‘ಕರ್ಣ’ ಧಾರಾವಾಹಿಯಲ್ಲಿ ಆಷಾಢದ ಟ್ವಿಸ್ಟ್; ಮೆಕ್ಯಾನಿಕ್ ವೇಷದಲ್ಲಿ ಬಂದ ಕಥಾನಾಯಕ – Kannada News | Karna Serial Update: Karna Turns Mechanic to Meet Nidhi Amid Ashadha Obstacles

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಕರ್ಣ’ದಲ್ಲಿ ಈಗ ರೋಚಕ ತಿರುವು ಎದುರಾಗಿದೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ಕಥಾನಾಯಕ ಕರ್ಣ ಹಾಗೂ ನಿಧಿ ಜೋಡಿಗೆ ಹೊಸ ಸಂಕಷ್ಟ ಎದುರಾಗಿದೆ. ಇಬ್ಬರೂ ಮನೆಯವರ ಕಣ್ಣು ತಪ್ಪಿಸಿ ಕದ್ದುಮುಚ್ಚಿ ಪ್ರೀತಿ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ಫನ್ ಎಪಿಸೋಡ್ ವೀಕ್ಷಕರಿಗೆ ಸಾಕಷ್ಟು ಮನರಂಜನೆ ನೀಡುತ್ತಿದೆ. ಈ ಧಾರಾವಾಹಿ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಸಾಗುತ್ತದೆ ಎನ್ನುವ ಕುತೂಹಲ ಮೂಡಿದೆ.

ಹೇಗಾದರೂ ಮಾಡಿ ನಿಧಿಯನ್ನು ಭೇಟಿಯಾಗಲು ಕರ್ಣ ಹೊಸ ಪ್ಲಾನ್ ಮಾಡಿದ್ದಾನೆ. ಆತ ಗ್ಯಾಸ್ ರಿಪೇರಿ ಮಾಡುವ ಮೆಕ್ಯಾನಿಕ್ ವೇಷ ಧರಿಸಿ ನಿಧಿ ಮನೆಗೆ ಬಂದಿದ್ದಾನೆ. ಈ ವೇಳೆ ಕಿಚನ್‌ನಲ್ಲಿ ಇಬ್ಬರೂ ಕದ್ದುಮುಚ್ಚಿ ಮಾತನಾಡುತ್ತಾ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಾರೆ. ಆದರೆ ಈ ಖುಷಿ ಹೆಚ್ಚು ಹೊತ್ತು ಇರುವುದಿಲ್ಲ.

ಅಷ್ಟರಲ್ಲೇ ಮನೆಗೆ ಅಜ್ಜಿಯ ಎಂಟ್ರಿ ಆಗುತ್ತದೆ. ಹೊರಗಿರುವ ಪುರುಷರ ಚಪ್ಪಲಿ ನೋಡಿ ಅಜ್ಜಿಗೆ ಅನುಮಾನ ಶುರುವಾಗುತ್ತದೆ. ತಕ್ಷಣವೇ ಅಲರ್ಟ್ ಆಗುವ ನಿಧಿ, ಆತನನ್ನು ಫ್ಯಾನ್ ರಿಪೇರಿ ಮಾಡುವ ಮೆಕ್ಯಾನಿಕ್ ಎಂದು ಸುಳ್ಳು ಹೇಳುತ್ತಾಳೆ. ಅಜ್ಜಿ ಆತನಿಗೆ ಫ್ಯಾನ್ ಜೊತೆಗೆ ಐರನ್ ಬಾಕ್ಸ್ ಕೂಡ ರಿಪೇರಿ ಮಾಡಲು ಕೊಟ್ಟು ಪರೀಕ್ಷಿಸುತ್ತಾರೆ. ಈ ಕದ್ದುಮುಚ್ಚಿ ಪ್ರೀತಿಯ ಆಟ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಯಿಂದ ಕಾಣೆಯಾದ ನಟಿ ನಮ್ರತಾ ಗೌಡ 

ನಿತ್ಯಾ ಕಾಣೆ

ನಿತ್ಯಾ ಪಾತ್ರ ಮಾಡುತ್ತಿರುವ ನಮ್ರತಾ ಗೌಡ ಅವರು ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ವೀಕ್ಷಿರಿಗೆ ಸಾಕಷ್ಟು ಬೇಸರ ಮೂಡಿಸಿದೆ. ಅವರು ಯಾವಾಗ ಧಾರಾವಾಹಿಗೆ ಮರಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅವರು ಇಲ್ಲದೆ ಇರುವುದು ನಮ್ರತಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರನ್ನು ಈ ರೀತಿ ಸೈಡ್ಲೈನ್ ಮಾಡಿದ್ದು ಸರಿ ಅಲ್ಲ ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ: ಡಾ. ಶಶಿಶೇಖರ್ ದೀಕ್ಷಿತ್ ವಿವರಣೆ – Kannada News | Ashadha Masa: Auspicious for Shakti Devata Worship and Chamundeshwari Devi Puja in Mysore

ಆಷಾಢ ಮಾಸದ ಮೊದಲ ಶುಕ್ರವಾರದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಸನ್ನಿಧಾನ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಈ ಕುರಿತು ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್ ಅವರು ಮಾತನಾಡಿ, ಆಷಾಢ ಮಾಸವು ಶಕ್ತಿ ದೇವತೆಗಳ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಮಾಸವಾಗಿದೆ. ಈ ಮಾಸದಲ್ಲಿ ಶಕ್ತಿ ದೇವತೆಗಳನ್ನು ಆರಾಧಿಸಿದರೆ ಸಕಲ ಶುಭಗಳು ಲಭಿಸುತ್ತವೆ ಎಂಬುದು ನಂಬಿಕೆಯಾಗಿದೆ ಎಂದರು. ಪ್ರತಿದಿನದಂತೆ ಬೆಳಿಗ್ಗೆ 3:30 ರಿಂದ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಗರ್ಭಗುಡಿಯಲ್ಲಿರುವ ಉತ್ಸವಮೂರ್ತಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು ಎಂದು ತಿಳಿಸಿದರು. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ ಎಂಬುದು ವಿಶೇಷ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: 2 ವರ್ಷದ ಮಗು ಅನುಮಾನಾಸ್ಪದ ಸಾವು, ಲಿವ್-ಇನ್ ಸಂಬಂಧದಲ್ಲಿದ್ದ ದಂಪತಿ ವಿರುದ್ಧ ಅನುಮಾನ – Kannada News | Bengaluru 2 Year Old Girl Dies Under Suspicious Circumstances; Police Probe Live in Couple

ಬೆಂಗಳೂರು, ಜುಲೈ 17: ಬೆಂಗಳೂರು (Bengaluru) ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣು ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದರೂ, ಪ್ರಕರಣದಲ್ಲಿ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಎಂಬವರು ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಅವರಿಗೆ ಎರಡು ವರ್ಷದ ಹೆಣ್ಣು ಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

ದಂಪತಿ ವಿರುದ್ಧ ದೂರು ನೀಡಿದ ಸ್ನೇಹಿತೆ

ಘಟನೆಯ ಮಾಹಿತಿ ಪಡೆದ ಪೊಲೀಸರು ಪ್ರಾಥಮಿಕ ಪರಿಶೀಲನೆ ನಡೆಸಿದ್ದರು. ಬಳಿಕ ದಂಪತಿಯ ಸ್ನೇಹಿತೆಯೊಬ್ಬರು ಮಗುವಿನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ತಾಯಿ ಮಗುವಿಗೆ ಆಗಾಗ ಹೊಡೆಯುತ್ತಿದ್ದಳು, ಅದನ್ನು ತಾನು ನೋಡಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಮಗುವಿನ ದೇಹದ ಮೇಲಿತ್ತು ಗಾಯದ ಗುರುತು

ಇದಲ್ಲದೆ, ಮಗುವಿನ ದೇಹದ ಮೇಲೆ ಕೆಲವೆಡೆ ಗಾಯದ ಗುರುತುಗಳು ಪತ್ತೆಯಾಗಿರುವುದರಿಂದ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:16 am, Fri, 17 July 26

Source link

ಮುರ್ಷಿದಾಬಾದ್​ನಲ್ಲಿ ಸ್ಕೂಲ್​ ವ್ಯಾನ್​ಗೆ ಪ್ಯಾಸೆಂಜರ್ ರೈಲು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು, ಐವರಿಗೆ ಗಾಯ – Kannada News | Murshidabad Train Accident: 3 Dead, Students Critically Injured in School Van Crash

ಮುರ್ಷಿದಾಬಾದ್, ಜುಲೈ 17: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತ(Train Accident)ದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೆವೆಲ್ ಕ್ರಾಸಿಂಗ್‌ನಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲೊಂದು ಶಾಲಾ ಮಕ್ಕಳಿದ್ದ ವ್ಯಾನ್​ ಹಾಗೂ ಸೈಕ್ಲಿಸ್ಟ್‌ಗೆ ಜೋರಾಗಿ ಡಿಕ್ಕಿ ಹೊಡೆದಿದ್ದರಿಂದ ಈ ಘೋರ ದುರಂತ ಸಂಭವಿಸಿದೆ.

ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಮತ್ತು ಗೋಬಿಂದಾಪುರ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಶುಕ್ರವಾರ ಬೆಳಗ್ಗೆ ಈ ಅಪಘಾತ ನಡೆದಿದೆ. ನಿಮ್ಟಿತಾ-ಕಟ್ವಾ ಮಾರ್ಗದಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲು ಬರುತ್ತಿದ್ದಾಗ, ಕ್ರಾಸಿಂಗ್ ಗೇಟ್ ತೆರೆದೇ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗೇಟ್ ಇಲ್ಲದ ಕಾರಣ ಶಾಲಾ ವ್ಯಾನ್ ಹಾಗೂ ಸೈಕಲ್ ಸವಾರ ಹಳಿ ದಾಟಲು ಮುಂದಾದಾಗ ವೇಗವಾಗಿ ಬಂದ ರೈಲು ಭೀಕರವಾಗಿ ಡಿಕ್ಕಿ ಹೊಡೆದಿದೆ.

ವಿಡಿಯೋ

ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ಅಪಘಾತದ ರಭಸಕ್ಕೆ ಶಾಲಾ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಹಾಗೂ ಮತ್ತೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಕನಿಷ್ಠ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ತುರ್ತು ಚಿಕಿತ್ಸೆ: ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಕರ್ಣಸುಬರ್ಣ ಬ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ಪರಿಸ್ಥಿತಿ ಗಂಭೀರವಾಗಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.

ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗೇಟ್ ತೆರೆದಿರಲು ರೈಲ್ವೆ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಅಥವಾ ಚಾಲಕನ ಬೇಜವಾಬ್ದಾರಿತನವೇ ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಮಕ್ಕಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

World Emoji Day 2026: ಇಂದು ಎಮೋಜಿ ದಿನ; ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ – Kannada News | World Emoji Day 2026: What are the history and significance of World Emoji Day

ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದೆ. ಹೀಗಾಗಿ ಹೆಚ್ಚಿನವರು ಫೇಸ್​ಬುಕ್, ವಾಟ್ಸ್ಆ್ಯಪ್ (WhatsApp), ಇನ್​ಸ್ಟಾಗ್ರಾಮ್, ಟೆಲಿಗ್ರಾಂಗಳಲ್ಲಿ ತಮ್ಮ ಸಮಯವನ್ನು ಕಳೆಯುತ್ತಾರೆ. ನಾವೆಲ್ಲರೂ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದಕ್ಕಿಂತ ಎಮೋಜಿಗಳ ಮೂಲಕ ಹೇಳುವುದೇ ಹೆಚ್ಚು. ಹೀಗಾಗಿ ಈ ಎಮೋಜಿಗಳಿಗಾಗಿ ಒಂದು ದಿನ ಮೀಸಲಿಡಲಾಗಿದೆ. ಪ್ರತಿ ವರ್ಷ ಜುಲೈ 17 ರಂದು ವಿಶ್ವ ಎಮೋಜಿ ದಿನವನ್ನು (World Emoji Day) ಆಚರಿಸಲಾಗುತ್ತದೆ.

ವಿಶ್ವ ಎಮೋಜಿ ದಿನದ ಇತಿಹಾಸವೇನು?

ವಿಶ್ವ ಎಮೋಜಿ ಇತಿಹಾಸದತ್ತ ಕಣ್ಣಾಯಿಸಿದರೆ ಎಮೋಜಿಯನ್ನು ಮೊದಲು ಎಮೋಟಿಕಾನ್ ಎಂದು ಕರೆಯಲಾಗುತ್ತಿತ್ತು. ಆ ನಂತರದಲ್ಲಿ ಎಮೋಜಿಯಾಗಿ ಬದಲಾಯಿತು. ಎಮೋಜಿ ಎಂದರೇ ಚಿತ್ರ ಪದ ಎಂದರ್ಥ. ಎಮೋಜಿಗಳನ್ನು 1999 ರಲ್ಲಿ ಜಪಾನಿನ ಟೆಲಿಕಾಂ ಕಂಪನಿ ಎನ್​ಟಿಟಿ ಡೊಕೊಮೊದಲ್ಲಿ ಕೆಲಸ ಮಾಡುವಾಗ ಶಿಗೆಟಕಾ ಕುರಿಟಾ ಎಂಬುವವರು ಅಭಿವೃದ್ಧಿಪಡಿಸಿದರು. ಆದರೆ ಈ ಎಮೋಜಿಗಳು ಸಿಕ್ಕಾಪಟ್ಟೆ ಜನಪ್ರಿಯವಾದದ್ದು 2010ರಲ್ಲಿ.

ತದನಂತರದಲ್ಲಿಈ ಗೂಗಲ್, ಫೇಸ್ಬುಕ್ ಹಾಗೂ ಟ್ವಿಟರ್​ನಂತಹ ಜಾಗತಿಕ ಬ್ರ್ಯಾಂಡ್​ಗಳು ತಮ್ಮದೇ ಆದ ಎಮೋಜಿಗಳ ಆವೃತ್ತಿಗಳನ್ನು ರಚಿಸಿದವು. ವಿಶ್ವ ಎಮೋಜಿ ದಿನವನ್ನು ಜೆರೆಮಿ ಬರ್ಜ್ ರಚಿಸಿದ ಕಾರಣ ಅವರನ್ನು ಎಮೋಜಿ ಪೀಡಿಯಾದ ಸ್ಥಾಪಕ ಎಂದು ಕರೆಯುತ್ತಾರೆ. 2007 ರಲ್ಲಿ ಐಫೋನ್ ಬಿಡುಗಡೆಯಾದಾಗ, ಇದು ಜಪಾನಿನ ಪ್ರೇಕ್ಷಕರನ್ನು ಗುರಿಯಾಗಿಸಲು ಎಮೋಜಿ ಕೀಬೋರ್ಡ್ ಅನ್ನು ಒಳಗೊಂಡಿತ್ತು. ತದನಂತರದಲ್ಲಿ ಅಮೇರಿಕನ್ ಬಳಕೆದಾರರು ಎಮೋಜಿ ಕೀಬೋರ್ಡ್ ಅನ್ನು ಕಂಡುಕೊಂಡಾಗ ಯಶಸ್ಸು ಸಿಕ್ಕಿತು. ಈ ಹೀಗೆ ಎಮೋಜಿಗಳು ಸಂವಹನದಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿತು.

ಇದನ್ನೂ ಓದಿ: World Snakes Day 2026: ವಿಶ್ವ ಹಾವುಗಳ ದಿನದ ಆಚರಣೆಯ ಹಿಂದಿದೆ ಈ ಉದ್ದೇಶ

ವಿಶ್ವ ಎಮೋಜಿ ದಿನದ ಮಹತ್ವವೇನು?

ವಾಟ್ಸಾಪ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಹಾಗೂ ಟ್ವಿಟರ್ ನಂತಹ ಡಿಜಿಟಲ್ ಪ್ಲಾಟ್ಫಾರ್ಮ್​ಗಳಲ್ಲಿ ಎಮೋಜಿಗಳು ಸಂವಹನವನ್ನು ಸುಲಭಗೊಳಿಸಿದೆ. ಟೆಕ್ ಜಗತ್ತಿನಲ್ಲಿ ಈ ದಿನವು ಮಹತ್ವದ್ದಾಗಿದೆ. ದಿನನಿತ್ಯದ ಸಂಭಾಷಣೆಗಳಲ್ಲಿ ಎಮೋಜಿಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

First Ashadha Puje at Chamundeshwari Temple Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ – Kannada News | Chamundeshwari Temple Ashadha Friday Live: Special Puja Rituals and KSRTC Bus Services

ಮೈಸೂರು, ಜುಲೈ 17: ಇಂದು ಆಶಾಢ ಮಾಸದ ಮೊದಲ ಶುಕ್ರವಾರವಾದ್ದರಿಂದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿದೆ. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ದೇವಿಯ ವಿಶೇಷ ಪೂಜೆಯ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘3 ಇಡಿಯಟ್ಸ್’ಗೂ ಸೋನಮ್ ವಾಂಗ್‌ಚುಕ್ ಸಂಬಂಧವಿಲ್ಲ: ಆಮೀರ್ ಖಾನ್ – Kannada News | Aamir Khan says 3 Idiots movie is not based on Sonam Wangchuk

ಆಮಿರ್ ಖಾನ್ (Aamir Khan), ಮಾಧವನ್, ಶರ್ಮನ್ ಜೋಶಿ, ಕರೀನಾ ನಟಿಸಿ ರಾಜ್​​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದ ‘3 ಇಡಿಯಟ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ. ಅದ್ಭುತವಾದ ಸಂದೇಶ ಹೊಂದಿದ್ದ ಆ ಸಿನಿಮಾ ಭಾರತೀಯ ಚಿತ್ರರಂಗದ ಕಲ್ಟ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾ, ಭಾರತದ ಹೆಮ್ಮೆಯ ವಿಜ್ಞಾನಿ ಮತ್ತು ಈಗ ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಂ ವಾಂಗ್ಚುಕ್ ಅವರ ಜೀವನ ಆಧರಿಸಿದೆ ಎನ್ನಲಾಗಿತ್ತು. ಈ ಕುರಿತು ಹಲವಾರು ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಆದರೆ ಇದೀಗ ‘3 ಇಡಿಯಟ್ಸ್’ ಸಿನಿಮಾದ ನಾಯಕ ಆಮಿರ್ ಖಾನ್, ಆ ಸಿನಿಮಾಕ್ಕೂ ಸೋನಂ ವಾಂಗ್ಚುಕ್ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

‘3 ಇಡಿಯಟ್ಸ್’ ಸಿನಿಮಾನಲ್ಲಿ ಸೈಲೆನ್ಸರ್ ಪಾತ್ರದಲ್ಲಿ ನಟಿಸಿದ್ದ ಓಮಿ ವೈದ್ಯ, ಸೋನಂ ವಾಂಗ್ಚುಕ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ‘ಅವರ ಜೀವನ ಆಧರಿಸಿದ್ದ ‘3 ಇಡಿಯಟ್ಸ್’ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ನಟರು ಸಹ ಈ ಬಗ್ಗೆ ಮಾತನಾಡಬೇಕು’ ಎಂದಿದ್ದರು. ಇದೇ ಕಾರಣಕ್ಕೆ, ಲಂಡನ್​​ನ ಇಂಡಿಯನ್ ಫಿಲಂ ಫೆಸ್ಟಿವಲ್​​​ನ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ, ನಿರ್ಮಾಪಕ ಆಮಿರ್ ಖಾನ್ ಅವರಿಗೆ ‘3 ಇಡಿಯಟ್ಸ್’ ಸಿನಿಮಾ ಬಗ್ಗೆ ಮತ್ತು ಸೋನಂ ವಾಂಗ್ಚುಕ್ ಅವರ ಬಗ್ಗೆ ಪ್ರಶ್ನೆ ಎದುರಾಯ್ತು.

ಲಂಡನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನ ಸಮಾರೋಪ ಸಮಾರಂಭದಲ್ಲಿ ‘ಲಗಾನ್’ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ನಟ ಆಮಿರ್ ಖಾನ್ ಭಾಗಿ ಆಗಿದ್ದರು. ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರಿಗೆ ಸೋನಮ್ ವಾಂಗ್‌ಚುಕ್ ಅವರ ಕುರಿತು ಪ್ರಶ್ನೆಯನ್ನು ಕೇಳಲಾಯಿತು. ‘3 ಇಡಿಯಟ್ಸ್’ ಸಿನಿಮಾದ ರಾಂಚೋ ಪಾತ್ರಕ್ಕೆ ಸೋನಮ್ ವಾಂಗ್‌ಚುಕ್ ಅವರ ಜೀವನ ಸ್ಫೂರ್ತಿ ಎಂಬುದು ವ್ಯಾಪಕವಾಗಿ ನಂಬಲ್ಪಟ್ಟಿದೆ, ಆದರೆ ಅದನ್ನು ಅಲ್ಲಗಳೆದ ಆಮೀರ್, ‘ಇಲ್ಲ, ಅದು ನಿಜವಲ್ಲ. ಅದು ತಪ್ಪು ಕಲ್ಪನೆ. ನಾವು ‘3 ಇಡಿಯಟ್ಸ್’ ಚಿತ್ರವನ್ನು ಮಾಡುತ್ತಿದ್ದಾಗ ಸೋನಮ್ ಅವರ ಬಗ್ಗೆ ನಮಗೆ ತಿಳಿದಿರಲಿಲ್ಲ. ನಾನು ಇತ್ತೀಚೆಗೆ ಚತುರ್ (ನಟ ಓಮಿ ವೈದ್ಯ) ಅವರ ವಿಡಿಯೋವನ್ನು ನೋಡಿದೆ, ಅವರು ಕೂಡ ಹಾಗೆಯೇ ಹೇಳಿದ್ದಾರೆ. ಆದರೆ ಅವರದ್ದು ತಪ್ಪು ಮಾಹಿತಿ. ರಾಜು ಅಥವಾ ಅಭಿಜತ್ (ರಾಜಕುಮಾರ್ ಹಿರಾನಿ ಅಥವಾ ಅಭಿಜತ್ ಜೋಶಿ – ‘3 ಇಡಿಯಟ್ಸ್’ ಸಿನಿಮಾದ ಬರಹಗಾರರು) ಯಾರಿಗೂ ಸೋನಮ್ ಅವರ ಬಗ್ಗೆ ತಿಳಿದಿರಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ:ಆಮಿರ್ ಖಾನ್‌ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ

ಮುಂದುವರೆದು ಮಾತನಾಡಿದ ಆಮಿರ್ ಖಾನ್, ‘ಸೋನಮ್ ಅವರು ಮಾಡುತ್ತಿರುವ ಕೆಲಸ ಒಳ್ಳೆಯದು. ಅವರನ್ನು ಗೌರವಿಸಲು ಅವರು ‘3 ಇಡಿಯಟ್ಸ್’ ಚಿತ್ರದ ಪಾತ್ರದ ಮೇಲೆ ಆಧಾರಿತರಾಗಿರಬೇಕು ಎಂದೇನೂ ಇಲ್ಲ. ವಾಸ್ತವಿಕ ದೃಷ್ಟಿಕೋನದಿಂದ ನಾನು ಇದನ್ನು ಹಂಚಿಕೊಳ್ಳಲು ಬಯಸುತ್ತೇನೆ. ನಾವೆಲ್ಲರೂ ಅವರ ಆರೋಗ್ಯ ಮತ್ತು ಜೀವನದ ಬಗ್ಗೆ ತುಂಬಾ ಕಳವಳ ಹೊಂದಿದ್ದೇವೆ. ಎಲ್ಲವೂ ಸುಖಾಂತ್ಯವಾಗಬೇಕೆಂದು ನಾವು ಆಶಿಸುತ್ತೇವೆ. ಅವರೆಲ್ಲರೂ (ಸೋನಂ) ಉಪವಾಸವನ್ನು ಕೈಬಿಡುತ್ತಾರೆ ಎಂದು ನಾವೆಲ್ಲರೂ ಆಶಿಸುತ್ತಿದ್ದೇವೆ’ ಎಂದು ಅಮೀರ್ ಹೇಳಿದರು.

‘3 ಇಡಿಯಟ್ಸ್’ ಚಿತ್ರದಲ್ಲಿ ಚತುರ್ ರಾಮಲಿಂಗಂ ಪಾತ್ರದಲ್ಲಿ ನಟಿಸಿದ್ದ ಓಮಿ ವೈದ್ಯ ಅವರು ಸೋನಮ್ ವಾಂಗ್‌ಚುಕ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಅಮೀರ್ ಖಾನ್ ಅವರ ಪಾತ್ರ ಫುನ್ಸುಖ್ ವಾಂಗ್ಡು ಸೋನಮ್ ವಾಂಗ್‌ಚುಕ್ ಅವರ ಜೀವನದಿಂದ ಸ್ಫೂರ್ತಿ ಪಡೆದಿದೆ ಎಂದು ಓಮಿ ನೆನಪಿಸಿದ್ದರು ಮತ್ತು ಅವರ ಆರೋಗ್ಯದ ಕಡೆಗೆ ಗಮನ ಹರಿಸುವಂತೆ ಎಲ್ಲರಿಗೂ ಒತ್ತಾಯಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ‘ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ’; NEET UG ಟಾಪರ್ ಆರ್ಯನ್ ಗುಪ್ತಾ ಯಶಸ್ಸಿನ ಗುಟ್ಟು – Kannada News | NEET UG 2026 AIR 1: Aryan Gupta’s Success Story, 715 Marks and Oncologist Dream

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ‘ನೀಟ್ ಯುಜಿ 2026’ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ 720ಕ್ಕೆ 715 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR 1) ಸಾಧಿಸಿರುವ ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತಾ ತಮ್ಮ ಯಶಸ್ಸಿನ ಬಗ್ಗೆ PTI ಜೊತೆ ಹಂಚಿಕೊಂಡಿದ್ದಾರೆ. “ನನ್ನ ತಂದೆ ಮತ್ತು ತಾಯಿ ಇಬ್ಬರೂ ವೈದ್ಯರಾಗಿದ್ದಾರೆ. ನಾನು ಈ ಸಾಧನೆಗಾಗಿ ದಿನಕ್ಕೆ 16 ರಿಂದ 17 ಗಂಟೆಗಳ ಕಾಲ ಅತ್ಯಂತ ಕಷ್ಟಪಟ್ಟು ಅಭ್ಯಾಸ ಮಾಡುತ್ತಿದ್ದೆ, ಕೆಲವೊಮ್ಮೆ ಸರಿಯಾಗಿ ನಿದ್ದೆಯೂ ಇರುತ್ತಿರಲಿಲ್ಲ. ಆದರೆ ಈಗ ಸಿಕ್ಕಿರುವ ಈ ಯಶಸ್ಸು ಒಂದು ಸುಂದರ ಕನಸಿನಂತೆ ಅನಿಸುತ್ತಿದೆ ಮತ್ತು ಮನೆಯಲ್ಲಿ ಎಲ್ಲರೂ ತುಂಬಾ ಸಂತೋಷವಾಗಿದ್ದಾರೆ. ನಾನು ಮೂರನೇ ತರಗತಿಯಲ್ಲಿದ್ದಾಗ ನನ್ನ ಅಜ್ಜಿ ಕ್ಯಾನ್ಸರ್ ಕಾಯಿಲೆಯಿಂದ ನಿಧನರಾದರು, ಆ ಸಮಯದಲ್ಲಿಯೇ ನಾನು ಭವಿಷ್ಯದಲ್ಲಿ ಒಬ್ಬ ಕ್ಯಾನ್ಸರ್ ತಜ್ಞ (Oncologist) ಆಗಬೇಕೆಂದು ಪ್ರತಿಜ್ಞೆ ಮಾಡಿದ್ದೆ. ಜೀವನದಲ್ಲಿ ಮುಂದೆ ಮಾಡಬೇಕಾದದ್ದು ಇನ್ನು ತುಂಬಾ ಇದೆ, ಆದರೆ ಸದ್ಯಕ್ಕೆ ಈ ಯಶಸ್ಸು ನನಗೆ ಅತ್ಯಂತ ಹೆಮ್ಮೆ ಮತ್ತು ಸಂತೋಷ ತಂದಿದೆ” ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಝಗಮಗಿಸಲಿದೆ ವೀಕೆಂಡ್! ಭಾನುವಾರ ಮುಂಜಾನೆ 5 ರ ವರೆಗೂ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಸಾಧ್ಯತೆ – Kannada News | Bengaluru Weekend Buzz: Pubs, Bars and Restaurants Likely to Stay Open Till 5 AM for Football World Cup Screenings

ಬೆಂಗಳೂರು, ಜುಲೈ 17: ಈ ವಾರಾಂತ್ಯ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಫುಟ್‌ಬಾಲ್ ಅಭಿಮಾನಿಗಳ ಸಂಭ್ರಮ ಜೋರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಫುಟ್‌ಬಾಲ್ ವಿಶ್ವಕಪ್‌ನ ಮೂರನೇ ಸ್ಥಾನಕ್ಕಾಗಿ ನಡೆಯಲಿರುವ ಫ್ರಾನ್ಸ್–ಇಂಗ್ಲೆಂಡ್ ಪಂದ್ಯ ಹಾಗೂ ಫೈನಲ್ ಪಂದ್ಯವನ್ನು ಅಭಿಮಾನಿಗಳು ಒಟ್ಟಾಗಿ ವೀಕ್ಷಿಸಲು ನಗರದ ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ವಿಶೇಷ ಸಿದ್ಧತೆ ಆರಂಭಿಸಿವೆ. ಪಂದ್ಯಗಳ ಸಮಯ ಮುಂಜಾನೆ ಇರುವುದರಿಂದ, ಭಾನುವಾರ ಬೆಳಗ್ಗೆ 5 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡುವಂತೆ ಉದ್ಯಮಿಗಳು ಸರ್ಕಾರ ಹಾಗೂ ಬೆಂಗಳೂರು ನಗರ ಪೊಲೀಸರನ್ನು ಕೋರಿದ್ದಾರೆ. ಈಗಾಗಲೇ ಅಬಕಾರಿ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿದ್ದು, ಪೊಲೀಸ್ ಇಲಾಖೆಯ ಅಂತಿಮ ಅನುಮತಿಗಾಗಿ ಕಾಯಲಾಗುತ್ತಿದೆ.

ಈಗಾಗಲೇ ತಡರಾತ್ರಿ ವರೆಗೆ ಪಬ್, ಬಾರ್ ತೆರೆಯಲು ಅನುಮತಿ

ಜುಲೈ 14 ಮತ್ತು 15ರಂದು ಫುಟ್​ಬಾಲ್ ವಿಶ್ವಕಪ್ ಸೆಮಿಫೈನಲ್ ಪಂದ್ಯಗಳ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಬೆಂಗಳೂರು ನಗರ ಪೊಲೀಸರು ಮಧ್ಯರಾತ್ರಿಯ ನಂತರವೂ ರೆಸ್ಟೋರೆಂಟ್‌ಗಳು ಮತ್ತು ಆಹಾರ ಮಳಿಗೆಗಳು ಕಾರ್ಯನಿರ್ವಹಿಸಲು ಅವಕಾಶ ನೀಡಿದ್ದರು. ಬಳಿಕ ಅಬಕಾರಿ ಇಲಾಖೆಯೂ ಅನುಮತಿ ನೀಡಿದ ಪರಿಣಾಮ ಹಲವು ಪಬ್ ಹಾಗೂ ಬಾರ್‌ಗಳಲ್ಲಿ ಅಭಿಮಾನಿಗಳು ಪಂದ್ಯ ವೀಕ್ಷಿಸಿ ಸಂಭ್ರಮಿಸಿದ್ದರು. ಈ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ, ಇದೀಗ ವಾರಾಂತ್ಯದ ಪಂದ್ಯಗಳಿಗೂ ಇದೇ ಮಾದರಿಯ ವ್ಯವಸ್ಥೆ ಮುಂದುವರಿಸಲು ಉದ್ಯಮಿಗಳು ಮನವಿ ಮಾಡಿದ್ದಾರೆ.

ಸಿಬ್ಬಂದಿಗೆ ವಿಶೇಷ ವ್ಯವಸ್ಥೆ

ರಾತ್ರಿ ತಡವರೆಗೆ ಕಾರ್ಯಾಚರಣೆ ನಡೆಸಲು ರೆಸ್ಟೋರೆಂಟ್ ಹಾಗೂ ಪಬ್‌ಗಳು ಸಿಬ್ಬಂದಿಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಂಡಿವೆ. ಹಂತ ಹಂತವಾಗಿ ಶಿಫ್ಟ್‌ಗಳನ್ನು ರೂಪಿಸುವುದು, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ, ಹೆಚ್ಚುವರಿ ಭದ್ರತಾ ಸಿಬ್ಬಂದಿ, ಸಿಸಿಟಿವಿ ನಿಗಾ, ಒಳಾಂಗಣದಲ್ಲಿ ಮಾತ್ರ ಪಂದ್ಯ ಪ್ರದರ್ಶನ ಹಾಗೂ ಬೆಟ್ಟಿಂಗ್‌ಗೆ ಸಂಪೂರ್ಣ ನಿರ್ಬಂಧ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅಭಿಮಾನಿಗಳಲ್ಲಿ ಹೆಚ್ಚಿದ ಉತ್ಸಾಹ

ಸೆಮಿಫೈನಲ್ ಪಂದ್ಯಗಳ ವೇಳೆ ನಗರದ ವಿವಿಧ ಭಾಗಗಳಲ್ಲಿ ನೂರಾರು ಫುಟ್‌ಬಾಲ್ ಅಭಿಮಾನಿಗಳು ಸೇರಿ ಪಂದ್ಯ ವೀಕ್ಷಿಸಿ ಸಂಭ್ರಮಿಸಿದ್ದರು. ಇದೀಗ ಮೂರನೇ ಸ್ಥಾನಕ್ಕಾಗಿ ನಡೆಯಲಿರುವ ಪಂದ್ಯ ಮತ್ತು ಫೈನಲ್‌ಗೂ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರಿನ ಜನರಿಗೆ ಗುಡ್​​​ ನ್ಯೂಸ್; ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ

ಒಟ್ಟಾರೆ, ಈ ವಾರಾಂತ್ಯ ಬೆಂಗಳೂರಿನಲ್ಲಿ ಕ್ರೀಡಾ ಸಂಭ್ರಮದ ಜೊತೆಗೆ ನೈಟ್‌ಲೈಫ್ ಕೂಡ ಝಗಮಗಿಸಲಿದ್ದು, ಪಬ್‌, ಬಾರ್‌, ರೆಸ್ಟೋರೆಂಟ್‌ಗಳಲ್ಲಿ ಹಬ್ಬದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯಿಂದ ಅಂತಿಮ ಅನುಮತಿ ದೊರೆತರೆ, ಭಾನುವಾರ ಮುಂಜಾನೆ 5 ಗಂಟೆಯವರೆಗೆ ನಗರದಲ್ಲಿ ಫುಟ್‌ಬಾಲ್ ಫೀವರ್ ಮುಂದುವರಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:34 am, Fri, 17 July 26

Source link

ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ – Kannada News | US Escalates Attacks on Irans Infrastructure, UAE Joins Conflict and Red Sea Threat Looms

ಟೆಹ್ರಾನ್, ಜುಲೈ 17: ಅಮೆರಿಕ ಇರಾನ್ ಮೇಲೆ ತನ್ನ ಭೀಕರ ದಾಳಿಗಳನ್ನು ಮುಂದುವರೆಸಿದೆ. ಆದರೆ ಮೊದಲ ಬಾರಿಗೆ ಇರಾನ್ ಮೇಲೆ ಯುಎಇ ದಾಳಿ ನಡೆಸಿ ಅಚ್ಚರಿ ಮೂಡಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಯಾನಕ ದಾಳಿಗಳನ್ನು ನಡೆಸಿದೆ. ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ, ಇರಾನಿಶಾಹರ್ ವಿಮಾನ ನಿಲ್ದಾಣದಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿವೆ. ರೈಲ್ವೆ ಸೇತುವೆಗಳು ಮತ್ತು ರಸ್ತೆಗಳು ಸೇರಿದಂತೆ ಇರಾನ್‌ನ ಮೂಲಸೌಕರ್ಯಗಳನ್ನು ಅಮೆರಿಕ ಪ್ರಮುಖ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಿಂದ ರೈಲ್ವೆ ಮತ್ತು ರಸ್ತೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ.

ಇದೇ ವೇಳೆ, ಮಧ್ಯಪ್ರಾಚ್ಯ ಯುದ್ಧದಲ್ಲಿ ಅನಿರೀಕ್ಷಿತ ತಿರುವು ಪಡೆದಿದ್ದು, ಯುಎಇ ಮೊದಲ ಬಾರಿಗೆ ಇರಾನ್ ವಿರುದ್ಧ ಯುದ್ಧಕ್ಕಿಳಿದಿದೆ. ಅಮೆರಿಕ ನಿರ್ಮಿತ ಡ್ರೋನ್‌ಗಳಿಂದ ಯುಎಇ ದಾಳಿ ನಡೆಸಿದ್ದು, ಬಂದರ್ ಅಬ್ಬಾಸ್ ಬಂದರನ್ನು ಗುರಿಯಾಗಿಸಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ಯುಎಇಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಅಮೆರಿಕದ ನಿರಂತರ ದಾಳಿಗಳಿಂದ ಕೆಂಡಾಮಂಡಲವಾಗಿರುವ ಇರಾನ್, ಹಾರ್ಮುಸ್ ಬಳಿ ಕೆಂಪು ಸಮುದ್ರವನ್ನು ಟಾರ್ಗೆಟ್ ಮಾಡಿದೆ.

ಕೆಂಪು ಸಮುದ್ರವನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದು, ಇದು ಜಾಗತಿಕ ಇಂಧನ ಪೂರೈಕೆಗೆ ಅಡ್ಡಿಯಾಗುವ ಆತಂಕವನ್ನು ಹೆಚ್ಚಿಸಿದೆ. ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ಅಮೆರಿಕದ ಮೂಲಸೌಕರ್ಯ ಮೇಲಿನ ದಾಳಿಯನ್ನು ಯುದ್ಧಾಪರಾಧ ಮತ್ತು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version