ಮಾವಿನ ಹಣ್ಣಿನಲ್ಲಿ ಬರ್ತಿದೆ ಕೆಮಿಕಲ್ ವಿಷ; ಹೈದರಾಬಾದ್ ಪೊಲೀಸರಂತೆ ಬೆಂಗಳೂರು ಪೊಲೀಸರೂ ಜಾಗೃತಿ ಮೂಡಿಸುವರೇ?

ಮಾವಿನ ಹಣ್ಣಿನಲ್ಲಿ ಬರ್ತಿದೆ ಕೆಮಿಕಲ್ ವಿಷ; ಹೈದರಾಬಾದ್ ಪೊಲೀಸರಂತೆ ಬೆಂಗಳೂರು ಪೊಲೀಸರೂ ಜಾಗೃತಿ ಮೂಡಿಸುವರೇ?

ಹೈದರಾಬಾದ್, ಏ.4 : ಬೇಸಿಗೆ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಗೆ ಹಣ್ಣುಗಳ ರಾಜ ಮಾವಿನ ಹಣ್ಣಿನ ಲಗ್ಗೆ ಇಟ್ಟಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಮಾವಿನ ಹಣ್ಣಿನ ಮಾರಾಟ ಜೋರಾಗಿ ನಡೆಯುತ್ತಿದೆ. ಆದರೆ, ಮಾವಿನ ಹಣ್ಣು ಸವಿಯೋ ಅಥವಾ ವಿಷವೋ ಎಂಬ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ. ಕೇವಲ ಲಾಭದ ಆಸೆಗೆ ಬಿದ್ದ ಕೆಲವು ವ್ಯಾಪಾರಿಗಳು ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ನಂತಹ ಮಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸುತ್ತಿದ್ದಾರೆ. ಈ ಕುರಿತು ಹೈದರಾಬಾದ್ ಪೊಲೀಸ್ ಕಮಿಷನರ್ ವಿ.ಸಿ. ಸಜ್ಜನರ್ (IPS) ಅವರು ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಇದೇ ಬೆಂಗಳೂರಿನಲ್ಲೂ ಕೂಡ ಇಂತಹ ಮಾವಿನ ಹಣ್ಣುಗಳು ಮಾರಾಟವಾಗುತ್ತಿದೆ. ಹೈದರಾಬಾದ್​​​ ಪೊಲೀಸರಂತೆ ಬೆಂಗಳೂರಿನ ಪೊಲೀಸರು ಕೂಡ ಈ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಮೂಡಿಸಬೇಕಾಗಿದೆ.

ರಸ್ತೆ ಬದಿಯ ಅಂಗಡಿಗಳಲ್ಲಿ ಅತಿ ಸುಂದರವಾಗಿ, ಹೊಳೆಯುವ ಚಿನ್ನದ ಬಣ್ಣದಲ್ಲಿ ಕಾಣುವ ಮಾವಿನ ಹಣ್ಣುಗಳನ್ನು ಕಂಡ ತಕ್ಷಣ ಖರೀದಿಸಬೇಡಿ. ಇವು ಹೊರನೋಟಕ್ಕೆ ಹಳದಿಯಾಗಿದ್ದರೂ, ಒಳಗಡೆ ಕಚ್ಚಾ ಮತ್ತು ವಿಷಕಾರಿಯಾಗಿರುತ್ತವೆ. ನೈಸರ್ಗಿಕವಾಗಿ ಹಣ್ಣಾದ ಮಾವು ಎಂದಿಗೂ ಏಕರೂಪದ ಬಣ್ಣವನ್ನು ಹೊಂದಿರುವುದಿಲ್ಲ ಎಂಬುದನ್ನು ನೆನಪಿಡಿ.

ಇಲ್ಲಿದೆ ನೋಡಿ ಎಕ್ಸ್​ ಪೋಸ್ಟ್​​;

ರಾಸಾಯನಿಕ ಬಳಸಿ ಹಣ್ಣು ಮಾಡಿದ ಮಾವಿನ ಸೇವನೆಯಿಂದ ತಕ್ಷಣವೇ ಈ ಕೆಳಗಿನ ಸಮಸ್ಯೆಗಳು ಕಾಣಿಸಿಕೊಳ್ಳಬಹುದು:

ಗಂಟಲು ಉರಿ ಮತ್ತು ವಾಕರಿಕೆ.

ವಾಂತಿ ಮತ್ತು ಭೇದಿ.

ದೀರ್ಘಕಾಲದ ಬಳಕೆಯಿಂದ ನರಮಂಡಲದ ಹಾನಿ ಹಾಗೂ ಉಸಿರಾಟದ ತೊಂದರೆ.

ಗುರುತಿಸುವುದು ಹೇಗೆ?

ಬಣ್ಣ: ಅತಿಯಾದ ಏಕರೂಪದ ಹಳದಿ ಬಣ್ಣವಿದ್ದರೆ ಜಾಗರೂಕರಾಗಿರಿ.

ವಾಸನೆ: ಹಣ್ಣಿನಿಂದ ರಾಸಾಯನಿಕ ವಾಸನೆ ಬರುತ್ತಿದ್ದರೆ ಅದು ಅಪಾಯಕಾರಿ.

ಬೆಕಿಂಗ್ ಸೋಡಾ ಪರೀಕ್ಷೆ: ಹಣ್ಣನ್ನು ಬೇಕಿಂಗ್ ಸೋಡಾ ಮಿಶ್ರಿತ ನೀರಿನಲ್ಲಿ ತೊಳೆದಾಗ ಅನಿರೀಕ್ಷಿತವಾಗಿ ಬಣ್ಣ ಬದಲಾದರೆ ಅದು ಕೆಮಿಕಲ್ ಹಣ್ಣು ಎಂದು ತಿಳಿಯಿರಿ.

ಆರ್ಗ್ಯಾನಿಕ್ ಲೇಬಲ್: ‘ಆರ್ಗ್ಯಾನಿಕ್’ ಎಂದು ಮಾರಾಟ ಮಾಡುವ ಹಣ್ಣುಗಳ ಅಸಲಿಯತ್ತನ್ನು ಕೂಡ ಪರಿಶೀಲಿಸಿ.

ಇದನ್ನೂ ಓದಿ: ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುವ ವ್ಯಾಪಾರಿಗಳ ವಿರುದ್ಧ ಹೈದರಾಬಾದ್ ಪೊಲೀಸ್ ಇಲಾಖೆಯ H-FAST ತಂಡವು ತೀವ್ರ ನಿಗಾ ವಹಿಸಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಇದರ ಜತೆಗೆ ಸಾರ್ವಜನಿಕರಿಗೆ ಮನವಿಯನ್ನು ಕೂಡ ಪೊಲೀಸ್​​ ಇಲಾಖೆ ಮಾಡಿದೆ. ನಿಮ್ಮ ಗಮನಕ್ಕೆ ಕಲಬೆರಕೆ ಅಥವಾ ರಾಸಾಯನಿಕಯುಕ್ತ ಮಾವಿನ ಹಣ್ಣುಗಳ ಮಾರಾಟ ಬಂದಲ್ಲಿ ಕೂಡಲೇ ಡಯಲ್ 100 ಅಥವಾ H-FAST ಸಹಾಯವಾಣಿ 8712661212 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಹೇಳಿದ್ದಾರೆ. ಅದಕ್ಕಾಗಿ “ಜಾಗೃತ ಹೈದರಾಬಾದ್ – ಸುರಕ್ಷಿತ ಹೈದರಾಬಾದ್” ಎಂಬ ಘೋಷವಾಕ್ಯದೊಂದಿಗೆ ಸಜ್ಜನರ್ ಅವರು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇವಲ 5 ನಿಮಿಷ ಹಸಿ ಹಾಲಿನಿಂದ ನಿಮ್ಮ ಮುಖಕ್ಕೆ ಮಸಾಜ್ ಮಾಡಿದ್ರೆ ಏನೆಲ್ಲ ಪ್ರಯೋಜನ ಇದೆ ನೋಡಿ

ಬೆಂಗಳೂರು (ಏ. 04): ಹಾಲು ಆರೋಗ್ಯಕ್ಕೆ ಮಾತ್ರವಲ್ಲದೆ ಚರ್ಮಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಲಿನಿಂದ (Milk) ಸ್ನಾನ ಮಾಡುವ ಸಂಪ್ರದಾಯ ಸಾವಿರಾರು ವರ್ಷಗಳಷ್ಟು ಹಳೆಯದು. ದೇವತೆಗಳು ಸಹ ಹಾಲಿನಿಂದ ಸ್ನಾನ ಮಾಡುತ್ತಾರೆ ಎಂಬುದನ್ನು ನೀವು ಕೇಳಿರಬಹುದು. ಇದಕ್ಕೆ ಕಾರಣವೆಂದರೆ ಹಾಲಿನಲ್ಲಿ ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುವ ಅನೇಕ ಔಷಧೀಯ ಗುಣಗಳಿವೆ. ಹಿಂದಿನವರು ಚರ್ಮವನ್ನು ಸ್ವಚ್ಛಗೊಳಿಸಲು ಹಾಲನ್ನು ಬಳಸುತ್ತಿದ್ದರು. ಮಾರುಕಟ್ಟೆಯಲ್ಲಿ ಲಭ್ಯವಿರುವ ಅನೇಕ ಸೋಪ್‌ಗಳು ಮತ್ತು ಫೇಸ್ ವಾಶ್‌ಗಳಲ್ಲಿ ಸಹ ಹಾಲನ್ನು ಬಳಸಲಾಗುತ್ತದೆ. ಹೀಗಿರುವಾಗ ನೀವು ನಿಮ್ಮ ಆರೈಕೆಯ ದಿನಚರಿಯಲ್ಲಿ ಹಾಲನ್ನು ಸೇರಿಸಿಕೊಳ್ಳಬಹುದು.

ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದಾಗುವ ಪ್ರಯೋಜನಗಳು

  • ಚರ್ಮವನ್ನು ಸ್ವಚ್ಛಗೊಳಿಸುವುದು – ಹಾಲನ್ನು ನೈಸರ್ಗಿಕ ಕ್ಲೆನ್ಸರ್ ಎಂದು ಪರಿಗಣಿಸಲಾಗುತ್ತದೆ. ಹತ್ತಿ ಉಂಡೆಯನ್ನು ಬಳಸಿ, ಹಸಿ ಹಾಲನ್ನು ನಿಮ್ಮ ಇಡೀ ಮುಖಕ್ಕೆ ಹಚ್ಚಿ ಸ್ವಚ್ಛಗೊಳಿಸಿ. ಇದು ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚರ್ಮವನ್ನು ಸಂಪೂರ್ಣವಾಗಿ ಸ್ವಚ್ಛವಾಗಿರಿಸುತ್ತದೆ.
  • ಹೊಳೆಯುವ ಚರ್ಮ – ಪ್ರತಿದಿನ ನಿಮ್ಮ ಮುಖಕ್ಕೆ ಹಾಲನ್ನು ಹಚ್ಚುವುದರಿಂದ ನಿಮ್ಮ ಚರ್ಮವು ಶುದ್ಧವಾಗುತ್ತದೆ ಮತ್ತು ಕಾಂತಿ ಹೆಚ್ಚಾಗುತ್ತದೆ. ಹಸಿ ಹಾಲಿನಲ್ಲಿರುವ ಪದಾರ್ಥಗಳು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದನ್ನು ನಿಮ್ಮ ಚರ್ಮದ ಆರೈಕೆಯ ದಿನಚರಿಯಲ್ಲಿ ಸೇರಿಸಿಕೊಳ್ಳಲು ಮರೆಯದಿರಿ. ಹಾಲಿನೊಂದಿಗೆ ಮಸಾಜ್ ಮಾಡುವುದರಿಂದ ಸುಕ್ಕುಗಳು ಕಡಿಮೆಯಾಗುತ್ತವೆ.
  • ಕಲೆಗಳನ್ನು ನಿವಾರಿಸುತ್ತದೆ – ಬಹಳಷ್ಟು ಕಲೆಗಳು ಮತ್ತು ಆಗಾಗ್ಗೆ ಮೊಡವೆಗಳನ್ನು ಹೊಂದಿರುವವರಿಗೆ ಹಸಿ ಹಾಲು ತುಂಬಾ ಪ್ರಯೋಜನಕಾರಿಯಾಗಿದೆ. ಹಸಿ ಹಾಲನ್ನು ಹಚ್ಚುವುದರಿಂದ ನಿಮ್ಮ ಚರ್ಮದ ಮೇಲಿನ ಕಲೆಗಳು ಕಡಿಮೆಯಾಗುತ್ತವೆ ಮತ್ತು ಟ್ಯಾನಿಂಗ್‌ಗೆ ಸಹ ಸಹಾಯ ಮಾಡುತ್ತದೆ. ಇದನ್ನು 10-20 ನಿಮಿಷಗಳ ಕಾಲ ಹಾಗೆಯೇ ಬಿಡಿ ಮತ್ತು ನಂತರ ನಿಮ್ಮ ಮುಖವನ್ನು ತೊಳೆಯಿರಿ.
  • ಮೃದು ಚರ್ಮ – ಒಣ ಮತ್ತು ಮಂದ ಚರ್ಮವನ್ನು ತೊಡೆದುಹಾಕಲು ಹಸಿ ಹಾಲನ್ನು ಸಹ ಬಳಸಬಹುದು. ಹಸಿ ಹಾಲು ಚರ್ಮವನ್ನು ತೇವಗೊಳಿಸುತ್ತದೆ. ಇದು ನಿಮ್ಮ ಒಣ ಚರ್ಮವನ್ನು ಮೃದುವಾಗಿಸುತ್ತದೆ.

Kitchen Tips: ಈ ಸಣ್ಣ ಅಡುಗೆ ಟ್ರಿಕ್ಸ್ ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತೆ

ಹಸಿ ಹಾಲು ಚರ್ಮಕ್ಕೆ ಪ್ರಯೋಜನಕಾರಿ. ಇದರಲ್ಲಿ ಹಲವು ಔಷಧೀಯ ಗುಣಗಳಿವೆ. ಇದು ಚರ್ಮವನ್ನು ಹಗುರಗೊಳಿಸಲು ಸಹಾಯ ಮಾಡುತ್ತದೆ. ನೀವು ಯಾವುದೇ ಕಪ್ಪು ಕಲೆಗಳನ್ನು ಗಮನಿಸಿದರೆ, ನೀವು ಹಸಿ ಹಾಲನ್ನು ಹಚ್ಚಬಹುದು. ಆದಾಗ್ಯೂ, ಇದು ಎಲ್ಲರಿಗೂ ಸೂಕ್ತವಲ್ಲದಿರಬಹುದು. ಆದ್ದರಿಂದ, ನೀವು ಮೊದಲ ಬಾರಿಗೆ ಹಸಿ ಹಾಲನ್ನು ಬಳಸುತ್ತಿದ್ದರೆ, ಪ್ಯಾಚ್ ಪರೀಕ್ಷೆಯನ್ನು ಮಾಡಲು ಮರೆಯದಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Sandhya Kala: ಸೂರ್ಯಾಸ್ತದ ಸಮಯದಲ್ಲಿ ತಪ್ಪಿಯೂ ಈ ಕೆಲಸ ಮಾಡಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಸಂಪ್ರದಾಯದ ಪ್ರಕಾರ, ಸೂರ್ಯಾಸ್ತದ ಸಮಯವನ್ನು ಅತ್ಯಂತ ಪವಿತ್ರವಾದ ‘ಸಂಧ್ಯಾ ಕಾಲ’ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮಹಾಲಕ್ಷ್ಮಿ ದೇವಿಯು ಭೂಲೋಕಕ್ಕೆ ಭೇಟಿ ನೀಡುತ್ತಾಳೆ ಮತ್ತು ಭಕ್ತರ ಮನೆಗಳನ್ನು ಪ್ರವೇಶಿಸುತ್ತಾಳೆ ಎಂಬ ಗಾಢವಾದ ನಂಬಿಕೆಯಿದೆ. ಆದ್ದರಿಂದ, ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಬೇಕೆಂದರೆ ಈ ಸಂಧ್ಯಾಕಾಲದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸುತ್ತಾರೆ.

ಮುಸ್ಸಂಜೆ ನಿದ್ರೆ:

ಸೂರ್ಯಾಸ್ತದ ಸಮಯದಲ್ಲಿ ಮಲಗುವುದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಶುಭ. ಈ ಸಮಯದಲ್ಲಿ ನಿದ್ರಿಸುವ ವ್ಯಕ್ತಿಯು ಸೋಮಾರಿಯಾಗುವುದಲ್ಲದೆ, ಅಂತಹ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಸುಲಭವಾಗಿ ಆವರಿಸುತ್ತವೆ. ಇದು ವ್ಯಕ್ತಿಯ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಆದರೆ ಚಿಕ್ಕ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ದೀಪಾರಾಧನೆ:

ಸಂಜೆ ವೇಳೆ ಮನೆಯನ್ನು ಕತ್ತಲೆಯಲ್ಲಿ ಇಡುವುದು ದಾರಿದ್ರ್ಯಕ್ಕೆ ನಾಂದಿ ಹಾಡಿದಂತೆ. ಸೂರ್ಯ ಮುಳುಗುವ ಸಮಯದಲ್ಲಿ ಮನೆಯ ಮುಖ್ಯ ದ್ವಾರದಲ್ಲಿ ಅಥವಾ ಪೂಜಾ ಕೋಣೆಯಲ್ಲಿ ಕನಿಷ್ಠ ಒಂದು ದೀಪವನ್ನಾದರೂ ಬೆಳಗಿಸಬೇಕು. ಮಹಾಲಕ್ಷ್ಮಿಯು ಬೆಳಕು ಮತ್ತು ಸ್ವಚ್ಛತೆ ಇರುವ ಮನೆಯಲ್ಲಿ ಮಾತ್ರ ವಾಸಿಸುತ್ತಾಳೆ ಎಂದು ಹಿರಿಯರು ಹೇಳುತ್ತಾರೆ. ಹೀಗಾಗಿ, ಸಂಜೆ ವೇಳೆ ಮನೆಯ ಮೂಲೆ ಮೂಲೆಗಳೂ ಪ್ರಕಾಶಮಾನವಾಗಿರುವಂತೆ ನೋಡಿಕೊಳ್ಳುವುದು ಅತ್ಯಗತ್ಯ.

ಹಣಕಾಸಿನ ವ್ಯವಹಾರ:

ಸೂರ್ಯಾಸ್ತದ ನಂತರ ಹಣದ ವ್ಯವಹಾರ ಮಾಡುವುದು ಅಥವಾ ಸಾಲ ನೀಡುವುದು ಶುಭವಲ್ಲ. ವಿಶೇಷವಾಗಿ ಸಂಜೆ ವೇಳೆ ಹಾಲು, ಮೊಸರು ಅಥವಾ ಉಪ್ಪಿನಂತಹ ವಸ್ತುಗಳನ್ನು ಇತರರಿಗೆ ದಾನವಾಗಿ ನೀಡಬಾರದು. ವಿಜ್ಞಾನ ಮತ್ತು ಶಾಸ್ತ್ರಗಳ ಪ್ರಕಾರ, ಈ ವಸ್ತುಗಳು ಅದೃಷ್ಟದ ಸಂಕೇತಗಳಾಗಿದ್ದು, ಇವುಗಳನ್ನು ಸಂಜೆ ಹೊತ್ತು ಪರರಿಗೆ ನೀಡುವುದರಿಂದ ಮನೆಯ ಸಂಪತ್ತು ಮತ್ತು ಐಶ್ವರ್ಯವು ಕ್ಷೀಣಿಸುತ್ತದೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ನೈರ್ಮಲ್ಯ ಮತ್ತು ದೈಹಿಕ ಸ್ವಚ್ಛತೆಯ:

ಸಂಜೆ ವೇಳೆ ಮನೆ ಗುಡಿಸುವುದು ಅಥವಾ ಹೊರಗೆ ಕಸ ಎಸೆಯುವುದನ್ನು ನಿಷೇಧಿಸಲಾಗಿದೆ. ಹೀಗೆ ಮಾಡುವುದರಿಂದ ಮನೆಯಲ್ಲಿರುವ ಲಕ್ಷ್ಮಿಯನ್ನು ಹೊರಹಾಕಿದಂತಾಗುತ್ತದೆ ಎಂದು ನಂಬಲಾಗಿದೆ. ಹಾಗೆಯೇ, ಸೂರ್ಯಾಸ್ತದ ನಂತರ ಉಗುರು ಅಥವಾ ಕೂದಲನ್ನು ಕತ್ತರಿಸುವುದರಿಂದ ಜಾತಕದಲ್ಲಿನ ಗ್ರಹಗಳ ಮೇಲೆ ಅಶುಭ ಪರಿಣಾಮ ಬೀರುತ್ತದೆ. ಇದು ದೀರ್ಘಕಾಲದ ಆರ್ಥಿಕ ನಷ್ಟ ಮತ್ತು ಮಾನಸಿಕ ಅಶಾಂತಿಗೆ ಕಾರಣವಾಗಬಹುದು.

ತುಳಸಿ ಪೂಜೆ ಮತ್ತು ಶಾಂತಿಯುತ ವಾತಾವರಣ:

ಜ್ಯೋತಿಷ್ಯದ ಪ್ರಕಾರ, ಸೂರ್ಯಾಸ್ತದ ನಂತರ ತುಳಸಿ ಗಿಡವನ್ನು ಮುಟ್ಟುವುದು ಅಥವಾ ಅದರ ಎಲೆಗಳನ್ನು ಕೀಳುವುದು ಮಹಾ ಪಾಪವೆಂದು ಪರಿಗಣಿಸಲಾಗುತ್ತದೆ. ಬದಲಾಗಿ, ತುಳಸಿ ಕಟ್ಟೆಯ ಬಳಿ ದೀಪವನ್ನು ಹಚ್ಚಿ ನಮಸ್ಕರಿಸುವುದು ಕುಟುಂಬದ ಏಳಿಗೆಗೆ ಪೂರಕ. ಎಲ್ಲಕ್ಕಿಂತ ಮುಖ್ಯವಾಗಿ, ಸಂಜೆ ವೇಳೆ ಮನೆಯಲ್ಲಿ ಜಗಳಗಳು ಅಥವಾ ಕೂಗಾಟಗಳಿಲ್ಲದೆ ಶಾಂತಿಯುತ ಮತ್ತು ಭಕ್ತಿಪೂರ್ವಕ ವಾತಾವರಣವಿದ್ದರೆ ಮಾತ್ರ ಲಕ್ಷ್ಮಿ ದೇವಿಯು ಸದಾ ಕಾಲ ಅಲ್ಲಿ ನೆಲೆಸುತ್ತಾಳೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಲಾಹೋರ್​ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ತಂಡ ಮುಲ್ತಾನ್ ಸುಲ್ತಾನ್ಸ್ ವಿರುದ್ಧ 20 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮಳೆಯಿಂದಾಗಿ 13 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಲಾಹೋರ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿತು.

ಮೊದಲು ಬ್ಯಾಟಿಂಗ್ ಮಾಡಿದ ಲಾಹೋರ್ ಖಲಂದರ್ಸ್ ಕೇವಲ 13 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಪೇರಿಸಿತು. ಇದು ಪಿಎಸ್‌ಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ರೇಟ್ (14.23) ಹೊಂದಿದ ಇನ್ನಿಂಗ್ಸ್ ಎಂಬ ದಾಖಲೆಗೆ ಪಾತ್ರವಾಯಿತು.

ಲಾಹೋರ್ ಖಲಂದರ್ಸ್ ಪರ 28 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ನಯೀಮ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ  60 ರನ್ ಚಚ್ಚಿದರು. ಇನ್ನು ಪರ್ವೇಜ್ ಹೊಸೈನ್ ಎಮನ: ಕೇವಲ 19 ಎಸೆತಗಳಲ್ಲಿ 5 ಸಿಕ್ಸರ್‌ಗಳ ನೆರವಿನಿಂದ 45 ರನ್ ಬಾರಿಸಿದರು. ಹಾಗೆಯೇ  ಅಬ್ದುಲ್ಲಾ ಶಫೀಕ್ 14 ಎಸೆತಗಳಲ್ಲಿ 33 ರನ್ ಕೊಡುಗೆ ನೀಡುವ ಮೂಲಕ ಲಾಹೋರ್ ಖಲಂದರ್ಸ್ ತಂಡದ ಸ್ಕೋರ್​ ಅನ್ನು 13 ಓವರ್​​ಗಳಲ್ಲಿ 185 ಕ್ಕೆ ತಂದು ನಿಲ್ಲಿಸಿದ್ದರು.

ಈ 186 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಮುಲ್ತಾನ್ ಸುಲ್ತಾನ್ಸ್ 13 ಓವರ್‌ಗಳಲ್ಲಿ 165 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ತಂಡದ ಪರ ನಾಯಕ ಆಷ್ಟನ್ ಟರ್ನರ್ ಕೇವಲ 22 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿದರೂ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

Source link

ಅಪರೂಪದ ಅಂತಾರಾಷ್ಟ್ರೀಯ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಜನಪ್ರಿಯತೆ ಪಡೆದಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದೆ ಬಂದು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸರಣಿ ಚಿತ್ರಗಳ ಮೂಲಕ ಮನರಂಜನೆ ನೀಡುತ್ತಾರೆ. ಈಗ, ಈ ನಟಿಯ ಖಾತೆಗೆ ಅಪರೂಪದ ಸಾಧನೆ ಸೇರ್ಪಡೆಯಾಗಿದೆ.

ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾದಲ್ಲಿ ಪ್ರಮುಖ ನಾಯಕಿಯಾಗಿ ತಮಗಾಗಿ ವಿಶೇಷ ಇಮೇಜ್ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಂದ ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯಲ್ಪಡುವ ಈ ನಟಿ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹಳ ದಿನಗಳಿಂದ ವಿಜಯ್ ದೇವರಕೊಂಡ ಅವರನ್ನು ಪ್ರೀತಿಸುತ್ತಿದ್ದ ರಶ್ಮಿಕಾ, ಈ ವರ್ಷ ಎರಡೂ ಕುಟುಂಬಗಳ ಸಮ್ಮುಖದಲ್ಲಿ ವಿವಾಹವಾದರು. ಈಗ ರಶ್ಮಿಕಾ ತೆಲುಗು ಸೊಸೆ.

ಮತ್ತೊಂದೆಡೆ, ರಶ್ಮಿಕಾ ಇತ್ತೀಚೆಗೆ ಅತ್ಯುತ್ತಮ ನಟಿಗಾಗಿ ಗದ್ದರ್ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಅವರು ಇತ್ತೀಚೆಗೆ ಮತ್ತೊಂದು ಅಂತರರಾಷ್ಟ್ರೀಯ ಸಾಧನೆ ಮಾಡಿದ್ದಾರೆ. ಜಪಾನ್‌ನಲ್ಲಿ ನಡೆಯಲಿರುವ ಅತ್ಯಂತ ಪ್ರತಿಷ್ಠಿತ ಕ್ರಂಚೈರೋಲ್ ಅನಿಮೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ರಶ್ಮಿಕಾ ಈ ಹಿಂದೆ 2024 ರಲ್ಲಿ ಈ ವೇದಿಕೆಯಲ್ಲಿ ಮಿಂಚಿದ್ದರು. ಈಗ ಅವರು ಮತ್ತೊಮ್ಮೆ ಸದ್ದು ಮಾಡಲಿದ್ದಾರೆ.

ರಶ್ಮಿಕಾ ಎರಡು ಬಾರಿ ಈ ಗೌರವವನ್ನು ಪಡೆದ ಮೊದಲ ಭಾರತೀಯ ಚಲನಚಿತ್ರ ಸೆಲೆಬ್ರಿಟಿ ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ. ಅನಿಮೇಟೆಡ್ ಚಲನಚಿತ್ರಗಳು ಮತ್ತು ವೆಬ್ ಸರಣಿಗಳಲ್ಲಿ ಪ್ರತಿಭೆಯನ್ನು ತೋರಿಸಿದವರಿಗೆ ನೀಡಲಾಗುವ ಈ ಪ್ರಶಸ್ತಿಗಳ 10 ನೇ ಆವೃತ್ತಿಯು ಮೇ 23 ರಂದು ಟೋಕಿಯೊದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ, ಅವರು ಹಾಲಿವುಡ್ ಸೆಲೆಬ್ರಿಟಿಗಳೊಂದಿಗೆ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಇದನ್ನೂ ಓದಿ: ‘ಈಗ ನಾವು ಮೂವರು’; ಮದುವೆ ಆದ ಒಂದೇ ತಿಂಗಳಿಗೆ ಸಿಹಿ ಸುದ್ದಿ ಕೊಟ್ರಾ ರಶ್ಮಿಕಾ?

ಪುಷ್ಪ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರದ ಮೂಲಕ ರಶ್ಮಿಕಾ ಜಪಾನ್‌ನಲ್ಲಿ ಭಾರಿ ಕ್ರೇಜ್ ಸೃಷ್ಟಿಸಿದರು. ರಶ್ಮಿಕಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.ಎಲ್ಲಕಿಂತ ಮುಖ್ಯವಾಗಿ ಅನಿಮೇ ಸಿನಿಮಾಗಳ ಬಗ್ಗೆ ಅವರಿಗೆ ಅಪಾರ ಆಸಕ್ತಿ ಇದೆ. ಅನಿಮಲ್, ಪುಷ್ಪ 2, ಕುಬೇರ, ಗರ್ಲ್‌ಫ್ರೆಂಡ್ ಮತ್ತು ತಮ್ಮಾ ಮುಂತಾದ ಚಿತ್ರಗಳೊಂದಿಗೆ ಸತತ ಹಿಟ್‌ಗಳನ್ನು ನೀಡಿದರು. ಅವರು ಪ್ರಸ್ತುತ ಮೈಸಾ ಮತ್ತು ರಣಬಲಿ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಬೆಂಗಳೂರು, ಏಪ್ರಿಲ್ 4: ಐಪಿಎಲ್ (IPL) ಪಂದ್ಯದ ವೇಳೆ ಕ್ರಿಕೆಟ್ ಪ್ರೇಮಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂತರರಾಜ್ಯ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಪತ್ತೆಹಚ್ಚಿದ್ದಾರೆ. ಇದರೊಂದಿಗೆ, ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ (RCB vs SRH) ಪಂದ್ಯದ ವೇಳೆ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಯಶಸ್ಸು ದೊರೆತಂತಾಗಿದೆ. ಸದ್ಯ ಪೊಲೀಸರು 51 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.

ಆರ್‌ಸಿಬಿ ಟೀ ಶರ್ಟ್ ಧರಿಸಿ ಎಂಟ್ರಿ!

ಈ ಕಳ್ಳತನ ಜಾಲದಲ್ಲಿ ಭಾಗಿಯಾಗಿದ್ದ 18 ಅಪ್ರಾಪ್ತರು ಸೇರಿದಂತೆ ಒಟ್ಟು 19 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ವಿಶೇಷವೆಂದರೆ, ಈ ಕಳ್ಳರೆಲ್ಲರೂ ಜಾರ್ಖಂಡ್ ಮೂಲದವರಾಗಿದ್ದು, ಪಂದ್ಯದ ವೇಳೆ ಅಭಿಮಾನಿಗಳಂತೆ ಕಾಣಲು ಆರ್‌ಸಿಬಿ ತಂಡದ ಜೆರ್ಸಿ (T-shirt) ಧರಿಸುತ್ತಿದ್ದರು. ಅಭಿಮಾನಿಗಳಿಂದ ಟಿಕೆಟ್‌ಗಳನ್ನು ಕಸಿದುಕೊಂಡು ಅಥವಾ ಕಳ್ಳತನ ಮಾಡಿ ಕ್ರೀಡಾಂಗಣದ ಒಳಗೆ ಪ್ರವೇಶಿಸುತ್ತಿದ್ದ ಈ ಗ್ಯಾಂಗ್, ಜನಜಂಗುಳಿಯ ನಡುವೆ ಮೊಬೈಲ್‌ಗಳನ್ನು ಲಪಟಾಯಿಸುತ್ತಿತ್ತು.

ಮಾಸ್ಟರ್ ಮೈಂಡ್ ಬಂಧನ

ಈ ಬೃಹತ್ ಜಾಲದ ಹಿಂದೆ ಇದ್ದ ಮಾಸ್ಟರ್ ಮೈಂಡ್ ಶುಭಮ್ ಎಂಬಾತನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಶುಭಮ್ ಮಾತ್ರ ವಯಸ್ಕನಾಗಿದ್ದು, ಉಳಿದ 18 ಮಂದಿ ಅಪ್ರಾಪ್ತ ಬಾಲಕರು. ಈ ಬಾಲಕರನ್ನು ಬಳಸಿಕೊಂಡು ಶುಭಮ್ ನಗರದ ವಿವಿಧೆಡೆ ಕಳ್ಳತನ ಮಾಡಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಕಳೆದ RCB vs SRH ಪಂದ್ಯದ ವೇಳೆ ಸ್ಟೇಡಿಯಂ ಒಳಗಡೆ ಹೋಗುವ ಗೇಟ್‌ಗಳ ಬಳಿ ಹಾಗೂ ಗ್ಯಾಲರಿಗಳಲ್ಲಿ ಅತಿ ಹೆಚ್ಚು ಮೊಬೈಲ್ ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಸದ್ಯ ಪೊಲೀಸರು ಕಳ್ಳತನವಾಗಿದ್ದ 51 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ನಡೀತು ಡ್ರಗ್ಸ್ ಪಾರ್ಟಿ; ಗಾಂಜಾ, ಚರಸ್ ಸೇವಿಸಿ ಮೋಜುಮಸ್ತಿಯಲ್ಲಿದ್ದವರು ಪೊಲೀಸ್ ಬಲೆಗೆ!

ಚಾಮರಾಜನಗರ, ಏಪ್ರಿಲ್ 04: ಜಿಲ್ಲೆಯ ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ (Drugs Party) ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ ಬಯಲಾಗಿದೆ. ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢ

ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ಪೊಲೀಸರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಪಾರ್ಟಿ ಕೊಳ್ಳೇಗಾಲದ ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ಅವರ ರೆಸಾರ್ಟ್‌ನಲ್ಲಿ ನಡೆದಿದ್ದು, ಈ ವಿಚಾರ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. ಫಯಾಜ್ ಖಾನ್ ಪ್ರಭಾವಿ ರಾಜಕೀಯ ಸಂಪರ್ಕ ಹೊಂದಿರುವ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ನಾಯಕರ ಆಪ್ತನೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಪಾರ್ಟಿಯಲ್ಲಿ ಜಹೀರ್ ಕುಟುಂಬ ಸದಸ್ಯರೂ ಭಾಗಿಯಾಗಿದ್ದರೆಂದು ಮೂಲಗಳು ತಿಳಿಸಿವೆ. ಮಹಿಳೆಯರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಲೇಡಿ ಕಾನ್ಸ್ಟೇಬಲ್‌ಗಳು ವಿಚಾರಣೆ ಮುಂದುವರಿಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳನ್ನು ಕೊಳ್ಳೇಗಾಲ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನಷ್ಟು ಮಾಹಿತಿಗಾಗಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?

ಬೆಂಗಳೂರು (ಏ. 04): ಇತ್ತೀಚಿನ ದಿನಗಳಲ್ಲಿ ವೇಗದ ಇಂಟರ್ನೆಟ್ (Internet) ಎಲ್ಲರಿಗೂ ಅನಿವಾರ್ಯ. ಆನ್‌ಲೈನ್ ಕ್ಲಾಸ್, ಮನೆಯಿಂದ ಕೆಲಸ ಮಾಡುವುದಾಗಲಿ ಅಥವಾ ಮನರಂಜನೆಯಾಗಲಿ, ಎಲ್ಲದಕ್ಕೂ ಹೈ-ಸ್ಪೀಡ್ ಇಂಟರ್ನೆಟ್ ಅತ್ಯಗತ್ಯ. ಭಾರತದಲ್ಲಿ, ವಿಶೇಷವಾಗಿ ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ವೇಗವು ಸುಧಾರಿಸುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ದೇಶದ ಕೆಲವು ನಗರಗಳು ಇಂಟರ್ನೆಟ್ ವೇಗದ ವಿಷಯದಲ್ಲಿ ಇತರರಿಗಿಂತ ಬಹಳ ಮುಂದಿವೆ.

ಓಕ್ಲಾ ವರದಿಯ ಪ್ರಕಾರ, ಚೆನ್ನೈ ಭಾರತದಲ್ಲಿ ಅತಿ ಹೆಚ್ಚು ಇಂಟರ್ನೆಟ್ ವೇಗವನ್ನು ಹೊಂದಿರುವ ನಗರವಾಗಿದೆ. ಇಲ್ಲಿನ ಸರಾಸರಿ ಮೊಬೈಲ್ ಇಂಟರ್ನೆಟ್ ವೇಗ ಸುಮಾರು 51 Mbps ಆಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಎಂದು ವರದಿ ಹೇಳುತ್ತದೆ. ಚೆನ್ನೈನ ಬಲಿಷ್ಠ ನೆಟ್‌ವರ್ಕ್ ಮೂಲಸೌಕರ್ಯ ಮತ್ತು ವೇಗವಾಗಿ ವಿಸ್ತರಿಸುತ್ತಿರುವ 5G ಸೇವೆಗಳು ಅದನ್ನು ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ದಿವೆ.

ಸಿಲಿಕಾನ್ ಸಿಟಿ ಬೆಂಗಳೂರು ಇಂಟರ್ನೆಟ್ ವೇಗದಲ್ಲಿ ಎರಡನೇ ಸ್ಥಾನದಲ್ಲಿದೆ, ಸರಾಸರಿ ವೇಗ ಸುಮಾರು 42.50 Mbps. ಐಟಿ ಕೇಂದ್ರವಾಗಿರುವುದರಿಂದ, ನಗರವು ಬಲವಾದ ಡಿಜಿಟಲ್ ಮೂಲಸೌಕರ್ಯವನ್ನು ಹೊಂದಿದ್ದು, ಬಳಕೆದಾರರಿಗೆ ವೇಗದ ಮತ್ತು ಸ್ಥಿರವಾದ ಇಂಟರ್ನೆಟ್ ಸಂಪರ್ಕಗಳನ್ನು ಒದಗಿಸುತ್ತದೆ.

ಈ ಪಟ್ಟಿಯಲ್ಲಿ ಹೈದರಾಬಾದ್ ಮೂರನೇ ಸ್ಥಾನದಲ್ಲಿದ್ದು, ಸರಿಸುಮಾರು 41.68 Mbps ಇಂಟರ್ನೆಟ್ ವೇಗವನ್ನು ಹೊಂದಿದೆ. ಹೈದರಾಬಾದ್‌ನಲ್ಲಿ ಹೆಚ್ಚುತ್ತಿರುವ ಟೆಕ್ ಕಂಪನಿಗಳ ಉಪಸ್ಥಿತಿ ಮತ್ತು ಸುಧಾರಿತ ನೆಟ್‌ವರ್ಕ್ ಕವರೇಜ್ ಈ ವೇಗ ಹೆಚ್ಚಳಕ್ಕೆ ಕಾರಣವಾಗಿವೆ.

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

ಈ ನಗರಗಳು ಮೊದಲ ಮೂರು ಸ್ಥಾನಗಳಲ್ಲಿ ಸ್ಥಾನ ಪಡೆದಿದ್ದರೂ, ನವದೆಹಲಿ ಮತ್ತು ಮುಂಬೈನಂತಹ ನಗರಗಳು ಸಹ ತಮ್ಮ ಇಂಟರ್ನೆಟ್ ವೇಗವನ್ನು ವೇಗವಾಗಿ ಸುಧಾರಿಸುತ್ತಿವೆ. ದೆಹಲಿಯು ಸರಾಸರಿ 32 Mbps ವೇಗವನ್ನು ಹೊಂದಿದೆ ಮತ್ತು 5G ಬಿಡುಗಡೆಯಾದ ನಂತರ ಇದು ಸ್ಥಿರವಾಗಿ ಸುಧಾರಿಸುತ್ತಿದೆ.

ಭಾರತದಲ್ಲಿ ಇಂಟರ್ನೆಟ್ ವೇಗ ಹೆಚ್ಚಳಕ್ಕೆ ಹಲವಾರು ಕಾರಣಗಳಿವೆ. ಅತ್ಯಂತ ಮಹತ್ವದ ಕಾರಣವೆಂದರೆ 5G ತಂತ್ರಜ್ಞಾನದ ತ್ವರಿತ ವಿಸ್ತರಣೆ, ಇದು ಮೊಬೈಲ್ ಇಂಟರ್ನೆಟ್ ಅನ್ನು ಹಿಂದೆಂದಿಗಿಂತಲೂ ವೇಗಗೊಳಿಸಿದೆ. ಇದಲ್ಲದೆ, ಫೈಬರ್ ನೆಟ್‌ವರ್ಕ್‌ಗಳ ವಿಸ್ತರಣೆ, ಹೆಚ್ಚಿದ ಸ್ಪರ್ಧೆ ಮತ್ತು ಡಿಜಿಟಲ್ ಸೇವೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯೂ ಈ ಬದಲಾವಣೆಗೆ ಕಾರಣವಾಗಿವೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ.

ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು. ಈ ವಿಚಾರವಾಗಿ ಮನಸ್ತಾಪ ಉಂಟಾಗಿ ಮೋಹನ್ ಕುಮಾರ್ ಆಕೆಯನ್ನು ಕೆಲಸದಿಂದ ತೆಗೆದುಹಾಕಿದ್ದರು. ಇದರಿಂದ ಬ್ಯೂಟಿಷಿಯನ್​​ನ ಪತಿ ಆಕ್ರೋಶಗೊಂಡಿದ್ದರು. ಪತ್ನಿಯನ್ನು ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಆತ, ನಾಲ್ಕೈದು ಜನರ ಗುಂಪು ಕಟ್ಟಿಕೊಂಡು ಸಲೂನ್‌ಗೆ ನುಗ್ಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಹಲ್ಲೆ ದೃಶ್ಯ


ಬ್ಯೂಟಿಷಿಯನ್‌ ಪತಿ ಮತ್ತು ಆತನ ಬೆಂಬಲಿಗರು ಸಲೂನ್ ಮಾಲೀಕ ಮೋಹನ್ ಕುಮಾರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಗಲಾಟೆ ತಡೆಯಲು ಬಂದ ಮೋಹನ್ ಪತ್ನಿ ಶ್ರೀಜಾ ಅವರ ಕುತ್ತಿಗೆಗೆ ಕೈ ಹಾಕಿ ಹಲ್ಲೆ ನಡೆಸಲಾಗಿದ್ದು, ಬಂದವರೆಲ್ಲರೂ ಸೇರಿ ಸಲೂನ್‌ನಲ್ಲಿ ದಾಂಧಲೆ ನಡೆಸಿದ್ದಾರೆ. ಈ ಇಡೀ ದಾಳಿಯ ದೃಶ್ಯಗಳು ಸಲೂನ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಸದ್ಯ ಹಲ್ಲೆಗೊಳಗಾದ ಮೋಹನ್ ಕುಮಾರ್ ಅವರು ಬ್ಯೂಟಿಷಿಯನ್‌, ಆಕೆಯ ಪತಿ ಹಾಗೂ ಬೆಂಬಲಿಗರ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಮ್ಮನ್ನು ಡ*ರ್ ಅಂತ ಕರೆದ್ರೆ ಹೇಗನಿಸುತ್ತೆ ನೀವೇ ಯೋಚಿಸಿ’; ಅನುಶ್ರೀ ಬೇಸರ

ಆ್ಯಂಕರ್ ಅನುಶ್ರೀ (Anushree) ಅವರು ಹಲವು ವಿಷಯಗಳ ಬಗ್ಗೆ ಓಪನ್ ಆಗಿ ಮಾತನಾಡುತ್ತಾರೆ. ತಮ್ಮ ಬಗ್ಗೆ, ತಾವು ನಡೆಸಿಕೊಡೋ ಶೋ ಬಗ್ಗೆ ಏನಾದರೂ ಆರೋಪ ಕೇಳಿ ಬಂದರೆ ನೇರವಾಗಿ ಉತ್ತರಿಸುತ್ತಾರೆ. ಈ ಬಗ್ಗೆ ಅವರು ಹಿಂದೂ ಮುಂದೂ ಯೋಚಿಸೋದಿಲ್ಲ. ಈಗ ಸಂದರ್ಶನ ಒಂದರಲ್ಲಿ ಅವರು ನೇರ ಮಾತುಗಳಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.ಇದರಲ್ಲಿ ಅವರು ಹೆಣ್ಣು ಮಕ್ಕಳಿಗೆ ಸೈಲೆಂಟ್ ಆಗಿ ನಡೆಯುವ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ.

ಅನುಶ್ರೀ ಅವರು ಸಂದರ್ಶನ ನೀಡಿದ್ದಕ್ಕಿಂತ, ಸಂದರ್ಶನ ಮಾಡಿದ್ದೇ ಹೆಚ್ಚು. ಅವರು ಅನೇಕ ಸೆಲೆಬ್ರಿಟಿಗಳನ್ನು ಇಂಟರ್​​ವ್ಯೂ ಮಾಡಿದ್ದಾರೆ. ಈಗ ಅವರನ್ನೇ ಸಂದರ್ಶನ ಮಾಡಲಾಗಿದೆ. ಆರ್​​ಜೆ ಮಯೂರ್ ಅವರು ತಮ್ಮ ‘ಗೋಲ್ಡನ್ ಕ್ಲಾಸ್ ವಿತ್ ಮಯೂರ’ ಯೂಟ್ಯೂಬ್ ಚಾನೆಲ್ ಅಲ್ಲಿ ಅನುಶ್ರೀ ಇಂಟರ್​ವ್ಯೂ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಇದನ್ನೂ ಓದಿ: ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರ ಖಾತೆಗೂ ಅಶ್ಲೀಲ ಕಮೆಂಟ್ ಬಂದೇ ಬರುತ್ತವೆ. ಆದರೆ, ಸೆಲೆಬ್ರಿಟಿಗಳು ಇದಕ್ಕೆ ಸಂತ್ರಸ್ತರಾಗುವ ಸಾಧ್ಯತೆ ಹೆಚ್ಚು. ಜನಸಾಮಾನ್ಯರಾದರೆ ಖಾತೆಯನ್ನು ಖಾಸಗಿಯಾಗಿ ಇಟ್ಟುಕೊಂಡು, ಪರಿಚಯ ಇರುವವರನ್ನು ಮಾತ್ರ ಫಾಲೋ ಮಾಡಲು ಅವಕಾಶ ನೀಡಬಹುದು. ಆದರೆ, ಸೆಲೆಬ್ರಿಟಿಗಳು ತಮ್ಮ ಖಾತೆಯನ್ನು ಓಪನ್ ಆಗಿ ಇಡುತ್ತಾರೆ. ಈ ಕಾರಣಕ್ಕೆ ಗೊತ್ತು ಪರಿಚಯ ಇಲ್ಲದವರು ಬಂದು ಅವರ ಖಾತೆಗೆ ಕಮೆಂಟ್ ಹಾಕುತ್ತಾರೆ. ಈ ಬಗ್ಗೆ ಅನುಶ್ರೀ ಅವರು ಮಾತನಾಡಿದ್ದಾರೆ.

ಸಂದರ್ಶನದಲ್ಲಿ ಡಗಾರ್ ಎಂಬ ಪದ ಚರ್ಚೆಗೆ ಬಂದಿದೆ. ಡಗಾರ್ ಅಂದರೆ ನಡತೆಗೆಟ್ಟವಳು ಎಂಬ ಅರ್ಥ ನೀಡುತ್ತದೆ. ಈ ಪದ ಹೇಳಲು ಮಯೂರ್ ಅವರು ಮುಜುಗರ ಮಾಡಿಕೊಂಡಿದರು. ಆಗ ಮಾತನಾಡಿದ ಅನುಶ್ರೀ, ‘ನೋಡಿ ನಿಮಗೆ ಅದನ್ನು ಹೇಳಲೇ ಅಷ್ಟು ಮುಜುಗರ ಆಗುತ್ತಿದೆ ಎಂದರೆ ನಮಗೆ ಹಾಗೆ ಕರೆದಾಗ ಹೇಗನಿಸಬೇಡಿ’ ಎಂದು ಅನುಶ್ರೀ ಕೇಳಿದರು. ಅದನ್ನು ಹೇಳುವಾಗ ಅವರ ಮುಖದಲ್ಲಿ ಬೇಸರ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version