Headlines

IND vs ENG: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್ – Kannada News | England Beats India in 2nd ODI: Joe Root’s 99* Levels Series 1 1 in Cardiff

ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England ODI) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಗೆಲುವು ಸಾಧಿಸಿದೆ. ಇಂಗ್ಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಜೋ ರೂಟ್ ಅಜೇಯ 99 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 44 ಓವರ್‌ಗಳಲ್ಲಿ ತನ್ನೇಲ್ಲ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು… – Kannada News | Daily Horoscope for July 17, 2026: Uttarayan Greeshma season, Ashada Masa shukla Paksha Friday astrology Prediction

ಮೇಷ ರಾಶಿ: ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವೃಷಭ ರಾಶಿ: ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಒಳ್ಳೆಯದು. ನಿಮ್ಮ ಪರೀಕ್ಷೆಗಳೂ ಆಗಬಹುದು. ಆಪ್ತರೇ ನಿಮ್ಮನ್ನು ಎಲ್ಲರೆದುರು ಟೀಕಿಸಿಯಾರು. ಯಾರನ್ನೂ ಹೆಚ್ಚು…

Read More

ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ – Kannada News | Wild elephant facing jcb for protecting forest watch viral video

ಅಸ್ಸಾಂನ, ಜುಲೈ 16: ಅರಣ್ಯವನ್ನು ರಕ್ಷಿಸಲು ಜೆಸಿಬಿ ಮುಂದೆ ನಿಂತಿರುವ ಆನೆಯ ವಿಡಿಯೋವೊಂದು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗುತ್ತಿದೆ. ಅಸ್ಸಾಂನಲ್ಲಿ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋದಲ್ಲಿ ಒಂದು ದೊಡ್ಡ ಆನೆ ಮತ್ತು ಜೆಸಿಬಿ ಯಂತ್ರ ಪರಸ್ಪರ ಎದುರಾಗಿ ಕಾಣಿಸಿಕೊಂಡಿವೆ. ಇದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು FalconUpdatesHQ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಆನೆಯೊಂದು ಹಸಿರು ಪ್ರದೇಶದ ಮಧ್ಯದಲ್ಲಿ ನಿಂತಿದೆ. ಅದರ ಮುಂದೆ…

Read More

IND vs ENG: 4,4,4,6..! ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಜಸ್ಪ್ರೀತ್ ಬುಮ್ರಾ – Kannada News | Jasprit Bumrah’s Explosive Batting Shocks England in ODI! Unexpected Runs Highlight Skills

ಜಸ್ಪ್ರೀತ್ ಬುಮ್ರಾ (Jasprit Bumrah) ಎಂದೊಡನೆ ನಮಗೆಲ್ಲ ನೆನಪಾಗುವುದು ಅವರ ಕರಾರುವಕ್ಕಾದ ಬೌಲಿಂಗ್. ವಿಶ್ವ ಕ್ರಿಕೆಟ್​ನ ಅಗ್ರಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಬುಮ್ರಾ ಕೂಡ ಸ್ಥಾನ ಪಡೆದಿದ್ದಾರೆ. ಬೌಲಿಂಗ್‌ನಲ್ಲಿ ವಿಶ್ವದರ್ಜೆಯ ಬೌಲರ್ ಎನಿಸಿಕೊಂಡಿರುವ ಬುಮ್ರಾಗೆ ಬ್ಯಾಟಿಂಗ್​ನಲ್ಲಿ ಮಾತ್ರ ಛಾಪು ಮೂಡಿಸಲು ಸಾಧ್ಯವಾಗಿಲ್ಲ. ಆದಾಗ್ಯೂ ಬುಮ್ರಾ ಆಗಾಗ್ಗ ತಮ್ಮ ಬ್ಯಾಟಿಂಗ್‌ ಮೂಲಕ ಕೆಲವು ಚಮತ್ಕಾರಿ ಇನ್ನಿಂಗ್ಸ್​ಗಳನ್ನು ಆಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಬುಮ್ರಾ ಸ್ಫೋಟಕ ಬ್ಯಾಟಿಂಗ್‌ ಮೂಲಕ ಇಂಗ್ಲೆಂಡ್‌ ಬೌಲರ್​ನ…

Read More

NEET UG 2026 Results: ನೀಟ್ ಯುಜಿ ಫಲಿತಾಂಶ ಪ್ರಕಟ; 11.21 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ; ರಿಸಲ್ಟ್ ನೋಡುವುದು ಹೇಗೆ? – Kannada News | NEET UG 2026 Results declared by NTA at how to check scorecard

ನವದೆಹಲಿ, ಜುಲೈ 16: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇಂದು ‘ನೀಟ್ ಯುಜಿ 2026’ (NEET UG 2026) ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಉತ್ತೀರ್ಣರಾದ ಒಟ್ಟು ಅಭ್ಯರ್ಥಿಗಳಲ್ಲಿ ಶೇ. 58ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 715 ಅಂಕಗಳೊಂದಿಗೆ ಇಬ್ಬರಿಗೆ ಪ್ರಥಮ ಸ್ಥಾನ ಲಭಿಸಿದೆ. ಒಟ್ಟು 720 ಅಂಕಗಳಿಗೆ 715 ಅಂಕಗಳನ್ನು ಪಡೆಯುವ ಮೂಲಕ ಪಂಜಾಬ್‌ನ ಆರ್ಯನ್ ಗುಪ್ತಾ ಮತ್ತು ಹರಿಯಾಣದ ಪನ್ಶುಲ್ ಬನ್ಸಾಲ್ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 21ರಂದು…

Read More

ಕರ್ನಾಟಕದ ಕಿಂಗ್‌ಮೇಕರ್: ರಶೀದ್‌ ಪುಸ್ತಕದಲ್ಲಿ ಡಿಕೆ ಶಿವಕುಮಾರ್ ರಾಜಕೀಯ ಪಯಣ,ಬೈಕ್‌ ಪ್ರೇಮ ಅನಾವರಣ – Kannada News | DK Shivakumar Gets His Congress’s Crisis Manager, Karnataka’s Kingmaker biography Written By Rasheed Kidwai

ನವದೆಹಲಿ, (ಜುಲೈ 16): ಪತ್ರಕರ್ತ ರಶೀದ್‌ ಕಿದ್ವಾಯಿ (senior journalist Rasheed Kidwai) ಅವರು ಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಬಗ್ಗೆ ಪುಸ್ತಕ ಬರೆದಿದ್ದಾರೆ. ‘ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ ಕ್ರೈಸಿಸ್ ಮ್ಯಾನೇಜರ್, ಕರ್ನಾಟಕದ ಕಿಂಗ್‌ಮೇಕರ್’ (“Congress’s Crisis Manager, Karnataka’s Kingmaker”) ಎನ್ನುವ ಪುಸ್ತಕವನ್ನು ಬರೆದಿದ್ದು, ಪುಸ್ತಕದಲ್ಲಿ, ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್‌ ಅವರ ಯೆಜ್ಡಿ ಬೈಕ್‌ ಪ್ರೀತಿಯ ಅನಾವರಣವಾಗಿದೆ. ಇನ್ನು ಇಂದು (ಜುಲೈ 16) ರಶೀದ್‌ ಕಿದ್ವಾಯಿ ಅವರು ಡಿ.ಕೆ. ಶಿವಕುಮಾರ್​​ಗೆ…

Read More

ಐಪಿಎಸ್, ಸೈನಿಕ, ಗುಪ್ತಚರ ಅಧಿಕಾರಿ ಹೆಸರಿನಲ್ಲಿ ವಂಚನೆ; ಉತ್ತರಾಖಂಡದ ಐಎಎಸ್​ ಆಫೀಸರ್ ಮಗನ ಬಂಧನ – Kannada News | Former IAS Officers Son Arrested For posed as IPS Officer, RAW And Army Officials In Uttarakhand

ಡೆಹ್ರಾಡೂನ್, ಜುಲೈ 16: ಸರ್ಕಾರದ ಉನ್ನತ ಅಧಿಕಾರಿಗಳು, ಐಪಿಎಸ್ ಅಧಿಕಾರಿ ಹಾಗೂ ದೇಶದ ಪ್ರತಿಷ್ಠಿತ ಗುಪ್ತಚರ ಸಂಸ್ಥೆ ‘ರಾ’ (RAW) ಏಜೆಂಟ್ ಎಂದು ಸೋಗು ಹಾಕಿಕೊಂಡು ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ವಂಚಿಸುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮಗನನ್ನು ಉತ್ತರಾಖಂಡದ (Uttarakhand) ಡೆಹ್ರಾಡೂನ್ ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ಮಾಜಿ ಮುಖ್ಯ ಕಾರ್ಯದರ್ಶಿ ಎಸ್. ರಾಮಸ್ವಾಮಿ ಅವರ ಮಗ ಯಶವರ್ಧನ್ ಬಂಧಿತ ಆರೋಪಿಯಾಗಿದ್ದು, ಇಂದು ಮುಸ್ಸೋರಿ ರಸ್ತೆಯಲ್ಲಿ ನಡೆಸಿದ ವಾಹನ ತಪಾಸಣೆ ವೇಳೆ ಈತ ಸಿಕ್ಕಿಬಿದ್ದಿದ್ದಾನೆ. ಆತನನ್ನು ತಪಾಸಣೆಗೆ…

Read More

‘ರೇಜ್ ಆಫ್ ಕಂಬಳ’ ಹಾಡಿನಿಂದ ಕುತೂಹಲ ಹೆಚ್ಚಿಸಿದ ‘ಕರಾವಳಿ’ ಸಿನಿಮಾ ತಂಡ – Kannada News | Prajwal Devaraj Raj B Shetty starrer Karavali movie new song Rage of Kambala released

ಹಲವು ಕಾರಣಗಳಿಂದಾಗಿ ‘ಕರಾವಳಿ’ (Karavali) ಸಿನಿಮಾ ನಿರೀಕ್ಷೆ ಮೂಡಿಸಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ (Raj B. Shetty) ಮುಂತಾದವರು ನಟಿಸಿರುವ ಈ ಸಿನಿಮಾದ ಹಾಡುಗಳು ಗಮನ ಸೆಳೆಯುತ್ತಿವೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳನ್ನು ನೋಡಿದ ಬಳಿಕ ಸಿನಿಮಾ ಮೇಲಿನ ಹೈಪ್ ಇನ್ನಷ್ಟು ಹೆಚ್ಚಾಗಿದೆ. ಈಗ ಇನ್ನೊಂದು ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡು ಸಖತ್ ಅಗ್ರೆಸಿವ್ ಆಗಿದೆ ಎಂಬುದು ವಿಶೇಷ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಜೊತೆ ಸಂಪದಾ, ಸುಷ್ಮಿತಾ, ಮಿತ್ರ,…

Read More

ಥಾಣೆಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು – Kannada News | 1 Dead, several injured as crane collapses onto vehicles in Thane

ಮುಂಬೈ, ಜುಲೈ 16: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪ್ರದೇಶದಲ್ಲಿ ಇಂದು ಸಂಜೆ ಭೀಕರ ಅಪಘಾತವೊಂದು ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಳವಡಿಸಲಾಗಿದ್ದ ಬೃಹತ್ ಕ್ರೇನ್ ನಿಯಂತ್ರಣ ತಪ್ಪಿ ಕೆಳಗಡೆ ನಿಲ್ಲಿಸಲಾಗಿದ್ದ ಹಲವು ವಾಹನಗಳ ಮೇಲೆ ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಮೀರಾ ರೋಡ್‌ನಲ್ಲಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದಿದೆ. ಕ್ರೇನ್ ಅನ್ನು ಕಟ್ಟಡದ 13ನೇ ಮಹಡಿಯಲ್ಲಿ ನಿಲ್ಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು….

Read More

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ; ಇದರ ವಿಶೇಷತೆ ಒಂದೆರಡಲ್ಲ! – Kannada News | PM Narendra Modi To Launch India’s First Hydrogen Powered Train in Haryana Tomorrow

ಚಂಡೀಗಢ, ಜುಲೈ 16: ಭಾರತೀಯ ರೈಲ್ವೆ ಇತಿಹಾಸದಲ್ಲಿ ನಾಳೆ (ಜುಲೈ 17) ಮತ್ತೊಂದು ಸುವರ್ಣ ಅಧ್ಯಾಯ ಸೃಷ್ಟಿಯಾಗಲಿದೆ. ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಲ್ಲಿ ತಯಾರಾಗಿರುವ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ (Hydrogen-powered train) ನಾಳೆ ಹರಿಯಾಣದ ಜಿಂದ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಹಸಿರು ನಿಶಾನೆ ತೋರಿಸಲಿದ್ದಾರೆ. ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ (ICF) ವಿನ್ಯಾಸಗೊಳಿಸಲಾದ ಈ ರೈಲಿನ ಉದ್ಘಾಟನೆಯೊಂದಿಗೆ, ಪರಿಸರಸ್ನೇಹಿ ರೈಲು ಸಾರಿಗೆಗಾಗಿ ಹೈಡ್ರೋಜನ್ ತಂತ್ರಜ್ಞಾನ ಬಳಸುತ್ತಿರುವ ಜರ್ಮನಿ, ಜಪಾನ್, ಚೀನಾ ಮತ್ತು…

Read More