Headlines

ಮುರ್ಷಿದಾಬಾದ್​ನಲ್ಲಿ ಸ್ಕೂಲ್​ ವ್ಯಾನ್​ಗೆ ಪ್ಯಾಸೆಂಜರ್ ರೈಲು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು, ಐವರಿಗೆ ಗಾಯ – Kannada News | Murshidabad Train Accident: 3 Dead, Students Critically Injured in School Van Crash

ಮುರ್ಷಿದಾಬಾದ್, ಜುಲೈ 17: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತ(Train Accident)ದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೆವೆಲ್ ಕ್ರಾಸಿಂಗ್‌ನಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲೊಂದು ಶಾಲಾ ಮಕ್ಕಳಿದ್ದ ವ್ಯಾನ್​ ಹಾಗೂ ಸೈಕ್ಲಿಸ್ಟ್‌ಗೆ ಜೋರಾಗಿ ಡಿಕ್ಕಿ ಹೊಡೆದಿದ್ದರಿಂದ ಈ ಘೋರ ದುರಂತ ಸಂಭವಿಸಿದೆ. ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಮತ್ತು ಗೋಬಿಂದಾಪುರ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಶುಕ್ರವಾರ ಬೆಳಗ್ಗೆ ಈ ಅಪಘಾತ ನಡೆದಿದೆ….

Read More

World Emoji Day 2026: ಇಂದು ಎಮೋಜಿ ದಿನ; ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ – Kannada News | World Emoji Day 2026: What are the history and significance of World Emoji Day

ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದೆ. ಹೀಗಾಗಿ ಹೆಚ್ಚಿನವರು ಫೇಸ್​ಬುಕ್, ವಾಟ್ಸ್ಆ್ಯಪ್ (WhatsApp), ಇನ್​ಸ್ಟಾಗ್ರಾಮ್, ಟೆಲಿಗ್ರಾಂಗಳಲ್ಲಿ ತಮ್ಮ ಸಮಯವನ್ನು ಕಳೆಯುತ್ತಾರೆ. ನಾವೆಲ್ಲರೂ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದಕ್ಕಿಂತ ಎಮೋಜಿಗಳ ಮೂಲಕ ಹೇಳುವುದೇ ಹೆಚ್ಚು. ಹೀಗಾಗಿ ಈ ಎಮೋಜಿಗಳಿಗಾಗಿ ಒಂದು ದಿನ ಮೀಸಲಿಡಲಾಗಿದೆ. ಪ್ರತಿ ವರ್ಷ ಜುಲೈ 17 ರಂದು ವಿಶ್ವ ಎಮೋಜಿ ದಿನವನ್ನು (World Emoji Day) ಆಚರಿಸಲಾಗುತ್ತದೆ. ವಿಶ್ವ ಎಮೋಜಿ ದಿನದ ಇತಿಹಾಸವೇನು? ವಿಶ್ವ ಎಮೋಜಿ ಇತಿಹಾಸದತ್ತ ಕಣ್ಣಾಯಿಸಿದರೆ ಎಮೋಜಿಯನ್ನು ಮೊದಲು ಎಮೋಟಿಕಾನ್ ಎಂದು ಕರೆಯಲಾಗುತ್ತಿತ್ತು. ಆ…

Read More

First Ashadha Puje at Chamundeshwari Temple Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ – Kannada News | Chamundeshwari Temple Ashadha Friday Live: Special Puja Rituals and KSRTC Bus Services

ಮೈಸೂರು, ಜುಲೈ 17: ಇಂದು ಆಶಾಢ ಮಾಸದ ಮೊದಲ ಶುಕ್ರವಾರವಾದ್ದರಿಂದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿದೆ. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ದೇವಿಯ ವಿಶೇಷ ಪೂಜೆಯ ನೇರಪ್ರಸಾರ ಇಲ್ಲಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘3 ಇಡಿಯಟ್ಸ್’ಗೂ ಸೋನಮ್ ವಾಂಗ್‌ಚುಕ್ ಸಂಬಂಧವಿಲ್ಲ: ಆಮೀರ್ ಖಾನ್ – Kannada News | Aamir Khan says 3 Idiots movie is not based on Sonam Wangchuk

ಆಮಿರ್ ಖಾನ್ (Aamir Khan), ಮಾಧವನ್, ಶರ್ಮನ್ ಜೋಶಿ, ಕರೀನಾ ನಟಿಸಿ ರಾಜ್​​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದ ‘3 ಇಡಿಯಟ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ. ಅದ್ಭುತವಾದ ಸಂದೇಶ ಹೊಂದಿದ್ದ ಆ ಸಿನಿಮಾ ಭಾರತೀಯ ಚಿತ್ರರಂಗದ ಕಲ್ಟ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾ, ಭಾರತದ ಹೆಮ್ಮೆಯ ವಿಜ್ಞಾನಿ ಮತ್ತು ಈಗ ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಂ ವಾಂಗ್ಚುಕ್ ಅವರ ಜೀವನ ಆಧರಿಸಿದೆ ಎನ್ನಲಾಗಿತ್ತು. ಈ ಕುರಿತು ಹಲವಾರು ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ….

Read More

Video: ‘ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ’; NEET UG ಟಾಪರ್ ಆರ್ಯನ್ ಗುಪ್ತಾ ಯಶಸ್ಸಿನ ಗುಟ್ಟು – Kannada News | NEET UG 2026 AIR 1: Aryan Gupta’s Success Story, 715 Marks and Oncologist Dream

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ‘ನೀಟ್ ಯುಜಿ 2026’ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ 720ಕ್ಕೆ 715 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR 1) ಸಾಧಿಸಿರುವ ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತಾ ತಮ್ಮ ಯಶಸ್ಸಿನ ಬಗ್ಗೆ PTI ಜೊತೆ ಹಂಚಿಕೊಂಡಿದ್ದಾರೆ. “ನನ್ನ ತಂದೆ ಮತ್ತು ತಾಯಿ ಇಬ್ಬರೂ ವೈದ್ಯರಾಗಿದ್ದಾರೆ. ನಾನು ಈ ಸಾಧನೆಗಾಗಿ ದಿನಕ್ಕೆ 16 ರಿಂದ 17 ಗಂಟೆಗಳ ಕಾಲ ಅತ್ಯಂತ ಕಷ್ಟಪಟ್ಟು ಅಭ್ಯಾಸ ಮಾಡುತ್ತಿದ್ದೆ, ಕೆಲವೊಮ್ಮೆ ಸರಿಯಾಗಿ…

Read More

ಬೆಂಗಳೂರಿನಲ್ಲಿ ಝಗಮಗಿಸಲಿದೆ ವೀಕೆಂಡ್! ಭಾನುವಾರ ಮುಂಜಾನೆ 5 ರ ವರೆಗೂ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಸಾಧ್ಯತೆ – Kannada News | Bengaluru Weekend Buzz: Pubs, Bars and Restaurants Likely to Stay Open Till 5 AM for Football World Cup Screenings

ಬೆಂಗಳೂರು, ಜುಲೈ 17: ಈ ವಾರಾಂತ್ಯ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಫುಟ್‌ಬಾಲ್ ಅಭಿಮಾನಿಗಳ ಸಂಭ್ರಮ ಜೋರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಫುಟ್‌ಬಾಲ್ ವಿಶ್ವಕಪ್‌ನ ಮೂರನೇ ಸ್ಥಾನಕ್ಕಾಗಿ ನಡೆಯಲಿರುವ ಫ್ರಾನ್ಸ್–ಇಂಗ್ಲೆಂಡ್ ಪಂದ್ಯ ಹಾಗೂ ಫೈನಲ್ ಪಂದ್ಯವನ್ನು ಅಭಿಮಾನಿಗಳು ಒಟ್ಟಾಗಿ ವೀಕ್ಷಿಸಲು ನಗರದ ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ವಿಶೇಷ ಸಿದ್ಧತೆ ಆರಂಭಿಸಿವೆ. ಪಂದ್ಯಗಳ ಸಮಯ ಮುಂಜಾನೆ ಇರುವುದರಿಂದ, ಭಾನುವಾರ ಬೆಳಗ್ಗೆ 5 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡುವಂತೆ ಉದ್ಯಮಿಗಳು ಸರ್ಕಾರ ಹಾಗೂ ಬೆಂಗಳೂರು ನಗರ ಪೊಲೀಸರನ್ನು ಕೋರಿದ್ದಾರೆ….

Read More

ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ – Kannada News | US Escalates Attacks on Irans Infrastructure, UAE Joins Conflict and Red Sea Threat Looms

ಟೆಹ್ರಾನ್, ಜುಲೈ 17: ಅಮೆರಿಕ ಇರಾನ್ ಮೇಲೆ ತನ್ನ ಭೀಕರ ದಾಳಿಗಳನ್ನು ಮುಂದುವರೆಸಿದೆ. ಆದರೆ ಮೊದಲ ಬಾರಿಗೆ ಇರಾನ್ ಮೇಲೆ ಯುಎಇ ದಾಳಿ ನಡೆಸಿ ಅಚ್ಚರಿ ಮೂಡಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಯಾನಕ ದಾಳಿಗಳನ್ನು ನಡೆಸಿದೆ. ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ, ಇರಾನಿಶಾಹರ್ ವಿಮಾನ ನಿಲ್ದಾಣದಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿವೆ. ರೈಲ್ವೆ ಸೇತುವೆಗಳು ಮತ್ತು ರಸ್ತೆಗಳು ಸೇರಿದಂತೆ ಇರಾನ್‌ನ ಮೂಲಸೌಕರ್ಯಗಳನ್ನು ಅಮೆರಿಕ ಪ್ರಮುಖ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಿಂದ ರೈಲ್ವೆ ಮತ್ತು…

Read More

ಪದೇ ಪದೇ ಗ್ಯಾಸ್‌, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ – Kannada News | Top Health Benefits Of Mint Leaves You Should Know

ಇತ್ತೀಚಿನ ದಿನಗಳಲ್ಲಿ ಊಟ ಸರಿಯಾಗಿ ಮಾಡದಿರುವುದು, ಜಂಕ್ ಫುಡ್‌, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡುವುದು ಗ್ಯಾಸ್‌, ಅಸಿಡಿಟಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ರೀತಿಯಾದಾಗ ಅಡುಗೆ ಮನೆಯಲ್ಲೇ ಸುಲಭವಾಗಿ ಸಿಗುವ ಪುದೀನಾ (Mint) ಪರಿಹಾರ ನೀಡಬಹುದು. ಇದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆಯುರ್ವೇದದಲ್ಲೂ ಶತಮಾನಗಳಿಂದ ಬಳಸಲಾಗುತ್ತಿರುವ ಪುದೀನಾ ಕೇವಲ ಆಹಾರದ ರುಚಿ ಹೆಚ್ಚಿಸುವುದಲ್ಲ, ಜೀರ್ಣಕ್ರಿಯೆ ಸುಧಾರಿಸಲು, ಬಾಯಿಯ ಆರೋಗ್ಯ ಕಾಪಾಡಲು ಹಾಗೂ ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡಲು…

Read More

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ – Kannada News | 141 Year Old Harawada Government School in Ankola on Verge of Collapse, Parents Fear for Students’ Safety

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿರುವ 141 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಶಾಲೆ ಯಾವಾಗ ಬೇಕಾದರೂ ಕುಸಿದು ಬೀಳುವ ಅಪಾಯದಲ್ಲಿದ್ದು, ಮಕ್ಕಳು ಪ್ರತಿದಿನ ಜೀವ ಭಯದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮೇಲ್ಚಾವಣಿ ಗೆದ್ದಲು ಹಿಡಿದಿದ್ದು, ಮಣ್ಣಿನ ಗೋಡೆಗಳು ಬೀಳುವ ಹಂತದಲ್ಲಿವೆ. ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ಸೋರಿ, ಹುಳಗಳು ಕಾಣಿಸಿಕೊಳ್ಳುತ್ತವೆ. ಇದು ವಿದ್ಯಾರ್ಥಿಗಳ ಸುರಕ್ಷತೆಗೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ….

Read More

Video: ನಾಗಲಕ್ಷ್ಮಿ ಅವತಾರದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಲಂಕಾರ ಹೇಗಿದೆ ನೋಡಿ – Kannada News | Mysore Chamundeshwari Temple Shines on Ashadas First Friday with Nagalakshmi Alankara

ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಮತ್ತು ಆಚರಣೆಗಳು ಜರುಗಿದವು. ಈ ಪುಣ್ಯ ದಿನದಂದು ತಾಯಿ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರವನ್ನು ಮಾಡಲಾಗಿತ್ತು. ಇದರಿಂದ ಉತ್ಸವಮೂರ್ತಿಯು ಹಸಿರು ಮತ್ತು ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿತು. ದೇವಸ್ಥಾನದ ಗರ್ಭಗುಡಿ, ಗೋಪುರ ಮತ್ತು ದೇವಾಲಯದ ಆವರಣವನ್ನು ವಿವಿಧ ಬಗೆಯ ಸುಂದರ ಹೂಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ಆಷಾಢ ಶುಕ್ರವಾರದ ಮಹತ್ವದಿಂದಾಗಿ, ಸಾವಿರಾರು ಭಕ್ತರು ಬೆಳಗಿನಿಂದಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ದೇವಿಯ…

Read More