ಮೈಸೂರು ಪ್ರವಾಸಿಗರಿಗೆ ದುಃಖದ ಸುದ್ದಿ: ಇನ್ಮುಂದೆ ಸಿಗಲ್ಲ ಜಿರಾಫೆ ‘ಯುವರಾಜ’ – Kannada News | Mysore Zoo Mourns Yuvaraja: The Legacy of its Oldest Giraffe

ಮೈಸೂರು, ಜ.29: ಮೈಸೂರು ಮೃಗಾಲಯದ ಅತ್ಯಂತ ಹಿರಿಯ ಮತ್ತು ಜನಪ್ರಿಯ ಜಿರಾಫೆ ‘ಯುವರಾಜ’ ಸಾವನ್ನಪ್ಪಿದೆ. ಇದೀಗ ಈ ವಿಚಾರ ಪಾಣಿ ಪ್ರೇಮಿಗಳಿಗೆ ಹಾಗೂ ಮೈಸೂರು ನಿವಾಸಿಗಳಿಗೆ ತೀವ್ರ ಬೇಸರ ತಂದಿದೆ. 25 ವರ್ಷಗಳ ಕಾಲ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಯುವರಾಜ, ವಯೋಸಹಜ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆದಿದ್ದಾನೆ. ಡಿಸೆಂಬರ್ 7, 2001 ರಂದು ಮೈಸೂರು ಮೃಗಾಲಯದಲ್ಲೇ ಜನಿಸಿದ ಯುವರಾಜ, 1987 ರಲ್ಲಿ ಜರ್ಮನಿಯ ಮೃಗಾಲಯದಿಂದ ಮೈಸೂರಿಗೆ ಕರೆತರಲಾಗಿದ್ದ ಹೆನ್ರಿ ಮತ್ತು ಹನಿ ಎಂಬ ಜಿರಾಫೆ ದಂಪತಿಗಳ ಮರಿ. ಯುವರಾಜ ಹುಟ್ಟಿದ ನಂತರ ಅವನನ್ನು ಮೃಗಾಲಯದ ಪಾಲಕರು (Zoo keepers) ಅತ್ಯಂತ ಪ್ರೀತಿಯಿಂದ ಪೋಷಿಸಿ ಬೆಳೆಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದ ಪ್ರವಾಸಿಗರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ಯುವರಾಜನ ಎತ್ತರದ ನಿಲುವು ಮತ್ತು ಶಾಂತ ಸ್ವಭಾವ ಬಹಳ ಅಚ್ಚುಮೆಚ್ಚಿನದಾಗಿತ್ತು.

ಜಿರಾಫೆಗಳ ಸರಾಸರಿ ಜೀವಿತಾವಧಿ ಸಾಮಾನ್ಯವಾಗಿ 20 ರಿಂದ 25 ವರ್ಷಗಳು. ಯುವರಾಜ ತನ್ನ ಜೀವಿತಾವಧಿಯ ಗರಿಷ್ಠ ಮಿತಿಯವರೆಗೂ ಬದುಕಿದ್ದನು. ಕಳೆದ ಕೆಲವು ದಿನಗಳಿಂದ ವಯೋಸಹಜ ದೌರ್ಬಲ್ಯದಿಂದ ಬಳಲುತ್ತಿದ್ದ ಅವನಿಗೆ ಮೃಗಾಲಯದ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೈಸೂರು ಮೃಗಾಲಯದ ಇತಿಹಾಸದಲ್ಲಿ ‘ಯುವರಾಜ’ನ ಹೆಸರು ಸದಾ ನೆನಪಿನಲ್ಲಿ ಉಳಿಯುತ್ತದೆ. ಮೃಗಾಲಯದ ಸಿಬ್ಬಂದಿ ಮತ್ತು ಅವನನ್ನು ನೋಡಲು ಬರುತ್ತಿದ್ದ ಲಕ್ಷಾಂತರ ಅಭಿಮಾನಿಗಳು ಅವನನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.

ಇಲ್ಲಿದೆ ವಿಡಿಯೋ:

ಮೈಸೂರು ಮೃಗಾಲಯವು (ಚಾಮರಾಜೇಂದ್ರ ಮೃಗಾಲಯ) ದೇಶದಲ್ಲೇ ಅತಿ ಹೆಚ್ಚು ಜಿರಾಫೆಗಳನ್ನು ಹೊಂದಿರುವ ಮತ್ತು ಅವುಗಳ ಸಂತಾನೋತ್ಪತ್ತಿಯಲ್ಲಿ ಯಶಸ್ವಿಯಾದ ಮೃಗಾಲಯಗಳಲ್ಲಿ ಒಂದಾಗಿದೆ. ‘ಯುವರಾಜ’ನ ಅಗಲಿಕೆಯ ನಂತರವೂ ಅಲ್ಲಿ ಜಿರಾಫೆಗಳ ದೊಡ್ಡ ಕುಟುಂಬವೇ ಇದೆ. ಕೃಷ್ಣ ಮತ್ತು ಸುಧೀರ್, ಬಬೂಲಿ, ಭರತ್ ಸೇರಿದಂತೆ ಮೈಸೂರು ಮೃಗಾಲಯದಲ್ಲಿ ಸದ್ಯ 7 ರಿಂದ 8 ಜಿರಾಫೆಗಳು ಇವೆ.ಮೈಸೂರು ಮೃಗಾಲಯದ ಜಿರಾಫೆಗಳು ದಕ್ಷಿಣ ಆಫ್ರಿಕಾ ಮತ್ತು ಜರ್ಮನಿಯ ತಳಿಗಳ ವಂಶಸ್ಥವಾಗಿವೆ. ಇಲ್ಲಿ ಜಿರಾಫೆಗಳ ಸಂತಾನೋತ್ಪತ್ತಿ ಚೆನ್ನಾಗಿ ನಡೆಯುವುದರಿಂದ, ಇಲ್ಲಿನ ಜಿರಾಫೆಗಳನ್ನು ಹೈದರಾಬಾದ್, ಅಹಮದಾಬಾದ್ ಮತ್ತು ಚೆನ್ನೈನ ಮೃಗಾಲಯಗಳಿಗೆ ಪ್ರಾಣಿ ವಿನಿಮಯ ಯೋಜನೆಯಡಿ ನೀಡಲಾಗಿದೆ.

ಇದನ್ನೂ ಓದಿ: ವಿವಾಹೇತರ ಸಂಬಂಧ ಹೊಂದುವ ಕಾರ್ಪೊರೇಟ್ ಉದ್ಯೋಗಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಯುವತಿ

ಯುವರಾಜ ಕೇವಲ ಪ್ರವಾಸಿಗರ ಆಕರ್ಷಣೆಯಾಗಿರಲಿಲ್ಲ, ಅವನು ಮೃಗಾಲಯದ ಜಿರಾಫೆ ಕುಟುಂಬದ ಹಿರಿಯ ಸದಸ್ಯನಾಗಿದ್ದನು. ಈಗ ಅವನ ಸ್ಥಾನವನ್ನು ಅವನ ನಂತರದ ಪೀಳಿಗೆಯ ಜಿರಾಫೆಗಳಾದ ಕೃಷ್ಣ ಮತ್ತು ಇತರ ಯುವ ಜಿರಾಫೆಗಳು ತುಂಬಲಿವೆ. ಈ ಜಿರಾಫೆಗಳಿಗೆ ಪ್ರತಿದಿನ ಸುಮಾರು 50-60 ಕೆಜಿ ಹಸಿರು ಮೇವು, ಆಲದ ಮರದ ಎಲೆಗಳು, ಮತ್ತು ವಿಶೇಷ ಪೌಷ್ಟಿಕ ಆಹಾರವನ್ನು ನೀಡಲಾಗುತ್ತದೆ. ಇಲ್ಲಿನ ಜಿರಾಫೆಗಳ ಎತ್ತರಕ್ಕೆ ತಕ್ಕಂತೆ ಆಹಾರದ ತೊಟ್ಟಿಗಳನ್ನು ಎತ್ತರದಲ್ಲಿ ಅಳವಡಿಸಲಾಗಿರುವುದು ಇಲ್ಲಿನ ವಿಶೇಷ. ಮೈಸೂರು ಮೃಗಾಲಯವು ಜಿರಾಫೆಗಳ ಸಂರಕ್ಷಣೆಗಾಗಿ ಪ್ರತ್ಯೇಕವಾದ ದೊಡ್ಡ ಆವರಣವನ್ನು ಹೊಂದಿದೆ. ನೀವು ಮೃಗಾಲಯಕ್ಕೆ ಭೇಟಿ ನೀಡಿದಾಗ ಈ ಜಿರಾಫೆ ಕುಟುಂಬವು ಆನೆಯ ಆವರಣದ ಸಮೀಪದಲ್ಲೇ ನಿಮಗೆ ಕಾಣಸಿಗುತ್ತದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಜನೀಕಾಂತ್ ಮೇಲಿನ ಪ್ರೀತಿಗಾಗಿ ವಿಜಯ್ ಸಿನಿಮಾನಲ್ಲಿ ಸಣ್ಣ ಪಾತ್ರ ಮಾಡಿದ ಸ್ಟಾರ್ ನಿರ್ದೇಶಕ – Kannada News | Why Anurag Kashyap acted in 30 seconds cameo in Thalapathy Vijay’s Leo

ಅನುರಾಗ್ ಕಶ್ಯಪ್ (Anurag Kashyap), ಬಾಲಿವುಡ್​​ನ ಸ್ಟಾರ್ ನಿರ್ದೇಶಕ. ಅವರ ಸಿನಿಮಾಗಳು ಭಾರಿ ಬಜೆಟ್, ದೊಡ್ಡ ಸ್ಟಾರ್ ನಟರನ್ನು ಹೊಂದಿರುವುದಿಲ್ಲವಾದರೂ ತಮ್ಮ ವಿಭಿನ್ನ ಶೈಲಿಯಿಂದಾಗಿ ಪ್ರತ್ಯೇಕ ಅಭಿಮಾನಿ ವರ್ಗವನ್ನೇ ಅನುರಾಗ್ ಕಶ್ಯಪ್ ಸಂಪಾದಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ನೋ ಸ್ಮೋಕಿಂಗ್’, ‘ದೇವ್ ಡಿ’ ಇನ್ನೂ ಹಲವು ಕಲ್ಟ್ ಸಿನಿಮಾಗಳನ್ನು ಅನುರಾಗ್ ಕಶ್ಯಪ್ ನೀಡಿದ್ದು, ನಟನೆಯಲ್ಲೂ ಸಹ ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಚಿತ್ರರಂಗದೊಂದಿಗೂ ಅವಿನಾಭಾವ ಸಂಬಂಧ ಹೊಂದಿರುವ ಅನುರಾಗ್ ಅವರಿಗೆ ದಕ್ಷಿಣದಲ್ಲೂ ಸಾಕಷ್ಟು ಡಿಮ್ಯಾಂಡ್ ಇದೆ. ಆದರೆ ಅನುರಾಗ್ ಅವರು ದಳಪತಿ ವಿಜಯ್ ಸಿನಿಮಾ ಒಂದರಲ್ಲಿ ಕೇವಲ 30 ಸೆಕೆಂಡ್​​ಗಳ ದೃಶ್ಯವೊಂದರಲ್ಲಿ ನಟಿಸಿದ್ದರು. ಅದೇಕೆ ಎಂಬ ಪ್ರಶ್ನೆಗೆ ಅವರು ನೀಡಿರುವ ಉತ್ತರ ರಜನೀ ಅಭಿಮಾನಿಗಳ ಮನಸ್ಸು ಗೆದ್ದಿದೆ.

ಅನುರಾಗ್ ಕಶ್ಯಪ್ ದೊಡ್ಡ ನಿರ್ದೇಶಕ, ಒಳ್ಳೆಯ ನಟ ಸಹ. ಅವರ ಸ್ಥಾನದಲ್ಲಿರುವವರು ಯಾರೂ 10-20 ಸೆಕೆಂಡುಗಳ ಅತಿಥಿ ಪಾತ್ರಗಳನ್ನೆಲ್ಲ ಒಪ್ಪಿಕೊಳ್ಳುವುದಿಲ್ಲ. ಆದರೆ ಅನುರಾಗ್ ಕಶ್ಯಪ್, ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾನಲ್ಲಿ ಕೇವಲ 30 ಸೆಕೆಂಡುಗಳ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಅವರು ಹೀಗೆ ಮಾಡಿದ್ದಕ್ಕೆ ಕಾರಣವೂ ಇದೆ. ಅದುವೇ ರಜನೀಕಾಂತ್.

ಅನುರಾಗ್ ಕಶ್ಯಪ್ ಹೇಳಿಕೊಂಡಿರುವಂತೆ ಅವರು ಬಹಳ ಹಿಂದಿನಿಂದಲೂ ರಜನೀಕಾಂತ್ ಅವರ ಅಭಿಮಾನಿ ಅಂತೆ. ರಜನೀಕಾಂತ್ ಅವರು ಹಿಂದಿಯ ‘ಗಿರಫ್ತಾರ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ರಜನೀಕಾಂತ್ ಸಾಯುತ್ತಾರೆ ಆದರೆ ಸಾಯುವ ಮೊದಲು ಒಂದು ಸಿಗರೇಟು ಸೇರಿ ಬಳಿಕ ಸಾವನ್ನು ಎದುರುಗೊಳ್ಳುತ್ತಾರೆ. ಅನುರಾಗ್ ಕಶ್ಯಪ್ ಅವರಿಗೆ ಆ ಸೀನ್ ಬಹಳ ಇಷ್ಟವಾಗಿತ್ತಂತೆ. ಹಾಗಾಗಿ ತಾವೂ ಸಹ ಅಂಥಹುದ್ದೇ ಸೀನ್​​ನಲ್ಲಿ ನಟಿಸಬೇಕು ಎಂದು ‘ಲಿಯೋ’ ಸಿನಿಮಾದ ಆ ಸಣ್ಣ ಅತಿಥಿ ಪಾತ್ರದಲ್ಲಿ ನಟಿಸಿದರಂತೆ.

ಇದನ್ನೂ ಓದಿ:ಪೆನ್ನು ಹಿಡಿದ ಸ್ಟೈಲ್ ಕಿಂಗ್ ರಜನೀಕಾಂತ್: ಬರೆಯುತ್ತಿರುವುದು ಯಾವ ಪುಸ್ತಕ?

ಆ ಸೀನ್​​ ಅನ್ನು ರೀಕ್ರಿಯೇಟ್ ಮಾಡುವಂತೆ ‘ಲಿಯೋ’ ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಬಳಿ ಅನುರಾಗ್ ಕೇಳಿದ್ದರಂತೆ. ಅದರಂತೆ ಅವರೂ ಸಹ ಕೇವಲ ಅನುರಾಗ್ ಅವರಿಗಾಗಿ ಆ ಸಣ್ಣ ಸೀನ್ ಸೃಷ್ಟಿ ಮಾಡಿದ್ದಾರೆ. ‘ಗಿರಫ್ತಾರ್’ ಸಿನಿಮಾನಲ್ಲಿ ರಜನೀಕಾಂತ್ ಆ ಸೀನ್​​ನಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದ್ದರು, ಅನುರಾಗ್ ಸಹ ‘ಲಿಯೋ’ನಲ್ಲಿ ಅದಕ್ಕೆ ಹೋಲುವ ಬಣ್ಣದ ಶರ್ಟ್ ಧರಿಸಿ, ರಜನೀ ಅವರ ಸ್ಟೈಲ್ ಅನ್ನೇ ‘ಲಿಯೋ’ ಸಿನಿಮಾದ ಸೀನ್​​ನಲ್ಲಿ ಅನುರಾಗ್ ಕಶ್ಯಪ್ ಅನುಕರಣೆ ಮಾಡಿದ್ದಾರೆ.

ಅನುರಾಗ್ ಕಶ್ಯಪ್ ಕೆಲವಾರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದು, ದಕ್ಷಿಣದಲ್ಲಿ ಈಗಲೂ ಬೇಡಿಕೆ ಇರುವ ನಟ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ‘ಮಹಾರಾಜ’ ಸಿನಿಮಾನಲ್ಲಿ ಅನುರಾಗ್ ಕಶ್ಯಪ್ ವಿಲನ್. ಅದಕ್ಕೂ ಮುಂಚೆ ತಮಿಳಿನ ‘ಇಮೈಕ್ಕ ನಾಡಿಗಳ್’, ಇತ್ತೀಚೆಗೆ ಬಂದ ‘ವಿಡುದಲೈ ಪಾರ್ಟ್ 2’ಗಳಲ್ಲಿ ನಟಿಸಿದ್ದಾರೆ. ಇದೀಗ ತಮಿಳಿನ ‘ಒನ್ 2 ಒನ್’ ಹಾಗೂ ತೆಲುಗಿನ ‘ಡಕೈಟ್’ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

AI’s Dark Side: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು! – Kannada News | AI’s Dark Side: ChatGPT and Youth Mental Health Risks – A Tragic Warning

ಇದು ಎಐ ಯುಗ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ (AI) ಬಳಕೆಯಾಗುತ್ತಿದೆ. ಅದರಲ್ಲೂ ಎಐ ಆಧಾರಿತ ಟೂಲ್ ಆಗಿರುವ ಚಾಟ್ ಜಿಪಿಟಿ ಯುವಜನತೆಯನ್ನು ಹೆಚ್ಚಾಗಿ ತನ್ನತ್ತ ಸೆಳೆಯುತ್ತಿದೆ. ಮನುಷ್ಯನ ಭಾವನೆಗಳನ್ನು ಅರ್ಥಮಾಡಿಕೊಳ್ಳುವಂತೆ, ಪ್ರತಿಯೊಂದು ಮಾತಿಗೂ ಪ್ರತಿಕ್ರಿಯೆ ನೀಡುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ, ಚಾಟ್ ಜಿಪಿಟಿಯೊಂದಿಗೆ ಮುಕ್ತವಾಗಿ ಮಾತನಾಡಿ ಅದು ನೀಡುವ ಸಲಹೆಗಳನ್ನು ಅನುಸರಿಸುವವರು ಹೆಚ್ಚಾಗುತ್ತಿದ್ದಾರೆ. ಈ ಪ್ರವೃತ್ತಿ ವಿಶೇಷವಾಗಿ ಯುವ ಪೀಳಿಗೆಯಲ್ಲಿ ಹೆಚ್ಚು ಕಾಣಿಸುತ್ತಿದೆ.

ಇದೇ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಚಾಟ್ ಜಿಪಿಟಿಯ ಸಲಹೆಗಳನ್ನು ಕೇಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಎಲಾನ್ ಮಸ್ಕ್ ಅವರು ತಮ್ಮ ಅಧಿಕೃತ ಟ್ವಿಟರ್ (X) ಖಾತೆ @elonmusk ನಲ್ಲಿ ಒಂದು ಪೋಸ್ಟ್ ಅನ್ನು ರೀಟ್ವೀಟ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೇಲಿನ ವಿಡಿಯೋದಲ್ಲಿ, ತಾಯಿಯೊಬ್ಬರು ತಮ್ಮ ಟೀನೇಜ್ ಮಗನ ಸಾವಿಗೆ ಚಾಟ್ ಜಿಪಿಟಿಯೇ ಕಾರಣ ಎಂದು ಆರೋಪಿಸುತ್ತಾರೆ. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ತನ್ನ ಮಗ, ತನ್ನ ಭಾವನೆಗಳನ್ನು ಚಾಟ್ ಜಿಪಿಟಿಯ ಮುಂದೆ ಹಂಚಿಕೊಂಡಿದ್ದ. ಆದರೆ ಆತನ ನಕಾರಾತ್ಮಕ ಆಲೋಚನೆಗಳನ್ನು ತಡೆಯುವ ಬದಲು, ಚಾಟ್ ಜಿಪಿಟಿ ಅವುಗಳನ್ನು ಪ್ರೋತ್ಸಾಹಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಪ್ರಾಣ ತೆಗೆಯುವ ವಿಧಾನಗಳ ಬಗ್ಗೆ ಸಹ ಚಾಟ್ ಜಿಪಿಟಿ ಸಲಹೆ ನೀಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಘಟನೆ ಬಳಿಕ, ಮಕ್ಕಳು ಮತ್ತು ಯುವಕರು ಎಐ ಟೂಲ್‌ಗಳನ್ನು ಬಳಸುವ ಬಗ್ಗೆ ಆತಂಕಗಳು ಹೆಚ್ಚಾಗಿವೆ.

ಇದನ್ನೂ ಓದಿ: 100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ

ಮಕ್ಕಳು ಚಾಟ್ ಜಿಪಿಟಿ ಬಳಸುತ್ತಿದ್ದರೆ ಪೋಷಕರು ಎಚ್ಚರ ವಹಿಸುವುದು ಅತ್ಯಗತ್ಯ:

ಚಾಟ್ ಜಿಪಿಟಿಯನ್ನು ಮಕ್ಕಳು ತಮ್ಮ ಅಧ್ಯಯನ, ಭಾಷಾ ಅಭ್ಯಾಸ, ಸಾಮಾನ್ಯ ಜ್ಞಾನ ಹಾಗೂ ಸೃಜನಶೀಲ ಬರವಣಿಗೆ ಮುಂತಾದ ಉತ್ತಮ ಉದ್ದೇಶಗಳಿಗೆ ಬಳಸಬಹುದು. ಆದರೆ ಇದು ಪೋಷಕರ ಮೇಲ್ವಿಚಾರಣೆಯೊಂದಿಗೆ ನಡೆಯಬೇಕು. ಚಿಕ್ಕ ಮಕ್ಕಳನ್ನು ಒಬ್ಬಂಟಿಯಾಗಿ ಬಳಸಲು ಬಿಡದೇ, ಅವರು ಏನು ಕೇಳುತ್ತಿದ್ದಾರೆ, ಯಾವ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ ಎಂಬುದನ್ನು ಗಮನಿಸುವುದು ಮುಖ್ಯ. ಅತಿಯಾದ ಅವಲಂಬನೆ ತಪ್ಪಿಸಲು ಬಳಕೆಗೆ ಸಮಯ ಮಿತಿಯನ್ನೂ ನಿಗದಿಪಡಿಸಬೇಕು.

ಅತ್ಯಂತ ಮುಖ್ಯವಾಗಿ, ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಅವರನ್ನು ಸ್ನೇಹಿತರಂತೆ ನೋಡಿಕೊಂಡು, ಮುಕ್ತವಾಗಿ ಮಾತನಾಡುವ ವಾತಾವರಣವನ್ನು ನಿರ್ಮಿಸಬೇಕು. ಮಕ್ಕಳ ಸಮಸ್ಯೆಗಳನ್ನು ಆಲಿಸುವುದು ಮತ್ತು ಅವರ ಮನಸ್ಸಿನ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯ ಎಂದು ಮನೋವೈದ್ಯರು ಸಲಹೆ ನೀಡುತ್ತಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Economic Survey 2026: ಆರ್ಥಿಕ ಸಮೀಕ್ಷೆ ವರದಿ ಮಂಡನೆ; ಜಿಡಿಪಿ ಶೇ. 6.8-7.2 ಬೆಳೆಯುವ ನಿರೀಕ್ಷೆ – Kannada News | FM presents economic survey 2026 in Lok Sabha, GDP growth for 27fy predicted to be 6.8 7.2pc

ನವದೆಹಲಿ, ಜನವರಿ 29: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ (2026-27) ಭಾರತದ ಜಿಡಿಪಿ ಶೇ. 6.8-7.2 ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ ಕೊಡುವುದರಿಂದ ಜಿಡಿಪಿ ಉತ್ತಮ ಬೆಳವಣಿಗೆ ಪಡೆಬಹುದು ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಿರುವರಾದರೂ, ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ನೇತೃತ್ವದಲ್ಲಿ ಈ ಸಮೀಕ್ಷೆ ವರದಿ ರೂಪಿಸಲಾಗಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ

ಏನಿದು ಆರ್ಥಿಕ ಸಮೀಕ್ಷಾ ವರದಿ?

ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷಾ ವರದಿಯನ್ನು ರಚಿಸಿ ಬಿಡುಗಡೆ ಮಾಡಲಾಗುತ್ತದೆ. ಪ್ರಸಕ್ತ ವರ್ಷದಲ್ಲಿ ಆರ್ಥಿಕ ಪರಿಸ್ಥಿತಿ ಮತ್ತು ಬೆಳವಣಿಗೆ ಹೇಗಿತ್ತು, ಮುಂಬರುವ ವರ್ಷದಲ್ಲಿ ಹೇಗಿರಲಿದೆ ಎಂಬುದನ್ನು ಈ ವರದಿಯಲ್ಲಿ ಅವಲೋಕಿಸಲಾಗುತ್ತದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಈ ಸಮೀಕ್ಷೆ ನಡೆಸಿದ್ದಾರೆ.

ಜಿಡಿಪಿ, ಹಣದುಬ್ಬರದ ಟ್ರೆಂಡ್ ಹೇಗಿದೆ, ಹಣಕಾಸು ನೀತಿ ಹೇಗಿದ್ದರೆ ಅನುಕೂಲ, ರಫ್ತು, ಆಮದು, ಫಾರೆಕ್ಸ್ ಇತ್ಯಾದಿ ಬಾಹ್ಯ ಕ್ಷೇತ್ರಗಳು ಹೇಗಿವೆ; ಉದ್ಯೋಗ, ಆರೋಗ್ಯ, ಶಿಕ್ಷಣ ಮತ್ತಿತರ ಸಾಮಾಜಿಕ ಸೂಚಕಗಳು ಹೇಗಿವೆ, ಇವೇ ಮುಂತಾದ ಅಂಶಗಳನ್ನೂ ಆರ್ಥಿಕ ಸಮೀಕ್ಷೆಯಲ್ಲಿ ಅವಲೋಕಿಸಲಾಗುತ್ತದೆ.

ಇದನ್ನೂ ಓದಿ: ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

ಇವತ್ತು ಮಂಡನೆಯಾಗಿರುವ ಆರ್ಥಿಕ ಸಮೀಕ್ಷೆ ಪ್ರಕಾರ ಪ್ರಸಕ್ತ ವರ್ಷದಲ್ಲಿ (2025-26) ಜಿಡಿಪಿ ಶೇ. 7.4ರಷ್ಟು ಹೆಚ್ಚಬಹುದು ಎನ್ನಲಾಗಿದೆ. ಈ ಹಿಂದಿನ ವರ್ಷದ ಸಮೀಕ್ಷೆಯಲ್ಲಿ ಮಾಡಲಾದ ಅಂದಾಜಿಗಿಂತ ಇದು ಹೆಚ್ಚಿದೆ. ದೇಶದ ಆರ್ಥಿಕ ಬೆಳವಣಿಗೆ ವಿಚಾರದಲ್ಲಿ ಇತರ ಏಜೆನ್ಸಿಗಳ ಅನಿಸಿಕೆಗಿಂತ ಎಕನಾಮಿಕ್ ಸರ್ವೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ.

ಬಜೆಟ್​ಗೆ ಕೆಲ ದಿನಗಳ ಮೊದಲು ಆರ್ಥಿಕ ಸಮೀಕ್ಷಾ ವರದಿಯನ್ನು ಸಂಸತ್​ನಲ್ಲಿ ಪ್ರಸ್ತುತಪಡಿಸಲಾಗುತ್ತದೆ. 2026ರ ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಾರೆ. ಬಜೆಟ್ ಅಧಿವೇಶನ ಈಗಾಗಲೇ ನಿನ್ನೆಯೇ ಆರಂಭಗೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ – Kannada News | Karnataka Contractors’ Association Warns Congress Government: Statewide Work Stoppage from March 5 Over Rs 37370 Crore Dues

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್Image Credit source: tv9

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸಾವಿರಾರು ಕೋಟಿ ರೂಪಾಯಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘವು (Karnataka Contractors’ Association) ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ. ‘ಮಾರ್ಚ್ 5 ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಅಥವಾ ಮುಖ್ಯಮಂತ್ರಿಯವರು ಸಭೆ ಕರೆದು ಚರ್ಚಿಸದಿದ್ದರೆ ರಾಜ್ಯಾದ್ಯಂತ ಎಲ್ಲಾ ಇಲಾಖೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು’ ಎಂದು ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಮಂಜುನಾಥ್, ಬಾಕಿ ಉಳಿದಿರುವ 37,370 ಕೋಟಿ ರೂ.ಗಳ ವಿವರ ಬಿಡುಗಡೆ ಮಾಡಿದರು. ಅವರು ಹೇಳಿದ ಪ್ರಕಾರ ಇಲಾಖಾವಾರು ಬಾಕಿ ವಿವರ ಹೀಗಿದೆ;

ಇಲಾಖೆಯ ಹೆಸರು – ಬಾಕಿ ಮೊತ್ತ (ಕೋಟಿ ರೂ.ಗಳಲ್ಲಿ)

  • ಲೋಕೋಪಯೋಗಿ ಇಲಾಖೆ (PWD) – 13,000
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) – 3,800
  • ಸಣ್ಣ ನೀರಾವರಿ ಇಲಾಖೆ – 3,000
  • ನಗರಾಭಿವೃದ್ದಿ ಇಲಾಖೆ – 2,000
  • ವಸತಿ ಮತ್ತು ವಕ್ಫ್ ಇಲಾಖೆ – 2,600
  • ಕಾರ್ಮಿಕ ಇಲಾಖೆ – 2,000
  • ಗಣಿ ಮತ್ತು ಭೂವಿಜ್ಞಾನ (GBA) – 2,600
  • ಒಟ್ಟು – 37,370

ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಆರ್. ಮಂಜುನಾಥ್, ಈ ಸರ್ಕಾರದಲ್ಲಿ ಹಣ ಬಿಡುಗಡೆ ವಿಚಾರದಲ್ಲಿ ಭ್ರಷ್ಟಾಚಾರ ಮತ್ತು ಪರ್ಸಂಟೇಜ್ ಪ್ರಮಾಣ ಹೆಚ್ಚಾಗಿದೆ ಎಂದು ಪರೋಪಕ್ಷವಾಗಿ ಉಲ್ಲೇಖಿಸಿದರು. ಈ ಹಿಂದೆ ಕೆಂಪಣ್ಣ ಅವರು 40% ಆರೋಪ ಮಾಡಿದ್ದರು. ಈಗ ನಿಮ್ಮ ಸಹಕಾರ ಇದ್ದರೆ ದಯಮಾಡಿ ಅದನ್ನ ಕಡಿಮೆ ಮಾಡಿಸಿ ಎಂದು ಮಂಜುನಾಥ್ ಆಗ್ರಹಿಸಿದರು.

10 ಮಹಾನಗರ ಪಾಲಿಕೆಗಳಲ್ಲಿ ಮತ್ತು ಕಾರ್ಮಿಕ ಇಲಾಖೆಯಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯವಾಗುವಂತೆ ಪ್ಯಾಕೇಜ್ ಟೆಂಡರ್ ಮಾಡಲಾಗುತ್ತಿದೆ. ಆರ್‌ಟಿ ನಗರ ಮತ್ತು ರಾಜಾಜಿನಗರದ ಖಾಸಗಿ ಕಚೇರಿಗಳಲ್ಲಿ ಕುಳಿತು ಟೆಂಡರ್ ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ನಾವು ಹಣ ಕೇಳಲು ಹೋದರೆ, ‘ಬರೀ ದುಡ್ಡು ಕೇಳ್ತೀರಾ’ ಎಂದು ಅಧಿಕಾರಿಗಳು ಹೀಯಾಳಿಸುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆದಾರ ಮುನೇಗೌಡ ಆತ್ಮಹತ್ಯೆಗೆ ಯತ್ನಿಸಿರುವುದು ನಮ್ಮ ಪರಿಸ್ಥಿತಿಗೆ ಹಿಡಿದ ಕನ್ನಡಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಸತೀಶ್ ಜಾರಕಿಹೊಳಿ, ಡಿಕೆಶಿ ಸ್ಪಂದಿಸಿದರೂ ಹಣಕಾಸು ಇಲಾಖೆಯಿಂದಿಲ್ಲ ಸಹಕಾರ’

ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸಮಸ್ಯೆಗಳಿಗೆ ಒಂದಿಷ್ಟು ಸ್ಪಂದಿಸುತ್ತಿದ್ದರೂ, ಅಂತಿಮವಾಗಿ ಹಣಕಾಸು ಇಲಾಖೆಯತ್ತ ಕೈ ತೋರಿಸಲಾಗುತ್ತಿದೆ. ಹೀಗಾಗಿ, ಗುತ್ತಿಗೆದಾರರ ಸಂಘವು ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಗುತ್ತಿಗೆದಾರರ ಸಂಘದ ನಿರ್ಣಯಗಳೇನು?

ಮಾರ್ಚ್ 5 ರ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯದ ಎಲ್ಲಾ ಸರ್ಕಾರಿ ಕಾಮಗಾರಿಗಳು ಬಂದ್ ಆಗಲಿವೆ. ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೆ ಈ ಸಮಸ್ಯೆಯನ್ನು ತರಲು ಸಂಘ ನಿರ್ಧರಿಸಿದೆ.
ಒಂದೇ ಬಾರಿ ಹಣ ನೀಡಲು ಸಾಧ್ಯವಾಗದಿದ್ದರೆ ಕನಿಷ್ಠ ಹಂತ ಹಂತವಾಗಿಯಾದರೂ ಬಿಲ್ ಕ್ಲಿಯರ್ ಮಾಡಿ ಎಂದು ಸಂಘ ಮನವಿ ಮಾಡಿದೆ.

ಇದನ್ನೂ ಓದಿ: ಗುತ್ತಿಗೆದಾರರಿಗೆ ಯಾಕೆ ಬಿಲ್ ಬಿಡುಗಡೆಯಾಗುತ್ತಿಲ್ಲ? ಕಾರಣ ಕೊಟ್ಟ ಹಣಕಾಸು ಇಲಾಖೆ ಕಾರ್ಯದರ್ಶಿ

ಕಳೆದ ಎರಡೂವರೆ ವರ್ಷಗಳಿಂದ ನಾವು ನರಕಯಾತನೆ ಅನುಭವಿಸುತ್ತಿದ್ದೇವೆ. ನಮ್ಮನ್ನು ಕೆಣಕಲು ಹೋಗಬೇಡಿ ಎಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇವೆ ಎಂದು ಮಂಜುನಾಥ್ ಹೇಳಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು – Kannada News | Fatal Air Crash in Colombia Claims 15 Lives, Including Lawmaker

ಕೊಲಂಬಿಯಾ, ಜನವರಿ 29: ಕೊಲಂಬಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನವನ್ನು ನಿರ್ವಹಿಸಿದ ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ. ಬೆಳಗ್ಗೆ 11.42 ಕ್ಕೆ ಕುಕುಟಾ ವಿಮಾನ ನಿಲ್ದಾಣದಿಂದ ಪರ್ವತಗಳಿಂದ ಆವೃತವಾದ ಓಕಾನಾ ನಗರಕ್ಕೆ ಹೊರಟಿತು.

ಹಾರಾಟವು ಸಾಮಾನ್ಯವಾಗಿ ಸುಮಾರು 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಸಣ್ಣ ವಿಮಾನವು ಇಬ್ಬರು ಸಿಬ್ಬಂದಿ ಮತ್ತು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ, ಅವರಲ್ಲಿ ಕ್ಯಾಟಟಂಬೊದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸದಸ್ಯ 36 ವರ್ಷದ ಡಯೋಜೆನೆಸ್ ಕ್ವಿಂಟೆರೊ ಸೇರಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ

ದಾವಣಗೆರೆ, ಜ.29: ಅಡಿಕೆಗೆ ಕೊಳೆ ರೋಗದ ನಡುವೆಯೂ ಬೆಲೆ ಏರಿಕೆ ಆಗಿರುವುದು ಅಚ್ಚರಿ ಸಂಗತಿ, ಆದರೆ ರೈತರಿಗೆ ಇದರ ಬಗ್ಗೆ ಒಂದಲ್ಲ ಒಂದು ತಲೆನೋವು ಇದ್ದೇ ಇದೆ. ಇಷ್ಟು ದಿನ ಕೊಳೆ ರೋಗ ಬಗ್ಗೆ ಚಿಂತೆ ಮಾಡುತ್ತಿದ್ದ ರೈತರು. ಇದೀಗ ಕಳ್ಳರ ಕಾಟಕ್ಕೆ ಕಂಗಾಲಾಗಿದ್ದಾರೆ. ಕೊಳೆ ರೋಗದ ನಡುವೆಯೂ ಅಡಿಕೆ ದರ ಏರಿಕೆ ಆಗಿದೆ. ಈ ಬಗ್ಗೆ ಸ್ವಲ್ಪ ಸಂತೋಷ ಪಡುವ ಸಮಯದಲ್ಲೇ ರೈತರಿಗೆ ಕಳ್ಳರು ಕಾಟ ಎದುರಾಗಿದೆ. ಇದೀಗ ಕಳ್ಳರನ್ನು ಪತ್ತೆ ಮಾಡಲು ಹಾಗೂ ಅಡಿಕೆಗೆ ಟೈಟ್​​ ಸೆಕ್ಯುರಿಟಿ ನೀಡಲು ರೈತರು ಹೊಸ ಪ್ಲಾನ್​​ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಅಡಿಕೆ ಕಳ್ಳತನ ತಡೆಗೆ ರೈತರ ‌ಮಾಸ್ಟರ್‌ಪ್ಲಾನ್ ಮಾಡಿದ್ದಾರೆ. ಅಡಿಕೆ ತೋಟಕ್ಕೆ ಇದೀಗ ಸಿಸಿ ಕ್ಯಾಮರಾ ಬಂದಿದೆ. ಅಡಿಕೆ ತೋಟದಲ್ಲಿ ಅಪರಿಚಿತರ ಓಡಾಟ ನಡೆಸಿದರೆ ಲೈನ್ ಆನ್ ಮೂಲಕ ಮಾಲೀಕರ ಮೊಬೈಲ್ ಗೆ ಸಂದೇಶ ಕಳುಹಿಸುವ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದೆ. ಈ ಸಿಸಿಟಿವಿ ಕ್ಯಾಮರಾಕ್ಕೆ ಕನಿಷ್ಟ ಮೂವತ್ತು ದಿ‌ನ ವಿಡಿಯೋ ಸ್ಟೋರೇಜ್ ಮಾಡಿಕೊಳ್ಳುವ ವ್ಯವಸ್ಥೆ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

ಎಂಥ ನಿರ್ದೇಶಕನಿಗೆ ಇದೆಂಥ ಗತಿ ಬಂತು ನೋಡಿ – Kannada News | Director Shankar finally gets a producer for his next movie with budget restriction

ಚಿತ್ರರಂಗವೇ ಹಾಗೆ ಇಲ್ಲಿ ಸಾಕಷ್ಟು ಅನಿಶ್ಚಿತತೆಗಳು, ಒಂದೇ ಒಂದು ಸಿನಿಮಾ (Cinema) ಎಂಥಹವರನ್ನು ದೊಡ್ಡ ಸ್ಟಾರ್​ಗಳನ್ನಾಗಿ ಮಾಡಿ ಬಿಡುತ್ತದೆ. ಒಂದೇ ಒಂದು ಸೋಲು ದೊಡ್ಡ ಸ್ಟಾರ್​​ಗಳನ್ನು ನೆಲಕಚ್ಚುವಂತೆ ಮಾಡಿ ಬಿಡುತ್ತದೆ. ಇಂಥಹಾ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಈಗಾಗಲೇ ಇವೆ. ಇದೀಗ ಇದಕ್ಕೆ ಹೊಸದೊಂದು ಉದಾಹರಣೆ ಸೇರ್ಪಡೆ ಆಗಲಿಕ್ಕಿದೆ. ಅದುವೇ ಒಂದು ಕಾಲದ ಸೂಪರ್ ಸ್ಟಾರ್ ನಿರ್ದೇಶಕ ಶಂಕರ್ ಅವರದ್ದು.

ಭಾರತೀಯ ಚಿತ್ರರಂಗಕ್ಕೆ ಅದ್ಧೂರಿತನ, ಪ್ಯಾನ್ ಇಂಡಿಯಾ ಕಾನ್ಸೆಪ್ಟನ್ನು ಮೊದಲು ಪರಿಚಯಿಸಿದ್ದೇ ನಿರ್ದೇಶಕ ಶಂಕರ್. 100 ಕೋಟಿ ಬಜೆಟ್ ಎಂಬುದನ್ನು ಊಹೆ ಸಹ ಮಾಡಲು ಸಾಧ್ಯವಿರದಿದ್ದ ಸಮಯದಲ್ಲಿ ರಜನೀಕಾಂತ್ ಅವರನ್ನು ಹಾಕಿಕೊಂಡು ನೂರು ಕೋಟಿ ಬಜೆಟ್​​ನಲ್ಲಿ ‘ರೋಬೊ’ ಸಿನಿಮಾ ನಿರ್ದೇಶಿಸಿ ಭಾರಿ ದೊಡ್ಡ ಗೆಲುವು ಸಂಪಾದಿಸಿದ್ದರು ಶಂಕರ್. ಅವರ ನಿರ್ದೇಶನದ ‘ಜಂಟಲ್​​ಮ್ಯಾನ್’, ‘ಬಾಯ್ಸ್’, ‘ಅನ್ನಿಯನ್’, ‘ಇಂಡಿಯನ್’ ಸಿನಿಮಾಗಳೆಲ್ಲ ಅದ್ಧೂರಿತನ, ಭಿನ್ನತೆ, ತಂತ್ರಜ್ಞಾನ ನೈಪುಣ್ಯತೆಯನ್ನು ಹೊಂದಿದ್ದವು. ರಾಜಮೌಳಿಗೂ ಮುಂಚೆ ಭಾರತದ ಸೂಪರ್ ಸ್ಟಾರ್ ನಿರ್ದೇಶಕ ಎನಿಸಿಕೊಂಡಿದ್ದರು ಶಂಕರ್.

ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಒಂದರ ಹಿಂದೊಂದು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ ಶಂಕರ್ ಅವರಿಗೆ ಈಗ ನಿರ್ಮಾಪಕ ಸಿಗದಾಗಿದ್ದಾರೆ. ಶಂಕರ್ ನಿರ್ದೇಶನದ ‘ರೋಬೊ 2’ ಮತ್ತು ‘ಇಂಡಿಯನ್ 2’, ‘ಗೇಮ್ ಚೇಂಜರ್’ ಸಿನಿಮಾಗಳು ಒಂದರ ಹಿಂದೊಂದರಂತೆ ಸೋತ ಬೆನ್ನಲ್ಲೆ ಅವರ ಸಿನಿಮಾಕ್ಕೆ ಬಂಡವಾಳ ಹೂಡಲು ಯಾರೂ ಮುಂದೆ ಬರುತ್ತಿಲ್ಲ. ಶಂಕರ್ ಅವರು ತಮ್ಮ ಬಹು ವರ್ಷದ ಕನಸಾಗಿದ್ದ ‘ವೆಲ್​ಪಾರಿ’ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದು, ಇದಕ್ಕೆ ನಿರ್ಮಾಪಕರು ಸಿಕ್ಕಿರಲಿಲ್ಲ.

ಇದನ್ನೂ ಓದಿ:ಒಟಿಟಿಯಲ್ಲಿ ಬ್ಲಾಕ್ ಬಸ್ಟರ್ ಕೊಟ್ಟ ಬಳಿಕ, ದೊಡ್ಡ ಪರದೆಯತ್ತ ಶಾರುಖ್ ಪುತ್ರ ಆರ್ಯನ್

‘ವೆಲ್ಪಾರಿ’ ಸಿನಿಮಾವು ತಮಿಳಿನ ಜನಪ್ರಿಯ ‘ವೀರ ಯುಗ ನಾಯಗನ್ ವೆಲ್​​ಪಾರಿ’ ಕಾದಂಬರಿ ಆಧರಿಸಿದ ಸಿನಿಮಾ ಆಗಿದ್ದು, ಈ ಕಾದಂಬರಿಯನ್ನು ಸಿನಿಮಾ ಆಗಿಸುವುದು ಶಂಕರ್ ಅವರ ಬಹು ವರ್ಷಗಳ ಕನಸಾಗಿತ್ತು. ಇದೀಗ ಕೊನೆಗೂ ಒಬ್ಬ ನಿರ್ಮಾಪಕರು ಸಿಕ್ಕಿದ್ದಾರಾದರೂ ಶಂಕರ್ ಅವರ ಮೇಲೆ ಬಜೆಟ್ ನಿರ್ಬಂಧನೆಗಳನ್ನು ನಿರ್ಮಾಪಕರು ಹೇರಿದ್ದಾರೆ. ಒಂದು ಕಾಲದಲ್ಲಿ ಬಜೆಟ್ ನಿರ್ಬಂಧಗಳೇ ಇಲ್ಲದೆ ಸಿನಿಮಾ ಮಾಡಿದ್ದ ಶಂಕರ್ ಈಗ ದಶಕಗಳಲ್ಲಿ ಮೊದಲ ಬಾರಿಗೆ ಬಜೆಟ್ ನಿರ್ಬಂಧನೆಗೆ ಒಳಪಟ್ಟು ಸಿನಿಮಾ ನಿರ್ದೇಶಿಸಬೇಕಿದೆ.

ವಿಶೇಷವೆಂದರೆ ಶಂಕರ್​​ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ತಮಿಳಿನ ನಿರ್ಮಾಪಕ ಅಥವಾ ದಕ್ಷಿಣದ ನಿರ್ಮಾಪಕರಲ್ಲ ಬದಲಿಗೆ ಬಾಲಿವುಡ್​​ನ ನಿರ್ಮಾಣ ಸಂಸ್ಥೆ. ದಕ್ಷಿಣದ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಬಿಡುಗಡೆ ಮಾಡುತ್ತಿದ್ದ ನಿರ್ಮಾಣ ಸಂಸ್ಥೆಯೊಂದು ಇದೀಗ ಶಂಕರ್ ಅವರ ಹೊಸ ಸಿನಿಮಾಕ್ಕೆ ಬಂಡವಾಳ ಹೂಡಲು ಮುಂದಾಗಿದೆ.

ಹಿಂದಿಯ ಹಲವಾರು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮತ್ತು ದಕ್ಷಿಣದ ‘ಆರ್​​ಆರ್​​ಆರ್’ ಇತ್ತೀಚೆಗಿನ ‘ಲೋಕಃ’ ಸೇರಿದಂತೆ ಹಲವು ಸಿನಿಮಾಗಳ ವಿತರಣೆ ಮಾಡಿರುವ ಪೆನ್ ಸ್ಟುಡಿಯೋಸ್, ಶಂಕರ್ ಅವರ ಹೊಸ ಸಿನಿಮಾಕ್ಕೆ ಬಂಡವಾಳ ಹೂಡಲಿದೆ. ಶಂಕರ್ ಜೊತೆಗೆ ಬಜೆಟ್ ಸೇರಿದಂತೆ ಹಲವು ವಿಷಯಗಳಿಗೆ ಕಠಿಣವಾದ ಒಪ್ಪಂದಗಳನ್ನು ಪೆನ್ ಸ್ಟುಡಿಯೋಸ್ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ‘ವೆಲ್ಪಾರಿ’ ಸಿನಿಮಾದ ಪ್ರೀ ಪ್ರೊಡಕ್ಷನ್ ಅನ್ನು ಶಂಕರ್ ಪ್ರಾರಂಭ ಮಾಡಿದ್ದಾರೆ. ಸಿನಿಮಾದ ನಾಯಕ, ನಾಯಕಿ ಇನ್ನಿತರೆ ಮಾಹಿತಿಯನ್ನು ಶಂಕರ್ ಅವರು ಇನ್ನಷ್ಟೆ ಹಂಚಿಕೊಳ್ಳಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..! – Kannada News | Jasprit bumrah bowling under question in t20i

ಪ್ರಸ್ತುತ ಕ್ರಿಕೆಟ್​ನ ಶ್ರೇಷ್ಠ ಬೌಲರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಒಬ್ಬರು. ಅದರಲ್ಲೂ ಬುಮ್ರಾ ಅವರಿಗಿಂತ ನಿಖರವಾಗಿ ಯಾರ್ಕರ್ ದಾಳಿ ಸಂಘಟಿಸುವ ಮತ್ತೋರ್ವ ಬೌಲರ್ ಇಲ್ಲ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಯನ್ನು ಬ್ಯಾಟರ್​ಗಳು ಚೆಂಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ ನೀಡಿದ್ದು ಬರೋಬ್ಬರಿ 19 ರನ್​ಗಳು. 2017ರ ಬಳಿಕ ಬುಮ್ರಾ ಒಮ್ಮೆಯೂ ಟಿ20 ಪಂದ್ಯದ ಓವರ್​ವೊಂದರಲ್ಲಿ 18 ಕ್ಕಿಂತ ಹೆಚ್ಚು ರನ್ ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈ ಬಾರಿ ನ್ಯೂಝಿಲೆಂಡ್ ಬ್ಯಾಟರ್​ಗಳು ಬರೋಬ್ಬರಿ 19 ರನ್​ ಚಚ್ಚಿದ್ದಾರೆ. ಅದು ಸಹ 19ನೇ ಓವರ್​ನಲ್ಲಿ ಎಂಬುದು ವಿಶೇಷ.
  • ನ್ಯೂಝಿಲೆಂಡ್ ವಿರುದ್ಧದ ಈ ಸರಣಿಯ ಮೊದಲ ಪಂದ್ಯದಲ್ಲೂ ಬುಮ್ರಾ 18ನೇ ಓವರ್​ನಲ್ಲಿ 15 ರನ್​ ಚಚ್ಚಿಸಿಕೊಂಡಿದ್ದರು. ಅಂದರೆ ಒಂದೇ ಸರಣಿಯಲ್ಲಿ ಎರಡು ಬಾರಿ ಡೆತ್ ಓವರ್‌ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟಿದ್ದಾರೆ.
  • ಇದಕ್ಕೂ ಮುನ್ನ ಡಿಸೆಂಬರ್ 2025 ರಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಒಂದೇ ಪಂದ್ಯದಲ್ಲಿ ಎರಡು ಓವರ್‌ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ನೀಡಿದ್ದರು.
  • ಡಿಸೆಂಬರ್ 11 ರಂದು ನ್ಯೂ ಚಂಡೀಗಢದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಪವರ್‌ಪ್ಲೇನಲ್ಲಿ ಬುಮ್ರಾ ಒಂದೇ ಓವರ್‌ನಲ್ಲಿ 16 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಅದೇ ಪಂದ್ಯದ ಕೊನೆಯ ಓವರ್​ನಲ್ಲಿ 17 ರನ್‌ಗಳನ್ನು ಚಚ್ಚಿಸಿಕೊಂಡಿದ್ದರು.
  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ 4 ಓವರ್‌ಗಳಲ್ಲಿ ನೀಡಿದ್ದು ಬರೋಬ್ಬರಿ 38 ರನ್​ಗಳು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದಲ್ಲದೇ ಜಸ್​ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಇದೀಗ ಬ್ಯಾಟರ್​ಗಳು ಲೀಲಾಜಾಲವಾಗಿ ಸಿಕ್ಸರ್​ ಸಿಡಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಎರಡು ವರ್ಷಗಳಲ್ಲಿ ಬುಮ್ರಾ ಹೊಡೆಸಿಕೊಂಡಿರುವ ಸಿಕ್ಸರ್​​ಗಳ ಸಂಖ್ಯೆ.

  • 2024 ರಲ್ಲಿ ಜಸ್​ಪ್ರೀತ್ ಬುಮ್ರಾ ಬರೋಬ್ಬರಿ 15 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.
  • 2025 ರಲ್ಲಿ ಬುಮ್ರಾ ಬೌಲಿಂಗ್​ನಲ್ಲಿ 13 ಸಿಕ್ಸರ್​ಗಳು ಮೂಡಿಬಂದಿವೆ.
  • 2025 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಬುಮ್ರಾ ಒಂದೇ ಪಂದ್ಯದಲ್ಲಿ 4 ಸಿಕ್ಸರ್ ಚಚ್ಚಿಸಿಕೊಂಡಿದ್ದರು. ಇದಕ್ಕೂ ಮುನ್ನ ಅವರು ತಮ್ಮ ಕೆರಿಯರ್​ನಲ್ಲಿ ಒಂದೇ ಪಂದ್ಯದಲ್ಲಿ ನಾಲ್ಕು ಸಿಕ್ಸ್ ಹೊಡೆಸಿಕೊಂಡಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.
  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲೂ ಬುಮ್ರಾ 2 ಸಿಕ್ಸರ್ ಹೊಡೆಸಿಕೊಂಡಿದ್ದಾರೆ.

2024ರ ಅಂತ್ಯದ ವೇಳೆಗೆ ಜಸ್​ಪ್ರೀತ್ ಬುಮ್ರಾ 250 ಓವರ್‌ಗಳಲ್ಲಿ ನೀಡಿರುವುದು ಕೇವಲ 35 ಸಿಕ್ಸರ್‌ಗಳನ್ನು ಮಾತ್ರ. ಆದರೆ ಇದೀಗ ಒಂದೇ ವರ್ಷದೊಳಗೆ 15 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಕಳೆದ 12 ತಿಂಗಳುಗಳಲ್ಲಿ ಬುಮ್ರಾ ಅವರ ಪ್ರದರ್ಶನವು ಕ್ಷೀಣಿಸಿರುವುದು ಸ್ಪಷ್ಟ. ಏಕೆಂದರೆ ಕಳೆದ ವರ್ಷ ಅವರು 16 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 18 ವಿಕೆಟ್‌ಗಳನ್ನು ಮಾತ್ರ.

ಇದನ್ನೂ ಓದಿ: ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

ಈ 16 ಪಂದ್ಯಗಳಲ್ಲಿ ಅವರು ಒಮ್ಮೆಯೂ 4 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್ ಪಡೆದಿಲ್ಲ. ಅಂದರೆ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಸಾಮರ್ಥ್ಯವು ನಿಧಾನಕ್ಕೆ ಕುಂದುತ್ತಿದೆ ಎನ್ನಬಹುದು. ಅದರಲ್ಲೂ ಬುಮ್ರಾಸ್ತ್ರದ ವಿರುದ್ಧ ಬ್ಯಾಟರ್​ಗಳು ಸಿಕ್ಸರ್​ ಅಸ್ತ್ರಗಳ ಪ್ರಯೋಗಿಸುತ್ತಿದ್ದಾರೆ ಎಂಬುದಕ್ಕೆ ಈ ಮೇಲಿನ ಅಂಕಿ ಅಂಶಗಳೇ ಸಾಕ್ಷಿ.

Source link

ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು ನೋಡಿ – Kannada News | Yathindra Siddaramaiah Interference Issue Debated in Karnataka Assembly: KJ George Rejects Resignation Reports

ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದಿಂದ ಸಚಿವ ಕೆಜೆ ಜಾರ್ಜ್‌ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ‘ಟಿವಿ9’ ವರದಿ ಉಲ್ಲೇಖಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಈ ವಿಚಾರವಾಗಿ ಸಚಿವ ಜಾರ್ಜ್‌ ಸದನದಲ್ಲೇ ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಜಾರ್ಜ್‌, ತಮ್ಮ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸಿಲ್ಲ. ಮುಖ್ಯಮಂತ್ರಿಗಳ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅವರಿಗೆ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಗಳು ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಸೃಷ್ಟಿಸುತ್ತಿವೆ ಎಂದು ಜಾರ್ಜ್‌ ಆರೋಪಿಸಿದರು. ಹಳೆಯ ಕಾಲದಲ್ಲಿ ದಿನಕ್ಕೆ ಮೂರು ಸುದ್ದಿ ಪ್ರಸಾರವಾಗುತ್ತಿತ್ತು, ಈಗ ಪ್ರತಿ ಗಂಟೆಗೂ ಬ್ರೇಕಿಂಗ್‌ ನ್ಯೂಸ್‌ ಬೇಕಾಗಿದೆ. ಹೀಗಾಗಿ ಮಾಧ್ಯಮಗಳು ಸೃಷ್ಟಿ ಮಾಡುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಜೀನಾಮೆ ನೀಡುವ ಯಾವುದೇ ಪ್ರಶ್ನೆಯೂ ಇಲ್ಲ, ಇದು ಕೇವಲ ವದಂತಿ ಎಂದು ಜಾರ್ಜ್‌ ಸದನಕ್ಕೆ ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version