ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ.

ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು ಈ ಮೂಲಕ ಖಚಿತವಾಗಿದೆ. ಸ್ವತಃ ನಿರ್ದೇಶಕ ಲೋಕೇಶ್ ಕನಕರಾಜ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದು, ‘ನಮ್ಮ ಯೂನಿವರ್ಸ್‌ಗೆ ಸುಸ್ವಾಗತ ರವಿ ಸರ್’ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಕೂಡಲೇ ಜನರಿಗೆ ರವಿ ಮೋಹನ್ ಅವರ ವೈಯಕ್ತಿಕ ವಿಷಯ ನೆನಪಾಗಿದೆ.

ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಜಯಂ ರವಿ, ತಮ್ಮ ವೈಯಕ್ತಿಕ ಜೀವನದ ಏರುಪೇರುಗಳಿಂದ ಬೇಸತ್ತು ಕಠಿಣ ನಿರ್ಧಾರ ಪ್ರಕಟಿಸಿದ್ದರು. ‘ನನ್ನ ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೂ ನನ್ನ ಯಾವುದೇ ಸಿನಿಮಾಗಳು ತೆರೆಗೆ ಬರುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ನಟಿಸಲು ಸಾಧ್ಯವಾಗುತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಎದುರಿಸುತ್ತಿರುವ ಸೈಬರ್ ಬುಲ್ಲಿಂಗ್ ಮತ್ತು ನಿಂದನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ನನ್ನ ವೈಯಕ್ತಿಕ ಜೀವನ ಸರಿಯಾಗುವವರೆಗೂ ಕ್ಯಾಮೆರಾ ಮುಂದೆ ನಿಲ್ಲಲ್ಲ’ ಎಂದು ಭಾವುಕರಾಗಿದ್ದರು.

ಅಲ್ಲದೇ, ‘ನನ್ನ ನಿರ್ಧಾರದಿಂದ ಯಾರಿಗೂ ತೊಂದರೆಯಾಗಬಾರದು. ನಿರ್ಮಾಪಕರಿಂದ ಪಡೆದ ಹಣವನ್ನು ಹಿಂತಿರುಗಿಸಿಯಾದರೂ ಸಿನಿಮಾದಿಂದ ಬ್ರೇಕ್ ತೆಗೆದುಕೊಳ್ಳುತ್ತೇನೆ’ ಎಂದಿದ್ದರು. ಆದರೆ ಈ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಲೋಕೇಶ್ ಕನಕರಾಜ್ ಅವರಂತಹ ದೊಡ್ಡ ನಿರ್ದೇಶಕನ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ರವಿ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಈ ನಡುವೆ ಜಯಂ ರವಿ ಅವರೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಗಾಯಕಿ ಕೆನಿಶಾ ಫ್ರಾನ್ಸಿಸ್ ಅವರೊಂದಿಗಿನ ಸಂಬಂಧದ ವದಂತಿಗಳು ಇತ್ತೀಚೆಗೆ ಜೋರಾಗಿದ್ದವು. 2025ರಲ್ಲಿ ಇಬ್ಬರೂ ಒಂದೇ ರೀತಿಯ ಉಡುಪು ಧರಿಸಿ ಮದುವೆಯೊಂದರಲ್ಲಿ ಭಾಗವಹಿಸಿದ್ದರು. ಆದರೆ ಇತ್ತೀಚೆಗಷ್ಟೇ ಕೆನಿಶಾ, ‘ನಾನು ಈ ಕಥೆಯೊಳಗೆ ಪ್ರೀತಿಯಿಂದ ಬಂದೆ, ಆದರೆ ಈಗ ಮೌನವಾಗಿ ಹೊರನಡೆಯುತ್ತಿದ್ದೇನೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಜಯಂ ರವಿ ಜೊತೆಗಿನ ಬ್ರೇಕ್‌ಅಪ್ ಮುನ್ಸೂಚನೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ, ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೀಲು ನೋವಿಗೂ ಹವಾಮಾನಕ್ಕೂ ಏನು ಸಂಬಂಧ?

ತಜ್ಞರ ಪ್ರಕಾರ, ತಾಪಮಾನ, ಗಾಳಿಯ ಒತ್ತಡ (Atmospheric Pressure) ಮತ್ತು ತೇವಾಂಶದಲ್ಲಾಗುವ ಬದಲಾವಣೆಗಳು ಕೆಲವರ ಕೀಲುಗಳ ಮೇಲೆ ಪರಿಣಾಮ ಬೀರುತ್ತವೆ. ಈ ಸಮಯದಲ್ಲಿ ಕೀಲುಗಳಲ್ಲಿ ಬಿಗಿತ, ಭಾರವಾದ ಅನುಭವ ಹಾಗೂ ನೋವು ಹೆಚ್ಚಾಗಬಹುದು. ಬೆಳಿಗ್ಗೆ ಎದ್ದಾಗ ಅಥವಾ ಹೆಚ್ಚು ಸಮಯ ಒಂದೇ ಸ್ಥಿತಿಯಲ್ಲಿ ಕುಳಿತಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಬಹುದು. ಆದರೆ ಹವಾಮಾನ ಬದಲಾವಣೆಯ ಪರಿಣಾಮ ಎಲ್ಲರಲ್ಲೂ ಒಂದೇ ರೀತಿಯಾಗಿ ಕಾಣಿಸುವುದಿಲ್ಲ. ಕೆಲವರಿಗೆ ಯಾವುದೇ ರೀತಿಯ ಸಮಸ್ಯೆ ಆಗದೇ ಇರಬಹುದು, ಇನ್ನು ಕೆಲವರಿಗೆ ನೋವಿನ ಅನುಭವ ಹೆಚ್ಚಾಗಿ ಕಾಣಿಸಬಹುದು.

ಯಾರಿಗೆ ಹೆಚ್ಚು ತೊಂದರೆ ಉಂಟಾಗಬಹುದು?

ಈ ಕೆಳಗಿನ ಸಮಸ್ಯೆಗಳಿರುವವರಿಗೆ ಹವಾಮಾನ ಬದಲಾವಣೆಯ ಪರಿಣಾಮ ಹೆಚ್ಚು ಕಂಡುಬರಬಹುದು:

  • ಸಂಧಿವಾತ (Arthritis)
  • ಆಸ್ಟಿಯೋಆರ್ಥ್ರೈಟಿಸ್ (Osteoarthritis)
  • ರುಮಟಾಯ್ಡ್ ಆರ್ಥ್ರೈಟಿಸ್ (Rheumatoid Arthritis)
  • ಹಳೆಯ ಕೀಲು ಅಥವಾ ಮೂಳೆ ಗಾಯಗಳು
  • ವಯೋವೃದ್ಧರಲ್ಲಿ ಕಂಡುಬರುವ ಕೀಲು ಸಮಸ್ಯೆಗಳು

ಇಂತಹ ವ್ಯಕ್ತಿಗಳಲ್ಲಿ ಕೀಲು ನೋವು, ಬಿಗಿತ ಮತ್ತು ಅಸಹಜತೆ ಹೆಚ್ಚಾಗುವ ಸಾಧ್ಯತೆ ಇದೆ.

ಕೀಲು ನೋವನ್ನು ಕಡಿಮೆ ಮಾಡಲು ಏನು ಮಾಡಬೇಕು?

  • ಪ್ರತಿದಿನ ಲಘು ವ್ಯಾಯಾಮ ಮಾಡಿ
  • ಹೆಚ್ಚು ಸಮಯ ಒಂದೇ ಸ್ಥಿತಿಯಲ್ಲಿ ಕುಳಿತುಕೊಳ್ಳಬೇಡಿ
  • ಸಾಕಷ್ಟು ನೀರು ಕುಡಿಯಿರಿ
  • ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧ ಆಹಾರ ಸೇವಿಸಿಹವಾಮಾನ ತಣ್ಣಗಿದ್ದರೆ ದೇಹವನ್ನು ಬೆಚ್ಚಗಿರಿಸಿಕೊಳ್ಳಿ
  • ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯಿರಿ

ಹವಾಮಾನ ಬದಲಾದಾಗ ಕೀಲು ನೋವು ಹೆಚ್ಚಾಗುವುದು ಕೆಲವರಲ್ಲಿ ಸಾಮಾನ್ಯವಾಗಿರಬಹುದು. ಆದರೆ ನೋವು ನಿರಂತರವಾಗಿ ಮುಂದುವರಿದರೆ ಅಥವಾ ದಿನನಿತ್ಯದ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸರಿಯಾದ ಜೀವನಶೈಲಿ, ವ್ಯಾಯಾಮ ಮತ್ತು ಪೌಷ್ಟಿಕ ಆಹಾರದಿಂದ ಕೀಲುಗಳ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಬೆಂಗಳೂರು, (ಜೂನ್ 01): ರಾಜ್ಯ ರಾಜಕಾರಣದಲ್ಲಿ (Karnataka Politics) ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸಲೀಸಾಗಿ ಆಗಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ. ಶಿವಕುಮಾರ್ (Dk Shivakumar) ಯಾವುದೇ ಗೊಂದಲ, ಗಲಾಟೆ ಪವರ್ ಶೇರ್ ಮಾಡಿಕೊಂಡಿದ್ದಾರೆ. ಕುರ್ಚಿ ಬದಲಾಗುವ ಮೊದಲು ಹಾಗೂ ಬಳಿಕವೂ ತಾವು ಜೋಡೆತ್ತು ಅಂತ್ಲೇ ಬಿಂಬಿಸಿಕೊಳ್ತಿದ್ದಾರೆ. ಆದ್ರೆ ಅಧಿಕಾರ ಹಸ್ತಾಂತರದ ಕಗ್ಗಂಟು ಬಿಡಿಸುವಲ್ಲಿ ಯಶಸ್ವಿಯಾದ ಹೈಕಮಾಂಡ್​ಗೆ ಈಗ ಸರ್ಕಾರ ರಚನೆಯ ಸರ್ಕಸ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಯಾರನ್ನ ಸೇರಿಸ್ಬೇಕು? ಸಿದ್ದರಾಮಯ್ಯ ಸಂಪುಟದಲ್ಲಿದ್ದ ಇನ್ಯಾರನ್ನ ಕೈಬಿಡಬೇಕು ಅನ್ನೋ ಚರ್ಚೆ ದೆಹಲಿ ಮಟ್ಟದಲ್ಲಿ ನಡೀತಿದೆ. ಹೀಗಾಗಿ ನಮಗೂ ಒಂದು ಅವಕಾಶ ಸಿಗ್ಲಿ ಎಂದು ಹೊಸಬರು ಟವಲ್ ಹಾಕಿದ್ರೆ, ಸಿದ್ದರಾಮಯ್ಯರ ಸಂಪುಟದಲ್ಲಿದ್ದ ನಾಯಕರು ದೆಹಲಿ ಪರೇಡ್ ಶುರು ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಮೊದಲ ಹಂತದ ಸಂಭಾವ್ಯ ಸಚಿವರ ಪಟ್ಟಿ ಹೈಕಮಾಂಡ್​​​ ಕೈಸೇರಿದೆ.

ಇದನ್ನೂ ನೋಡಿ: ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ 10 ರಿಂದ 12 ಸಚಿವರ ಮೊದಲ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್​ ಅವರಿಗೆ ನೀಡಿದ್ದು, ಈ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಪರಿಶೀಲಿಸಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರವಾನಿಸಲಿದ್ದಾರೆ. ಇನ್ನು ಸಂಭಾವ್ಯ ಸಚಿವ ಪಟ್ಟಿಯನ್ನು ನೋಡುವುದಾದರೆ, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಡಾ.ಯತೀಂದ್ರ ಅಥವಾ ಭೈರತಿ ಸುರೇಶ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್ ಅಥವಾ ಈಶ್ವರ ಖಂಡ್ರೆ. ಹೀಗೆ 10 ರಿಂದ 12 ಸಚಿವರು ಜೂನ್ 3ರಂದೇ ಡಿಕೆ ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರು, ಜೂನ್​ 01: ನಗರದಲ್ಲಿ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್​​ನಿಂದ ವಿವಿಧ ಬ್ಯಾಂಕ್​ಗಳಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ದಾಳಿ ವೇಳೆ ಕಂಪನಿಗೆ ಸಂಬಂಧಿಸಿದ 1.27 ಕೋಟಿ ರೂ ನಗದು ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 18 ಕೋಟಿ ರೂ ಹಣವನ್ನೂ ಫ್ರೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಮಾಹಿತಿ ನೀಡಿದೆ.

ಮುಖ್ಯಾಂಶಗಳು

  • ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ ಕೇಸ್​
  • ಕಂಪನಿಗೆ ಸಂಬಂಧಿಸಿದ 1.27 ಕೋಟಿ ನಗದು ಮತ್ತು ಚಿನ್ನಾಭರಣ ಜಪ್ತಿ
  • ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ಹಣ ಫ್ರೀಜ್

ಬ್ಯಾಂಕ್​​ಗಳಿಗೆ 899 ಕೋಟಿ ರೂ ವಂಚನೆ 

ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ಎಸ್​​ಬಿಐ ಸೇರಿದಂತೆ ವಿವಿಧ ಬ್ಯಾಂಕ್​ಗಳಿಂದ ಅತಿ ಹೆಚ್ಚು ಪ್ರಮಾಣದಲ್ಲಿ ಸಾಲ ಪಡೆದುಕೊಂಡಿತ್ತು. ಆದರೆ, ಆ ಸಾಲದ ಹಣವನ್ನು ಉದ್ದೇಶಿತ ಉದ್ದೇಶಕ್ಕೆ ಬಳಸದೆ, ಬೇರೆ ಕಡೆಗೆ ವರ್ಗಾವಣೆ ಮಾಡುವ ಮೂಲಕ ಒಟ್ಟು 899 ಕೋಟಿ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವಂಚನೆಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ದಾಖಲಿಸಿದ್ದ ಇದೇ ಪ್ರಕರಣದ ಆಧಾರದ ಮೇಲೆ ಇದೀಗ ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ’: ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ

ಬೆಂಗಳೂರಿನ ಇ.ಡಿ ಅಧಿಕಾರಿಗಳ ನೇತೃತ್ವದ ತಂಡವು ಇತ್ತೀಚೆಗೆ ಅಂದರೆ ಮೇ 21 ಹಾಗೂ ಮೇ 29ರಂದು ದೀಪಕ್ ಕೇಬಲ್ ಇಂಡಿಯಾ ಲಿಮಿಟೆಡ್‌ನ ನಿರ್ದೇಶಕ ಕೆ. ವೆಂಕಟೇಶ್ವರ್ ರಾವ್ ಮತ್ತು ಅಧುನಿಕ್ ಕಾರ್ಪೊರೇಷನ್ ಲಿಮಿಟೆಡ್‌ನ ನಿರ್ದೇಶಕ ಮಹೇಶ್ ಅಗರ್ವಾಲ್ ಅವರಿಗೆ ಸೇರಿದ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ

ಇನ್ನು ದಾಳಿ ಸಂದರ್ಭದಲ್ಲಿ ವಂಚನೆಗೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸದ್ಯ ಜಪ್ತಿ ಮಾಡಲಾದ ನಗದು, ಚಿನ್ನಾಭರಣ ಹಾಗೂ ಫ್ರೀಜ್ ಮಾಡಲಾದ ಬ್ಯಾಂಕ್ ಖಾತೆಗಳ ವಿವರಗಳೊಂದಿಗೆ ಇಡಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಪ್ರಾತಿನಿಧಿಕ ಚಿತ್ರImage Credit source: gettyimages

ಬೆಂಗಳೂರು, ಜೂನ್​ 01: ಸಿಲಿಕಾನ್ ಸಿಟಿಯಲ್ಲಿ (bangaluru) ಕಳೆದ ಕೆಲವು ದಿನಗಳಿಂದ ಕಂಡುಬರುತ್ತಿರುವ ಮಳೆ ಮತ್ತು ಅತಿಯಾದ ಸೆಕೆಯ ವಾತಾವರಣವು ಸಾರ್ವಜನಿಕರನ್ನು, ಅದರಲ್ಲೂ ಮುಖ್ಯವಾಗಿ ಪುಟಾಣಿ ಮಕ್ಕಳನ್ನು (Children) ಹೈರಾಣಾಗಿಸಿದೆ. ಹವಾಮಾನ ವೈಪರೀತ್ಯದ ಬೆನ್ನಲ್ಲೇ ರಾಜಧಾನಿಯಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಡೆಂಗ್ಯೂ ಸೇರಿ ವೈರಾಣು ಜ್ವರಗಳ ಪ್ರಕರಣಗಳು ತೀವ್ರವಾಗಿ ಉಲ್ಬಣಿಸುತ್ತಿದ್ದು, ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುವಂತೆ ಪೋಷಕರಿಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಬದಲಾವಣೆ ಹವಾಮಾನದಿಂದ ಮಕ್ಕಳ ಮೇಲೆ ಪರಿಣಾಮ
  • ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ, ವೈರಲ್ ಜ್ವರದ ಆತಂಕ
  • ತೀವ್ರ ನಿಗಾ ವಹಿಸುವಂತೆ ಪೋಷಕರಿಗೆ ವೈದ್ಯರು ಎಚ್ಚರಿಕೆ

ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ರಾಜಧಾನಿಯಲ್ಲಿ ಕಳೆದೊಂದು ವಾರದಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಇದರೊಂದಿಗೆ ಬಿಸಿಲು ಮತ್ತು ಉಸಿರುಕಟ್ಟುವ ಸೆಕೆಯ ವಾತಾವರಣವೂ ನಿರ್ಮಾಣವಾಗಿದೆ. ಈ ಹಠಾತ್ ಹವಾಮಾನ ಬದಲಾವಣೆಯಿಂದಾಗಿ ಮಕ್ಕಳಲ್ಲಿ ನೆಗಡಿ, ಕೆಮ್ಮು, ಶೀತ ಮತ್ತು ತೀವ್ರ ಜ್ವರದ ಸಮಸ್ಯೆಗಳು ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿವೆ. ಕಳೆದ ವರ್ಷ ತಕ್ಕಮಟ್ಟಿಗೆ ನಿಯಂತ್ರಣದಲ್ಲಿದ್ದ ಡೆಂಗ್ಯೂ ಜ್ವರದ ಪ್ರಕರಣಗಳು ಇದೀಗ ಮಕ್ಕಳಲ್ಲಿ ಮತ್ತೆ ಪತ್ತೆಯಾಗುತ್ತಿದ್ದು, ಒಟ್ಟಾರೆ ವೈರಲ್ ಜ್ವರದ ಪ್ರಕರಣಗಳಲ್ಲಿ ಶೇಕಡಾ 15 ರಿಂದ 20 ರಷ್ಟು ಹೆಚ್ಚಳವಾಗಿದೆ.

ಶಾಲೆ ಆರಂಭದ ಹೊತ್ತಲ್ಲೇ ಸೊಳ್ಳೆಗಳ ಕಾಟ

ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಲ್ಲುತ್ತಿದ್ದು, ಇದು ಸೊಳ್ಳೆಗಳ ಉತ್ಪತ್ತಿಗೆ ಪ್ರಮುಖ ಕಾರಣವಾಗಿದೆ. ಪರಿಣಾಮವಾಗಿ ಡೆಂಗ್ಯೂ ಕಾಯಿಲೆಯು ವೇಗವಾಗಿ ಹರಡುತ್ತಿದ್ದು, ಆರೋಗ್ಯ ಇಲಾಖೆಯು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಎಚ್ಚರಿಸಿದೆ. ಇದರ ನಡುವೆ, ಶಾಲೆಗಳು ಆರಂಭ ಬೆನ್ನಲ್ಲೇ ಮಕ್ಕಳಲ್ಲಿ ಡಯೇರಿಯಾ (ಅತಿಸಾರ) ಮತ್ತು ನ್ಯುಮೋನಿಯಾ ಪ್ರಕರಣಗಳೂ ಸಹ ಹೆಚ್ಚಾಗುತ್ತಿವೆ. ಹೀಗಾಗಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಹೊರಗಿನ ಆಹಾರವನ್ನು ನೀಡಬಾರದು ಎಂದು ವೈದ್ಯರು ಪೋಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಕ್ಕಳಲ್ಲಿ ಕಂಡುಬರುತ್ತಿರುವ ಆರೋಗ್ಯ ಸಮಸ್ಯೆಗಳು ಯಾವವು?

  • ವೈರಾಣು ಜ್ವರ ಮತ್ತು ತೀವ್ರ ಚಳಿ ಜ್ವರ
  • ಡೆಂಗ್ಯೂ ಮತ್ತು ಶೀತ ಜ್ವರ
  • ನೆಗಡಿ, ಕೆಮ್ಮು ಮತ್ತು ಗಂಟಲು ನೋವು
  • ಉಸಿರಾಟದ ತೊಂದರೆ ಮತ್ತು ತಲೆನೋವು
  • ತೀವ್ರವಾದ ಸುಸ್ತು, ಮೈಕೈ ನೋವು ಮತ್ತು ವಾಂತಿ

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್‌ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!

ಒಟ್ಟಿನಲ್ಲಿ ಮಳೆ, ಬಿಸಿಲಿನಿಂದ ಬದಲಾದ ವಾತವರಣ ಹಿನ್ನೆಲೆ ಜನರು ಸ್ವಚ್ಛತೆ ಕಾಪಾಡುವುದು, ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಆರ್​​ಸಿಬಿಗೆ ಆಘಾತ; ಟಿಮ್ ಡೇವಿಡ್​ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಸಂತಸದಲ್ಲಿದ್ದ ಆರ್​ಸಿಬಿ ತಂಡಕ್ಕೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟಿಮ್ ಡೇವಿಡ್​ಗೆ ಬಿಸಿಸಿಐ ಒಂದು ಪಂದ್ಯದಿಂದ ನಿಷೇಧದ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಪಂದ್ಯ ಶುಲ್ಕವನ್ನು ಕಡಿತಗೊಳಿಸಲಾಗಿದ್ದು, 2 ಡಿಮೆರಿಟ್ ಅಂಕಗಳನ್ನು ಸಹ ನೀಡಲಾಗಿದೆ. ಇದರನ್ವಯ ಟಿಮ್ ಡೇವಿಡ್ 2027 ರ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಮೊದಲ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ.

ಅಷ್ಟಕ್ಕೂ ಟಿಮ್ ಡೇವಿಡ್​ ವಿರುದ್ಧ ಬಿಸಿಸಿಐ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲು ಕಾರಣವೆನೆಂದರೆ, ಗುಜರಾತ್ ವಿರುದ್ಧದ ಫೈನಲ್ ಪಂದ್ಯದ ವೇಳೆ ಟಿಮ್ ಡೇವಿಡ್ ಕೋಪದಿಂದ ಆನ್-ಫೀಲ್ಡ್ ಅಂಪೈರ್ ನಿತಿನ್ ಮೆನನ್ ಮೇಲೆ ಐಸ್ ಪ್ಯಾಕ್ ಎಸೆದಿದ್ದರು. ಟಿಮ್ ಡೇವಿಡ್ ಅವರ ಈ ಕೃತ್ಯ ಐಪಿಎಲ್​ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿರುವ ಕಾರಣ ಆಸ್ಟ್ರೇಲಿಯಾದ ಈ ಸ್ಟಾರ್ ಬ್ಯಾಟ್ಸ್​ಮನ್ ವಿರುದ್ಧ ಬಿಸಿಸಿಐ ಕ್ರಮ ಜರುಗಿಸಿದೆ.

ದಂಡದ ಜೊತೆಗೆ ಡಿಮೆರಿಟ್ ಅಂಕ

ವಾಸ್ತವವಾಗಿ ಟಿಮ್ ಡೇವಿಡ್, ಗುಜರಾತ್ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ, ಇನ್ನಿಂಗ್ಸ್​ನ 10 ನೇ ಓವರ್‌ನಲ್ಲಿ ಆನ್-ಫೀಲ್ಡ್ ಅಂಪೈರ್ ನಿತಿನ್ ಮೆನನ್ ಮೇಲೆ ಐಸ್ ಪ್ಯಾಕ್ ಎಸೆದರು. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.9 ರ ಉಲ್ಲಂಘನೆಯಾಗಿದೆ. ಪಂದ್ಯದ ಸಮಯದಲ್ಲಿ ಆಟಗಾರ, ತಂಡದ ಅಧಿಕಾರಿ, ಅಂಪೈರ್, ಪಂದ್ಯದ ರೆಫರಿ ಅಥವಾ ಯಾವುದೇ ಇತರ ವ್ಯಕ್ತಿಯ ಕಡೆಗೆ ಆಕ್ರಮಣಕಾರಿ ಅಥವಾ ಅಪಾಯಕಾರಿ ರೀತಿಯಲ್ಲಿ ಚೆಂಡು ಅಥವಾ ಕ್ರಿಕೆಟ್ ಸಾಮಗ್ರಿಯನ್ನು (ನೀರಿನ ಬಾಟಲ್, ಇತ್ಯಾದಿ) ಎಸೆಯುವುದು ಈ ನಿಯಮದ ಉಲ್ಲಂಘನೆಯಾಗಲಿದೆ. ಹೀಗಾಗಿ ಬಿಸಿಸಿಐ, ಟಿಮ್ ಡೇವಿಡ್ ಅವರ ಪಂದ್ಯ ಶುಲ್ಕದ 50 ಪ್ರತಿಶತ ಮೊತ್ತವನ್ನು ದಂಡವಾಗಿ ವಿಧಿಸಿದ್ದು, ಎರಡು ಡಿಮೆರಿಟ್ ಅಂಕಗಳನ್ನು ನೀಡಿದೆ.

ಒಂದು ಪಂದ್ಯದಿಂದ ನಿಷೇಧ

ಈ ಆವೃತ್ತಿಯಲ್ಲಿ ಟಿಮ್ ಡೇವಿಡ್ ಬಿಸಿಸಿಐನಿಂದ ದಂಡನೆಗೆ ಗುರಿಯಾಗುತ್ತಿರುವುದು ಇದು ಮೂರನೇ ಬಾರಿಗೆ. ಇದಕ್ಕೂ ಮೊದಲು, ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಯಮ ಉಲ್ಲಂಘಸಿದ್ದ ಡೇವಿಡ್​ಗೆ ಒಂದು ಡಿಮೆರಿಟ್ ಪಾಯಿಂಟ್ ಅಂಕ ನೀಡಿತ್ತು. ಇದಾದ ಬಳಿಕ ಅದೇ ಮುಂಬೈ ವಿರುದ್ಧ ನಡೆದಿದ್ದ 54 ನೇ ಪಂದ್ಯದಲ್ಲಿ ಇದೇ ರೀತಿ ಮಾಡಿದ್ದ ಟಿಮ್​ಗೆ ಎರಡು ಡಿಮೆರಿಟ್ ಪಾಯಿಂಟ್‌ಗಳನ್ನು ನೀಡಿತ್ತು. ಒಟ್ಟಾರೆಯಾಗಿ ಮೂರು ಪಂದ್ಯಗಳಿಂದ ಟಿಮ್ ಐದು ಡಿಮೆರಿಟ್ ಅಂಕಗಳನ್ನು ಪಡೆದಿದ್ದಾರೆ. ಹೀಗಾಗಿ ನಿಯಮಗಳ ಪ್ರಕಾರ ಟಿಮ್ ಅವರನ್ನು ಒಂದು ಪಂದ್ಯದಿಂದ ನಿಷೇಧ ಹೇರಲಾಗಿದೆ.

ಈ ಆವೃತ್ತಿಯಲ್ಲಿ ಟಿಮ್ ಪ್ರದರ್ಶನ

ಟಿಮ್ ಡೇವಿಡ್ ಸತತ ಎರಡನೇ ಬಾರಿಗೆ ಆರ್‌ಸಿಬಿ ಚಾಂಪಿಯನ್ ತಂಡದ ಭಾಗವಾಗಿದ್ದ್ದಾರೆ. ಫೈನಲ್ ಪಂದ್ಯದಲ್ಲಿ ನಿರ್ಣಾಯಕ 24 ರನ್ ಬಾರಿಸಿದ್ದ ಟಿಮ್ ಡೇವಿಡ್ ಆಡಿದ 16 ಪಂದ್ಯಗಳಲ್ಲಿ 33.88 ಸರಾಸರಿಯಲ್ಲಿ 305 ರನ್ ಬಾರಿಸಿದರು. ಇದರಲ್ಲಿ 23 ಸಿಕ್ಸರ್‌ಗಳು ಸೇರಿದ್ದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೀವ್ರ ಸ್ವರೂಪ ಪಡೆದ ಜಮೀರ್ ಅಹ್ಮದ್‌ ಆಡಿಯೋ ಕೇಸ್: ಹೈಕಮಾಂಡ್​​​​ಗೆ ದೂರು

ದಾವಣಗೆರೆ, (ಜೂನ್ 01): ಜಮೀರ್ ಅಹ್ಮದ್ ಖಾನ್ (Zameer Ahmed Khan). ಚಾಮರಾಜಪೇಟೆಯ ಚತುರ. ಅಲ್ಪಸಂಖ್ಯಾತರ ಮತಗಳ ಮೇಲೆ ಹಿಡಿತ ಸಾಧಿಸಿರೋ ಲೀಡರ್. ಇದೀಗ ಇದೇ ಜಮೀರ್ ಅಹ್ಮದ್ ವಿರುದ್ಧ ಪಕ್ಷವಿರೋಧಿ ಆರೋಪ ಕೇಳಿಬಂದಿದೆ. ಸಚಿವ ಸಂಪುಟ ರಚನೆ ಹೊತ್ತಲ್ಲೇ ಜಮೀರ್​ರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಾಜಿ ಸಚಿವ ಜಮೀರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ‌.ಬಸವರಾಜ್ ಹಾಗೂ ದಾವಣಗೆರೆ ಮಾಜಿ ಮೇಯರ್ ಕೆ.ಚಮನ್ ಸಾಬ್ ಎನ್ನುವರು ಹೈಕಮಾಂಡ್​​​​​ಗೆ ಪತ್ರದ ಮೂಲಕ ಜಮೀರ್ ವಿರುದ್ಧ ದೂರು ನೀಡಿದ್ದು, ಪಕ್ಷ ವಿರೋಧಿ ಆಡಿಯೋವನ್ನು ತನಿಖೆ ಮಾಡಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು

  • ದಾವಣಗೆರೆ ದಕ್ಷಿಣ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪ
  • ಮಾಜಿ ಸಚಿವ ಜಮೀರ್ ಅಹ್ಮದ್‌ಖಾನ್‌ ಅವರದ್ದು ಎನ್ನಲಾದ ಆಡಿಯೋ ವೈರಲ್
  • ಮಾಜಿ ಸಚಿವ ಜಮೀರ್ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು
  • ಹೈಕಮಾಂಡ್​ಗೆ ಪತ್ರದ ಮೂಲಕ ದೂರು ನೀಡಿದ ಕಾಂಗ್ರೆಸ್ ಮುಖಂಡರು
  • ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ‌.ಬಸವರಾಜ್ ಹಾಗೂ ದಾವಣಗೆರೆ ಮಾಜಿ ಮೇಯರ್ ಕೆ.ಚಮನ್ ಸಾಬ್ ದೂರು

ಜಮೀರ್ ವಿರುದ್ಧ ಹೈಕಮಾಂಡ್​​​ಗೆ ದೂರು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ‌.ಬಸವರಾಜ್ ಹಾಗೂ ದಾವಣಗೆರೆ ಮಾಜಿ ಮೇಯರ್ ಕೆ.ಚಮನ್ ಸಾಬ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಮುಸ್ಲಿಮರು ಮನೆ ಬಿಟ್ಟು ಹೊರಹೋಗದಂತೆ ಹೇಳಿದ್ದಾರೆ. ಈ ಮೂಲಕ ಅಭ್ಯರ್ಥಿಯನ್ನು ಸೋಲಿಸಲು ಮಾಜಿ ಸಚಿವ ಜಮೀರ್ ಹುನ್ನಾರ ನಡೆಸಿದ್ದಾರೆ. ಪಕ್ಷದ್ರೋಹಿ ಜಮೀರ್​ರನ್ನ ತಕ್ಷಣ ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿಗೆ ಆಗ್ರಹಿಸಿದ್ದಾರೆ.

ಇದನ್ನು ನೋಡಿ: ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ

ಜಮೀರ್ ಅಹಮ್ಮದ್ ಖಾನ್​​​ಗೆ ಸಂಕಷ್ಟ

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರ ಬೈ ಎಲೆಕ್ಷನ್​​​ನಿಂದ ಜಮಿರ್ ದೂರ ಉಳಿದಿದ್ದರು. ಕ್ಷೇತ್ರಕ್ಕೆ ಬಂದಿದ್ದರೂ ಸಹ ಪ್ರಚಾರ ಮಾಡಿರಲಿಲ್ಲ. ಈ ಸಂಬಂಧ ಹೈಕಮಾಂಡ್ ಗರಂ ಆಗಿದ್ದು, ಕಟ್ಟು ನಿಟ್ಟಿನ ಕ್ರಮಕ್ಕೆ ಚಿಂತನೆ ನಡೆಸಿತ್ತು. ಇದರ ಮಧ್ಯೆ ಸದ್ಯ ಕಾಂಗ್ರೆಸ್​​​ನಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಇದರ ಮಧ್ಯೆ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಪಕ್ಷ ವಿರೋಧಿ ಚಟವಟಿಕೆ ಆರೋಪ ಕೇಳಿಬಂದಿದ್ದು, ಅವರ ಸಚಿವ ಸ್ಥಾನಕ್ಕೆ ಕುತ್ತ ತರುವ ಸಧ್ಯತೆಗಳಿವೆ.

ಆಡಿಯೋನಲ್ಲಿ ಏನಿದೆ?

ದಾವಣಗೆರೆ ಉಪಚುನಾವಣೆ ವೇಳೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದರು. ತಮಗೆ ಟಿಕೆಟ್ ಸಿಕ್ಕಿಲ್ಲ ಎಂದು ನಾಯಕರು ಕೂಡ ಬೇಸರ ಹೋರಹಾಕಿದ್ದರು. ಆ ವೇಳೆ ಕೈ ಪಡೆಗೆ ಒಳೇಟು ಕೊಡಲು ತಂತ್ರವೂ ನಡೆದಿತ್ತು ಅನ್ನೋ ಮಾತು ಹರಿದಾಡಿತ್ತು. ಇದೀಗ ಮುಸ್ಲಿಂ ಮುಖಂಡರ ಜೊತೆಗೆ ಜಮೀರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಮುಸ್ಲಿಮರನ್ನ ಕಾಂಗ್ರೆಸ್​ಗೆ ವೋಟ್ ಹಾಕದಂತೆ ತಡೆಯಬೇಕು ಎಂಬ ಚರ್ಚೆ ಮಾಡಲಾಗಿದೆ. ದಾವಣಗೆರೆ ವಕ್ಫ್​ ಮಂಡಳಿ ಮಾಜಿ ಅಧ್ಯಕ್ಷ ಮೊಹಮ್ಮದ್ ಸಿರಾಜ್ ಜೊತೆ ಜಮೀರ್ ಮಾತನಾಡಿದ್ದಾರೆಂದು ಈ ಆಡಿಯೋವನ್ನ ಬಿಂಬಿಸಲಾಗ್ತಿದೆ. ಈ ಆಡಿಯೋದಲ್ಲಿ ಬಂಡಾಯ ಅಭ್ಯರ್ಥಿಯಾಗಿ, ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಪೈಲ್ವಾನ್ ಬಗ್ಗೆಯೂ ಮಾತನಾಡಲಾಗಿದೆ.

ಜಮೀರ್ ಅಹಮ್ಮದ್ ಕೊಟ್ಟ ಸ್ಪಷ್ಟನೆ ಏನು?

ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಜಮೀರ್, ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಕುರಿತ ಆಡಿಯೋ ನಕಲಿ ಆಗಿದೆ. ಎಐ ತಂತ್ರಜ್ಞಾನ ಬಳಸಿ ಆಡಿಯೋ ಮಾಡಲಾಗಿದೆ , ಇದೊಂದು ರಾಜಕೀಯ ಷಡ್ಯಂತ್ರ ಅಂತಾ ಜಮೀರ್ ಹೇಳ್ತಿದ್ದಾರೆ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಆಗಿದೆ, ಸೈಬರ್ ಠಾಣೆಗೆ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು, ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಕ್ರಮ ಆಗುತ್ತೆ. ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ ವೇಳಾಪಟ್ಟಿಯ ಕಡೆಗೆ ತನ್ನ ಗಮನ ಹಾಯಿಸಲಿದೆ. ಅದರಂತೆ ಜೂನ್ 6 ರಿಂದ ಟೀಂ ಇಂಡಿಯಾದ ಅಂತರರಾಷ್ಟ್ರೀಯ ವೇಳಾಪಟ್ಟಿಗೆ ಚಾಲನೆ ಸಿಗಲಿದೆ.

ಐಪಿಎಲ್ ಮುಗಿದ ಕೇವಲ 5 ದಿನಗಳ ನಂತರ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಅನೇಕ ಸ್ಟಾರ್ ಆಟಗಾರರು ಮೈದಾನಕ್ಕೆ ಮರಳಲಿದ್ದಾರೆ. ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅದಾದ ನಂತರ ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಗಳ ಜೊತೆಗೆ 2026 ರ ಏಷ್ಯನ್ ಕ್ರೀಡಾಕೂಟಕ್ಕಾಗಿ ಯುವ ತಂಡ ಜಪಾನ್‌ಗೆ ಪ್ರಯಾಣಿಸಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ

ಜೂನ್ 2026

  • ಜೂನ್ 6-10: ಭಾರತ-ಅಫ್ಘಾನಿಸ್ತಾನ ನಡುವೆ ಟೆಸ್ಟ್ ಪಂದ್ಯ
  • ಜೂನ್ 13-20: ಭಾರತ-ಅಫ್ಘಾನಿಸ್ತಾನದ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಜೂನ್ 26-29: ಭಾರತ 2 ಟಿ20 ಪಂದ್ಯಗಳಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ.

ಜುಲೈ 2026

  • ಜುಲೈ 1-11: ಭಾರತ 5 ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಲಿದೆ
  • ಜುಲೈ 14-19: ಟಿ20 ಸರಣಿ ಮುಗಿದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ
  • ಜುಲೈ 23-26: 3 ಪಂದ್ಯಗಳ ಟಿ20 ಸರಣಿಗಾಗಿ ಭಾರತ. ಜಿಂಬಾಬ್ವೆ ಪ್ರವಾಸ ಮಾಡಲಿದೆ.

ಆಗಸ್ಟ್ 2026

  • 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳಿಗಾಗಿ ಭಾರತ, ಶ್ರೀಲಂಕಾ ಪ್ರವಾಸ ಮಾಡಲಿದೆ. ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026

  • ಸೆಪ್ಟೆಂಬರ್ 17 – ಅಕ್ಟೋಬರ್ 3: ಏಷ್ಯನ್ ಗೇಮ್ಸ್ 2026, ಜಪಾನ್ (ಟಿ20 ಸ್ವರೂಪ)
  • ಸೆಪ್ಟೆಂಬರ್ 27 – ಅಕ್ಟೋಬರ್ 3: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಅಕ್ಟೋಬರ್ 6-17: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 5 ಪಂದ್ಯಗಳ ಟಿ20 ಸರಣಿ

ಅಕ್ಟೋಬರ್ ಮತ್ತು ಡಿಸೆಂಬರ್ 2026

  • ಅಕ್ಟೋಬರ್ 22 – ಡಿಸೆಂಬರ್: ಭಾರತ 2 ಟೆಸ್ಟ್, 5 ಏಕದಿನ, 5 ಟಿ20 ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ ತುಣುಕಿನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳಬೇಕಾ ಅಥವಾ ಬೇರೆ ಯಾವುದೇ ರೀತಿಯಲ್ಲಿ ನಾವು ಅವರಿಗೆ ಧನ್ಯವಾದ ಹೇಳಬೇಕು. ಯಾಕೆಂದರೆ ಅವರು ನಮ್ಮ ಕೈ ಹಿಡಿದಿದ್ದಾರೆ. ಒಳ್ಳೆಯ ಮಾರ್ಗದರ್ಶಕರಾಗಿ ನಿಂತಿದ್ದಾರೆ. ಸಣ್ಣ ಸಣ್ಣ ಬದಲಾವಣೆಗಳನ್ನು ಸೂಚಿಸಿದ್ದಾರೆ. ವಿವರಣೆಗಳಿಗೆ ಹೆಚ್ಚು ಗಮನ ನೀಡಿದ್ದಾರೆ. ಅದರಿಂದಾಗಿ ಪರದೆ ಮೇಲೆ ದೊಡ್ಡ ವ್ಯತ್ಯಾಸ ಆಗುತ್ತದೆ. ಅದನ್ನೆಲ್ಲ ನಾವು ಅವರಿಂದ ಕಲಿತಿದ್ದೇವೆ. ನಾವು ಈ ಚಿತ್ರರಂಗಕ್ಕೆ ಬಂದಿದ್ದೇವೆ ಅಂದರೆ ಅದು ಅವರನ್ನು ನೋಡಿಕೊಂಡು ಬಂದಿರುವುದು. ಹಾಗಾಗಿ ನಮ್ಮ ಕಡೆಯಿಂದ ಸುದೀಪ್ ಅವರಿಗೆ ಒಂದು ಸಣ್ಣ ಗೌರವ ಸಲ್ಲಿಸಬೇಕು ಎಂಬ ಕಾರಣಕ್ಕಾಗಿ ಸಿನಿಮಾದಲ್ಲಿ ಒಂದು ಸರ್ಪ್ರೈಸ್ ಇಟ್ಟಿದ್ದೇವೆ. ನೀವು ಸಿನಿಮಾ ನೋಡಿದಾಗ ಅದು ತಿಳಿಯುತ್ತದೆ’ ಎಂದು ಪ್ರಿಯಾ ಸುದೀಪ್ (Priya Sudeep) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ.

ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯಿಸಿ, ಹೈಕಮಾಂಡ್ ಕೊಟ್ಟ ಭರವಸೆಯನ್ನು ಬಹಿರಂಗಪಡಿಸಿದ್ದಾರೆ.

Source link

Exit mobile version