ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? – Kannada News | Seasonal Sneezing: Causes & Fixes

ಇತ್ತೀಚಿನ ದಿನಗಳಲ್ಲಿ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಕಂಡುಬರುತ್ತಿದ್ದು, ಶೀತ, ಮಳೆ ಕೆಲವು ಭಾಗದಲ್ಲಿ ಆರ್ದ್ರತೆ ಮತ್ತು ಧೂಳು ಹೆಚ್ಚಾಗಿದೆ. ಈ ರೀತಿಯ ಹವಾಮಾನದಲ್ಲಿ, ಅನೇಕರ ಆರೋಗ್ಯ ಏರುಪೇರಾಗುತ್ತಿದೆ. ಆಗಾಗ ಸೀನುವುದು (Sneezing), ಮೂಗಿನಲ್ಲಿ ತುರಿಕೆ ಅಥವಾ ನೆಗಡಿ ಅನುಭವಕ್ಕೆ ಬರುತ್ತಿದೆ. ಆದರೆ ಜನರು ಇದನ್ನು ಅಲರ್ಜಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ದೊಡ್ಡ ಸಮಸ್ಯೆಯ ಸಂಕೇತ ಆಗಿರಬಹುದು ಎಂಬುದನ್ನು ಮರೆಯಬಾರದು. ಸಾಮಾನ್ಯವಾಗಿ ಹವಾಮಾನದಲ್ಲಿ, ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಬೇಕಾಗುತ್ತದೆ, ಈ ಅವಧಿಯಲ್ಲಿ, ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಗಮನಿಸಬಹುದು. ಇಂತಹ ಸಂದರ್ಭಗಳಲ್ಲಿ, ಆಗಾಗ ಸೀನು ಬರುವುದು ಸಾಮಾನ್ಯವೇ ಅಥವಾ ಅಲ್ಲವೇ ಎಂಬುದನ್ನು ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಆಗಾಗ ಸೀನು ಬರುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ ತಿಳಿದುಕೊಳ್ಳಿ.

ಆಗಾಗ ಸೀನು ಬರುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಎಚ್‌ಒಡಿ ಡಾ. ಎಲ್.ಎಚ್. ​​ಘೋಟೇಕರ್ ಹೇಳುವ ಪ್ರಕಾರ, ಆಗಾಗ ಸೀನು ಬರುವುದು ಧೂಳು, ತಂಪಾದ ಗಾಳಿ ಅಥವಾ ಮಾಲಿನ್ಯದ ಪರಿಣಾಮವೂ ಆಗಿರಬಹುದು. ಆದರೆ ಆಗಾಗ ಸೀನು ಬರುವುದು, ಪುನರಾವರ್ತಿತವಾಗಿ ಶೀತವಾಗುವುದು, ಗಂಟಲು ನೋವು, ಆಯಾಸ ಅಥವಾ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತ. ಪ್ರತಿರಕ್ಷಣಾ ವ್ಯವಸ್ಥೆ ದುರ್ಬಲವಾಗಿದ್ದಾಗ, ದೇಹವು ಬಾಹ್ಯ ಅಲರ್ಜಿನ್ ಮತ್ತು ವೈರಸ್‌ಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ರೋಗಲಕ್ಷಣಗಳು ಪದೇ ಪದೇ ಕಂಡುಬರುತ್ತದೆ.

ಇದನ್ನೂ ಓದಿ: ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ!

ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹವಾಮಾನಕ್ಕೆ ಅನುಗುಣವಾಗಿ ಮೊದಲು ದೇಹವನ್ನು ಬೆಚ್ಚಗಿಟ್ಟುಕೊಳ್ಳಬೇಕು. ತಂಪಾದ ಗಾಳಿ ಮತ್ತು ಧೂಳಿನಿಂದ ಮೂಗನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದೆಲ್ಲದರ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ ಮತ್ತು ಅಲರ್ಜಿಯ ಪರಿಣಾಮಗಳನ್ನು ಕಡಿಮೆ ಮಾಡಬಹುದು. ಧೂಳು ಮತ್ತು ಅಲರ್ಜಿನ್ ಗಳನ್ನು ಕಡಿಮೆ ಮಾಡಲು ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುವತ್ತ ಗಮನ ಹರಿಸಿ. ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಸಮತೋಲಿತ ಆಹಾರ ಮತ್ತು ಸರಿಯಾಗಿ ನಿದ್ರೆ ಮಾಡುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ.

ಸಂಜು ಸ್ಯಾಮ್ಸನ್‌ಗೆ ವಿಶೇಷ ಪಂದ್ಯ

ಈ ಸರಣಿಯು ಇಲ್ಲಿಯವರೆಗೆ ಸಂಜು ಸ್ಯಾಮ್ಸನ್‌ಗೆ ನಿರಾಶಾದಾಯಕವಾಗಿದೆ. ಇಲ್ಲಿಯವರೆಗೆ ಆಡಿರುವ 4 ಪಂದ್ಯಗಳಲ್ಲಿ ಸಂಜು ಉತ್ತಮ ಪ್ರದರ್ಶನ ನೀಡಿಲ್ಲ. ಹೀಗಾಗಿ ತಮ್ಮ ಫಾರ್ಮ್ ಕಂಡುಕೊಳ್ಳುವ ಒತ್ತಡದಲ್ಲಿರುವ ಸಂಜುಗೆ ಉತ್ತಮ ಅವಕಾಶ ಸಿಕ್ಕಿದೆ. ಏಕೆಂದರೆ ಸಂಜು ಇದೇ ಮೊದಲ ಬಾರಿಗೆ ತಮ್ಮ ತವರು ನೆಲದಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ತಿರುವನಂತಪುರಂ ಕ್ರೀಡಾಂಗಣದಲ್ಲಿ ಸಂಜು ಬಾಲ್ಯದಿಂದಲೂ ಆಡುತ್ತಿದ್ದು, ಈಗ ಭಾರತೀಯ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿಯಲಿದ್ದಾರೆ.

ಹೀಗಾಗಿ ಈ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾದು ಕುಳಿತಿದ್ದು, ಈ ಪಂದ್ಯವನ್ನು ಸುಮಾರು 55,000 ಅಭಿಮಾನಿಗಳು ವೀಕ್ಷಿಸಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ ಈಗಾಗಲೇ ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ. ಸಂಜು ಸ್ಯಾಮ್ಸನ್ ತನ್ನ ತವರು ನೆಲದಲ್ಲಿ ಮೊದಲ ಬಾರಿಗೆ ಆಡುವುದನ್ನು ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಸಂಜು ಸ್ಯಾಮ್ಸನ್‌ಗೆ ಕೊನೆಯ ಅವಕಾಶ

ಈ ಸರಣಿಯಲ್ಲಿ ಇದುವರೆಗೆ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸಂಜು ಸ್ಯಾಮ್ಸನ್ ಕೇವಲ 40 ರನ್ ಗಳಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅವರು 10 ರನ್ ಗಳಿಸಿದರೆ, ಎರಡನೇ ಪಂದ್ಯದಲ್ಲಿ ಕೇವಲ 6 ರನ್ ಗಳಿಸಿದರು. ಮೂರನೇ ಪಂದ್ಯದಲ್ಲಿ ಅವರು ಖಾತೆ ತೆರೆಯಲು ಸಾಧ್ಯವಾಗದೆ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾಗಿದ್ದರು. ನಂತರ ನಾಲ್ಕನೇ ಪಂದ್ಯದಲ್ಲಿ 24 ರನ್ ಗಳಿಸುವ ಮೂಲಕ ಅವರು ಮತ್ತೆ ಬ್ಯಾಕ್ ಅಪ್ ಮಾಡಲು ಪ್ರಯತ್ನಿಸಿದರು. ಈಗ, ಸರಣಿಯ ಐದನೇ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ ಅವರ ಕೊನೆಯ ಅವಕಾಶವಾಗಿದೆ, ಏಕೆಂದರೆ ಇದರ ನಂತರ ಟೀಂ ಇಂಡಿಯಾ ಯಾವುದೇ ಸರಣಿಯನ್ನು ಆಡುವುದಿಲ್ಲ. ಆದ್ದರಿಂದ ಈ ಪಂದ್ಯದಲ್ಲಿ ಸಂಜು ಒಂದೊಳ್ಳೆ ಇನ್ನಿಂಗ್ಸ್ ಆಡುವ ಮೂಲಕ ತವರು ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ವೇದಾಂತ ಭಾರತಿ ಹಾಗೂ ಪರಮ್ ಫೌಂಡೇಶನ್ ನಿಂದ ಆಯೋಜಿಸಲಾದ ನಾಲ್ಕು ದಿನಗಳ ರಾಷ್ಟ್ರಮಟ್ಟದ ಬೃಹತ್ “ವಿವೇಕ ದೀಪ್ತಿ” ಸಮಾವೇಶದಲ್ಲಿ ವಿಜ್ಞಾನ ಮತ್ತು ಧರ್ಮ ಕುರಿತು ಮಾತನಾಡಿದರು. ವಿಜ್ಞಾನಿಗಳು ಭೂಮಂಡಲದ ಬಗ್ಗೆ ಆಳವಾದ ಅಧ್ಯಯನ ನಡೆಸುತ್ತಾರೆ. ಸಾಧು, ಸಂತರು ಪಾರಮಾರ್ಥಿಕ ಸತ್ಯವನ್ನು ಅರಸುತ್ತಾರೆ. ಈ ದೇಶದಲ್ಲಿ ನಾವು ಸಹಸ್ರಾರು ವರ್ಷಗಳಿಂದ ಬದುಕುತ್ತಿದ್ದು, ನಮ್ಮಲ್ಲಿ ಪರಮೋಚ್ಛ ಜ್ಞಾನವಿದೆ. ಈ ಸಂಕಿರ್ಣದಾಯಕ ಪರಿಸ್ಥಿತಿ ಬಗ್ಗೆ ನಾವು ಅರ್ಥ ಮಾಡಿಕೊಳ್ಳಬೇಕು. ಋಷಿಮುನಿಗಳು ತಪಸ್ಸಿನ ಮೂಲಕ ಸಾಧನೆ ಮಾಡಿದರೆ, ವಿಜ್ಞಾನಿಗಳು ಸಹ ಸಂಶೋಧನೆಯನ್ನು ತಪಸ್ಸಿನಂತೆ ಏಕಾಗ್ರತೆಯಿಂದ ಕೈಗೊಳ್ಳುತ್ತಾರೆ. ವಿಜ್ಞಾನದಲ್ಲಿ ಹಲವಾರು ಸಿದ್ಧಾಂತಗಳಿವೆ. ಧರ್ಮದಲ್ಲೂ ಭಿನ್ನ, ಭಿನ್ನ ಸಿದ್ಧಾಂತಗಳಿವೆ. ವಿಜ್ಞಾನದಲ್ಲೂ ಪರಿಕಲ್ಪನೆಗಳಿವೆ. ಆಯಾಮಗಳಿವೆ ಎಂದರು.

ಇತಿಹಾಸ ತಜ್ಞ ಡಾ. ವಿಕ್ರಮ್ ಸಂಪತ್ ಮಾತನಾಡಿ, ಭಾರತದ ಪ್ರಾಚೀನ ಜ್ಞಾನ ಪರಂಪರೆ ಬೃಹತ್ತಾದದ್ದು, ಮಹತ್ತಾದ್ದದು ಆಗಿದೆ. ನಮ್ಮ ನಾಲ್ಕು ಸಾವಿರ ವರ್ಷಗಳ ಜ್ಞಾನ ಸಂಪತನ್ನು ನಾಶಪಡಿಸಲು ವ್ಯಾಪಕ ಪ್ರಯತ್ನ ನಡೆಯಿತು. ಜಗತ್ತಿನ ಅತಿ ದೊಡ್ಡ ನಳಂದ ವಿಶ್ವವಿದ್ಯಾಲಯವನ್ನು ಸುಟ್ಟು ಭಸ್ಮ ಮಾಡಲಾಯಿತು. ಈ ಸಮಯದ ಆರು ತಿಂಗಳಲ್ಲಿ ತಕ್ಷಶಿಲಾ, ವಿಕ್ರಮ ಶಿಲಾ ಒಳಗೊಂಡಂತೆ ಹಲವಾರು ವಿಶ್ವವಿದ್ಯಾಲಯಗಳನ್ನು, ಅಲ್ಲಿನ ಅಕ್ಷರ ಸಂಸ್ಕೃತಿಯನ್ನು ನಾಮಾವಶೇಷಗೊಳಿಸಿದರು. ಇಷ್ಟಾದರೂ ನಮ್ಮ ಜ್ಞಾನ ಸಂಪತ್ತು ನಮ್ಮ ಮೆದುಳಿನಲ್ಲಿ ಸುಪ್ತವಾಗಿ, ಆಳವಾಗಿ ಅಡಗಿದೆ. ಹೀಗಾಗಿ ನಮ್ಮ ವೈಜ್ಞಾನಿಕ ಸ್ಫೂರ್ತಿಗೆ ಯಾರೊಬ್ಬರೂ ಧಕ್ಕೆ ತರಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಪರಂಮ್ ಫೌಂಡೇಷನ್ ನ ಟ್ರಸ್ಟಿ ಶ್ರೀನಿವಾಸ ಗುಪ್ತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಸೃಜಿಸಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ. 150 ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ನಾವೀನ್ಯತೆ ವಲಯದಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರು ಹೊರ ಹೊಲಯದ ಚೆನ್ನೇನ ಹಳ್ಳಿಯಲ್ಲಿ ಬೃಹತ್ ವಿಜ್ಞಾನ ಸಂಸ್ಥೆ ತಲೆ ಎತ್ತುತ್ತಿದ್ದು, ಇದು ಪ್ರಪಂಚದಲ್ಲೇ ಶ್ರೇಷ್ಠ ಸಂಸ್ಥೆಯಾಗಿ ರೂಪಿಸಲಾಗುವುದು. ಇದಕ್ಕಾಗಿ ವೇದಾಂತ ಭಾರತಿ ಸಂಸ್ಥೆಯೊಂದಿಗೆ ರಚನಾತ್ಮಕ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಯಡತೊರೆ ಮಠದ ಪರಮಪೂಜ್ಯ ಶ್ರೀ ಶ್ರೀ ಬ್ರಹ್ಞಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿ, ವೇದ, ಉಪನಿಷತ್ತು, ಅತ್ಯಂತ ಶ್ರೇಷ್ಠವಾದದ್ದು. ಶ್ರೀ ಶಂಕರ ಭಗವತ್ಪಾದರು ನಮಗೆ ಕೊಟ್ಟಿರುವ ಸ್ತೋತ್ರಗಳು ಸರ್ವಕಾಲಿಕವಾದದ್ದು ಎಂದರು. ಇದೇ ಸಂದರ್ಭದಲ್ಲಿ ವಿಜ್ಞಾನ – ಧರ್ಮ ಕುರಿತಂತೆ ವೇದಾಂತ ಭಾರತಿ ಮತ್ತು ಪರಂ ಫೌಂಡೇಷನ್ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಕ್ಷೇತ್ರದ ಭಾರತೀಯ ಕಂಪನಿಗಳ ಸಿಇಒಗಳು, ಪರಿಣಿತರ ಜೊತೆ ಪ್ರಧಾನಿ ಮೋದಿ ಸಭೆ – Kannada News | PM Modi interaction with CEOs and experts in AI field ahead of AI Impact Summit in 2026 Feb

ನವದೆಹಲಿ, ಜನವರಿ 29: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಎಐ ಕ್ಷೇತ್ರದ ಪರಿಣಿತರು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದರು. ಲೋಕ ಕಲ್ಯಾಣ್ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಈ ಕಾರ್ಯಕ್ರಮ ನಡೆಯಿತು. ಫೆಬ್ರುವರಿಯಲ್ಲಿ ನಡೆಯಲಿರುವ ಇಂಡಿಯಾಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಪ್ರಧಾನಿಗಳು ಈ ಸಭೆ ನಡೆಸಿದ್ದಾರೆ. ಎಐ ಟೆಕ್ನಾಲಜಿಯಲ್ಲಿ ಸ್ವಾವಲಂಬನೆ ಸಾಧಿಸಬೇಕೆನ್ನುವ ಸರ್ಕಾರದ ಗುರಿಗೆ ಬೆಂಬಲವಾಗಿ ನಿಲ್ಲುವುದಾಗಿ ಸಿಇಒಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಯುಪಿಐ ರೂಪಿಸುವ ಮೂಲಕ ಭಾರತ ತಾನು ತಾಂತ್ರಿಕ ನಾವೀನ್ಯತೆ ಮಾಡಬಲ್ಲುದು ಎಂಬುದನ್ನು ಸಾಬೀತುಪಡಿಸಿದೆ. ಎಐ ಕ್ಷೇತ್ರದಲ್ಲೂ ಇದನ್ನೇ ಆಗುತ್ತದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಜನಸಂಖ್ಯಾ ಬಲ ಇದೆ, ವೈವಿಧ್ಯತೆ ಇದೆ, ಪ್ರಜಾತಂತ್ರ ಸಿಸ್ಟಂ ಇದೆ. ಈ ವಿಶೇಷ ಸಮ್ಮಿಳನವು ಭಾರತದ ಡಿಜಿಟಲ್ ಇನ್​ಫ್ರಾಸ್ಟ್ರಕ್ಚರ್ ಬಗ್ಗೆ ವಿಶ್ವದ ನಂಬಿಕೆ ಬೆಳೆಯಲು ಕಾರಣವಾಗಿದೆ ಎಂದೂ ಪ್ರಧಾನಿಗಳು ಬಣ್ಣಿಸಿದ್ದಾರೆ.

ಇದನ್ನೂ ಓದಿ: Economic Survey 2026: ಆರ್ಥಿಕ ಸಮೀಕ್ಷೆ ವರದಿ ಮಂಡನೆ; ಜಿಡಿಪಿ ಶೇ. 6.8-7.2 ಬೆಳೆಯುವ ನಿರೀಕ್ಷೆ

ತಂತ್ರಜ್ಞಾನದ ಹಂಚಿಕೆ ಮತ್ತು ಡಾಟಾ ಸೆಕ್ಯೂರಿಟಿಬಹಳ ಮಹತ್ವದ್ದು ಎಂದಿರುವ ಮೋದಿ, ನಿಷ್ಪಕ್ಷಪಾತವಾದ, ಸುಭದ್ರವಾದ ಮತ್ತು ಪಾರದರ್ಶಕವಾದ ಎಐ ಇಕೋಸಿಸ್ಟಂ ನಿರ್ಮಾಣಕ್ಕೆ ತಾವೆಲ್ಲರೂ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಎಐ ಟೆಕ್ ಸಿಇಒಗಳಿಗೆ ಕರೆ ನೀಡಿದ್ದಾರೆ.

ವಿಪ್ರೋ, ಟಿಸಿಎಸ್, ಎಚ್​ಸಿಎಲ್ ಟೆಕ್, ಝೋಹೋ ಕಾರ್ಪೊರೇಶನ್, ಎಲ್​​ಟಿಐ ಮೈಂಡ್​ಟ್ರೀ, ಜಿಯೋ ಪ್ಲಾಟ್​ಫಾರ್ಮ್ಸ್, ಅದಾನಿ ಕಾನೆಕ್ಸ್, ಎನ್ನೆಕ್ಸ್​ಟ್ರಾ ಡಾಟಾ, ನೆಟ್ವೆಬ್ ಟೆಕ್ನಾಲಜೀಸ್ ಇತ್ಯಾದಿ ಎಐ ಕ್ಷೇತ್ರದಲ್ಲಿ ತೊಡಗಿರುವ ಕಂಪನಿಗಳ ಸಿಇಒಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಹಾಗೆಯೇ, ಐಐಐಟಿ ಹೈದರಾಬಾದ್, ಐಐಟಿ ಮದ್ರಾಸ್, ಐಐಟಿ ಬಾಂಬೆಯಿಂದ ಪರಿಣಿತರೂ ಕೂಡ ಪಾಲ್ಗೊಂಡಿದ್ದರು. ಸರ್ಕಾರದ ಪರವಾಗಿ ಪ್ರಧಾನಿ ಜೊತೆ ಸಚಿವರಾದ ಅಶ್ವಿನಿ ವೈಷ್ಣವ್, ಜಿತಿನ್ ಪ್ರಸಾದ ಅವರೂ ಇದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ​ – Kannada News | Raichur: Pregnant daughter in law murdered by father in law case; SP revel Explosive cause

ರಾಯಚೂರು, ಜನವರಿ 29: ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಬುಧವಾರ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ‌ ಕೊಲೆಗೈದಿದ್ದ ಘಟನೆ ನಡೆದಿತ್ತು. ಸದ್ಯ ಆರೋಪಿ ಮಾವ ಸಿದ್ದಪ್ಪನನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ರಾಯಚೂರು ಎಸ್​​ಪಿ ಮಾತನಾಡಿದ್ದು, ಸೊಸೆ ರೇಖಾ ಮತ್ತು ಸಿದ್ದಪ್ಪ ನಡುವೆ ಹಿಂದಿನಿಂದಲೂ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಗರ್ಭಿಣಿ ಹಿನ್ನೆಲೆ ರೇಖಾ ತಮ್ಮ ಪೋಷಕರ ಮನೆಗೆ ಬಂದಿದ್ದರು. ನಿನ್ನೆ ಸಿದ್ದಪ್ಪ, ರೇಖಾರ ಮನೆಗೆ ಬಂದು ಚಾಕುವಿನಿಂದ ಇರಿದು ರೇಖಾ ಅವರನ್ನು ಕೊಲೆ ಮಾಡಿದ್ದ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸೊನ್ನೆ ಸುತ್ತಿದ ಪಾಕ್ ಆರಂಭಿಕರು – Kannada News | Pakistan T20 Opener Duck Record: 12 Times Since 2025, A WC Warning!

ವಾಸ್ತವವಾಗಿ, 2025 ರಿಂದ, ಪಾಕಿಸ್ತಾನದ ಆರಂಭಿಕ ಆಟಗಾರರು 12 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ, ಇದು ದಾಖಲೆಯಾಗಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಆರಂಭಿಕ ಆಟಗಾರರು ಅಧಿಕ ಬಾರಿ ಸೊನ್ನೆಗೆ ಔಟಾದ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಮೊದಲ ಸ್ಥಾನದಲ್ಲಿದೆ. 10 ಕ್ಕೂ ಹೆಚ್ಚು ಬಾರಿ ಆರಂಭಿಕ ಆಟಗಾರರು ಶೂನ್ಯಕ್ಕೆ ಔಟಾದ ಏಕೈಕ ತಂಡ ಪಾಕಿಸ್ತಾನ.

Source link

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ ನೋಡಿ.. – Kannada News | 17th Bengaluru International Film Festival Inauguration Live video

ವಿಧಾನಸೌಧದ ಮುಂಭಾಗದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (17th Bengaluru International Film Festival) ಉದ್ಘಾಟನೆ ಆಗಿದೆ. ಇಂದು (ಜನವರಿ 29) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವ ಉದ್ಘಾಟನೆ ಮಾಡಿದ್ದಾರೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಈ ಬಾರಿಯ ಸಿನಿಮೋತ್ಸವ ನಡೆಯಲಿದೆ. ನಟ ಪ್ರಕಾಶ್ ರಾಜ್, ನಟಿ ರುಕ್ಮಿಣಿ ವಸಂತ್ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ವಾರ್ತಾ ಇಲಾಖೆ, ಚಲನಚಿತ್ರ ಅಕಾಡೆಮಿ ಹಾಗೂ ಚಲನ‌ಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ ಈ ಸಿನಿಮೋತ್ಸವ ನಡೆಯುತ್ತಿದೆ. ಇಂದಿನಿಂದ ಫೆಬ್ರವರಿ 6ರವರೆಗೂ ನಡೆಯಲಿದೆ. ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಮತ್ತು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ – Kannada News | Sudeep praised Raj B Shetty’s Rakkasapuradol movie trailer

ಸುದೀಪ್ (Sudeep) ಅವರು ಸ್ಟಾರ್ ನಟ ಆಗಿರುವ ಜೊತೆಗೆ ಹೊಸಬರ ಸಿನಿಮಾಗಳಿಗೆ, ತಮ್ಮ ಗೆಳೆಯರ ಸಿನಿಮಾಗಳಿಗೆ ಮುಖ್ಯವಾಗಿ ಒಳ್ಳೆಯ ಸಿನಿಮಾಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೀಗ ಸುದೀಪ್ ಅವರು ರಾಜ್ ಬಿ ಶೆಟ್ಟಿ ನಟಿಸಿರುವ ‘ರಕ್ಕಸಪುರದೊಳ್’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದರು. ವೇದಿಕೆ ಮೇಲೆ ಮಾತನಾಡಿದ ಕಿಚ್ಚ ‘ಯಾವಾಗೆಲ್ಲ ರಾಜ್ ಬಿ ಶೆಟ್ಟಿ ಅವರು ಕ್ಲಿಷ್ಟಕರವಾದ ಹೆಸರಿನ ಸಿನಿಮಾನಲ್ಲಿ ಮಾಡಿದ್ದಾರೋ ಆಗೆಲ್ಲ ಹಿಟ್ ಕೊಟ್ಟಿದ್ದಾರೆ’ ಎಂದರು. ಮುಂದೆಯೂ ಇಂಥಹದ್ದೇ ಹೆಸರಿನ ಸಿನಿಮಾ ಮಾಡಿ ಎಂದು ಹಾರೈಸಿದರು ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

WPL 2026: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ; ತಂಡದಲ್ಲಿ 1 ಬದಲಾವಣೆ – Kannada News | WPL 2026 Match 18: RCB vs UP Warriors – Playoff Showdown for Direct Final Spot

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು UP ವಾರಿಯರ್ಸ್ ನಡುವೆ ನಡೆಯಲಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಸುಲಭವಾಗಿ ಫೈನಲ್​ಗೇರಲಿದೆ, ಸೋತರೆ ಇತರ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಇತ್ತ ಯುಪಿ ತಂಡಕ್ಕೆ ಪ್ಲೇಆಫ್‌ಗೇರಲು ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಯುಪಿ ತಂಡ ಸೋತರೆ ಪ್ಲೇಆಫ್‌ ರೇಸ್​ನಿಂದ ಹೊರಬೀಳಲಿದೆ.

ಆರ್‌ಸಿಬಿ ತಂಡ ತನ್ನ ಮೊದಲ ಐದು ಪಂದ್ಯಗಳಲ್ಲಿ ಜಯಗಳಿಸಿದ್ದರೂ, ಕೊನೆಯ ಎರಡು ಪಂದ್ಯಗಳಲ್ಲಿ ಸೋತಿದೆ. ಪ್ರಸ್ತುತ, ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂದು ಯುಪಿ ವಾರಿಯರ್ಸ್ ವಿರುದ್ಧ ಜಯಗಳಿಸುವ ಮೂಲಕ ಫೈನಲ್‌ಗೆ ನೇರ ಸ್ಥಾನ ಪಡೆಯಬಹುದು. ಇತ್ತ ಯುಪಿ ವಾರಿಯರ್ಸ್ ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಹೆಣಗಾಡುತ್ತಿದ್ದು, ಐದನೇ ಸ್ಥಾನದೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದೆಲ್ಲದರ ನಡುವೆ ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿದ್ದ ಫೋಬೆ ಲಿಚ್‌ಫೀಲ್ಡ್ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಗೌತಮಿ ನಾಯಕ್ ಬದಲಿಗೆ ಪೂಜಾ ವಸ್ತ್ರಕರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಯುಪಿ ವಾರಿಯರ್ಸ್‌ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು ಲಿಚ್‌ಫೀಲ್ಡ್ ಬದಲಿಗೆ ಆಮಿ ಜೋನ್ಸ್ ಹಾಗೂ ಕಿರಣ್ ನವಗಿರೆ ಬದಲಿಗೆ ಸಿಮ್ರಾನ್ ಶೇಖ್‌ಗೆ ಅವಕಾಶ ನೀಡಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ರಾಧಾ ಯಾದವ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಕರ್ (ಗೌತಮಿ ನಾಯಕ್ ಬದಲಾಗಿ), ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಾಂಕಾ ಪಾಟೀಲ್ ಮತ್ತು ಲಾರೆನ್ ಬೆಲ್.

ಯುಪಿ ವಾರಿಯರ್ಜ್ ಪ್ಲೇಯಿಂಗ್ XI: ಮೆಗ್ ಲ್ಯಾನಿಂಗ್ (ನಾಯಕಿ), ಆಮಿ ಜೋನ್ಸ್ (ಫೋಬೆ ಲಿಚ್‌ಫೀಲ್ಡ್‌ ಬದಲಿಗೆ), ಸಿಮ್ರಾನ್ ಶೇಖ್ (ಕಿರಣ್ ನವಗಿರ್ ಬದಲಿಗೆ), ಹರ್ಲೀನ್ ಡಿಯೋಲ್, ಕ್ಲೋಯ್ ಟ್ರಯಾನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್ ಸೋಫಿ ಎಕ್ಲೆಸ್ಟೋನ್, ಶಿಖಾ ಪಾಂಡೆ, ಕ್ರಾಂತಿ ಗೌಡ್ ಮತ್ತು ಆಶಾ ಸೋಭಾನ.

Source link

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Source link

Exit mobile version