Headlines

ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್‌ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್ – Kannada News | Karnataka Cabinet Expansion: Congress High command Plan New Face In Cabinet Birth, Rahul Gandhi created separate List

ನವದೆಹಲಿ, (ಜುಲೈ 16): ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಿ 1 ತಿಂಗಳಿಗೂ ಹೆಚ್ಚು ದಿನಗಳಾಗಿದೆ. ಕೇವಲ 13 ಮಂದಿ ಸಚಿವರನ್ನ ಇಟ್ಕೊಂಡು ಡಿಕೆಶಿ ಸರ್ಕಾರ ನಡೆಸ್ತಿದ್ದಾರೆ. ಪ್ರಬಲ ಖಾತೆಗಳಿಗೆ ಇನ್ನೂ ಸಚಿವರನ್ನೇ ನೇಮಕ ಮಾಡಿಲ್ಲ. ಹೀಗಾಗಿಯೇ ಸಿಎಂ ಡಿಕೆ ಶಿವಕಿಮಾರ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ದೆಹಲಿಗೆ ತೆರಳಿದ್ದು, ಇಂದು (ಜುಲೈ 16) ರಾಹುಲ್ ಗಾಂಧಿ ಜೊತೆ ಮಹತ್ವದ ಚರ್ಚೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರ 10 ಜನಪತ್ ನಿವಾಸದಲ್ಲೂ ಸಭೆ…

Read More

ಅಯೋಧ್ಯೆ ಹಗರಣ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ – Kannada News | Karnataka Strengthens Temple Security Following Ayodhya Donation Scandal

ಬೆಂಗಳೂರು, ಜುಲೈ 16: ಅಯೋಧ್ಯೆ ರಾಮಮಂದಿರ ಹುಂಡಿ ಅವ್ಯವಹಾರದ ಬೆನ್ನಲ್ಲೇ ಅಲರ್ಟ್ ಆಗಿರುವ ರಾಜ್ಯ ಸರ್ಕಾರವು ರಾಜ್ಯದ ದೇವಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿನ ಕಾಣಿಕೆ ಹುಂಡಿಗಳಿಗೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಕುರಿತಾಗಿ ಡಿಸಿಎಂ ಜಿ. ಪರಮೇಶ್ವರ್​ ಮಾತನಾಡಿದ್ದು, ‘‘ರಾಜ್ಯದಲ್ಲಿ 39 ಸಾವಿರ ದೇವಸ್ಥಾನಗಳು ಮುಜರಾಯಿ ಅಡಿಯಲ್ಲಿವೆ. ಮುಜರಾಯಿಗೆ ಸೇರದ ದೇವಸ್ಥಾನಗಳೂ ಇವೆ. ಎ ದರ್ಜೆಯ ದೇವಸ್ಥಾನಕ್ಕೆ ಸಾಕಷ್ಟು ಹಣ ಬರುತ್ತೆ. ಹುಂಡಿ ಇತರೆ ಸ್ಥಳಕ್ಕೆ ಸಿಸಿಟಿಸಿ ಹಾಕಿ ಕೇಂದ್ರೀಕೃತ…

Read More

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಉಸಿರುಗಟ್ಟಿ ಓರ್ವ ಭಕ್ತ ಸಾವು, ಹಲವರಿಗೆ ಗಾಯ – Kannada News | One dead, several injured in stampede during Puri Jagannath Rath Yatra

ಪುರಿ, ಜುಲೈ 16: ಒಡಿಶಾದ ಪುರಿಯಲ್ಲಿ ಇಂದು ಅತ್ಯಂತ ವೈಭವದಿಂದ ಆರಂಭವಾದ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯ (Puri Jagannath Rath Yatra) ಸಂದರ್ಭದಲ್ಲಿ ಭಾರಿ ಜನದಟ್ಟಣೆಯಿಂದಾಗಿ ಉಸಿರುಗಟ್ಟಿ ಓರ್ವ ಭಕ್ತ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭಗವಾನ್ ಜಗನ್ನಾಥ, ಬಲಭದ್ರ ಮತ್ತು ದೇವತೆ ಸುಭದ್ರೆಯ ರಥ ಎಳೆಯುವ ಪವಿತ್ರ ಕಾರ್ಯಕ್ರಮವನ್ನು ವೀಕ್ಷಿಸಲು ಲಕ್ಷಾಂತರ ಭಕ್ತರು ಜಮಾಯಿಸಿದ್ದಾಗ ಈ ದುರಂತ ಸಂಭವಿಸಿದೆ. ಮೃತರನ್ನು ಕಟಕ್ ಜಿಲ್ಲೆಯ ನಿವಾಸಿಯಾದ 35 ವರ್ಷದ ಅನಿಲ್ ದಾಸ್ ಎಂದು ಗುರುತಿಸಲಾಗಿದೆ. ಘಟನೆ ನಡೆದಿದ್ದು ಹೇಗೆ?:…

Read More

‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು? – Kannada News | Ranbir Kapoor Ramayana Movie M Rating Australian Classification Board Reasons details

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಲಿದ್ದು, ಇದಕ್ಕೂ ಮುನ್ನ ಚಿತ್ರದ ಬಗ್ಗೆ ಒಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯು (Australian Classification Board) ಈ ಚಿತ್ರದ ಸ್ಪೆಷಲ್ ವಿಡಿಯೋ ಪ್ಯಾಕೇಜ್‌ಗೆ ‘M’ (Mature) ರೇಟಿಂಗ್ ನೀಡಿದೆ. ಇದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ…

Read More

‘ಟ್ರಂಪ್‌ನನ್ನು ಕೊಲ್ಲುತ್ತೇವೆ’; ಇರಾನ್‌ನಲ್ಲಿ ಬೃಹತ್ ಬ್ಯಾನರ್! – Kannada News | We Will Kill Trump Irans New Warning big Billboard Puts US President In A Coffin

ಟೆಹ್ರಾನ್, ಜುಲೈ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಹತ್ಯೆ ಮಾಡಲು ಇರಾನ್ ಸಂಚು ರೂಪಿಸಿದೆ ಎಂಬ ವರದಿಗಳ ನಡುವೆಯೇ ಇರಾನ್ ರಾಜಧಾನಿ ಟೆಹ್ರಾನ್‌ನ ಪ್ರಮುಖ ವೃತ್ತವಾದ ‘ಎಂಘೆಲಾಬ್ ಸ್ಕ್ವೇರ್’ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಬಿಂಬಿಸುವ ಬೃಹತ್ ಬಿಲ್​ಬೋರ್ಡ್ (ಬ್ಯಾನರ್) ಒಂದನ್ನು ಅಳವಡಿಸಲಾಗಿದೆ. ಅಮೆರಿಕ-ಇಸ್ರೇಲ್ ಜಂಟಿ ಪಡೆಗಳು ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಜನಾಂಗೀಯ…

Read More

ಕೇಂದ್ರದಿಂದ ಗ್ರಾ.ಪಂಗಳ 2,186 ಕೋಟಿ ಬಾಕಿ ಹಣ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಕಸರತ್ತು – Kannada News | Karnataka Grama Panchayat Funds Delayed: Eshwar Khandre Writes to MPs

ಸಚಿವ ಈಶ್ವರ ಖಂಡ್ರೆImage Credit source: x.com/eshwar_khandre ಬೆಂಗಳೂರು, ಜುಲೈ 16: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ಬಿಡುಗಡೆಯಾಗಬೇಕಿದ್ದ 2,186.20 ಕೋಟಿ ರೂ ಬಾಕಿ ಅನುದಾನವನ್ನು (15th Finance Commission funds) ಕೇಂದ್ರ ಸರ್ಕಾರ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರ ಮೇಲೆ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwara Khandre)…

Read More

ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ – Kannada News | Shivamogga: Accused Escapes While Being Taken to Jail

ಶಿವಮೊಗ್ಗ, ಜುಲೈ 16: ರಾಜ್ಯದಲ್ಲಿ ಇತ್ತೀಚೆಗೆ ಜೈಲಿನಿಂದ ಪರಾರಿಯಾಗುತ್ತಿರುವ ಕೈದಿಗಳ (Prisoners Escape) ಸಂಖ್ಯೆ ಹೆಚ್ಚುತ್ತಿದೆ. ಮೊನ್ನೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದರು. ಇದಕ್ಕೂ ಮುನ್ನ ಅಫಜಲಪುರ ಪೊಲೀಸ್ ಠಾಣೆಯಿಂದ ರಾತ್ರೋರಾತ್ರಿ ಪೋಕ್ಸೋ ಪ್ರಕರಣದ ಆರೋಪಿ ಒಬ್ಬ ಪರಾರಿಯಾಗಿದ್ದ. ಇವೆಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಿವಮೊಗ್ಗ (shivamogga) ಸೆಂಟ್ರಲ್​ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ ಆಗಿದ್ದಾನೆ. ನಡೆದಿದ್ದೇನು? ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಅಕ್ರಮ ನಾಟಾ ಪ್ರಕರಣದ…

Read More

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ – Kannada News | Union Governmnet extends North Karnataka district Farmers crop insurance registration to July 31

ಹುಬ್ಬಳ್ಳಿ, (ಜುಲೈ 16): ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ (crop insurance registration) ಅವಧಿ ವಿಸ್ತರಿಸಲಾಗಿದೆ. ರಾಜ್ಯದ ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ಅನ್ವಯಿಸಲಿದೆ. ಜುಲೈ 15ರವರೆಗೆ ಇದ್ದ ಕಾಲಮಿತಿಯನ್ನು ಜುಲೈ 31ರವರೆಗೆ ವಿಸ್ತರಿಸುವ ಮೂಲಕ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಈ ನಾಲ್ಕು ಜಿಲ್ಲೆಗಳ ರೈತರ ನೆರವಿಗೆ ಧಾವಿಸಿದೆ. ಈ ಜಿಲ್ಲೆಗಳಲ್ಲಿ ರೈತರು…

Read More

ಕಾರ್ಡ್ ಪೇಮೆಂಟ್​ನಲ್ಲಿಯಂತೆ ಕೆಲ ಯುಪಿಐ ಪೇಮೆಂಟ್​ಗೂ ಎಂಡಿಆರ್ ಶುಲ್ಕ; ಸರ್ಕಾರ ಚಿಂತನೆ – Kannada News | UPI payments for large businesses may attract charges, as Govt thinks of bringing MDR

ನವದೆಹಲಿ, ಜುಲೈ 16: ಭಾರತದಲ್ಲಿ ಡಿಜಿಟಲ್ ಪಾವತಿಯ ಕ್ರಾಂತಿ ಸೃಷ್ಟಿಸಿರುವ ಯುಪಿಐ (UPI- Unified Payments Interface) ವಹಿವಾಟುಗಳ ಮೇಲೆ ಮತ್ತೊಮ್ಮೆ ಸೇವಾ ಶುಲ್ಕಗಳು ಜಾರಿಯಾಗುವ ಮುನ್ಸೂಚನೆ ಸಿಕ್ಕಿದೆ. ದೇಶದ ದೊಡ್ಡ ದೊಡ್ಡ ವ್ಯಾಪಾರ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಂಪನಿಗಳು (Large Businesses) ನಡೆಸುವ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ (Merchant Discount Rate – MDR), ಅಂದರೆ ವ್ಯಾಪಾರಿ ರಿಯಾಯಿತಿ ದರವನ್ನು ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ…

Read More

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್ – Kannada News | Rohit Sharma Breaks ODI Run Record: Surpasses Inzamam to Become 7th Highest Scorer

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI). ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ…

Read More