Headlines

Video: ಬಾಲಕಿಯ ಅಪಹರಿಸಿ, ಅತ್ಯಾಚಾರ ನಡೆಸಲು ವ್ಯಕ್ತಿಯ ಯತ್ನ, ಬಾಲಕನ ಸಮಯಪ್ರಜ್ಞೆಯಿಂದ ಉಳೀತು ಆಕೆಯ ಜೀವ

ರಷ್ಯಾ, ಜೂನ್ 01: ರಷ್ಯಾದಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕಿರುಚುತ್ತಿದ್ದ 5 ವರ್ಷದ ಪುಟ್ಟ ಹೆಣ್ಣು ಮಗಳನ್ನು ಬಲವಂತವಾಗಿ ಎತ್ತಿಕೊಂಡು ಕಟ್ಟಡದ ಒಳಗೆ ಹೋಗಲು ಯತ್ನಿಸಿದ್ದಾನೆ. ಆದರೆ ಅಲ್ಲಿಯೇ ಇದ್ದ ಸಣ್ಣ ಬಾಲಕನೊಬ್ಬ ತಕ್ಷಣವೇ ಎಚ್ಚೆತ್ತುಕೊಂಡು, ಕಟ್ಟಡದ ಮುಖ್ಯ ಬಾಗಿಲು ಮುಚ್ಚದಂತೆ ಗಟ್ಟಿಯಾಗಿ ಹಿಡಿದುಕೊಂಡು ಜೋರಾಗಿ ಕೂಗಿ ಇತರರ ಸಹಾಯ ಬೇಡಿದ್ದಾನೆ. ಬಾಲಕನ ಈ ಸಮಯಪ್ರಜ್ಞೆ ಮತ್ತು ಧೈರ್ಯದಿಂದಾಗಿ ಅಪಹರಣಕಾರನ ಸಂಚು ವಿಫಲಗೊಂಡಿದ್ದು, ಮಗು ಸುರಕ್ಷಿತವಾಗಿ ಪಾರಾಗಿದೆ. ಸಾರ್ವಜನಿಕರ ಸಹಾಯದಿಂದ ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ…

Read More

ಬೆಂಗಳೂರು: ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌ ಕಾರು ಶೋರೂಂಗೆ ಬಾಡಿಗೆಗೆ! ವಾಹನ ಸವಾರರ ತೀವ್ರ ಆಕ್ರೋಶ

ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌Image Credit source: tv9 ಬೆಂಗಳೂರು, ಜೂನ್ 1: ಬೆಂಗಳೂರಿನ (Bengaluru) ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಿಸಲಾಗಿದ್ದ ಹೈಟೆಕ್ ಮಲ್ಟಿಲೆವೆಲ್ ಪಾರ್ಕಿಂಗ್ ಲಾಟ್ ಈಗ ವಿವಾದದ ಕೇಂದ್ರಬಿಂದುವಾಗಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಬರೋಬ್ಬರಿ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಈ ಬೃಹತ್ ಪಾರ್ಕಿಂಗ್ ಸಂಕೀರ್ಣವನ್ನು ಕಳೆದ ತಿಂಗಳಷ್ಟೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು….

Read More

Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್​ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್​ಗಳ ಸವಾಲನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…

Read More

ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಶ್ರೀನಗರ, ಜೂನ್ 01: ಕಳೆದ ವರ್ಷ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖ ಸುಳಿವು ಲಭ್ಯವಾಗಿದೆ. ದಾಳಿ ನಡೆಸಿದ ಉಗ್ರರು ಬಳಸಿದ್ದ ಎರಡು ಪ್ರಮುಖ ಮೊಬೈಲ್ ಫೋನ್‌ಗಳ ಮೂಲವನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿ ಒಂದು ಫೋನ್‌ಗೆ ಪಾಕಿಸ್ತಾನದ ಕರಾಚಿ ಮೂಲದ ಪ್ರಮುಖ ಬ್ಯಾಂಕ್‌ವೊಂದು ಹಣಕಾಸು ನೆರವು ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ . ಈ ಕುರಿತು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ. ದಾಳಿಕೋರರ…

Read More

Video: 35 ಸಾವಿರ ರೂಗೆ ಬೆಂಗಳೂರಿನಲ್ಲಿ ಆರಾಮ ಜೀವನ ನಡೆಸ್ಬಹುದು; ತಿಂಗಳ ಖರ್ಚು ವೆಚ್ಚ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಬೆಂಗಳೂರು, ಜೂನ್ 01: ಬೆಂಗ್ಳೂರಿನಂತಹ (Bengaluru) ದೊಡ್ಡ ದೊಡ್ಡ ನಗರಗಳಲ್ಲಿ ಜನ ಎಷ್ಟೇ ದುಡಿದ್ರೂ ಹಣ ಸಾಲ್ತಿಲ್ಲ, ದುಡಿದ ಎಲ್ಲಾ ಹಣ ಬಾಡಿಗೆ ಕಟ್ಟೋಕೆ, ತಿಂಗಳ ಖರ್ಚಿಗೆ ಸಾಕಾಗುತ್ತದೆ ಎಂದು ಗೊಣಗುವುದನ್ನು ನೋಡಿರುತ್ತೀರಿ. ಬೆಂಗಳೂರಿನಂತಹ ನಗರದಲ್ಲಿ 35,000 ನಿಂದ ಯೋಗ್ಯ ಜೀವನ ಹೇಗೆ ನಡೆಸಬಹುದೆಂದು ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿ ಅಭಿಪ್ರಾಯ ತಮ್ಮ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಅಮೆಜಾನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ…

Read More

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಕ್ಲೋಸಿಂಗ್ ಕಲೆಕ್ಷನ್ ಎಷ್ಟು? ಇಲ್ಲಿದೆ ವಿವರ

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾಗಿದ್ದ ‘ಕೆಡಿ – ದಿ ಡೆವಿಲ್’ ಚಿತ್ರದ (KD Movie) ಒಟ್ಟು ಬಾಕ್ಸ್ ಆಫೀಸ್ ಗಳಿಕೆಯ ಅಧಿಕೃತ ವಿವರಗಳು ಹೊರಬಿದ್ದಿವೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಸಿನಿಮಾ ಈಗ ಒಟಿಟಿಗೆ ಬರುತ್ತಿರುವುದರಿಂದ ಸಿನಿಮಾದ ಗಳಿಕೆ ಬಹುತೇಕ ಕೊನೆಗೊಂಡಂತೆ ಆಗಿದೆ. ಈ ಚಿತ್ರದ ಕ್ಲೋಸಿಂಗ್ ಗಳಿಕೆ ವಿವರ ಇಲ್ಲಿದೆ. ವಿಶ್ವದಾದ್ಯಂತ ಒಟ್ಟು 13,358 ಶೋ ಪ್ರದರ್ಶನ ಕಂಡಿರುವ ಈ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ….

Read More

ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್‌ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!

ಬೆಂಗಳೂರು, ಜೂನ್ 01: ಕೆಲ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಹಾಗೂ ಬೇಕಾಬಿಟ್ಟಿ ಹಣ ವಸೂಲಿ ಮಾಡುವ ದಂಧೆ ಈಗಿನದಲ್ಲ. ಪ್ರತಿಯೊಂದು ಚಿಕಿತ್ಸೆಗೂ ಲಕ್ಷ ಲಕ್ಷ ಪೀಕುವ ಖಾಸಗಿ ಆಸ್ಪತ್ರೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಅಂಗಾಂಗ ಕಸಿ (Organ Transplant) ಚಿಕಿತ್ಸೆ ಮಾಡಿಸಬೇಕೆಂದರೆ ಬಡ ಹಾಗೂ ಮಧ್ಯಮ ವರ್ಗದ ಜನರು ದುಪ್ಪಟ್ಟು ಹಣ ನೀಡಿ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಈ ಜಾಲಕ್ಕೆ ಕಡಿವಾಣ ಹಾಕಲು ಮತ್ತು ಜನಸಾಮಾನ್ಯರಿಗೆ ನೆರವಾಗಲು ಈಗ ಆರೋಗ್ಯ ಇಲಾಖೆ ಮಹತ್ವದ ಮಾಸ್ಟರ್ ಪ್ಲಾನ್ ಒಂದನ್ನು…

Read More

ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯವು ಆಟಗಾರರ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಮೊದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಮಾತಿನ ಚಕಮಕಿ ನಡೆದರೆ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಕೆಣಕುವ ಪ್ರಯತ್ನಕ್ಕೆ ಸಾಯಿ ಸುದರ್ಶನ್ ಕೈ ಹಾಕಿದರು. ಆರ್​ಸಿಬಿ ಬ್ಯಾಟಿಂಗ್ ವೇಳೆ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ಸಾಯಿ ಸುದರ್ಶನ್ ಭರ್ಜರಿಯಾಗಿ…

Read More

ಪ್ರತಿದಿನ ಎಷ್ಟು ಹಾಲು ಕುಡೀತಿಯಾ? ವೈಭವ್ ಸೂರ್ಯವಂಶಿ ಉತ್ತರ ಹೀಗಿತ್ತು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ ಈ ಬಾರಿ ಬರೋಬ್ಬರಿ 5 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನ ರನ್ ಸರದಾರನಾಗಿ ಹೊರಹೊಮ್ಮಿದ ವೈಭವ್ 15ನೇ ವಯಸ್ಸಿನಲ್ಲೇ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್-19ರ ಅತ್ಯಂತ ಮೌಲ್ಯಯುತ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ರವಿಶಾಸ್ತ್ರಿ ನಡೆಸಿದ ಚಿಟ್ ಚಾಟ್​ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, “ಇಷ್ಟೊಂದು ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ಅನಿಸುತ್ತಿದೆ….

Read More

ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಅಹಮದಾಬಾದ್‌ನಲ್ಲಿ ನಡೆದ ಆರ್‌ಸಿಬಿ ತಂಡದ ಪಾರ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿರುವ ವಿಶೇಷ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಎಂದಿನ ಎನರ್ಜಿಟಿಕ್ ಶೈಲಿಯಲ್ಲಿ ಬಾಲಿವುಡ್ ಮತ್ತು ಪಾಪ್ ಹಾಡುಗಳಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕೊಹ್ಲಿ ಅವರ…

Read More