Headlines

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಜೈಪುರ, ಏಪ್ರಿಲ್ 3: ರಾಜಸ್ಥಾನದ ಜೈಪುರದ ಹಲವಾರು ಭಾಗಗಳಲ್ಲಿ ಭಾರೀ ಮಳೆ (Rain Updates) ಮತ್ತು ಆಲಿಕಲ್ಲು ಮಳೆಯಾಗಿದ್ದು, ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಗಳ ಎಚ್ಚರಿಕೆಯನ್ನು ಹಳದಿ ಅಲರ್ಟ್ ನೀಡಿದೆ. ಮುಂದಿನ 2 ದಿನಗಳವರೆಗೆ ಬಿರುಗಾಳಿ ಮತ್ತು ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಇಂದು…

Read More

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ….

Read More

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​ 03: ಲಿಫ್ಟ್‌ನಲ್ಲಿ ಸಿಲುಕಿದ್ದ (Lift Rescues) ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಪೊಲೀಸರು ಯಶಸ್ವಿಯಾಗಿ ರಕ್ಷಣೆ ಮಾಡಿರುವಂತಹ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಸಮಯದಲ್ಲಿ ಲಿಫ್ಟ್​ನಲ್ಲಿ ವ್ಯಕ್ತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಕೇವಲ 8 ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿ ಹಾಗೂ ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ನಗರದ ಆರ್​.ಜಿಎಸ್ ಕಾಲೇಜು ಸಮೀಪದ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್‌ನಲ್ಲಿ ಸಿಲುಕಿದ್ದ…

Read More

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು…

Read More

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

ವರ್ಷಗಳ ಕಾಲ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದೀಗ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಇದಕ್ಕೆ ಕಾರಣ ಹರಾಜಿನಲ್ಲಿ ಯಾರು ಅವರನ್ನು ಖರೀದಿಸಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಆಡುತ್ತಿರುವ ವಾರ್ನರ್, ಕರಾಚಿ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಇದುವರೆಗೆ ಹತ್ತು ಪಂದ್ಯಗಳು ನಡೆದಿದ್ದು, ಕರಾಚಿ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಮಧ್ಯೆ, ಕರಾಚಿ ಕಿಂಗ್ಸ್ ನಾಯಕ ಡೇವಿಡ್…

Read More

ಬೆಂಗಳೂರಲ್ಲಿ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಜಿಬಿಎ: ಎಲ್ಲಿಂದ ಎಲ್ಲಿಗೆ ಸಂಪರ್ಕ?

ಬೆಂಗಳೂರು, ಏಪ್ರಿಲ್​​ 03: ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ಹೆಬ್ಬಾಳದಲ್ಲಿ ಎರಡು ಲೂಪ್​ಗಳನ್ನ ಅಳವಡಿಸಿರುವ ಕಾರಣಕ್ಕೆ ಇತ್ತೀಚೆಗೆ ಟ್ರಾಫಿಕ್ ಕೊಂಚ ಸುಧಾರಿಸಿದೆ. ಆದರೆ ಅಲ್ಲಿನ ಟ್ರಾಫಿಕ್ ಈಗ ಮೇಖ್ರಿ ಸರ್ಕಲ್​ಗೆ ಶಿಫ್ಟ್ ಆಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಹೆಚ್ಚಾಗಿದೆ. ಹೀಗಾಗಿ ಬಳ್ಳಾರಿ ರಸ್ತೆಯ ವೆಟರ್ನರಿ ಕಾಲೇಜು ಬಳಿಯಿಂದ ಮೇಖ್ರಿ ಸರ್ಕಲ್​​ವರೆಗೆ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದ್ದು, ಇದಕ್ಕಾಗಿ ಟೆಂಡರ್ ಕೂಡ ಆಹ್ವಾನಿಸಿದೆ. ಬರೋಬ್ಬರಿ 420 ಕೋಟಿ ರೂಪಾಯಿ ವೆಚ್ಚದಲ್ಲಿ 4…

Read More

ಡ್ರೋನ್ ದಾಳಿ ವೇಳೆ ಅಮೆರಿಕದ ಯುದ್ಧ ವಿಮಾನದಿಂದ ಹೊರಬಿದ್ದ ಪೈಲಟ್ ಇರಾನ್ ವಶದಲ್ಲಿ?

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎಫ್ -35 ಮತ್ತು ಎಫ್ -15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇರಾನ್‌ನಲ್ಲಿ (Iran War) ಅಮೆರಿಕದ ಪೈಲಟ್​ನನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಮಾಧ್ಯಮ ಇಂದು ವರದಿ ಮಾಡಿದೆ. ಆದರೆ, ಈ ಸುದ್ದಿ ನಿಜವೇ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಡಿಕ್ಕಿ ಹೊಡೆದ ಎಫ್ -35 ಯುದ್ಧ ವಿಮಾನದಿಂದ ಅಮೆರಿಕದ ಪೈಲಟ್ ನೈಋತ್ಯ ಇರಾನ್ ಕಡೆಗೆ ಜಿಗಿದಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ…

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್​ನಿಂದ ಹೈಟೆಕ್ ಟೋಲ್​ಬೂತ್; ಯುಆನ್, ಕ್ರಿಪ್ಟೋದಲ್ಲಿ ಟೋಲ್ ಕಟ್ಟಿರಿ, ಸೀಕ್ರೆಟ್ ಕೋಡ್ ಪಡೆಯಿರಿ

ನವದೆಹಲಿ, ಏಪ್ರಿಲ್ 3: ಗಲ್ಫ್ ರಾಷ್ಟ್ರಗಳಿಂದ ತೈಲ ಪೂರೈಕೆಯ ಸಮುದ್ರ ಮಾರ್ಗದಲ್ಲಿರುವ ಹಾರ್ಮುಜ್ ಜಲಸಂಧಿಗೆ (Hormuz Strait) ಇರಾನ್​ನಿಂದ ತಡೆ ಬಿದ್ದಿದೆ. ಯುಎಇ, ಸೌದಿ, ಬಹರೇನ್ ಸೇರಿದಂತೆ ಹೆಚ್ಚಿನ ಕೊಲ್ಲಿ ದೇಶಗಳು ಅಮೆರಿಕದ ಪರ ಇರುವುದರಿಂದ ಇರಾನ್ ಬಹುತೇಕ ಏಕಾಂಗಿಯಾಗಿ ಹೋರಾಡುತ್ತಿದೆ. ಹಾರ್ಮುಜ್ ಜಲಸಂಧಿಯ ನಿಯಂತ್ರಣ ಹೊಂದಿರುವ ಇರಾನ್, ಅದನ್ನೇ ತನ್ನ ಆಯುಧ ಮತ್ತು ಆದಾಯ ಮೂಲವಾಗಿ ಮಾಡಿಕೊಳ್ಳಲು ಹೊರಟಿದೆ. ಈ ಹಿಂದೆ ಬಂದ ವರದಿಯಲ್ಲಿ ತಿಳಿಸಲಾಗಿದ್ದಂತೆ ಹಾರ್ಮುಜ್ ಜಲಸಂಧಿ ಮೂಲಕ ಹಾದು ಹೋಗುವ ಹಡಗುಗಳಿಂದ ಟೋಲ್…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್​ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್​ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ…

Read More