‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ.

ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ರಣವೀರ್ ಸಿಂಗ್ ಭಾಗಿ ಆಗಿದ್ದರು. ‘ಕಾಂತಾರ’ ಚಿತ್ರದ ನಾಯಕ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಅಲ್ಲಿಯೇ ಇದ್ದರು. ವೇದಿಕೆ ಏರಿದ ರಣವೀರ್ ಅವರು ದೈವವನ್ನು ಅನುಕರಿಸಿದರು. ಈ ವಿಡಿಯೋ ವೈರಲ್ ಆಗಿತ್ತು. ರಣವೀರ್ ಅವರನ್ನು ಅನೇಕರು ಟೀಕಿಸಿದರು.

ಭಕ್ತರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಅಭಿನಯ ಮಾಡಿದ್ದಾರೆ ಎಂದು 1ನೇ ಎಸಿಜೆಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿತ್ತು. ವಕೀಲ ಪ್ರಶಾಂತ್ ಮೇಥಲ್ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಅನ್ವಯ ಬೆಂಗಳೂರು ಪೊಲೀಸರು ಎಫ್​ಐಆರ್ ದಾಖಲು ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ಆರಾಧಿಸುವ ಚಾವುಂಡಿ, ಗುಳಿಗ, ಪಂಜುರ್ಲಿ ದೈವಗಳನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಬಿಎನ್​ಎಸ್​​ ಕಾಯ್ದೆ 196, 302, 299 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ

ರಣವೀರ್ ಸಿಂಗ್ ಅವರು ದೈವ ಅನುಕರಿಸಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಈ ಪ್ರಕರಣದಿಂದ ಅವರ ನಟನೆಯ ‘ಧುರಂಧರ್’ ಚಿತ್ರಕ್ಕೆ ಆರಂಭದಲ್ಲಿ ಹಿನ್ನಡೆ ಆಯಿತು. ಆ ಬಳಿಕ ಸಿನಿಮಾ ಚೆನ್ನಾಗಿ ಇದ್ದಿದ್ದರಿಂದ ಸಿನಿಮಾಗೆ ಯಾವುದೇ ತೊಂದರೆ ಆಗಿಲ್ಲ. ಈ ಚಿತ್ರ 1300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಜನವರಿ 30ಕ್ಕೆ ನೆಟ್​​​ಫ್ಲಿಕ್ಸ್​​ನಲ್ಲಿ ಸಿನಿಮಾ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:08 am, Thu, 29 January 26

Source link

ಬೆಂಗಳೂರಿನ ಈ ರೆಸ್ಟೋರೆಂಟ್​​​ಗಳಲ್ಲಿ ಊಟ ಸೇವಿಸಿದ್ರೆ ಪ್ರಾಣ ಹೋಗುವುದು ಖಂಡಿತ, ಟಿವಿ9 ಕನ್ನಡ ನಡೆಸಿದ ಬಿಗ್ ಕಾರ್ಯಚರಣೆ – Kannada News | Shocking: Bengaluru Restaurants Use Expired Food, Risking Your Health

ಬೆಂಗಳೂರು, ಜ.29: ಬೆಂಗಳೂರಿನಲ್ಲಿ (Bengaluru) ರೆಸ್ಟೋರೆಂಟ್​​​ಗಳಿಗೆ ಏನು ಕಡಿಮೆ ಇಲ್ಲ. ಬೀದಿ ಬೀದಿಯಲ್ಲಿ ರೆಸ್ಟೋರೆಂಟ್​​ಗಳು ಇದೆ. ಆದ್ರೆ ಅಲ್ಲಿ ಸರಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರಗಳು ಸಿಗುತ್ತಾ? ಎಂಬ ಅನುಮಾನ ಮೂಡಿದೆ. ಹಣ ಗಳಿಸುವ ಆಸೆಯಲ್ಲಿ ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಇದೀಗ ಬೆಂಗಳೂರಿನ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನೆ ಎದ್ದಿದೆ. ದೇಶ-ವಿದೇಶದ ಜನರನ್ನು ಬೆಂಗಳೂರು ಆಹಾರ ವಿಚಾರದಲ್ಲಿ ಸೆಳೆದುಕೊಂಡಿದೆ. ಆದರೆ ಇದೀಗ ಇಲ್ಲಿನ ರೆಸ್ಟೋರೆಂಟ್ ನಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​​ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗಿದೆ. ಬೆಂಗಳೂರಿನಲ್ಲಿ ಜನಸಾಮಾನ್ಯರ ಹಸಿವನ್ನು ಬಂಡವಾಳ ಮಾಡಿಕೊಂಡ ಹೋಟೆಲ್ ಮಾಲೀಕರು ಆಹಾರದಲ್ಲೂ ಒಂದು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ. ರಾಜಾಜಿನಗರ ಬಳಿಯ ಶಿವನಗರ ಸಿಗ್ನಲ್ ಸಮೀಪದ ಹಂಗ್ರಿ ಬೈಟ್ಸ್ ಎಂಬ ರೆಸ್ಟೋರೆಂಟ್ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಬಳಸಿ ಅಡುಗೆ ತಯಾರಿಸುತ್ತಿದ್ದಾರೆ. ಸಾಸ್, ಮಯೋನಿಸ್, ಜ್ಯೂಸ್​ ಫ್ಲೇವರ್ಸ್, ಸೇರಿ ಹತ್ತು ಹಲವು ಉತ್ಪನ್ನಗಳ ಎಕ್ಸ್​​ಪೈರಿ ಡೇಟ್​ ಮುಗಿದು ಒಂದು ವರ್ಷವಾದರೂ ಅದನ್ನೇ ಬಳಸುತ್ತಿದ್ದಾರೆ ಎಂಬುದನ್ನು ಟಿವಿ9 ಕನ್ನಡ ಪತ್ತೆ ಮಾಡಿದೆ.

ಸ್ಯಾಂಡ್ ವಿಚ್, ಮೊಮೊಸ್, ಫ್ರೆಂಚ್ ಫ್ರೈಸ್ ಸೇರಿದಂತೆ ಇನ್ನು ಅನೇಕ ಆಹಾರ ತಯಾರಿಸಲು ಬಳಸುವ ಉತ್ಪನ್ನಗಳು ತುಂಬಾ ಕಳಪೆಯಾಗಿದೆ. ಒಂದು ವೇಳೆ ಇದನ್ನು ಅಪ್ಪಿ ತಪ್ಪಿ ತಿಂದರೆ, ಜೀವ ಹೋಗುವುದು ಖಂಡಿತ. ರೆಸ್ಟೋರೆಂಟ್ ನಡೆಸುವವರು ಗ್ರಾಹಕರ ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದಿರುವುದು ದುರಂತ. ಟಿವಿ9 ಸ್ಥಳಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಆರೋಗ್ಯ ಅಧಿಕಾರಿ ರೆಸ್ಟೋರೆಂಟ್ ಮಾಲೀಕರಿಗೆ 2 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಇನ್ನು ರೆಸ್ಟೋರೆಂಟ್ ಮಾಲೀಕರು ಹಾಗೂ ಅಡುಗೆ ತಯಾರಿಸುವವರ ಮಧ್ಯೆ ನಾನಾ ರೀತಿಯ ವೈಯಕ್ತಿಕ ತಕರಾರು ಹಾಗೂ ಭಿನ್ನಾಭಿಪ್ರಾಯಗಳಿವೆ. ಕೊನೆಗೆ ಅದರ ಸೇಡನ್ನ ಪರಿಣಾಮ ದುಡ್ಡು ಕೊಟ್ಟು ಆಹಾರ ಸವಿಯಲು ಬಂದ ಗ್ರಾಹಕರ ಮೇಲೆ ತೀರಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು

ಅಧಿಕಾರಿಗಳ ಮೃದು ಧೋರಣೆ?

ಇಷ್ಟು ದೊಡ್ಡ ಮಟ್ಟದ ಉಲ್ಲಂಘನೆ ಪತ್ತೆಯಾದ ನಂತರವೂ ಆರೋಗ್ಯ ಅಧಿಕಾರಿಗಳು ಕೇವಲ ₹2,000 ದಂಡ ವಿಧಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರ ಜೀವಕ್ಕೆ ಅಪಾಯ ತರುವ ಇಂತಹ ಹೋಟೆಲ್‌ಗಳಿಗೆ ಇಷ್ಟು ಕಡಿಮೆ ದಂಡ ವಿಧಿಸುವುದು ದಂಧೆಕೋರರಿಗೆ ಭಯವಿಲ್ಲದಂತೆ ಮಾಡುತ್ತದೆ ಎಂಬುದು ಕಟು ಸತ್ಯ.

ಗ್ರಾಹಕರು ವಹಿಸಬೇಕಾದ ಮುನ್ನೆಚ್ಚರಿಕೆ:

ಸಾಧ್ಯವಾದರೆ ಹೋಟೆಲ್‌ನ ಅಡುಗೆ ಮನೆ ಎಷ್ಟು ಸ್ವಚ್ಛವಾಗಿದೆ ಎಂದು ಒಮ್ಮೆ ಕಣ್ಣಾಡಿಸಿ.

ಹಾರದಲ್ಲಿ ಅಸಹಜ ವಾಸನೆ ಅಥವಾ ರುಚಿ ಕಂಡುಬಂದರೆ ತಕ್ಷಣ ತಿನ್ನುವುದನ್ನು ನಿಲ್ಲಿಸಿ.

ದೊಡ್ಡ ರೆಸ್ಟೋರೆಂಟ್ ಅಥವಾ ಬ್ರ್ಯಾಂಡ್ ಎಂಬ ಕಾರಣಕ್ಕೆ ಎಲ್ಲವೂ ಸರಿ ಇರುತ್ತದೆ ಎಂದು ಕುರುಡಾಗಿ ನಂಬಬೇಡಿ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:50 am, Thu, 29 January 26

Source link

Video: ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ – Kannada News | Joy Turns to Shock as Man Attacks Elderly Woman at Public Celebration

ಬಾರ್ಮರ್, ಜನವರಿ 29: ರಾಜಸ್ಥಾನದ ಬಾರ್ಮರ್​​ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಒದ್ದಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತಂಕಕಾರಿ ಘಟನೆಯೊಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಖಾಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಜತೋನ್ ಕಾ ಬೇರಾ ಸರ್ಲಾ ಗ್ರಾಮದಲ್ಲಿ ನಡೆದಿದ್ದು, ಇದನ್ನು ಅನೇಕರು ನಾಚಿಕೆಗೇಡಿನ ಮತ್ತು ಅಮಾನವೀಯ ಎಂದು ಬಣ್ಣಿಸಿದ್ದಾರೆ.ಬಖಾಸರ್ ಗ್ರಾಮದಲ್ಲಿ ಒಂದು ಕಾರ್ಯಕ್ರಮ ನಡೆಯುತ್ತಿತ್ತು, ಅಲ್ಲಿ ಡಿಜೆ ಸಂಗೀತ ನುಡಿಸುತ್ತಿದ್ದರು ಮತ್ತು ಗ್ರಾಮಸ್ಥರು ಆಚರಿಸಲು ಜಮಾಯಿಸಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು? – Kannada News | Mayur Patel Car Accident Video Mayur Patel Video surface after Incident

ಕನ್ನಡದ ನಟ ಮಯೂರ್ ಪಟೇಲ್ ಚರ್ಚೆಯಲ್ಲಿದ್ದಾರೆ. ಕುಡಿದ ಮತ್ತಿನಲ್ಲಿ ಕಾರು ಓಡಿಸಿ ಅಪಘಾತ ಮಾಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿ ಈ ಅಪಘಾತ ನಡೆದಿದೆ. ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಮಯೂರ್ ಅವರ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಆ ಬಳಿಕ ಅವರು ಡ್ರೈವರ್ ಬಳಿ ಮಾತನಾಡಿದ್ದಾರೆ. ನಾನು ಕಾರು ಸರಿ ಮಾಡಿಸಿಕೊಡ್ತೀನಿ’ ಎಂದಿದ್ದಾರೆ. ಈ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ – Kannada News | Drugs Worth Rs 4 Crore Seized in Bengaluru, 10 Arrested Including Kerala Based Peddlers

ಬೆಂಗಳೂರು, ಜನವರಿ 29: ಬೆಂಗಳೂರಿನ (Bangalore) ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಡ್ರಗ್ ಪೆಡ್ಲರ್​ಗಳ ಪೈಕಿ ಇಬ್ಬರು ಕರ್ನಾಟಕ, ಮತ್ತೋರ್ವ ಆಂಧ್ರ ಮೂಲದವರಾಗಿದ್ದು, ಉಳಿದ ಎಳು ಜನರು ಕೇರಳದವರಾಗಿದ್ದಾರೆ. ಆರೋಪಿಗಳು ಥೈಲ್ಯಾಂಡ್‌ನಿಂದ ಡ್ರಗ್ಸ್ ತರಿಸಿಕೊಂಡು ಡಾರ್ಕ್‌ವೆಬ್‌ನಲ್ಲಿ ‘ಟೀಂ ಕಲ್ಕಿ’ (Team Kalki) ಎಂಬ ವೆಬ್‌ಸೈಟ್ ಮೂಲಕ ಡ್ರಗ್ಸ್‌ಗಾಗಿ ಆರ್ಡರ್ ಮಾಡುತ್ತಿದ್ದರು. ಥೈಲ್ಯಾಂಡ್‌ನಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ವಿಮಾನದ ಮೂಲಕ ಬೆಂಗಳೂರಿಗೆ ಡ್ರಗ್ಸ್ ಕಳುಹಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಬೆಂಗಳೂರಿಗೆ ತಲುಪಿದ ನಂತರ, ಆರೋಪಿಗಳು ನಗರದಾದ್ಯಂತ ಡ್ರಗ್ಸ್ ವಿತರಿಸುತ್ತಿದ್ದರು.

ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳೇ ಟಾರ್ಗೆಟ್

ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ವಿವಿಧ ಪ್ರದೇಶಗಳನ್ನು ಹಂಚಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳು ಮತ್ತು ಪಾರ್ಟಿಗಳಿಗೆ ಬರುವವರೇ ಇವರ ಪ್ರಮುಖ ಗುರಿಗಳಾಗಿದ್ದರು. ಈ ಡ್ರಗ್ ಪೆಡ್ಲರ್‌ಗಳು ಒಂದೇ ತಂಡದ ಭಾಗವಾಗಿದ್ದರೂ ತಾವು ಹಂಚಿಕೊಂಡಿದ್ದ ಪ್ರದೇಶಗಳ ವಿಚಾರದಲ್ಲಿ ಆಗಾಗ ಜಗಳವಾಡುತ್ತಿದ್ದರು. ತಮ್ಮ ವ್ಯಾಪ್ತಿಯನ್ನು ಬಿಟ್ಟು ಬೇರೆ ಪ್ರದೇಶದಲ್ಲಿ ಡ್ರಗ್ಸ್ ಮಾರಾಟಕ್ಕೆ ಹೋದ ಪೆಡ್ಲರ್‌ನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿತ್ತು. ಕೆಲವೊಮ್ಮೆ ಕೊಲೆ ಮಾಡುವ ಹಂತದವರೆಗೆ ಅವರ ಜಗಳ ತಲುಪಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಸಿಕ್ಕಿದ್ದು ಏನೇನು?

ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 500 ಎಲ್‌ಎಸ್‌ಡಿ ಸ್ಟ್ರಿಪ್ಸ್, 10 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳು ಮತ್ತು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಮುಖ್ಯ ಆರೋಪಿ ನಾಪತ್ತೆಯಾಗಿದ್ದು, ಆತನಿಗಾಗಿ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದೆ. ಪ್ರತ್ಯೇಕ ಪ್ರಕರಣದಲ್ಲಿ ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ 60 ಲಕ್ಷ ರೂ. ಮೌಲ್ಯದ 78 ಕೆಜೆ ಗಾಂಜಾ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ

ಇತ್ತಿಚೇಗಷ್ಟೇ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿಗೆ ಬಂದು ಮೂರು ಪೊಲೀಸ್ ಠಾಣಾ ವ್ಯಾಪ್ತಿಯ ಡ್ರಗ್ ಪ್ಯಾಕ್ಟರಿ ಭೇದಿಸಿದ್ದರು. ಪೊಲೀಸ್ ಇನ್ಸ್​​ಪೆಕ್ಟರ್​ಗಳೇ ಸಂಸ್ಪೆಂಡ್ ಆಗಿದ್ದರು. ಖುದ್ದು ಸಿಎಂ ಸಿದ್ದರಾಮಯ್ಯ ಬೆಂಗಳೂರು ಪೊಲೀಸರಿಗೆ ಚಾಟಿ ಬೀಸಿದ್ದರು. ಇದರ ಬೆನ್ನಲ್ಲೇ ಮತ್ತಷ್ಟು ಅಲರ್ಟ್ ಆಗಿರುವ ಬೆಂಗಳೂರು ನಗರ ಪೊಲೀಸರು, ಮಾದಕ ವಸ್ತು ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿದ್ದು ಬೇಟೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:54 am, Thu, 29 January 26

Source link

ನಾವು ಉದ್ದೇಶಪೂರ್ವಕವಾಗಿಯೇ ಹೀಗೆ ಆಡಿದ್ದೇವೆ: ಸೂರ್ಯಕುಮಾರ್ ಅಚ್ಚರಿ ಹೇಳಿಕೆ

ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಜಯಭೇರಿ ಬಾರಿಸಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 215 ರನ್​ ಕಲೆಹಾಕಿತು.

ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 18.4 ಓವರ್​ಗಳಲ್ಲಿ 165 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ನಾವು ಉದ್ದೇಶಪೂರ್ವಕವಾಗಿ ಆರು ಬ್ಯಾಟ್ಸ್‌ಮನ್‌ಗಳೊಂದಿಗೆ ಆಡಿದ್ದೇವೆ. ಏಕೆಂದರೆ ನಾವು ತಂಡದಲ್ಲಿ ಐದು ಪರಿಪೂರ್ಣ ಬೌಲರ್‌ಗಳನ್ನು ಹೊಂದಲು ಬಯಸಿದ್ದೆವು. ಅದಕ್ಕಾಗಿ ಉದ್ದೇಶಪೂರ್ವಕವಾಗಿಯೇ ಹೀಗೆ ಆಡಲು ನಿರ್ಧರಿಸಿದ್ದೆವು.

ಇಂತಹದೊಂದು ನಿರ್ಧಾರಕ್ಕೆ ಮುಖ್ಯ ಕಾರಣ, ನಮಗೆ ನಾವೇ ಸವಾಲೆಸೆಯುವುದಾಗಿದೆ. ಉದಾಹರಣೆಗೆ, ನಾವು 200 ಅಥವಾ 180 ರನ್‌ಗಳನ್ನು ಬೆನ್ನಟ್ಟುತ್ತಿದ್ದರೆ, ಎರಡು ಅಥವಾ ಮೂರು ವಿಕೆಟ್ ಕಳೆದುಕೊಂಡ ಬಳಿಕ ನಾವು ಹೇಗೆ ಚೇಸ್ ಮಾಡುತ್ತೇವೆ ಎಂಬುದು ಗೊತ್ತಾಗಬೇಕಿತ್ತು. ಈ ಮೂಲಕ ನಮ್ಮ ಸ್ಟ್ರಾಟಜಿಯನ್ನು ಪರೀಕ್ಷಿಸಲು ಬಯಸಿದ್ದೆವು.

ಅದಕ್ಕಾಗಿ ವಿಶ್ವಕಪ್ ತಂಡದ ಭಾಗವಾಗಿರುವ ಎಲ್ಲಾ ಆಟಗಾರರನ್ನು ಆಡಿಸಲು ನಿರ್ಧರಿಸಿದ್ದೆವು. ಈ ಮೂಲಕ ಇತರೆ ಬ್ಯಾಟರ್​ಗಳಿಗೂ ಹೆಚ್ಚಿನ ಓವರ್​ ಆಡಲು ಅನುಕೂಲ ಮಾಡಲು ಬಯಸಿದ್ದೆವು. ಏಕೆಂದರೆ ನಾವು ಮೊದಲು ಬ್ಯಾಟಿಂಗ್ ಮಾಡಿದಾಗ ನಿಜವಾಗಿಯೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದೇವೆ. ಆದರೆ 180 ಅಥವಾ 200 ರನ್​ಗಳ ಚೇಸಿಂಗ್ ವೇಳೆ ಹೇಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂಬ ಪ್ರಯೋಗ ನಡೆಸಬೇಕಿತ್ತು. ಹೀಗಾಗಿ ಉದ್ದೇಶಪೂರ್ವಕವಾಗಿ ನಾವು ಕೇವಲ 6 ಬ್ಯಾಟರ್​ಗಳೊಂದಿಗೆ ಮಾತ್ರ ಕಣಕ್ಕಿಳಿದಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಮುಂದಿನ ಪಂದ್ಯದಲ್ಲೂ ನಾವು ಚೇಸಿಂಗ್ ಮಾಡಲು ಬಯಸುತ್ತೇವೆ. ಈ ಮೂಲಕ ಬೃಹತ್ ಗುರಿಯನ್ನು ಚೇಸ್ ಮಾಡುವುದನ್ನು ಕರಗತ ಮಾಡಿಕೊಳ್ಳಬೇಕಿದೆ. ಇದೀಗ ನಾವು 50 ರನ್​ಗಳಿಂದ ಸೋತಿದ್ದೇವೆ, ಆದರೆ ಪರವಾಗಿಲ್ಲ. ನಾನು ಹೇಳಿದಂತೆ, ಈ ರೀತಿಯ ರನ್-ಚೇಸ್‌ನಲ್ಲಿ ಈ ರೀತಿಯ ಒಂದು ಅಥವಾ ಎರಡು ಪಾಲುದಾರಿಕೆಗಳು ವ್ಯತ್ಯಾಸವನ್ನುಂಟುಮಾಡಬಹುದು. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಈ ಪ್ರಯೋಗ ಮುಂದುವರೆಸಲು ಬಯಸುತ್ತೇನೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

ಸೂರ್ಯಕುಮಾರ್ ಯಾದವ್ ಹೇಳಿದಂತೆ ಜನವರಿ 31 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಟಾಸ್ ಗೆದ್ದರೆ ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆಯಿದೆ. ಈ ಮೂಲಕ ಬೃಹತ್ ಮೊತ್ತದ ಚೇಸಿಂಗ್​ಗೆ ಪ್ರಯತ್ನಿಸಲಿದೆ. ಏಕೆಂದರೆ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 210 ಕ್ಕಿಂತ ಹೆಚ್ಚಿನ ಮೊತ್ತ ಚೇಸ್ ಮಾಡಿ ಗೆದ್ದ ಇತಿಹಾಸ ಹೊಂದಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಭಾರತ ತಂಡವು ತನ್ನ ಈ ದೌರ್ಬಲ್ಯವನ್ನು ಸರಿಪಡಿಸಲು ಪ್ಲ್ಯಾನ್ ರೂಪಿಸುತ್ತಿದೆ.

 

Source link

ಪತಿಯ ಆ ಕೆಟ್ಟ ಅಭ್ಯಾಸದ ಬಗ್ಗೆ ಜ್ಯೋತಿಕಾಗೆ ಇದೆ ಸಿಟ್ಟು – Kannada News | Jyothika’s Candid Complaint on Suriya: Bathroom Habit Sparks Viral Debate

ಚಿತ್ರರಂಗದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗಳಲ್ಲಿ ಸೂರ್ಯ ಮತ್ತು ಜ್ಯೋತಿಕಾ ಕೂಡ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ನಾಯಕ-ನಾಯಕಿಯಾಗಿ ನಟಿಸಿ ನಂತರ ಮದುವೆಯಾದರು. ಅವರು ಸುಮಾರು 20 ವರ್ಷಗಳಿಂದ ಒಟ್ಟಿಗೆ ಇದ್ದಾರೆ. ಇಂದಿನ ಯುವಕರಿಗೆ ಸಂಬಂಧದ ಪಾಠಗಳನ್ನು ಹೇಳಿಕೊಡುತ್ತಿದ್ದಾರೆ. ಈ ಮಧ್ಯೆ, ಈ ಜೋಡಿಯ ಬಗ್ಗೆ ವಿಚ್ಛೇದನದ ವರದಿಗಳು ಬಂದವು. ಆದರೆ ಅವು ವದಂತಿಗಳಾಗಿ ಉಳಿದವು. ಈಗ ಪತಿ ಬಗ್ಗೆ ಜ್ಯೋತಿಕಾ ದೂರು ಹೇಳಿದ್ದಾರೆ.

ಸೂರ್ಯ – ಜ್ಯೋತಿಕಾ ದಂಪತಿಗೆ ದಿಯಾ ಎಂಬ ಮಗಳು ಮತ್ತು ದೇವ್ ಎಂಬ ಮಗ ಇದ್ದಾನೆ. ಪ್ರಸ್ತುತ, ಜ್ಯೋತಿಕಾ ತಮ್ಮ ಕುಟುಂಬವನ್ನು ನೋಡಿಕೊಳ್ಳುತ್ತಾ ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದಾಗ್ಯೂ, ಅವರು ಬರುವ ಎಲ್ಲಾ ಚಲನಚಿತ್ರಗಳನ್ನು ಆಯ್ಕೆ ಮಾಡುವ ಬದಲು ಕಥೆ ಆಧಾರಿತ ಚಲನಚಿತ್ರಗಳನ್ನು ಆಯ್ಕೆ ಮಾಡುವ ಮೂಲಕ ಮುಂದುವರಿಯುತ್ತಿದ್ದಾರೆ. ಸೂರ್ಯ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಿರತರಾಗಿದ್ದಾರೆ. ಸೂರ್ಯ ಮತ್ತು ಜ್ಯೋತಿಕಾ ಈಗ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಸೂರ್ಯನ ಬಗ್ಗೆ ಜ್ಯೋತಿಕಾ ಹೇಳಿದ ಮಾತುಗಳು ಈಗ ವೈರಲ್ ಆಗುತ್ತಿವೆ.

‘ನನ್ನ ಪತಿ ಸೂರ್ಯ ನನ್ನ ಜೊತೆ ಫ್ರೆಂಡ್ಲಿ ಆಗಿರುತ್ತಾರೆ. ಅವರು ನನ್ನನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅವರು ನನಗೆ ತುಂಬಾ ಗೌರವವನ್ನೂ ನೀಡುತ್ತಾರೆ. ನನಗೆ ಅದು ತುಂಬಾ ಇಷ್ಟ. ಆದರೆ ಅವನಿಗೆ ಒಂದು ಕೆಟ್ಟ ಅಭ್ಯಾಸವಿದೆ. ನನಗೆ ಅದು ಇಷ್ಟವಿಲ್ಲ. ಅವರು ಬಾತ್ರೂಮ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ನನಗೆ ಈ ಅಭ್ಯಾಸ ಸಹಿಸಲು ಸಾಧ್ಯವಿಲ್ಲ. ನಾವು ಆಗಾಗ್ಗೆ ಇದರ ಬಗ್ಗೆ ಜಗಳವಾಡುತ್ತೇವೆ’ ಎಂದು ಜ್ಯೋತಿಕಾ ಹೇಳಿದ್ದಾರೆ.

ಇದನ್ನೂ ಓದಿ: ಓದೋದರಲ್ಲಿ ಜ್ಯೋತಿಕಾ-ಸೂರ್ಯ ಮಗಳು ಜಾಣೆ; ಹೆಮ್ಮೆಯಿಂದ ಪೋಸ್ ನೀಡಿದ ಸ್ಟಾರ್ ಕಪಲ್

ಸಿನಿಮಾಗಳ ವಿಷಯಕ್ಕೆ ಬಂದರೆ.. ಸೂರ್ಯ ಕೊನೆಯ ಬಾರಿಗೆ ‘ಕಂಗುವಾ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರಸ್ತುತ ಅವರ ಕೈಲಿ ಎರಡು ಸಿನಿಮಾಗಳು ಇವೆ. ಟಾಲಿವುಡ್ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಸೂರ್ಯ ನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ, ಸೂರ್ಯ ಆರ್‌ಜೆ ಬಾಲಾಜಿ ನಿರ್ದೇಶನದ ‘ಕುರುಪ್ಪು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎರಡು ಚಿತ್ರಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

Source link

ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ – Kannada News | Madhya pradesh: Kidnapped After Dark, Silenced Forever: Relative Arrested in Child’s Murder

ಬರ್ವಾನಿ, ಜನವರಿ 29: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಏಳು ವರ್ಷದ ಬಾಲಕಿ(Girl)ಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ 17 ವರ್ಷದ ಅಪ್ರಾಪ್ತ ವಯಸ್ಸಿನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರಾತ್ರಿ, ಹುಡುಗಿಯ ಕುಟುಂಬ ನಿದ್ರಿಸುತ್ತಿದ್ದಾಗ, ಆರೋಪಿ ಅವಳನ್ನು ಮನೆಯಿಂದ ಅಪಹರಿಸಿ ಹತ್ತಿರದ ಇಂದಿರಾ ಸಾಗರ್ ಕಾಲುವೆಗೆ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಹುಡುಗಿ ಕಿರುಚಲು ಪ್ರಾರಂಭಿಸಿದಾಗ, ಬಂಧನಕ್ಕೆ ಹೆದರಿ ಆರೋಪಿಗಳು ಆಕೆಯನ್ನು ಕಾಲುವೆಗೆ ಎಸೆದಿದ್ದಾನೆ. ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ದಾವರ್ ಮಾತನಾಡಿ, ಸ್ಥಳೀಯ ನಿವಾಸಿಗಳ ವರದಿಯ ಮೇರೆಗೆ ಜನವರಿ 26 ರಂದು ಬಾಲಕಿಯ ಶವವನ್ನು ಕಾಲುವೆಯಿಂದ ಹೊರತೆಗೆಯಲಾಯಿತು. ವರದಿಯು ಬಾಲಕಿಯ ಖಾಸಗಿ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ಸಾವಿಗೆ ಕಾರಣ ಎಂದು ದೃಢಪಡಿಸಿದೆ.

17 ವರ್ಷದ ಸಂಬಂಧಿಯನ್ನು ಅನುಮಾನದ ಮೇಲೆ ಪ್ರಶ್ನಿಸಿದಾಗ, ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಬಂಧಿತ ಅಪ್ರಾಪ್ತ ವಯಸ್ಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ

ಮತ್ತೊಂದು ಘಟನೆ
ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.

ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್ – Kannada News | Shruti Haasan’s Viral Smoking Look in ‘Aakasamlo Oka Tara Sparks Buzz: Film Role Revealed

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್ (Shruthi Haasan) ಈಗ ಸುದ್ದಿಯಲ್ಲಿದ್ದಾರೆ. ಅವರು ಕಮಲ್ ಹಾಸನ್ ಮಗಳು. ಆದರೂ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದರು. ಈಗ ಅವರು ಧಮ್ ಹೊಡೆಯುತ್ತಿರುವ ಫೋಟೋ ವೈರಲ್ ಆಗಿದೆ. ಹಾಗಂತ ಅವರು ಪಬ್ಲಿಕ್​​ನಲ್ಲಿ ಧಮ್ ಹೊಡೆದು ಸಿಕ್ಕಿ ಬಿದ್ದಿದ್ದಲ್ಲ. ಅವರು ಈ ರೀತಿ ಸಿಗರೇಟ್ ಸೇದಿದ್ದು ಸಿನಿಮಾಗಾಗಿ. ಆ ಬಗ್ಗೆ ಇಲ್ಲಿದೆ ಮಾಹಿತಿ.

ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್ ಸಾದಿನೇನಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪ್ರತಿಷ್ಠಿತ ಗೀತಾ ಆರ್ಟ್ಸ್ ಮತ್ತು ಸ್ವಪ್ನ ಸಿನಿಮಾ ಅಡಿಯಲ್ಲಿ ಸಂದೀಪ್ ಗುನ್ನಮ್ ಮತ್ತು ರಮ್ಯಾ ಗುನ್ನಮ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದುಲ್ಕರ್‌ಗೆ ನಾಯಕಿಯಾಗಿ ಹೊಸ ನಾಯಕಿ ಸಾತ್ವಿಕ ವೀರವಳ್ಳಿ ನಟಿಸುತ್ತಿದ್ದಾರೆ. ಶ್ರುತಿಹಾಸನ್ ಕೂಡ ಸಿನಿಮಾದ ಭಾಗ ಆಗಿದ್ದಾರೆ.

ಶ್ರುತಿ ಹಾಸನ್ ಜನ್ಮದಿನದ ಪ್ರಯುಕ್ತ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಆಯ್ದ ಚಿತ್ರಗಳನ್ನು ಮಾಡುತ್ತಿರುವ ಶ್ರುತಿ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಾ ಚಿತ್ರತಂಡ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

ಅವರು ಕನ್ನಡಕ ಧರಿಸಿದ್ದಾರೆ. ಅವರ ತುಟಿಗಳ ಮೇಲಿನ ಸಿಗರೇಟ್ ಮತ್ತು ಅದರಿಂದ ಬರುತ್ತಿರುವ ಹೊಗೆ ಅವರ ಪಾತ್ರಕ್ಕೆ ರಾನೆಸ್ ನೀಡಿದೆ. ಶ್ರುತಿ ಹಾಸನ್ ಪಾತ್ರವು ಕಥೆಯಲ್ಲಿ ಪ್ರಮುಖ ತಿರುವು ನೀಡಲಿದೆ ಎನ್ನಲಾಗಿದೆ. ಈ ಫೋಟೋ ವೈರಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಒಂದು ಸಿನಿಮಾ ಹೋಯ್ತು, ಮತ್ತೊಂದು ಸಿನಿಮಾ ಬಂತು ಶ್ರುತಿ ಹಾಸನ್ ಅದೃಷ್ಟ

ಈ ಚಿತ್ರವು ಉತ್ತಮ ತಾಂತ್ರಿಕ ಗುಣಮಟ್ಟವನ್ನು ಹೊಂದಿರಲಿದೆ. ಜಿ.ವಿ. ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಸುಜಿತ್ ಸಾರಂಗ್ ಛಾಯಾಗ್ರಹಣವನ್ನು ಮತ್ತು ಶ್ವೇತಾ ಸಾಬು ಸಿರಿಲ್ ನಿರ್ಮಾಣ ವಿನ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ. ಪ್ರಸ್ತುತ ನಿರ್ಮಾಣದ ಅಂತಿಮ ಹಂತದಲ್ಲಿರುವ ‘ಆಕಾಶಮ್ಲೋ ಓಕಾ ತಾರಾ’ 2026 ರ ಬೇಸಿಗೆಯಲ್ಲಿ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version