ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಶ್ರೀನಗರ, ಜೂನ್ 01: ಕಳೆದ ವರ್ಷ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖ ಸುಳಿವು ಲಭ್ಯವಾಗಿದೆ. ದಾಳಿ ನಡೆಸಿದ ಉಗ್ರರು ಬಳಸಿದ್ದ ಎರಡು ಪ್ರಮುಖ ಮೊಬೈಲ್ ಫೋನ್‌ಗಳ ಮೂಲವನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿ ಒಂದು ಫೋನ್‌ಗೆ ಪಾಕಿಸ್ತಾನದ ಕರಾಚಿ ಮೂಲದ ಪ್ರಮುಖ ಬ್ಯಾಂಕ್‌ವೊಂದು ಹಣಕಾಸು ನೆರವು ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ . ಈ ಕುರಿತು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ. ದಾಳಿಕೋರರ ಡಿಜಿಟಲ್ ಹೆಜ್ಜೆಗುರುತುಗಳನ್ನು ಯಶಸ್ವಿಯಾಗಿ ಬೆನ್ನಟ್ಟಿರುವ ಭದ್ರತಾ ಪಡೆಗಳು, ಶತ್ರುಗಳ ಜಾಲವನ್ನು ಭೇದಿಸುವಲ್ಲಿ ದೊಡ್ಡ ಯಶಸ್ಸು ಕಂಡಿವೆ.

ಬ್ಯಾಂಕ್ ಲಿಂಕ್ ಪತ್ತೆಯಾದದ್ದು ಹೇಗೆ?
2025ರ ಜುಲೈ 28ರಂದು ಜಮ್ಮು ಮತ್ತು ಕಾಶ್ಮೀರದ ಡಚಿಗಮ್ ಅರಣ್ಯ ವ್ಯಾಪ್ತಿಯ ಮುಲ್ನಾರ್ ಮಹಾದೇವ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರಾದ ಫೈಸಲ್ ಜಟ್, ಹಬೀಬ್ ತಾಹಿರ್ ಮತ್ತು ಹಮ್ಜಾ ಅಫ್ಘಾನಿಯನ್ನು ಸೇನೆ ಹೊಡೆದುರುಳಿಸಿತ್ತು. ಇವರಿಂದ ವಶಪಡಿಸಿಕೊಳ್ಳಲಾದ ಎರಡು ಶಿಯೋಮಿ (Xiaomi) ರೆಡ್‌ಮಿ ಫೋನ್‌ಗಳ ತಪಾಸಣೆಯಿಂದ ಈ ಕೆಳಗಿನ ಸತ್ಯಗಳು ಹೊರಬಂದಿವೆ:

ಕರಾಚಿಯ ಕನೆಕ್ಷನ್: ಶಿಯೋಮಿ ಗ್ಲೋಬಲ್ ಸಂಸ್ಥೆ ನೀಡಿದ ಮಾಹಿತಿಯ ಪ್ರಕಾರ, ಉಗ್ರರ ಬಳಿಯಿದ್ದ ಒಂದು ‘ರೆಡ್‌ಮಿ 9T’ ಫೋನ್ ಅನ್ನು 2021ರ ಜನವರಿಯಲ್ಲಿ ಪಾಕಿಸ್ತಾನದ ‘ಟೆಕ್ ಸಿರಾಟ್ ಪ್ರೈವೇಟ್ ಲಿಮಿಟೆಡ್’ ಕಂಪನಿಯು ಆಮದು ಮಾಡಿಕೊಂಡಿತ್ತು. ಈ ಆಮದಿಗೆ ಕರಾಚಿಯ ಶಹ್ರಾ-ಇ-ಫೈಸಲ್‌ನಲ್ಲಿರುವ ಪ್ರಮುಖ ಇಸ್ಲಾಮಿಕ್ ಬ್ಯಾಂಕ್ ಆದ ‘ಫೈಸಲ್ ಬ್ಯಾಂಕ್ ಲಿಮಿಟೆಡ್’ ಹಣಕಾಸು ಒದಗಿಸಿತ್ತು.

ಮತ್ತಷ್ಟು ಓದಿ: ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ?

ರಹಸ್ಯ ಕಳ್ಳಸಾಗಣೆ: ಈ ಫೋನ್ ಅನ್ನು 2021 ರಲ್ಲಿ ಆಮದು ಮಾಡಿಕೊಂಡಿದ್ದರೂ, ಏಪ್ರಿಲ್ 22, 2025 ರಂದು ಪಹಲ್ಗಾಮ್ ದಾಳಿ ನಡೆಯುವವರೆಗೂ ಒಮ್ಮೆಯೂ ಸ್ವಿಚ್ ಆನ್ ಮಾಡಲಾಗಿರಲಿಲ್ಲ. ಅಂದರೆ, ಲಷ್ಕರ್-ತೊಯ್ಬಾ (LeT) ಉಗ್ರರಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಇದನ್ನು ರಹಸ್ಯವಾಗಿ ಎತ್ತಿಡಲಾಗಿತ್ತು ಎಂಬುದು ಸಾಬೀತಾಗಿದೆ.

ಎರಡನೇ ಫೋನ್: ಉಗ್ರರ ಬಳಿಯಿದ್ದ ಮತ್ತೊಂದು ‘ರೆಡ್‌ಮಿ ನೋಟ್ 12’ ಫೋನ್ ಅನ್ನು ಲಾಹೋರ್‌ನ ‘ಏರ್ ಲಿಂಕ್ ಕಮ್ಯುನಿಕೇಷನ್ಸ್’ ಸಂಸ್ಥೆ ಆಮದು ಮಾಡಿಕೊಂಡಿತ್ತು. ಇದನ್ನು ಸಹ ದಾಳಿಗೆ ಮುನ್ನ ಎಂದೂ ಆನ್ ಮಾಡಿರಲಿಲ್ಲ.

ಈ ಹಿಂದೆಯೂ ಭಯೋತ್ಪಾದನಾ ತನಿಖೆಯಲ್ಲಿದ್ದ ಬ್ಯಾಂಕ್
ಪಹಲ್ಗಾಮ್ ದಾಳಿಯಲ್ಲಿ ಈ ಬ್ಯಾಂಕ್‌ನ ನೇರ ಪಾತ್ರದ ಬಗ್ಗೆ ಪುರಾವೆಗಳಿಲ್ಲದಿದ್ದರೂ, ಜಾಗತಿಕ ಭಯೋತ್ಪಾದನಾ ನಿಧಿಯ ತನಿಖೆಗಳಲ್ಲಿ ಈ ಬ್ಯಾಂಕ್ ಹೆಸರು ಈ ಹಿಂದೆಯೂ ಕೇಳಿಬಂದಿತ್ತು. 9/11 ದಾಳಿಯ ನಂತರ ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಭಾರತದ ವಿರುದ್ಧ ಹೋರಾಡುವ ಲಷ್ಕರ್-ಎ-ತೊಯ್ಬಾ(LeT) ಮತ್ತು ಅಲ್-ಖೈದಾ ಒಡನಾಟ ಹೊಂದಿರುವ ಕುವೈತ್ ಮೂಲದ ಲಜ್ನತ್ ಅಲ್-ದವಾ ಸಂಸ್ಥೆಗಳು ಇದೇ ಫೈಸಲ್ ಬ್ಯಾಂಕ್‌ನಲ್ಲಿ ಠೇವಣಿ ಖಾತೆಗಳನ್ನು ಹೊಂದಿದ್ದವು. 2002ರ ವರದಿಗಳ ಪ್ರಕಾರ ಪಾಕಿಸ್ತಾನದ ಎಫ್‌ಐಎ (FIA) ತನಿಖೆ ನಡೆಸಿದಾಗ ಜೈಶ್-ಎ-ಮೊಹಮ್ಮದ್ ಸೇರಿ ಹಲವು ನಿಷೇಧಿತ ಗುಂಪುಗಳು ಇಲ್ಲಿ ಖಾತೆ ಹೊಂದಿದ್ದು ಪತ್ತೆಯಾಗಿತ್ತು.

ರೇಡಿಯೋ ಮತ್ತು ಫೋಟೋಗಳ ಜಪ್ತಿ
ತನಿಖಾಧಿಕಾರಿಗಳ ಪ್ರಕಾರ, ಉಗ್ರರು ಸೆಲ್ಯುಲಾರ್ ನೆಟ್‌ವರ್ಕ್ ಅಥವಾ ಇಂಟರ್ನೆಟ್ ಬಳಸದೆ, ಸುರಕ್ಷಿತವಾಗಿ ಸಂವಹನ ನಡೆಸಲು ‘ಲಾಂಗ್ ರೇಂಜ್ ರೇಡಿಯೋ ಕಮ್ಯುನಿಕೇಷನ್ ತಂತ್ರಜ್ಞಾನ’ ಬಳಸುತ್ತಿದ್ದರು. ಹೀಗಾಗಿ ಫೋನ್‌ಗಳಲ್ಲಿ ಯಾವುದೇ ಕರೆ ಡೇಟಾ ಸಿಕ್ಕಿಲ್ಲ.

ಆದರೆ, ಭದ್ರತಾ ಪಡೆಗಳು ಫೋನ್‌ನಲ್ಲಿದ್ದ ಡಿಜಿಟಲ್ ದತ್ತಾಂಶಗಳನ್ನು ಯಶಸ್ವಿಯಾಗಿ ಮರುಪಡೆದಿದ್ದು (Data Recovery), ಅದರಲ್ಲಿ ಪಹಲ್ಗಾಮ್‌ನ ಬೈಸರನ್ ಕಣಿವೆಯ ನಕ್ಷೆಗಳು ಮತ್ತು ಫೋಟೋಗಳು ಲಭ್ಯವಾಗಿವೆ. ದಾಳಿಗೆ ಮುನ್ನ ಮಾರ್ಚ್ 30, 2025 ರಂದು ಉಗ್ರರು ಎತ್ತರದ ಪ್ರದೇಶದಲ್ಲಿ ಹೂಡಿದ್ದ ರಹಸ್ಯ ಟೆಂಟ್‌ನ ಫೋಟೋ ಕೂಡ ಇದರಲ್ಲಿ ಪತ್ತೆಯಾಗಿದ್ದು, ತನಿಖೆಗೆ ದೊಡ್ಡ ಶಕ್ತಿ ನೀಡಿದೆ. ಶತ್ರುಗಳ ಪ್ರತಿ ನಡೆಯನ್ನು ಭೇದಿಸುತ್ತಿರುವ ತನಿಖಾ ಸಂಸ್ಥೆಗಳ ಈ ಪ್ರಗತಿ ದೇಶದ ಸುರಕ್ಷತೆಯ ದೃಷ್ಟಿಯಿಂದ ಪ್ರಮುಖ ಹೆಜ್ಜೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: 35 ಸಾವಿರ ರೂಗೆ ಬೆಂಗಳೂರಿನಲ್ಲಿ ಆರಾಮ ಜೀವನ ನಡೆಸ್ಬಹುದು; ತಿಂಗಳ ಖರ್ಚು ವೆಚ್ಚ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಬೆಂಗಳೂರು, ಜೂನ್ 01: ಬೆಂಗ್ಳೂರಿನಂತಹ (Bengaluru) ದೊಡ್ಡ ದೊಡ್ಡ ನಗರಗಳಲ್ಲಿ ಜನ ಎಷ್ಟೇ ದುಡಿದ್ರೂ ಹಣ ಸಾಲ್ತಿಲ್ಲ, ದುಡಿದ ಎಲ್ಲಾ ಹಣ ಬಾಡಿಗೆ ಕಟ್ಟೋಕೆ, ತಿಂಗಳ ಖರ್ಚಿಗೆ ಸಾಕಾಗುತ್ತದೆ ಎಂದು ಗೊಣಗುವುದನ್ನು ನೋಡಿರುತ್ತೀರಿ. ಬೆಂಗಳೂರಿನಂತಹ ನಗರದಲ್ಲಿ 35,000 ನಿಂದ ಯೋಗ್ಯ ಜೀವನ ಹೇಗೆ ನಡೆಸಬಹುದೆಂದು ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿ ಅಭಿಪ್ರಾಯ ತಮ್ಮ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಅಮೆಜಾನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಅಮೆಜಾನ್‌ನಲ್ಲಿ 9 ರಿಂದ 5 ರವರೆಗೆ ಕೆಲಸ ಮಾಡುವ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ನಾನು ಎಷ್ಟು ಖರ್ಚು ಮಾಡುತ್ತೇನೆ ಎಂಬುದು ಇಲ್ಲಿದೆ ಎಂದು ಹೇಳಿದ್ದಾರೆ. ಮಾರತಹಳ್ಳಿಯ 2BHK ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್‌ಮೇಟ್‌ನೊಂದಿಗೆ ವಾಸಿಸುತ್ತಿದ್ದು ತಿಂಗಳ ಬಾಡಿಗೆ 30000 ರೂ ಇದ್ದರೂ, ನನಗೆ  ತಿಂಗಳಿಗೆ 15,000 ರೂ ಬರುತ್ತದೆ. 3,000 ರೂ ಸಂಬಳಕ್ಕೆ ಅಡುಗೆಯವರನ್ನು ನೇಮಿಸಿಕೊಂಡಿದ್ದೇನೆ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಪೆಟ್ರೋಲ್ ವೆಚ್ಚವು ತಿಂಗಳಿಗೆ 2,000 ರೂ ಆಗುತ್ತದೆ. ಫಿಟ್ ಆಗಿರಲು, ನಾನು ನಿಯಮಿತವಾಗಿ ಜಿಮ್ ಮಾಡುತ್ತೇನೆ. ಜಿಮ್ ಚಂದಾದಾರಿಕೆ ಮತ್ತು ಪ್ರೋಟೀನ್ ಪೂರಕಗಳಿಗಾಗಿ 2,000 ರೂ ಖರ್ಚು ಮಾಡುತ್ತೇನೆ. ಚಿಕನ್ ಗಾಗಿ
ತಿಂಗಳಿಗೆ 3,000 ರೂ ಎತ್ತಿಡುತ್ತೇನೆ ಎಂದು ಹೇಳಿದ್ದಾರೆ.

ದಿನಸಿ ಮತ್ತು ಗೃಹೋಪಯೋಗಿ ವಸ್ತುಗಳಿಗೆ ತಿಂಗಳಿಗೆ ಸರಿಸುಮಾರು 3,000 ರೂ ಖರ್ಚು ಮಾಡುತ್ತೇನೆ. ವಾರಾಂತ್ಯದಲ್ಲಿ ಅಡುಗೆಯವರು ಹೆಚ್ಚಾಗಿ ಲಭ್ಯವಿರುವುದಿಲ್ಲ, ಹೀಗಾಗಿ ನಾನು ಫುಡ್‌ ಆರ್ಡರ್ ಮಾಡಲು ಪ್ರತಿ ತಿಂಗಳು ಸುಮಾರು 2,000 ರೂ ವೆಚ್ಚವಾಗುತ್ತದೆ ಎಂದು ವಿವರಿಸಿದ್ದಾರೆ.

ಇಂಟರ್ನೆಟ್ ಬಿಲ್‌ಗಳು, ವಿದ್ಯುತ್ ಮತ್ತು ಚಂದಾದಾರಿಕೆ ಸೇರಿ 2,000 ರೂ ರಷ್ಟು ಕಡಿಮೆ ಖರ್ಚಾಗುತ್ತದೆ. ವಾಷಿಂಗ್ ಮೆಷಿನ್ ರೆಫ್ರಿಜರೇಟರ್‌ನಂತಹ ಉಪಕರಣಗಳಿಗೆ 1,000 ರೂ ಬಾಡಿಗೆಯನ್ನೂ ಪಾವತಿಸುತ್ತೇನೆ. ಶಾಪಿಂಗ್‌ಗಾಗಿ 2,000 ರೂ ಮೀಸಲಿಡುತ್ತೇನೆ. ಹೀಗಾಗಿ, ಮಾಸಿಕ ಖರ್ಚು 35,000 ರೂ ಆಗುತ್ತದೆ ಎಂದು ಹೇಳಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ: ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿ; ವೈರಲ್ ಆಯ್ತು ಪೋಸ್ಟ್

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ಬೆಂಗಳೂರಿನಲ್ಲಿ ಲೆಕ್ಕ ಹಾಕಿ ಬದುಕುವುದು ಅನಿರ್ವಾಯ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಾನು ನೋಡಿದ ಅತ್ಯಂತ ವಾಸ್ತವಿಕ ವೆಚ್ಚಗಳ ವೀಡಿಯೊಗಳಲ್ಲಿ ಇದು ಒಂದು ಎಂದಿದ್ದಾರೆ. ಇನ್ನೊಬ್ಬರು, ಆದಾಯ ಹೆಚ್ಚಿರಲಿ ಕಡಿಮೆಯಿರಲಿ, ಖರ್ಚು ವೆಚ್ಚಗಳು ಇತಿಮಿತಿಯಲ್ಲಿದ್ದರೆ ಉತ್ತಮ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಕ್ಲೋಸಿಂಗ್ ಕಲೆಕ್ಷನ್ ಎಷ್ಟು? ಇಲ್ಲಿದೆ ವಿವರ

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾಗಿದ್ದ ‘ಕೆಡಿ – ದಿ ಡೆವಿಲ್’ ಚಿತ್ರದ (KD Movie) ಒಟ್ಟು ಬಾಕ್ಸ್ ಆಫೀಸ್ ಗಳಿಕೆಯ ಅಧಿಕೃತ ವಿವರಗಳು ಹೊರಬಿದ್ದಿವೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಸಿನಿಮಾ ಈಗ ಒಟಿಟಿಗೆ ಬರುತ್ತಿರುವುದರಿಂದ ಸಿನಿಮಾದ ಗಳಿಕೆ ಬಹುತೇಕ ಕೊನೆಗೊಂಡಂತೆ ಆಗಿದೆ. ಈ ಚಿತ್ರದ ಕ್ಲೋಸಿಂಗ್ ಗಳಿಕೆ ವಿವರ ಇಲ್ಲಿದೆ.

ವಿಶ್ವದಾದ್ಯಂತ ಒಟ್ಟು 13,358 ಶೋ ಪ್ರದರ್ಶನ ಕಂಡಿರುವ ಈ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ. ಆದರೆ, ಚಿತ್ರದ ಬಜೆಟ್​​ಗೆ ಹೋಲಿಸಿದರೆ ಈ ಗಳಿಕೆ ಸಣ್ಣದು ಎನ್ನಬಹುದು. ಈ ಚಿತ್ರ ವಿಶ್ವದಾದ್ಯಂತ ಚಿತ್ರವು ಒಟ್ಟು 24.35 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರದ ನೆಟ್ ಕಲೆಕ್ಷನ್ ಒಟ್ಟು 21.39 ಕೋಟಿ ಆಗಿದೆ. ಈ ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ.

ಸಿನಿಮಾ ಈಗ ತನ್ನ ಥಿಯೇಟರ್ ರನ್ ಅನ್ನು ಬಹುತೇಕ ಮುಗಿಸುವ ಹಂತಕ್ಕೆ ಬಂದಿದೆ. ಇತ್ತೀಚೆಗೆ ಅಂದರೆ ಮೇ 31ರ ಭಾನುವಾರದಂದು ಈ ಸಿನಿಮಾ ಕೇವಲ 7 ಲಕ್ಷ ರೂಪಾಯಿ ಗಳಿಸಿದೆ. ಚಿತ್ರಮಂದಿರಗಳಲ್ಲಿ ಇದು ಸಿನಿಮಾದ ಕೊನೆಯ ದಿನಗಳ ಗಳಿಕೆಯಾಗಿದ್ದರಿಂದ, ಇದನ್ನು ಚಿತ್ರದ ಕ್ಲೋಸಿಂಗ್ ಗಳಿಕೆ ಎಂದು ಪರಿಗಣಿಸಬಹುದು. ಜೂನ್ 5ರಂದು ಈ ಚಿತ್ರವು ಅಧಿಕೃತವಾಗಿ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗುತ್ತಿದೆ.

‘ಕೆಡಿ – ದಿ ಡೆವಿಲ್’ ಚಿತ್ರವನ್ನು ಖ್ಯಾತ ನಿರ್ದೇಶಕ ಪ್ರೇಮ್ ನಿರ್ದೇಶಿಸಿದ್ದು, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿ ಅಬ್ಬರಿಸಿದ್ದಾರೆ. ಚಿತ್ರದಲ್ಲಿ ಧ್ರುವ ಸರ್ಜಾ ಅವರ ‘ಕಾಳಿ’ ಎಂಬ ಪವರ್‌ಫುಲ್ ಮಾಸ್ ಲುಕ್ ಪ್ರೇಕ್ಷಕರ ಮನ ಗೆದ್ದಿದೆ. ಇವರೊಂದಿಗೆ ಬಾಲಿವುಡ್ ಸ್ಟಾರ್ ಸಂಜಯ್ ದತ್ ಖಳನಾಯಕನಾಗಿ ನಟಿಸಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್, ಶಿಲ್ಪಾ ಶೆಟ್ಟಿ, ರೇಷ್ಮಾ ನಾಣಯ್ಯ ಹಾಗೂ ರಮೇಶ್ ಅರವಿಂದ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ

‘ಕೆಡಿ’ ಸಿನಿಮಾ ಶೀರ್ಷಿಕೆ ಪ್ರಕಟವಾದ ದಿನದಿಂದಲೇ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿತ್ತು. ಚಿತ್ರದ ‘ಸರ್ಸೆ ಸರ್ಸೆ’ ಕೆಟ್ಟ ಸಾಹಿತ್ಯದ ಕಾರಣಕ್ಕೆ ವಿವಾದ ಮಾಡಿಕೊಂಡಿತು. ಟ್ರೈಲರ್​ನಲ್ಲಿರುವ ವಿಪರೀತ ರಕ್ತಪಾತ ಹಾಗೂ ಹಿಂಸಾಚಾರದ ದೃಶ್ಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್‌ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!

ಬೆಂಗಳೂರು, ಜೂನ್ 01: ಕೆಲ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಹಾಗೂ ಬೇಕಾಬಿಟ್ಟಿ ಹಣ ವಸೂಲಿ ಮಾಡುವ ದಂಧೆ ಈಗಿನದಲ್ಲ. ಪ್ರತಿಯೊಂದು ಚಿಕಿತ್ಸೆಗೂ ಲಕ್ಷ ಲಕ್ಷ ಪೀಕುವ ಖಾಸಗಿ ಆಸ್ಪತ್ರೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಅಂಗಾಂಗ ಕಸಿ (Organ Transplant) ಚಿಕಿತ್ಸೆ ಮಾಡಿಸಬೇಕೆಂದರೆ ಬಡ ಹಾಗೂ ಮಧ್ಯಮ ವರ್ಗದ ಜನರು ದುಪ್ಪಟ್ಟು ಹಣ ನೀಡಿ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಈ ಜಾಲಕ್ಕೆ ಕಡಿವಾಣ ಹಾಕಲು ಮತ್ತು ಜನಸಾಮಾನ್ಯರಿಗೆ ನೆರವಾಗಲು ಈಗ ಆರೋಗ್ಯ ಇಲಾಖೆ ಮಹತ್ವದ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ.

ಮುಖ್ಯಾಂಶಗಳು

  • ಖಾಸಗಿ ಆಸ್ಪತ್ರೆಗಳ ದುಬಾರಿ ಅಂಗಾಂಗ ಕಸಿ ಚಿಕಿತ್ಸಾ ವೆಚ್ಚಕ್ಕೆ ಕ್ಯಾಪಿಂಗ್ ಜಾರಿ ಸಾಧ್ಯತೆ.
  • ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯಾಧುನಿಕ ಟ್ರಾನ್ಸ್‌ಪ್ಲಾಂಟ್ ಚಿಕಿತ್ಸೆ ಪರಿಚಯಿಸಲು ಆರೋಗ್ಯ ಇಲಾಖೆ ಮುಂದು.
  • ಖಾಸಗಿಯವರ ಸುಲಿಗೆಗೆ ಕಡಿವಾಣ ಹಾಕಲು ಸಚಿವ ದಿನೇಶ್ ಗುಂಡೂರಾವ್‌ಗೆ ಮಾಜಿ ಸಿಎಂ ಸೂಚನೆ.

ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ‘ಕ್ಯಾಪಿಂಗ್’ ಬಿಸಿ!

ಲಿವರ್, ಕಿಡ್ನಿ, ಬೋನ್ ಮ್ಯಾರೋ ಹಾಗೂ ಶ್ವಾಸಕೋಶದಂತಹ ಅತ್ಯಂತ ಜಟಿಲ ಹಾಗೂ ದುಬಾರಿ ಟ್ರಾನ್ಸ್‌ಪ್ಲಾಂಟ್‌ಗಳಿಗೆ ಖಾಸಗಿ ಆಸ್ಪತ್ರೆಗಳು 5 ಲಕ್ಷದಿಂದ ಹಿಡಿದು 20 ಹಾಗೂ 50 ಲಕ್ಷ ರೂಪಾಯಿವರೆಗೂ ಬೇಕಾಬಿಟ್ಟಿ ಚಾರ್ಜ್ ಮಾಡುತ್ತಿವೆ. ಬಡವರಿಗೆ ಸರ್ಕಾರದಿಂದ ಸಿಗುವ ಲೋನ್ ಅಥವಾ ನೆರವು ಕೇವಲ 5 ಲಕ್ಷ ರೂಪಾಯಿ ಮಾತ್ರ ಇರುವುದರಿಂದ, ಬಾಕಿ ಹಣ ಹೊಂದಿಸಲಾಗದೆ ಅದೆಷ್ಟೋ ರೋಗಿಗಳು ಕಣ್ಣೀರಿಡುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ, ಹೈಟೆಕ್ ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಗರಿಷ್ಠ ಮಿತಿ ಅಂದರೆ ‘ಕ್ಯಾಪಿಂಗ್’ (Capping) ಜಾರಿಗೊಳಿಸಲು ಚಿಂತನೆ ನಡೆಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲೇ ಅಂಗಾಂಗ ಕಸಿ: ಮಾಜಿ ಸಿಎಂ ಸೂಚನೆ

ಖಾಸಗಿ ಆಸ್ಪತ್ರೆಗಳ ಈ ಮನಸೋಇಚ್ಛೆ ಲೂಟಿಗೆ ಕಡಿವಾಣ ಹಾಕುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕೊನೆಯ ಆರೋಗ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕಡಕ್ ಸೂಚನೆ ನೀಡಿದ್ದರು. “ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ವ್ಯವಸ್ಥೆ ಖಾಸಗಿಯವರಿಗಿಂತ ಕಡಿಮೆ ಇರಬಾರದು. ಆರೋಗ್ಯ ಸೇವೆಗೆ ಏನು ಬೇಕಾದರೂ ಮಾಡಲು ನಾನು ಸಿದ್ಧ” ಎಂದು ಹೇಳಿದ್ದರು. ಅವರ ಕನಸಿನಂತೆಯೇ, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯಾಧುನಿಕ ಅಂಗಾಂಗ ಕಸಿ ಚಿಕಿತ್ಸೆಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಪರಿಚಯಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯವು ಆಟಗಾರರ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಮೊದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಮಾತಿನ ಚಕಮಕಿ ನಡೆದರೆ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಕೆಣಕುವ ಪ್ರಯತ್ನಕ್ಕೆ ಸಾಯಿ ಸುದರ್ಶನ್ ಕೈ ಹಾಕಿದರು.

ಆರ್​ಸಿಬಿ ಬ್ಯಾಟಿಂಗ್ ವೇಳೆ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ಸಾಯಿ ಸುದರ್ಶನ್ ಭರ್ಜರಿಯಾಗಿ ಬ್ಯಾಟ್ ಮಾಡುತ್ತಿದ್ದ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿ ಏನನ್ನೋ ಹೇಳಿದ್ದಾರೆ. ಈ ವೇಳೆ ಕೊಹ್ಲಿ ಕೂಡ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಕೊಹ್ಲಿಯ ಬಳಿ ತೆರಳಿದ ಸಾಯಿ ಸುದರ್ಶನ್ ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.

ಇದಾಗ್ಯೂ ಸಮಾಧಾನಗೊಳ್ಳದ ವಿರಾಟ್ ಕೊಹ್ಲಿ ಮತ್ತೆ ಬಂದು ಸಾಯಿ ಸುದರ್ಶನ್​ಗೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ. ಇತ್ತ ಸುಖಾ ಸುಮ್ಮನೆ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರೂ ಅಷ್ಟರಲ್ಲಾಗಲೇ ಸಿಗಬೇಕಿರುವುದೆಲ್ಲವೂ ಸಿಕ್ಕಾಗಿತ್ತು.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗುಜರಾತ್ ಟೈಟಾನ್ಸ್ ಆಟಗಾರ ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

 

Source link

ಪ್ರತಿದಿನ ಎಷ್ಟು ಹಾಲು ಕುಡೀತಿಯಾ? ವೈಭವ್ ಸೂರ್ಯವಂಶಿ ಉತ್ತರ ಹೀಗಿತ್ತು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ ಈ ಬಾರಿ ಬರೋಬ್ಬರಿ 5 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನ ರನ್ ಸರದಾರನಾಗಿ ಹೊರಹೊಮ್ಮಿದ ವೈಭವ್ 15ನೇ ವಯಸ್ಸಿನಲ್ಲೇ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್-19ರ ಅತ್ಯಂತ ಮೌಲ್ಯಯುತ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ರವಿಶಾಸ್ತ್ರಿ ನಡೆಸಿದ ಚಿಟ್ ಚಾಟ್​ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, “ಇಷ್ಟೊಂದು ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ಅನಿಸುತ್ತಿದೆ. ಆದರೆ ಮೈದಾನದಲ್ಲಿ ಬ್ಯಾಟ್ ಮಾಡುವಾಗ ಇಲ್ಲದ ಒತ್ತಡ, ಈಗ ನಿಮ್ಮ ಜೊತೆ ಮಾತನಾಡುವಾಗ ಆಗುತ್ತಿದೆ” ಎಂದಿದ್ದಾರೆ.

ಈ ವೇಳೆ ಯುವ ಆಟಗಾರನ ಒತ್ತಡವನ್ನು ಕಡಿಮೆ ಮಾಡಲು ರವಿ ಶಾಸ್ತ್ರಿ ತಮಾಷೆಯ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಅಲ್ಲಾ ವೈಭವ್, ಇಷ್ಟು ದೊಡ್ಡ ಸಿಕ್ಸರ್‌ಗಳನ್ನು ಹೊಡೆಯಲು ಪ್ರತಿದಿನ ಎಷ್ಟು ಲೀಟರ್ ಹಾಲು ಕುಡಿಯುತ್ತೀರಿ?” ಎಂದು ಕೇಳಿದ್ದಾರೆ.

ಇದಕ್ಕೆ ನಗುತ್ತಾ ಉತ್ತರಿಸಿದ ವೈಭವ್ ಸೂರ್ಯವಂಶಿ, “ಸದ್ಯಕ್ಕಂತೂ ನಾನು ಹಾಲು ಕುಡಿಯುತ್ತಿಲ್ಲ. ನಾನು ನನ್ನ ಬ್ಯಾಟಿಂಗ್ ಅನ್ನು  ನಂಬುತ್ತೇನೆ ಅಷ್ಟೇ. ಪಂದ್ಯದ ಮೊದಲ ಎಸೆತವೇ ನಾನು ಅಂದುಕೊಂಡಂತೆ, ನನ್ನ ಝೋನ್​ನಲ್ಲಿದ್ದರೆ, ಯಾವುದೇ ಹಿಂಜರಿಕೆಯಿಲ್ಲದೆ ಮ್ಯಾಕ್ಸಿಮಮ್ ರನ್ ಗಳಿಸಲು ಬ್ಯಾಟ್ ಬೀಸುತ್ತೇನೆ,” ಎಂದರು.

ಇದೇ ವೇಳೆ ಈ ಬಾರಿಯ ಐಪಿಎಲ್​ನಿಂದ ಕಲಿತ ಪಾಠ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ವೈಭವ್, “ಪ್ರತಿ ಮ್ಯಾಚ್​ ಅನ್ನು ಕೂಡ ಒಂದೇ ಮೈಂಡ್​ ಸೆಟ್​ನಲ್ಲಿ ಆಡಲು ಸಾಧ್ಯವಿಲ್ಲ. ಪ್ರತಿ ಪಂದ್ಯದಲ್ಲೂ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡಬೇಕು, ಇದಕ್ಕಾಗಿ ಬ್ಯಾಟಿಂಗ್ ಶೈಲಿಯನ್ನು ಬದಲಿಸಿಕೊಳ್ಳಬೇಕು ಎಂಬುದನ್ನು ನಾನು ಕಲಿತಿದ್ದೇನೆ” ಎಂದರು.

ಇನ್ನು ತಮ್ಮ ಭವಿಷ್ಯದ ಗುರಿಯ ಬಗ್ಗೆ ಮಾತನಾಡಿದ ವೈಭವ್ ಸೂರ್ಯವಂಶಿ, ” ನಾನು ಟೀಮ್ ಇಂಡಿಯಾಗೆ ದೀರ್ಘಕಾಲದವರೆಗೆ ಆಡಲು ಬಯಸುತ್ತೇನೆ. ಅದಕ್ಕಾಗಿ ಫಿಟ್​ನೆಸ್ ಕಡೆಗೆ ಹೆಚ್ಚಿನ ಗಮನ ಹರಿಸಲಿದ್ದೇನೆ” ಎಂದು ತಿಳಿಸಿದ್ದಾರೆ. ಈ ಮೂಲಕ ಮುಂಬರುವ ದಿನಗಳಲ್ಲಿ ಹೆಚ್ಚಿನ ಫಿಟ್​ನೆಸ್​ನೊಂದಿಗೆ ಮರಳುವ ವಿಶ್ವಾಸವನ್ನು ವೈಭವ್ ಸೂರ್ಯವಂಶಿ ಮುಂದಿಟ್ಟಿದ್ದಾರೆ.

ಈ ಬಾರಿ ವೈಭವ್ ಸೂರ್ಯವಂಶಿ ಪಡೆದ ಪ್ರಶಸ್ತಿಗಳು:

  • ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್
  • ಆರೆಂಜ್ ಕ್ಯಾಪ್
  • ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್
  • ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್
  • ಸೂಪರ್ ಸಿಕ್ಸರ್ಸ್ ಆಫ್ ದಿ ಸೀಸನ್

ಇದನ್ನೂ ಓದಿ: ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

ಈ ಐದು ಪ್ರಶಸ್ತಿಗಳೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ (2016) ಹಾಗೂ ಜೋಸ್ ಬಟ್ಲರ್ (2022) ಒಂದೇ ಸೀಸನ್​ನಲ್ಲಿ ತಲಾ 4 ಪ್ರಶಸ್ತಿ ಪಡೆದಿದ್ದರು.

Published On – 11:23 am, Mon, 1 June 26

Source link

ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಅಹಮದಾಬಾದ್‌ನಲ್ಲಿ ನಡೆದ ಆರ್‌ಸಿಬಿ ತಂಡದ ಪಾರ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿರುವ ವಿಶೇಷ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಎಂದಿನ ಎನರ್ಜಿಟಿಕ್ ಶೈಲಿಯಲ್ಲಿ ಬಾಲಿವುಡ್ ಮತ್ತು ಪಾಪ್ ಹಾಡುಗಳಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕೊಹ್ಲಿ ಅವರ ಈ ದಿಢೀರ್ ಮತ್ತು ಮಾಸ್ ಡ್ಯಾನ್ಸ್ ಮೂವ್ಸ್ ನೋಡಿ ಪಕ್ಕದಲ್ಲೇ ಇದ್ದ ಅನುಷ್ಕಾ ಶರ್ಮಾ ಕಣ್ಣರಳಿಸಿ, ಆಶ್ಚರ್ಯದಿಂದ ನಗುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ಜೊತೆ ದಿನೇಶ್ ಕಾರ್ತಿಕ್ ಸೇರಿದಂತೆ ಆರ್‌ಸಿಬಿ ತಂಡದ ಇತರ ಆಟಗಾರರು ಕೂಡ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ದಾರೆ. ಇದೀಗ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿ ಡ್ಯಾನ್ಸ್ ವಿಡಿಯೋ:

ಗೆದ್ದು ಬೀಗಿದ ಚಾಂಪಿಯನ್ಸ್​:

ಈ ಬಾರಿಯ ಐಪಿಎಲ್​ನಲ್ಲಿ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ ಮೂರನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಸಾಧಣೆ ಮಾಡಿದ್ದರು.

ಇದನ್ನೂ ಓದಿ: ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡವು 2010 ಹಾಗೂ 2011 ರಲ್ಲಿ ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದರೆ, ಮುಂಬೈ ಇಂಡಿಯನ್ಸ್ ತಂಡವು 2019 ಹಾಗೂ 2020 ರಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು 2025, 2026 ರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

Source link

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ

ನವದೆಹಲಿ, ಜೂನ್ 1: ವಾರಾಂತ್ಯದಲ್ಲಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ ಗ್ರಾಮ್​ಗೆ 75 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಬಹಳ ಸ್ಥಿರವಾಗಿದೆ. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,717 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,320 ರೂ
  • ಚೆನ್ನೈ: 14,500 ರೂ
  • ಮುಂಬೈ: 14,320 ರೂ
  • ದೆಹಲಿ: 14,335 ರೂ
  • ಕೋಲ್ಕತಾ: 14,320 ರೂ
  • ಕೇರಳ: 14,320 ರೂ
  • ಅಹ್ಮದಾಬಾದ್: 14,325 ರೂ
  • ಜೈಪುರ್: 14,335 ರೂ
  • ಲಕ್ನೋ: 14,335 ರೂ
  • ಭುವನೇಶ್ವರ್: 14,320 ರೂ

ಇದನ್ನೂ ಓದಿ: Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 593 ರಿಂಗಿಟ್ (14,174 ರುಪಾಯಿ)
  • ದುಬೈ: 547.50 ಡಿರಾಮ್ (14,135 ರುಪಾಯಿ)
  • ಅಮೆರಿಕ: 149.50 ಡಾಲರ್ (14,172 ರುಪಾಯಿ)
  • ಸಿಂಗಾಪುರ: 197.50 ಸಿಂಗಾಪುರ್ ಡಾಲರ್ (14,653 ರುಪಾಯಿ)
  • ಕತಾರ್: 547 ಕತಾರಿ ರಿಯಾಲ್ (14,225 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (14,222 ರುಪಾಯಿ)
  • ಓಮನ್: 57.50 ಒಮಾನಿ ರಿಯಾಲ್ (14,157 ರುಪಾಯಿ)
  • ಕುವೇತ್: 45.67 ಕುವೇತಿ ದಿನಾರ್ (13,988 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಊಟ-ತಿಂಡಿ ದರವೂ ಹೆಚ್ಚಾಗುತ್ತಾ? ಹೋಟೆಲ್ ಮಾಲೀಕರು ಏನಂತಾರೆ ನೋಡಿ

ಬೆಂಗಳೂರು, ಜೂನ್ 1: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸರಣಿಯಾಗಿ ಏರಿಕೆಯಾಗುತ್ತಿರುವುದು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ. ಇಂದು ಕೂಡ ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಬೆಂಗಳೂರಿನಲ್ಲಿ 46 ರೂ. ಹೆಚ್ಚಳವಾಗಿದ್ದು, ಮುಂಬರುವ ದಿನಗಳಲ್ಲಿ ಇದರ ಬೆಲೆ ಬರೋಬ್ಬರಿ 4 ಸಾವಿರ ರೂಪಾಯಿ ತಲುಪುವ ಸಾಧ್ಯತೆಯಿದೆ ಎಂದು ಗ್ಯಾಸ್ ಏಜೆನ್ಸಿಗಳು ಈಗಾಗಲೇ ಮುನ್ಸೂಚನೆ ನೀಡಿವೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್ ಮಾಲೀಕರಿಗೆ ತೊಂದರೆಯಾಗುತ್ತಿದ್ದು, ದರ ಏರಿಕೆ ಮಾಡುವುದು ಬಿಟ್ಟು ಬೇರೆ ದಾರಿಯಿಲ್ಲದ ಕಾರಣ ಈಗಾಗಲೇ ಸಾಕಷ್ಟು ಹೋಟೆಲ್‌ಗಳು ಮುಚ್ಚಲ್ಪಟ್ಟಿವೆ.

ಪ್ರತಿ ಬಾರಿ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆಯಾದಾಗ ಆ ಹೊರೆಯನ್ನು ನೇರವಾಗಿ ಗ್ರಾಹಕರ ಮೇಲೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಹೋಟೆಲ್ ಉದ್ಯಮಿಗಳು ಈಗ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಹೇಳಿದ್ದಾರೆ. ‘ದರ ಏರಿಕೆಯ ಹೊರೆ ತಪ್ಪಿಸಲು ನಾವು ಈಗಾಗಲೇ ಎಲೆಕ್ಟ್ರಿಕ್ ಸ್ಟೌವ್‌ಗಳ ಬಳಕೆಯ ಮೊರೆ ಹೋಗಿದ್ದೇವೆ. ಈ ಹಿಂದೆ ನಮಗೆ ನಿತ್ಯ 5 ಸಿಲಿಂಡರ್‌ಗಳು ಬೇಕಾಗುತ್ತಿದ್ದವು. ಆದರೆ ಎಲೆಕ್ಟ್ರಿಕ್ ಸ್ಟೌವ್ ಬಳಸುತ್ತಿರುವುದರಿಂದ ಈಗ ಕೇವಲ ಒಂದೂವರೆ ಸಿಲಿಂಡರ್ ಮಾತ್ರ ಬೇಕಾಗುತ್ತಿದೆ. ಇದರಿಂದ ಗ್ರಾಹಕರ ಮೇಲಿನ ಹೊರೆ ತಪ್ಪಿಸಬಹುದು’ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ಇಂದೋರ್, ಜೂನ್ 01: ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್​ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ. ಸುಮಾರು ಒಂದು ಗಂಟೆ ಕಾಲ ನೀರಿನ ಹರಿವು ಜೋರಾಗಿದ್ದು, ಬೆಳಗ್ಗೆ 8.30 ರ ಸುಮಾರಿಗೆ ನೀರು ಸರಬರಾಜು ಸ್ಥಗಿತಗೊಂಡಾಗ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version