ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಬೆಂಗಳೂರು, ಏಪ್ರಿಲ್ 04: ನಗರದಲ್ಲಿ ಐಪಿಎಲ್ ಟಿಕೆಟ್ ಕ್ರೇಜ್ (IPL 2026) ಎಲ್ಲೆಡೆ ಹಬ್ಬಿದೆ. ತವರು ನೆಲದಲ್ಲಿ ತಮ್ಮ ಇಷ್ಟದ ಆಟಗಾರರ ಮ್ಯಾಚ್ ನೋಡಲು ಎಲ್ಲರಿಗೂ ಆಸೆಯಿದೆ. ಆದರೆ ಯಾವುದೋ ಅನಧಿಕೃತ ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಬೇಕಾಗುತ್ತದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಓರ್ವ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಎಚ್ಚರಿಕೆಯ ಗಂಟೆಯಾಗಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಪರಿಚಯವಾದ ವ್ಯಕ್ತಿ

ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಒಬ್ಬರು ಆನ್‌ಲೈನ್ ಮೋಸಕ್ಕೆ ಒಳಗಾಗಿ 1.46 ಲಕ್ಷ ರೂ. ಕಳೆದುಕೊಂಡಿದ್ದರ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿ ಟಿಕೆಟ್ ಮಾರಾಟಗಾರನಂತೆ ನಟಿಸಿ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ತನ್ನನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡ ಆರೋಪಿಯು, ಐಪಿಎಲ್ ಪಂದ್ಯಕ್ಕೆ ಟಿಕೆಟ್‌ಗಳ ಜೊತೆಗೆ ಊಟದ ಕೂಪನ್‌ಗಳು ಮತ್ತು ವಿಶೇಷ ಸೌಲಭ್ಯಗಳನ್ನು ಒದಗಿಸುವುದಾಗಿ ನಂಬಿಕೆ ಮೂಡಿಸಿದ್ದ. ಆರಂಭದಲ್ಲಿ ಎರಡು ಟಿಕೆಟ್‌ಗಳಿಗೆ 3,700 ರೂ. ದರ ನಿಗದಿ ಮಾಡಿದ್ದರೂ, ನಂತರ ಭದ್ರತಾ ಠೇವಣಿ, ಹೆಚ್ಚುವರಿ ಐಡಿ ಕಾರ್ಡ್ ಹಾಗೂ ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಕೇಳಿದ್ದ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ, ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದ ಎಂದು ನೊಂದ ವ್ಯಕ್ತಿ ಹೇಳಿದ್ದಾರೆ.

ಇದನ್ನೂ ಓದಿ ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಟಿಕೆಟ್​ ಕೊಡಲಿಲ್ಲ, ದುಡ್ಡೂ ಹಿಂದಿರುಗಿಸಲಿಲ್ಲ

ಆರೋಪಿಯ ಮಾತನ್ನು ನಂಬಿದ ವ್ಯಕ್ತಿ ತನ್ನ ಖಾತೆಯ ಜೊತೆಗೆ ತಾಯಿಯ ಖಾತೆಯಿಂದಲೂ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಿದ್ದು, ಒಟ್ಟು 1.46 ಲಕ್ಷ ರೂ.ಪಾವತಿಸಿರುವುದಾಗಿ ಹೇಳಿದ್ದಾರೆ. ಹಣ ಪಡೆದ ಬಳಿಕ ಟಿಕೆಟ್‌ಗಳನ್ನು ನೀಡಿಲ್ಲ, ಹಣವನ್ನೂ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಂಡು ಮಗು ಬೇಕೆಂಬ ಹಠಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನೇ ಕೊಂದು ಈಜುಕೊಳಕ್ಕೆ ಎಸೆದ ಕಟುಕ ತಂದೆ

ಹೈದರಾಬಾದ್, ಏ.4: ಗಂಡು ಮಗು ಬೇಕೆಂಬ ಅಂಧಾಭಿಮಾನ ಮತ್ತು ವಿಕೃತ ಮನಸ್ಥಿತಿಗೆ ಅಮಾಯಕ ಹೆಣ್ಣು ಜೀವಗಳು ಬಲಿಯಾಗಿರುವ ಘೋರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿ, ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಮೃತದೇಹಗಳನ್ನು ಈಜುಕೊಳಕ್ಕೆ ಎಸೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ತನ್ನ ಪತ್ನಿಯೊಂದಿಗೆ ಗಂಡು ಮಗುವಿನ ವಿಚಾರಕ್ಕಾಗಿ ಪದೇ ಪದೇ ಜಗಳವಾಡುತ್ತಿದ್ದನು. ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ, ಗಂಡು ಮಗು ಇಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದನು. ಈ ವಿಕೃತ ಹಂಬಲವು ಅಂತಿಮವಾಗಿ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.

ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ನಂತರ, ಆರೋಪಿಯು ಯಾರೂ ಇಲ್ಲದ ಸಮಯದಲ್ಲಿ ಮೃತದೇಹಗಳನ್ನು ಹತ್ತಿರದ ಈಜುಕೊಳಕ್ಕೆ ಎಸೆದಿದ್ದನು. ಆರಂಭದಲ್ಲಿ ಅವರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆ ಮತ್ತು ಪೊಲೀಸರ ತನಿಖೆಯಿಂದ ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತವಾಗಿ ನಡೆದ ಕೊಲೆ ಎಂಬುದು ಸಾಬೀತಾಗಿದೆ.

ಇದನ್ನೂ ಓದಿ: ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ಇನ್ನು ಫರ್ಹತ್ ಅವರ ಪತಿ ಅಜರುದ್ದೀನ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಅವರ ಪತ್ನಿ ಮತ್ತು ಪುತ್ರಿಯರುಕೊಳಕ್ಕೆ ಜಾರಿಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಪೊಲೀಸರಿಗೆ ಬಂದ ಅನುಮಾನದಿಂದ ಹಾಗೂ ಪತಿ ಅಜರುದ್ದೀನ್ ನೀಡಿರುವ ಹೇಳಿಕೆಯೂ ಈ ಪ್ರಕರಣಕ್ಕೆ ಹೊಂದಾಣಿಕೆ ಆಗುತ್ತಿಲ್ಲ ಎಂದು ತನಿಖೆ ನಡೆಸಿದಾಗ, ಇದು ಕೊಲೆ ಎಂದು ಸಾಬೀತಾಗಿದೆ. ಇನ್ನು ಫರ್ಹತ್​​ ತಂದೆ ನೀಡಿದ ದೂರು ಕೂಡ ಇದಕ್ಕೆ ಮತ್ತಷ್ಟು ಬಲವನ್ನು ನೀಡಿತ್ತು. ಕಳೆದ ಕೆಲವು ದಿನಗಳಿಂದ ತಮ್ಮ ಮಗಳು ಮತ್ತು ಅಳಿಯನ ನಡುವೆ ಮಕ್ಕಳ ಬಗ್ಗೆ ಮತ್ತು ಫರ್ಹತ್ ಗರ್ಭಧಾರಣೆಯ ಬಗ್ಗೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಆರೋಪಿಸಿ ಫರ್ಹತ್ ಅವರ ತಂದೆ ಅಲಿ ಪೊಲೀಸರಿಗೆ ದೂರು ನೀಡಿದ್ದರು. ಅಜರುದ್ದೀನ್ ಅವರಿಗೆ ಮತ್ತೊಂದು ಹೆಣ್ಣು ಮಗು ಬೇಡವಾಗಿದ್ದು, ಗರ್ಭಪಾತ ಮಾಡಿಸಿಕೊಳ್ಳುವಂತೆ ಫರ್ಹತ್​​ಗೆ ಒತ್ತಾಯಿಸುತ್ತಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸರಣಿ ರದ್ದು ಮಾಡಿದ್ದೇಕೆ?

ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್ ಹಸೀನಾ ಸರ್ಕಾರ ಪತನಗೊಂಡ ನಂತರದ ಪರಿಸ್ಥಿತಿಯಿಂದಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

ರಾಜತಾಂತ್ರಿಕ ಉದ್ವಿಗ್ನತೆ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವುದು ಮತ್ತು ಭಾರತ ಸರ್ಕಾರವು ಈ ಪ್ರವಾಸಕ್ಕೆ ಇನ್ನೂ ಹಸಿರು ನಿಶಾನೆ ನೀಡದಿರುವುದು ಸರಣಿ ವಿಳಂಬಕ್ಕೆ ಕಾರಣವಾಗಿದೆ.

ವೇಳಾಪಟ್ಟಿಯ ಒತ್ತಡ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸರಣಿಗಳ ಒತ್ತಡ ಹೆಚ್ಚಿರುವುದರಿಂದ, ಎರಡೂ ಮಂಡಳಿಗಳು ಪರಸ್ಪರ ಚರ್ಚಿಸಿ ಸರಣಿಯನ್ನು 2026ಕ್ಕೆ ಮರುನಿಗದಿಗೊಳಿಸಲು ಒಪ್ಪಿಕೊಂಡವು.

ಸ್ಥಿರ ಸರ್ಕಾರದ ನಿರೀಕ್ಷೆ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದು ಸ್ಥಿರ ಸರ್ಕಾರ ಬಂದ ನಂತರವಷ್ಟೇ ಸರಣಿ ನಡೆಸುವುದು ಸೂಕ್ತ ಎಂದು ಬಿಸಿಸಿಐ ಭಾವಿಸಿದ್ದೆವು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದೆ.

ಸರಣಿಯ ಮುಖ್ಯಾಂಶಗಳು:

ಈ ಪ್ರವಾಸದಲ್ಲಿ ಭಾರತ ತಂಡವು 3 ಏಕದಿನ (ODI) ಮತ್ತು 3 ಟಿ20 (T20I) ಪಂದ್ಯಗಳನ್ನು ಆಡಲಿದೆ. ವಿಶೇಷವೆಂದರೆ, ಬಾಂಗ್ಲಾದೇಶದ ನೆಲದಲ್ಲಿ ಭಾರತ ತಂಡವು ಆಡಲಿರುವ ಮೊದಲ ದ್ವಿಪಕ್ಷೀಯ ಟಿ20 ಸರಣಿ ಇದಾಗಿದೆ.

ಸರಣಿಯ ಸಂಭಾವ್ಯ ವೇಳಾಪಟ್ಟಿ:

  • ಸೆಪ್ಟೆಂಬರ್ 1: 1ನೇ ಏಕದಿನ ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 3: 2ನೇ ಏಕದಿನ ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 6: 3ನೇ ಏಕದಿನ ಪಂದ್ಯ (ಚಟ್ಟೋಗ್ರಾಮ್)
  • ಸೆಪ್ಟೆಂಬರ್ 9: 1ನೇ ಟಿ20 ಪಂದ್ಯ (ಚಟ್ಟೋಗ್ರಾಮ್)
  • ಸೆಪ್ಟೆಂಬರ್ 12: 2ನೇ ಟಿ20 ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 13: 3ನೇ ಟಿ20 ಪಂದ್ಯ (ಮೀರ್‌ಪುರ)

ಇದನ್ನೂ ಓದಿ: ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಪ್ರಮುಖ ಮಾಹಿತಿ:

ಭಾರತ ತಂಡವು ಆಗಸ್ಟ್ 28, 2026 ರಂದು ಬಾಂಗ್ಲಾದೇಶಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಸರಣಿಗಾಗಿ ಬಾಂಗ್ಲಾದೇಶವು ತನ್ನ ಐರ್ಲೆಂಡ್ ಪ್ರವಾಸವನ್ನೇ ಮುಂದೂಡಿ ಭಾರತಕ್ಕೆ ಆತಿಥ್ಯ ವಹಿಸಲು ಆದ್ಯತೆ ನೀಡಿದೆ. ಸದ್ಯದ ವರದಿಗಳ ಪ್ರಕಾರ, ಬಿಸಿಸಿಐ ಈ ಪ್ರವಾಸಕ್ಕೆ ಭಾರತ ಸರ್ಕಾರದ ಅಂತಿಮ ಅನುಮತಿಯನ್ನು ಎದುರು ನೋಡುತ್ತಿದೆ.

 

 

Source link

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು. ಅವರು ಅದನ್ನು ಕದ್ದು ಸಿನಿಮಾ ಮಾಡಿದ್ದಾರೆ. ನಾನು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳುಗೆ ಕಥೆ ಹೇಳಿದ್ದೆ. ನಾನು ದೊಡ್ಡ ದೊಡ್ಡ ಕಲಾವಿದರನ್ನು ಸಿನಿಮಾದಲ್ಲಿ ಹಾಕಿಕೊಳ್ಳುವ ಪ್ಲ್ಯಾನ್ ಇತ್ತು’ ಎಂದಿದ್ದರು.

ಈ ವಿಷಯವಾಗಿ ಆದಿತ್ಯ ಧಾರ್ ಅವರು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಬದಲಿಗೆ ಕಾನೂನಾತ್ಮಕವಾಗಿಯೇ ಉತ್ತರಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ವರದಿಗಳ ಪ್ರಕಾರ, ತಮ್ಮ ಕಾನೂನು ತಂಡದ ಜೊತೆ ಮಾತನಾಡಿರುವ ಆದಿತ್ಯ ಧಾರ್ ಅವರು ಸಂತೋಷ್​​ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಈ ರೀತಿ ಸುಳ್ಳು ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.

ಆದರೆ, ಇದಕ್ಕೆ ಸಂತೋಷ್ ಕುಮಾರ್ ಸುಮ್ಮನಾಗಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂತೋಷ್ ಕುಮಾರ್ ನೇರವಾಗಿ ಹೇಳಿದ್ದಾರೆ. ಮೌನವಾಗಿರಲು ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೋರ್ಟ್​​​ನಲ್ಲಿ ವಿಷಯ ಹೋರಾಡುವುದಾಗಿ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಇದರಿಂದ ಸಿಟ್ಟಾಗಿರೋ ಆದಿತ್ಯ ಧಾರ್ ಅವರಿಗೆ ಮತ್ತಷ್ಟು ಸಿಟ್ಟಾಗಿದ್ದಾರೆ. ಎಚ್ಚರಿಕೆಯ ಬಳಿಕವೂ ಸಂತೋಷ್ ಅವರು ಆಧಾರ ರಹಿತ ಹೇಳಿಕೆ ಮುಂದುವರಿಸಿದ್ದಾರೆ ಎಂಬುದು ಆದಿತ್ಯ ಧಾರ್ ಅವರ ಆರೋಪ. ಈ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Indian Army Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆಯ ಕಾಲಾವಕಾಶ ವಿಸ್ತರಣೆ

ಭಾರತೀಯ ಸೇನೆಯು 2026 ರ ಅಗ್ನಿವೀರ್ ನೇಮಕಾತಿಯ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಮೂಲತಃ ಏಪ್ರಿಲ್ 1 ರಂದು ಮುಕ್ತಾಯಗೊಳ್ಳಬೇಕಿದ್ದ ಈ ಗಡುವನ್ನು ಈಗ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ದೇಶ ಸೇವೆ ಮಾಡಲು ಬಯಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳ ವಿವರ ಮತ್ತು ಅರ್ಹತೆ:

ಈ ನೇಮಕಾತಿಯು ಅಗ್ನಿವೀರ್ ಜನರಲ್ ಡ್ಯೂಟಿ (GD), ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ (SKT) ಹಾಗೂ 8ನೇ ಮತ್ತು 10ನೇ ತರಗತಿ ಉತ್ತೀರ್ಣರಾದವರಿಗಾಗಿ ಅಗ್ನಿವೀರ್ ಟ್ರೇಡ್ಸ್‌ಮನ್ ಹುದ್ದೆಗಳನ್ನು ಒಳಗೊಂಡಿದೆ.

  • ಜನರಲ್ ಡ್ಯೂಟಿ: ಕನಿಷ್ಠ ಶೇ. 45 ಅಂಕಗಳೊಂದಿಗೆ 10ನೇ ತರಗತಿ ಪಾಸಾಗಿರಬೇಕು.
  • ತಾಂತ್ರಿಕ ಹುದ್ದೆ: ಪಿಸಿಎಂ (Physics, Chemistry, Maths) ವಿಷಯಗಳೊಂದಿಗೆ 12ನೇ ತರಗತಿ ಪಾಸಾಗಿರಬೇಕು.
  • ಕ್ಲರ್ಕ್/ಎಸ್‌ಕೆಟಿ: ಯಾವುದೇ ವಿಭಾಗದಲ್ಲಿ ಶೇ.60 ಅಂಕಗಳೊಂದಿಗೆ 12ನೇ ತರಗತಿ ಪಾಸಾಗಿರಬೇಕು.
  • ಟ್ರೇಡ್ಸ್‌ಮನ್: ಹುದ್ದೆಗೆ ಅನುಗುಣವಾಗಿ 8ನೇ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1, 2026 ಕ್ಕೆ ಅನ್ವಯವಾಗುವಂತೆ 17.5 ರಿಂದ 21 ವರ್ಷ ವಯಸ್ಸಿನವರಾಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಅರ್ಜಿ ಶುಲ್ಕವಾಗಿ ರೂ.250 ನಿಗದಿಪಡಿಸಲಾಗಿದ್ದು, ಇದನ್ನು ನೆಟ್ ಬ್ಯಾಂಕಿಂಗ್, UPI ಅಥವಾ ಕಾರ್ಡ್‌ಗಳ ಮೂಲಕ ಪಾವತಿಸಬಹುದು. ಅರ್ಜಿಯೊಂದಿಗೆ ಭಾವಚಿತ್ರ, ಸಹಿ ಮತ್ತು ಗುರುತಿನ ಚೀಟಿಯ ಸ್ಕ್ಯಾನ್ ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಆಯ್ಕೆ ಪ್ರಕ್ರಿಯೆಯ ಹಂತಗಳು:

ಅಗ್ನಿವೀರ್ ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯುತ್ತದೆ:

  • ಆನ್‌ಲೈನ್ ಲಿಖಿತ ಪರೀಕ್ಷೆ (ಜೂನ್ 1 ರಿಂದ 15, 2026 ರವರೆಗೆ).
  • ದೈಹಿಕ ದಕ್ಷತೆ ಪರೀಕ್ಷೆ (PET) ಮತ್ತು ದೈಹಿಕ ಮಾಪನ ಪರೀಕ್ಷೆ (PMT).
  • ಟೈಪಿಂಗ್ ಅಥವಾ ಟ್ರೇಡ್ ಪರೀಕ್ಷೆ (ಅನ್ವಯವಾಗುವ ಹುದ್ದೆಗಳಿಗೆ ಮಾತ್ರ).
  • ದಾಖಲೆಗಳ ಪರಿಶೀಲನೆ.
  • ಅಂತಿಮ ವೈದ್ಯಕೀಯ ಪರೀಕ್ಷೆ.

ಬಹು ವಿಭಾಗಗಳಲ್ಲಿ ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ನಿಯಮಿತ ವಿಭಾಗದ ಜೊತೆಗೆ ಇನ್ನು ಎರಡು ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ, ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಗಮನಿಸಬೇಕಾದ ಅಂಶವೆಂದರೆ, ಅಭ್ಯರ್ಥಿಯು ಕೇವಲ ಒಂದು ನೇಮಕಾತಿ ರ‍್ಯಾಲಿಯಲ್ಲಿ ಮಾತ್ರ ಭಾಗವಹಿಸಲು ಸಾಧ್ಯವಿದ್ದು, ಅಲ್ಲಿಯೇ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು ಆಧ್ಯಾತ್ಮಿಕ ಚಿಂತನೆಯತ್ತ ಮುಖ ಮಾಡಿದ್ದಾರೆ.

ಏಪ್ರಿಲ್ 5 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆಟಗಾರರು ಶ್ರೀವಾರಿ ಆಶೀರ್ವಾದ ಪಡೆದರು. ವಿಶೇಷ ಎಂದರೆ ಕಳೆದ ವರ್ಷವೂ ಸಹ ತಂಡದ ಪ್ರಮುಖ ಆಟಗಾರರು ತಿರುಮಲಕ್ಕೆ ಭೇಟಿ ನೀಡಿದ್ದರು, ಅದು ತಂಡಕ್ಕೆ ಅದೃಷ್ಟ ತಂದಿತ್ತು ಎಂಬ ನಂಬಿಕೆ ಅಭಿಮಾನಿಗಳಲ್ಲಿದೆ. ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ.

 

Source link

ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದಿದ್ಯಾಕೆ ನೋಡಿ!

ಬಾಗಲಕೋಟೆ, ಏಪ್ರಿಲ್ 4: ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಸಭ್ಯ ಪದ ಬಳಸಿದ ಬಿಜೆಪಿ ನಾಯಕ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟ ಅವರು, ಬಿಜೆಪಿ ಪರ ಪ್ರಚಾರದ ವೇಳೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಗಳನ್ನೂ ಖಂಡಿಸಿದರು. ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳು ಮತ್ತು ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳುವುದಾಗಿ ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ, ತಾವು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂ. ನೀಡುವುದಾಗಿ ಮತ್ತು ಕಲ್ಲು ತೂರಾಟ ನಡೆಸಿದರೆ ಅಂತಹ ಮತ್ತು ಅಕ್ರಮವಾಗಿ ಕಟ್ಟಿದ ಮಸೀದಿಯನ್ನು ಬುಲ್ಡೋಜರ್ ಮೂಲಕ ಕೆಡವುವ ಹೇಳಿಕೆಯನ್ನು ಸಿದ್ದರಾಮಯ್ಯ ಖಂಡಿಸಿದರು. ಇಂತಹ ಹೇಳಿಕೆಗಳು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿವೆ ಮತ್ತು ರಾಜಕೀಯ ವ್ಯಕ್ತಿಗಳಿಗೆ ಅಸಮಂಜಸವಾಗಿವೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು. ಮುಸಲ್ಮಾನರು ಭಾರತದ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದು, ಅವರನ್ನು ದೇಶದಿಂದ ಹೊರಹಾಕಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದ್ವೇಷದ ರಾಜಕಾರಣ ಸಹಿಸಲಾಗದು ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಮ್ಮೆ ಸಗಣಿಯನ್ನೂ ಬಿಡದ ಪಾಕ್ ಸರ್ಕಾರ!: ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

ಲಾಹೋರ್, ಏ. 04: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ತಾರಕಕ್ಕೇರಿದೆ ಎಂದರೆ, ಅಲ್ಲಿನ ಸರ್ಕಾರ ಈಗ ಜಾನುವಾರುಗಳ ತ್ಯಾಜ್ಯಕ್ಕೂ ತೆರಿಗೆ ವಿಧಿಸಲು ಮುಂದಾಗಿದೆ. ಮುಖ್ಯಮಂತ್ರಿ ಮರಿಯಮ್ ನವಾಜ್ ನೇತೃತ್ವದ ಆಡಳಿತವು ಪ್ರತಿ ಎಮ್ಮೆಗೆ ದಿನಕ್ಕೆ 30 ಪಾಕಿಸ್ತಾನಿ ರೂಪಾಯಿ (PKR 30) ‘ಗೋಬರ್ ಟ್ಯಾಕ್ಸ್’ (ಸಗಣಿ ತೆರಿಗೆ) ವಿಧಿಸುವುದಾಗಿ ಘೋಷಿಸಿದೆ.

ಸರ್ಕಾರವು ಈ ಕ್ರಮವನ್ನು ‘ಸುತ್ರಾ ಪಂಜಾಬ್’ (ಸ್ವಚ್ಛ ಪಂಜಾಬ್) ಬಯೋಗ್ಯಾಸ್ ಕಾರ್ಯಕ್ರಮದ ಅಡಿಯಲ್ಲಿ ಜಾರಿಗೆ ತರುತ್ತಿದೆ. ಪ್ರಾಂತ್ಯದಾದ್ಯಂತ ಇರುವ 168 ಜಾನುವಾರು ಕಾಲನಿಗಳನ್ನು ಗುರುತಿಸಲಾಗಿದ್ದು, ಅಲ್ಲಿನ ಪ್ರತಿ ಎಮ್ಮೆಯ ಸಗಣಿಯನ್ನು ಸಂಗ್ರಹಿಸಿ ಬಯೋಗ್ಯಾಸ್ ಉತ್ಪಾದಿಸಲು ಮತ್ತು ನಗರದ ನೈರ್ಮಲ್ಯ ಕಾಪಾಡಲು ಈ ತೆರಿಗೆಯನ್ನು ಬಳಸಲಾಗುವುದು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಈ ಹೊಸ ತೆರಿಗೆಯು ರೈತರಿಗೆ ಭಾರಿ ಹೊರೆಯಾಗಲಿದೆ. ಒಂದು ಎಮ್ಮೆಗೆ ದಿನಕ್ಕೆ 30 ರೂಪಾಯಿಯಂತೆ ಲೆಕ್ಕ ಹಾಕಿದರೆ, ವರ್ಷಕ್ಕೆ ಸುಮಾರು 11,000 ರೂಪಾಯಿ ತೆರಿಗೆ ಪಾವತಿಸಬೇಕಾಗುತ್ತದೆ. ಈಗಾಗಲೇ ಪಶು ಆಹಾರದ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಮತ್ತು ಹಣದುಬ್ಬರದಿಂದ ಕಂಗಾಲಾಗಿರುವ ಸಣ್ಣ ರೈತರು ಈ ನಿರ್ಧಾರದಿಂದ ಕಂಗೆಟ್ಟಿದ್ದಾರೆ.

ಇದನ್ನೂ ಓದಿ: ಆಮೇಲೆ ಶಾಂತಿ ಜಪ ಮಾಡಿ, ಮೊದಲು ನಮ್ಮ ಸಾಲ ವಾಪಸ್ ಕೊಡಿ ಎಂದು ಪಾಕಿಸ್ತಾನವನ್ನು ಕೇಳಿದ ಯುಎಇ

“ಇದು ಸರ್ಕಾರದ ದಿವಾಳಿತನದ ಪರಮಾವಧಿ” ಎಂದು ವಿರೋಧ ಪಕ್ಷಗಳು ಟೀಕಿಸಿವೆ. ರಾಜ್ಯದಲ್ಲಿ ಆದಾಯ ಸಂಗ್ರಹಿಸಲು ಬೇರೆ ಯಾವುದೇ ದಾರಿ ಇಲ್ಲದೆ ಈಗ ಎಮ್ಮೆಗಳ ಸಗಣಿಯನ್ನು ಅಳತೆ ಮಾಡುವ ಸ್ಥಿತಿಗೆ ಸರ್ಕಾರ ತಲುಪಿದೆ ಎಂದು ಲೇವಡಿ ಮಾಡಲಾಗಿದೆ. ಶ್ರೀಮಂತ ರಾಜಕಾರಣಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರೆ, ಬಡ ರೈತನ ಮೇಲೆ ಈ ರೀತಿ ತೆರಿಗೆ ಹೇರಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕನ್ನಡದ ಹೀರೋಗಳು ರಾಮನ ಪಾತ್ರ ಮಾಡಿದ್ರೆ ಹೀಗೆ ಕಾಣಿಸ್ತಾರೆ; ಯಾರಿಗೆ ಹೆಚ್ಚು ಸೂಕ್ತ?

Source link

ಚಿಕ್ಕಬಳ್ಳಾಪುರ: ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

ಚಿಕ್ಕಬಳ್ಳಾಪುರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಕಾರಣದಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ಬಹುತೇಕ ದೊಡ್ಡ ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಪರಿಸ್ಥಿತಿಯು ಚಿಕ್ಕಬಳ್ಳಾಪುರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ರೈತರು ಮಗುವಿನಂತೆ ಆರೈಕೆ ಮಾಡಿ ಬೆಳೆದ ಆಲೂಗಡ್ಡೆಗೆ ಉತ್ತಮ ಬೆಲೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೊಯ್ಲು ಮಾಡಿದ ಆಲೂಗಡ್ಡೆಯನ್ನು ಸಂಗ್ರಹಿಸಿಟ್ಟರೂ, ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದೆ ಮತ್ತು ಹೋಟೆಲ್‌ಗಳು ತೆರೆಯದ ಕಾರಣ ಮಾರಾಟವಾಗುತ್ತಿಲ್ಲ. ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಅತ್ಯುತ್ತಮ ಗುಣಮಟ್ಟದ ಆಲೂಗಡ್ಡೆ (52 ಕೆ.ಜಿ. ಮೂಟೆ) ಕೇವಲ 300 ರೂಪಾಯಿಗೆ ಮಾರಾಟವಾಗುತ್ತಿದ್ದು, ಕಳಪೆ ಗುಣಮಟ್ಟದ ಆಲೂಗಡ್ಡೆಗೆ 20 ರಿಂದ 50 ರೂಪಾಯಿ ಮಾತ್ರ ಸಿಗುತ್ತಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version