ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು? – Kannada News | Kj george Clarify about His resignation to Minister Post

ಬೆಂಗಳೂರು, (ಜನವರಿ 29): ಕರ್ನಾಟಕ ಕಾಂಗ್ರೆಸ್ (Karnataka Congress)​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ (kj george) ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು… ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ ದೊಡ್ಡ ಸದ್ದು ಮಾಡಿದೆ. ತಮ್ಮ ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಬೇಸರಗೊಂಡಿದ್ದು, ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್​ನ ಮೂಲಗಳು ಟಿವಿ9ಗೆ ತಿಳಿಸಿವೆ. ಆದ್ರೆ, ಇದನ್ನು ಸಚಿವ ಜಾರ್ಜ್ ಅಲ್ಲಗಳೆದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂಧನ ಇಲಾಖೆಯಲ್ಲಿ ಡಾ.ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ. ವಿಧಾನಸಭೆಯಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಒಬ್ಬ ಸಚಿವರು ರಾಜೀನಾಮೆ ನೀಡುವುದು ಅಷ್ಟು ಸುಲಭವೇ? ನಾನು ಯಾವುದೇ ಅಧಿಕಾರಿ ವಿಚಾರದಲ್ಲಿ ಪಟ್ಟು ಹಿಡಿಯಲ್ಲ. ಡಾ.ಯತೀಂದ್ರ ಒಳ್ಳೆಯವರು. ಅವರಿಗೆ ಯಾಕೆ ಕೆಟ್ಟ ಹೆಸರು? ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು – Kannada News | Economic Survey 2026, key highlights from GDP projection to Infrastructure importance

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

Source link

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ – Kannada News | Khadi clothes is mandatory for Karnataka government employees: Important order from the government

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ (government employees) ಖಾದಿ (Khadi) ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಆ ಮೂಲಕ ಸರ್ಕಾರ ವಸ್ತ್ರಸಂಹಿತೆ ಜಾರಿಗೊಳಿಸಲು ಮುಂದಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.

ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
  • ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.

ಇದನ್ನೂ ಓದಿ: ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್

  • ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Personality Test: ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | Personality Test: Do you know what the mysterious personality of those born in February?

ಪ್ರತಿಯೊಬ್ಬರ ವ್ಯಕ್ತಿತ್ವವೂ (Personality) ಭಿನ್ನ ವಿಭಿನ್ನವಾಗಿರುತ್ತದೆ. ಕೆಲವರು ತುಂಬಾ ಶಾಂತ ಸ್ವಭಾವದವರಾದರೇ ಇನ್ನೂ ಕೆಲವರು ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುವವರಾಗಿರುತ್ತಾರೆ. ಅದರಲ್ಲೂ ಮಂಗಳವಾರ ಜನಿಸಿದವರೂ ಸಿಕ್ಕಾಪಟ್ಟೆ ಕೋಪಿಷ್ಟರು ಎನ್ನಲಾಗುತ್ತದೆ. ವ್ಯಕ್ತಿಯ ಈ ಎಲ್ಲಾ ಗುಣಸ್ವಭಾವಗಳನ್ನು ಹುಟ್ಟಿದ ದಿನ, ದಿನಾಂಕ, ಘಳಿಗೆಯ ಆಧಾರದ ಮೇಲೆ  ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮುಖಾಂತರ ತಿಳಿಯಬಹುದಾಗಿದೆ. ಹುಟ್ಟಿದ ದಿನ ಮಾತ್ರವಲ್ಲದೆ ಹುಟ್ಟಿದ ತಿಂಗಳ ಆಧಾರ ಮೇಲೂ ವ್ಯಕ್ತಿಯ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಂತೆ. ಫೆಬ್ರವರಿ ತಿಂಗಳು ಇನ್ನೇನೂ ಆರಂಭವಾಗುವ ಈ ಹೊತ್ತಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ ಹುಟ್ಟಿದವರ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷಿಸೋಣ.

ಫೆಬ್ರವರಿ ತಿಂಗಳಲ್ಲಿ ಹುಟ್ಟಿದವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?

  • ಫೆಬ್ರವರಿಯಲ್ಲಿ ಜನಿಸಿದ ಜನರು ಇತರರನ್ನು ತಮ್ಮತ್ತ ಆಕರ್ಷಿಸುವ ಶಕ್ತಿಯನ್ನು ಹೊಂದಿರುತ್ತಾರೆ. ಈ ಜನರು ತಮ್ಮ ಭಾವನೆಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ.
  • ಸಂಶೋಧನೆಯ ಪ್ರಕಾರ, ಈ ತಿಂಗಳಲ್ಲಿ ಜನಿಸಿದ ಜನರು ಸ್ವಭಾವತಃ ತುಂಬಾ ರೋಮ್ಯಾಂಟಿಕ್ ಆಗಿರುತ್ತಾರೆ. ಈ ಜನರು ಯಾವಾಗಲೂ ಸಂತೋಷವಾಗಿರುತ್ತಾರೆ.
  • ಕುತೂಹಲದಿಂದ ಕೂಡಿದ ಇವರು ಯಾವಾಗಲೂ ಹೊಸ ವಿಷಯಗಳನ್ನು ಕಲಿಯಲು ಇಷ್ಟಪಡುತ್ತಾರೆ ಮತ್ತು ತಮ್ಮ ಜೀವನದಲ್ಲಿ ಮುಕ್ತರಾಗಿರಲು ಬಯಸುತ್ತಾರೆ.
  • ಫೆಬ್ರವರಿಯಲ್ಲಿ ಜನಿಸಿದ ಜನರು ಬಹಳ ಆಕರ್ಷಕ ಮತ್ತು ಪ್ರಭಾವಶಾಲಿ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಅವರು ತುಂಬಾ ಚುರುಕು ಮತ್ತು ಬುದ್ಧಿವಂತರು, ಇದು ಅವರನ್ನು ಪ್ರಶಂಸೆಗೆ ಪಾತ್ರರನ್ನಾಗಿ ಮಾಡುತ್ತದೆ. ಅವರು ತಮ್ಮ ಮಾತುಗಳಿಂದ ಎಲ್ಲರನ್ನೂ ಗೆಲ್ಲುತ್ತಾರೆ. ಇದಲ್ಲದೆ, ಅವರು ಬೇಗನೆ ಸ್ನೇಹಿತರನ್ನು ಮಾಡಿಕೊಳ್ಳುತ್ತಾರೆ ಮತ್ತು ಎಲ್ಲರೊಂದಿಗೆ ಬೆರೆಯುವುದನ್ನು ಆನಂದಿಸುತ್ತಾರೆ.
  • ಫೆಬ್ರವರಿಯಲ್ಲಿ ಜನಿಸಿದ ಹುಡುಗಿಯರು ಸ್ವಾಭಿಮಾನಿಗಳು ಎಂದು ಹೇಳಲಾಗುತ್ತದೆ. ಅವರು ಎಂದಿಗೂ ತಮ್ಮ ಸಂಗಾತಿಗಳಿಗೆ ತಲೆಬಾಗುವುದಿಲ್ಲ. ಅಲ್ಲದೆ, ಈ ತಿಂಗಳಲ್ಲಿ ಜನಿಸಿದ ಜನರು ಎಂದಿಗೂ ಇತರರನ್ನು ನಂಬುವುದಿಲ್ಲ.

ಫೆಬ್ರವರಿಯಲ್ಲಿ ಜನಿಸಿದವರ ವೃತ್ತಿ ಜೀವನ ಹೇಗಿರುತ್ತದೆ?

ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರು ಸೃಜನಶೀಲತೆ ಮತ್ತು ದೂರದೃಷ್ಟಿಯನ್ನು ಹೊಂದಿದ್ದು, ಇವರು  ಕಲೆ, ವಿಜ್ಞಾನ, ಸಾಹಿತ್ಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಬಹುದು. ಇವರ ವೃತ್ತಿಜೀವನದ ವಿಷಯಕ್ಕೆ ಬಂದರೆ, ಇವರಿಗೆ ಉಜ್ವಲ ಭವಿಷ್ಯವಿದೆ. ಈ ತಿಂಗಳಲ್ಲಿ ಜನಿಸಿದವರು ತಮ್ಮ ಕಠಿಣ ಪರಿಶ್ರಮದ ಮೂಲಕ, ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮನ್ನು ತಾವು ಸ್ಥಾಪಿಸಿಕೊಳ್ಳುತ್ತಾರೆ. ಅವರು ತಮ್ಮ ಕಠಿಣ ಪರಿಶ್ರಮದ ಮೂಲಕ ಶ್ರೀಮಂತರಾಗುತ್ತಾರೆ. ಕೆಲವೊಮ್ಮೆ, ಇವರು ಭಾವನಾತ್ಮಕರಾಗುತ್ತಾರೆ, ಇದು ಇವರ ವೃತ್ತಿಜೀವನದಲ್ಲಿ ಗಮನಾರ್ಹ ಅಡೆತಡೆಗಳನ್ನು ಸೃಷ್ಟಿಸಬಹುದು. ಆದರೆ ಕಠಿಣ ಪರಿಶ್ರಮ ಮತ್ತು ಕೆಲಸದ ಮೇಲೆ ಗಮನ ಹರಿಸುವ  ಮೂಲಕ ಯಶಸ್ಸನ್ನು ಸಾಧಿಸುತ್ತಾರೆ.

ಇದನ್ನೂ ಓದಿ: ಫೆಬ್ರವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ

ಫೆಬ್ರವರಿಯಲ್ಲಿ ಜನಿಸಿದವರ ಪ್ರೀತಿ ಜೀವನ ಹೇಗಿರುತ್ತದೆ? 

ಫೆಬ್ರವರಿಯಲ್ಲಿ ಜನಿಸಿದ ಜನರು ತುಂಬಾ ರೋಮ್ಯಾಂಟಿಕ್ ಆಗಿರುತ್ತಾರೆ. ಇವರು ಬಾಹ್ಯ ಸೌಂದರ್ಯಕ್ಕಿಂತ ವ್ಯಕ್ತಿಯ ಮುಗ್ಧತೆ ಮತ್ತು ನಿಜವಾದ ಪ್ರೀತಿ, ಹೃದಯವನ್ನು ಹೆಚ್ಚು ಇಷ್ಟಪಡುತ್ತಾರೆ. ಇವರು ತಮ್ಮವರನ್ನು ಹೆಚ್ಚಾಗಿ ನಂಬುತ್ತಾರೆ. ಇದೇ ಕಾರಣದಿಂದ ಇವರು ನಂಬಿಕೆ ದ್ರೋಹಗಳಿಗೆ ಒಳಗಾಗುವ ಸಾಧ್ಯತೆಯೂ ಹೆಚ್ಚು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ? – Kannada News | Raj B Shetty starrer Rakkasapuradol movie trailer released

ರಾಜ್ ಬಿ ಶೆಟ್ಟಿ (Raj B Shetty) ಪ್ರಸ್ತುತ ಕನ್ನಡ ಚಿತ್ರರಂಗದ ಬಲು ವರ್ಸಟೈಲ್ ನಟ, ಭಿನ್ನ ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಹೀರೋ, ಕಮಿಡಿಕ್ ಹಿರೋ, ವಿಲನ್, ಸಾಮಾನ್ಯ ವ್ಯಕ್ತಿ, ಅಂಗವಿಕಲ ಹೀಗೆ ನಾನಾ ರೀತಿಯ ಪಾತ್ರಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಇದೀಗ ಶೆಟ್ಟರು ಮತ್ತೊಂದು ಭಿನ್ನ ರೀತಿಯ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ‘ರಕ್ಕಸಪುರದೊಳ್’ ಹೆಸರಿನ ಮಾಸ್ ಥ್ರಿಲ್ಲರ್ ಸಿನಿಮಾನಲ್ಲಿ ನಾಯಕನಾಗಿ ರಾಜ್ ಬಿ ಶೆಟ್ಟಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇಂದು (ಜನವರಿ 29) ಬಿಡುಗಡೆ ಆಗಿದೆ.

‘ರಕ್ಕಸಪುರದೊಳ್’ ಸಿನಿಮಾದ ಹೆಸರೇ ಹೇಳುವಂತೆ ಇದು ಒಂದು ಊರಿನ ಕತೆ, ಆ ಊರಿನಲ್ಲಿ ನಡೆಯುವ ಅಪರಾಧಗಳ ಹಿಂದಿನ ಕತೆ. ರಾಜ್ ಬಿ ಶೆಟ್ಟಿ ಈ ವರೆಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ ಆದರೆ ಇಲ್ಲಿ ಮೊದಲ ಬಾರಿಗೆ ಸಖತ್ ಎಲಿವೇಷನ್ ದೃಶ್ಯಗಳುಳ್ಳ ಮಾಸ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರದ್ದು ಸಖತ್ ಮಾಸ್ ಪೊಲೀಸ್ ಅಧಿಕಾರಿಯ ಪಾತ್ರ.

‘ರಕ್ಕಸಪುರದೊಳ್’ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಆಕ್ಷನ್ ಮತ್ತು ಕಾಮಿಡಿಯನ್ನೂ ಹೊಂದಿದೆ ಎಂಬ ಸುಳಿವನ್ನು ಇಂದು ಬಿಡುಗಡೆ ಆಗಿರುವ ಟ್ರೈಲರ್ ನೀಡುತ್ತಿದೆ. ಟ್ರೈಲರ್​​ನಲ್ಲಿ ರಾಜ್ ಬಿ ಶೆಟ್ಟಿಯ ಎಂಟ್ರಿ ಹಾಗೂ ಕೆಲವು ಸಖತ್ ಆಕ್ಷನ್ ದೃಶ್ಯಗಳ ತುಣುಕುಗಳನ್ನು ತೋರಿಸಲಾಗಿದೆ. ಶೆಟ್ಟರಂತೂ ಪೊಲೀಸ್ ಪಾತ್ರದಲ್ಲಿ ಸಖತ್ ಮಿಂಚಿದ್ದಾರೆ. ಆದರೆ ಟ್ರೈಲರ್​​ನಲ್ಲೆಲ್ಲೂ ಅವರು ಸಮವಸ್ತ್ರ ಧರಿಸಿದ್ದು ಕಾಣುತ್ತಿಲ್ಲ!

ಇದನ್ನೂ ಓದಿ:ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ

ಒಂದು ಊರಿನಲ್ಲಿ ಕೊಲೆಗಳು ನಡೆಯುತ್ತಿವೆ. ಆ ಕೊಲೆಗಳ ಹಿಂದೆ ದೆವ್ವ, ಪಿಶಾಚಿಯ ಕೈವಾಡ ಇದೆಯೆಂಬುದು ಊರಿನವರ ನಂಬಿಕೆ. ಆ ಕೊಲೆಗಳ ತನಿಖೆಯನ್ನು ನಡೆಸಲು ಬರುವ ಪೊಲೀಸ್ ಅಧಿಕಾರಿ ರಾಜ್ ಬಿ ಶೆಟ್ಟಿ. ಇವರ ಪಾತ್ರ ಆದರ್ಶಪ್ರಾಯ ಪೊಲೀಸನದ್ದಲ್ಲ, ಗಡ್ಡ ಬಿಟ್ಟ, ಸದಾ ಕುಡಿಯುವ, ಕೈಗೆ ಸಿಕ್ಕವರನ್ನು ಮುಖಾ-ಮೂತಿ ನೋಡದೆ ಚೆಚ್ಚುವ ಪೊಲೀಸ್ ಅವರು. ಇದೀಗ ಬಿಡುಗಡೆ ಆಗಿರುವ ಟ್ರೈಲರ್, ಸಿನಿಮಾ ನೋಡುವ ಕುತೂಹಲವನ್ನಂತೂ ಹುಟ್ಟುಹಾಕುತ್ತಿದೆ.

‘ರಕ್ಕಸಪುರದೊಳ್’ ಸಿನಿಮಾವನ್ನು ರವಿ ಸಾರಂಗ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಕೆಎನ್ ಎಂಟರ್ಪೈಸಸ್​​ನ ರವಿ ವರ್ಮಾ, ಕೆವಿಎನ್ ಪ್ರೊಡಕ್ಷನ್ಸ್​​ ನವರು ಸಿನಿಮಾವನ್ನು ಪ್ರೆಸೆಂಟ್ ಮಾಡಿದ್ದಾರೆ. ಸಿನಿಮಾನಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಸ್ವಾತಿಷ್ಟ ಕೃಷ್ಣ, ಅರ್ಚನಾ ಕೊಟ್ಟಿಗೆ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಫೆಬ್ರವರಿ 6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:47 pm, Thu, 29 January 26

Source link

ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ,ಮತ್ತೆ ಘಟ ಸರ್ಪದ ಆತಂಕ – Kannada News | Gold treasure: One More Serpent Seal Stone Discovered during Excavation In Lakkundi

ಗದಗ, (ಜನವರಿ 29): ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಉತ್ಖನನ ಮುಂದುವರೆದಿದ್ದು, ದಿನಕ್ಕೆ ಒಂದಲ್ಲ ಒಂದು ಪ್ರಾಚೀನ ಕಾಲದ ಹಳೇ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅಪರೂಪದ ಕಲಾಕೃತಿಗಳು, ಪುಟ್ಟ ಶಿವಲಿಂಗ ಹಾಗೂ ನಾಗಮಣಿಯೊಂದಿಗೆ ಕೆತ್ತಿದ ನಾಗರ ಹಾವಿನ ಹೆಡೆಯ ಶಿಲಾಕೃತಿ ಪತ್ತೆಯಾಗಿದ್ದವು. ಇದೀಗ ಇಂದು (ಜನವರಿ 29) ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 12ನೇ ದಿನ ಉತ್ಖನನ ಕಾರ್ಯದಲ್ಲಿ ಮತ್ತೊಂದು ‌ ಮೂರು ಹೆಡೆಯ ಘಟ ಸರ್ಪ ಶಿಲೆ ಪತ್ತೆಯಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಹೀಗೆ ಮೇಲಿಮದ ಮೇಲೆ ಘಟ ಸರ್ಪದ ಶಿಲೆಗಳು ಸಿಗುತ್ತಿರುವುದರಿಂದ ಸಂಪತ್ಭರಿತ ಲಕ್ಕುಂಡಿ ಸಿರಿ ಸಂಪತ್ತನ್ನು ಘಟ ಸರ್ಪಗಳು ಕಾಯುತ್ತಿವೆಯಾ ಎನ್ನುವ ಚರ್ಚೆಗಳು ಶುರುವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗ್ಗೇಶ್ ಕಾರು ಚಾಲಕ ಪದ್ಮನಾಭ ನಿಧನ; ಕಂಬನಿ ಮಿಡಿದ ನಟ – Kannada News | Actor Jaggesh car driver Padmanabha dies due to Cardiac Arrest

ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ನಟ ಜಗ್ಗೇಶ್ ಅವರ ಕಾರು ಚಾಲಕನಾಗಿ (Jaggesh Car Driver) ಕೆಲಸ ಮಾಡಿದ್ದ ಪದ್ಮನಾಭ ಅವರು ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಪದ್ಮನಾಭ ಅವರಿಗೆ 54 ವರ್ಷ ವಯಸ್ಸಾಗಿತ್ತು. ಹೃದಯ ಸ್ತಂಭನದಿಂದ (Cardiac Arrest) ಅವರು ಕೊನೆಯುಸಿರು ಎಳೆದಿದ್ದಾರೆ ಎಂಬುದು ತಿಳಿದು ಬಂದಿದೆ. ಮೃತರ ಆತ್ಮಕ್ಕೆ ಜಗ್ಗೇಶ್ ಅವರು ಶಾಂತಿ ಕೋರಿದ್ದಾರೆ. ಪದ್ಮನಾಭ ಅವರ ಅಂತ್ಯಕ್ರಿಯೆಯಲ್ಲಿ ಜಗ್ಗೇಶ್ (Jaggesh) ಭಾಗಿ ಆಗಿದ್ದಾರೆ. ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಂಬನಿ ಮಿಡಿದ್ದಾರೆ.

‘ಒಂದು ದಿನ ಇದ್ದದ್ದು ಮತ್ತೊಂದು ದಿನ ಇಲ್ಲವಾಗುತ್ತೆ. ನಶ್ವರ ಈ ಜಗತ್ತು. ಶ್ರೀ ಕೃಷ್ಣನ ಮಾತು. ನನ್ನ ಚಾಲಕ ಪದ್ಧ (ಪದ್ಮನಾಭ) 28 ವರ್ಷ ನನ್ನ ಚಾಲಕನಾಗಿ ಕಾರ್ಯ ನಿರ್ವಹಿಸಿದ್ದ. ನಮ್ಮ ಮನೆಯಲ್ಲಿ ಹೆಂಡತಿ, ಮಕ್ಕಳು, ಮೊಮ್ಮಗನಿಗೆ ಹಾಗು ನಮ್ಮ ಮನೆಯ ಸದಸ್ಯರು ಶ್ವಾನ (ಅರ್ಜುನ, ಪಿಂಟು, ಸೂರಜ್, ಸೂರ್ಯ) ಆತ್ಮೀಯನಾಗಿದ್ದ’ ಎಂದು ಜಗ್ಗೇಶ್ ಪೋಸ್ಟ್ ಮಾಡಿದ್ದಾರೆ.

‘ನನಗಿಂತ ಹೆಚ್ಚು ಮೊಬೈಲ್ ಕರೆ ಇವನಿಗೆ ಬರುತ್ತಿತ್ತು. ಸಿನಿಮಾ ಹಾಗು ರಾಜಕೀಯದ ನನ್ನ ಸ್ನೇಹಿತರು ಇವನಿಗೆ ಕರೆಮಾಡಿ ನನಗೆ ವಿಷಯ ಮುಟ್ಟಿಸುತ್ತಿದ್ದರು. ಕಾರಣ ನಾನು ಮೊಬೈಲ್ ಬಳಸೋಲ್ಲ. ಆ ಕಾರಣ ನನ್ನ ಬಲ್ಲ ಎಲ್ಲರಿಗೂ ತಿಳಿದಿದೆ (ಸಾಮಾಜಿಕ ಜಾಲತಾಣ ಮಾತ್ರ)’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ?

‘ಕೇವಲ 54 ವರ್ಷ ವಯಸ್ಸಿಗೆ ಹೃದಯ ಸ್ತಂಭನವಾಗಿ ಕೊನೆ ಉಸಿರು ನಿಲ್ಲಿಸಿದ. ಅವನ ಮೇಲಿನ ಪ್ರೀತಿ ಹಾಗೂ ಸೇವೆಯ ಋಣಕ್ಕೆ ಅವನ ಕೊನೆಯ ಕ್ಷಣದವರೆಗೂ ಜೊತೆಗಿದ್ದು ವಿದಾಯ ಹೇಳಿಬಂದೆ. ಮನಸ್ಸಿಗೆ ತುಂಬಾ ದುಃಖವಾಯಿತು. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಪದ್ದ. ಹೋಗಿ ಬಾ’ ಎಂದು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚುನಾವಣೆ ಮುಂದೂಡಿಕೆ – Kannada News | Apex bank chairman election postponed For Siddaramaiah And Dk Shivakumar Cold War

ತುಮಕೂರು, (ಜನವರಿ 29): ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ (Apex bank chairman election) ಈಗ ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಡಿಸಿಎಂ ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಇಂದು (ಜನವರಿ 29) ನಡೆಯಬೇಕಿದ್ದ ಅಪೆಕ್ಸ್ ಬ್ಯಾಂಗ್ ಅಧ್ಯಕ್ಷ ಚುನಾವಣೆ ಮುಂದೂಡಲಾಗಿದೆ. ಇನ್ನು ಈ ಬ್ಯಾಂಕ್ ಚುನಾವಣೆಯಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದಂತಿದೆ. ಹೌದು..ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇದರಲ್ಲಿ ಎಂಟ್ರಿಯಾಗಿದ್ದು, ಇದಕ್ಕೆ ವಿಧಾನಪರಿಷತ್ ಸದಸ್ಯ, ರಾಜಣ್ಣನವರ ಪುತ್ರ ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದರೆ, ಇನ್ನು ಈ ಬಗ್ಗೆ ರಾಜೇಂದ್ರ ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Silver Price: 4 ಲಕ್ಷ ರೂಪಾಯಿ ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ? ಇಲ್ಲಿದೆ ತಜ್ಞರು ಕೊಟ್ಟ ಸಲಹೆ – Kannada News | Silver Price Hits Record Rs 4 Lakh Per KG: Is it the Right Time to Invest? Silver Investment Tips and Expert Analysis

ಪ್ರತಿ ಕೆಜಿ ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 4 ಲಕ್ಷ ರೂಪಾಯಿ ಗಡಿ ದಾಟಿದೆ. ಕೇವಲ ಎಂಟು ತಿಂಗಳ ಹಿಂದೆ (ಮೇ ಅಂತ್ಯದಲ್ಲಿ) ಪ್ರತಿ ಕೆಜಿಗೆ 1 ಲಕ್ಷ ರೂಪಾಯಿ ಇದ್ದ ಬೆಲೆ, ಈಗ ಸುಮಾರು 3 ಲಕ್ಷ ರೂಪಾಯಿಯಷ್ಟು ಏರಿಕೆಯಾಗಿದೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳು, ಅಮೆರಿಕ-ಚೀನಾ ಸುಂಕ ಸಮರ ಮತ್ತು ಗ್ರೀನ್‌ಲ್ಯಾಂಡ್ ವಿವಾದದಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯನ್ನು ಆಯ್ದುಕೊಳ್ಳುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬೆಳ್ಳಿ ಅನಿವಾರ್ಯವಾಗಿದೆ. ವಿಶೇಷವಾಗಿ ಸೋಲಾರ್ ಪ್ಯಾನೆಲ್ ತಯಾರಿಕೆ, ಎಲೆಕ್ಟ್ರಿಕ್ ವಾಹನಗಳ (EV) ಬ್ಯಾಟರಿ, ಸೆಮಿಕಂಡಕ್ಟರ್ ಮತ್ತು ಎಐ (AI) ಕ್ಷೇತ್ರದಲ್ಲಿ ಇದರ ಬಳಕೆ ಹೆಚ್ಚಾಗಿದೆ. ಕಳೆದ 4-5 ವರ್ಷಗಳಿಂದ ಬೆಳ್ಳಿ ಉತ್ಪಾದನೆಗಿಂತ ಬಳಕೆ ಹೆಚ್ಚಾಗಿದ್ದು, ಗಣಿಗಳಿಂದ ಸಿಗುವ ಬೆಳ್ಳಿ ಪ್ರಮಾಣ ಕಡಿಮೆಯಾಗುತ್ತಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಕುಸಿದಾಗ ವಿದೇಶಿ ಹೂಡಿಕೆದಾರರಿಗೆ ಬೆಳ್ಳಿ ಅಗ್ಗವಾಗಿ ಕಾಣುವುದರಿಂದ ಖರೀದಿ ಹೆಚ್ಚಾಗಿದೆ. ಇದೂ ಸಹ ಬೆಳ್ಳಿ ದರ ಏರಿಕೆಗೆ ಕಾರಣವಾಗಿದೆ.

ಬೆಳ್ಳಿ ಮೇಲೆ ಹೂಡಿಕೆದಾರರಿಗೆ ಸಲಹೆ

ಮಾರುಕಟ್ಟೆ ತಜ್ಞರ ಪ್ರಕಾರ, ಸದ್ಯಕ್ಕೆ ಬೆಲೆ ಬಹಳ ಗರಿಷ್ಠ ಮಟ್ಟದಲ್ಲಿದ್ದು, ಹೊಸದಾಗಿ ಹೂಡಿಕೆ ಮಾಡುವವರು ಮಾರುಕಟ್ಟೆ ಸ್ವಲ್ಪ ತಣ್ಣಗಾಗುವವರೆಗೆ ಕಾಯುವುದು ಸೂಕ್ತ. ಈಗಾಗಲೇ ಹೂಡಿಕೆ ಮಾಡಿದವರು ಲಾಭ ಪಡೆದುಕೊಳ್ಳಲು ಇದು ಉತ್ತಮ ಸಮಯವಾಗಿದೆ. ಭೌತಿಕ ಬೆಳ್ಳಿಗಿಂತ (ಬಾರ್ ಅಥವಾ ಕಾಯಿನ್) ಸಿಲ್ವರ್ ಇಟಿಎಫ್ (ETF) ಅಥವಾ ಡಿಜಿಟಲ್ ಸಿಲ್ವರ್ ಮೂಲಕ ಹೂಡಿಕೆ ಮಾಡುವುದು ಹೆಚ್ಚು ಸುರಕ್ಷಿತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುಳ್ವಾಡಿ ವಿಷ ಪ್ರಸಾದ ಕೇಸ್​ನ ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧ – Kannada News | Chamarajanagar: Sulvadi poison prasad case; A1 accused banned from Male Mahadeshwar hill

ಚಾಮರಾಜನಗರ, ಜನವರಿ 29: 2018ರಲ್ಲಿ ನಡೆದಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ (sulvadi Poison Case) ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (immadi mahadevaswamy) ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಹನೂರು ತಹಶೀಲ್ದಾರ್​ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಆರೋಪಿ ವಿರುದ್ಧ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನ ಬೆಂಗಳೂರಿಗೆ ವಾಪಸ್​ ಕಳಿಸಿದ್ದಾರೆ.

ಘಟನೆ ಹಿನ್ನೆಲೆ 

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ಗೋಪುರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ದೇವಾಲಯದ ವಿಷ ಪ್ರಸಾದ ಸೇವನೆಯಿಂದ ಬರೋಬ್ಬರಿ 17 ಜನರು ಸಾವನ್ನಪ್ಪಿದ್ದರು. 100ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಇದನ್ನೂ ಓದಿ: ಸುಳ್ವಾಡಿ ದುರಂತದಲ್ಲಿ ಬದುಕಿದವರಿಗೆ ನರಕಯಾತನೆ: 6 ವರ್ಷ ಕಳೆದರೂ ಕಾಡುತ್ತಿದೆ ಅನಾರೋಗ್ಯ

ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಡಿಎಸ್​ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ಮೂರು ತಂಡಗಳನ್ನ ರಚನೆ ಮಾಡಲಾಗಿತ್ತು. ವಿಷಪ್ರಾಶನ ಮಾಡಿದ್ದ ರಾಜಮ್ಮ ಅವರ ಹೇಳಿಯ ಆಧಾರದ ಮೇಲೆ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿತ್ತು. ಒಟ್ಟು 6 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ದೇವಾಲಯದ ಟ್ರಸ್ಟಿಗಳಾದ ಚಿನ್ನಪ್ಪಿ,  ಮಹದೇವ್ ಅಲಿಯಾಸ್ ಮಾದೇಶ್ ಮತ್ತು ಇಮ್ಮಡಿ ಮಹಾದೇವಸ್ವಾಮಿ ಎಂಬುವರನ್ನ ಪೊಲೀಸರು ಬಂಧಿಸಿದ್ದರು.

ಸದ್ಯ ಇಮ್ಮಡಿ ಮಹಾದೇವಸ್ವಾಮಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಹೀಗಾಗಿ ಹನೂರು ತಾಲೂಕಿ ಮಹದೇಶ್ವರಬೆಟ್ಟ ಗ್ರಾಮದ ಶ್ರೀ ಸಾಲೂರು ಬೃಹನ್ಮಠದ ಈ ಹಿಂದಿನ ಗುರುಗಳಾದ ಲಿಂಗೈಕ್ಯ ಶ್ರೀ ಮಹದೇವಸ್ವಾಮಿಗಳ ವಾರ್ಷಿಕ ಆರಾಧನೆ ಕಾರ್ಯಕ್ರಮವನ್ನು ಇಂದು ಸಾಲೂರು ಮಠದ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಮ್ಮಡಿ ಮಹಾದೇವಸ್ವಾಮಿ ಮುಂದಾಗಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಇಮ್ಮಡಿ ಮಹಾದೇವಸ್ವಾಮಿಯನ್ನ ಮಠದ ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಬಾರದು, ಒಂದು ವೇಳೆ ಪ್ರವೇಶ ಮಾಡಿದ್ದಲ್ಲಿ ಗಲಭೆ ಉಂಟಾಗುವುದು. ಇದರಿಂದ ಭಕ್ತಾಧಿಗಳಿಗೆ ಪ್ರಾಣಾಪಾಯ, ಮಠದ ಆಸ್ತಿಗಳಿಗೆ ಹಾನಿಯಾಗುವ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಂಭವವಿದ್ದು ಇದನ್ನು ತಪ್ಪಿಸುವಂತೆ ಸುಳ್ಳಾಡಿ ಪ್ರಕರಣದ ಸಂತ್ರಸ್ತರು, ಸ್ಥಳೀಯರು ಹಾಗೂ ಶ್ರೀ ಮಠದ ಭಕ್ತಾಧಿಗಳು ಮನವಿ ಮಾಡಿದ್ದರು.

ಇದನ್ನೂ ಓದಿ: ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ!

ಹೀಗಾಗಿ ಇಮ್ಮಡಿ ಮಹದೇವಸ್ವಾಮಿಯನ್ನ ಶ್ರೀ ಮಠದ ಆವರಣದೊಳಗೆ ಪ್ರವೇಶಿಸದಂತೆ ನಿರ್ಬಂಧಿಸಿ ಶ್ರೀ ಮಠದ ಗುರುಗಳ ಭಕ್ತ ವೃಂದದ ಜೀವರಕ್ಷಣೆ, ಆಸ್ತಿರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕ್ರಮಜರುಗಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version