Headlines

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ – Kannada News | Tragedy in Ballari: Groom Dies Hours After Wedding Reception

ಬಳ್ಳಾರಿ, ಜುಲೈ 17: ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ (ಜುಲೈ 16) ರಾತ್ರಿ ನಡೆದಿದೆ. ನಬಿ ರಸೂಲ್​​​ ಮೃತ ವ್ಯಕ್ತಿಯಾಗಿದ್ದು, ದುರ್ದೈವ ಅಂದರೆ ಮದುವೆಯ ರಿಸೆಪ್ಷನ್ ಕಾರ್ಯಕ್ರಮ ಮುಗಿದ ಕೆಲವೇ ಹೊತ್ತಿನಲ್ಲಿ ಇವರ ಉಸಿರು ನಿಂತಿದೆ. ರಾತ್ರಿ 11 ಗಂಟೆಗೆ ಮನೆಯಿಂದ ಹೊರಹೋಗಿದ್ದ ರಸೂಲ್​​​​ ಶವವಾಗಿ ಪತ್ತೆಯಾಗಿದ್ದಾರೆ. ನಬಿ ರಸೂಲ್​​​​​ ವಿಚ್ಛೇದಿತ ಮಹಿಳೆಯೋರ್ವಳನ್ನು ಪ್ರೀತಿಸುತ್ತಿದ್ದು, 15 ದಿನಗಳ ಹಿಂದೆ ಆಕೆಯನ್ನು ಕರೆದೊಯ್ದಿದ್ದರು. ಕೆಲವು ದಿನಗಳ…

Read More

ಡಿಕೆಶಿ ಸಿಎಂ ಆಗಲಿ ಎಂದು ಹರಕೆ ಹೊತ್ತಿದ್ದ ಪತ್ನಿ; ಮೈಸೂರು ಚಾಮುಂಡೇಶ್ವರಿಗೆ ಸೀರೆ ಹರಕೆ ತೀರಿಸಿದ ಉಷಾ ಶಿವಕುಮಾರ್! – Kannada News | Usha Shivakumar Fulfils Chamundeshwari Saree Vow at Mysore Chamundi Hills

ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ತಮ್ಮ ಚಾಣಾಕ್ಷ ರಾಜಕೀಯ ತಂತ್ರಗಾರಿಕೆ ಮಾತ್ರವಲ್ಲದೆ, ದೈವಭಕ್ತಿಗೂ ಹೆಸರಾದವರು. ಯಾವುದೇ ಕಠಿಣ ರಾಜಕೀಯ ಸವಾಲು ಅಥವಾ ಬಿಕ್ಕಟ್ಟು ಎದುರಾದಾಗಲೂ ಅವರು ಶಕ್ತಿಪೀಠ ಹಾಗೂ ದೇವಸ್ಥಾನಗಳ ಮೊರೆ ಹೋಗುವುದನ್ನು ಕಾಣಬಹುದು. ಇದೀಗ ಅವರ ಕುಟುಂಬದ ದೈವಭಕ್ತಿಗೆ ಸಾಕ್ಷಿಯೆಂಬಂತೆ, ಸಿಎಂ ಅವರ ಪತ್ನಿ ಉಷಾ ಶಿವಕುಮಾರ್ ಇಂದು ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಮ್ಮ ವಿಶೇಷ ಹರಕೆಯೊಂದನ್ನು ತೀರಿಸಿದ್ದಾರೆ. ಪತಿ ಸಿಎಂ ಆದರೆ ಚಾಮುಂಡೇಶ್ವರಿಗೆ ಸೀರೆ ಉಡಿಸುವುದಾಗಿ ಹರಕೆ…

Read More

Video: ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ – Kannada News | PM Modi Flags Off India’s First Hydrogen Train, Launching a New Era in Green Rail Transport

ಜಿಂದ್, ಜುಲೈ 17: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸಲಿರುವ ಭಾರತದ ಮೊದಲ ‘ಹೈಡ್ರೋಜನ್ ಚಾಲಿತ ರೈಲಿ’ಗೆ ಹಸಿರು ನಿಶಾನೆ ತೋರಿದ್ದಾರೆ. ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಸಂಪೂರ್ಣ ಸ್ಥಳೀಯ ತಂತ್ರಜ್ಞಾನ ಬಳಸಿ ಈ ಪರಿಸರಸ್ನೇಹಿ ರೈಲನ್ನು ನಿರ್ಮಿಸಲಾಗಿದೆ. ಅತ್ಯಾಧುನಿಕ ಹೈಡ್ರೋಜನ್ ಇಂಧನ ಕೋಶ ತಂತ್ರಜ್ಞಾನದ ಮೂಲಕ ಚಲಿಸುವ ಈ ರೈಲು, ಕೇವಲ ನೀರಿನ ಆವಿಯನ್ನು ಹೊರಸೂಸುತ್ತದೆ. ಇದರಿಂದಾಗಿ ಇಂಗಾಲದ ಹೊರಸೂಸುವಿಕೆ ಸಂಪೂರ್ಣ ಶೂನ್ಯವಾಗಿರುತ್ತದೆ….

Read More

Karnataka Dam Water Level: ಕೆಆರ್‌ಎಸ್‌ಗೆ ಒಳಹರಿವು ಮತ್ತಷ್ಟು ಕುಸಿತ; ತುಂಗಭದ್ರೆಯಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರು – Kannada News | Karnataka Reservoir Water Level on 17 July 2026: KRS Inflow Drops Further, Hemavathi and Tungabhadra Storage Remains Below Last Year

ಕೆಆರ್​ಎಸ್ ಡ್ಯಾಂ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೊರತೆ ಮುಂದುವರಿದಿರುವ ಪರಿಣಾಮ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ (Karnataka Dam Water Level) ಏರಿಕೆ ಕಾಣುತ್ತಿಲ್ಲ. ಕೆಆರ್‌ಎಸ್, ಹೇಮಾವತಿ, ತುಂಗಭದ್ರೆ ಹಾಗೂ ಆಲಮಟ್ಟಿ ಜಲಾಶಯಗಳ ಒಳಹರಿವು ಸೀಮಿತ ಪ್ರಮಾಣದಲ್ಲಿದ್ದು, ರೈತರು ಹಾಗೂ ನೀರಾವರಿ ವಲಯದ ಅಧಿಕಾರಿಗಳ ಆತಂಕ ಹೆಚ್ಚಾಗಿದೆ. ಬೆಂಗಳೂರಿಗೆ (Bengaluru) ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೆ ಒಳಹರಿವು ಮತ್ತೆ ಇಳಿಕೆಯಾಗಿರುವುದು ಆತಂಕಕ್ಕೆ…

Read More

ಮಂಗಳೂರು: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ – Kannada News | Man unalives woman named Lavanya at B.C road bus stand, Bantwal: One sided Love suspected, Accused Arrested

ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಮೃತ ಲಾವಣ್ಯ ಕಲ್ಲಡ್ಕದ…

Read More

PM Modi to flag off India’s first hydrogen train Live: ಹರಿಯಾಣದಲ್ಲಿ ದೇಶದ ಮೊದಲ ‘ಹೈಡ್ರೋಜನ್ ರೈಲಿ’ಗೆ ಪಿಎಂ ಮೋದಿ ಇಂದು ಚಾಲನೆ, ನೇರ ಪ್ರಸಾರ – Kannada News | PM Modi to Unveil India’s First Hydrogen Powered Train, Marking Green Rail Milestone

ಜಿಂದ್, ಜುಲೈ 17: ಭಾರತದ ಇಂಧನ ಮತ್ತು ರೈಲ್ವೆ ವಲಯದಲ್ಲಿ ಇಂದು ಹೊಸ ಕ್ರಾಂತಿ ಸೃಷ್ಟಿಯಾಗುತ್ತಿದೆ. ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸಲಿರುವ ಭಾರತದ ಮೊದಲ ‘ಹೈಡ್ರೋಜನ್ ಚಾಲಿತ ರೈಲಿ’ಗೆ ಹಸಿರು ನಿಶಾನೆ ತೋರಲಿದ್ದಾರೆ. ಸಂಪೂರ್ಣವಾಗಿ ಭಾರತದಲ್ಲೇ ವಿನ್ಯಾಸಗೊಳಿಸಿ, ಸ್ಥಳೀಯ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾದ ಈ ರೈಲಿನ ಉಡಾವಣೆಯೊಂದಿಗೆ, ಭಾರತವು ವಿಶ್ವದಲ್ಲೇ ಹೈಡ್ರೋಜನ್ ರೈಲು ಓಡಿಸುತ್ತಿರುವ ಜರ್ಮನಿ,…

Read More

Gold Rate: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ – Kannada News | Gold Price Today on 17th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 17: ಚಿನ್ನದ ಬೆಲೆ ಸತತವಾಗಿ ತಗ್ಗಿದೆ. ನಿನ್ನೆ 25 ರೂ ಇಳಿದಿದ್ದ ಇದರ ಬೆಲೆ (Gold Rates) ಇಂದು ಶುಕ್ರವಾರ 70 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬಂಗಾರದ ದರ ಇಳಿದಿದೆ. ಇನ್ನು, ಬೆಳ್ಳಿ ಬೆಲೆಯೂ ಶುಕ್ರವಾರ ಗ್ರಾಮ್​ಗೆ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100…

Read More

NEET-UG Topper Aryan Gupta: ನೀಟ್-ಯುಜಿ ಟಾಪರ್ ಆರ್ಯನ್ ಗುಪ್ತ ಯಶೋಗಾಥೆ; ಅಜ್ಜಿಯನ್ನು ಬಲಿ ಪಡೆದ ಕ್ಯಾನ್ಸರ್ ವಿರುದ್ಧ ಹೋರಾಡಲು ವೈದ್ಯನಾಗುವ ಸಂಕಲ್ಪ – Kannada News | NEET UG 2026 AIR 1: Aryan Gupta’s 17 Hour Study and Grandma’s Cancer Motivated Topper

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಪ್ರತಿಷ್ಠಿತ ನೀಟ್-ಯುಜಿ (NEET-UG) 2026 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತ 720ಕ್ಕೆ 715 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR-1) ಸಾಧಿಸಿದ್ದಾರೆ. ವೈದ್ಯಕೀಯ ಹಿನ್ನೆಲೆಯ ಕುಟುಂಬದಲ್ಲಿ ಬೆಳೆದಿರುವ ಆರ್ಯನ್ ಅವರ ತಂದೆ ಡಾ. ಸಚಿನ್ ಗುಪ್ತಾ ಅರಿವಳಿಕೆ ತಜ್ಞರಾಗಿದ್ದು, ತಾಯಿ ಡಾ. ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಅವರ ಹಿರಿಯ ಸಹೋದರ ಕೂಡ ಕಳೆದ ವರ್ಷದ ನೀಟ್ ಪರೀಕ್ಷೆಯಲ್ಲಿ ಅಖಿಲ…

Read More

ಸಿಎಂ ವಿಜಯ್ ಬಗ್ಗೆ ಮೊದಲ ಬಾರಿ ಮಾತನಾಡಿದ ಪುತ್ರ ಸಂಜಯ್ – Kannada News | Jason Sanjay talks about his family and his father Vijay

ವಿಜಯ್  (Vijay) ಸಿಎಂ ಆಗಿದ್ದಾರೆ. ವಿಜಯ್, ಸಿನಿಮಾ ಮತ್ತು ರಾಜಕೀಯ ಕ್ಷೇತ್ರ ಎರಡರಲ್ಲೂ ದೊಡ್ಡ ಯಶಸ್ಸು ಗಳಿಸಿದಂತಾಗಿದೆ. ಆದರೆ ಅವರ ಖಾಸಗಿ ಬದುಕು ಇನ್ನೂ ಚರ್ಚೆಯ ವಿಷಯವಾಗಿಯೇ ಉಳಿದಿದೆ. ವಿಜಯ್ ಅವರು ಸಿಎಂ ಆಗುವ ಮುಂಚೆಯೇ ಪತ್ನಿ ಸಂಗೀತಾ ಅವರೊಟ್ಟಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಆ ಸಮಯದಲ್ಲಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ವಿಜಯ್’ ಹೆಸರನ್ನು ತೆಗೆದು ಹಾಕಿದ್ದರು. ಆ ಮೂಲಕ ಪರೋಕ್ಷ ಸಿಟ್ಟನ್ನು ತಂದೆಯ ವಿರದ್ಧ ಹೊರ…

Read More

ಮಹಾರಾಷ್ಟ್ರ: ದೇವೇಂದ್ರ ಫಡ್ನವೀಸ್ ನಿವಾಸದಲ್ಲಿ 3 ರಹಸ್ಯ ಸಭೆಗಳು, ಎನ್‌ಸಿಪಿಯಲ್ಲಿ ಮತ್ತೊಂದು ಒಡಕು – Kannada News | Maharashtra NCP Crisis: Fadnavis Secret Meetings Stoke Political Turmoil

ಮುಂಬೈ, ಜುಲೈ 17: ಮಹಾರಾಷ್ಟ್ರ(Maharashtra) ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ತಲ್ಲಣ ಸೃಷ್ಟಿಯಾಗಿದೆ. ಆಡಳಿತಾರೂಢ ಎನ್‌ಸಿಪಿ (ಅಜಿತ್ ಪವಾರ್ ಬಣ) ಮುಖ್ಯಸ್ಥೆ ಸುನೇತ್ರಾ ಪವಾರ್ ನೇತೃತ್ವದ ಬಣ ಮತ್ತು ಶರದ್ ಪವಾರ್ ನೇತೃತ್ವದ ವಿರೋಧ ಪಕ್ಷದ ಎನ್‌ಸಿಪಿ ಬಣ ಎರಡರಲ್ಲೂ ಆಂತರಿಕ ಕಲಹಗಳು ತಾರಕಕ್ಕೇರಿವೆ. ಈ ಇಡೀ ರಾಜಕೀಯ ನಾಟಕದ ಕೇಂದ್ರಬಿಂದುವಾಗಿ ಮೂಡಿಬಂದಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬ್ಯಾಕ್ ಟು ಬ್ಯಾಕ್ ನಡೆದಿರುವ ಮೂರು ರಹಸ್ಯ ಸಭೆಗಳು ತೀವ್ರ ಊಹಾಪೋಹಗಳಿಗೆ ಕಾರಣವಾಗಿವೆ. ಅಜಿತ್ ಪವಾರ್ ಅವರ…

Read More