ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!
ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…