Headlines

ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ಕೋಲ್ಕತಾ, ಜೂನ್ 1: ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾಮಂಡಳ (GCMMF) ಒಡೆತನದ ಅಮುಲ್ ಸಂಸ್ಥೆಯು ಪಶ್ಚಿಮ ಬಂಗಾಳದ ಕೋಲ್ಕತ್ತಾ ಸಮೀಪದ ಹೌರಾದಲ್ಲಿರುವ ಸಂಕ್ರೇಲ್ ಫುಡ್ ಪಾರ್ಕ್‌ನಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಸಮಗ್ರ ಡೈರಿ ಘಟಕವನ್ನು ಸ್ಥಾಪಿಸುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ಮೊಸರು ಉತ್ಪಾದನಾ ಘಟಕ (Curd plant) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಘಟಕವು ಪ್ರತಿದಿನ 10 ಲಕ್ಷ ಕಿಲೋಗ್ರಾಂ (1,000 ಮೆಟ್ರಿಕ್ ಟನ್) ಮೊಸರು ಉತ್ಪಾದಿಸುವ ಹಾಗೂ ದಿನಕ್ಕೆ…

Read More

ಆರ್‌ಸಿಬಿ ಪಾಲಿಗೆ ‘ಲಕ್ಕಿ ಚಾರ್ಮ್’ ಆದ ಅನುಷ್ಕಾ ಶರ್ಮಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮದುವೆಯಾದ ಬಳಿಕ ಅನುಷ್ಕಾ ಆರ್‌ಸಿಬಿ ಪಂದ್ಯಗಳಿಗೆ ಸದಾ ಹಾಜರಿರುತ್ತಿದ್ದರು. ಆದರೆ ಅಂದು ಕೊಹ್ಲಿ ವಿಫಲರಾದಾಗಲೆಲ್ಲಾ ಕೆಲವರು ಅನುಷ್ಕಾ ಅವರೇ ಅಶುಭ ಎಂದು ದೂಷಿಸಿದ್ದರು. ಇಂದು ಆರ್‌ಸಿಬಿ ಸತತ ಎರಡನೇ ಟ್ರೋಫಿ ಗೆಲ್ಲುತ್ತಿದ್ದಂತೆ ಅವರನ್ನು ಲಕ್ಕಿ ಚಾರ್ಮ್ ಎಂದು ಕರೆಯಲಾಗುತ್ತಿದೆ. ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯ ಒನ್‌ಸೈಡೆಡ್ ಆಯಿತು. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಆರ್‌ಸಿಬಿ ಮಣಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ…

Read More

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ‘ಬಿಗ್ ಬಾಯ್ಸ್’ ಹೇಳಿಕೆ!

17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದು 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಐಪಿಎಲ್​ನಲ್ಲಿ ಸತತ ಎರಡು ಟ್ರೋಫಿ ಗೆದ್ದ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯ ಬೆನ್ನಲ್ಲೇ, ಸಿಎಸ್​ಕೆ ತಂಡದ ಮಾಜಿ ಆಟಗಾರ…

Read More

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬೆಂಗಳೂರು, ಜೂನ್ 1: ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್​ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ನಡು ಮಾರ್ಗದಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಹೆಚ್​ಎಎಲ್​ ಓಲ್ಡ್ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಇದೇ ವೇಳೆ ಬಳಿ ಬಂದ ಟ್ರಾಫಿಕ್ ಪೊಲೀಸರ ಬಳಿ, ‘ನನ್ನ ಪತ್ನಿ ಗರ್ಭಿಣಿ, ಈಗ ಹೇಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಸಂಚಾರಕ್ಕಾಗಿ ಸುಮಾರು 30 ನಿಮಿಷ ಪೊಲೀಸರು ಟ್ರಾಫಿಕ್​ ಬಂದ್ ಮಾಡಿದ್ದರು. ಇದರಿಂದ ವ್ಯಕ್ತಿ ಕೆರಳಿದ್ದರು. ನಂತರ ವ್ಯಕ್ತಿಯನ್ನು ಪೊಲೀಸರು…

Read More

ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ…

Read More

Video: ಬಾಲಕಿಯ ಅಪಹರಿಸಿ, ಅತ್ಯಾಚಾರ ನಡೆಸಲು ವ್ಯಕ್ತಿಯ ಯತ್ನ, ಬಾಲಕನ ಸಮಯಪ್ರಜ್ಞೆಯಿಂದ ಉಳೀತು ಆಕೆಯ ಜೀವ

ರಷ್ಯಾ, ಜೂನ್ 01: ರಷ್ಯಾದಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕಿರುಚುತ್ತಿದ್ದ 5 ವರ್ಷದ ಪುಟ್ಟ ಹೆಣ್ಣು ಮಗಳನ್ನು ಬಲವಂತವಾಗಿ ಎತ್ತಿಕೊಂಡು ಕಟ್ಟಡದ ಒಳಗೆ ಹೋಗಲು ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದ ಸಣ್ಣ ಬಾಲಕನೊಬ್ಬ ತಕ್ಷಣವೇ ಎಚ್ಚೆತ್ತುಕೊಂಡು, ಕಟ್ಟಡದ ಮುಖ್ಯ ಬಾಗಿಲು ಮುಚ್ಚದಂತೆ ಗಟ್ಟಿಯಾಗಿ ಹಿಡಿದುಕೊಂಡು ಜೋರಾಗಿ ಕೂಗಿ ಇತರರ ಸಹಾಯ ಬೇಡಿದ್ದಾನೆ. ಬಾಲಕನ ಈ ಸಮಯಪ್ರಜ್ಞೆ ಮತ್ತು ಧೈರ್ಯದಿಂದಾಗಿ ಅಪಹರಣಕಾರನ ಸಂಚು ವಿಫಲಗೊಂಡಿದ್ದು, ಮಗು ಸುರಕ್ಷಿತವಾಗಿ ಪಾರಾಗಿದೆ. ಸಾರ್ವಜನಿಕರ ಸಹಾಯದಿಂದ ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ…

Read More

ಬೆಂಗಳೂರು: ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌ ಕಾರು ಶೋರೂಂಗೆ ಬಾಡಿಗೆಗೆ! ವಾಹನ ಸವಾರರ ತೀವ್ರ ಆಕ್ರೋಶ

ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌Image Credit source: tv9 ಬೆಂಗಳೂರು, ಜೂನ್ 1: ಬೆಂಗಳೂರಿನ (Bengaluru) ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಿಸಲಾಗಿದ್ದ ಹೈಟೆಕ್ ಮಲ್ಟಿಲೆವೆಲ್ ಪಾರ್ಕಿಂಗ್ ಲಾಟ್ ಈಗ ವಿವಾದದ ಕೇಂದ್ರಬಿಂದುವಾಗಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಬರೋಬ್ಬರಿ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಈ ಬೃಹತ್ ಪಾರ್ಕಿಂಗ್ ಸಂಕೀರ್ಣವನ್ನು ಕಳೆದ ತಿಂಗಳಷ್ಟೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು….

Read More

Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್​ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್​ಗಳ ಸವಾಲನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…

Read More

ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಶ್ರೀನಗರ, ಜೂನ್ 01: ಕಳೆದ ವರ್ಷ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖ ಸುಳಿವು ಲಭ್ಯವಾಗಿದೆ. ದಾಳಿ ನಡೆಸಿದ ಉಗ್ರರು ಬಳಸಿದ್ದ ಎರಡು ಪ್ರಮುಖ ಮೊಬೈಲ್ ಫೋನ್‌ಗಳ ಮೂಲವನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿ ಒಂದು ಫೋನ್‌ಗೆ ಪಾಕಿಸ್ತಾನದ ಕರಾಚಿ ಮೂಲದ ಪ್ರಮುಖ ಬ್ಯಾಂಕ್‌ವೊಂದು ಹಣಕಾಸು ನೆರವು ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ . ಈ ಕುರಿತು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ. ದಾಳಿಕೋರರ…

Read More

Video: 35 ಸಾವಿರ ರೂಗೆ ಬೆಂಗಳೂರಿನಲ್ಲಿ ಆರಾಮ ಜೀವನ ನಡೆಸ್ಬಹುದು; ತಿಂಗಳ ಖರ್ಚು ವೆಚ್ಚ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಬೆಂಗಳೂರು, ಜೂನ್ 01: ಬೆಂಗ್ಳೂರಿನಂತಹ (Bengaluru) ದೊಡ್ಡ ದೊಡ್ಡ ನಗರಗಳಲ್ಲಿ ಜನ ಎಷ್ಟೇ ದುಡಿದ್ರೂ ಹಣ ಸಾಲ್ತಿಲ್ಲ, ದುಡಿದ ಎಲ್ಲಾ ಹಣ ಬಾಡಿಗೆ ಕಟ್ಟೋಕೆ, ತಿಂಗಳ ಖರ್ಚಿಗೆ ಸಾಕಾಗುತ್ತದೆ ಎಂದು ಗೊಣಗುವುದನ್ನು ನೋಡಿರುತ್ತೀರಿ. ಬೆಂಗಳೂರಿನಂತಹ ನಗರದಲ್ಲಿ 35,000 ನಿಂದ ಯೋಗ್ಯ ಜೀವನ ಹೇಗೆ ನಡೆಸಬಹುದೆಂದು ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿ ಅಭಿಪ್ರಾಯ ತಮ್ಮ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಅಮೆಜಾನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ…

Read More