್ಯಗಳನ್ನು ಎಸಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಹೆಚ್‌ಎಎಲ್ ಪೊಲೀಸರು ಆತನನ್ನು ಕಳುಹಿಸಿಕೊಟ್ಟಿದ್ದಾರೆ. ವಿಐಪಿ ಟ್ರಾಫಿಕ್ ಕಿರಿಕಿರಿಯ ನಡುವೆಯೂ ಸಾರ್ವಜನಿಕರು ಸುಳ್ಳು ವದಂತಿಗಳನ್ನು ನಂಬಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಎಐ ಅಲೆಯಲ್ಲಿ ಹಿಂದುಳಿದ ಭಾರತ; ಷೇರುಬಜಾರಿನ ಬಲದಲ್ಲಿ 5ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿತ – Kannada News

ನವದೆಹಲಿ, ಜೂನ್ 2: ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನದ ಜಾಗತಿಕ ಹೂಡಿಕೆಯ ಅಲೆಯು ದಕ್ಷಿಣ ಕೊರಿಯಾ ಮತ್ತು ತೈವಾನ್ ದೇಶಗಳ ಷೇರು ಮಾರುಕಟ್ಟೆಗಳನ್ನು ಸಾರ್ವಕಾಲಿಕ ದಾಖಲೆಯ ಎತ್ತರಕ್ಕೆ ಕೊಂಡೊಯ್ದಿದೆ. ಇದರ ಪರಿಣಾಮವಾಗಿ, ಜಾಗತಿಕ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalization) ಭಾರತವು ಏಳನೇ ಸ್ಥಾನಕ್ಕೆ ಕುಸಿದಿದ್ದು, ದಕ್ಷಿಣ ಕೊರಿಯಾ ಆರನೇ ಸ್ಥಾನಕ್ಕೇರಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯು ಜಾಗತಿಕವಾಗಿ 5ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ. ತೈವಾನ್ 5ನೇ ಸ್ಥಾನದಲ್ಲಿದ್ದರೆ, ಇದೀಗ ದಕ್ಷಿಣ ಕೊರಿಯಾದ ‘ಕೋಸ್ಪಿ’ (Kospi) ಸೂಚ್ಯಂಕವು ಭಾರತವನ್ನು ಹಿಂದಿಕ್ಕಿ 6ನೇ ಸ್ಥಾನವನ್ನು ಪಡೆದುಕೊಂಡಿದೆ.

ಸದ್ಯ ತೈವಾನ್ 5.15 ಟ್ರಿಲಿಯನ್ ಡಾಲರ್ ಮೌಲ್ಯದೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ದಕ್ಷಿಣ ಕೊರಿಯಾ 5.04 ಟ್ರಿಲಿಯನ್ ಡಾಲರ್‌ನೊಂದಿಗೆ ಆರನೇ ಸ್ಥಾನದಲ್ಲಿದೆ. ಭಾರತದ ಮಾರುಕಟ್ಟೆ ಮೌಲ್ಯವು 4.84 ಟ್ರಿಲಿಯನ್ ಡಾಲರ್‌ಗೆ ಇಳಿಕೆಯಾಗಿದೆ. ದಕ್ಷಿಣ ಕೊರಿಯಾದ ಮುಖ್ಯ ಷೇರು ಮಾರುಕಟ್ಟೆ ಸೂಚ್ಯಂಕವಾದ ‘ಕೋಸ್ಪಿ’, ಈ ವರ್ಷ ಭಾರಿ ಪ್ರಗತಿ ಸಾಧಿಸಿದೆ. ಕೃತಕ ಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್ (ಚಿಪ್ಸ್) ವಲಯದ ದಿಗ್ಗಜ ಕಂಪನಿಗಳಾದ ಸ್ಯಾಮ್‌ಸಂಗ್ (Samsung) ಮತ್ತು ಎಸ್‌ಕೆ ಹೈನಿಕ್ಸ್ (SK Hynix) ಶರವೇಗದ ಬೆಳವಣಿಗೆ ಕಂಡಿವೆ. ಕಳೆದ ಒಂದು ವರ್ಷದಲ್ಲಿ ಸ್ಯಾಮ್‌ಸಂಗ್ ಷೇರುಗಳು ಶೇ. 524 ರಷ್ಟು ಮತ್ತು ಎಸ್‌ಕೆ ಹೈನಿಕ್ಸ್ ಷೇರುಗಳು ಬರೋಬ್ಬರಿ ಶೇ. 1000 ರಷ್ಟು ಜಿಗಿದಿವೆ.

ಇದನ್ನೂ ಓದಿ: ಜೂನ್​ನಲ್ಲಿ ಪ್ಯಾನ್ ಕಾರ್ಡ್, ಯುಪಿಐ, ಅಡ್ವಾನ್ಸ್ ಟ್ಯಾಕ್ಸ್ ಇತ್ಯಾದಿ ಪ್ರಮುಖ ಬದಲಾವಣೆಗಳನ್ನು ಗಮನಿಸಿ

ಭಾರತಕ್ಕೆ ಹಿನ್ನಡೆ ಏಕೆ?

ಭಾರತೀಯ ಷೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕವಾದ ನಿಫ್ಟಿ 50 (Nifty 50) ಈ ವರ್ಷ ಶೇ. 10.57 ರಷ್ಟು ಕುಸಿತ ಕಂಡಿದೆ. ಜಾಗತಿಕವಾಗಿ ಎಐ (AI) ತಂತ್ರಜ್ಞಾನ ಆಧಾರಿತ ಕಂಪನಿಗಳಿಗೆ ಭಾರಿ ಬೇಡಿಕೆ ಇದೆ, ಆದರೆ ಭಾರತದ ಮಾರುಕಟ್ಟೆಯಲ್ಲಿ ಇಂತಹ ಬೃಹತ್ ಎಐ ಕಂಪನಿಗಳ ಕೊರತೆಯಿರುವುದರಿಂದ ವಿದೇಶಿ ಹೂಡಿಕೆದಾರರು ವೇಗವಾಗಿ ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ.

ಶೇ. 1 ರಷ್ಟು ಕಂಪನಿಗಳದ್ದೇ ಹವಾ

‘ಯೆಸ್ ಸೆಕ್ಯುರಿಟೀಸ್’ ವರದಿಯ ಪ್ರಕಾರ, 2026 ರಲ್ಲಿ ಜಾಗತಿಕ ಷೇರು ಮಾರುಕಟ್ಟೆ ಗಳಿಸಿದ ಒಟ್ಟು 12 ಟ್ರಿಲಿಯನ್ ಡಾಲರ್ ಲಾಭದಲ್ಲಿ, ಕೇವಲ ಅಗ್ರ 100 ಕಂಪನಿಗಳೇ (ಶೇ. 1 ಕ್ಕಿಂತ ಕಡಿಮೆ ಕಂಪನಿಗಳು) ಸುಮಾರು 11.4 ಟ್ರಿಲಿಯನ್ ಡಾಲರ್ ಕೊಡುಗೆ ನೀಡಿವೆ. ದುರದೃಷ್ಟವಶಾತ್, ಈ ಟಾಪ್ 100 ಕಂಪನಿಗಳ ಪಟ್ಟಿಯಲ್ಲಿ ಭಾರತದ ಯಾವುದೇ ಕಂಪನಿ ಸ್ಥಾನ ಪಡೆದಿಲ್ಲ. ಭಾರತದಲ್ಲಿ ಎಐ ಇರಲಿ, ಟೆಕ್ನಾಲಜಿ ಕಂಪನಿಗಳು ಬಹಳ ವಿರಳ ಇವೆ. ಇತ್ತೀಚೆಗಷ್ಟೇ ಇಲ್ಲಿ ಸೆಮಿಕಂಡಕ್ಟರ್, ಎಐ ಕ್ಷೇತ್ರದಲ್ಲಿ ಒಂದಷ್ಟು ಸಂಕಲನಗಳಾಗಿವೆ. ಆದರೆ, ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಪ್ರಮುಖ ಟೆಕ್ನಾಲಜಿ ಕಂಪನಿಗಳು ಇಲ್ಲ. ಹೀಗಾಗಿ, ಹೂಡಿಕೆದಾರರನ್ನು ಸೆಳೆಯುವ ಅವಕಾಶ ಕಡಿಮೆ ಆಗಿದೆ.

ಇದನ್ನೂ ಓದಿ: ಮೇ ತಿಂಗಳಲ್ಲಿ ಭರ್ಜರಿ ಜಿಎಸ್​ಟಿ ಸಂಗ್ರಹ; 1.94 ಲಕ್ಷ ಕೋಟಿ ರೂಗೆ ಏರಿದ ತೆರಿಗೆ ಆದಾಯ

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಪಂಚದಾದ್ಯಂತ ನಡೆಯುತ್ತಿರುವ ಕೃತಕ ಬುದ್ಧಿಮತ್ತೆಯ (AI) ಕ್ರಾಂತಿಯು ತೈವಾನ್ ಮತ್ತು ದಕ್ಷಿಣ ಕೊರಿಯಾದ ಮಾರುಕಟ್ಟೆಗಳಿಗೆ ವರವಾಗಿದ್ದರೆ, ಎಐ ಕಂಪನಿಗಳ ಕೊರತೆಯಿಂದಾಗಿ ಭಾರತದ ಷೇರು ಮಾರುಕಟ್ಟೆ ಸದ್ಯಕ್ಕೆ ಹಿನ್ನಡೆ ಅನುಭವಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ: ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ – Kannada News

ಸಿಎಂ ಆಗಿ ನಾಳೆ ಡಿಕೆಶಿ ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿImage Credit source: Tv9 Kannada

ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ಸಂಜೆ 4.05ಕ್ಕೆ ನೆರವೇರಲಿದ್ದು, ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಸಿಎಂ ಆಗಿ ನಾಳೆ ಡಿ.ಕೆ. ಶಿವಕುಮಾರ್​​ ಪ್ರಮಾಣವಚನ
  • ಲೋಕಭವನದ ಗಾಜಿನಮನೆಯಲ್ಲಿ ನಡೆಯಲಿದೆ ಪದಗ್ರಹಣ
  • ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ವಿತರಣೆ

ಪ್ರಮುಖರಿಗೆ ಪ್ರತ್ಯೇಕ ವ್ಯವಸ್ಥೆ

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಆಯುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ನಡಯಲಿರುವ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಯನ್ನು ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್​​ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು; ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!

ಪೊಲೀಸ್ ಅಧಿಕಾರಿಗಳ ಸಭೆ

ನಾಳೆ ಸಿಎಂ ಪ್ರಮಾಣವಚನ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್​ ಕುಮಾರ್​ ಸಿಂಗ್ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಎಲ್ಲಾ ವಿಭಾಗದ ಜಂಟಿ ಪೊಲೀಸ್ ಅಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಪೊಲೀಸ್‌ ಕಮಿಷನರ್​ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದು, ಬಂದೋಬಸ್ತ್ ಬಗ್ಗೆ ಸಲಹೆ, ಸೂಚನೆ ನೀಡಲಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಈ ಸಭೆ ಆಯೋಜನೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version