ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು – Kannada News | Wild Elephant Attack in Bengaluru Outskirts: Property Damaged, Residents Demand Action

ಬೆಂಗಳೂರು, ಜ.29: ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಒಂಟಿ ಸಲಗ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4:10 ರ ಸುಮಾರಿಗೆ ಬಡಾವಣೆಗೆ ಎಂಟ್ರಿ ಕೊಟ್ಟ ಒಂಟಿ ಸಲಗ ಎದುರು ಸಿಕ್ಕ ಆಲ್ಟೊ ಕಾರಿಗೆ ದಂತದಿಂದ ತುವಿದು ಡೋರ್ ಮತ್ತು ಬಾನೆಟ್ಗೆ ಹಾನಿ ಮಾಡಿದೆ. ಮತ್ತೊಂದು ಕಡೆ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಮೇಲೆ ದಾಳಿ ಮಾಡಿದೆ. ಒಂಟಿ ಸಲಗ ಆಕ್ರೋಶದಲ್ಲಿ ಸಿಕ್ಕ ಸಿಕ್ಕ ವಸ್ತುಗಳ ಮೇಲೆ ದಾಳಿ ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳು ಭಯಬೀತರಾಗಿದ್ದಾರೆ. ಮುಂಜಾನೆ ಹೊತ್ತು ವಾಯುವಿಹಾರಕ್ಕೆ ಹೋಗುವವರು ಅಥವಾ ಕೆಲಸಕ್ಕೆ ತೆರಳುವವರ ಮೇಲೆ ಇಂತಹ ಆನೆಗಳು ದಾಳಿ ಮಾಡುವ ಅಪಾಯವಿದೆ.

ಇನ್ನೂ ಬೆಳಗ್ಗೆ ಕಾರು ಮತ್ತು ಬೈಕ್ ಜಖಂ ಆಗಿರುವುದನ್ನು ಗಮನಿಸಿದ ಸ್ಥಳೀಯರು ಯಾರೋ ಕಳ್ಳರು ವಾಹನಗಳನ್ನು ಕದಿಯಲು ಯತ್ನಿಸಿದ್ದಾರೆ ಎಂದುಕೊಂಡಿದ್ದರು. ಈ ವೇಳೆ ಸಿಸಿ ಕ್ಯಾಮರಾವನ್ನು ಪರಿಶೀಲನೆ ಮಾಡಿ ನೋಡಿದಾಗ ಒಂಟಿ ಸಲಗ ಬಡಾವಣೆಗೆ ನುಗ್ಗಿರುವುದು ಕಂಡು ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ನಾಲ್ಕು ವರ್ಷದ ಹಿಂದೆ ಕಾಡಾನೆಗಳು ಹಳ್ಳಿಗಳ ಬಳಿ ಲಗ್ಗೆಯಿಡುತ್ತಿದ್ದವು. ಬಳಿಕ ಕಾಡಾನೆಗಳ ಹಾವಳಿ ಇರಲಿಲ್ಲ. ಆದ್ರೆ ನಿನ್ನೆ ರಾತ್ರಿ ಒಂಟಿ ಸಲಗ ಬಡಾವಣೆಯ ಬೀದಿ ಬೀದಿ ಸುತ್ತಾಡಿದೆ. ಇನ್ನು ಮುಂಜಾನೆ ಹೊತ್ತು ಕಾಣಿಸಿಕೊಂಡ ಕಾರಣ, ಮನುಷ್ಯರ ಮೇಲೆ ದಾಳಿ ಮಾಡಿಲ್ಲ. ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾರಿನ ಮಾಲೀಕ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಗಾಳಿಯ ಮಟ್ಟ ಬೆಂಗಳೂರಿಗಿಂತ ಕಳಪೆಯಾಗಿದೆ, ಎಚ್ಚರಿಕೆ ವಹಿಸುವಂತೆ ತಜ್ಞರ ಸೂಚನೆ

ಈ ಆನೆಗಳು ನಮ್ಮ ಪ್ರದೇಶದಲ್ಲಿ ಓಡಾಡುತ್ತಿರುವುದರಿಂದ ಭಯ ವಾತಾವರಣ ಸೃಷ್ಟಿಯಾಗಿದೆ. ಈ ಬಗ್ಗೆ ಹಲವು ಭಾರಿ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಆಹಾರಕ್ಕೆ ಮತ್ತೆ ಈ ಕಡೆ ಬರುವ ಸಾಧ್ಯತೆ ಇದೆ. ಅಲ್ಲದೆ ಒಂಟಿ ಸಲಗ ಕೂಡ ಪುಂಡಾಟದ ಸ್ವಭಾವ ಹೊಂದಿದ್ದು, ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಅಪಾಯಕಾರಿ ಒಂಟಿ ಸಲಗವನ್ನು ನಾಡಿಗೆ ಬರದಂತೆ ನಿಯಂತ್ರಿಸಬೇಕಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಒಂಟಿ ಸಲಗವನ್ನು ಕಾಡಿಗೆ ಅಟ್ಟಲು ಅಥವಾ ಅದನ್ನು ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ. ಮುಂಜಾನೆ 4 ರಿಂದ 7 ಗಂಟೆಯವರೆಗೆ ಮತ್ತು ರಾತ್ರಿ ವೇಳೆ ಏಕಾಂಗಿಯಾಗಿ ಸಂಚರಿಸುವುದನ್ನು ತಪ್ಪಿಸಿ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಅರಣ್ಯ ಇಲಾಖೆಯು ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಗೊಳಗಾದ ವಾಹನಗಳ ಮಾಲೀಕರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಪ್ಪ ನಾನು ಅಜಿತ್ ಪವಾರ್ ಜತೆ ವಿಮಾನದಲ್ಲಿ ಹೋಗ್ತಿದ್ದೀನಿ, ತಂದೆ ಜತೆ ವಿಮಾನ ಸಿಬ್ಬಂದಿಯ ಕೊನೆಯ ಮಾತು – Kannada News | Ajit Pawar Plane Crash: Pinky Mali’s Last Call and Baramati Tragedy Details

ಪಿಂಕಿ ಮಾಲಿ-ಅಜಿತ್ ಪವಾರ್Image Credit source: NDTV

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದಲ್ಲಿ ಅವರ ಜತೆ ಇತರೆ ನಾಲ್ವರು ಸಿಬ್ಬಂದಿ ಇದ್ದರು ಅದರಲ್ಲಿ ಪಿಂಕಿ ಮಾಲಿ ಕೂಡ ಒಬ್ಬರು. ಸಾಯುವ ಮುನ್ನ ತಂದೆಗೆ ಕರೆ ಮಾಡಿ ಅಪ್ಪ ನಾನು ಇವತ್ತು ಅಜಿತ್ ಪವಾರ್ ಜತೆ ವಿಮಾನದಲ್ಲಿ ಪ್ರಯಾಣ ಮಾಡ್ತಿದ್ದೀನಿ ಗೊತ್ತಾ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಇಬ್ಬರಿಗೂ ಅದು ಕೊನೆಯ ಭೇಟಿಯಾಗಿತ್ತು.

ಮುಂಬೈನ ವರ್ಲಿಯ ನಿವಾಸಿ ಪಿಂಕಿ ತನ್ನ ತಂದೆಗೆ, ಅಪ್ಪಾ, ನಾನು ಅಜಿತ್ ಪವಾರ್ ಜೊತೆ ಬಾರಾಮತಿಗೆ ವಿಮಾನದಲ್ಲಿ ಹೋಗುತ್ತಿದ್ದೇನೆ. ಅವರನ್ನು ಬಿಟ್ಟು ಬಂದ ನಂತರ, ನಾನು ನಾಂದೇಡ್‌ಗೆ ಹೋಗುತ್ತೇನೆ. ನಾವು ನಾಳೆ ಮಾತನಾಡೋಣ ಎಂದು ಹೇಳಿದ್ದು.

ಇತ್ತೀಚಿನ ಹಲವಾರು ಪ್ರವಾಸಗಳಲ್ಲಿ ಅವರು ಪವಾರ್ ಜೊತೆಗಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ. ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ನಿಖರವಾಗಿ ಏನಾಯಿತು ಎಂದು ನನಗೆ ತಿಳಿದಿಲ್ಲ, ಏಕೆಂದರೆ ಅಂತಹ ಘಟನೆಗಳ ಬಗ್ಗೆ ನನಗೆ ಯಾವುದೇ ತಾಂತ್ರಿಕ ಜ್ಞಾನವಿಲ್ಲ. ನಾನು ಸಂಪೂರ್ಣವಾಗಿ ಛಿದ್ರಗೊಂಡಿದ್ದೇನೆ. ನನ್ನ ಮಗಳ ಅಂತ್ಯಕ್ರಿಯೆಯನ್ನು ಗೌರವದಿಂದ ಮಾಡಲು ನನಗೆ ಅವಳ ದೇಹ ಬೇಕು. ನಾನು ಬಯಸುವುದು ಇಷ್ಟೇ ಎಂದು ಅವರು ಹೇಳಿದರು.

ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಬುಧವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ದೆಹಲಿ ಮೂಲದ ವಿಎಸ್ಆರ್ ವೆಂಚರ್ಸ್ ನಿರ್ವಹಿಸುವ ವಿಟಿ-ಎಸ್‌ಎಸ್‌ಕೆ ನೋಂದಣಿ ಹೊಂದಿರುವ ಲಿಯರ್‌ಜೆಟ್ 45 ವಿಮಾನ ಅಪಘಾತಕ್ಕೀಡಾಗಿತ್ತು.

ಮತ್ತಷ್ಟು ಓದಿ: ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್

ವಿಮಾನದಲ್ಲಿ ಐದು ಮಂದಿ ಇದ್ದರು ಅವರಲ್ಲಿ  ಉಪಮುಖ್ಯಮಂತ್ರಿ ಅಜಿತ್ ಪವಾರ್, ಅವರ ವೈಯಕ್ತಿಕ ಭದ್ರತಾ ಅಧಿಕಾರಿ ವಿದೀಪ್ ಜಾಧವ್, ವಿಮಾನ ಸೇವಕಿ ಪಿಂಕಿ ಮಾಲಿ, ಪೈಲಟ್-ಇನ್-ಕಮಾಂಡ್ ಸುಮಿತ್ ಕಪೂರ್ ಮತ್ತು ಸೆಕೆಂಡ್-ಇನ್-ಕಮಾಂಡ್ ಶಾಂಭವಿ ಪಾಠಕ್.

ವಿಮಾನದ ವಿವರಗಳ ಪ್ರಕಾರ, ವಿಮಾನವು ಬೆಳಗ್ಗೆ 8.10 ಕ್ಕೆ ಮುಂಬೈನಿಂದ ಹೊರಟು 8.45 ರ ಸುಮಾರಿಗೆ ರಾಡಾರ್‌ನಿಂದ ಕಣ್ಮರೆಯಾಯಿತು, 8.50 ಕ್ಕೆ ಅಪಘಾತಕ್ಕೀಡಾಯಿತು. ಫೆಬ್ರವರಿ 5 ರಂದು ನಡೆಯಲಿರುವ ಜಿಲ್ಲಾ ಪರಿಷತ್ ಚುನಾವಣೆಗೆ ಮುನ್ನ ಪುಣೆ ಜಿಲ್ಲೆಯಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ಪವಾರ್ ತೆರಳುತ್ತಿದ್ದರು.

ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡ ನಂತರ, ತುರ್ತು ಸೇವೆಗಳು ಮತ್ತು ಹಿರಿಯ ಭದ್ರತಾ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಓಡೋಡಿ ಬಂದಿದ್ದರು. ರಕ್ಷಣಾ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಜನ ನಾಯಗನ್’ ಚಿತ್ರಕ್ಕೆ ಸಿಗದ ಪರಿಹಾರ; ಕೇಸ್ ಹಿಂಪಡೆಯಲು ನಿರ್ಧರಿಸಿದ ಕೆವಿನ್? – Kannada News | Jana Nayagan Censor Battle: KVN Drops Court Case, Sends Film to Review Committee

ಅಂದುಕೊಂಡಂತೆ ನಡೆದಿದ್ದರೆ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್ ಆಗಿ ಇಂದಿಗೆ (ಜನವರಿ 29) ಮೂರು ವಾರಗಳು ಕಳೆದಿರುತ್ತಿದ್ದವು. ಆದರೆ, ಸೆನ್ಸಾರ್ ಮಂಡಳಿ ಸೆನ್ಸಾರ್ ಪ್ರಮಾಣಪತ್ರ ನೀಡದೆ ಇರುವುದು ತಂಡಕ್ಕೆ ಚಿಂತೆಯನ್ನು ತಂದೊಡ್ಡಿದೆ. ಹೀಗಿರುವಾಗಲೇ ‘ಜನ ನಾಯಗನ್’ ತಂಡ ಕೋರ್ಟ್​​ನಿಂದ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿ ಆಗಿದೆ. ಅದಕ್ಕೆ ಕಾರಣವೂ ಇದೆ.

ಜನವರಿ 9ಕ್ಕೆ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ತಂಡ ಕೋರ್ಟ್ ಮೆಟ್ಟಿಲೇರಿತು. ಸ್ಥಳೀಯ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ಕೇಸ್ ದಾಖಲು ಮಾಡಲಾಯಿತು. ಆದರೆ, ಎಲ್ಲಿಯೂ ಸಿನಿಮಾಗೆ ನ್ಯಾಯ ಸಿಗುತ್ತಿಲ್ಲ.

ಈಗ ‘ಜನ ನಾಯಗನ್’ ತಂಡ ಒಂದು ನಿರ್ಧಾರಕ್ಕೆ ಬಂದಿದೆ ಎಂದು ವರದಿ ಆಗಿದೆ. ಕೆವಿಎನ್ ಸಂಸ್ಥೆ ಪ್ರಕರಣವನ್ನು ಕೋರ್ಟ್​​ನಿಂದ ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆಯಂತೆ. ಚಿತ್ರವನ್ನು ಪುನರ್​ವಿಮರ್ಶೆ ಸಮಿತಿಗೆ ಕಳಿಸಲು ನಿರ್ಧರಿಸಿದೆ ಎನ್ನಲಾಗಿದೆ.

ತಮಿಳುನಾಡಿನ ಸೆನ್ಸಾರ್ ಮಂಡಳಿ ‘ಜನ ನಾಯಗನ್’ ಸಿನಿಮಾದ ಕೆಲವು ವಿಷಯದ ಬಗ್ಗೆ ಪ್ರಶ್ನೆ ಮಾಡಿ, ಅದನ್ನು ಪುನರ್ ವಿಮರ್ಶಾ ಸಮಿತಿಗೆ ಕಳುಹಿಸಲು ನಿರ್ಧರಿಸಿತ್ತು. ಆದರೆ, ಅದಕ್ಕೆ ಸಮಯ ಹಿಡಿಯುತ್ತದೆ ಎಂಬ ಕಾರಣಕ್ಕೆ ಕೋರ್ಟ್​​ನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಮಾಣ ಸಂಸ್ಥೆ ನಿರ್ಧರಿಸಿತ್ತು. ಆದರೆ, ಕೋರ್ಟ್​​ನಲ್ಲಿ ಯಾವುದೇ ಪರಿಹಾರ ಸಿಗೋ ಸೂಚನೆ ಕಾಣಿಸುತ್ತಿಲ್ಲ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಜನ ನಾಯಗನ್’ ವಿಳಂಬದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ?

‘ಕೆವಿಎನ್’ ಸಂಸ್ಥೆ ಕೋರ್ಟ್​​​ನಲ್ಲಿ ಸಿನಿಮಾದ ಬಜೆಟ್ ವಿಷಯವನ್ನು ಪ್ರಸ್ತಾಪ ಮಾಡುತ್ತಲೇ ಇದೆ. ‘ಚಿತ್ರಕ್ಕಾಗಿ 500 ಕೋಟಿ ರೂಪಾಯಿ ವ್ಯಯಿಸಲಾಗಿದೆ. ಈ ಬಗ್ಗೆ ಗಮನಹರಿಸಬೇಕು’ ಎಂದು ನಿರ್ಮಾಣ ಸಂಸ್ಥೆ ಹೇಳಿತ್ತು. ‘ಜನ ನಾಯಗನ್’ ಸಿನಿಮಾಗೆ ವಿಜಯ್ ಹೀರೋ. ಇದು ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ. ಈ ಚಿತ್ರದ ಬಳಿಕ ಅವರು ರಾಜಕೀಯಕ್ಕೆ ಹೊರಳಲಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು, ಪೂಜಾ ಹೆಗ್ಡೆ ನಟಿಸಿದ್ದಾರೆ. ಎಚ್​. ವಿನೋದ್ ನಿರ್ದೇಶನ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಮಂಗಳೂರಿನಲ್ಲಿ ಗಾಳಿಯ ಮಟ್ಟ ಬೆಂಗಳೂರಿಗಿಂತ ಕಳಪೆಯಾಗಿದೆ, ಎಚ್ಚರಿಕೆ ವಹಿಸುವಂತೆ ತಜ್ಞರ ಸೂಚನೆ – Kannada News | Karnataka Air Quality Alert Jan 29: PM2.5 High, Bengaluru, Mangaluru ‘Poor’

ಕರ್ನಾಟಕದಾದ್ಯಂತ ಇಂದು (ಜನವರಿ 29, 2026) ವಾಯು ಗುಣಮಟ್ಟವು (AQI) ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಒಟ್ಟಾರೆಯಾಗಿ ರಾಜ್ಯದ ವಾಯು ಗುಣಮಟ್ಟವು ಸಾಧಾರಣ (Moderate) ದಿಂದ ಕಳಪೆ (Poor) ಹಂತದವರೆಗೆ ಇದೆ. ನಗರದಲ್ಲಿ ವಾಯು ಮಾಲಿನ್ಯವು ‘ಅನಾರೋಗ್ಯಕರ’ ಹಂತದಲ್ಲಿದೆ. ವಿಶೇಷವಾಗಿ PM2.5 ಮತ್ತು PM10 ಕಣಗಳ ಪ್ರಮಾಣ ಹೆಚ್ಚಾಗಿರುವುದರಿಂದ ಉಸಿರಾಟದ ತೊಂದರೆ ಇರುವವರು, ಮಕ್ಕಳು ಮತ್ತು ವೃದ್ಧರು ಜಾಗರೂಕರಾಗಿರಿ ಎಂದು ತಜ್ಞರು ಹೇಳಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಇಂದು ಮುಂಜಾನೆ ದಟ್ಟ ಮಂಜು ಇದ್ದ ಕಾರಣ, ಮಾಲಿನ್ಯಕಾರಕ ಕಣಗಳು ಭೂಮಿಯ ಸಮೀಪದಲ್ಲೇ ಅಡಕವಾಗಿದ್ದು AQI ಮಟ್ಟ ಏರಿಕೆಯಾಗಲು ಕಾರಣವಾಗಿದೆ.ಬೆಳಗಾವಿ ಮತ್ತು ಕಲಬುರಗಿ ಭಾಗಗಳಲ್ಲಿ ವಾಯು ಗುಣಮಟ್ಟವು ರಾಜ್ಯದ ಇತರ ಭಾಗಗಳಿಗಿಂತ ಉತ್ತಮವಾಗಿದೆ.

ಬೆಂಗಳೂರು ಮತ್ತು ಮಂಗಳೂರಿನಂತಹ ನಗರಗಳಲ್ಲಿ AQI ಮಟ್ಟ ಹೆಚ್ಚಿರುವುದರಿಂದ, ಹೊರಗಡೆ ವ್ಯಾಯಾಮ ಮಾಡುವವರು ಮುಂಜಾನೆಗಿಂತ ಸಂಜೆ ವೇಳೆ ಮಾಡುವುದು ಉತ್ತಮ. ಸಾಧ್ಯವಾದರೆ ಮಾಸ್ಕ್ ಬಳಸಿ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಇಂದು ಮಾಲಿನ್ಯದ ಮಟ್ಟ ಗಣನೀಯವಾಗಿ ಹೆಚ್ಚಾಗಿದೆ. ಪೀಣ್ಯ ಮತ್ತು ಕೆಂಪೇಗೌಡ ರಸ್ತೆ ಬಳಿ AQI 200 ದಾಟಿದ್ದು, ಮಾಲಿನ್ಯ ಹೆಚ್ಚಿದೆ. ಜಯನಗರ ಮತ್ತು ಬನಶಂಕರಿಯಲ್ಲಿ ಮಾಲಿನ್ಯ ಮಟ್ಟ ಸಾಧಾರಣದಿಂದ ಕಳಪೆ (120-150) ಹಂತದಲ್ಲಿದೆ. ವೈಟ್‌ಫೀಲ್ಡ್ ನಲ್ಲಿ ಕಟ್ಟಡ ಕಾಮಗಾರಿಗಳಿಂದಾಗಿ ಧೂಳಿನ ಪ್ರಮಾಣ ಹೆಚ್ಚಾಗಿದೆ. ಮಧ್ಯಾಹ್ನ ಬಿಸಿಲು ಹೆಚ್ಚಾದಂತೆ ಮತ್ತು ಗಾಳಿಯ ವೇಗ ಸುಧಾರಿಸಿದಂತೆ AQI ಮಟ್ಟ 120-140ಕ್ಕೆ ಇಳಿಯುವ ಸಾಧ್ಯತೆಯಿದೆ. ಆದರೂ ಸಂಜೆ ಮತ್ತೆ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ತೇವಾಂಶ ಹೆಚ್ಚಿರುವುದರಿಂದ ಮಾಲಿನ್ಯಕಾರಕ ಕಣಗಳು ಕೆಳಮಟ್ಟದಲ್ಲೇ ಉಳಿದಿವೆ. ಇದು ಉಸಿರಾಟದ ಸಮಸ್ಯೆ ಇರುವವರಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಗಾಳಿಯ ಗುಣಮಟ್ಟ ಬೆಂಗಳೂರಿಗೆ ಹೋಲಿಸಿದರೆ ಉತ್ತಮವಾಗಿದೆ. ಆದರೆ ಮಧ್ಯಾಹ್ನ ಬಿಸಿಲು ಹೆಚ್ಚಾದಂತೆ ಧೂಳಿನ ಪ್ರಮಾಣ ಸ್ವಲ್ಪ ಏರಬಹುದು. ಬೆಂಗಳೂರು ನಿವಾಸಿಗಳು AQI 200 ದಾಟಿರುವುದರಿಂದ, ಹೃದಯ ಅಥವಾ ಶ್ವಾಸಕೋಶದ ಸಮಸ್ಯೆ ಇರುವವರು ಮತ್ತು ಮಕ್ಕಳು ಇಂದು ಹೊರಾಂಗಣ ಚಟುವಟಿಕೆಗಳನ್ನು ಕಡಿಮೆ ಮಾಡುವುದು ಉತ್ತಮ. ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ ಗಾಳಿಯ ಗುಣಮಟ್ಟ ಸ್ವಲ್ಪ ಸುಧಾರಿಸುತ್ತದೆ, ಆದ್ದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದು ಸುರಕ್ಷಿತ.ರಸ್ತೆ ಬದಿಯಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು ಧೂಳಿನಿಂದ ರಕ್ಷಣೆ ನೀಡುತ್ತದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ (ಮಂಗಳೂರು, ಉಡುಪಿ ಮತ್ತು ಕಾರವಾರ) ಇಂದು (ಜನವರಿ 29, 2026) ವಾಯು ಗುಣಮಟ್ಟವು (AQI) ‘ಸಾಧಾರಣ’ದಿಂದ ‘ಕಳಪೆ’ ಹಂತದಲ್ಲಿದೆ. ವಿಶೇಷವಾಗಿ ಮಂಗಳೂರಿನಲ್ಲಿ ಮಾಲಿನ್ಯದ ಮಟ್ಟ ಬೆಂಗಳೂರನ್ನು ಹಿಂದಿಕ್ಕಿರುವುದು ಆತಂಕಕಾರಿಯಾಗಿದೆ. ಗಾಳಿಯಲ್ಲಿನ PM2.5 ಕಣಗಳ ಪ್ರಮಾಣ 79 µg/m³ ವರೆಗೆ ಏರಿಕೆಯಾಗಿದೆ. ರಸ್ತೆ ಕಾಮಗಾರಿಗಳು, ವಾಹನಗಳ ಹೊಗೆ ಮತ್ತು ಚಳಿಗಾಲದ ಮಂಜು ಈ ಮಾಲಿನ್ಯಕ್ಕೆ ಪ್ರಮುಖ ಕಾರಣಗಳಾಗಿವೆ. ವರದಿಗಳ ಪ್ರಕಾರ ಉಡುಪಿಯಲ್ಲಿ AQI 90 ರಷ್ಟಿದ್ದು ಸಾಧಾರಣವಾಗಿತ್ತು, ಆದರೆ ದಿನ ಕಳೆದಂತೆ ಕೆಲವು ಕಡೆಗಳಲ್ಲಿ 167 ರವರೆಗೆ ತಲುಪಿದೆ. ಸೂಕ್ಷ್ಮ ವ್ಯಕ್ತಿಗಳು ಸ್ವಲ್ಪ ಉಸಿರಾಟದ ಕಿರಿಕಿರಿ ಅನುಭವಿಸಬಹುದು. ಮಂಗಳೂರು ಮತ್ತು ಉಡುಪಿಗೆ ಹೋಲಿಸಿದರೆ ಕಾರವಾರದ ಗಾಳಿಯ ಗುಣಮಟ್ಟ ಉತ್ತಮವಾಗಿದೆ. ಇಲ್ಲಿ ಹವಾಮಾನವು ಆಹ್ಲಾದಕರವಾಗಿದ್ದು, ವಾಯು ಮಾಲಿನ್ಯದ ಪ್ರಭಾವ ಕಡಿಮೆ ಇದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಯಲಾಯ್ತು ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್ ​ನೆಸ್

Source link

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ – Kannada News | Mayur Patel’s Drunk Driving Fortuner Causes Bangalore Serial Accident

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು. 2003ರಲ್ಲಿ ‘ಮಣಿ’ ಹೆಸರಿನ ಸಿನಿಮಾ ಮಾಡಿದರು. ಈ ಚಿತ್ರ ಕೊಂಚ ಗಮನ ಸೆಳೆಯಿತು. ನಂತರ ‘ಉಡೀಸ್’, ‘ಗುನ್ನ’ ಸೇರಿದಂತೆ ಹಲವು ಸಿನಿಮಾ ಮಾಡಿದರು. ಆದರೆ, ಯಾವ ಚಿತ್ರ ಕೂಡ ಹೆಚ್ಚು ಸದ್ದು ಮಾಡಿಲ್ಲ. ಇಷ್ಟು ದಿನ ಅವರ ಹೆಸರು ಹೆಚ್ಚು ಚರ್ಚೆಯಲ್ಲಿ ಇರಲಿಲ್ಲ. ಈಗ ಬೇಡದ ಕಾರಣಕ್ಕೆ ಮಯೂರ್ ಸುದ್ದಿ ಆಗುತ್ತಿದ್ದಾರೆ.

ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. ಮಯೂರ್ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್​ ಎಂಬುವರ ಕಾರುಗಳು ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೊಯ್ಸಳ ಪೊಲೀಸರು ಮಯೂರ್​ ಪಟೇಲ್​ನನ್ನ ಠಾಣೆಗೆ ಕರೆದೊಯ್ದಿದ್ದಾರೆ. ತಪಾಸಣೆ ವೇಳೆ ಕುಡಿದು ವಾಹನ ಚಲಾಯಿಸಿರುವುದು ಸಾಬೀತಾಗಿದೆ.

ಅಪಘಾತದ ಕುರಿತು ಶ್ರೀನಿವಾಸ್​ ದೂರು ನೀಡಿದ್ದಾರೆ. ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಎಫ್​​ಐಆರ್ ದಾಖಲು ಮಾಡಲಾಗಿದೆ. ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಯೂರ್ ಪಟೇಲ್ ಕಾರ್ ಸೀಜ್ ಮಾಡಲಾಗಿದೆ. ಅಪಘಾತದ ವೇಳೆ ಮಯೂರ್​ ಪಟೇಲ್ ಕಾರಿಗೆ ಇನ್ಸೂರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ

ಅಪಘಾತ ಆಗುತ್ತಿದ್ದಂತೆ ಕಾರಿನಿಂದ ಇಳಿದ ಮಯೂರ್ ಪಟೇಲ್, ‘ಏನೇ ಇದ್ದರೂ ನಾನು ಮಾಡಿಸಿಕೊಡ್ತೀನಿ’ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

(ವರದಿ : ವಿಕಾಸ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 6:58 am, Thu, 29 January 26

Source link

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ – Kannada News | Karnataka weather today bangalore chilly north hot no rain forecast

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ (Karnataka weather today) ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹವಾಮಾನವು ಸ್ವಲ್ಪ ತೇವಾಂಶಯಿಂದ (Humid) ಕೂಡಿರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ (ಬೆಳಗಾವಿ, ವಿಜಯಪುರ) ಬಿಸಿಲಿನ ತಾಪ ಹೆಚ್ಚಿರಲಿದೆ.

ಒಟ್ಟಾರೆಯಾಗಿ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಬೆಳಿಗ್ಗೆ ಮತ್ತು ರಾತ್ರಿ ವೇಳೆ ತುಸು ಚಳಿ ಇರಲಿದ್ದು ಮಧ್ಯಾಹ್ನ ಬಿಸಿಲು ಹೆಚ್ಚಿರುತ್ತದೆ. ಉತ್ತರ ಕರ್ನಾಟಕ (ಬೆಳಗಾವಿ/ಕಲಬುರಗಿ)ದಲ್ಲಿ ಬಿಸಿಲಿನ ತಾಪಮಾನ 35°C ವರೆಗೆ ಏರಿಕೆಯಾಗುವ ಸಾಧ್ಯತೆಯಿದ್ದು, ಒಣ ಹವಾಮಾನವಿರುತ್ತದೆ. ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಹಿತಕರವಾದ ಹವಾಮಾನವಿರಲಿದೆ. ಕರ್ನಾಟಕದ ಯಾವುದೇ ಭಾಗದಲ್ಲಿ ಇಂದಿಗೆ ಮಳೆಯ ಮುನ್ಸೂಚನೆ ಇಲ್ಲ. ರಾಜ್ಯದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿಂದ ಕೂಡಿರುತ್ತದೆ.ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ಮತ್ತು ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದ್ದು, ಗರಿಷ್ಠ ತಾಪಮಾನವು 34°C ನಿಂದ 35°C ವರೆಗೆ ತಲುಪಬಹುದು.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿಯಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದ್ದು, ಗರಿಷ್ಠ ತಾಪಮಾನವು 34°C ನಿಂದ 35°C ವರೆಗೆ ತಲುಪುವ ಸಾಧ್ಯತೆಯಿದೆ. ಈ ಪ್ರದೇಶದಲ್ಲಿ ಹವಾಮಾನವು ಸಂಪೂರ್ಣವಾಗಿ ಒಣದಾಗಿರಲಿದ್ದು, ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಒಣ ಹವಾಮಾನದ ಕಾರಣದಿಂದಾಗಿ ಗಾಳಿಯಲ್ಲಿ ಧೂಳಿನಂಶ ತುಸು ಹೆಚ್ಚಿರಬಹುದು. ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ವಾತಾವರಣವು ತುಸು ತಂಪಾಗಿದ್ದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ.

ಬೆಳಗಾವಿ: ಇಲ್ಲಿ ಇಂದು ಆಕಾಶವು ಭಾಗಶಃ ಮೋಡಗಳಿಂದ (Partly sunny) ಕೂಡಿರಲಿದ್ದು, ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗಲಿದೆ. ಮಳೆಯ ಸಾಧ್ಯತೆ ಶೇ. 5 ರಷ್ಟು ಮಾತ್ರ ಇದೆ.

ಧಾರವಾಡ: ಇಲ್ಲಿ ಶುಭ್ರವಾದ ಬಿಸಿಲು (Sunny) ಇರಲಿದ್ದು, ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 19°C ವರೆಗೆ ಇರಲಿದೆ. ಹವಾಮಾನವು ಒಣದಾಗಿದ್ದು, ಮಳೆಯ ಮುನ್ಸೂಚನೆ ಇಲ್ಲ.

ಕಲಬುರಗಿ: ಇಲ್ಲಿ ಭಾಗಶಃ ಮೋಡಗಳಿದ್ದು (Partly sunny), ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಒಣ ಹವೆ (Dry Weather) ಮುಂದುವರಿಯಲಿದೆ. ಯಾವುದೇ ಜಿಲ್ಲೆಯಲ್ಲೂ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ 4-5 ದಿನಗಳ ಕಾಲ ಇದೇ ಸ್ಥಿತಿ ಇರಲಿದೆ. ಹಗಲಿನಲ್ಲಿ ತಾಪಮಾನವು 29°C ನಿಂದ 32°C ವರೆಗೆ ಇರಲಿದ್ದು, ತುಸು ಬಿಸಿಲಿನ ಅನುಭವವಾಗಲಿದೆ. ರಾತ್ರಿ ಮತ್ತು ಮುಂಜಾನೆ ಚಳಿಯ ಪ್ರಭಾವ ಇರಲಿದ್ದು, ಕನಿಷ್ಠ ತಾಪಮಾನವು 14°C ನಿಂದ 18°C ಆಸುಪಾಸಿನಲ್ಲಿರಲಿದೆ. ರಾಜ್ಯದ ಬಯಲು ಸೀಮೆಯಲ್ಲೇ ಅತ್ಯಂತ ಕಡಿಮೆ ತಾಪಮಾನ (14.0°C) ಇಲ್ಲಿ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ. ಇಂತಹ ಪುಣ್ಯದ ಕೆಲಸಗಳು ನಮ್ಮ ಸುಖ-ದುಃಖಗಳಿಗೆ ಕಾರಣವಾಗುವ ಪುಣ್ಯವನ್ನು ಹೆಚ್ಚಿಸುತ್ತವೆ, ಜನ್ಮ-ಜನ್ಮಗಳಿಗೂ ಒಳಿತನ್ನು ತರುತ್ತವೆ. ನಮ್ಮ ಗುರುಗಳು, ಅನ್ನದಾತರು, ಅಥವಾ ನಮಗೆ ಸಹಾಯ ಮಾಡಿದ ದಿವಂಗತ ವ್ಯಕ್ತಿಗಳ ಹೆಸರಿನಲ್ಲೂ ಗಿಡಗಳನ್ನು ನೆಡಬಹುದು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇದು ಭೀಷ್ಮ ಏಕಾದಶಿ ಮತ್ತು ತಿಲಪದ್ಮ ವ್ರತ ಆಚರಣೆಯ ದಿನವಾಗಿದ್ದು, ಅರಕಲಗೂಡಿನಲ್ಲಿ ದೊಡ್ಡಮಳಲಿ ವೇಣುಗೋಪಾಲಸ್ವಾಮಿಯ ರಥೋತ್ಸವ ನಡೆಯಲಿದೆ. ಏಕಾದಶಿಯಂದು ಉಪವಾಸ ಮತ್ತು ದೇವರ ಆರಾಧನೆಗೆ ವಿಶೇಷ ಮಹತ್ವವಿದೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಕೆಲಸಕಾರ್ಯಗಳಲ್ಲಿ ಪ್ರಗತಿ, ಆದಾಯದಲ್ಲಿ ಏರಿಕೆ, ವೃತ್ತಿ ಮತ್ತು ಉದ್ಯೋಗದಲ್ಲಿ ಸಂತೃಪ್ತಿ ಇರುತ್ತದೆ. ರಾಜಕೀಯ ವ್ಯಕ್ತಿಗಳು, ಸರ್ಕಾರಿ ನೌಕರರು, ವ್ಯಾಪಾರಸ್ಥರು, ರೈತರು ಮತ್ತು ವಿದ್ಯಾರ್ಥಿಗಳಿಗೆ ಶುಭ ದಿನವಾಗಿದೆ. ಅಲ್ಪ ಅನಾರೋಗ್ಯ, ಕೋಪ ನಿಯಂತ್ರಣ ಮತ್ತು ಖರ್ಚು ಕಡಿಮೆ ಮಾಡಿಕೊಳ್ಳುವ ಸಲಹೆ ನೀಡಲಾಗಿದೆ. ಹಳದಿ ಬಣ್ಣದ ಬಳಕೆ ಮತ್ತು ಪೂರ್ವ ದಿಕ್ಕಿನ ಪ್ರಯಾಣ ಶುಭಕರ. ಅದೃಷ್ಟ ಸಂಖ್ಯೆ ನಾಲ್ಕು. “ಓಂ ಗುಣಾಕರಾಯ ನಮಃ” ಮಂತ್ರ ಜಪಕ್ಕೆ ಸೂಚಿಸಲಾಗಿದೆ. ವೃಷಭ ರಾಶಿಯವರಿಗೆ ರಾಶ್ಯಾಧಿಪತಿ ಶುಕ್ರನ ಪ್ರಭಾವದಿಂದ ಐದು ಗ್ರಹಗಳ ಶುಭಫಲವಿದೆ. ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿ ಪ್ರಗತಿ, ಕೆಲಸಕಾರ್ಯಗಳಲ್ಲಿ ಶುಭ, ಆಕಸ್ಮಿಕ ಪ್ರಯಾಣ ಯೋಗ, ನಿರೀಕ್ಷಿತ ಕೆಲಸಗಳ ಪರಿಪೂರ್ಣತೆ, ಮನೆ ನಿರ್ಮಾಣ ಅಥವಾ ವಸ್ತು ಖರೀದಿ ಯೋಗಗಳು ಇರಲಿವೆ. ದಾಂಪತ್ಯದಲ್ಲಿ ಅನ್ಯೋನ್ಯತೆ ಮತ್ತು ಮಕ್ಕಳಿಂದ ಶುಭ ಸಮಾಚಾರ ಸಿಗಲಿದೆ. ಆದರೆ, ನಂಬಿದವರಿಂದ ಮೋಸ ಹೋಗುವ ಸಾಧ್ಯತೆ ಇರುತ್ತದೆ. ಹಸಿರು ಬಣ್ಣದ ಬಳಕೆ ಮತ್ತು ಉತ್ತರ ದಿಕ್ಕಿನ ಪ್ರಯಾಣ ಶುಭಕರ. ಅದೃಷ್ಟ ಸಂಖ್ಯೆ ಎರಡು. “ಓಂ ಅಂಗೀರಸಾಯ ನಮಃ” ಮಂತ್ರ ಜಪಕ್ಕೆ ಸೂಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | Snoring: Why It’s More Common in Men

ಗೊರಕೆ (Snore) ನಿದ್ರೆಗೆ ಭಂಗ ತರುವುದು ಮಾತ್ರವಲ್ಲ, ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ ಎಂಬುದು ತಿಳಿದಿರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ 40 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಗೊರಕೆ ಹೊಡೆಯುತ್ತಾರೆ. ಆದರೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರೆಯೇ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪುರುಷರು ಮಹಿಳೆಯರಿಗಿಂತ ಸುಮಾರು 2 ರಿಂದ 3 ಪಟ್ಟು ಹೆಚ್ಚು ಗೊರಕೆ ಹೊಡೆಯುವ ಸಾಧ್ಯತೆ ಇದ್ದು, ವಯಸ್ಸು ಹೆಚ್ಚಾದಂತೆ ಮಹಿಳೆಯರಿಗೂ ಈ ರೀತಿಯ ಸಮಸ್ಯೆ ಕಾಡುತ್ತದೆ. ಆದರೆ ಪುರುಷರು ಮಾತ್ರ ಮಹಿಳೆಯರಿಗಿಂತ ಹೆಚ್ಚು ಪ್ರಭಾವಿತರಾಗುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು, ಯಾಕೆ ಪುರುಷರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪುರುಷರು ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು?

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ರವಿ ಮಹಾರ್ ಹೇಳುವ ಪ್ರಕಾರ, ಪುರುಷರು ಹೆಚ್ಚು ಗೊರಕೆ ಹೊಡೆಯಲು ಹಲವಾರು ಕಾರಣಗಳಿವೆ. ಪುರುಷರ ಗಂಟಲಿನಲ್ಲಿ ವಾಯುಮಾರ್ಗವು ಮಹಿಳೆಯರಿಗೆ ಹೋಲಿಸಿದರೆ ಕಿರಿದಾಗಿರುತ್ತದೆ. ಇದು ನಿದ್ರೆಯ ಸಮಯದಲ್ಲಿ ಉಸಿರಾಡುವಾಗ ಹೆಚ್ಚು ಕಂಪನವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣವಾಗುತ್ತದೆ. ಮಹಿಳೆಯರಲ್ಲಿ, ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ನಂತಹ ಹಾರ್ಮೋನುಗಳು ವಾಯುಮಾರ್ಗ ಸ್ನಾಯುಗಳನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಆದರೆ ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಮಟ್ಟಗಳು ಕಡಿಮೆಯಾಗಲು ಪ್ರಾರಂಭಿಸಿದಾಗ ಈ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ವಯಸ್ಸು ಹೆಚ್ಚಾದಂತೆ ಈ ಸಮಸ್ಯೆ ಕೂಡ ಹೆಚ್ಚಾಗಬಹುದು. ಇನ್ನೊಂದು ಕಾರಣವೆಂದರೆ ಪುರುಷರಲ್ಲಿ ಗಂಟಲಿನ ಸುತ್ತಲೂ ಮತ್ತು ಸುತ್ತಮುತ್ತಲಿನ ಸ್ನಾಯುಗಳಲ್ಲಿ ಮಹಿಳೆಯರಿಗೆ ಹೋಲಿಸಿದರೆ ಹೆಚ್ಚಿನ ಕೊಬ್ಬು ಇರುತ್ತದೆ. ಇದು ಗೊರಕೆ ಹೆಚ್ಚಾಗಲು ಕಾರಣವಾಗುತ್ತದೆ.

ಇದನ್ನೂ ಓದಿ: ರಾತ್ರಿ ಜೋರಾಗಿ ಗೊರಕೆ ಹೊಡೆಯುತ್ತೀರಾ? ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯಾ ಲಕ್ಷಣವಾಗಿರಬಹುದು ಎಚ್ಚರ

ಗೊರಕೆ ಎಂದರೆ ನಿಮ್ಮ ಉಸಿರಾಟದ ಮಾರ್ಗ, ಅಂದರೆ ನಿಮ್ಮ ಮೂಗು ಮತ್ತು ಗಂಟಲು ಸಂಪೂರ್ಣವಾಗಿ ತೆರೆದುಕೊಂಡಿಲ್ಲ ಎಂದರ್ಥ. ಇದು ನೀವು ಉಸಿರಾಡುವಾಗ ಮತ್ತು ಬಿಡುವಾಗ ಗಂಟಲಿನಲ್ಲಿರುವ ಅಂಗಾಂಶಗಳು ಕಂಪಿಸುವಂತೆ ಮಾಡುತ್ತದೆ. ಇದನ್ನು ಗೊರಕೆ ಎಂದು ಕರೆಯಲಾಗುತ್ತದೆ. ಇದಕ್ಕೆ ಬೊಜ್ಜು ಹೆಚ್ಚಾಗುವುದು, ಟಾನ್ಸಿಲ್‌ಗಳು, ಮೂಗಿನಲ್ಲಿ ರಚನಾತ್ಮಕ ಸಮಸ್ಯೆಗಳು ಮತ್ತು ನಿದ್ರೆಯ ಕೊರತೆ ಮುಂತಾದ ಹಲವು ಕಾರಣಗಳಿವೆ. ಸೌಮ್ಯವಾದ ಗೊರಕೆ ಸಮಸ್ಯೆಯಲ್ಲ, ಆದರೆ ಈ ಸಮಸ್ಯೆ ಮುಂದುವರಿದರೆ ನೀವು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಅದು ಸ್ಲೀಪ್ ಅಪ್ನಿಯಾದ ಸಂಕೇತವಾಗಿರಬಹುದು. ಈ ಸಮಸ್ಯೆಯಲ್ಲಿ ನಿದ್ದೆ ಮಾಡುವಾಗ ಕೆಲವು ಸೆಕೆಂಡುಗಳ ಕಾಲ ಉಸಿರಾಟ ನಿಲ್ಲುತ್ತದೆ, ಇದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.

ಗೊರಕೆಯನ್ನು ತಡೆಗಟ್ಟಲು ಸಲಹೆಗಳು:

  • ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ.
  • ಮಲಗುವ ಮೊದಲು ಧೂಮಪಾನ, ಮದ್ಯಪಾನ ಮಾಡಬೇಡಿ.
  • ತುಂಬಾ ಗೊರಕೆ ಹೊಡೆಯುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version