Headlines

ಏರ್ ಇಂಡಿಯಾದ ಎಲ್ಲ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ – Kannada News | Air India mandatory Drugs tests for all pilots after after Phuket Delhi Incident

ನವದೆಹಲಿ, ಆಗಸ್ಟ್ 13: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ (ಟರ್ಬುಲೆನ್ಸ್) ಒಳಗಾಗಿದ್ದ ಏರ್ ಇಂಡಿಯಾ (Air India) ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿ ವಿಮಾನ ಹಾರಿಸುತ್ತಿದ್ದರು ಎಂಬ ಶಾಕಿಂಗ್ ವಿಷಯ ಹೊರಬಿದ್ದ ಬೆನ್ನಲ್ಲೇ, ಏರ್ ಇಂಡಿಯಾ ತನ್ನ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ. ಪ್ರಯಾಣಿಕರ ಭದ್ರತೆ ಮತ್ತು ವೈಮಾನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಏರ್ ಇಂಡಿಯಾ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಏರ್ ಇಂಡಿಯಾ ಮತ್ತು ಏರ್ ಇಂಡಿಯಾ…

Read More

ಹೊಸ ಕಾಯ್ದೆಯೊಂದಿಗೆ ಕರ್ನಾಟಕದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ? – Kannada News | Governmnet To Plan Break RSS activities With New Bill Karnataka State Public Places and Access Regulation Bill 2026

ಬೆಂಗಳೂರು, (ಆಗಸ್ಟ್ 13):  ಕರ್ನಾಟಕದಲ್ಲಿ ಕಾಂಗ್ರೆಸ್ (Karnataka) ವರ್ಸಸ್ ಆರ್​​​​ಎಸ್​​​ಎಸ್​​​ (RSS) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗುವ ಲಕ್ಷಣಗಳು ಕಾಣುತ್ತಿವೆ. ಹೌದು…  ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು (Karnataka State Public Places and Access Regulation Bill 2026) ಜಾರಿಗೆ ತರಲು ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಕಾಯ್ದೆ ಕುರಿತು ಇಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ವಿಧೇಯಕಕ್ಕೆ ಅನುಮೋದನೆ ಸಹ ದೊರೆತಿದೆ. ಹೌದು….ಇದೆ ಅಧಿವೇಶನಲ್ಲಿ ವಿಧೇಯಕ…

Read More

Chanakya Niti: ಈ ಸಂದರ್ಭಗಳಲ್ಲಿ ನಿಮ್ಮ ಜೊತೆ ನಿಲ್ಲುವವರೇ ನಿಜವಾದ ಸ್ನೇಹಿತ – Kannada News | Chanakya Niti: Chanakya says that true friends are like this

ಈ ಜಗತ್ತಿನಲ್ಲಿರುವ ನಿಷ್ಕಲ್ಮಶ ಸಂಬಂಧಗಳಲ್ಲಿ ಸ್ನೇಹವೂ (Friendship) ಒಂದು. ಸ್ನೇಹಿತರು ಯಾವಾಗಲೂ ನಮಗೆ ಹೆಗಲಾಗಿರುತ್ತಾರೆ. ಆದರೆ ಎಲ್ಲಾ ಸ್ನೇಹಿತರು ಒಳ್ಳೆಯವರು ಎಂದು ಹೇಳಲು ಸಾಧ್ಯವಿಲ್ಲ. ಕೆಲವರು ಫ್ರೆಂಡ್‌ಶಿಪ್‌ ಹೆಸರಲ್ಲಿ ಜೀವನವನ್ನೇ ಹಾಳು ಮಾಡುವವರಿದ್ದಾರೆ. ಹಾಗಾಗಿ ಇಂದಿನ ಈ ಜಗತ್ತಿನಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅದರಲ್ಲೂ ಒಬ್ಬ ವ್ಯಕ್ತಿ ಈ ಕೆಲವೊಂದು ಕಠಿಣ ಪರಿಸ್ಥಿತಿಗಳಲ್ಲಿ ನಿಮ್ಮ ಜೊತೆ ನಿಂತಿದ್ದಾನೆ ಎಂದಾದರೆ ಆತನೇ ನಿಜವಾದ ಸ್ನೇಹಿತ ಎಂದು ಚಾಣಕ್ಯರು ಒತ್ತಿ ಹೇಳಿದ್ದಾರೆ….

Read More

ಪ್ರಿ-ರೈಡ್ ಟಿಪ್ಸ್ ಬಂದ್‌: ಓಲಾ, ಉಬರ್, ರ‍್ಯಾಪಿಡೋ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್ – Kannada News | Cab Booking Rules Changed: Ola, Uber, Other Apps Can’t Ask You to Tip Before Your Ride

ನವದೆಹಲಿ, ಆಗಸ್ಟ್ 13: ಆನ್ಲೈನ್​ನಲ್ಲಿ ಕ್ಯಾಬ್ ಅಥವಾ ಆಟೋ ಬುಕ್ ಮಾಡುವ ಮುನ್ನವೇ ಚಾಲಕರಿಗೆ ‘ಟಿಪ್ಸ್’ ನೀಡುವಂತೆ ಒತ್ತಾಯಿಸುವ ವ್ಯವಸ್ಥೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಓಲಾ, ಉಬರ್, ರ‍್ಯಾಪಿಡೋ ಸೇರಿದಂತೆ ಎಲ್ಲಾ ರೈಡ್-ಹೇಲಿಂಗ್ (Ride-hailing) ಆ್ಯಪ್‌ಗಳಿಂದ ‘ಪ್ರಿ-ರೈಡ್ ಟಿಪ್ಸ್’ (Pre-ride tips) ಅಥವಾ ಮುಂಗಡ ಟಿಪ್ಸ್ ನೀಡುವ ಆಯ್ಕೆಯನ್ನು ತಕ್ಷಣವೇ ತೆಗೆದುಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಆದೇಶಿಸಿದೆ. ಓಲಾ, ಊಬರ್ ಸೇರಿದಂತೆ ಎಲ್ಲಾ ಕ್ಯಾಬ್ ಬುಕಿಂಗ್ ಆ್ಯಪ್​ಗಳಲ್ಲಿ ಕ್ಯಾಬ್ ಬುಕಿಂಗ್ ಮಾಡುವಾಗ…

Read More

ನಿರ್ಮಲಾ ಸೀತಾರಾಮನ್​​ ಇರುವ ವಿಡಿಯೋ ಲಿಂಕ್ ಒತ್ತಿ ಲಕ್ಷಾಂತರ ರೂ ಕಳೆದುಕೊಂಡ ಹಾವೇರಿ ವ್ಯಕ್ತಿ – Kannada News | Haveri Man Loses Lakhs After Clicking AI Generated Video Link Featuring Nirmala Sitharaman

ಸೈಬರ್​ ಪೊಲೀಸ್​ ಠಾಣೆImage Credit source: tv9 kannada ಹಾವೇರಿ, ಆಗಸ್ಟ್​​ 13: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಾದ (Social Media) ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ರೀಲ್ಸ್‌ಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋಗಳನ್ನು ಹರಿಬಿಟ್ಟು ಸಾರ್ವಜನಿಕರಿಂದ ಲಕ್ಷಾಂತರ ರೂ ಹಣ ದೋಚುವ ಜಾಲ ಸಕ್ರಿಯವಾಗಿದೆ. ಇಂತಹದ್ದೇ ಎಐ ವಿಡಿಯೋ ಲಿಂಕ್ ಒಂದನ್ನು ನಂಬಿ ಹಾವೇರಿಯ ನಿವಾಸಿಯೊಬ್ಬರು ಬರೋಬ್ಬರಿ 22 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದು, ಈ ಸಂಬಂಧ ಹಾವೇರಿ ಸೈಬರ್ ಕ್ರೈಮ್…

Read More

ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮೌನ ವಹಿಸಿದ್ದೇಕೆ? ಕೊನೆಗೂ ಕಾರಣ ತಿಳಿಸಿದ ಸೋನು ನಿಗಮ್ – Kannada News | Why Sonu Nigam refused to speak about Neet Paper leak and Gen Z Student Protest

ನೀಟ್ (NEET) ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ಟೀಕೆಗಳಿಗೆ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ‘ಕ್ಲಿಷ್ಟಕರ ಪ್ರಶ್ನೆಯಿಂದ ತಪ್ಪಿಸಿಕೊಳ್ಳುವುದು ನನ್ನ ಉದ್ದೇಶವಾಗಿರಲಿಲ್ಲ. ಬದಲಿಗೆ ಯಾವಾಗ ಮತ್ತು ಎಲ್ಲಿ ಮಾತನಾಡಬೇಕು ಎಂಬ ವಿವೇಚನೆ ನನ್ನದಾಗಿತ್ತು’ ಎಂದು ಅವರು ಹೇಳಿದ್ದಾರೆ. ‘ಬಾಂಬೆ ಟೈಮ್ಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೋನು ನಿಗಮ್, ಮಾಧ್ಯಮಗೋಷ್ಠಿಯ ಕನಿಷ್ಠ ಶಿಷ್ಟಾಚಾರದ ಬಗ್ಗೆ ಬೆಳಕು ಚೆಲ್ಲಿದ್ದಾರೆ….

Read More

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ​ ಕೇಸಿಗೆ ಬಿಗ್ ಟ್ವಿಸ್ಟ್​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿಪಿ – Kannada News | Electricity DCP Clarify about obscene videos Found In Prajwal Revanna Mobile And Pen drive at jail

ಬೆಂಗಳೂರು, (ಆಗಸ್ಟ್ 13): ಅತ್ಯಾಚಾರ ಪ್ರರಕರಣದಲ್ಲಿ ಜೀವಾವಧಿ ಶಿಕ್ಷಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Pralwal Revanna) ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು…ಸಿಸಿಬಿ ಪೊಲೀಸರು (CCB Police) ದಾಳಿ ಮಾಡಿದಾಗ ಪ್ರಜ್ವಲ್ ರೇವಣ್ಣ ಸೆಲ್​​​​​ನಲ್ಲಿ ಮೊಬೈಲ್, ಪೆನ್​​ಡ್ರೈವ್ ಹಾಗೂ ಡೈರಿ ಪತ್ತೆಯಾಗಿದ್ದು, ಮೊಬೈಲ್​​​​, ಪೆನ್​​​​ಡ್ರೈವ್​​ ಪರಿಶೀಲನೆ ಮಾಡಿದಾಗ ಅಶ್ಲೀಲ ವಿಡಿಯೋಗಳು ಸಿಕ್ಕಿವೆ ಎನ್ನಲಾಗಿತ್ತು. ಆದ್ರೆ, ಇದನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಪ್ರಜ್ವಲ್ ಬ್ಯಾರಕ್‌ನಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ವಿಡಿಯೋಗಳು ಇಲ್ಲ ಎಂದು ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿ…

Read More

AUS vs BAN: ಕಾಂಗರೂಗಳ ನಾಡಲ್ಲಿ ಇತಿಹಾಸ ನಿರ್ಮಿಸಿದ ಬಾಂಗ್ಲಾ ವೇಗಿ

ಬಾಂಗ್ಲಾದೇಶ ಬರೋಬ್ಬರಿ 23 ವರ್ಷಗಳ ನಂತರ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಪಂದ್ಯದ ಮೊದಲ ದಿನವೇ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ಮೇಲುಗೈ ಸಾಧಿಸಿದೆ. ಡಾರ್ವಿನ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ನ ಮೊದಲ ದಿನದಂದು ಮೊದಲು ಬ್ಯಾಟಿಂಗ್‌ ಮಾಡಿದ ಆಸೀಸ್ ಬ್ಯಾಟಿಂಗ್‌ ವಿಭಾಗವನ್ನು ಬಾಂಗ್ಲಾದೇಶದ ವೇಗದ ಬೌಲರ್‌ಗಳು ಕಟ್ಟಿಹಾಕಿದ್ದಾರೆ. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ ಮೊದಲ ದಿನದ ಮೂರನೇ ಸೆಷನ್‌ನ…

Read More

ಮಳೆಗಾಲದಲ್ಲಿ ಗರ್ಭಿಣಿಯರು ಏಕೆ ಹೆಚ್ಚು ಎಚ್ಚರಿಕೆ ವಹಿಸಬೇಕು! ಡಾ. ಅನುಷಾ ಹೇಳಿರುವ ಸಿಂಪಲ್ ಟಿಪ್ಸ್ ನಿಮಗಾಗಿ – Kannada News | Monsoon Health Tips for Pregnancy: How to Protect Mother and Baby From Infections

ಮಳೆಗಾಲವು ಬೇಸಿಗೆಯ ಬಿಸಿಯಿಂದ ನೆಮ್ಮದಿಯನ್ನು ನೀಡುವುದರ ಜೊತೆಗೆ ಸೋಂಕುಗಳು, ಸೊಳ್ಳೆಗಳಿಂದ ಹರಡುವ ರೋಗಗಳು, ಆಹಾರ ಮಾಲಿನ್ಯ ಹಾಗೂ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಗರ್ಭಾವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳಿಂದ ಗರ್ಭಿಣಿಯರು ಈ ಆರೋಗ್ಯ ಸಮಸ್ಯೆಗಳಿಗೆ ಹೆಚ್ಚು ಒಳಗಾಗುವ ಸಾಧ್ಯತೆ ಇರುತ್ತದೆ. ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಪಾಲಿಸುವುದರಿಂದ ಮಳೆಗಾಲದಲ್ಲಿಯೂ ಸುರಕ್ಷಿತ ಹಾಗೂ ಆರೋಗ್ಯಕರ ಗರ್ಭಧಾರಣೆಯನ್ನು ಕಾಪಾಡಿಕೊಳ್ಳಬಹುದು. ಈ ಕುರಿತು, ಎಸ್.ಡಿ.ಎಂ. ಆಯುರ್ವೇದ ಸಂಸ್ಥೆ ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ…

Read More

ನೇತಾಜಿ​​ಗೆ ಅವಮಾನಿಸಿದ ಬಿಜೆಪಿ ಸಂಸದ ಅನಂತ ಮಹಾರಾಜ್; ‘ಬಂಗ ವಿಭೂಷಣ’ ಪ್ರಶಸ್ತಿ ಹಿಂಪಡೆದ ಪಶ್ಚಿಮ ಬಂಗಾಳ ಸರ್ಕಾರ – Kannada News | West Bengal government withdraws Banga Bibhushan award fromn BJP MP Ananta Maharaj For Insulting Netaji

ಕೊಲ್ಕತ್ತಾ, ಆಗಸ್ಟ್ 13: ನಿನ್ನೆಯಷ್ಟೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಆ ಆದೇಶದ 24 ಗಂಟೆಯೊಳಗೆ ಬಿಜೆಪಿಯ ಸಂಸದರ ವಿರುದ್ಧವೇ ಬಂಗಾಳ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ತಮ್ಮದೇ ಪಕ್ಷದ ಸಂಸದ ಅನಂತ ಮಹಾರಾಜ್ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subas Chandra Bose) ಅವರ ಕುರಿತು ನೀಡಿದ ಆಕ್ಷೇಪಾರ್ಹ…

Read More