Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ.

ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು ಹೇಳಿದ್ದರು, ಎಲ್ಲಾ ಸಂಸದರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಭಾರತದ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಆರ್ಥಿಕ ಸಮೀಕ್ಷೆಯು ದೇಶದ ಆರ್ಥಿಕತೆಯ ಸಮಗ್ರ ಮೌಲ್ಯಮಾಪನವನ್ನು ಪ್ರಸ್ತುತಪಡಿಸುತ್ತದೆ ಮತ್ತು ಬಜೆಟ್ ಮಂಡಿಸುವ ಮೊದಲು ಪ್ರಮುಖ ಮಾಹಿತಿಯನ್ನು ಒದಗಿಸುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಲೋಕಸಭೆಯಲ್ಲಿ 2026 ರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಇದು ಅವರ ಸತತ ಒಂಬತ್ತನೇ ಬಜೆಟ್ ಆಗಿದ್ದು, ಜಾಗತಿಕ ಅನಿಶ್ಚಿತತೆಯ ನಡುವೆ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಸರಿಪಡಿಸುವ ಕ್ರಮಗಳನ್ನು ಇದು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ – Kannada News | Karnataka Crime: Illicit Affair Leads to Brutal Murder of Contractor in Hassan

ಹಾಸನ, ಜ.29: ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಧರ್ಮೇಂದ್ರ ಎಂಬ ವ್ಯಕ್ತಿ ಅಡುಗೆ ಗುತ್ತಿಗೆದಾರ ಆನಂದ್ ಎಂಬುವವರಿಗೆ ಐದಾರು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನಂದ್ ಮೇಲೆ ಧರ್ಮೇಂದ್ರ ದಾಳಿ ಮಾಡಿದ್ದಾರೆ. ಒಂದೇ ಮಹಿಳೆ ಜತೆಗೆ‌ ಆನಂದ್​​ ಮತ್ತು ಧಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ ಆನಂದ್ ಮೇಲೆ ಧರ್ಮೇಂದ್ರ ನಡುವೆ ಜಗಳ ನಡೆದಿತ್ತು. ಇಬ್ಬರು ಕೂಡ ಬಾರ್​​​​ನಲ್ಲಿ ಭೇಟಿಯಾಗಿದ್ದು, ಮಹಿಳೆ ಜತೆಗಿನ ಸಂಬಂಧ ಬಗ್ಗೆ ಮಾತುಕತೆಯಾಗಿದೆ. ಅಲ್ಲಿಂದ ಆನಂದ್​​ ಮನೆಗೆ ಹೋಗಿದ್ದಾರೆ. ಆದರೆ ಮತ್ತೆ ಫೋನ್​​ ಮಾಡಿ ಧರ್ಮೇಂದ್ರ ಕರೆಸಿಕೊಂಡಿದ್ದಾರೆ. ಧರ್ಮೇಂದ್ರ ಫೋನ್ ಮಾಡಿದ ಕಾರಣ ಆನಂದ್​​​​ ವಾಪಸ್ಸು ಬಂದಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ

ಈ ವೇಳೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಾತಿನ ಭರದಲ್ಲಿ ಧಮೇಂದ್ರ ಆನಂದ ಅವರಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಧರ್ಮೇಂದ್ರ ಅವರು ಮಹಿಳೆ ಜೊತೆ ಕಳೆದ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ಇದರ ನಡುವೆ ಮಹಿಳೆ ಆನಂದ ಜತೆಗೂ ಸಂಬಂಧ ಹೊಂದಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆನಂದ ಹಾಗೂ ಧರ್ಮೇಂದ್ರ ನಡುವೆ ಆಗ್ಗಾಗೆ ಜಗಳ ನಡೆಯುತ್ತಿತ್ತು. ನೆನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಧರ್ಮೇಂದ್ರ ಆನಂದ್​​ ಅವರನ್ನು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಧಮೇಂದ್ರ ಅಲ್ಲಿ ಪರಾರಿಯಾಗಿದ್ದಾನೆ. ಇದೀಗ ಹಾಸನ ನಗರದ ಕೆ.ಆರ್.ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ತೀವ್ರ ರಕ್ತಸ್ರಾವದಿಂದ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:02 am, Thu, 29 January 26

Source link

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ – Kannada News | Driver Killed After Vehicle Catches Fire on National Highway in Andhra Pradesh

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್ – Kannada News | Mohammad Kaif Calls Out Pakistan’s World Cup Boycott Drama

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿಯಲಿದೆಯಾ? ಈ ಕುತೂಹಲಕಾರಿ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಅಲ್ಲದೆ ಈ ಪ್ರಶ್ನೆಗೆ ಉತ್ತರ ಕೂಡ ಸಿಗುವುದಿಲ್ಲ. ಏಕೆಂದರೆ ಇವೆಲ್ಲವೂ ಪಾಕಿಸ್ತಾನದ ನಾಟಕ ಅಷ್ಟೇ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್.

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್​ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆಯೊಡ್ಡುತ್ತಿದೆ. ಆದರೆ ಅವರು ಹಾಗೆ ಮಾಡುವುದಿಲ್ಲ. ಏಕೆಂದರೆ ಇದೆಲ್ಲಾ ಪಾಕಿಸ್ತಾನದ ನಾಟಕ. ಈ ರೀತಿ ಹೇಳಿಕೆ ನೀಡುವ ಮೂಲಕ ಅವರು ಪ್ರಚಾರಗಿಟ್ಟಿಸಿಕೊಳ್ಳುತ್ತಿದ್ದಾರೆ ಅಷ್ಟೇ. ನೀವೇ ಕಾದು ನೋಡಿ ಪಾಕಿಸ್ತಾನ್ ಟಿ20 ವಿಶ್ವಕಪ್ ಆಡುತ್ತೆ ಎಂದು ಕೈಫ್ ಹೇಳಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯಲಿದೆ. ಈಗ ಅವರು ಸ್ವಲ್ಪ ಸಹಾನುಭೂತಿ ಪಡೆಯಲು ಬಾಂಗ್ಲಾದೇಶವನ್ನು ಬೆಂಬಲಿಸುವ ನಾಟಕ ಮಾಡುತ್ತಿದ್ದಾರೆ. ಬೇರೇನೂ ಅಲ್ಲ. ಇಲ್ಲಿಯವರೆಗೆ, ಅವರು ಹಾಗೆಯೇ ಮಾಡುತ್ತಾ ಬಂದಿದೆ. ಹೀಗಾಗಿ ವಿಶ್ವಕಪ್​ ಅನ್ನು ಬಹಿಷ್ಕರಿಸುತ್ತೇವೆ ಎನ್ನುವುದು ಪಾಕಿಸ್ತಾನದ ಗೊಡ್ಡು ಬೆದರಿಕೆ ಅಷ್ಟೇ. ಅದಕ್ಕೆ ಅಂತಹ ಮಹತ್ವ ನೀಡಬೇಕಿಲ್ಲ ಎಂದು ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಬಾಂಗ್ಲಾಗೆ ಪಾಕ್ ಬೆಂಬಲ:

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟ ಬೆನ್ನಲ್ಲೇ ಪಾಕ್ ತಂಡ ಮುಂದಿನ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದರು.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು. ಹೀಗಾಗಿ ಪಾಕಿಸ್ತಾನ್ ಸರ್ಕಾರ ಏನು ಹೇಳುತ್ತದೆಯೋ ಅದರ ಮೇಲೆ ಪಾಕ್ ತಂಡದ ವಿಶ್ವಕಪ್ ಭವಿಷ್ಯ ನಿಂತಿದೆ ಮೊಹ್ಸಿನ್ ನಖ್ವಿ ಹೇಳಿದ್ದರು.

ಈ ಮೂಲಕ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಬೆಂಬಲ ಸೂಚಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪರೋಕ್ಷವಾಗಿ ಟಿ20 ವಿಶ್ವಕಪ್​ನಿಂದ ಹೊರಗುಳಿಯುವ ಬೆದರಿಕೆಯೊಡ್ಡಿದ್ದಾರೆ.

ಇತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿದರೆ ಟೂರ್ನಿಯು ಆರ್ಥಿಕ ನಷ್ಟ ಅನುಭವಿಸಲಿದೆ ಎಂಬ ಲೆಕ್ಕಾಚಾರವನ್ನು ಪಿಸಿಬಿ ಹಾಕಿಕೊಂಡಿದೆ. ಅದರಲ್ಲೂ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದಿದ್ದರೆ ವಿಶ್ವಕಪ್ ಟೂರ್ನಿಯು ಬಹುತೇಕ ವಿಫಲವಾದಂತೆ. ಹೀಗಾಗಿಯೇ ಬಿಸಿಸಿಐ ಹಾಗೂ ಐಸಿಸಿಗೆ ಬಿಗ್ ಶಾಕ್ ನೀಡಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತೆರೆ ಮರೆಯ ಪ್ರಯತ್ನಕ್ಕೆ ಕೈ ಹಾಕಿದೆ.

ಐಸಿಸಿ ಎಚ್ಚರಿಕೆ:

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ಗೆ ಕೈ ಕೊಡುವ ಸೂಚನೆ ನೀಡಿದ ಬೆನ್ನಲ್ಲೇ ಐಸಿಸಿ ಕೂಡ ಎಚ್ಚರಿಕೆಯ ಸಂದೇಶ ರವಾನಿಸಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು ಬ್ಯಾನ್ ಮಾಡುವ ಸೂಚನೆಯೊಂದಿಗೆ ಎಂಬುದು ವಿಶೇಷ.

ಅಂದರೆ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಗುಳಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಕೈ ಬಿಡುವುದಾಗಿ ಐಸಿಸಿ ಎಚ್ಚರಿಸಿದೆ.

ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ತಂಡಗಳೊಂದಿಗೆ ಯಾವುದೇ ದ್ವಿಪಕ್ಷೀಯ ಸರಣಿ ಆಡಲು ಕೂಡ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

ಇದರ ಜೊತೆಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಆಡಲು ವಿದೇಶಿ ಆಟಗಾರರಿಗೆ ಎನ್​ಒಸಿ ನೀಡುವುದಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಿದೆ.

ಇಷ್ಟೇ ಅಲ್ಲದೆ ಏಷ್ಯಾಕಪ್ ಟೂರ್ನಿಯಿಂದಲೂ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ರವಾನಿಸಲಾಗಿದೆ. ಅಂದರೆ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮಾನ್ಯತೆ ರದ್ದಾಗಲಿದೆ.

ಹೀಗಾಗಿ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತಹ ದುಸ್ಸಾಹಸಕ್ಕೆ ಕೈ ಹಾಕುವುದಿಲ್ಲ ಎಂಬುದು ಖಚಿತ. ಇದಾಗ್ಯೂ ವಿಶ್ವಕಪ್ ಬಹಿಷ್ಕಾರದ ಹೇಳಿಕೆಗಳು ಮೊಹಮ್ಮದ್ ಕೈಫ್ ಹೇಳಿದಂತೆ ಪ್ರಚಾರ ತಂತ್ರ ಎಂದಷ್ಟೇ ಹೇಳಬಹುದು.

Source link

‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ – Kannada News | Yash Is Doing Right Thing Says Priya Hassan Over Toxic Teaser debate

‘ಟಾಕ್ಸಿಕ್’ ಸಿನಿಮಾ ಟೀಸರ್ ವಿಷಯದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಈ ವಿಷಯದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಈಗ ಯಶ್ ಬೆಂಬಲಕ್ಕೆ ಕನ್ನಡದ ಮಹಿಳಾ ನಿರ್ದೇಶಕಿ ನಿಂತಿದ್ದಾರೆ. ಫಿಲ್ಮ್ ಚೇಂಬರ್​ನ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರಿಯಾ ಹಾಸನ್ ಟಿವಿ9 ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ‘ಸಿನಿಮಾಗೆ ಏನು ಅಗತ್ಯವಿದೆಯೋ ಅವರನ್ನು ಮಾಡುತ್ತಿದ್ದಾರೆ. ಅವರ ಸಿನಿಮಾಗೆ ಎಲ್ಲ ಕಡೆ ಮಾರುಕಟ್ಟೆ ಇರುವುದರಿಂದ ಅವರು ಭಿನ್ನ ಸಿನಿಮಾ ನೀಡುತ್ತಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Indian Press Day 2026: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ – Kannada News | Indian Press Day 2026: What is the purpose behind celebrating Indian Press Day?

ಇಂದಿನ ಈ ಡಿಜಿಟಲ್‌ ಜಗತ್ತಿನಲ್ಲಿ ಪ್ರತಿಯೊಂದು ಸುದ್ದಿಯೂ ಮೊಬೈಲ್ ಪರದೆಯಲ್ಲಿ ಸೆಕೆಂಡುಗಳಲ್ಲಿ ಲಭ್ಯವಿದ್ದರೂ ಸಹ ಪತ್ರಿಕೆಗಳು (Press) ಇನ್ನೂ ತಮ್ಮ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿವೆ ಮತ್ತು ಜನರಿಗೆ ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳ ಕುರಿತು ಓದುಗರಿಗೆ ವಿಶ್ವಾಸಾರ್ಹ ಮತ್ತು ಸಮತೋಲಿತ ಮಾಹಿತಿಯನ್ನು ಒದಗಿಸುತ್ತವೆ. ಇದೇ ಕಾರಣಕ್ಕಾಗಿ ಈ ಡಿಜಿಟಲ್‌ ಯುಗದಲ್ಲೂ ಲಕ್ಷಾಂತರ ಜನರು ಪತ್ರಿಕೆಯನ್ನು ಓದುತ್ತಿದ್ದಾರೆ. ಪತ್ರಿಕೆಗಳ ಈ ಪ್ರಾಮುಖ್ಯತೆ ಮತ್ತು ಅವುಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮಾಧ್ಯಮ ಸ್ವಾತಂತ್ರ್ಯ, ಸಮಗ್ರತೆ ಮತ್ತು ನಿಷ್ಪಕ್ಷಪಾತತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 29 ರಂದು ಭಾರತೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ಭಾರತೀಯ ಪತ್ರಿಕಾ ದಿನದ ಇತಿಹಾಸವೇನು?

ಭಾರತೀಯ ಪತ್ರಿಕಾ ದಿನದ ಇತಿಹಾಸವು ಹದಿನೆಂಟನೇ ಶತಮಾನದಷ್ಟು ಹಿಂದಿನದು. 1780 ಜನವರಿ 29 ರಲ್ಲಿ  ಐರಿಶ್ ಪತ್ರಕರ್ತ ಜೇಮ್ಸ್ ಅಗಸ್ಟಸ್ ಹಿಕ್ಕಿ ಭಾರತದ ಮೊದಲ ಪತ್ರಿಕೆ “ಹಿಕಿಸ್ ಬೆಂಗಾಲ್ ಗೆಜೆಟ್” ಪತ್ರಿಕೆಯನ್ನು ಕೋಲ್ಕತ್ತಾದಿಂದ ಪ್ರಕಟಿಸಿದರು. ಈ ಪತ್ರಿಕೆಯು ವಾರಪತ್ರಿಕೆಯಾಗಿದ್ದು, ಏಷ್ಯಾದ ಮೊದಲ ಮುದ್ರಿತ ಪತ್ರಿಕೆ ಎಂದು ಪರಿಗಣಿಸಲಾಗಿದೆ. ಆರಂಭದಲ್ಲಿ, ಹಿಕ್ಕಿಯ ಪತ್ರಿಕೆಯು ಸಾರ್ವಜನಿಕ ಸುದ್ದಿ, ಸ್ಥಳೀಯ ಸಮಸ್ಯೆಗಳು ಮತ್ತು ಜಾಹೀರಾತುಗಳ ಮೇಲೆ ಕೇಂದ್ರೀಕರಿಸಿತ್ತು, ಆದರೆ ಕ್ರಮೇಣ, ಹಿಕ್ಕಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಅದರ ಅಧಿಕಾರಿಗಳ ನೀತಿಗಳನ್ನು ಬಹಿರಂಗವಾಗಿ ಟೀಕಿಸಲು ಪ್ರಾರಂಭಿಸಿದರು. ಇದು ಬ್ರಿಟಿಷ್ ಸರ್ಕಾರವು 1782 ರಲ್ಲಿ ಇದನ್ನು ಬೆದರಿಕೆ ಎಂದು ಪರಿಗಣಿಸಿ ಮುಚ್ಚಲು ಕಾರಣವಾಯಿತು.ಹಿಕಿಸ್ ಬೆಂಗಾಲ್ ಗೆಜೆಟ್ ಅಲ್ಪಾವಧಿಯಲ್ಲಿ ಕಾರ್ಯನಿರ್ವಹಿಸಿದರೂ  ಅದರ ಪ್ರಭಾವವು ಅಗಾಧವಾಗಿತ್ತು. ಇದು ಭಾರತದಲ್ಲಿ ಸ್ವತಂತ್ರ ಪತ್ರಿಕೋದ್ಯಮಕ್ಕೆ ಅಡಿಪಾಯ ಹಾಕಿತು ಮತ್ತು ಇತರ ಅನೇಕ ಪತ್ರಿಕೆಗಳ ಪ್ರಕಟಣೆಗೆ ದಾರಿ ಮಾಡಿಕೊಟ್ಟಿತು. ಹಾಗಾಗಿ ಭಾರತದ ಮೊದಲ ಪತ್ರಿಕೆ ಹಿಕಿಸ್ ಬೆಂಗಾಲ್ ಗೆಜೆಟ್‌ನ  ಪ್ರಕಟಣೆಯ ಗೌರವಾರ್ಥವಾಗಿ ಭಾರತದಲ್ಲಿ ಪ್ರತಿವರ್ಷ ಜನವರಿ 29 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವವನ್ನು ಆಚರಿಸುವುದು? ಕುರಿತ ಇಂಟರೆಸ್ಟಿಂಗ್‌ ಸಂಗತಿ ಇಲ್ಲಿದೆ

ಭಾರತೀಯ ಪತ್ರಿಕಾ ದಿನವನ್ನು ಆಚರಿಸುವ ಉದ್ದೇಶವೇನು?

  • ಭಾರತೀಯ ಪತ್ರಿಕಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಪತ್ರಿಕೆಗಳ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವುದು.
  • ಪತ್ರಿಕೆಗಳು ಕೇವಲ ಸುದ್ದಿಗಳನ್ನು ಓದುವ ಸಾಧನವಲ್ಲ, ಅವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿಯೂ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಈ ದಿನ ನಮಗೆ ನೆನಪಿಸುತ್ತದೆ.
  • ಜನರು ನಿಯಮಿತವಾಗಿ ಪತ್ರಿಕೆಗಳನ್ನು ಓದುವಂತೆ ಪ್ರೋತ್ಸಾಹಿಸುವುದು, ಪತ್ರಿಕೋದ್ಯಮದ ಕೊಡುಗೆಗಳನ್ನು ಗೌರವಿಸುವುದು ಮತ್ತು ಪತ್ರಿಕಾ ಸ್ವಾತಂತ್ರ್ಯದ ಮಹತ್ವವನ್ನು ಒತ್ತಿಹೇಳುವುದು ಈ ದಿನದ ಉದ್ದೇಶವಾಗಿದೆ.
  • ಸಮಾಜಕ್ಕೆ ಸತ್ಯ, ಪಾರದರ್ಶಕ ಮತ್ತು ಅಧಿಕೃತ ಮಾಹಿತಿಯನ್ನು ಒದಗಿಸಲು ಪ್ರತಿದಿನ ಶ್ರಮಿಸುವ ಪತ್ರಕರ್ತರ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯನ್ನು ಈ ದಿನ ಗುರುತಿಸುತ್ತದೆ.
  • ಅಲ್ಲದೆ ಈ ದಿನವು ಮಾಧ್ಯಮ ಸ್ವಾತಂತ್ರ್ಯ, ಸತ್ಯ ಮತ್ತು ನಿಷ್ಪಕ್ಷಪಾತದ ಪ್ರಚಾರವನ್ನು ಸಂಕೇತಿಸುತ್ತದೆ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕಾ ಪಾತ್ರವನ್ನು ಎತ್ತಿ ತೋರಿಸುತ್ತದೆ.
  • ಈ ದಿನ ದೇಶದ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯಲ್ಲಿ ಪತ್ರಿಕೆಗಳು ಹೇಗೆ ಪ್ರಮುಖ ಪಾತ್ರ ವಹಿಸಿವೆ ಎಂಬುದನ್ನು ನೆನಪಿಸಿಕೊಳ್ಳಲು ಅವಕಾಶವನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್? ಕರ್ನಾಟಕದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್ ಪಾಟೀಲ್ – Kannada News | Rs 400 Crore Robbery Case Takes New Turn? Complainant Sandeep Patil Plans to File Case in Karnataka

ಬೆಳಗಾವಿ, ಜನವರಿ 29: ಕರ್ನಾಟಕ ಮತ್ತು ಗೋವಾ ಗಡಿಯ ಚೋರ್ಲಾ ಘಾಟ್ ಬಳಿ ನಡೆದ 400 ಕೋಟಿ ರೂ. ಬೃಹತ್ ದರೋಡೆ ಪ್ರಕರಣದ ತನಿಖೆ ಚುರುಕುಗೊಂಡಿದ್ದರೂ, ದೂರುದಾರರು ಮಹಾರಾಷ್ಟ್ರ ವಿಶೇಷ ತನಿಖಾ ದಳ (ಎಸ್ಐಟಿ)ದ ಕಾರ್ಯವೈಖರಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಪ್ರಕರಣ ದಾಖಲಾಗಿ 20 ದಿನಗಳು ಕಳೆದರೂ ದರೋಡೆ ಬಗ್ಗೆ ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ದೂರುದಾರ ಸಂದೀಪ್ ಪಾಟೀಲ್ ಅವರು ಕರ್ನಾಟಕದಲ್ಲಿ ದೂರು ದಾಖಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಂದೀಪ್ ಪಾಟೀಲ್ ಅವರು ಈ ಹಿಂದೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿ, ದೂರು ದಾಖಲಿಸಿದ್ದರು. ಆದರೆ, ಇಲ್ಲಿಯವರೆಗೂ ಅವರಿಗೆ ಯಾವುದೇ ರೀತಿಯ ಅಪ್‌ಡೇಟ್‌ಗಳು ಸಿಕ್ಕಿಲ್ಲ. ಈ ನಿರಾಶಾದಾಯಕ ಬೆಳವಣಿಗೆಯ ನಂತರ, ಅವರು ಬೆಳಗಾವಿಯಲ್ಲಿ ಹೊಸದಾಗಿ ದೂರು ದಾಖಲಿಸಲು ಮುಂದಾಗಿದ್ದು, ಕರ್ನಾಟಕದಲ್ಲಿ ಪ್ರಕರಣದ ತನಿಖೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Astrological Tips: ಸಣ್ಣ ವಿಷಯಕ್ಕೂ ಅತಿಯಾಗಿ ಕೋಪಗೊಳ್ಳುತ್ತೀರಾ? ಜಾತಕದಲ್ಲಿ ಈ ಗ್ರಹ ದುರ್ಬಲ ಸ್ಥಾನದಲ್ಲಿದೆ ಎಂದರ್ಥ! – Kannada News | Astrological Insights into Sudden Anger: Causes and Remedies

ಸಣ್ಣ ವಿಷಯಗಳಿಗೂ ಅತಿಯಾದ ಕೋಪ ಬರಲು ಕಾರಣಗಳೇನು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಮನುಷ್ಯನಲ್ಲಿ ತಾಮಸ, ರಜೋ ಮತ್ತು ಸತ್ವ ಎಂಬ ಮೂರು ಗುಣಗಳಿರುತ್ತವೆ. ಕೆಲವೊಮ್ಮೆ ಪರಿಸ್ಥಿತಿಗಳು ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಗುರುಬಲ, ಅದೃಷ್ಟ, ಹಣ ಮತ್ತು ಉದ್ಯೋಗವಿದ್ದರೂ ಕೂಡ ಕೆಲವರಿಗೆ ಇದ್ದಕ್ಕಿದ್ದಂತೆ ಕೋಪ ಬರುತ್ತದೆ. ಈ ಅತಿ ಕೋಪಕ್ಕೆ ಜ್ಯೋತಿಷ್ಯದ ಗ್ರಹಗತಿಗಳು ಹೇಗೆ ಕಾರಣವಾಗುತ್ತವೆ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಜ್ಯೋತಿಷ್ಯದಲ್ಲಿ ಬುಧ ಗ್ರಹವು ಬುದ್ಧಿಕಾರಕನಾಗಿದ್ದು, ಸೂಕ್ಷ್ಮತೆಯನ್ನು ನೀಡುತ್ತದೆ. ಬುಧ ಗ್ರಹ ದುರ್ಬಲವಾದಾಗ, ಪಾಪಗ್ರಹಗಳ ದೃಷ್ಟಿ ಇದ್ದಾಗ, ನೀಚನಾಗಿದ್ದಾಗ ಅಥವಾ ಪಾಪಗ್ರಹಗಳ ಜೊತೆ ಸೇರಿದಾಗ ವ್ಯಕ್ತಿಗಳ ಜಾತಕದಲ್ಲಿ ತಕ್ಷಣ ಕೋಪ ಕಾಣಿಸಿಕೊಳ್ಳುತ್ತದೆ. ಇಂತಹವರಿಗೆ ಬುಧವಾರ ಮತ್ತು ಸೋಮವಾರದಂತಹ ಕೆಲವು ದಿನಗಳಲ್ಲಿ, ಅಥವಾ ನಿರ್ದಿಷ್ಟ ಹೋರಾ ಸಮಯದಲ್ಲಿ ಕೋಪ ಹೆಚ್ಚಾಗಿರುತ್ತದೆ.

ಈ ಅತಿ ಕೋಪಕ್ಕೆ ಪರಿಹಾರಗಳು ಹೀಗಿವೆ:

  • ಬುಧವಾರ ಉಪವಾಸ: ಬುಧ ಗ್ರಹದ ಪ್ರಭಾವವನ್ನು ಕಡಿಮೆ ಮಾಡಲು ಬುಧವಾರದಂದು ಉಪವಾಸ ಮಾಡುವುದು ಉತ್ತಮ.
  • ಆಲೋಚನೆಗಳ ಮುಂದೂಡಿಕೆ: ಕೋಪ ಬಂದಾಗ ತಕ್ಷಣ ನಿರ್ಧಾರಗಳನ್ನು ತೆಗೆದುಕೊಳ್ಳದೆ, ಆಲೋಚನೆಗಳನ್ನು ಸ್ವಲ್ಪ ಸಮಯ ಮುಂದೂಡುವುದು ಜಾಣತನ.
  • ಮಂತ್ರ ಜಪ: ವಿಷ್ಣುಸಹಸ್ರನಾಮ ಜಪ ಮತ್ತು ಪ್ರತಿದಿನ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರವನ್ನು ಜಪಿಸುವುದರಿಂದ ಮನಸ್ಸಿಗೆ ಶಾಂತಿ ಲಭಿಸುತ್ತದೆ.
  • ಸಾತ್ವಿಕ ಆಹಾರ ಸೇವನೆ: ಸಾತ್ವಿಕ ಆಹಾರ ಸೇವನೆಯಿಂದ ಮನಸ್ಸು ನಿರ್ಮಲವಾಗುತ್ತದೆ.
  • ದಾನ ಧರ್ಮ: ಹೆಸರುಬೇಳೆ, ಹಸಿರು ವಸ್ತುಗಳು, ತರಕಾರಿಗಳು ಮತ್ತು ಗೋವುಗಳಿಗೆ ಹುಲ್ಲನ್ನು ದಾನ ಮಾಡುವುದು ಶುಭ. ದೇವಸ್ಥಾನಗಳಲ್ಲಿ ಪ್ರಸಾದ ಮತ್ತು ನೈವೇದ್ಯವನ್ನು ನೀಡಬಹುದು.
  • ಪಚ್ಚೆ ಧಾರಣೆ: ಪಚ್ಚೆ ರತ್ನವನ್ನು ಧಾರಣೆ ಮಾಡಿಕೊಳ್ಳುವುದರಿಂದ ಕೋಪದ ಪ್ರಮಾಣ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಇಂತಹ ಪರಿಹಾರಗಳನ್ನು ಅನುಸರಿಸುವುದರಿಂದ ತಾಳ್ಮೆ ಹೆಚ್ಚುತ್ತದೆ ಮತ್ತು ಅತಿಯಾದ ಕೋಪ ನಿಯಂತ್ರಣಕ್ಕೆ ಬರುತ್ತದೆ. ಇದು ಬುಧ ಗ್ರಹದ ಪ್ರಭಾವವನ್ನು ಸಕಾರಾತ್ಮಕವಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಸಂಜು ಸ್ಯಾಮ್ಸನ್ ಅವರನ್ನು ಇನಿಂಗ್ಸ್​ನ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.

ಇದೀಗ ನಾಲ್ಕನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿ, ಒಂದೇ ಸರಣಿಯಲ್ಲಿ  ಇಬ್ಬರು ಆರಂಭಿಕರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ ಐಸಿಸಿ ಪೂರ್ಣ ಸದಸ್ಯ ತಂಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ಮ್ಯಾಟ್ ಹೆನ್ರಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನುಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ನಾಲ್ಕನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್​ಗಳ ವಿಜಯ ಸಾಧಿಸಿದೆ.

Source link

ಶುಕ್ರನ ಸಂಚಾರ: ಅಬ್ಬಾಬ್ಬ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ – Kannada News | Shukra Gochar 2024: How Venus in Shravana Nakshatra Impacts Your Zodiac

ಇನ್ನು ಕೆಲವು ದಿನ ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಆಗಲಿದೆ. ಮಕರ ರಾಶಿಯ ಅಧಿಪತಿ ಶನಿ ಮತ್ತು ಶ್ರವಣ ನಕ್ಷತ್ರದ ಅಧಿಪತಿ ಚಂದ್ರ. ಶುಕ್ರ ಮತ್ತು ಶನಿ ಮಿತ್ರರಾಗಿದ್ದರೂ, ಮನಸ್ಸಿಗೆ ಕಾರಕನಾದ ಚಂದ್ರನ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಭಾವನಾತ್ಮಕ ಬದಲಾವಣೆಗಳನ್ನು ತರುತ್ತದೆ. ನಕಾರಾತ್ಮಕ ಬದಲಾವಣೆಗೆ ಕುಗ್ಗದೇ, ಬುದ್ಧಿಯಿಂದ ಅದನ್ನು ಸರಿಮಾಡಿಕೊಳ್ಳಿ.

​ಈ ಸಂಚಾರದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಯಾರಿಗೆ ಎಚ್ಚರಿಕೆ ಅಗತ್ಯ ಎಂಬ ವಿವರ ಇಲ್ಲಿದೆ:

​ಶುಭ ಫಲ

​ವೃಷಭ ರಾಶಿ:

ಭಾಗ್ಯ ಸ್ಥಾನದಲ್ಲಿ ಶುಕ್ರನ ಸಂಚಾರವಿರುವುದರಿಂದ ಅದೃಷ್ಟ ಒಲಿಯಲಿದೆ. ದೀರ್ಘಕಾಲದ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ.

​ಕನ್ಯಾ ರಾಶಿ:

ಪಂಚಮ ಸ್ಥಾನದಲ್ಲಿ ಶುಕ್ರನಿರುವುದರಿಂದ ಪ್ರೇಮ ಸಂಬಂಧಗಳು ಮಧುರವಾಗುತ್ತವೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಆಕಸ್ಮಿಕ ಧನ ಲಾಭದ ಯೋಗವಿದೆ.

​ಮಕರ ರಾಶಿ:

ನಿಮ್ಮದೇ ರಾಶಿಯಲ್ಲಿ ಶುಕ್ರನಿರುವುದರಿಂದ ವ್ಯಕ್ತಿತ್ವದಲ್ಲಿ ಸುಧಾರಣೆ ಕಂಡುಬರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ ಮತ್ತು ವಿವಾಹದ ಮಾತುಕತೆಗಳು ಯಶಸ್ವಿಯಾಗುತ್ತವೆ.

​ಮೀನ ರಾಶಿ:

ಲಾಭ ಸ್ಥಾನದಲ್ಲಿ ಶುಕ್ರನಿರುವುದರಿಂದ ಆರ್ಥಿಕ ಸ್ಥಿತಿ ಭದ್ರವಾಗುತ್ತದೆ. ಹಿರಿಯ ಸಹೋದರರಿಂದ ಅಥವಾ ಸ್ನೇಹಿತರಿಂದ ಬೆಂಬಲ ಸಿಗಲಿದೆ.

ಮಿಶ್ರ ಫಲ

​ಮಿಥುನ ಮತ್ತು ತುಲಾ:

ವೃತ್ತಿಜೀವನದಲ್ಲಿ ಪ್ರಗತಿ ಇರುತ್ತದೆ, ಆದರೆ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಕುಟುಂಬದವರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು.

​ಧನು ರಾಶಿ:

ಆರ್ಥಿಕವಾಗಿ ಹೂಡಿಕೆ ಮಾಡಲು ಒಳ್ಳೆಯ ಸಮಯ, ಆದರೆ ಮಾತಿನ ಮೇಲೆ ನಿಗಾ ಇರಲಿ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಅಶುಭ ರಾಶಿ

​ಕರ್ಕಾಟಕ ರಾಶಿ:

ಸಪ್ತಮ ಸ್ಥಾನದಲ್ಲಿ ಶುಕ್ರನಿರುವುದರಿಂದ ಸಂಗಾತಿಯೊಂದಿಗೆ ಸಣ್ಣಪುಟ್ಟ ವಾಗ್ವಾದಗಳು ಉಂಟಾಗಬಹುದು. ವ್ಯವಹಾರದಲ್ಲಿ ಪಾಲುದಾರರೊಂದಿಗೆ ಪಾರದರ್ಶಕವಾಗಿರಿ.

​ಸಿಂಹ ರಾಶಿ:

ಶತ್ರುಗಳ ಕಾಟ ಹೆಚ್ಚಾಗಬಹುದು ಅಥವಾ ಅನಗತ್ಯ ಸಾಲ ಮಾಡಬೇಕಾದ ಪರಿಸ್ಥಿತಿ ಬರಬಹುದು. ಆರೋಗ್ಯದ ಕಡೆ ಗಮನಹರಿಸಿ.

​ವೃಶ್ಚಿಕ ರಾಶಿ:

ಅತಿಯಾದ ಆತ್ಮವಿಶ್ವಾಸದಿಂದ ಕೆಲಸಗಳು ಕೆಡಬಹುದು. ಸಹೋದರರೊಂದಿಗೆ ಮನಸ್ತಾಪವಾಗದಂತೆ ನೋಡಿಕೊಳ್ಳಿ.

​ಶುಕ್ರವಾರದಂದು ಮಹಾಲಕ್ಷ್ಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ಅಥವಾ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡುವುದರಿಂದ ಶುಭ ಫಲಗಳು ಹೆಚ್ಚುತ್ತವೆ.

– ಲೋಹಿತ ಹೆಬ್ಬಾರ್

Source link

Exit mobile version