Headlines

‘ನಮ್ಮನ್ನು ಡ*ರ್ ಅಂತ ಕರೆದ್ರೆ ಹೇಗನಿಸುತ್ತೆ ನೀವೇ ಯೋಚಿಸಿ’; ಅನುಶ್ರೀ ಬೇಸರ

ಆ್ಯಂಕರ್ ಅನುಶ್ರೀ (Anushree) ಅವರು ಹಲವು ವಿಷಯಗಳ ಬಗ್ಗೆ ಓಪನ್ ಆಗಿ ಮಾತನಾಡುತ್ತಾರೆ. ತಮ್ಮ ಬಗ್ಗೆ, ತಾವು ನಡೆಸಿಕೊಡೋ ಶೋ ಬಗ್ಗೆ ಏನಾದರೂ ಆರೋಪ ಕೇಳಿ ಬಂದರೆ ನೇರವಾಗಿ ಉತ್ತರಿಸುತ್ತಾರೆ. ಈ ಬಗ್ಗೆ ಅವರು ಹಿಂದೂ ಮುಂದೂ ಯೋಚಿಸೋದಿಲ್ಲ. ಈಗ ಸಂದರ್ಶನ ಒಂದರಲ್ಲಿ ಅವರು ನೇರ ಮಾತುಗಳಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.ಇದರಲ್ಲಿ ಅವರು ಹೆಣ್ಣು ಮಕ್ಕಳಿಗೆ ಸೈಲೆಂಟ್ ಆಗಿ ನಡೆಯುವ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ. ಅನುಶ್ರೀ ಅವರು ಸಂದರ್ಶನ ನೀಡಿದ್ದಕ್ಕಿಂತ, ಸಂದರ್ಶನ ಮಾಡಿದ್ದೇ ಹೆಚ್ಚು. ಅವರು ಅನೇಕ…

Read More

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಪತ್ತೆಯಾಗಿದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ…

Read More

ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ವಿಜಯವಾಡ, ಏ.4: ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಒಂದು ಅಮಾನೀಯ ಘಟನೆಯೊಂದು ನಡೆದಿದೆ. 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿ, ಚಿತ್ರ ಹಿಂಸೆ ನೀಡಿದ್ದಾರೆ. ಗುರುವಾರ ಸಂಜೆ ಸಂತ್ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಚೆರ್ಲಾ ಪಟ್ಟಣದಲ್ಲಿ ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆರೋಪಿಗಳು ಬಂದು ಈ ಅಪರಾಧ ಎಸಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ಮಧ್ಯಾಹ್ನ 3:30 ರಿಂದ 4 ಗಂಟೆಯ…

Read More

ವಿವಾದಾತ್ಮಕ ಹೇಳಿಕೆ… ಧೋನಿ ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರ, ಎರಡು ಬಾರಿ ವಿಶ್ವಕಪ್ ವಿಜೇತ ಯುವರಾಜ್ ಸಿಂಗ್ ಅವರು ಭಾರತೀಯ ಕ್ರಿಕೆಟ್‌ನ ದಿಗ್ಗಜ ನಾಯಕರಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ನೀಡುತ್ತಿರುವ ಸರಣಿ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ಷಮೆಯಾಚನೆಗೆ ಕಾರಣವೇನು? ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ಎಂ.ಎಸ್. ಧೋನಿ ಮತ್ತು ಕಪಿಲ್…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

Tulasi and Menstruation: ಮುಟ್ಟಿನ ಸಮಯದಲ್ಲಿ ತುಳಸಿ ಗಿಡ ಏಕೆ ಮುಟ್ಟಬಾರದು? ಸತ್ಯ ಮತ್ತು ಮಿಥ್ಯಗಳು

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ತುಳಸಿಯನ್ನು ಕೇವಲ ಗಿಡವಾಗಿ ನೋಡದೆ ‘ಲಕ್ಷ್ಮಿ’ಯ ಸ್ವರೂಪ ಎಂದು ಪೂಜಿಸಲಾಗುತ್ತದೆ. ಹಿರಿಯರು ಇಂದಿಗೂ ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಳಸಿ ಗಿಡವನ್ನು ಮುಟ್ಟಬಾರದು ಎಂದು ಹೇಳುತ್ತಾರೆ. ಇದರ ಹಿಂದಿನ ಅಸಲಿ ಕಾರಣಗಳೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಸಾಂಪ್ರದಾಯಿಕ ಮತ್ತು ಧಾರ್ಮಿಕ ನಂಬಿಕೆಗಳು: ಪುರಾಣಗಳ ಪ್ರಕಾರ ತುಳಸಿಯು ಅತ್ಯಂತ ಶುದ್ಧ ಮತ್ತು ದೈವಿಕ ಶಕ್ತಿಯ ಸಂಕೇತ. ಮುಟ್ಟಿನ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ‘ಅಶುದ್ಧತೆ’ ಇರುತ್ತದೆ ಎಂಬುದು ಹಳೆಯ ಕಾಲದ ನಂಬಿಕೆ….

Read More

ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 6 ಮಕ್ಕಳು ಸೇರಿ 9 ಮಂದಿ ದಾರುಣ ಸಾವು!

ನಾಸಿಕ್‌, ಏ.4: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕಾರು ಬಾವಿಗೆ ಬಿದ್ದು 9 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 6 ಮಕ್ಕಳಿದ್ದರೂ ಎಂದು ಹೇಳಲಾಗಿದೆ. ನಾಸಿಕ್‌ನ ದಿಂಡೋರಿ ತಾಲೂಕಿನಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ಪ್ರಕಾರ, ಮಾರುತಿ XL6 ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಬಾವಿಗೆ ಉರುಳಿ ಬಿದ್ದಿದೆ. ವಾಹನದಲ್ಲಿದ್ದ 9 ಜನ ಪ್ರಯಾಣಿಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತರೆಲ್ಲರೂ ಇಂದೋರ್…

Read More

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

ಬೆಂಗಳೂರು (ಏ. 04): ಹೈಯರ್ (Haier) ಭಾರತದಲ್ಲಿ ಹೊಸ ಡೆಸರ್ಟ್ ರೋಸ್ ಎಸಿ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯ ಸ್ಪ್ಲಿಟ್ ಎಸಿಗಳು ಸೆಲ್ಫ್ ಔಟ್‌ಡೋರ್ ಕ್ಲೀನಿಂಗ್ ತಂತ್ರಜ್ಞಾನವನ್ನು ಹೊಂದಿವೆ. ಇದು ಈ ಎಸಿಯ ನಿರ್ವಹಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸ್ವಚ್ಛವಾದ ಹೊರಾಂಗಣದಿಂದಾಗಿ, ಶುದ್ಧ ಮತ್ತು ತಂಪಾದ ಗಾಳಿಯು ಮನೆಯೊಳಗೆ ಬರುತ್ತದೆ. ಇದು ಸೆಲ್ಫ್ ಆಟೋ ಕ್ಲೀನ್ ಔಟ್‌ಡೋರ್ ಹೊಂದಿರುವ ಭಾರತದ ಮೊದಲ ಎಸಿ ಆಗಿದೆ. ಇದರಲ್ಲಿ, ಹೊರಾಂಗಣ ಫ್ಯಾನ್ ಪ್ರತಿ ಬಾರಿ ಸ್ವಿಚ್ ಆಫ್ ಮಾಡಿದಾಗ…

Read More

‘ಎಲ್ಲೂ ಇಲ್ಲ ಅಂದ್ರೆ ಕೊನೆಗೆ ಸ್ಯಾಂಡಲ್​​ವುಡ್​​ನಲ್ಲಾದರೂ ಕೆಲಸ ಮಾಡಬಹುದು’; ವಿರಾಟ್ ಕೊಹ್ಲಿ

ಐಪಿಎಲ್ ಕಾರಣಕ್ಕೆ ವಿರಾಟ್ ಕೊಹ್ಲಿ ಅವರು ಸದ್ಯ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಭಾನುವಾರ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಈ ಮಧ್ಯೆ ಅವರು ದ್ಯಾನಿಶ್ ಸೇಠ್ ಜೊತೆ ಯೂಟ್ಯೂಬ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಕೇವಲ ಐದು ನಿಮಿಷ ಇರೋ ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಸ್ಯಾಂಡಲ್​​ವುಡ್​​ನಲ್ಲಿ ಆ್ಯಕ್ಟ್ ಮಾಡೋ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಆರ್​​ಸಿಬಿ ಇನ್​​ಸೈಡರ್ ನ್ಯಾಗ್ಸ್ (ದ್ಯಾನಿಶ್ ಸೇಠ್) ಇದ್ದಲ್ಲಿ ಫನ್​​ಗೆ ಬರ ಇರೋದಿಲ್ಲ. ಐಪಿಎಲ್ ಮ್ಯಾಚ್…

Read More

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು, ಏಪ್ರಿಲ್ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ…

Read More