ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್ 2’ (Dhurandhar 2) ಬಾಕ್ಸ್ ಆಫೀಸ್ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್ (Box Office Collection) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ.
ಲೇಟೆಸ್ಟ್ ಮಾಹಿತಿ ಪ್ರಕಾರ, 17ನೇ ದಿನವಾದ ಶನಿವಾರ (ಏಪ್ರಿಲ್ 4) ಈ ಸಿನಿಮಾ 25.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಾರದ ದಿನಗಳಲ್ಲಿ ಸಾಧಾರಣವಾಗಿದ್ದ ಕಲೆಕ್ಷನ್, ಮೂರನೇ ವಾರಾಂತ್ಯದಲ್ಲಿ ಮತ್ತೆ ಪುಟಿದೆದ್ದಿದೆ. ಮೊದಲ ವಾರದ ಅಂತ್ಯಕ್ಕೆ 674.17 ಕೋಟಿ ರೂಪಾಯಿ ಆಗಿತ್ತು. ಎರಡನೇ ವಾರ 263.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.
ಈಗಾಗಲೇ ಭಾರತದ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳ ದಾಖಲೆಯನ್ನು ‘ಧುರಂಧರ್ 2’ ಹಿಂದಿಕ್ಕಿದೆ. ಯಶ್ ಅಭಿನಯದ ‘ಕೆಜಿಎಫ್: ಚಾಪ್ಟರ್ 2’ (859.70 ಕೋಟಿ), ರಾಜಮೌಳಿ ನಿರ್ದೇಶನ ‘ಆರ್ಆರ್ಆರ್’ (782.20 ಕೋಟಿ) ಮತ್ತು ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ (646 ಕೋಟಿ) ಸಿನಿಮಾಗಳ ಒಟ್ಟು ಗಳಿಕೆಯನ್ನು ‘ಧುರಂಧರ್ 2’ ಸಿನಿಮಾ ಮೀರಿಸಿದೆ.
ಸದ್ಯ ‘ಧುರಂಧರ್ 2’ ಸಿನಿಮಾದ ಮುಂದೆ ಕೆಲವು ದೈತ್ಯ ಸಿನಿಮಾಗಳ ಕಲೆಕ್ಷನ್ ದಾಖಲೆ ಹಾಗೆಯೇ ಇದೆ. ಈ ಮೊದಲು ‘ಬಾಹುಬಲಿ 2’ ಸಿನಿಮಾ 1,030 ಕೋಟಿ ರೂಪಾಯಿ ಗಳಿಸಿತ್ತು. ‘ಪುಷ್ಪ 2’ ಸಿನಿಮಾ 1,234.10 ಕೋಟಿ ರೂಪಾಯಿ ಚಾಚಿಕೊಂಡಿತ್ತು. ಆ ಸಿನಿಮಾಗಳ ದಾಖಲೆಯನ್ನು ‘ಧುರಂಧರ್ 2’ ಸಿನಿಮಾ ಅಳಿಸಿ ಹಾಕುತ್ತಾ ಇಲ್ಲವಾ ಎಂಬುದನ್ನು ಕಾದುನೋಡಬೇಕು.
‘ಧುರಂಧರ್ 2’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಹಮ್ಜಾ ಎಂಬ ಭಾರತೀಯ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಪಾಕಿಸ್ತಾನದ ಲಿಯಾರಿ ಗ್ಯಾಂಗ್ಗಳ ಒಳಗೆ ನುಗ್ಗಿ, ಅಲ್ಲಿನ ಭೂಗತ ಲೋಕ ಮತ್ತು ಭಾರತದ ಮೇಲೆ ಪ್ರಭಾವ ಬೀರುವ ಭಯೋತ್ಪಾದನಾ ಜಾಲವನ್ನು ಧ್ವಂಸ ಮಾಡುವ ಸಾಹಸಗಾಥೆ ಈ ಚಿತ್ರದಲ್ಲಿದೆ. ಸಿನಿಮಾದ ಮೊದಲ ಭಾಗವು ವಿಶ್ವಾದ್ಯಂತ 1,300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ…
ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಲ್ಲೂ ಶಾರ್ಟ್ ಕಾಣಿಸಿಕೊಳ್ಳುವುದಿಲ್ಲ.
ಡೆವಾಲ್ಡ್ ಬ್ರೆವಿಸ್: ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿರುವ ಸೌತ್ ಆಫ್ರಿಕಾದ ಹೊಡಿ ಬಡಿ ದಾಂಡಿಗ ಡೆವಾಲ್ಡ್ ಬ್ರೆವಿಸ್ ಕೂಡ ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಜೋಶ್ ಹೇಝಲ್ವುಡ್: ಕಾಲಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್ವುಡ್ ಶನಿವಾರ ಯಾವುದೇ ಬೌಲಿಂಗ್ ಅಭ್ಯಾಸ ನಡೆಸಿರಲಿಲ್ಲ. ಹೀಗಾಗಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.
ನುವಾನ್ ತುಷಾರ: ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಇನ್ನೂ ಸಹ ಎನ್ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.
ಬೆಂಗಳೂರು, ಏಪ್ರಿಲ್ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರುಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಗೊಂಡಿತ್ತು. ಈ ಬಗ್ಗೆ ತನಿಖೆಗೆ ಪುಲಕೇಶಿನಗರ ಎಸಿಪಿ ಹಾಗೂ ಪಿಐಗೆ ಅಧಿಕಾರಿಗಳು ಸೂಚಿಸಿದ್ದರು. ಆ ಹಿನ್ನೆಲೆ ಆರೋಪಿ ಕೃಪಲಾನಿಯನ್ನು ಪೊಲೀಸರ ತಂಡವೀಗ ಬಂಧಿಸಿದೆ.
ಅತ್ಯಾಚಾರ ಅಲ್ಲದೇ ಆರೋಪಿ ಮೇಲೆ ಹಲವು ಗಂಭೀರ ಆರೋಪಗಳನ್ನು ಮಹಿಳಾ ಅಧಿಕಾರಿ ಮಾಡಿದ್ದು, ಎಲೆಕ್ಟ್ರಾನಿಕ್ ಬ್ಯುಸಿನೆಸ್ ನಡೆಸುತ್ತಿದ್ದ ಕೃಪಲಾನಿ ಕಸ್ಟಮ್ ಕಣ್ತಪ್ಪಿಸಿ ಸಾಕಷ್ಟು ವ್ಯವಹಾರ ನಡೆಸ್ತಿದ್ದ ಆರೋಪ ಕೇಳಿಬಂದಿದೆ. ಈತನಿಗೆ 9 ವರ್ಷದ ಹಿಂದೆ ಮಹಿಳಾ ಕಸ್ಟಮ್ ಅಧಿಕಾರಿ ಪರಿಚಯವಾಗಿದ್ದು, ಆಕೆ ಜೊತೆಗೆ ಪ್ರೀತಿ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ ಮದುವೆ ಆಮೀಷವೊಡ್ಡಿ ಕೆಲಸದ ಕೆಲ ಲೂಪ್ ಹೋಲ್ ತಿಳಿದಿದ್ದ. ಆಕೆ ಬಳಸಿಕೊಂಡು ಕೆಲ ಕಸ್ಟಮ್ ಅಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.
ಈ ಹಿಂದೆ ತನ್ನ ಮಗ ನಾಪತ್ತೆಯಾಗಿದ್ದಾನೆಂದು ಕೃಪಲಾನಿ ತಾಯಿ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದರು. ಆದರೆ ಕೃಪಲಾನಿ ಉದ್ದೇಶ ಪೂರ್ವಕವಾಗಿ ಹೊಟೆಲ್ನಲ್ಲಿ ಅಡಗಿರೋದು ಈ ವೇಳೆ ಪತ್ತೆ ಆಗಿತ್ತು. ಹೀಗಾಗಿ ಈ ವೇಳೆ ಕೃಪಲಾನಿಗೆ ಕೋರ್ಟ್ ಎರಡು ಲಕ್ಷ ರೂ. ದಂಡ ಕೂಡ ವಿಧಿಸಿತ್ತು. ಇಷ್ಟು ಸಾಲದ್ದಕ್ಕೆ ದಶಕದ ಹಿಂದೆ ಕುಡಿದು ಮಹಿಳಾ ಅಧಿಕಾರಿಗಳ ಜತೆ ಅಸಭ್ಯ ವರ್ತನೆ ಆರೋಪವೂ ಈತನಮೇಲಿದೆ. ಕೃಪಲಾನಿ ಜಾಲಕ್ಕೆ ಸಿಲುಕಿ ಹಲವು ಕಸ್ಟಮ್ಸ್ ಅಧಿಕಾರಿಗಳು ನರಳಿದ್ದಾರೆ ಎನ್ನಲಾಗಿದ್ದು, ಆ ಕಾರಣ ಈತನಿಂದ ಅನ್ಯಾಯವಾಗಿದ್ರೆ ದೂರು ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ.
ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಉಂಟಾಗಿ, ಅಧ್ಯಯನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ನಾಲಿಗೆ ದಪ್ಪವಾಗುವುದು, ವಿಕೃತ ಭಾವನೆಗಳು ಮತ್ತು ಅಹಂಕಾರ ಉಂಟಾಗುವುದು ಇತ್ಯಾದಿ ಸಮಸ್ಯೆಗಳು ಎದುರಾಗಬಹುದು. ಹಿಂದೆ ಗುರುಕುಲಗಳಲ್ಲಿಯೂ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅಡ್ಡಿಯಾಗುವಂತಹ ಈರುಳ್ಳಿ, ಬೆಳ್ಳುಳ್ಳಿ, ಮೂಲಂಗಿ, ಹುಳಿ ಮೊಸರಿನಂತಹ ಆಹಾರ ಪದಾರ್ಥಗಳನ್ನು ನೀಡುತ್ತಿರಲಿಲ್ಲ. ಹಾಗೆಯೇ ತಾಂಬೂಲ ಕೂಡ ವಿದ್ಯಾರ್ಥಿಗಳಿಗೆ ಸೂಕ್ತವಲ್ಲ ಎಂದು ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 05: ಮಲ್ಲೇಶ್ವರಂನಲ್ಲಿನ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್ ಹಾಕಿದ್ದ ಭೂಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಅರೆಸ್ಟ್ ಮಾಡಲಾಗಿದ್ದು, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ಏನು?
ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಜಾಗಕ್ಕೆ ತನ್ನದೇ ಆದ ಇತಿಹಾಸವಿದೆ. 1913ರ ಮಾಪನ ನಕ್ಷೆಯಲ್ಲಿಯೇ ಈ ಪ್ರದೇಶವನ್ನು ಪೊಲೀಸ್ ವಸತಿಗೃಹ ಎಂದು ಗುರುತಿಸಲಾಗಿದೆ. ಈಗ ಅದೇ ಜಾಗದಲ್ಲಿನ ವಸತಿಗೃಹಗಳಲ್ಲಿ ನಾಲ್ವರು ಇನ್ಸ್ಪೆಕ್ಟರ್ಗಳ ಕುಟುಂಬಗಳು ವಾಸಿಸುತ್ತಿವೆ. ಆದರೆ ಇತ್ತೀಚೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ಅವರ ಮನೆಗೆ ಬಂದ ವಿದ್ಯುತ್ ಬಿಲ್ ಆರೋಪಿಗಳ ಕಳ್ಳಾಟವನ್ನು ಬಯಲು ಮಾಡಿದೆ. ಮಹಾಲಕ್ಷ್ಮೀ ಎಂಬ ಖಾಸಗಿ ವ್ಯಕ್ತಿಯ ಹೆಸರಲ್ಲಿ ಬಿಲ್ ಬಂದಿರೋದು ಅನುಮಾನಕ್ಕೆ ಕಾರಣವಾಗಿ ವಿಚಾರಣೆಗಿಳಿದಾಗ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಖದೀಮರು ಸ್ಕೆಚ್ ಹಾಕಿರೋದು ಗೊತ್ತಾಗಿತ್ತು.
ಖಾಸಗಿ ಹೆಸರಲ್ಲಿ ವಿದ್ಯುತ್ ಬಿಲ್ ಬಂದಿದ್ದು ಹೇಗೆ ಎಂದು ಸಂಬಂಧಿತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ ದಾಖಲೆಗಳನ್ನು ಅಕ್ರಮವಾಗಿ ಮಹಾಲಕ್ಷ್ಮೀ ಎಂಬವರ ಹೆಸರಿಗೆ ವರ್ಗಾವಣೆ ಮಾಡಿರುವುದು ಬಹಿರಂಗವಾಗಿತ್ತು. ಅಲ್ಲದೆ ಬಿಬಿಎಂಪಿ ಮೂಲಕ ಅಕ್ರಮವಾಗಿ ಇ-ಖಾತಾ ಮಾಡಿಸಿರುವುದು ಹಾಗೂ ಕೃಷ್ಣಮೂರ್ತಿ ಎಂಬಾತನಿಗೆ ಮಾರಾಟ ಮಾಡಲು ಒಪ್ಪಂದ ಪತ್ರ ಕೂಡ ಮಾಡಿರುವ ವಿಚಾರ ಜಾಗದಲ್ಲಿ ಹಾಲಿ ವಾಸವಿದ್ದ ಪೊಲೀಸ್ ಅಧಿಕಾರಿಗಳಿಗೇ ಶಾಕ್ ನೀಡಿತ್ತು. ಇಷ್ಟು ಸಾಲದ್ದಕ್ಕೆ ಈ ನಡುವೆ ಜಾಗ ಖಾಲಿ ಮಾಡಿಸುತ್ತೇನೆ ಎಂದು ಖಾಸಗಿ ವ್ಯಕ್ತಿಯ ಕಡೆಯವರು ಪೊಲೀಸ್ ಅಧಿಕಾರಿಗಳ ಕುಟುಂಬಕ್ಕೇ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿತ್ತು. ಈ ಎಲ್ಲ ಘಟನೆಯ ಬಗ್ಗೆ ಪ್ರಸ್ತುತ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಜೀವನದಲ್ಲಿ ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.
ವೃಷಭ ರಾಶಿ:
ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಅಥವಾ ವಿಷಯಾಂತರಿಸಿ. ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ಸಂಗಾತಿಯೊಡನೆ ಸಲ್ಲಾಪ ಮಾಡುವಿರಿ. ಸಂಪತ್ತು ನಿಮ್ಮ ಶ್ರಮಕ್ಕನುಸಾರ ಸಿಗಲಿದೆ. ನಿಮ್ಮ ಬರೆವಣಿಗೆಯಿಂದ, ಮಾತಿನಿಂದ ನಿಮಗೆ ಕೀರ್ತಿಯು ಲಭ್ಯ. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ.
ಮಿಥುನ ರಾಶಿ:
ಸ್ನೇಹಿತರ ಜೊತೆ ಸೇರಿ ಹಣವನ್ನು ಖರ್ಚು ಮಾಡಲು ಮುಂದಾಗುತ್ತೀರಿ. ನಿಮ್ಮ ನ್ಯೂನತೆಗಳು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಇಂದು ನಿಮ್ಮ ಪೂರ್ವಜರ, ಹಿರಿಯರ ಕಾರ್ಯಗಳು ನೆನಪಾಗುವುದು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆರೋಗ್ಯದ ಆರೈಕೆಯ ಬಗ್ಗೆ ಗಮನವಿರಲಿ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.
ಕರ್ಕಾಟಕ ರಾಶಿ:
ನಿಮಗೆ ಸಂಗಾತಿಯ ಬಗ್ಗೆ ಅಸೂಯೆ ಬರಬಹುದು. ಇಂದು ಹುಟ್ಟಿದ ಪ್ರೇಮವು ಕೆಲವೇ ದಿನದಲ್ಲಿ ಸಾಯುತ್ತದೆ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ಇರುವಿರಿ. ಅಧ್ಯಾತ್ಮದ ಚಿಂತನೆಯಿಂದ ನಿಮ್ಮ ಬದುಕಿನ ದಿಕ್ಕು ಬದಲಾಗುವ ಸಾಧ್ಯತೆ ಇದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಖಾಸಗಿ ಸಂಸ್ಥೆಯಲ್ಲಿ ಉನ್ನತ ಸ್ಥಾನ, ನೆಮ್ಮದಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು.
ಸಿಂಹ ರಾಶಿ:
ಸ್ಥಿರಾಸ್ತಿಯು ಕೈ ತಪ್ಪುವ ಸೂಚನೆ ಸಿಗಲಿದ್ದು, ಏನು ಮಾಡುವ ಆಲೋಚನೆ ಬರದು. ಪರರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಎಲ್ಲ ಸೋಲುಗಳನ್ನು ಪಾಠವನ್ನಾಗಿ ಸ್ವೀಕರಿಸಿ, ಸಂತೋಷವೂ ಸಿಗುವುದು. ಪುತ್ರೋತ್ಸವದ ಆನಂದ ನಿಮ್ಮ ಪಾಲಿಗಿದೆ. ನೆರೆ-ಹೊರೆಯವರ ಜೊತೆ ಕಲಹವಾಗಬಹುದು. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು.
ಕನ್ಯಾ ರಾಶಿ:
ಇಂದು ಔಷಧೀಯ ವಸ್ತುಗಳಿಂದ ಹೆಚ್ಚು ಲಾಭವಿರಲಿದೆ. ಆರೋಪಗಳನ್ನು ನೀವು ಸುಳ್ಳಾಗಿಸುವಿರಿ. ಯಾವ ಮಾತನ್ನೂ ಯೋಚಿಸದೇ ಕೊಡಬೇಡಿ. ಅದೇ ಮುಳುವಾದೀತು. ಸಂಗಾತಿಯ ಸೌಂದರ್ಯಕ್ಕೆ ಮಾರುಹೋಗಬೇಡಿ. ಎಲ್ಲರ ಜೊತೆ ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಕೇಳಿ ಬಂದವರಿಗೆ ಅಲ್ಪ ಸಹಾಯ. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ.
ತುಲಾ ರಾಶಿ:
ಉಪಯೋಗವಿಲ್ಲದ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಸಂಗಾತಿಯೊಡನೆ ಸಂತೋಷದಿಂದ ಸಲ್ಲಾಪಮಾಡುತ್ತ ಸಮಯ ಸರಿಯುವುದು. ಭೂಮಿಯನ್ನು ಮಾರಾಟ ಮಾಡಲು ಪ್ರಯತ್ನಿಸಿದರೆ ನಿಮ್ಮ ಬೆಲೆಗೆ ಸರಿಹೊಂದುವಂತೆ ಖರೀದಿಯಾಗುವುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ.
ವೃಶ್ಚಿಕ ರಾಶಿ:
ನಿಮ್ಮ ಬಗ್ಗೆ ಪೂರ್ವಾಗ್ರಹದಿಂದ ಕೂಡಿರುವವರಿಗೆ ನಿಮ್ಮ ನಿಜಸ್ಥಿತಿಯನ್ನು ತಿಳಿಸುವಿರಿ. ಸಂಪಾದನೆ ಹೆಚ್ಚಾಗುವುದು. ಕಾನೂನಾತ್ಮಕ ಚಟುವಟಿಕೆಯಲ್ಲಿ ಚುರುಕು ಹೆಚ್ಚು. ಮನೋರಂಜನೆಯ ಕಾರ್ಯಕ್ರಮಗಳಿಗೆ ಭಾಗವಹಿಸಬಹುದು. ಇಂದಿನ ನಿಮ್ಮ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಆರ್ಥಿಕ ವ್ಯವಹಾರಕ್ಕೆ ಮಾರ್ಗ ಸುಲಲಿತ. ಅಧ್ಯಾತ್ಮಪ್ರಿಯರಿಗೆ ಉತ್ತಮ ಸಂಗಾತಿ ಲಭ್ಯ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು.
ಧನು ರಾಶಿ:
ಸಹೋದರರ ನಡುವೆ ಸಮನ್ವಯದ ಕೊರತೆ ಕಾಣಿಸುವುದು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಅವರಿಗೆ ಏನು ಬೇಕು? ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಕಾನೂನಿಗೆ ವಿರುದ್ಧವಾಗಿ ಏನನ್ನಾದರು ಮಾಡಿ ಸಿಕ್ಕಿಬೀಳುವಿರಿ. ನಂಬಿಕೆಯನ್ನು ಉಳಿಸಿಕೊಳ್ಳುವತ್ತ ನಿಮ್ಮ ಯೋಚನೆ ಇರಲಿದೆ. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನದ ಪ್ರದರ್ಶನ.
ಮಕರ ರಾಶಿ:
ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ಜೀವನೂ ಸರಳ ಎನಿಸಬಹುದು. ಕುಟುಂಬದವರ ಜೊತೆ ನಗುತ್ತಾ ಇರಿ. ಕಲಾವಿದರಿಗೆ ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ಬರಬಹುದು. ವೈದ್ಯವೃತ್ತಿಯವರಿಗೆ ಕೃತಜ್ಞತೆಯ ಸಂತೃಪ್ತಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ಪ್ರಯಾಣದಲ್ಲಿ ಆಕಸ್ಮಿಕ ತೊಂದರೆಯನ್ನು ಎದುರಿಸಬೇಕಾಗುವುದು. ಒಳ್ಳೆಯ ಕಾರ್ಯಕ್ಕೆ ಸುತ್ತಮುತ್ತಲಿಂದ ಪ್ರಶಂಸೆ.
ಕುಂಭ ರಾಶಿ:
ಸಾಧ್ಯಾವಾದರೆ ಪ್ರೀತಿಸಿ, ಇಲ್ಲವೇ ತಟಸ್ಥವಾಗಿರಿ. ಬರುವ ಹಣವನ್ನು ನಿರೀಕ್ಷಿಸಬಹುದು. ಆಲಂಕಾರಿಕ ಸ್ಪರ್ಧೆಯಲ್ಲಿ ವಿಜಯಿಯಾಗುವಿರಿ. ಸಂಗಾತಿಯೊಂದಿಗೆ ಮನಸ್ತಾಪಗಳು ಏಳಬಹುದು. ಪ್ರೇಮನಿವೇದನೆಯನ್ನು ಮಾಡಲು ಹೋಗಬೇಡಿ. ತಿರಸ್ಕಾರಿಸಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಬರಬೇಕಾದ ಹಣ ನಿಮ್ಮ ಜೇಬಿಗೆ ಬೀಳುವುದು. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು.
ಮೀನ ರಾಶಿ:
ಆಹಾರದಿಂದ ಆರೋಗ್ಯ ಹಾಳಾಗುವ ಸಂಭವವಿದೆ. ಕೊಟ್ಟಿರುವ ಜವಾಬ್ದಾರಿಯನ್ನು ಯೋಗ್ಯರೀತಿಯಲ್ಲಿ ಮಾಡಿ ಮುಗಿಸುವಿರಿ. ಸಂಪತ್ತನ್ನು ಉಳಿಸಲು ಯತ್ನಿಸಿದಷ್ಟೂ ಯಾವುದಾದರೂ ಒಂದು ರೀತಿಯಲ್ಲಿ ಖರ್ಚಾಗುವುದು. ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು. ನಿಮ್ಮ ಮಾತಿಗೆ ಅಪರಿಚಿತರೂ ಮೂಕವಿಸ್ಮತರಾದಾರು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ – 06 – 18 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:36, ಯಮಗಂಡ ಕಾಲ 12:27 – 13:59, ಗುಳಿಕ ಕಾಲ 15:31 – 17:04
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್ ಕಲೆಹಾಕಲಷ್ಟೇ ಶಕ್ತವಾಗಿ 7 ರನ್ಗಳಿಂದ ಸೋಲೊಪ್ಪಿಕೊಂಡಿತು.
ಬಾಗಲಕೋಟೆ, ಏಪ್ರಿಲ್ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ವಿದ್ಯಾರ್ಥಿಗಳಿಗೆ ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್ನ ವಿದ್ಯಾರ್ಥಿ ಘಟಕವಾದ ಎನ್ಎಸ್ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆಯ ಸಿಪಿಐ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಅದೇ ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಆಗಮಿಸಿದ್ದಾರೆ. ಈ ಘಟನೆಯಿಂದಾಗಿ ಕಚೇರಿ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿ.ವಿ. ಕಾಲೇಜು ಹಾಸ್ಟೆಲ್ಗೆ ತೆರಳಿ ಕರಪತ್ರ ಹಂಚಲಾಗಿದೆ. ಕರಪತ್ರಗಳಲ್ಲಿ ಬಿಜೆಪಿಗೆ ಮತ ಹಾಕಿದರೆ ಜೈಲಿಗೆ ಹೋಗುತ್ತೀರಿ, ಬಿಜೆಪಿ ನಿಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬರೆದಿರುವ ಬಗ್ಗೆ ಆರೋಪಿಸಲಾಗಿದೆ.
ಸಿನಿಮಾಗಳು (Cinema) ಸಮಾಜದ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತವೆ. ಕೆಲ ದಶಕಗಳ ಹಿಂದೆ ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳು, ಸಮಾಜದಲ್ಲಿ ಇದ್ದ ಡೊಂಕನ್ನು ಎತ್ತಿ ತೋರಿಸುವ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು. ಎಲ್ಲ ಭಾಷೆಗಳಲ್ಲಿಯೂ ಸಹ ಈ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು ಆದರೆ ಇತ್ತೀಚೆಗೆ ಸಿನಿಮಾಗಳಲ್ಲಿ ಒಳಿತಿಗಿಂತಲೂ ಕೆಡುಕನ್ನೇ ವೈಭವೀಕರಿಸಲಾಗುತ್ತಿದೆ. ಕೆಡುಕೇ ಉತ್ತಮ ಎಂಬ ರೀತಿಯಲ್ಲಿ ತೋರಿಸಲಾಗುತ್ತಿದೆ. ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಅವರು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.
ವಾರಣಾಸಿಯಲ್ಲಿ ಆಯೋಜಿಸಿದ್ದ ವಿಕ್ರಮಾಧಿತ್ಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ‘ಸಿನಿಮಾಗಳಲ್ಲಿ ಅಪರಾಧ ಎಸಗುವ ಖಳನಾಯಕರನ್ನು ವೈಭವೀಕರಿಸುವುದು ಅಥವಾ ಅವರನ್ನು ಹೀರೋಗಳಂತೆ ಬಿಂಬಿಸುವುದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಂತಹ ಚಿತ್ರಗಳು ಯುವ ಪೀಳಿಗೆಯ ದಾರಿ ತಪ್ಪಿಸುತ್ತವೆ, ಅವರು ಒಳಿತು ಕೆಡಕಿನ ವ್ಯತ್ಯಾಸ ಮರೆಯುತ್ತಾರೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
‘ಕಲೆ ಮತ್ತು ಸೃಜನಶೀಲತೆಯ ಹೆಸರಿನಲ್ಲಿ ಸಮಾಜದ ಮೌಲ್ಯಗಳನ್ನು ಬಲಿಗೊಡಬಾರದು. ಚಲನಚಿತ್ರಗಳು ಕೇವಲ ಮನರಂಜನೆಯ ಸಾಧನವಾಗದೆ, ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಿರಬೇಕು. ಚಿತ್ರ ನಿರ್ಮಾಪಕರು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಗಮನದಲ್ಲಿಟ್ಟುಕೊಂಡು ಚಿತ್ರಗಳನ್ನು ನಿರ್ಮಿಸಬೇಕು. ರಾಷ್ಟ್ರಭಕ್ತಿ ಮತ್ತು ಸಕಾರಾತ್ಮಕತೆಯನ್ನು ಪ್ರೇರೇಪಿಸುವ ಕಥೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ.
ಸಮಾಜದ ಮೇಲೆ ಸಿನಿಮಾದ ಪ್ರಭಾವ ಅತೀವವಾಗಿದೆ. ಹೀಗಾಗಿ, ಸೃಜನಶೀಲರು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು. ಇಲ್ಲದಿದ್ದರೆ ಮುಂದಿನ ಪೀಳಿಗೆಯು ತಪ್ಪು ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಪಾಯವಿದೆ. ಮನರಂಜನಾ ಕ್ಷೇತ್ರವು ತನ್ನ ಶಕ್ತಿಯನ್ನು ಸಮಾಜದ ಸುಧಾರಣೆಗಾಗಿ ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.