ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

ರೈಲ್ವೆ ನಿಲ್ದಾಣದ ಚಿತ್ರImage Credit source: PTI

ನವದೆಹಲಿ, ಜೂನ್ 1: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ರೈಲುಗಳಲ್ಲಿ ಹೆಚ್ಚುತ್ತಿರುವ ಭಾರಿ ಜನಸಂದಣಿಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು (Indian Railways) ಇಂದಿನಿಂದ (ಜೂನ್ 1, 2026) ಟಿಕೆಟ್ ಬುಕಿಂಗ್ ಮತ್ತು ಪ್ರಯಾಣದ ನಿಯಮಗಳಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಲಿವೆ. ಈ ನಿಯಮಗಳ ಪೈಕಿ ವೈಟಿಂಗ್ ಲಿಸ್ಟ್ ಟಿಕೆಟ್​ಗಳ ಸಂಖ್ಯೆಗೆ ಮಿತಿ ಹಾಕುವುದೂ ಒಂದು. ಇತರ ನಿಯಮಗಳು ಯಾವುವು, ಮತ್ತು ಪ್ರಯಾಣಿಕರು ಯಾವ ವಿಷಯಗಳ ಬಗ್ಗೆ ಎಚ್ಚರದಿಂದಿರಬೇಕು ಎಂಬ ಸಂಪೂರ್ಣ ವಿವರ ಇಲ್ಲಿದೆ.

ವೈಟಿಂಗ್ ಲಿಸ್ಟ್ ಟಿಕೆಟ್‌ಗಳ ಸಂಖ್ಯೆಗೆ ಮಿತಿ

ಇನ್ಮುಂದೆ ರೈಲುಗಳಲ್ಲಿ ಇಷ್ಟಬಂದಷ್ಟು ವೈಟಿಂಗ್ ಲಿಸ್ಟ್ (Waiting List) ಟಿಕೆಟ್‌ಗಳನ್ನು ಬುಕ್ ಮಾಡಲು ಅವಕಾಶ ಇರುವುದಿಲ್ಲ. ರೈಲ್ವೆ ಇಲಾಖೆಯು ಸೀಟುಗಳ ಆಧಾರದ ಮೇಲೆ ವೈಟಿಂಗ್ ಟಿಕೆಟ್‌ಗಳ ಸಂಖ್ಯೆಗೆ ಕಠಿಣ ಮಿತಿ (ಕ್ಯಾಪಿಂಗ್) ವಿಧಿಸಿದೆ.

  • ಸ್ಲೀಪರ್ ಕ್ಲಾಸ್ (Sleeper Class): ಒಟ್ಟು ಸೀಟುಗಳ ಸಾಮರ್ಥ್ಯದ ಕೇವಲ 30% ರಷ್ಟು ಮಾತ್ರ ವೈಟಿಂಗ್ ಟಿಕೆಟ್‌ಗಳನ್ನು ನೀಡಲಾಗುತ್ತದೆ. ಅಂದರೆ ಸರಾಸರಿ 150 ರಿಂದ 200 ಕ್ಕಿಂತ ಹೆಚ್ಚು ವೈಟಿಂಗ್ ಟಿಕೆಟ್‌ಗಳು ಜನರೇಟ್ ಆಗುವುದಿಲ್ಲ.
  • ಎಸಿ ಕ್ಲಾಸ್ (AC Coaches): ಎಸಿ ಕೋಚ್‌ಗಳಲ್ಲೂ ಸಹ ಒಟ್ಟು ಸೀಟುಗಳ ಗರಿಷ್ಠ 60% ರಷ್ಟು ಮಾತ್ರ ವೈಟಿಂಗ್ ಟಿಕೆಟ್‌ಗಳನ್ನು ಸೀಮಿತಗೊಳಿಸಲಾಗಿದೆ.

ವೈಟಿಂಗ್ ಲಿಸ್ಟ್ ಚಿಕ್ಕದಾಗಿರುವುದರಿಂದ, ನೀವು ಟಿಕೆಟ್ ಬುಕ್ ಮಾಡಿದಾಗ ಅದು ಕನ್ಫರ್ಮ್ (Confirmed) ಆಗುವ ಅಥವಾ ಆರ್‌ಎಸಿ (RAC) ಆಗುವ ಸಾಧ್ಯತೆಗಳು ಮೊದಲಿಗಿಂತ 2 ರಿಂದ 3 ಪಟ್ಟು ಹೆಚ್ಚಾಗಲಿವೆ.

ಇದನ್ನೂ ಓದಿ: ಹಾರ್ಮುಜ್ ಬಿಕ್ಕಟ್ಟಿನ ಎಫೆಕ್ಟ್: ತೈಲದ ಗರಿಷ್ಠ ಬಳಕೆ ಸೇರಿದಂತೆ ಹೊಸ ಪ್ರವೃತ್ತಿಯಲ್ಲಿ ಭಾರತೀಯ ಆಯಿಲ್ ರಿಫೈನರಿಗಳು

ಸ್ಲೀಪರ್ ಮತ್ತು ಎಸಿ ಕೋಚ್‌ಗಳಲ್ಲಿ ವೈಟಿಂಗ್ ಟಿಕೆಟ್ ಪ್ರಯಾಣ ಬ್ಯಾನ್

ಹೊಸ ನಿಯಮದ ಪ್ರಕಾರ, ಜೂನ್ 1 ರಿಂದ ವಿಂಡೋ ಟಿಕೆಟ್ ಆಗಿರಲಿ ಅಥವಾ ಇ-ಟಿಕೆಟ್ ಆಗಿರಲಿ, ವೈಟಿಂಗ್ ಲಿಸ್ಟ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಸ್ಲೀಪರ್ ಅಥವಾ ಎಸಿ ಕೋಚ್‌ಗಳಲ್ಲಿ ಪ್ರಯಾಣಿಸುವಂತಿಲ್ಲ. ಸಾಮಾನ್ಯವಾಗಿ ಕನ್ಫರ್ಮ್ ಟಿಕೆಟ್ ಇಲ್ಲದಿದ್ದರೂ ವೈಟಿಂಗ್ ಟಿಕೆಟ್ ಹಿಡಿದು ಸ್ಲೀಪರ್ ಮತ್ತು ಎಸಿ ಕೋಚ್‌ಗಳನ್ನು ಹತ್ತಿ ಕನ್ಫರ್ಮ್ ಸೀಟುಗಳಿರುವ ಪ್ರಯಾಣಿಕರಿಗೆ ತೊಂದರೆ ಕೊಡುತ್ತಿದ್ದ ಅಭ್ಯಾಸಕ್ಕೆ ಬ್ರೇಕ್ ಹಾಕಲು ರೈಲ್ವೆ ಈ ಕಠಿಣ ನಿರ್ಧಾರ ಕೈಗೊಂಡಿದೆ. ವೈಟಿಂಗ್ ಟಿಕೆಟ್ ಇರುವವರು ಕೇವಲ ‘ಜನರಲ್ ಕೋಚ್’ (General Coach) ಗಳಲ್ಲಿ ಮಾತ್ರ ಪ್ರಯಾಣಿಸಬೇಕಾಗುತ್ತದೆ.

ನಿಯಮ ಉಲ್ಲಂಘಿಸಿದರೆ ಭಾರೀ ಮೊತ್ತದ ದಂಡ; ಟಿಟಿಇಗೆ (TTE) ಹೆಚ್ಚು ಅಧಿಕಾರ

ಒಂದು ವೇಳೆ ನೀವು ವೈಟಿಂಗ್ ಟಿಕೆಟ್ ಇಟ್ಟುಕೊಂಡು ಸ್ಲೀಪರ್ ಅಥವಾ ಎಸಿ ಕೋಚ್ ಹತ್ತಿ ಸಿಕ್ಕಿಬಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ:

  • ಸ್ಲೀಪರ್ ಕೋಚ್‌ನಲ್ಲಿ ಸಿಕ್ಕಿಬಿದ್ದರೆ: ಕನಿಷ್ಠ ₹250 ದಂಡ ವಿಧಿಸಿ, ತಕ್ಷಣವೇ ಜನರಲ್ ಬೋಗಿಗೆ ಕಳುಹಿಸಲಾಗುತ್ತದೆ.
  • ಎಸಿ ಕೋಚ್‌ಗಳಲ್ಲಿ ಸಿಕ್ಕಿಬಿದ್ದರೆ: ಕನಿಷ್ಠ ₹440 ವರೆಗೆ ದಂಡ ಮತ್ತು ಸಂಪೂರ್ಣ ಪ್ರಯಾಣದ ದರವನ್ನು ವಸೂಲಿ ಮಾಡಲಾಗುತ್ತದೆ.
  • ರೈಲಿನಿಂದ ಕೆಳಗಿಳಿಸುವ ಅಧಿಕಾರ: ಟಿಟಿಇಗೆ ದಂಡ ವಿಧಿಸುವುದಷ್ಟೇ ಅಲ್ಲದೆ, ಮುಂದಿನ ನಿಲ್ದಾಣದಲ್ಲೇ ನಿಮ್ಮನ್ನು ರೈಲಿನಿಂದ ಕೆಳಗಿಳಿಸುವ ಪೂರ್ಣ ಅಧಿಕಾರವನ್ನು ನೀಡಲಾಗಿದೆ.

ಇದನ್ನೂ ಓದಿ: ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ಬದಲಾದ ಈ ನಿಯಮಗಳಿಂದಾಗಿ ಮುಂಬರುವ ದಿನಗಳಲ್ಲಿ ಕನ್ಫರ್ಮ್ ಟಿಕೆಟ್ ಪಡೆದ ಪ್ರಯಾಣಿಕರ ಪ್ರಯಾಣ ಹೆಚ್ಚು ಸುಖಕರ ಮತ್ತು ಸುರಕ್ಷಿತವಾಗಲಿದ್ದು, ಕೊನೆಯ ಕ್ಷಣದ ಗೊಂದಲಗಳು ಹಾಗೂ ಕೋಚ್‌ಗಳ ಒಳಗಿನ ಅತಿಯಾದ ನೂಕುನುಗ್ಗಲು ಗಣನೀಯವಾಗಿ ಕಡಿಮೆಯಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಿಜಾಬ್ Vs ಕೇಸರಿ ಸಂಘರ್ಷ: ಹಿಂದೂಪರ ಸಂಘಟನೆಗಳಿಂದ ಹುಬ್ಬಳ್ಳಿಯ ಅನೇಕ ಕಡೆ ಕೇಸರಿ ಶಾಲು ವಿತರಣೆ

ಹಿಂದೂಪರ ಸಂಘಟನೆಗಳಿಂದ ಕೇಸರಿ ಶಾಲು ವಿತರಣೆImage Credit source: tv9

ಹುಬ್ಬಳ್ಳಿ, ಜೂನ್ 1: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಯ ಹಾದಿ ಹಿಡಿದಿವೆ. ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಸರ್ಕಾರದ ಆದೇಶಕ್ಕೆ ಕೌಂಟರ್ ನೀಡಲು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿ (Hubballi) ನಗರದ ಪ್ರಮುಖ ಕಾಲೇಜುಗಳ ಮುಂಭಾಗದಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದ್ದಾರೆ. ಈ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಹಿಜಾಬ್ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಈ ಅಭಿಯಾನವನ್ನು ವಿಸ್ತರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿದ ಸರ್ಕಾರದ ನೀತಿಗೆ ಖಂಡನೆ.
  • ಹುಬ್ಬಳ್ಳಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಕೇಸರಿ ಶಾಲು ವಿತರಣೆ.
  • ಪೊಲೀಸರಿಂದ ಬಿಗಿ ಬಂದೋಬಸ್ತ್.

ಕನಕದಾಸ ಕಾಲೇಜು ಮುಂಭಾಗ ಹೈಡ್ರಾಮಾ

ಹಿಂದಿನ ಬಿಜೆಪಿ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿದ್ದ ಸಮವಸ್ತ್ರ ನಿಯಮ ಹಾಗೂ ಹಿಜಾಬ್ ನಿಷೇಧದ ಆದೇಶವನ್ನು ಪ್ರಸಕ್ತ ಸರ್ಕಾರ ಹಿಂಪಡೆದಿರುವುದು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಇಂದು (ಜೂನ್ 1) ಬೆಳಿಗ್ಗೆ ಹುಬ್ಬಳ್ಳಿಯ ಕನಕದಾಸ ಕಾಲೇಜು ಮುಂಭಾಗ ಜಮಾಯಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಕಾಲೇಜಿಗೆ ಆಗಮಿಸುತ್ತಿದ್ದ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದರು. ಕೆಲವು ವಿದ್ಯಾರ್ಥಿಗಳು ಸ್ವಇಚ್ಛೆಯಿಂದಲೇ ಕೇಸರಿ ಶಾಲು ಧರಿಸಿ ಕಾಲೇಜಿನೊಳಗೆ ಪ್ರವೇಶಿಸಿದರೆ, ಕೆಲವು ವಿದ್ಯಾರ್ಥಿಗಳು ಶಾಲು ಧರಿಸಲು ನಿರಾಕರಿಸಿದರು. ಪೊಲೀಸರ ಕಟ್ಟುನಿಟ್ಟಿನ ಸೂಚನೆ ಇದ್ದಿದ್ದರಿಂದ ಕಾರ್ಯಕರ್ತರು ಯಾರಿಗೂ ಒತ್ತಾಯಪೂರ್ವಕವಾಗಿ ಶಾಲು ಧರಿಸದೆ ಸಂಯಮ ಕಾಯ್ದುಕೊಂಡರು.

ತುಷ್ಟೀಕರಣ ರಾಜಕಾರಣದ ವಿರುದ್ಧ ಆಕ್ರೋಶ

ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂಪರ ಕಾರ್ಯಕರ್ತರಾದ ರಘು ಯಲ್ಲಕ್ಕನವರ್ ಮತ್ತು ಸಂಗಮೇಶ್, ‘ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯದ ತುಷ್ಟೀಕರಣಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಹಾಳುಗೆಡವುತ್ತಿದೆ. ಹಿಜಾಬ್‌ಗೆ ನೀಡಿರುವ ಅನುಮತಿಯನ್ನು ತಕ್ಷಣವೇ ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ನಮ್ಮ ಕೇಸರಿ ಶಾಲು ವಿತರಣೆ ಅಭಿಯಾನ ನಿರಂತರವಾಗಿ ಮುಂದುವರಿಯಲಿದೆ’ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ!

ಘಟನೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ನಗರದ ಎಲ್ಲಾ ಪ್ರಮುಖ ಕಾಲೇಜುಗಳ ಮುಂಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಕನ್ನಡಿಗನ ಪಾಲಾದ ‘ಬೆಸ್ಟ್ ಕ್ಯಾಚ್’ ಪ್ರಶಸ್ತಿ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಬೆಸ್ಟ್ ಕ್ಯಾಚ್ ಪ್ರಶಸ್ತಿಯನ್ನು ಕನ್ನಡಿಗ ಮನೀಶ್ ಪಾಂಡೆ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ನ 57ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು.

ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಎಸೆತವನ್ನು ಟಿಮ್ ಡೇವಿಡ್ ಆಫ್-ಸ್ಟಂಪ್‌ನಿಂದ ಹೊರಗೆ ಬಲವಾಗಿ ಕಟ್ ಮಾಡಿದರು. ಬ್ಯಾಟ್‌ನಿಂದ ಸಿಡಿದ ಚೆಂಡು ಅತಿ ವೇಗವಾಗಿ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ರಾಕೆಟ್‌ನಂತೆ ನುಗ್ಗಿತು.

ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಮನೀಶ್ ಪಾಂಡೆ, ಕೇವಲ ಸೆಕೆಂಡಿನ ನೂರನೇ ಒಂದು ಭಾಗದಲ್ಲಿ ಪ್ರತಿಕ್ರಿಯಿಸಿದರು. ತಮ್ಮ ಎಡಭಾಗಕ್ಕೆ ಸಂಪೂರ್ಣವಾಗಿ ಗಾಳಿಯಲ್ಲಿ ಜಿಗಿದು ಒಂದು ಕೈಯಿಂದ ಚೆಂಡನ್ನು ಮೈದಾನಕ್ಕೆ ತಾಗುವ ಕೆಲವೇ ಇಂಚುಗಳ ಮುನ್ನ ಅದ್ಭುತವಾಗಿ ಹಿಡಿದರು.

ಪಾಂಡೆ ಅವರ ಈ ಅಸಾಧ್ಯವಾದ ಕ್ಷೇತ್ರರಕ್ಷಣೆಯನ್ನು ಕಂಡು ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಮತ್ತು ಆಟಗಾರರು ದಿಗ್ಭ್ರಮೆಗೊಂಡರು. ಅಷ್ಟೇ ಅಲ್ಲದೆ ಕ್ಯಾಚ್ ಔಟ್ ಆಗಿ ಟಿಮ್ ಡೇವಿಡ್ ಹೊರ ನಡೆಯುತ್ತಿದ್ದಂತೆ ಮನೀಶ್ ಪಾಂಡೆ ಬಳಿ ತೆರಳಿದ ವಿರಾಟ್ ಕೊಹ್ಲಿ ಈ ಅದ್ಭುತ ಫೀಲ್ಡಿಂಗ್​ ಅನ್ನು ಶ್ಲಾಘಿಸಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದರು. ಇದೀಗ ಇದೇ ಕ್ಯಾಚ್​ಗೆ 2026ರ ಬೆಸ್ಟ್ ಕ್ಯಾಚ್ ಪ್ರಶಸ್ತಿ ಲಭಿಸಿದೆ.

Source link

ಹಾರ್ಮುಜ್ ಬಿಕ್ಕಟ್ಟಿನ ಎಫೆಕ್ಟ್: ತೈಲದ ಗರಿಷ್ಠ ಬಳಕೆ ಸೇರಿದಂತೆ ಹೊಸ ಪ್ರವೃತ್ತಿಯಲ್ಲಿ ಭಾರತೀಯ ಆಯಿಲ್ ರಿಫೈನರಿಗಳು

ನವದೆಹಲಿ, ಜೂನ್ 1: ಮಧ್ಯಪ್ರಾಚ್ಯದಲ್ಲಿ (Middle East) ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಇರಾನ್ ಸಂಘರ್ಷದಿಂದಾಗಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಪ್ರದೇಶದಲ್ಲಿ ತೀವ್ರ ಅಡಚಣೆ ಉಂಟಾಗಿದೆ. ಇದರ ನೇರ ಪರಿಣಾಮ ಭಾರತದ ಇಂಧನ ವಲಯದ ಮೇಲಾಗಿದ್ದು, ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು (Oil Refineries) ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಇಂಧನ ಪೂರೈಸಲು ತಮ್ಮ ತಂತ್ರಜ್ಞಾನ ಮತ್ತು ತೈಲ ಮಿಶ್ರಣದ ಶೈಲಿಯನ್ನು ಬದಲಾಯಿಸಿಕೊಳ್ಳುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಕಚ್ಚಾ ತೈಲ ಮಿಶ್ರಣದಲ್ಲಿ ಬದಲಾವಣೆ

ಮಧ್ಯಪ್ರಾಚ್ಯದ ಸಾಂಪ್ರದಾಯಿಕ ಮಾರ್ಗಗಳಲ್ಲಿ ತೈಲ ಸರಬರಾಜು ಕಷ್ಟಕರವಾಗಿರುವುದರಿಂದ, ಭಾರತೀಯ ಸಂಸ್ಥೆಗಳು ಅನಿವಾರ್ಯವಾಗಿ ಪರ್ಯಾಯ ದೇಶಗಳಿಂದ ಕಚ್ಚಾ ತೈಲವನ್ನು (Crude Oil) ಆಮದು ಮಾಡಿಕೊಳ್ಳುತ್ತಿವೆ. ಈ ಹೊಸ ತೈಲಗಳು ಸಾಮಾನ್ಯ ತೈಲಗಳಿಗಿಂತ ಹೆಚ್ಚು ಸಂಕೀರ್ಣವಾಗಿದ್ದು (Complex Crude Grades), ಇವುಗಳನ್ನು ಸಂಸ್ಕರಿಸುವುದು ಸುಲಭವಲ್ಲ. ಆದರೂ, ದೇಶದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ರಿಫೈನರಿಗಳು ಈ ಸಂಕೀರ್ಣ ತೈಲಗಳನ್ನೇ ಹೊಸ ಮಿಶ್ರಣಗಳಲ್ಲಿ ಬಳಸಿ ಗರಿಷ್ಠ ಉತ್ಪಾದನೆಗೆ ಮುಂದಾಗಿವೆ.

ಇದನ್ನೂ ಓದಿ: ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ತಂತ್ರಜ್ಞಾನದ ಗರಿಷ್ಠ ಬಳಕೆ

ಜಾಗತಿಕ ತೈಲ ಸಂಸ್ಕರಣಾ ತಂತ್ರಜ್ಞಾನ ಒದಗಿಸುವ ಪ್ರಮುಖ ಸಂಸ್ಥೆಯಾದ ‘ಲಮ್ಮಸ್ ಟೆಕ್ನಾಲಜಿ’ (Lummus Technology) ಪ್ರಕಾರ, ಭಾರತೀಯ ರಿಫೈನರಿಗಳು ಸದ್ಯ ತಮ್ಮಲ್ಲಿರುವ ‘ಹೈಡ್ರೋಕ್ರಾಕರ್ಸ್’ (Hydrocrackers, ಇದು ಸಂಕೀರ್ಣ ತೈಲವನ್ನು ಇಂಧನವಾಗಿ ಪರಿವರ್ತಿಸುವ ತಾಂತ್ರಿಕ ಘಟಕ) ನಂತಹ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಮರು-ಸಂರಚನೆ ಮಾಡುತ್ತಿವೆ. ಮೂಲ ಘಟಕದ ವಿನ್ಯಾಸಕ್ಕಿಂತ ಭಿನ್ನವಾದ ಮತ್ತು ಕಠಿಣವಾದ ಕಚ್ಚಾ ತೈಲ ಬಂದರೂ, ಅದರಿಂದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆ ಇರುವ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಗರಿಷ್ಠ ಪ್ರಮಾಣದಲ್ಲಿ ಉತ್ಪಾದಿಸುವುದು ಇದರ ಉದ್ದೇಶವಾಗಿದೆ.

ಉಕ್ರೇನ್ ಯುದ್ಧದ ಸಮಯದ ಅನುಭವ

ಭಾರತಕ್ಕೆ ಇಂತಹ ಬಿಕ್ಕಟ್ಟು ಎದುರಾಗುತ್ತಿರುವುದು ಇದೇ ಮೊದಲಲ್ಲ. ನಾಲ್ಕು ವರ್ಷಗಳ ಹಿಂದೆ ಉಕ್ರೇನ್ ಯುದ್ಧ ಆರಂಭವಾದಾಗಲೂ ಇಂತಹುದೇ ಪರಿಸ್ಥಿತಿ ಇತ್ತು. ಆಗ ಭಾರತೀಯ ರಿಫೈನರಿಗಳು ರಷ್ಯಾದಿಂದ ರಿಯಾಯಿತಿ ದರದಲ್ಲಿ ಸಿಕ್ಕ ಭಾರಿ ಪ್ರಮಾಣದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡು, ತಮ್ಮ ಘಟಕಗಳ ಸಾಮರ್ಥ್ಯವನ್ನು ಯಶಸ್ವಿಯಾಗಿ ಬದಲಾಯಿಸಿಕೊಂಡಿದ್ದವು. ಅಂದಿನ ಅನುಭವ ಈಗ ಹಾರ್ಮುಜ್ ಬಿಕ್ಕಟ್ಟನ್ನು ಎದುರಿಸಲು ನೆರವಾಗುತ್ತಿದೆ.

ಇದನ್ನೂ ಓದಿ: ಚಿನ್ನಕ್ಕಿಂತಲೂ ಬಿಟ್​ಕಾಯಿನ್ ಒಂದು ಕೈ ಮೇಲೆ ಎನ್ನುತ್ತಿದ್ದ ಮಾರ್ಕ್ ಕ್ಯೂಬನ್ ಈಗ ಕೈಚೆಲ್ಲಿ ಕೂತ ಕಥೆ..!

ಭವಿಷ್ಯದ ಹೂಡಿಕೆಯಲ್ಲಿ ಬದಲಾವಣೆ

ಈ ಬಿಕ್ಕಟ್ಟಿನಿಂದಾಗಿ ಗಲ್ಫ್ ರಾಷ್ಟ್ರಗಳು (GCC) ಕೂಡ ತಮ್ಮ ಹೂಡಿಕೆಯ ಹಾದಿಯನ್ನು ಬದಲಾಯಿಸುತ್ತಿವೆ. ಏಷ್ಯಾದ ಇತರ ದೇಶಗಳಲ್ಲಿ ಹೂಡಿಕೆ ಮಾಡುವ ಬದಲು, ತಮ್ಮದೇ ದೇಶದ ಒಳಗಿನ ಇಂಧನ ಮೂಲಸೌಕರ್ಯಗಳನ್ನು ಬಲಪಡಿಸಲು ಮುಂದಾಗುತ್ತಿವೆ. ಹಾರ್ಮುಜ್ ಜಲಸಂಧಿಯನ್ನೇ ಸಂಪೂರ್ಣವಾಗಿ ನಂಬಿಕೊಂಡಿರುವ ಕುವೈತ್, ಕತಾರ್ ಮತ್ತು ಇರಾಕ್‌ನಂತಹ ದೇಶಗಳು ಭವಿಷ್ಯದಲ್ಲಿ ಸುರಕ್ಷಿತ ಇಂಧನ ರಫ್ತಿಗಾಗಿ ಪರ್ಯಾಯ ಮಾರ್ಗಗಳು ಮತ್ತು ಜಂಟಿ ಯೋಜನೆಗಳ (Joint Ventures) ಬಗ್ಗೆ ಯೋಚಿಸುವಂತಾಗಿದೆ.

ಒಟ್ಟಾರೆಯಾಗಿ, ಜಾಗತಿಕ ರಾಜಕೀಯ ಉದ್ವಿಗ್ನತೆಯು ಭಾರತಕ್ಕೆ ತೈಲ ತರುವ ಹಾದಿಯನ್ನು ಕಠಿಣಗೊಳಿಸಿದ್ದರೂ, ಭಾರತೀಯ ತೈಲ ಕಂಪನಿಗಳು ಹೊಸ ತಂತ್ರಜ್ಞಾನ ಮತ್ತು ತೈಲ ಮಿಶ್ರಣದ ಮುಖಾಂತರ ದೇಶದ ಇಂಧನ ಭದ್ರತೆಗೆ ಯಾವುದೇ ಧಕ್ಕೆಯಾಗದಂತೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿವೆ. ಗಲ್ಫ್ ರಾಷ್ಟ್ರಗಳೂ ಕೂಡ ತಮ್ಮ ಕಾರ್ಯವಿಧಾನದಲ್ಲಿ ಮಾರ್ಪಾಡು ಮಾಡಲು ಹೊರಟಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!

ಬೆಂಗಳೂರು, ಜೂನ್ 01: ಕೈಯಲ್ಲಿ ದೇಶದ ಪ್ರತಿಷ್ಠಿತ ಐಐಟಿ (IIT) ಮತ್ತು ಐಐಎಂ (IIM) ಪದವಿಗಳು, ಅಮೆರಿಕದ ಪ್ರಸಿದ್ಧ ಕಂಪನಿಯಲ್ಲಿ ಕೈತುಂಬಾ ಸಂಬಳ ತಂದುಕೊಡುವ ಉದ್ಯೋಗ, ಐಷಾರಾಮಿ ಜೀವನ ಹೀಗೆ ಎಲ್ಲವೂ ಇದ್ದರೂ, ಅವೆಲ್ಲವನ್ನೂ ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಕೆಫೆ (Cafe) ಆರಂಭಿಸುವ ಮೂಲಕ ಇಬ್ಬರು ಸ್ನೇಹಿತರು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ.

ಮುಖ್ಯಾಂಶಗಳು

  • ಐಐಟಿ ಖರಗ್‌ಪುರ ಹಾಗೂ ಐಐಎಂ ಬೆಂಗಳೂರು ಪದವೀಧರರಿಂದ ಸ್ವಂತ ಉದ್ಯಮದ ಸಾಹಸ.
  • ಅಮೆರಿಕದ ಪ್ರತಿಷ್ಠಿತ ಕಾರ್ಪೊರೇಟ್ ಕಂಪನಿಯ ಉದ್ಯೋಗ ತೊರೆದು ಬೆಂಗಳೂರಿಗೆ ಮರಳಿದ ಸ್ನೇಹಿತರು.
  • ಸಿಲಿಕಾನ್ ಸಿಟಿಯಲ್ಲಿ ಹೊಸ ಕೆಫೆ ಆರಂಭಿಸಿದ ಯುವಕರ ಕಥೆ ನೆಟ್ಟಿಗರ ಮನಗೆದ್ದಿದೆ.

ಸ್ಟಾರ್ಟ್‌ಅಪ್ ಹಬ್‌ನಲ್ಲಿ ಹೊಸ ಸಾಹಸ

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಐಐಟಿ ಖರಗ್‌ಪುರ (IIT Kharagpur) ಮತ್ತು ಐಐಎಂ ಬೆಂಗಳೂರು (IIM Bangalore) ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ್ದ ಇಬ್ಬರು ಯುವಕರು ಅಮೆರಿಕದ ಪ್ರಸಿದ್ಧ ಕಾರ್ಪೊರೇಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರ ರೆಸ್ಯೂಮೆ (CV) ನೋಡಿದರೆ ಯಾವುದೇ ದೊಡ್ಡ ಕಂಪನಿಯಾದರೂ ತಕ್ಷಣ ಕೋಟ್ಯಂತರ ರೂಪಾಯಿ ಪ್ಯಾಕೇಜ್ ನೀಡಲು ಸಿದ್ಧವಿತ್ತು. ಆದರೆ, ಈ ಯುವಕರು ಕೇವಲ ಸಂಬಳದ ಗುಲಾಮರಾಗಿರಲು ಬಯಸಲಿಲ್ಲ. ಕಾರ್ಪೊರೇಟ್ ಬದುಕಿಗೆ ಬೈ ಹೇಳಿದ ಈ ಜೋಡಿ, ತಮ್ಮದೇ ಆದ ಉದ್ಯಮ ಆರಂಭಿಸಲು ನಿರ್ಧರಿಸಿ ಬೆಂಗಳೂರಿಗೆ ಮರಳಿತು

ಪ್ರಸ್ತುತ ಈ ಇಬ್ಬರು ಸ್ನೇಹಿತರು ಬೆಂಗಳೂರಿನಲ್ಲಿ ಸ್ವಂತ ಕೆಫೆಯೊಂದನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಇವರ ಈ ಯಶೋಗಾಥೆಯು ಲಿಂಕ್ಡ್‌ಇನ್ (LinkedIn) ಹಾಗೂ ಎಕ್ಸ್ (X) ಪ್ಲಾಟ್‌ಫಾರ್ಮ್‌ಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಯುವ ಉದ್ಯಮಿಗಳಿಗೆ ಪ್ರೇರಣೆಯಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಮಹಾಪೂರ

ಸಾಮಾನ್ಯವಾಗಿ ಐಐಟಿ-ಐಐಎಂ ಪದವೀಧರರು ದೊಡ್ಡ ತಂತ್ರಜ್ಞಾನ ಕಂಪನಿಗಳು ಅಥವಾ ಹಣಕಾಸು ಸಂಸ್ಥೆಗಳ ಮುಖ್ಯಸ್ಥರಾಗಲು ಬಯಸುತ್ತಾರೆ. ಆದರೆ, ಈ ಯುವಕರು ತಳಮಟ್ಟದಿಂದ ಆಹಾರ ಉದ್ಯಮದಲ್ಲಿ ಹೊಸದೇನನ್ನಾದರೂ ಸಾಧಿಸಲು ಹೊರಂತಿರುವುದು ನೆಟ್ಟಿಗರ ಗಮನ ಸೆಳೆದಿದೆ. ನಿಮ್ಮ ಕನಸನ್ನು ಬೆನ್ನಟ್ಟುವುದು ಸುಲಭವಲ್ಲ, ಅದಕ್ಕೆ ಅಪಾರ ಧೈರ್ಯ ಬೇಕು ಎಂದು ಹಲವರು ಇವರ ನಿರ್ಧಾರವನ್ನು ಕೊಂಡಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ಕೋಲ್ಕತಾ, ಜೂನ್ 1: ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾಮಂಡಳ (GCMMF) ಒಡೆತನದ ಅಮುಲ್ ಸಂಸ್ಥೆಯು ಪಶ್ಚಿಮ ಬಂಗಾಳದ ಕೋಲ್ಕತ್ತಾ ಸಮೀಪದ ಹೌರಾದಲ್ಲಿರುವ ಸಂಕ್ರೇಲ್ ಫುಡ್ ಪಾರ್ಕ್‌ನಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಸಮಗ್ರ ಡೈರಿ ಘಟಕವನ್ನು ಸ್ಥಾಪಿಸುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ಮೊಸರು ಉತ್ಪಾದನಾ ಘಟಕ (Curd plant) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಘಟಕವು ಪ್ರತಿದಿನ 10 ಲಕ್ಷ ಕಿಲೋಗ್ರಾಂ (1,000 ಮೆಟ್ರಿಕ್ ಟನ್) ಮೊಸರು ಉತ್ಪಾದಿಸುವ ಹಾಗೂ ದಿನಕ್ಕೆ 15 ಲಕ್ಷ ಲೀಟರ್ ಹಾಲು ಸಂಸ್ಕರಿಸುವ ಸಾಮರ್ಥ್ಯ ಹೊಂದಿರಲಿದೆ. ಬಂಗಾಳದ ಮಾರುಕಟ್ಟೆಯಲ್ಲಿ ಸಾಂಪ್ರದಾಯಿಕ ‘ಮಿಷ್ಟಿ ದೋಯಿ’ ಮತ್ತು ‘ಟೋಕ್ ದೋಯಿ’ ಇತ್ಯಾದಿ ಮೊಸರು ಉತ್ಪನ್ನಗಳಿಗೆ ಇರುವ ಭಾರಿ ಬೇಡಿಕೆಯನ್ನು ಬಳಸಿಕೊಂಡು ಪೂರ್ವ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ಅಮುಲ್ ಈ ತಂತ್ರ ರೂಪಿಸಿದೆ.

ಕರ್ನಾಟಕದಲ್ಲಿ ನಂದಿನಿಯಿಂದ ಸಿಕ್ಕ ಪ್ರತಿರೋಧ ಅಮುಲ್​ಗೆ ಬಂಗಾಳದಲ್ಲಿ ಇಲ್ಲ

ಗುಜರಾತ್ ಮೂಲದ ಅಮುಲ್ ದೇಶದ ವಿವಿಧ ಭಾಗಗಳಲ್ಲಿ ತನ್ನ ಮಾರುಕಟ್ಟೆಯನ್ನು ವಿಸ್ತರಿಸುತ್ತಾ ಮುನ್ನುಗ್ಗುತ್ತಿದ್ದರೆ, ಕರ್ನಾಟಕದಂತಹ ಕೆಲ ರಾಜ್ಯಗಳಲ್ಲಿ ದೊಡ್ಡ ಮಾರುಕಟ್ಟೆ ಪಾಲು ಪಡೆಯಲು ವಿಫಲವಾಗಿದೆ. ಕರ್ನಾಟಕದ ಹಾಲು ಮಹಾಮಂಡಳಿ (KMF) ಒಡೆತನದ ‘ನಂದಿನಿ’ ಬ್ರ್ಯಾಂಡ್ ಎದುರು ಅಮುಲ್ ಆಟ ಹೆಚ್ಚು ನಡೆಯುತ್ತಿಲ್ಲ. ಆದರೆ, ಪಶ್ಚಿಮ ಬಂಗಾಳದಲ್ಲಿ ಅಮುಲ್​ಗೆ ಹೆಚ್ಚಿನ ಪೈಪೋಟಿ ಸಿಕ್ಕೇ ಇಲ್ಲ. ಅಲ್ಲಿ ಅಮುಲ್ ಈಗಾಗಲೇ ಅತಿದೊಡ್ಡ ಹಾಲಿನ ಬ್ರ್ಯಾಂಡ್ ಆಗಿದೆ. ಈಗ ಬಹಳ ಬೇಡಿಕೆಯಲ್ಲಿರುವ ಮೊಸರು ಬ್ಯುಸಿನೆಸ್​ನಲ್ಲೂ ಅಮುಲ್ ನಂಬರ್ ಒನ್ ಆಗಲು ಸ್ಕೆಚ್ ಹಾಕಿದೆ.

ಇದನ್ನೂ ಓದಿ: ಚಿನ್ನಕ್ಕಿಂತಲೂ ಬಿಟ್​ಕಾಯಿನ್ ಒಂದು ಕೈ ಮೇಲೆ ಎನ್ನುತ್ತಿದ್ದ ಮಾರ್ಕ್ ಕ್ಯೂಬನ್ ಈಗ ಕೈಚೆಲ್ಲಿ ಕೂತ ಕಥೆ..!

ಕರ್ನಾಟಕದಲ್ಲಿ ನಂದಿನಿ ಸೋಲದಿರಲು ಏನು ಕಾರಣ?

ಕರ್ನಟಕದಲ್ಲಿ ಕೆಎಂಎಫ್ ಮತ್ತು ನಂದಿನಿ ಬ್ರ್ಯಾಂಡ್​ಗೆ ಭಾವನಾತ್ಮಕ ನಂಟಿದೆ. ತಮ್ಮ ಊರಿನ ಹಾಲೆಂದು ಜನಸಾಮಾನ್ಯರಿಂದ ಹಿಡಿದು ಹೋಟೆಲ್ ಉದ್ದಿಮೆಯ ಜನರೆಲ್ಲರೂ ನಂದಿನಿ ಹಾಲೇ ಬೇಕೆಂದು ಕೇಳಿ ಹಾಕಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆಯಂತೆ. ಜೊತೆಗೆ, ಇತರ ಬ್ರ್ಯಾಂಡ್ ಹಾಲುಗಳಿಗಿಂತ ನಂದಿನಿ ಹಾಲು ತುಸು ಕಡಿಮೆ ಬೆಲೆ ಹೊಂದಿರುವುದು ಕೂಡ ಕೆಎಂಎಫ್ ಕರ್ನಾಟಕದಲ್ಲಿ ನಂಬರ್ ಒನ್ ಆಗಿ ಮುಂದುವರಿಯಲು ಸಾಧ್ಯವಾಗಿದೆ.

ನಂದಿನಿ ಕೇವಲ ಕರ್ನಾಟಕ ಅಷ್ಟೇ ಅಲ್ಲದೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗೋವಾಗಳಿಗೂ ತನ್ನ ಮಾರುಕಟ್ಟೆಯನ್ನು ವಿಸ್ತರಿಸಿದೆ. ಮಹಾರಾಷ್ಟ್ರದ ‘ಮಹಾನಂದ್’ ಡೈರಿ ಅಮುಲ್ ಎಂಟ್ರಿಯಿಂದ ಸೊರಗಿದ ಉದಾಹರಣೆ ಮುಂದಿಟ್ಟುಕೊಂಡು, ನಂದಿನಿ ತನ್ನ ಮಾರುಕಟ್ಟೆಯನ್ನು ರಕ್ಷಿಸಿಕೊಳ್ಳಲು ಆಕ್ರಮಣಕಾರಿ ಹೆಜ್ಜೆ ಇಡುತ್ತಿದೆ.

ಅಮುಲ್ ಜಾಗತಿಕವಾಗಿ ಹರಡಿಕೊಳ್ಳುತ್ತಿದ್ದರೆ, ನಂದಿನಿ ಕೂಡ ಕಡಿಮೆ ಇಲ್ಲ ಎಂಬಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ (ಟಿ20 ವಿಶ್ವಕಪ್ ಪ್ರಾಯೋಜಕತ್ವದಂತಹ ದೊಡ್ಡ ವೇದಿಕೆಗಳ ಮೂಲಕ) ತನ್ನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸಿಕೊಂಡು ಅಮುಲ್‌ಗೆ ಪ್ರಬಲ ರಾಷ್ಟ್ರೀಯ ಪೈಪೋಟಿ ನೀಡುತ್ತಿದೆ.

ಇದನ್ನೂ ಓದಿ: ಜಾಗತಿಕ ಸವಾಲುಗಳ ನಡುವೆಯೂ 2026-27ರಲ್ಲಿ ಭಾರತದ ಜಿಡಿಪಿ ಶೇ. 6.9 ವೃದ್ಧಿ: ಆರ್​ಬಿಐ ವಾರ್ಷಿಕ ವರದಿಯಲ್ಲಿ ಅಂದಾಜು

ಪಶ್ಚಿಮ ಬಂಗಾಳದಲ್ಲಿ ಡೈರಿ ಉದ್ಯಮಕ್ಕೆ ದೊಡ್ಡ ಮಾರುಕಟ್ಟೆ

ಕರ್ನಾಟಕದಲ್ಲಿ ಡೈರಿ ಉದ್ಯಮದ ಮಾರುಕಟ್ಟೆ ಗಾತ್ರ 1.35 ಲಕ್ಷ ಕೋಟಿ ರೂ ಇದೆ. ಪಶ್ಚಿಮ ಬಂಗಾಳದಲ್ಲಿ ಹತ್ತಿರ ಹತ್ತಿರ ಒಂದು ಲಕ್ಷ ಕೋಟಿ ರೂ ಸಮೀಪದಷ್ಟು ಗಾತ್ರದ ಮಾರುಕಟ್ಟೆ ಇದೆ. ಇಲ್ಲಿಯ ತಿನಿಸುಗಳಿಗೆ ಹೆಚ್ಚಾಗಿ ಮೊಸರನ್ನು ಬಳಸಲಾಗುತ್ತದೆ. ಆದರೆ, ಇಲ್ಲಿಯ ಡೈರಿ ಉದ್ಯಮದಲ್ಲಿ ಸಣ್ಣ ಸಣ್ಣ ಸಂಸ್ಥೆಗಳದ್ದೇ ಕಾರುಬಾರು. ಹೀಗಾಗಿ, ಅಮುಲ್​ನಂತಹ ದೊಡ್ಡ ಸಂಸ್ಥೆಗಳಿಗೆ ನೆಲೆಯೂರಲು ಮಾರುಕಟ್ಟೆ ಪೂರಕವಾಗಿದೆ. ಬಂಗಾಳ ಮಾತ್ರವಲ್ಲ, ಬಿಹಾರ, ಒಡಿಶಾ ಇತ್ಯಾದಿ ಪೂರ್ವ ರಾಜ್ಯಗಳ ಡೈರಿ ಮಾರುಕಟ್ಟೆಗಳಲ್ಲೂ ಇಂಥದ್ದೇ ಸ್ಥಿತಿ ಇರುವುದು. ಹೀಗಾಗಿ, ಅಮುಲ್ ಧೈರ್ಯವಾಗಿ ಬಂಡವಾಳ ಹೂಡುತ್ತಿದೆ ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆರ್‌ಸಿಬಿ ಪಾಲಿಗೆ ‘ಲಕ್ಕಿ ಚಾರ್ಮ್’ ಆದ ಅನುಷ್ಕಾ ಶರ್ಮಾ

Source link

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ‘ಬಿಗ್ ಬಾಯ್ಸ್’ ಹೇಳಿಕೆ!

17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದು 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಐಪಿಎಲ್​ನಲ್ಲಿ ಸತತ ಎರಡು ಟ್ರೋಫಿ ಗೆದ್ದ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯ ಬೆನ್ನಲ್ಲೇ, ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟು ಟೀಕಾಗಾರನೆಂದೇ ಗುರುತಿಸಿಕೊಂಡಿದ್ದ ಅಂಬಾಟಿ ರಾಯುಡು ಅವರೇ ಇದೀಗ ಆರ್​ಸಿಬಿ ತಂಡವನ್ನು ‘ಬಿಗ್ ಬಾಯ್ಸ್’ ಪಡೆ ಎಂದು ಹೊಗಳಿದ್ದಾರೆ. ಅಂದರೆ ಸಾಟಿಯಿಲ್ಲದ ಸರದಾರರು ಎಂದರ್ಥ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಯುಡು, ಆರ್‌ಸಿಬಿ ತಂಡದ ಈ ಅದ್ಭುತ ಪರಿವರ್ತನೆಯನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

“ಈ ಹಿಂದೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ ಅವರಂತಹ ಸ್ಟಾರ್ ಆಟಗಾರರ ಮೇಲೆ ಅವಲಂಭಿತವಾಗಿತ್ತು. ಆದರೆ ಇದೀಗ ತಂಡ ಬದಲಾಗಿದೆ. ಒಂದು ತಂಡವಾಗಿ ಹೋರಾಡುತ್ತಿದ್ದಾರೆ”.

“ಆರ್​ಸಿಬಿ ತಂಡದ ಪ್ರದರ್ಶನವನ್ನು ಗಮನಿಸಿದರೆ, ಅವರು ಐಪಿಎಲ್​ನ ಬಿಗ್ ಬಾಯ್ಸ್ ಎಂಬುದರಲ್ಲಿ ಸಂಶಯವೇ ಇಲ್ಲ. ಪ್ರಸ್ತುತ ಇರುವ ತಂಡವು ಈ ಹಿಂದಿನ ಚಾಂಪಿಯನ್​ಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್​ ತಂಡಗಳಿಗಿಂತ ಬಲಿಷ್ಠವಾಗಿದೆ” ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

“ಅಷ್ಟೇ ಅಲ್ಲದೆ ಇದು ಆರ್​ಸಿಬಿ ತಂಡದ ಯುಗ. ಈ ಯುಗದಲ್ಲಿ ಅವರು ಈ ಹಿಂದಿನ ಚಾಂಪಿಯನ್​ ತಂಡಗಳಿಗೆ ಸಮನಾದ ಪ್ರದರ್ಶನ ನೀಡುತ್ತಿದೆ. ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ರಾಯುಡು ಹೇಳಿದ್ದಾರೆ.

ಇದೀಗ ಅಂಬಾಟಿ ರಾಯುಡು ಅವರ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ರಾಯುಡು ಅವರನ್ನು ಆರ್​ಸಿಬಿ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

ಏಕೆಂದರೆ ಅಂಬಾಟಿ ರಾಯುಡು ಈ ಹಿಂದೆ ಆರ್​ಸಿಬಿ ತಂಡವನ್ನು ಲೇವಡಿ ಮಾಡಿದ್ದರು. ಅಲ್ಲದೆ ಅವಕಾಶ ಸಿಕ್ಕಾಗೆಲ್ಲಾ ಆರ್​ಸಿಬಿ ತಂಡವನ್ನು ಟೀಕಿಸಿದ್ದರು. ಇದಕ್ಕೆ ಸಾಕ್ಷಿ ಅವರ ಈ ಹಿಂದಿನ ಹೇಳಿಕೆಗಳು…

  • ಟ್ರೋಫಿ ಸಂಖ್ಯೆಯ ಲೇವಡಿ: RCB ತನ್ನ ಮೊದಲ ಐಪಿಎಲ್ ಟ್ರೋಫಿ ಗೆದ್ದಾಗ ಲೇವಡಿ ಮಾಡಿದ್ದ ರಾಯುಡು, “ನಿಮಗೆ ಒಂದು ಕಪ್ ಗೆಲ್ಲಲು 18 ವರ್ಷ ಬೇಕಾಯಿತು, ಹಾಗಾದರೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 5 ಟ್ರೋಫಿಗಳ ದಾಖಲೆ ಸರಿಗಟ್ಟಲು ನಿಮಗೆ 72 ವರ್ಷ ಬೇಕಾಗಬಹುದು” ಎಂದು ಕಾಲೆಳೆದಿದ್ದರು.
  • ಸಂಭ್ರಮಾಚರಣೆಗೆ ಟೀಕೆ: 2024ರ ಐಪಿಎಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಟೂರ್ನಿಯಿಂದ ಹೊರಹಾಕಿದಾಗ ಆರ್‌ಸಿಬಿ ಆಟಗಾರರು ಮತ್ತು ಅಭಿಮಾನಿಗಳು ರಸ್ತೆಯಲ್ಲಿ ಅತಿಯಾಗಿ ಸಂಭ್ರಮಿಸಿದ್ದನ್ನು ರಾಯುಡು ಟೀಕಿಸಿದ್ದರು. “ಕೇವಲ ಸಂಭ್ರಮಾಚರಣೆಗಳು ನಿಮಗೆ ಟ್ರೋಫಿ ತಂದುಕೊಡುವುದಿಲ್ಲ” ಎಂದು ತಿವಿದಿದ್ದರು.

ಇದನ್ನೂ ಓದಿ: Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬದಲಾಗಿದೆ. ಈ ಹಿಂದೆ ಟೀಕಿಸಿದ ಅಂಬಾಟಿ ರಾಯುಡುವೇ, ಪ್ರಸ್ತುತ ಇರುವ ಆರ್‌ಸಿಬಿ ತಂಡವು ಎಷ್ಟು ಬಲಿಷ್ಠವಾಗಿದೆ ಎಂದರೆ, ಬೇರೆ ಯಾವುದೇ ತಂಡಗಳು ಅವರ ಹತ್ತಿರವೂ ಬರಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

Source link

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬೆಂಗಳೂರು, ಜೂನ್ 1: ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್​ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ನಡು ಮಾರ್ಗದಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಹೆಚ್​ಎಎಲ್​ ಓಲ್ಡ್ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಇದೇ ವೇಳೆ ಬಳಿ ಬಂದ ಟ್ರಾಫಿಕ್ ಪೊಲೀಸರ ಬಳಿ, ‘ನನ್ನ ಪತ್ನಿ ಗರ್ಭಿಣಿ, ಈಗ ಹೇಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಸಂಚಾರಕ್ಕಾಗಿ ಸುಮಾರು 30 ನಿಮಿಷ ಪೊಲೀಸರು ಟ್ರಾಫಿಕ್​ ಬಂದ್ ಮಾಡಿದ್ದರು. ಇದರಿಂದ ವ್ಯಕ್ತಿ ಕೆರಳಿದ್ದರು. ನಂತರ ವ್ಯಕ್ತಿಯನ್ನು ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ ಸ್ಥಿತ್ಯಂತರಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಈ ಉನ್ನತ ಮಟ್ಟದ ಭೇಟಿ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳಿಗೆ ನಿರ್ಣಾಯಕವಾಗಬಹುದು. ಈ ಭೇಟಿಯು ಕರ್ನಾಟಕದಲ್ಲಿ ಸ್ಥಿರ ಸರ್ಕಾರ ರಚನೆಗೆ ಅಡಿಪಾಯ ಹಾಕುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version