Headlines

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ನವದೆಹಲಿ, ಏಪ್ರಿಲ್ 3: ಇಂದು ಸಂಜೆ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀತಿಯನ್ನು ಉಂಟುಮಾಡಿದೆ. ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು. ಈ ಭೂಕಂಪನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. Source link

Read More

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ…

Read More

ದಾಖಲೆ ಬರೆದ ಬೆಂಗಳೂರಿನ ಕೋರಮಂಗಲ ಆರ್ಟಿಓ ‌ಕಚೇರಿ: ರಾಜ್ಯದಲ್ಲಿ ನಂ 1, ದೇಶದಲ್ಲಿ 3ನೇ ಸ್ಥಾನ

ಬೆಂಗಳೂರು, ಏಪ್ರಿಲ್​ 03: ಸದಾ ಒಂದಿಲ್ಲೊಂದು ನೆಗೆಟಿವ್ ಸುದ್ದಿಯಲ್ಲಿರುವ ಬೆಂಗಳೂರಿನ ಸೆಂಟ್ರಲ್ ಆರ್​ಟಿಓ (Koramangala RTO) ಕಚೇರಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ನೆಗೆಟಿವ್ ವಿಚಾರವಾಗಿ ಅಲ್ಲದೇ ಹೊಸ ದಾಖಲೆಯೊಂದನ್ನು ಬರೆದಿದೆ. ದೇಶದಲ್ಲೇ ಅತೀ ಹೆಚ್ಚು ಆದಾಯ ಗಳಿಸಿದ 3ನೇ ಅತಿದೊಡ್ಡ ಆರ್​ಟಿಓ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಂದಿಲ್ಲೊಂದು ಅಕ್ರಮ, ಹಗರಣ ಆರೋಪದಲ್ಲಿ ಸುದ್ದಿಯಾಗುವ ಬೆಂಗಳೂರಿನ ಸೆಂಟ್ರಲ್ ಕೋರಮಂಗಲ ಆರ್​ಟಿಓ ಇದೀಗ ದೇಶದಲ್ಲೇ ಹೊಸ ದಾಖಲೆಯೊಂದನ್ನು ಬರೆದಿದ್ದು, ಈ ಬಾರಿ KA-01…

Read More

‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್‍, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್‍ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು….

Read More

ವಿಜಯ್ ಮಲ್ಯ ಅಥವಾ ಲಲಿತ್ ಮೋದಿ ಪಾತ್ರದಲ್ಲಿ ‘ಧುರಂಧರ್’ ನಟ ಅರ್ಜುನ್ ರಾಮ್​ಪಾಲ್?

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಸಿನಿಮಾಗಳ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ಅರ್ಜುನ್ ರಾಮ್​ಪಾಲ್ (Arjun Rampal) ಈಗ ಒಟಿಟಿ ಮೂಲಕ ಅಬ್ಬರಿಸಲು ಸಿದ್ಧರಾಗಿದ್ದಾರೆ. ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಬಿಲಿಯನೇರ್’ (Billionaire) ವೆಬ್ ಸರಣಿಯಲ್ಲಿ ಅರ್ಜುನ್ ರಾಮ್​ಪಾಲ್ ಅವರು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಈಗ ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿದೆ. ಯಾರಿದು ಬಿಲಿಯನೇರ್ ಎಂಬ ಪ್ರಶ್ನೆ ಉದ್ಭವ ಆಗಿದೆ. ವಿಜಯ್ ಮಲ್ಯ ಅಥವಾ ಲಲಿತ್…

Read More

CSK vs PBKS Record Alert: ಚೆಪಾಕ್ ಮೈದಾನದಲ್ಲಿ ಇತಿಹಾಸ ಸೃಷ್ಟಿಸಿದ ಆಯುಷ್ ಮ್ಹಾತ್ರೆ

ಚೆನ್ನೈ ಸೂಪರ್ ಕಿಂಗ್ಸ್‌ನ ತವರು ಮೈದಾನವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಪಂಜಾಬ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಹಾದಿಯಲ್ಲಿ ಅವರು ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಅಂತಿಮವಾಗಿ ಆಯುಷ್ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 73 ರನ್ ಬಾರಿಸಿ…

Read More

ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವರೊಬ್ಬರ ಸಂಬಂಧಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಈ ಅನಿಲ್ ರಾಠೋಡ್, ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ಇಟ್ಟುಕೊಂಡಿದ್ದ. ಮೇಲಾಗಿ ಮಾಜಿ ಸಚಿವ ರೇವು ನಾಯಕ್ ಬೆಳಮಗಿಯ ಸಂಬಂಧಿ. ಆದ್ರೆ, ನಿನ್ನೆ…

Read More

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಪುದುಚೇರಿ, ಏಪ್ರಿಲ್ 3: ಏಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ (Assembly Elections 2026) ಮುನ್ನ ಎನ್​ಡಿಎ (NDA)ಗೆ ಬೆಂಬಲ ಕೋರಿ ಪ್ರಧಾನಿ ನರೇಂದ್ರ ಮೋದಿ ಇಂದು ಪುದುಚೇರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಯೊಂದಿಗೆ ಮುಖ್ಯಮಂತ್ರಿ ಎನ್. ರಂಗಸಾಮಿ ಮತ್ತು ಕೇಂದ್ರಾಡಳಿತ ಪ್ರದೇಶದ ಗೃಹ ಸಚಿವ ಎ ನಮಶ್ಶಿವಾಯಂ ಕೂಡ ಭಾಗವಹಿಸಿದ್ದರು. ಸುಮಾರು 2 ಕಿಲೋಮೀಟರ್ ದೂರ ಭವ್ಯ ರೋಡ್ ಶೋ ನಡೆಯಿತು. ಭಾರತೀಯ ಜನತಾ ಪಕ್ಷ (BJP) ಮತ್ತು ಅಖಿಲ ಭಾರತ ಎನ್​ಆರ್​…

Read More

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಬಳ್ಳಾರಿ, ಏಪ್ರಿಲ್​ 03: ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಫುಟ್ಪಾತ್ ಮೇಲೆ ಇದ್ದ ಶೆಡ್ ತೆರವು ವಿಳಂಬ‌ ಹಿನ್ನೆಲೆ ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ನ ಕಾಂಗ್ರೆಸ್ ಸದಸ್ಯ ವಿ. ಕುಬೇರ, ಪಾಲಿಕೆಯ ಎಇಇ ವೀರೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಕಮಿಷನರ್​ ಮಾತನಾಡಿದ್ದು, ಸಾರ್ವಜನಿಕ ಪ್ರತಿನಿಧಿಗಳು ಗೌರವ ಕಾಪಾಡಿಕೊಳ್ಳದೆ ಇಂತಹ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ ಎಂದಿದ್ದಾರೆ. ಘಟನೆ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು…

Read More

ಬಿಡುಗಡೆಗೆ ಸಿದ್ಧವಾಯ್ತು ‘ಮೃತ್ಯುದೇವತೆ’ ಸಿನಿಮಾ: ಏನು ಈ ಚಿತ್ರದ ಥೀಮ್?

ಶೀಘ್ರದಲ್ಲೇ ಬಿಡುಗಡೆ ಆಗಲಿರುವ ‘ಮೃತ್ಯದೇವತೆ’ (Mruthyu Devathe) ಸಿನಿಮಾದಲ್ಲಿ ಸಾರಿಕಾ, ವಿನಯಾ ಪ್ರಸಾದ್‍, ನವೀನ್‍ ಮಹದೇವ, ಹಿಮಶ್ರೀ, ಡಯಾನಾ, ಸೂರ್ಯ, ಪವನ್‍, ವರ್ಷಿತಾ, ಮಾಹಿನ್‍ ಕುಬೇರ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ಛಾಯಾಗ್ರಹಣ, ಶಿವಪ್ರಸಾದ್‍ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ‘ಮೃತ್ಯದೇವತೆ’ ಚಿತ್ರಕ್ಕೆ ನವೀನ್‍ ಮಹದೇವ ಅವರು ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ-ಚಿತ್ರಕಥೆ ಬರೆದು ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ರಘು ಅವರ ನೃತ್ಯ ನಿರ್ದೇಶನ, ಅಲ್ಟಿಮೇಟ್‍ ಶಿವು ಮತ್ತು…

Read More