ತಮಿಳುನಾಡು: ವಾಲ್ಪಾರೈ ಘಾಟ್​ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು – Kannada News | Tamil Nadu Valparai Ghat Road Accident: 9 Tourists from Kerala Killed as Van Plunges into Deep Gorge Near Pollachi

ಕೊಯಮತ್ತೂರು, ಏಪ್ರಿಲ್ 18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ.

ಮೃತರನ್ನು ಅಜಿತಾ (54), ರಮ್ಲಾ (52), ಸುಹ್ರಾ (43), ಆಶಾ (41), ಮಜೀತ್ (43), ಸಜಿತಾ (45), ಶಕೀಲಾ (37), ರುಕಿಯಾ (39) ಮತ್ತು ಹಿಶಾಂ (12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ್ದು ಹೇಗೆ?

ಕೇರಳದ ಪೆರಿಂತಲ್ಮಣ ಮೂಲದ 13 ಸದಸ್ಯರ ತಂಡ ವಾಲ್ಪಾರೈ ಪ್ರವಾಸ ಮುಗಿಸಿ ವಾಪಸಾಗುತ್ತಿತ್ತು. ಚಾಲಕ ಸೇರಿದಂತೆ 13 ಮಂದಿ ಈ ಪ್ರವಾಸಿಗರ ಗುಂಪಿನ ಭಾಗವಾಗಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಭಾರಿ ತಿರುವಿನಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ಸಂಜೆ 5:15ರ ಸುಮಾರಿಗೆ 13ನೇ ಹೇರ್ ಪಿನ್ ಬೆಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಿಂದ ಕೆಳಕ್ಕೆ ಜಾರಿ 9ನೇ ಹೇರ್ ಪಿನ್ ಬೆಂಡ್ ವರೆಗೆ ಉರುಳಿದೆ. ಕಡಿದಾದ ಭೂಪ್ರದೇಶ ಮತ್ತು ದಟ್ಟ ಅರಣ್ಯದ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್ ಜಿ. ಗಿರಿಯಪ್ಪನವರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಡಂಪರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಈ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿಯವರು ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02 ರವರೆಗೆ ಇರುತ್ತದೆ. ಈ ಪರ್ವದಿನವು ಸಾಕ್ಷಾತ್ ಶನಿ ಭಗವಾನ, ವೆಂಕಟೇಶ ಹಾಗೂ ಹನುಮಂತ ದೇವರ ಲಹರಿಗಳ ಪ್ರಭಾವದಿಂದ ಕೂಡಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗಳಿಗೂ ಗ್ರಹಗಳ ಶುಭ ಫಲ, ಧನ ಯೋಗ, ಆರೋಗ್ಯ, ವ್ಯವಹಾರ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ದಿಕ್ಕಿನ ಬಗ್ಗೆ ವಿವರಿಸಿದ್ದಾರೆ.

 

 

 

Source link

Daily Devotional: ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ? – Kannada News | Kumkumarchana at Home: Benefits, Ritual and Puja Tips

ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವೆ. ಆದರೆ, ಇದನ್ನು ಮನೆಯಲ್ಲಿ ಮಾಡಬಹುದೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಖಂಡಿತವಾಗಿಯೂ ಮನೆಯಲ್ಲಿ ಕುಂಕುಮಾರ್ಚನೆಯನ್ನು ಮಾಡಬಹುದು. ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿ ಕುಳಿತು, ದೇವಿಯ ಅಷ್ಟೋತ್ತರ ನಾಮಾವಳಿಗಳನ್ನು ಪಠಿಸುತ್ತಾ, ತೋರು ಬೆರಳನ್ನು ಹೊರತುಪಡಿಸಿ ಉಳಿದ ಮೂರು ಬೆರಳುಗಳಿಂದ ಶುದ್ಧವಾದ ಕುಂಕುಮವನ್ನು ವಿಳ್ಳೆದೆಲೆ ಅಥವಾ ಬೆಳ್ಳಿ ತಟ್ಟೆಯಲ್ಲಿರುವ ದೇವಿಯ ಚಿತ್ರಕ್ಕೆ ಅರ್ಪಿಸಬಹುದು. ಇದರಿಂದ ನಿಮ್ಮ ಪ್ರಯಾಣ, ಉದ್ಯೋಗ, ವಿವಾಹ, ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಸಂತಾನ ಸೇರಿದಂತೆ ಯಾವುದೇ ಕಾರ್ಯಗಳಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗಿ ಯಶಸ್ಸು ಲಭಿಸುತ್ತದೆ. ಮಂಗಳವಾರ, ಶುಕ್ರವಾರ ಅಥವಾ ಪ್ರತಿದಿನ ಬ್ರಾಹ್ಮಿ ಮುಹೂರ್ತದಲ್ಲಿ ಕುಂಕುಮಾರ್ಚನೆ ಮಾಡುವುದು ಉತ್ತಮ ಫಲ ನೀಡುತ್ತದೆ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ರೂಲ್ಸ್? ಕನ್ನಡ ಬಾರದ ಕ್ಯಾಬ್ ಚಾಲಕರ ಡಿಎಲ್ ರದ್ದುಪಡಿಸಲು ಹೆಚ್ಚಿದ ಒತ್ತಾಯ – Kannada News | Mandatory Kannada for Auto, Cab Drivers: Transport Unions Demand Maharashtra Style Rules to Cancel DL of Non Kannada Speakers

ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಅನ್ಯಭಾಷಿಕ ಆಟೋ ಮತ್ತು ಕ್ಯಾಬ್ ಚಾಲಕರ ಸಂಖ್ಯೆ ಹೆಚ್ಚುತ್ತಿದ್ದು, ಭಾಷೆಯ ಸಮಸ್ಯೆಯಿಂದಾಗಿ ಪ್ರಯಾಣಿಕರು ಮತ್ತು ಚಾಲಕರ ನಡುವೆ ನಿತ್ಯ ಗಲಾಟೆಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲೇ ಕರ್ನಾಟಕದಲ್ಲೂ ಕನ್ನಡ ಬಾರದ ಚಾಲಕರ ಚಾಲನಾ ಪರವಾನಗಿ (DL) ರದ್ದುಪಡಿಸುವ ನಿಯಮ ಜಾರಿಗೆ ತರಬೇಕು ಎಂಬ ಬಲವಾದ ಆಗ್ರಹ ಕೇಳಿಬಂದಿದೆ.

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ನಿಯಮ

ಮಹಾರಾಷ್ಟ್ರ ಸರ್ಕಾರವು ಮೇ 1ರ ‘ಮಹಾರಾಷ್ಟ್ರ ದಿನಾಚರಣೆ’ಯ ಅಂಗವಾಗಿ ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಅಲ್ಲಿನ ಸಾರಿಗೆ ಇಲಾಖೆಯು ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬಾರದ ಆಟೋ ಹಾಗೂ ಕ್ಯಾಬ್ ಚಾಲಕರ ಪರವಾನಗಿಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ನಾಡಿನ ಭಾಷೆ ತಿಳಿಯದವರಿಂದ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದೇ ಮಾದರಿಯನ್ನು ಈಗ ಕರ್ನಾಟಕದ ಖಾಸಗಿ ಸಾರಿಗೆ ಸಂಘಟನೆಗಳು ಒತ್ತಾಯಿಸುತ್ತಿವೆ.

ಕನ್ನಡ ಕಡ್ಡಾಯಕ್ಕೆ ಆಗ್ರಹ

ಕನ್ನಡ ಬಾರದ ವಲಸಿಗ ಚಾಲಕರು ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸುವುದು, ತಪ್ಪು ದಾರಿ ತೋರಿಸುವುದು ಮತ್ತು ಮೀಟರ್ ವ್ಯವಹಾರದಲ್ಲಿ ವಂಚನೆ ಮಾಡುವುದಕ್ಕೆ ಕಡಿವಾಣ ಹಾಕಲು ಈ ಕಾನೂನು ಅನಿವಾರ್ಯ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆಯಲು ಒಕ್ಕೂಟ ನಿರ್ಧರಿಸಿದೆ. ಪಕ್ಕದ ತಮಿಳುನಾಡಿನಲ್ಲೂ ಚಾಲನಾ ಪರವಾನಗಿ ನವೀಕರಿಸುವಾಗ ಸ್ಥಳೀಯ ಭಾಷೆಯ ಜ್ಞಾನವನ್ನು ಪರೀಕ್ಷಿಸಲಾಗುತ್ತಿದೆ ಎಂಬ ಅಂಶವನ್ನೂ ಇಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ

ಒಟ್ಟಿನಲ್ಲಿ, ‘ಕನ್ನಡ ಗೊತ್ತಿದ್ದವರಿಗೆ ಮಾತ್ರ ಡ್ರೈವಿಂಗ್ ಲೈಸೆನ್ಸ್’ ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಸುಲಭವನ್ನು ಸಂಕೀರ್ಣ ಮಾಡಿಕೊಳ್ಳುವರು – Kannada News | Horoscope April 18 Satursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ವಿಶ್ಲೇಷಣಾ ಶಕ್ತಿ ಇಂದಿನ ಪ್ರಮುಖ ಆಸ್ತಿಯಾಗಲಿದೆ. ಹಣದ ವ್ಯವಹಾರಗಳಲ್ಲಿ ನಿಖರತೆ ಅಗತ್ಯ. ವಿಶೇಷವಾಗಿ ಬಾಕಿ ಇರುವ ವಿಚಾರದ ಕಡೆ ಗಮನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಗುಣಮಟ್ಟವು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು.

ವೃಷಭ ರಾಶಿ:

ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಮಕ್ಕಳ ಜೊತೆಗೆ ಸಮಯ ಕಳೆಯುವುದು ನಿಜವಾದ ಸಂತೋಷ ನೀಡುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರಮವನ್ನು ಗುರುತಿಸಲಾಗುವುದು. ಅನಾರೋಗ್ಯದಿಂದ ಅವಕಾಶ ವಂಚಿತರಾಗುವಿರಿ. ಸದುಪಯೋಗ ಆಗುವಂತಹ ಕೆಲಸದ ಕಡೆ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ.

ಮಿಥುನ ರಾಶಿ:

ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮಾನಸಿಕ ಸ್ಥಿತಿಯನ್ನು ಸುಧಾರಿಸಲು ಆಧ್ಯಾತ್ಮಿಕ ಚಟುವಟಿಕೆಗಳು ಉತ್ತಮ. ಭೂಮಿಯ ವಿಸ್ತರಣೆಯ ಬಗ್ಗೆ ಯೋಚಿಸುವಿರಿ. ಹಣಕಾಸಿನ ತೊಂದರೆಗಳು ತುರ್ತು ಖರ್ಚುಗಳಿಂದ ಉಂಟಾಗಬಹುದು. ಮನೆಯ ಕೆಲಸಗಳು ಕೆಲವೊಂದು ತಲೆನೋವಿಗೆ ಕಾರಣವಾಗಲಿದೆ. ನಾಯಕರು ತಮ್ಮ ಬಗ್ಗೆ ಒಳ್ಳಯ ಸುದ್ದಿಯನ್ನು ಕೇಳುವರು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ.

ಕರ್ಕಾಟಕ ರಾಶಿ:

ಬಹಳ‌ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವ ಅವಕಾಶ. ಪ್ರತಿಫಲದ ಅಪೇಕ್ಷೆ ಇಲ್ಲದೇ ಮಾಡಿದ ಸಹಾಯದಿಂದ ತೃಪ್ತಿ. ಅನವಶ್ಯಕ ವ್ಯವಹಾರಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಕೆಲಸದಲ್ಲಿ ಹೊಸ ಯೋಜನೆಗಳನ್ನು ರೂಪಿಸಲು ಇಂದು ಒಳ್ಳೆಯ ಸಮಯ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು.

ಸಿಂಹ ರಾಶಿ:

ಹಂತಹಂತವಾದ ಬೆಳವಣಿಗೆಯಿಂದ ಮಾತ್ರ ನಿರಂತರ ಸಂತಸ. ಸೃಜನಾತ್ಮಕ ಕೆಲಸಗಳಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಇತರರ ಮಾತಿಗೆ ಒಳಗಾಗಬೇಡಿ, ಹಣಕಾಸಿನಲ್ಲಿ ನಷ್ಟವಾಗುವ ಸಂಭವವಿದೆ. ದೂರದ ಸಂಬಂಧಿಗಳು ಸಂಪರ್ಕಿಸಿ ಸಂಭ್ರಮ ತರಬಹುದು. ವ್ಯಾಪಾರದ ಗುತ್ತಿಗೆಗಳಲ್ಲಿ ನಿಖತೆ ಅಗತ್ಯ. ಆಪ್ತರ ಬಗ್ಗೆ ನಿಮಗೆ ಹಲವು ಅನುಮಾನಗಳು ಇರಬಹುದು.‌ ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು.

ಕನ್ಯಾ ರಾಶಿ:

ವ್ಯವಹಾರವನ್ನು ಗೌಪ್ಯವಾಗಿ ನಿಮಗೆ ಮಾತ್ರ ಗೊತ್ತಾಗುವ ಹಾಗೆ ಮಾಡುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ಇಂದು ನಿಮ್ಮ ಆಂತರಿಕ ಶಕ್ತಿ ಹೆಚ್ಚು ಸ್ಪಷ್ಟವಾಗಿ ತೋರಬಹುದು. ಆರ್ಥಿಕ ವಿಷಯಗಳಲ್ಲಿ ಬುದ್ಧಿವಂತಿಕೆ ಬಳಸಿ ನಿರ್ಧಾರ ತೆಗೆದುಕೊಳ್ಳಿ. ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು.

ತುಲಾ ರಾಶಿ:

ಇತ್ತೀಚಿನ ನಿರಾಶೆಯಿಂದ ಹೊರಬರಲು ನೀವು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು. ಇಂದು ಸಂಗಾತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ಚರ್ಚೆ ಆಗಬಹುದಾದರೂ, ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಬಹುದು. ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು.

ವೃಶ್ಚಿಕ ರಾಶಿ:

ಇಂದು ಹಣದ ನಷ್ಟವನ್ನು ತಪ್ಪಿಸಲು ಖರ್ಚನ್ನು ಮಿತಿಗೊಳಿಸಿ. ಜೀವನದಲ್ಲಿ ಹೊಸತನ್ನು ಸ್ವೀಕರಿಸುವ ಮನಸ್ಥಿತಿಯಿರಲಿ. ಹಳೆಯ ಮನೆಯನ್ನು ದುರಸ್ತಿ ಮಾಡುವ ಚಿಂತನೆಯಿರುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ಸಹೋದರ ಸಹೋದರಿಯರ ಜೊತೆ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಜಗಳಗಳು ಆಗಬಹುದು.

ಧನು ರಾಶಿ:

ಹೊಸ ಆರ್ಥಿಕ ಒಪ್ಪಂದಗಳಿಂದ ಲಾಭ ಸಾಧ್ಯ. ಸಣ್ಣ ವಿಚಾರಗಳಿಂದ ಸಂಗಾತಿಯೊಂದಿಗೆ ಮನಸ್ತಾಪ ಸಂಭವಿಸಬಹುದು. ಎಂದೂ ನಂಬದವರ ಮಾತನ್ನು ನೀವು ಇಂದು ನಂಬುವಿರಿ. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಅಪರಿಚಿತರ ಮಾತುಗಳಿಂದ ದೂರವಿರಬೇಕು. ಕೆಲವು ಕೆಲಸಗಳಿಗಾಗಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಏನೂ ಮಾಡಿದರೂ ಆಗುತ್ತದೆ ಎಂದು ಏನನ್ನಾದರೂ ಮಾಡಲು ಹೋಗುವುದು ಬೇಡ.

ಮಕರ ರಾಶಿ:

ಹಣಕಾಸಿನ ಚಟುವಟಿಕೆಗಳಲ್ಲಿ ಸುಧಾರಣೆಯಿಂದ ಬಾಕಿ ಬಿಲ್‌ಗಳನ್ನು ತೀರಿಸಲು ಅನುಕೂಲ. ಸಂಬಂಧಿಕರ ಆಗಮನದಿಂದ ಸಂಜೆಯು ವಿಶೇಷವಾಗಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಇಂದು ಹಳೆಯ ತಪ್ಪುಗಳನ್ನು ಮರೆತು ಸಂತೋಷವಾಗಿರಿ. ತಾಯಿಗೆ ಯಾವುದಾದರೂ ಹಳೆಯ ಕಾಯಿಲೆ ಮರುಕಳಿಸಬಹುದು. ಬಹಳ ದಿನಗಳ ಅನಂತರ ಹಳೆಯ ಗೆಳೆಯರನ್ನು ಭೇಟಿಯಾಗುವ ಸಂತಸ ಇರಲಿದೆ.

ಕುಂಭ ರಾಶಿ:

ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರುವುದು ಉತ್ತಮ. ತಪ್ಪಾದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗುತ್ತದೆ. ಕುಟುಂಬದಲ್ಲಿ ಹಿರಿಯರ ಸಲಹೆಗಳನ್ನು ಗೌರವದಿಂದ ಸ್ವೀಕರಿಸಿ. ಸ್ನೇಹಿತರೊಂದಿಗೆ ಚರ್ಚೆಗಳಲ್ಲಿ ಧೈರ್ಯವಂತಿಕೆಯಿಂದ ನಿರ್ವಹಿಸಿ. ಇಂದು ಹೆಚ್ಚಿನ ಸಮಯವನ್ನು ತಂದೆ, ತಾಯಿಯರ ಸೇವೆಯಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಬಹಳ ದಿನಗಳಿಂದ ಒಂದೇ ತರದ ಕೆಲಸಗಳಿಂದ ಬೇಸರವಾಗುವುದು.

ಮೀನ ರಾಶಿ:

ಪ್ರೀತಿಯ ಸಂಗಾತಿಯ ಜೊತೆ ವಿಶೇಷ ಸಮಯ ಕಳೆಯಬಹುದು. ನಿಮ್ಮ ಕೆಲಸದಲ್ಲಿ ಉತ್ತಮ ಸಾಧನೆ ಮಾಡಲು ಸಮಯ ಸೂಕ್ತ. ನಿರೀಕ್ಷಿಸದ ಅತಿಥಿಗಳ ಆಗಮನದಿಂದ ಕೆಲವೊಂದು ಕಾರ್ಯಗಳಲ್ಲಿ ವ್ಯತ್ಯಯ ಉಂಟಾಗಬಹುದು. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಆಕಸ್ಮಿಕವಾಗಿ ಬರುವ ಅಲ್ಪ ಸಂಪತ್ತೂ ಕೈಯಲ್ಲಿ ನಿಲ್ಲದು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೈಧೃತಿ, ಕರಣ : ಕಿಂಸ್ತುಘ್ನ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:17 – 10:50, ಯಮಗಂಡ ಕಾಲ 13:57 – 15:31, ಗುಳಿಕ ಕಾಲ 06:10 – 07:44

-ಲೋಹಿತ ಹೆಬ್ಬಾರ್ – 8762924271 (what’s app only)

Source link

IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ – Kannada News | IPL 2026: Gujarat Titans Beat KKR in Ahmedabad, Claim 3rd Win; KKR’s Losing Streak Extends

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್​ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 180 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಗುಜರಾತ್ 5 ವಿಕೆಟ್​​ಗಳಿಂದ ಜಯದ ನಗೆ ಬೀರಿತು.

Source link

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google

ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ ವಿಧೇಯಕ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ದೇಶ ಈ ದಿನವನ್ನು ಎಂದಿಗೂ ಮರೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿದೆ. ಐಸಿಹಾಸಿಕ ವಿಧೇಯಕವನ್ನು INDIA ಮೈತ್ರಿಕೂಟ ಸೋಲಿಸಿದೆ. ಸ್ತ್ರೀಯರ ಉನ್ನತಿಗೆ ಅಡ್ಡಗಾಲು ಹಾಕಿದ ವಿಪಕ್ಷಗಳನ್ನು ಕ್ಷಮಿಸಲ್ಲ. ರಾಜಕೀಯ ಜಿದ್ದಿಗೆ ಬಿದ್ದ ಸ್ತ್ರೀ ವಿರೋಧಿಗಳು ಬಿಲ್ ಸೋಲಿಸಿದ್ದಾರೆ. ಇದು ಮಹಿಳಾ ಮೀಸಲಾತಿ ಬಿಲ್ ಸೋಲಲ್ಲ, ದೇಶದ ಸೋಲು. ದೇಶದ ಜನತೆ ಎಂದಿಗೂ ಕಾಂಗ್ರೆಸ್ ಪಕ್ಷವನ್ನು ಕ್ಷಮಿಸಲಾರದು ಎಂದು ವಾಗ್ದಾಳಿ ಮಾಡಲಾಗಿದೆ.

ರಾಜ್ಯ ಬಿಜೆಪಿ ಟ್ವೀಟ್​​

ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪೋಸ್ಟ್ ಮಾಡಿದ್ದು, ವಿಧೇಯಕ ತಡೆಯಲು ಕಾಂಗ್ರೆಸ್, TMC, SP, DMK ಒಟ್ಟಾಗಿದ್ದವು. ಇದು ಕೇವಲ ಒಂದು ಮಸೂದೆಗೆ ಸಂಬಂಧಪಟ್ಟ ವಿಷಯವಲ್ಲ. ಇದು ದೇಶದ ನಾರಿ ಶಕ್ತಿಗೆ ನೀಡುವ ಗೌರವದ ಪ್ರಶ್ನೆಯಾಗಿದೆ. ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಈ ಕ್ಷಣವನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಮುಂದಿನ ಪ್ರತಿ ಚುನಾವಣೆಯಲ್ಲೂ ಇದರ ಹೊಣೆಗಾರಿಕೆ ಕೇಳಲಾಗುತ್ತೆ ಎಂದಿದ್ದಾರೆ.

ಮಹಿಳಾ ಮೀಸಲಾತಿ ವಿರೋಧಿ ಕಾಂಗ್ರೆಸ್​ಗೆ ಧಿಕ್ಕಾರ ಎಂದ ಜೆಡಿಎಸ್​​​

ವಿಧಾನಸಭೆಗಳು ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33% ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನಾ ಮಸೂದೆಯನ್ನು ಲೋಕಸಭೆಯಲ್ಲಿ ಸೋಲಿಸಿರುವ ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟಕ್ಕೆ ನಾಚಿಕೆಯಾಗಬೇಕು. ಮಹಿಳಾ ಮೀಸಲಾತಿ ವಿಧೇಯಕವನ್ನು ಬೆಂಬಲಿಸದೆ, ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಎಂಬುದನ್ನು, ಮಸೂದೆಗೆ ವಿರುದ್ಧ ಮತಚಲಾಯಿಸುವ ಮೂಲಕ ಸಾಬೀತು ಪಡಿಸಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

1996ರಲ್ಲಿ ಪ್ರಧಾನಿಯಾಗಿದ್ದ ವೇಳೆ ದೇವೇಗೌಡರು ಮಹತ್ವಾಕಾಂಕ್ಷೆಯಿಂದ ಮಹಿಳೆಯರಿಗೆ ಶೇ.33% ಮೀಸಲಾತಿ ಕಲ್ಪಿಸುವ ಐತಿಹಾಸಿಕ ಮಸೂದೆಯನ್ನು ಮಂಡಿಸಿದ್ದರು. ಆಗಲೂ ಸಹ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ್ದ ಕಾಂಗ್ರೆಸ್ ಇವತ್ತು ಸಹ ಮಸೂದೆಯ ವಿರುದ್ಧ ಮತ ಹಾಕಿ ಸೋಲಿಸಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಇದಕ್ಕೆ ಕಾಂಗ್ರೆಸ್ ಕಾರಣ ಎಂದ ಆರ್​​. ಅಶೋಕ್

ಕಾಂಗ್ರೆಸ್​ನವರು ಮಹಿಳಾ ವಿರೋಧಿಗಳು. ಅವರು ಮಸೂದೆಯನ್ನು ಪಾಸ್ ಮಾಡಿಸಬೇಕಾಗಿತ್ತು. ಇದರಿಂದ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ಸಿಗ್ತಿತ್ತು. ಅದನ್ನು ಹಾಳು ಮಾಡಿದ್ದಾರೆ, ಇದಕ್ಕೆ ಕಾಂಗ್ರೆಸ್ ಕಾರಣ ಎಂದು ವಿಪಕ್ಷ ನಾಯಕ ಆರ್​​. ಅಶೋಕ್ ಹರಿಹಾಯ್ದಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಸಂಚು: ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದ ಕಾಂಗ್ರೆಸ್​​

ಇನ್ನು ಈ ಬಗ್ಗೆ ರಾಜ್ಯ ಕಾಂಗ್ರೆಸ್​​ ಕೂಡ ಟ್ವೀಟ್​ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅಮಿತ್ ಶಾ ಅವರು ದೇಶದ ಅರ್ಧದಷ್ಟು ಜನಸಂಖ್ಯೆಯನ್ನು ಬಳಸಿಕೊಂಡು ಕ್ಷೇತ್ರ ಮರುವಿಂಗಡಣೆ ಮಾಡಲು ಮುಂದಾಗಿದ್ದರು. ಆ ಮೂಲಕ ಈ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ಹಾನಿ ಮಾಡುವ ದುರುದ್ದೇಶದ ಪ್ರಯತ್ನ ನಡೆಸಿದ್ದರು. ಆದರೆ ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷಗಳು ಅವರ ಈ ಕುತಂತ್ರದ ನಡೆಯನ್ನು ತಡೆಹಿಡಿದಿವೆ ಮತ್ತು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಲಿಸಿವೆ. ಈ ಹೋರಾಟದಲ್ಲಿ ಕೈಜೋಡಿಸಿದ ವಿರೋಧ ಪಕ್ಷಗಳ ಎಲ್ಲಾ ನಾಯಕರಿಗೆ ನಾವು ಹೃತ್ಪೂರ್ವಕ ಧನ್ಯವಾದ ತಿಳಿಸಲಾಗಿದೆ.

ರಾಜ್ಯ ಕಾಂಗ್ರೆಸ್​ ಟ್ವೀಟ್​

ಮೋದಿ-ಶಾ ಜೋಡಿಯು ತಮ್ಮ ಸಂಕುಚಿತ ರಾಜಕೀಯ ಲಾಭಕ್ಕಾಗಿ ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಹೊರಟಿದ್ದರು. ಆದರೆ ಅವರ ಈ ಸಂಚು ಈಗ ಸಂಪೂರ್ಣವಾಗಿ ನೆಲಕಚ್ಚಿದೆ. 2023 ರಲ್ಲಿ ಅಂಗೀಕರಿಸಲಾದ “ನಾರಿ ಶಕ್ತಿ ವಂದನ ಅಧಿನಿಯಮ” ಕ್ಕೆ ಅನುಗುಣವಾಗಿ, 2029ರ ಚುನಾವಣೆಯಿಂದಲೇ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಜಾರಿಗೆ ತರಬೇಕೆಂದು ನಾವು ಮತ್ತೊಮ್ಮೆ ಪ್ರಧಾನಿ ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ. ಕಾಂಗ್ರೆಸ್ ಪಕ್ಷವು 2023ರ ಸೆಪ್ಟೆಂಬರ್‌ನಿಂದಲೂ ಈ ಬೇಡಿಕೆಯನ್ನು ಮಂಡಿಸುತ್ತಾ ಬಂದಿದೆ. ‘ನಾರಿ ಶಕ್ತಿ’ಯ ಬಗ್ಗೆ ಪ್ರಧಾನಿಗಿರುವ ಬದ್ಧತೆಗೆ ಇದು ನಿಜವಾದ ಪರೀಕ್ಷೆಯಾಗಲಿದೆ ಎಂದಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದು ದಕ್ಷಿಣ ಭಾರತದ ಗೆಲುವು. ಇದು ವಿಪಕ್ಷಗಳ ಗೆಲುವು, ದೇಶದ ಮಹಿಳೆಯರ ಗೆಲುವು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್ – Kannada News | Woman passengers clash in mumbai Dombivli train video viral

ಮುಂಬೈ, ಏಪ್ರಿಲ್ 17: ಮಹಾರಾಷ್ಟ್ರದ ಮುಂಬೈನ ಡೊಂಬಿವ್ಲಿ ಪ್ರದೇಶದಲ್ಲಿ ಸ್ಥಳೀಯ ರೈಲಿನೊಳಗೆ ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಸಂಭವಿಸಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಥಾಣೆಯಿಂದ ಅಸಂಗಾವ್ ಕಡೆಗೆ ಪ್ರಯಾಣಿಸುತ್ತಿದ್ದ ಸ್ಥಳೀಯ ರೈಲಿನಲ್ಲಿ ಜನದಟ್ಟಣೆಯಿಂದ ಕೂಡಿದ್ದ ಬೋಗಿಯಲ್ಲಿ ‘ಪಕ್ಕಕ್ಕೆ ಸರಿಯಿರಿ’ ಎಂದು ಹೇಳಿದ್ದಕ್ಕೆ ಈ ಗಲಾಟೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್ – Kannada News | Rocking Star Yash reveals Toxic movie plot and period backdrop in new interview

‘ರಾಕಿಂಗ್ ಸ್ಟಾರ್’ ಯಶ್ (Yash) ಅವರಿಗೆ 2026ರ ವರ್ಷ ಅತ್ಯಂತ ಲಾಭದಾಯಕ ಮತ್ತು ಮಹತ್ವದ ವರ್ಷವಾಗಲಿದೆ. ಈ ವರ್ಷ ಅವರ ಅಭಿನಯದ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಟಾಕ್ಸಿಕ್’ (Toxic) ಮತ್ತು ‘ರಾಮಾಯಣ’ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಇತ್ತೀಚಿಗೆ ಯಶ್ ಅವರು ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಗಳಲ್ಲಿ ತಮ್ಮ ಚಿತ್ರಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ! ಇದರಿಂದಾಗಿ ‘ಟಾಕ್ಸಿಕ್’ ಸಿನಿಮಾದ ಕತೆಯೇ (Toxic movie Plot) ಲೀಕ್ ಆದಂತೆ ಆಗಿದೆ.

‘ಕೆಜಿಎಫ್ 2’ ಮೂಲಕ ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ಈಗ ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಮೂಲಕ ಯಶ್ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಪ್ರಚಾರದ ಸಲುವಾಗಿ ವಿದೇಶಿ ಮಾಧ್ಯಮಗಳಿಗೆ ಅವರು ಸಂದರ್ಶನ ನೀಡಲು ಆರಂಭಿಸಿದ್ದಾರೆ. ಸಂದರ್ಶನದಲ್ಲಿ ಮಾತನಾಡುವಾಗ ಅವರು ಕಥೆಯ ಒನ್​ಲೈನ್ ಏನು ಮತ್ತು ಅದು ಯಾವ ಕಾಲಘಟ್ಟದಲ್ಲಿ ಸಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಯಶ್ ಬಿಟ್ಟಿಕೊಟ್ಟಿರುವ ಮಾಹಿತಿ ಪ್ರಕಾರ, ‘ಟಾಕ್ಸಿಕ್’ ಕೇವಲ ಗ್ಯಾಂಗ್‌ಸ್ಟರ್ ಸಿನಿಮಾ ಅಲ್ಲ. ಇದು ತಂದೆ ಮತ್ತು ಮಗನ ನಡುವಿನ ಸೇಡಿನ ಕಥೆಯಾಗಿದೆ. ಈ ಚಿತ್ರದ ಕಥೆಯು ಒಂದು ಆಸಕ್ತಿದಾಯಕ ಕಾಲಘಟ್ಟದಲ್ಲಿ ನಡೆಯುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರವೂ ಗೋವಾದ ಒಂದು ಭಾಗ 1961ರವರೆಗೆ ಪೋರ್ಚುಗೀಸರ ಆಳ್ವಿಕೆಯಲ್ಲೇ ಇತ್ತು. ಆ ಕಾಲಘಟ್ಟವನ್ನೇ ಚಿತ್ರದ ಹಿನ್ನೆಲೆಯಾಗಿ ಬಳಸಿಕೊಳ್ಳಲಾಗಿದೆ ಎಂದು ಯಶ್ ಅವರು ಹೇಳಿದ್ದಾರೆ.

ವೈರಲ್ ವಿಡಿಯೋ:

ಈ ಸಂದರ್ಶನದ ವಿಡಿಯೋ ವೈರಲ್ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳ ಕೌತುಕ ಜಾಸ್ತಿ ಆಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಅವರು ಅಭಿನಯಿಸಿದ್ದಾರೆ. ಸದ್ಯಕ್ಕೆ ಈ ಚಿತ್ರದ ಟೀಸರ್ ಸಖತ್ ಸದ್ದು ಮಾಡಿದೆ. ಟ್ರೇಲರ್​​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್

ಈ ಮೊದಲು ‘ಟಾಕ್ಸಿಕ್’ ಸಿನಿಮಾವನ್ನು ಮಾರ್ಚ್ 19ರಂದು ಬಿಡುಗಡೆ ಮಾಡುವ ಪ್ಲ್ಯಾನ್ ಇತ್ತು. ಆದರೆ ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಯಿತು. ಇದರಿಂದಾಗಿ ‘ಧುರಂಧರ್ 2’ ಜೊತೆಗಿನ ಕ್ಲ್ಯಾಶ್ ತಪ್ಪಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರತಿ ಚುನಾವಣೆಯಲ್ಲೂ ಮಹಿಳೆಯರ ಕೋಪ ಎದುರಿಸುತ್ತೀರಿ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಎಚ್ಚರಿಕೆ – Kannada News | Womens anger will come Amit Shah warns opposition after womens reservation bill rejected

ನವದೆಹಲಿ, ಏಪ್ರಿಲ್ 17: ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವಲ್ಲಿ ವಿಫಲವಾದ ಕಾರಣದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ವಿರೋಧ ಪಕ್ಷದ ವಿರುದ್ಧ ಬಿಜೆಪಿ ಸರ್ಕಾರದ ಆಕ್ರೋಶಕ್ಕೆ ಕಾರಣವಾಯಿತು. ಈ ಮಸೂದೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಪ್ರತಿಪಾದಿಸಿದ ಗೃಹ ಸಚಿವ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ಇಂದು ಲೋಕಸಭೆಯಲ್ಲಿ ನಡೆದಿದ್ದನ್ನು ನೋಡಿದರೆ ನಿಜಕ್ಕೂ ಆಶ್ಚರ್ಯ ಆಗುತ್ತದೆ. ನಾರಿ ಶಕ್ತಿ ವಂದನ ಕಾಯ್ದೆಗೆ ಬೇಕಿದ್ದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು ಸೇರಿ ಸೋಲಿಸಿಬಿಟ್ಟವು. ಮಹಿಳೆಯರಿಗೆ ಸಿಗಬೇಕಿದ್ದ ಶೇ. 33ರಷ್ಟು ಮೀಸಲಾತಿಗೆ ಅಡ್ಡಗಾಲು ಹಾಕಿದರು. ಆ ಮಸೂದೆ ಸೋಲುತ್ತಿದ್ದಂತೆ ಅದನ್ನು ಅವರು ಸಂಭ್ರಮಿಸಿದ್ದು, ಜೈಕಾರ ಹಾಕಿದ್ದು ನೋಡಿದರೆ ತುಂಬಾನೇ ಬೇಸರ ಆಗುತ್ತದೆ. ನಮ್ಮ ದೇಶದ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಸಿಗಬೇಕಿದ್ದ ಮೀಸಲಾತಿ ಹಕ್ಕು ಕೈತಪ್ಪಿ ಹೋಗಿದೆ. ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳು ಈ ರೀತಿ ಮಾಡ್ತಿರೋದು ಇದೇ ಮೊದಲೇನಲ್ಲ. ಇವರ ಇಂಥ ಬುದ್ಧಿ ಮಹಿಳೆಯರಿಗೂ ಒಳ್ಳೆಯದಲ್ಲ, ದೇಶಕ್ಕೂ ಒಳ್ಳೆಯದಲ್ಲ. ವಿರೋಧ ಪಕ್ಷದವರ ವಿರುದ್ಧ ಮಹಿಳೆಯರ ಸಿಟ್ಟು ಹೇಗಿರುತ್ತದೆ ಎಂಬುದನ್ನು 2029ರ ಲೋಕಸಭೆ ಚುನಾವಣೆಯಲ್ಲಿ ಅಷ್ಟೇ ಅಲ್ಲ, ಮುಂದಿನ ಪ್ರತಿ ಚುನಾವಣೆಯಲ್ಲೂ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ವಿರೋಧ ಪಕ್ಷಗಳಿಂದಾಗಿ ದೇಶದ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮೀಸಲಾತಿ ಸಿಗುವುದಿಲ್ಲ. ಅದು ಅವರ ಹಕ್ಕಾಗಿತ್ತು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈ ರೀತಿ ಮೊದಲ ಬಾರಿಗೆ ಅಲ್ಲ, ಪದೇ ಪದೇ ಮಾಡಿವೆ. ನಾರಿ ಶಕ್ತಿಗೆ ಮಾಡಿದ ಈ ಅವಮಾನ ಇಲ್ಲಿಗೆ ನಿಲ್ಲುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ವಿರೋಧ ಪಕ್ಷವು 2029ರ ಲೋಕಸಭಾ ಚುನಾವಣೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು ಹಂತದಲ್ಲೂ, ಪ್ರತಿ ಚುನಾವಣೆಯಲ್ಲೂ ಮತ್ತು ಪ್ರತಿಯೊಂದು ಸ್ಥಳದಲ್ಲೂ ‘ಮಹಿಳೆಯರ ಕೋಪ’ವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

ಇಂದು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ 298 ಸದಸ್ಯರು ಮತ ಚಲಾಯಿಸಿದರೆ, 230 ಸದಸ್ಯರು ಮಸೂದೆಯ ವಿರುದ್ಧ ಮತ ಚಲಾಯಿಸಿದರು. “ಸದನದಲ್ಲಿ ಮತದಾನದ ಸಮಯದಲ್ಲಿ 2/3 ಬಹುಮತವನ್ನು ಸಾಧಿಸದ ಕಾರಣ ಸಂವಿಧಾನ (131 ನೇ ತಿದ್ದುಪಡಿ) ತಿದ್ದುಪಡಿ ಮಸೂದೆ ಅಂಗೀಕಾರವಾಗಲಿಲ್ಲ” ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version