Headlines

ಪದೇ ಪದೇ ಗ್ಯಾಸ್‌, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ – Kannada News | Top Health Benefits Of Mint Leaves You Should Know

ಇತ್ತೀಚಿನ ದಿನಗಳಲ್ಲಿ ಊಟ ಸರಿಯಾಗಿ ಮಾಡದಿರುವುದು, ಜಂಕ್ ಫುಡ್‌, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡುವುದು ಗ್ಯಾಸ್‌, ಅಸಿಡಿಟಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ರೀತಿಯಾದಾಗ ಅಡುಗೆ ಮನೆಯಲ್ಲೇ ಸುಲಭವಾಗಿ ಸಿಗುವ ಪುದೀನಾ (Mint) ಪರಿಹಾರ ನೀಡಬಹುದು. ಇದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆಯುರ್ವೇದದಲ್ಲೂ ಶತಮಾನಗಳಿಂದ ಬಳಸಲಾಗುತ್ತಿರುವ ಪುದೀನಾ ಕೇವಲ ಆಹಾರದ ರುಚಿ ಹೆಚ್ಚಿಸುವುದಲ್ಲ, ಜೀರ್ಣಕ್ರಿಯೆ ಸುಧಾರಿಸಲು, ಬಾಯಿಯ ಆರೋಗ್ಯ ಕಾಪಾಡಲು ಹಾಗೂ ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡಲು…

Read More

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ – Kannada News | 141 Year Old Harawada Government School in Ankola on Verge of Collapse, Parents Fear for Students’ Safety

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿರುವ 141 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಶಾಲೆ ಯಾವಾಗ ಬೇಕಾದರೂ ಕುಸಿದು ಬೀಳುವ ಅಪಾಯದಲ್ಲಿದ್ದು, ಮಕ್ಕಳು ಪ್ರತಿದಿನ ಜೀವ ಭಯದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮೇಲ್ಚಾವಣಿ ಗೆದ್ದಲು ಹಿಡಿದಿದ್ದು, ಮಣ್ಣಿನ ಗೋಡೆಗಳು ಬೀಳುವ ಹಂತದಲ್ಲಿವೆ. ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ಸೋರಿ, ಹುಳಗಳು ಕಾಣಿಸಿಕೊಳ್ಳುತ್ತವೆ. ಇದು ವಿದ್ಯಾರ್ಥಿಗಳ ಸುರಕ್ಷತೆಗೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ….

Read More

Video: ನಾಗಲಕ್ಷ್ಮಿ ಅವತಾರದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಲಂಕಾರ ಹೇಗಿದೆ ನೋಡಿ – Kannada News | Mysore Chamundeshwari Temple Shines on Ashadas First Friday with Nagalakshmi Alankara

ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಮತ್ತು ಆಚರಣೆಗಳು ಜರುಗಿದವು. ಈ ಪುಣ್ಯ ದಿನದಂದು ತಾಯಿ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರವನ್ನು ಮಾಡಲಾಗಿತ್ತು. ಇದರಿಂದ ಉತ್ಸವಮೂರ್ತಿಯು ಹಸಿರು ಮತ್ತು ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿತು. ದೇವಸ್ಥಾನದ ಗರ್ಭಗುಡಿ, ಗೋಪುರ ಮತ್ತು ದೇವಾಲಯದ ಆವರಣವನ್ನು ವಿವಿಧ ಬಗೆಯ ಸುಂದರ ಹೂಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ಆಷಾಢ ಶುಕ್ರವಾರದ ಮಹತ್ವದಿಂದಾಗಿ, ಸಾವಿರಾರು ಭಕ್ತರು ಬೆಳಗಿನಿಂದಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ದೇವಿಯ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ – Kannada News | Karnataka Cabinet Expansion: Rahul Gandhi Holds Key Meetings with DK Shivakumar, Siddaramaiah and others

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್ ಸಭೆImage Credit source: @kcvenugopalmp ನವದೆಹಲಿ, ಜುಲೈ 17: ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಒಂದೂವರೆ ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ (Cabinet Expansion) ಆಗದಿರುವುದು ಕಾಂಗ್ರೆಸ್ (Congress) ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಖಾಲಿ ಇರುವ 20 ಸಚಿವ ಸ್ಥಾನಗಳಿಗೆ 50ಕ್ಕೂ ಹೆಚ್ಚು ಶಾಸಕರು ಮತ್ತು…

Read More

ಬಂಗಾಳದ ರಥಯಾತ್ರೆಯಲ್ಲಿ ದುರಂತ: ವಿದ್ಯುತ್ ತಂತಿಗೆ ತಗುಲಿದ ರಥ, 15 ಭಕ್ತರಿಗೆ ವಿದ್ಯುತ್ ಆಘಾತ, ಹಲವರ ಸ್ಥಿತಿ ಗಂಭೀರ – Kannada News | West Bengal Rath Yatra Tragedy: 15 Electrocuted in Nandigram, Chariot Hits Power Line

ನಂದಿಗ್ರಾಮ, ಜುಲೈ 17: ದೇಶಾದ್ಯಂತ ಜಗನ್ನಾಥ ರಥಯಾತ್ರೆ(Jagannath Rath Yatra) ಆಚರಿಸಲಾಗುತ್ತಿದೆ, ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಗುರುವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಥಯಾತ್ರೆ ಮೆರವಣಿಗೆ ಸಾಗುತ್ತಿದ್ದಾಗ ಭಾರಿ ಗಾತ್ರದ ರಥದ ಮೇಲ್ಭಾಗವು ರಸ್ತೆಯ ಮೇಲಿದ್ದ 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ರಥದ ಹಗ್ಗ ಎಳೆಯುತ್ತಿದ್ದ ಕನಿಷ್ಠ 15 ಭಕ್ತರು ತೀವ್ರವಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ. ನಂದಿಗ್ರಾಮದ ತೆಖಲಿ ರಥಯಾತ್ರೆ ಉತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರ ಪೈಕಿ 10…

Read More

TV9 Kannada News Live: ಎಲ್ಲೆಡೆ ಬರಗಾಲದ ತೀವ್ರತೆ, ಕಂಗಾಲಾದ ಅನ್ನದಾತ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 17 July 2026 CM DK Shivakumar, Karnataka Cabinet Expansion, Weather, Rain, SIR Latest Updates in Kannada

Breaking News Today Live Updates in Kannada: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕರಾವೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ಕೇವಲ ಕುಡಿಯುವ ನೀರು ಬಿಡುಗಡೆ ಮಾಡಿದೆ. ಇತ್ತ ಯಾದಗಿರಿಯಲ್ಲಿ ಒಣಗುತ್ತಿರುವ ಬೆಳೆಗಳು, ಚಿತ್ರದುರ್ಗದಲ್ಲಿ ಬತ್ತಿದ ಬೋರ್‌ವೆಲ್‌ಗಳು ಹಾಗೂ ವಿಜಯನಗರದ ಮಳೆ ಅಭಾವ ರೈತರನ್ನು ಕಂಗಾಲುಗೊಳಿಸಿದೆ. ಬರ ಪರಿಹಾರಕ್ಕಾಗಿ ಡಿಸಿಎಂ ಪರಮೇಶ್ವರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಇನ್ನು ಕೊಪ್ಪಳದಲ್ಲಿ ಮಳೆಗಾಗಿ ಹರಕೆ ಹೊತ್ತ…

Read More

ಟಿಕೆಟ್ ಬೆಲೆ ನಿರ್ಧರಿಸುವ ಹಕ್ಕು ನಿರ್ಮಾಪಕರಿಗೆ: ತೆಲುಗು ರಾಜ್ಯಗಳಲ್ಲಿ ಹೊಸ ಬೇಡಿಕೆ – Kannada News | Flexible pricing for movie ticket in Andhra and Telangana

ಸಿನಿಮಾ (Cinema) ಟಿಕೆಟ್ ಬೆಲೆ, ಶೋ ಟೈಮಿಂಗ್ಸ್, ಶೋ ಸಂಖ್ಯೆ, ಲಾಭ ಹಂಚಿಕೆ ಇನ್ನಿತರೆಗಳ ಕುರಿತಾಗಿ ಆಂಧ್ರ ಮತ್ತು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತಿಂಗಳುಗಳಿಂದಲೂ ಚರ್ಚೆ, ವಾಗ್​ವಾದ ನಡೆಯುತ್ತಲೇ ಇದೆ. ಈಗ ಪ್ರತಿ ಬಾರಿ ಸಿನಿಮಾ ಬಿಡುಗಡೆ ಆಗುವಾಗಲೂ ನಿರ್ಮಾಪಕರು, ವಿತರಕರು ಸರ್ಕಾರ ಬಳಿ ಅರ್ಜಿ ಹಾಕಿಕೊಳ್ಳಬೇಕಿದೆ. ಸರ್ಕಾರಗಳು ಆದೇಶದಂತೆ ನಿಗದಿತ ದಿನಗಳ ಮಟ್ಟಿಗೆ ಟಿಕೆಟ್ ಬೆಲೆ ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಈ ಅವಕಾಶ ಎಲ್ಲ ಸಿನಿಮಾಗಳಿಗೂ ಇರುವುದಿಲ್ಲ ಬದಲಿಗೆ ಕೆಲ ದೊಡ್ಡ ಸಿನಿಮಾಗಳಿಗೆ ಮಾತ್ರವೇ ಇದರ…

Read More

ಶಾಲೆಗಳಲ್ಲಿ ದೈಹಿಕ ಶಿಕ್ಷೆಗೆ ಸಂಪೂರ್ಣ ಬ್ರೇಕ್? ಕಟ್ಟುನಿಟ್ಟಿನ ಆದೇಶ ಹೊರಡಿಸಲು ಶಿಕ್ಷಣ ಇಲಾಖೆಗೆ ತಜ್ಞರ ಒತ್ತಾಯ – Kannada News | Ban Corporal Punishment in Karnataka Schools: Experts Urge Education Department to Issue Strict Guidelines

ಬೆಂಗಳೂರು, ಜುಲೈ 17: ಕರ್ನಾಟಕದ (Karnataka) ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೈಹಿಕ ಶಿಕ್ಷೆ ಮತ್ತು ಮಾನಸಿಕ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆರೋಪಗಳು ಕೇಳಿಬಂದಿದ್ದು, ಇದರ ತಡೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಒತ್ತಾಯ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೊಸುಂಬೆ ಅವರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು, ಶಾಲೆಗಳಲ್ಲಿ ಯಾವುದೇ ರೀತಿಯ ದೈಹಿಕ ಶಿಕ್ಷೆ, ಅವಮಾನಕಾರಿ ಶಿಕ್ಷೆ ಅಥವಾ ಮಾನಸಿಕ ಕಿರುಕುಳವನ್ನು ಸಂಪೂರ್ಣವಾಗಿ…

Read More

ಡೊನಾಲ್ಡ್​ ಟ್ರಂಪ್ ಕೊಂದವರಿಗೆ 84 ಕೋಟಿ ರೂ. ಕೊಡುತ್ತೇವೆ ಎಂದು ಬಹುಮಾನ ಘೋಷಿಸಿದ ಇರಾಕಿ ಉಗ್ರ ಸಂಘಟನೆ – Kannada News | Iraqi Militant Group Offers 10M Dollar Bounty for Donald Trump Assassination Amid US Iran Tensions

ಇರಾಕ್, ಜುಲೈ 17: ಅಮೆರಿಕ ಮತ್ತು ಮಧ್ಯಪ್ರಾಚ್ಯದ ನಡುವಿನ ಯುದ್ಧದ ಜ್ಚಾಲೆಗಳು ಈಗ ಅತ್ಯಂತ ವಿಕೋಪಕ್ಕೆ ತಿರುಗಿದೆ. ಇರಾಕ್(Iraq)​ನಲ್ಲಿ ಸಕ್ರಿಯವಾಗಿರುವ ಇರಾನ್ ಬೆಂಬಲಿತ ಪ್ರಬಲ ಸಶಸ್ತ್ರ ಸಂಘಟನೆ ‘ಇಸ್ಲಾಮಿಕ್ ರೆಸಿಸ್ಟೆನ್ಸ್’ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂದವರಿಗೆ ಬರೋಬ್ಬರಿ 10 ಮಿಲಿಯನ್ ಯುಎಸ್ ಡಾಲರ್ ಅಂದರೆ ಸುಮಾರು 84 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ತಮ್ಮ ಸಂಘಟನೆಯ ಅಧಿಕೃತ ಸಾಮಾಜಿಕ ಮಾಧ್ಯಮ ಮತ್ತು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಬಿಡುಗಡೆ ಮಾಡಿರುವ ಆಘಾತಕಾರಿ ಹೇಳಿಕೆಯಲ್ಲಿ ಇದನ್ನು ಘೋಷಿಸಲಾಗಿದೆ. ಇಸ್ಲಾಮಿಕ್…

Read More

ಜಹೀರ್ ಇಕ್ಬಾಲ್ನ ಪ್ರೀತಿಸಿ ಸಲ್ಮಾನ್ ಖಾನ್ ಎದುರು ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಸೋನಾಕ್ಷಿ ಸಿನ್ಹಾ

ಬಾಲಿವುಡ್ ಜೋಡಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಪ್ರೇಮಕಥೆ ಈಗ ಎಲ್ಲರಿಗೂ ಗೊತ್ತು. ಇತ್ತೀಚೆಗೆ ನೇಹಾ ಧೂಪಿಯಾ ಅವರ ಟಾಕ್ ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ, ತಮ್ಮ ಪ್ರೀತಿಯ ವಿಷಯವನ್ನು ಸಲ್ಮಾನ್ ಖಾನ್ ಹೇಗೆ ಪತ್ತೆಹಚ್ಚಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಸೋನಾಕ್ಷಿ ಮತ್ತು ಜಹೀರ್ ತಮ್ಮ ನಡುವೆ ಏನೂ ಇಲ್ಲ ಎಂದು ಎಷ್ಟು ಸುಳ್ಳು ಹೇಳಿದರೂ ಸಲ್ಮಾನ್ ಖಾನ್ ನಂಬಿರಲಿಲ್ಲ. ಇಬ್ಬರ ನಡುವಿನ ಒಡನಾಟವನ್ನು ನೋಡಿ ಸಲ್ಮಾನ್ ಮೊದಲೇ ಸತ್ಯ ತಿಳಿದುಕೊಂಡಿದ್ದರು. ಬ್ರೇಕಪ್ ಬಗ್ಗೆ ಸಲ್ಮಾನ್ ತಮಾಷೆ…

Read More