Headlines

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ. ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಬೆಂಗಳೂರು, (ಜೂನ್ 01): ರಾಜ್ಯ ರಾಜಕಾರಣದಲ್ಲಿ (Karnataka Politics) ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸಲೀಸಾಗಿ ಆಗಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ. ಶಿವಕುಮಾರ್ (Dk Shivakumar) ಯಾವುದೇ ಗೊಂದಲ, ಗಲಾಟೆ ಪವರ್ ಶೇರ್ ಮಾಡಿಕೊಂಡಿದ್ದಾರೆ. ಕುರ್ಚಿ ಬದಲಾಗುವ ಮೊದಲು ಹಾಗೂ ಬಳಿಕವೂ ತಾವು ಜೋಡೆತ್ತು ಅಂತ್ಲೇ ಬಿಂಬಿಸಿಕೊಳ್ತಿದ್ದಾರೆ. ಆದ್ರೆ ಅಧಿಕಾರ ಹಸ್ತಾಂತರದ ಕಗ್ಗಂಟು ಬಿಡಿಸುವಲ್ಲಿ ಯಶಸ್ವಿಯಾದ ಹೈಕಮಾಂಡ್​ಗೆ ಈಗ ಸರ್ಕಾರ ರಚನೆಯ ಸರ್ಕಸ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಯಾರನ್ನ ಸೇರಿಸ್ಬೇಕು? ಸಿದ್ದರಾಮಯ್ಯ ಸಂಪುಟದಲ್ಲಿದ್ದ ಇನ್ಯಾರನ್ನ ಕೈಬಿಡಬೇಕು ಅನ್ನೋ…

Read More

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರು, ಜೂನ್​ 01: ನಗರದಲ್ಲಿ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್​​ನಿಂದ ವಿವಿಧ ಬ್ಯಾಂಕ್​ಗಳಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ದಾಳಿ ವೇಳೆ ಕಂಪನಿಗೆ ಸಂಬಂಧಿಸಿದ 1.27 ಕೋಟಿ ರೂ ನಗದು ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 18 ಕೋಟಿ ರೂ ಹಣವನ್ನೂ ಫ್ರೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಮಾಹಿತಿ ನೀಡಿದೆ. ಮುಖ್ಯಾಂಶಗಳು ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ ಕೇಸ್​ ಕಂಪನಿಗೆ ಸಂಬಂಧಿಸಿದ 1.27 ಕೋಟಿ ನಗದು ಮತ್ತು…

Read More

ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಪ್ರಾತಿನಿಧಿಕ ಚಿತ್ರImage Credit source: gettyimages ಬೆಂಗಳೂರು, ಜೂನ್​ 01: ಸಿಲಿಕಾನ್ ಸಿಟಿಯಲ್ಲಿ (bangaluru) ಕಳೆದ ಕೆಲವು ದಿನಗಳಿಂದ ಕಂಡುಬರುತ್ತಿರುವ ಮಳೆ ಮತ್ತು ಅತಿಯಾದ ಸೆಕೆಯ ವಾತಾವರಣವು ಸಾರ್ವಜನಿಕರನ್ನು, ಅದರಲ್ಲೂ ಮುಖ್ಯವಾಗಿ ಪುಟಾಣಿ ಮಕ್ಕಳನ್ನು (Children) ಹೈರಾಣಾಗಿಸಿದೆ. ಹವಾಮಾನ ವೈಪರೀತ್ಯದ ಬೆನ್ನಲ್ಲೇ ರಾಜಧಾನಿಯಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಡೆಂಗ್ಯೂ ಸೇರಿ ವೈರಾಣು ಜ್ವರಗಳ ಪ್ರಕರಣಗಳು ತೀವ್ರವಾಗಿ ಉಲ್ಬಣಿಸುತ್ತಿದ್ದು, ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುವಂತೆ ಪೋಷಕರಿಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಬದಲಾವಣೆ ಹವಾಮಾನದಿಂದ…

Read More

IPL 2026: ಆರ್​​ಸಿಬಿಗೆ ಆಘಾತ; ಟಿಮ್ ಡೇವಿಡ್​ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಸಂತಸದಲ್ಲಿದ್ದ ಆರ್​ಸಿಬಿ ತಂಡಕ್ಕೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟಿಮ್ ಡೇವಿಡ್​ಗೆ ಬಿಸಿಸಿಐ ಒಂದು ಪಂದ್ಯದಿಂದ ನಿಷೇಧದ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಪಂದ್ಯ ಶುಲ್ಕವನ್ನು ಕಡಿತಗೊಳಿಸಲಾಗಿದ್ದು, 2 ಡಿಮೆರಿಟ್ ಅಂಕಗಳನ್ನು ಸಹ ನೀಡಲಾಗಿದೆ. ಇದರನ್ವಯ ಟಿಮ್ ಡೇವಿಡ್ 2027 ರ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಮೊದಲ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ಟಿಮ್ ಡೇವಿಡ್​ ವಿರುದ್ಧ ಬಿಸಿಸಿಐ ಈ ರೀತಿಯ ಕಠಿಣ…

Read More

ತೀವ್ರ ಸ್ವರೂಪ ಪಡೆದ ಜಮೀರ್ ಅಹ್ಮದ್‌ ಆಡಿಯೋ ಕೇಸ್: ಹೈಕಮಾಂಡ್​​​​ಗೆ ದೂರು

ದಾವಣಗೆರೆ, (ಜೂನ್ 01): ಜಮೀರ್ ಅಹ್ಮದ್ ಖಾನ್ (Zameer Ahmed Khan). ಚಾಮರಾಜಪೇಟೆಯ ಚತುರ. ಅಲ್ಪಸಂಖ್ಯಾತರ ಮತಗಳ ಮೇಲೆ ಹಿಡಿತ ಸಾಧಿಸಿರೋ ಲೀಡರ್. ಇದೀಗ ಇದೇ ಜಮೀರ್ ಅಹ್ಮದ್ ವಿರುದ್ಧ ಪಕ್ಷವಿರೋಧಿ ಆರೋಪ ಕೇಳಿಬಂದಿದೆ. ಸಚಿವ ಸಂಪುಟ ರಚನೆ ಹೊತ್ತಲ್ಲೇ ಜಮೀರ್​ರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಾಜಿ ಸಚಿವ ಜಮೀರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ‌.ಬಸವರಾಜ್ ಹಾಗೂ ದಾವಣಗೆರೆ ಮಾಜಿ ಮೇಯರ್ ಕೆ.ಚಮನ್ ಸಾಬ್ ಎನ್ನುವರು ಹೈಕಮಾಂಡ್​​​​​ಗೆ…

Read More

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ…

Read More

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ…

Read More

ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ. ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು…

Read More