Headlines

ಡ್ರೋನ್ ದಾಳಿ ವೇಳೆ ಅಮೆರಿಕದ ಯುದ್ಧ ವಿಮಾನದಿಂದ ಹೊರಬಿದ್ದ ಪೈಲಟ್ ಇರಾನ್ ವಶದಲ್ಲಿ?

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎಫ್ -35 ಮತ್ತು ಎಫ್ -15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇರಾನ್‌ನಲ್ಲಿ (Iran War) ಅಮೆರಿಕದ ಪೈಲಟ್​ನನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಮಾಧ್ಯಮ ಇಂದು ವರದಿ ಮಾಡಿದೆ. ಆದರೆ, ಈ ಸುದ್ದಿ ನಿಜವೇ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಐಆರ್‌ಜಿಸಿ ಏರೋಸ್ಪೇಸ್ ಫೋರ್ಸ್ ಡಿಕ್ಕಿ ಹೊಡೆದ ಎಫ್ -35 ಯುದ್ಧ ವಿಮಾನದಿಂದ ಅಮೆರಿಕದ ಪೈಲಟ್ ನೈಋತ್ಯ ಇರಾನ್ ಕಡೆಗೆ ಜಿಗಿದಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ…

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್​ನಿಂದ ಹೈಟೆಕ್ ಟೋಲ್​ಬೂತ್; ಯುಆನ್, ಕ್ರಿಪ್ಟೋದಲ್ಲಿ ಟೋಲ್ ಕಟ್ಟಿರಿ, ಸೀಕ್ರೆಟ್ ಕೋಡ್ ಪಡೆಯಿರಿ

ನವದೆಹಲಿ, ಏಪ್ರಿಲ್ 3: ಗಲ್ಫ್ ರಾಷ್ಟ್ರಗಳಿಂದ ತೈಲ ಪೂರೈಕೆಯ ಸಮುದ್ರ ಮಾರ್ಗದಲ್ಲಿರುವ ಹಾರ್ಮುಜ್ ಜಲಸಂಧಿಗೆ (Hormuz Strait) ಇರಾನ್​ನಿಂದ ತಡೆ ಬಿದ್ದಿದೆ. ಯುಎಇ, ಸೌದಿ, ಬಹರೇನ್ ಸೇರಿದಂತೆ ಹೆಚ್ಚಿನ ಕೊಲ್ಲಿ ದೇಶಗಳು ಅಮೆರಿಕದ ಪರ ಇರುವುದರಿಂದ ಇರಾನ್ ಬಹುತೇಕ ಏಕಾಂಗಿಯಾಗಿ ಹೋರಾಡುತ್ತಿದೆ. ಹಾರ್ಮುಜ್ ಜಲಸಂಧಿಯ ನಿಯಂತ್ರಣ ಹೊಂದಿರುವ ಇರಾನ್, ಅದನ್ನೇ ತನ್ನ ಆಯುಧ ಮತ್ತು ಆದಾಯ ಮೂಲವಾಗಿ ಮಾಡಿಕೊಳ್ಳಲು ಹೊರಟಿದೆ. ಈ ಹಿಂದೆ ಬಂದ ವರದಿಯಲ್ಲಿ ತಿಳಿಸಲಾಗಿದ್ದಂತೆ ಹಾರ್ಮುಜ್ ಜಲಸಂಧಿ ಮೂಲಕ ಹಾದು ಹೋಗುವ ಹಡಗುಗಳಿಂದ ಟೋಲ್…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್​ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್​ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ…

Read More

GLP-1 ಔಷಧಿ ನಿಜವಾಗಿಯೂ ಬೊಜ್ಜು ಕಡಿಮೆ ಮಾಡುತ್ತದೆಯೇ? ಕೇಂದ್ರ ಸರ್ಕಾರ ಇದಕ್ಕೆ ನಿಯಂತ್ರಣ ಹೇರಿರುವುದಕ್ಕೆ ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಬೊಜ್ಜು (Obesity) ಒಂದು ಪ್ರಮುಖ ಜಾಗತಿಕ ಆರೋಗ್ಯ ಸವಾಲಾಗುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇನ್ನು, ಬೊಜ್ಜು ಕಡಿಮೆ ಮಾಡಲು ಕೆಲವರು ಸಾಮಾನ್ಯವಾಗಿ ಸೇವಿಸುವ ಕೆಲವು ಔಷಧಿಗಳು ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಅದರಲ್ಲಿ GLP-1 ರಿಸೆಪ್ಟರ್ ಅಗೋನಿಸ್ಟ್‌ಗಳು ಎಂಬ ಔಷಧಿ ಕೂಡ ಒಂದು. ಈ ಔಷಧಿಯನ್ನು ಬಳಸುವವರಿಗೆ ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಭಾರತ ಸರ್ಕಾರವು ಇತ್ತೀಚೆಗೆ GLP-1 (Glucagon-Like Peptide-1 agonist) ಔಷಧಿಗಳ ಬಳಕೆ,…

Read More

ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ

ಕೊಡಗು, ಏಪ್ರಿಲ್​ 03: ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ (35) ನಾಪತ್ತೆ ಪ್ರಕರಣಕ್ಕೆ (Missing Case)  ಸಂಬಂಧಿಸಿದಂತೆ 24 ಗಂಟೆ ಕಳೆದರು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಶ್ವಾನಕ್ಕೂ ಯಾವುದೇ ಸುಳಿವು ಸಿಕ್ಕಿಲ್ಲ. ಅರಣ್ಯ ಇಲಾಖೆಯ 60ಕ್ಕೂ ಅಧಿಕ‌ ಸಿಬ್ಬಂದಿ ಸೇರಿದಂತೆ ಪೊಲೀಸರು ತಡಿಯಂಡ ಬೆಟ್ಟ ಪ್ರದೇಶದಲ್ಲಿ ವ್ಯಾಪಕ‌ ಶೋಧ ನಡೆಸಿದ್ದಾರೆ. ದಾರಿ ತಪ್ಪುವಂತಹ ಮಾರ್ಗವಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಪ್ರಕರಣ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ತಲೆನೋವಾಗಿದೆ. ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಿನ್ನೆ ಕೊಡಗು…

Read More

ಭಾರತಕ್ಕೆ ಬರುತ್ತಿದ್ದ ಇರಾನ್​ನ ತೈಲ ತುಂಬಿದ ಹಡಗು ಇದ್ದಕ್ಕಿದ್ದಂತೆ ಚೀನಾದ ಕಡೆ ತಿರುಗಿದ್ದೇಕೆ?

ನವದೆಹಲಿ, ಏಪ್ರಿಲ್ 3: ಭಾರತಕ್ಕೆ ಇರಾನಿನ ಕಚ್ಚಾ ತೈಲವನ್ನು ಸಾಗಿಸಬೇಕಾಗಿದ್ದ ತೈಲ ಟ್ಯಾಂಕರ್ (Oil Tanker) ಸಮುದ್ರದ ಮಧ್ಯೆ ಮಾರ್ಗವನ್ನು ಬದಲಾಯಿಸಿ ಚೀನಾದ ಕಡೆಗೆ ಸಾಗುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಭಾರತ ಇರಾನ್​ನಿಂದ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿತ್ತು. ಆದರೆ, ಆ ಟ್ಯಾಂಕರ್ ಗುಜರಾತ್​ ಬಂದರಿಗೆ ಆಗಮಿಸುವ ಬದಲು ಚೀನಾದ ಕಡೆ ತೆರಳುತ್ತಿದೆ. ಕಳೆದ 3 ದಿನಗಳಿಂದ ಗುಜರಾತ್‌ನ ವಡಿನಾರ್‌ಗೆ ತೆರಳುತ್ತಿದ್ದ ಇರಾನಿನ ಕಚ್ಚಾ ತೈಲದ ಹಡಗು ಪಿಂಗ್ ಶುನ್ ಭಾರತದ ಬದಲಾಗಿ ಚೀನಾಕ್ಕೆ…

Read More

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ…

Read More

ಮೂರನೇ ಮಗುವೂ ಹೆಣ್ಣಾಗುತ್ತದೆಂದು ಹೆದರಿ ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

ಹೈದರಾಬಾದ್, ಏಪ್ರಿಲ್ 3: ತೆಲಂಗಾಣದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮತ್ತೊಂದು ಬಾರಿ ಗರ್ಭಿಣಿಯಾಗಿದ್ದ (Pregnant Death) ಹೆಂಡತಿ ಈ ಬಾರಿಯೂ ಹೆಣ್ಣುಮಗುವನ್ನೇ ಹೆರುತ್ತಾಳೆ ಎಂಬ ಭಯದಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ, ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನೂ ನಂಬಿಸಿದ್ದಾನೆ. ಆದರೂ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಆತ ಸಿಕ್ಕಿಹಾಕಿಕೊಂಡಿದ್ದಾನೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಈ…

Read More

ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು​

ದೇವನಹಳ್ಳಿ, ಏಪ್ರಿಲ್​​ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ…

Read More