Headlines

ಸಿಬಿಎಸ್​ಇ ಮರುಮೌಲ್ಯಮಾಪನ ಪೋರ್ಟಲ್ ತಾಂತ್ರಿಕ ದೋಷ ನಿವಾರಣೆ: ಅಂಕ ಪರಿಶೀಲನೆಗೆ ಜೂನ್ 6 ಕೊನೆಯ ದಿನಾಂಕ

ನವದೆಹಲಿ, ಜೂನ್ 02: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತ್ಯಂತ ವೇಗದ ಕ್ರಮ ಕೈಗೊಂಡಿದೆ. ಮರುಮೌಲ್ಯಮಾಪನ ಪೋರ್ಟಲ್ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಲಾಗಿನ್ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಮಂಡಳಿಯು ತಕ್ಷಣವೇ ಪರಿಹರಿಸಿದ್ದು, ಪ್ರಸ್ತುತ ಪೋರ್ಟಲ್ ಅತ್ಯಂತ ಸರಾಗವಾಗಿ ಹಾಗೂ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಜೂನ್ 6 ರವರೆಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಸಿಬಿಎಸ್‌ಇ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳ ಮರುಪರಿಶೀಲನೆ ಹಾಗೂ ಮರುಮೌಲ್ಯಮಾಪನಕ್ಕಾಗಿ (Revaluation)…

Read More

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರು, ಜೂನ್ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ನಿಯೋಜನೆಗೊಂಡಿರುವ ಬೆನ್ನಲ್ಲೇ, ರಾಯಚೂರು ತಾಲೂಕಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸಡಗರ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದ ದೇವಸ್ಥಾನದ ಮೂಲ ಅರ್ಚಕ ಶಾಮಾಚಾರ್ಯರು ಟಿವಿ9 ಎದುರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದ ರಾಯಚೂರು ಅರ್ಚಕರ ಭವಿಷ್ಯ ನಿಜವಾಗಿದೆ. ಪಂಚಮುಖಿ ಸನ್ನಿಧಿಯಲ್ಲಿ ಈ ಹಿಂದೆ ಪೂಜೆ ಸಲ್ಲಿಸಿದ್ದ…

Read More

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಭಾರಿ ಸಮಸ್ಯೆ

ಮೈಸೂರು, ಜೂನ್ 2: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ವ್ಯಾಪ್ತಿಯ ಕಬಿನಿ ಜಲಾಶಯದ ಹಿನ್ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ತೀವ್ರ ಆಹಾರದ ಕೊರತೆ ಎದುರಾಗಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಹಸಿರು ಸಂಪೂರ್ಣವಾಗಿ ಮಾಯವಾಗಿದ್ದು, ತಿನ್ನಲು ಹಸಿರು ಹುಲ್ಲು ಸಿಗದೆ ಕಾಡಾನೆಗಳು ಪರದಾಡುತ್ತಿವೆ. ಅಲ್ಪ ಪ್ರಮಾಣದ ಮಳೆಯಿಂದಾಗಿ ಅಲ್ಲಲ್ಲಿ ಮಾತ್ರ ಗರಿಕೆ ಬೆಳೆದಿದ್ದು, ಆನೆಗಳು ಕಾಲಿನಿಂದ ಒಣಗಿದ ಮಣ್ಣನ್ನು ಒದ್ದು, ಹುಲ್ಲಿನ ಬೇರುಗಳನ್ನು ಬೇರ್ಪಡಿಸಿ ತಿನ್ನುತ್ತಿರುವ…

Read More

‘ಅವರೇ ನನ್ನ ಮೇಲೆ ಹಣ ಖರ್ಚು ಮಾಡುತ್ತಿದ್ದರು’; ಸುಷ್ಮಿತಾ ಸೇನ್ ಬಗ್ಗೆ ಲಲಿತ್ ಮೋದಿ ಮಾತು

ನಾಲ್ಕು ವರ್ಷಗಳ ಹಿಂದೆ (2022ರಲ್ಲಿ), ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ ಅವರ ರೋಮ್ಯಾಂಟಿಕ್ ಫೋಟೋಗಳು ಆನ್‌ಲೈನ್‌ನಲ್ಲಿ ವೈರಲ್ ಆದಾಗ ಇಡೀ ದೇಶವೇ ಆಘಾತಕ್ಕೊಳಗಾಗಿತ್ತು. ಉದ್ಯಮಿ ಹಾಗೂ ಐಪಿಎಲ್‌ನ ಮಾಜಿ ಮುಖ್ಯಸ್ಥರಾದ ಲಲಿತ್ ಮೋದಿ ಮತ್ತು ಬಾಲಿವುಡ್‌ನ ಯಶಸ್ವಿ ನಟಿ ಸುಶ್ಮಿತಾ ಸೇನ್ ಅವರ ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ದೇಶದಿಂದ ದೂರ ಉಳಿದಿದ್ದ ಲಲಿತ್ ಮೋದಿ ಮತ್ತು ಸುಶ್ಮಿತಾ ಒಟ್ಟಿಗೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು….

Read More

Gold Rate: ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ದರ ಇಳಿಕೆ; ಭಾರತದಲ್ಲಿ ಎಷ್ಟಿದೆ ಬೆಲೆ?

ನವದೆಹಲಿ, ಜೂನ್ 2: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver rates) ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!

ಭಾರತೀಯ ಕ್ರಿಕೆಟ್​ನ ಮುಂದಿನ ಸೂಪರ್ ಸ್ಟಾರ್ ಎಂದೇ ಬಿಂಬಿತನಾಗಿರುವ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬಿಗ್ ಆಫರ್ ನೀಡಲಾಗಿದೆ. ಅದು ಕೂಡ ಬರೋಬ್ಬರಿ 12 ಕೋಟಿ ರೂ. ಭರ್ಜರಿ ಆಫರ್. ಪ್ರಮುಖ ಕಾರ್ಪೊರೇಟ್ ಟೈರ್​ ಕಂಪೆನಿಯೊಂದು ತಮ್ಮ ಬ್ರ್ಯಾಂಡ್ ಲೋಗೊವನ್ನು ಬ್ಯಾಟ್ ಮೇಲೆ ಪ್ರದರ್ಶಿಸಲು ವೈಭವ್​ಗೆ ಬರೋಬ್ಬರಿ 12 ಕೋಟಿ ರೂಪಾಯಿಗಳ ವಾರ್ಷಿಕ ಸ್ಪಾನ್ಸರ್​ಶಿಪ್ ಆಫರ್ ನೀಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಮತ್ತೊಂದು ಟೈರ್ ಕಂಪೆನಿ ಕೂಡ ವೈಭವ್ ಸೂರ್ಯವಂಶಿಯ…

Read More

Shani Retrograde: ಮೇಷ ರಾಶಿಯವರೇ ಎಚ್ಚರ! ಜು. 27 ರಿಂದ ಶನಿ ವಕ್ರಿ ನಡೆ; ನಿಮ್ಮ ಜೀವನದಲ್ಲಾಗಲಿದೆ ಭಾರಿ ಬದಲಾವಣೆ

ಮೇಷ ರಾಶಿಯವರ ಮೇಲೆ ಶನಿ ವಕ್ರಿ ಪ್ರಭಾವImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವನನ್ನು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಕರ್ಮಫಲ ದಾತನಾದ ಶನಿಯು ಜುಲೈ 27 ರಂದು ಹಿಮ್ಮುಖ ಚಲನೆಯನ್ನು (Retrograde/ವಕ್ರಿ ನಡೆ) ಪ್ರಾರಂಭಿಸಲಿದ್ದಾನೆ. ಪ್ರಸ್ತುತ ಮೇಷ ರಾಶಿಯವರಿಗೆ ಶನಿಯ ಸಾಡೇ ಸಾತಿಯ ಮೊದಲ ಹಂತ ನಡೆಯುತ್ತಿರುವುದರಿಂದ, ಈ ವಕ್ರಿ ಚಲನೆಯ ಪ್ರಭಾವವು ಅವರ ಜೀವನದ ಮೇಲೆ ಅತ್ಯಂತ ಆಳವಾಗಿರಲಿದೆ. ಜುಲೈ 27 ರ ನಂತರ ಮೇಷ ರಾಶಿಯವರ ವೃತ್ತಿ,…

Read More

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು…

Read More

ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್

ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ರುಕ್ಮಿಣಿ ವಸಂತ್ ಅವರ (Rukmini Vasanth) ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ. ಈ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿ, ಬೇರೆಯೊಬ್ಬರ ದೇಹಕ್ಕೆ ತಮ್ಮ ಮುಖವನ್ನು ಜೋಡಿಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂದು ನಟಿ ದೂರು ನೀಡಿದ್ದರು. ಈ ಕೃತ್ಯದಿಂದ ತಮಗೆ ತೀವ್ರ ಮುಜುಗರವಾಗಿದ್ದು, ತಮ್ಮ…

Read More

Zojila Tunnel : ಲಡಾಖ್-ಕಾಶ್ಮೀರ ನಡುವೆ ಸರ್ವಋತು ಸಂಪರ್ಕ, ಜೂನ್ 9ರೊಳಗೆ ಝೋಜಿಲಾ ಸುರಂಗದ ಉತ್ಖನನ ಕಾರ್ಯ ಪೂರ್ಣ

ಶ್ರೀನಗರ, ಜೂನ್ 02: ಕಾಶ್ಮೀರ(Kashmir) ಮತ್ತು ಲಡಾಖ್ ನಡುವೆ 365 ದಿನವೂ ಸುಗಮ ಸಂಚಾರ ಕಲ್ಪಿಸುವ, ದೇಶದ ಅತ್ಯಂತ ಹೆಮ್ಮೆಯ ಮತ್ತು ಅತಿ ಎತ್ತರದ ಮೂಲಸೌಕರ್ಯ ಯೋಜನೆಯಾದ ಝೋಜಿಲಾ ಸುರಂಗ (Zojila Tunnel) ಕಾಮಗಾರಿಯಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪುವ ಸಮಯ ಹತ್ತಿರ ಬಂದಿದೆ. ಹಿಮಾಲಯದ ಕಠಿಣ ಪರಿಸ್ಥಿತಿಯ ನಡುವೆಯೂ ಸುರಂಗದ ಉತ್ಖನನ ಕಾರ್ಯವು ಈಗ ಅಮತಿಮ ಹಂತಕ್ಕೆ ತಲುಪಿದ್ದು, ಜೂನ್ 9ರ ವೇಳೆಗೆ ಇದು ಸಂಪೂರ್ಣಗೊಳ್ಳಲಿದೆ. ಹಿಮಾಲಯದಲ್ಲಿ 11,578 ಅಡಿ ಎತ್ತರದಲ್ಲಿ ನಿರ್ಮಿಸಲಾಗಿರುವ ಈ 13.15 ಕಿಲೋಮೀಟರ್…

Read More