ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಎಂಬುದರ ಜೊತೆಗೆ ದಿನಕ್ಕೆ ಒಂದರಂತೆ ಕ್ರಿಸ್ಟಲ್ ಗಳನ್ನು ಪರಿಚಯಿಸುವ ಪ್ರಯತ್ನ ಇಲ್ಲಿದೆ. ಅದರ ಮೊದಲ ಪ್ರಯತ್ನ ಸನ್ ಸ್ಟೋನ್. ಹಿಂಜರಿಕೆ ಕಾಡುತ್ತಿದೆಯಾ, ಗೊತ್ತಿರುವಂಥ ವಿಷಯಗಳನ್ನೇ ಆತ್ಮವಿಶ್ವಾಸದಿಂದ ಹೇಳುವುದು ಕಷ್ಟ ಆಗುತ್ತಿದೆಯಾ? ಈ ಸನ್ ಸ್ಟೋನ್ ಬಳಸಿದ್ದಲ್ಲಿ ನಾಯಕತ್ವ ಗುಣ ನಿಮ್ಮಲ್ಲಿ ಮತ್ತೂ ಹೆಚ್ಚಾಗುತ್ತದೆ. ಹಿಂಜರಿಕೆ, ಆತ್ಮವಿಶ್ವಾಸದ ಕೊರತೆ ಇವೆಲ್ಲ ದೂರವಾಗುತ್ತದೆ.
ನೀವು ಹೇಳಿದ್ದೆಲ್ಲ ಸರಿಯಿದೆ, ಅದೇ ರೀತಿ ಮುಂದುವರಿಯೋಣ ಎಂಬ ಉತ್ಸಾಹದ ಮಾತುಗಳನ್ನು ಆಡುತ್ತಿದ್ದವರು ಏಕಾಏಕಿ ತಮ್ಮ ಧ್ವನಿಯನ್ನೇ ಬದಲಿಸಿ, ಉಲ್ಟಾ ಹೇಳುವುದಕ್ಕೆ ಶುರು ಮಾಡ್ತಾರೆ. ದೊಡ್ಡ ಮೊತ್ತದ ಹಣವನ್ನು ಕೈಯಿಂದ ಹಾಕಿ, ಶುರು ಮಾಡಬೇಕಾದ ಆರ್ಡರ್ ಗಳು ಇದ್ದಲ್ಲಿ ಒಂದಕ್ಕೆ ನಾಲ್ಕು ಬಾರಿಗೆ ಆಲೋಚಿಸಿ ಮುಂದಕ್ಕೆ ಹೆಜ್ಜೆ ಇಡಿ. ನಂಬಿಕೆ ಬೇಕು ನಿಜ, ಆದರೆ ಅತಿಯಾದ ನಂಬಿಕೆ ಹಣಕಾಸಿಗೆ ತೊಡಕು ಎಂಬುದು ನೆನಪಲ್ಲಿರಲಿ.
ನಿಮ್ಮ ಈ ಹಿಂದಿನ ಯಾವುದೇ ಪ್ರಸ್ತಾವನೆ ಈ ದಿನ ಜೀವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನೇನು ಅದು ವಾಪಸ್ ಬರುವ ಹಾಗೆ ಕಾಣಲ್ಲ ಎಂದು ಅಸೆಯೇ ಬಿಟ್ಟಿದ್ದ ಹಣ ಕೂಡ ಹಿಂತಿರುಗಿ ಬರುವ ಅವಕಾಶಗಳಿವೆ. ನಿಮ್ಮ ಜೊತೆಗೆ ಇದ್ದು ಕೂಡ ಉದ್ಯೋಗ- ವ್ಯವಹಾರದಲ್ಲಿ ಸಹಕಾರ ನೀಡದಿದ್ದವರು ಸಹ ಈಗ ಪೂರ್ಣ ಮನಸ್ಸಿನಿಂದ ನಿಮ್ಮ ಜೊತೆ ಇರುವುದಾಗಿ ಹೇಳಲಿದ್ದಾರೆ. ಕಡಿಮೆ ಎಂದುಕೊಂಡಂಥ ಕೆಲಸಗಳೇ ಒಳ್ಳೆ ಆದಾಯ ತಂದುಕೊಡುತ್ತವೆ.
ಅಯ್ಯೋ ಮಾತನಾಡಿ, ಸಿಕ್ಕಿಹಾಕಿಕೊಂಡು ಬಿಟ್ಟೆನಲ್ಲ ಎಂಬ ಪರಿಸ್ಥಿತಿ ಈ ದಿನ ನಿಮ್ಮದಾಗಲಿದೆ. ಯಾವುದಕ್ಕೂ ಇರಲಿ ಎಂದುಕೊಂಡು ಎಮರ್ಜೆನ್ಸಿ ಫಂಡ್ ಎಂದು ನೀವಿಟ್ಟುಕೊಂಡಿದ್ದ ಹಣವೇ ಸಹಾಯಕ್ಕೆ ಬರಲಿದೆ. ಎಲ್ಲರನ್ನೂ ಒಂದೇ ರೀತಿ ಕಾಣಬೇಕು, ಅವರಿಗೆ ಬೇಕಾದ ಕೆಲಸ ಮಾಡಿಕೊಡಬೇಕು ಎಂಬ ನಿಮ್ಮ ಉದ್ದೇಶ ಈಡೇರುವ ಸಾಧ್ಯತೆ ಈ ದಿನ ಇದೆ.
ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು.
ವೃಷಭ ರಾಶಿ:
ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮೊಳಗಿರುವ ತರತಮಭಾವವನ್ನು ಪ್ರಕಟಿಸಲಾರಿರಿ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು.
ಮಿಥುನ ರಾಶಿ:
ಇಂದು ನಿಮ್ಮ ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಪ್ರಖ್ಯಾತ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸುವಿರಿ.
ಕರ್ಕಾಟಕ ರಾಶಿ:
ಮನೋರಂಜನೆಯಲ್ಲಿ ಪಾಲ್ಗೊಂಡು ಮನಸ್ಸು ಹಗುರಾಗುವುದು. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ದೊಡ್ಡ ಅಪಾಯದಿಂದ ತಪ್ಪಿಸಿಕೊಳ್ಲಕುವುರಿ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ವ್ಯಾಪಾರದಲ್ಲಿ ಪೂರೈಕೆ ಮಾಡುವವರಿಗೆ ಹೆಚ್ಚು ಬೇಡಿಕೆ ಕಾಣಿಸುವುದು. ಉದ್ಯಮದ ಹೊಸ ಕೇಂದ್ರವನ್ನು ನಿರ್ಮಿಸುವ ಸಾಧ್ಯತೆ ಇದೆ.
ಸಿಂಹ ರಾಶಿ:
ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ನಿಮ್ಮ ಮಾತುಗಳು ಅರಣ್ಯರೋದನದಂತೆ ನಿಷ್ಪ್ರಯೋಜಕವಾದೀತು. ಹಿತಶತ್ರುಗಳ ತಂತ್ರಕ್ಕೆ ಬಲಿಯಾಗಿ ಬೇಸರಗೊಳ್ಳುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಎತ್ತರದ ಪ್ರದೇಶವನ್ನು ಏರುವ ಸಾಹಸ ಮಾಡುವಿರಿ. ಅಧಿಕಾರಿಗಳು ವೃತ್ತಿಯನ್ನು ಸರಿಯಾಗಿ ನಿರ್ವಹಿಸುವರು. ಅಜ್ಞಾನವನ್ನು ಯಾರಿಂದಲಾದರೂ ದೂರಮಾಡಿಕೊಳ್ಳಿ.
ಕನ್ಯಾ ರಾಶಿ:
ರಾಜಕಾರಣದಿಂದ ನಿಮ್ಮ ಯಶಸ್ಸಿಗೆ ತೊಂದರೆ. ಸಮ್ಮಾನಗಳನ್ನು ಪಡೆಯುವ ಆಸೆ ಇದ್ದರೂ ಯೋಗವು ಬೇಕಾಗುತ್ತದೆ. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪರೋಕ್ಷವಾಗಿಯಾದರೂ ಹಿರಿಯರ ಆಶೀರ್ವಾದ ಪಡೆಯಿರಿ. ಆಗದವರು ನಿಮ್ಮ ರಹಸ್ಯ ವಿಚಾರಗಳನ್ನು ತಿಳಿದುಕೊಳ್ಳಲು ಇಚ್ಛಿಸುವರು. ನಿರುದ್ಯೋಗದ ಸಮಸ್ಯೆ ದೂರಾಗುವುದು.
ತುಲಾ ರಾಶಿ:
ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ವಿದೇಶದ ವ್ಯಕ್ತಿಗಳ ಸಂಪರ್ಕ ಉಂಟಾಗುವುದು. ನಿರಪೇಕ್ಷೆಯಿಂದ ಕೆಲಸ ಮಾಡಿದರೆ, ಅಧಿಕ ಸಂತೋಷ. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಕಠೋರ ಮಾತುಗಳಿಂದ ನಿಮ್ಮ ವಲಯ ಖಾಲಿಯಾಗಿ, ಒಂಟಿಯಾಗುವಿರಿ. ಯೌವನಾವಸ್ಥೆಯಲ್ಲಿ ಇರುವವರಿಗೆ ಯಾರನ್ನಾದರೂ ಪ್ರೀತಿಸುವ ಇಚ್ಛೆಯು ಬರಬಹುದು. ಸಹೋದರರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಜೀವನದ ಬಗ್ಗೆ ನಕಾರಾತ್ಮಕ ಅಂಶಗಳೇ ಕಾಣಿಸುವುದು.
ವೃಶ್ಚಿಕ ರಾಶಿ:
ನಿಮ್ಮ ಯೋಜನೆಗೆ ಯಾವ ಸ್ಪಂದನ ಇಲ್ಲದೇ ಅದು ಹಾಳಾಗುವುದು. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಯಾರದೋ ದಾಳವಾಗಿ ಇಂದು ಕೆಲಸವನ್ನು ಮಾಡಬೇಕಾಗಬಹುದು. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಎಲ್ಲ ತಪ್ಪುಗಳಿಗೂ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವಿರಿ.
ಧನು ರಾಶಿ:
ಶತ್ರುಗಳಿಂದ ನಿಮಗೆ ವಂಚನೆಯಾಗಿದ್ದು ವಿಳಂಬವಾಗಿ ಗೊತ್ತಾಗುವುದು. ಮಿತ್ರರಿಂದ ನಿಮ್ಮ ಇಚ್ಛೆಯು ಪೂರ್ಣವಾಗುವುದು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಬಹಳ ದಿನಗಳ ಅನಂತರ ಬಂಧುಗಳ ಮನೆಗೆ ಹೋಗಲಿದ್ದೀರಿ. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ.
ಮಕರ ರಾಶಿ:
ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಬಹಳ ದಿನಗಳ ಅನಂತರ ಸಮಾಜಮುಖಿಯಾಗಿ ಕಾಣಿಸುವಿರಿ. ನಿಮ್ಮ ಪಾಲಿಗೆ ಬಂದಿದ್ದನ್ನು ಬಿಟ್ಟುಕೊಡಲಾರಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ.
ಕುಂಭ ರಾಶಿ:
ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಸುಂದರ ಸ್ಥಳಗಳಿಗೆ ಹೋಗಿ ಮನಸ್ಸು ಹಗುರಾಗುವುದು. ಮನಸ್ಸಿನ ಬಂಧಗಳು ಸಡಿಲಾಗುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಪತ್ರ ವ್ಯವಹಾರಗಳಿಲ್ಲದೇ ಯಾವದನ್ನೂ ಒಪ್ಪಿಕೊಳ್ಳುವುದು ಬೇಡ.
ಮೀನ ರಾಶಿ:
ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಪ್ರಯತ್ನವೇ ಇಲ್ಲದೇ ಫಲವನ್ನು ಬಯಸುವುದು ಸರಿಯಲ್ಲ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವರು.
ಜನವರಿ 29, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಬ್ರಹ್ಮ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 21 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:04 – 15:29, ಯಮಗಂಡ ಕಾಲ 06:54- 08:20, ಗುಳಿಕ ಕಾಲ 09:46 – 11:12
ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಸಾಯಿ ಪಲ್ಲವಿ, ಸಿನಿಮಾ ಮಾತ್ರವಲ್ಲದೆ ಪರದೆಯ ಹಿಂದೆಯೂ ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ, ಯಾವುದೇ ಸಿನಿಮಾನಲ್ಲಿ ನಟಿಸಲು ಸಿನಿಮಾದ ಕತೆಯೇ ಮುಖ್ಯ, ಸ್ಟಾರ್ ನಟ ಇದ್ದಾರೆಂಬ ಕಾರಣಕ್ಕೆ ಸಿನಿಮಾನಲ್ಲಿ ನಟಿಸುವುದಿಲ್ಲ ಅವರು. ಇದೀಗ ಅವರು ಪ್ರಭಾಸ್ ಜೊತೆಗೆ ನಟಿಸುತ್ತಿದ್ದಾರೆ. ಆದರೆ ಪ್ರಭಾಸ್ಗೆ ಜೋಡಿ ಆಗಿ ಅಲ್ಲ.
ಹೌದು, ಪ್ರಭಾಸ್ ಜೊತೆಗೆ ನಾಯಕಿಯಾಗಿ ನಟಿಸಲು ಭಾರತದ ಟಾಪ್ ನಟಿಯರೇ ಸಾಲು ಗಟ್ಟಿ ನಿಂತಿದ್ದಾರೆ. ಆದರೆ ಸಾಯಿ ಪಲ್ಲವಿ ಆ ಸಾಲಿನಲ್ಲಿಲ್ಲ. ಆದರೂ ಅವರಿಗೆ ಪ್ರಭಾಸ್ ಸಿನಿಮಾನಲ್ಲಿ ನಟಿಸುವ ಅವಕಾಶ ದೊರೆತಿದೆ. ವಿಶೇಷವೆಂದರೆ ಇಬ್ಬರೂ ಒಟ್ಟಿಗೆ ನಟಿಸಲಿರುವ ಈ ಸಿನಿಮಾನಲ್ಲಿ ಪ್ರಭಾಸ್ ಹಾಗೂ ಸಾಯಿ ಪಲ್ಲವಿ ಜೋಡಿಯಾಗಿ ನಟಿಸುತ್ತಿಲ್ಲ.
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ಸಿನಿಮಾ ಪ್ರೇಮಿಗಳಿಗೆ ಗೊತ್ತೇ ಇದೆ. ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಶೀಘ್ರ ಆರಂಭ ಆಗಲಿದೆ. ಆದರೆ ಸಿನಿಮಾದ ಮೊದಲ ಭಾಗದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ ಎರಡನೇ ಭಾಗದಿಂದ ಹೊರಗೆ ನಡೆದಿದ್ದಾರೆ, ಅಥವಾ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ. ಮೊದಲ ಭಾಗದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದ ಪಾತ್ರದಲ್ಲಿ ಈಗ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಕೆಲಸದ ಅವಧಿಗೆ ಸಂಬಂಧಿಸಿದಂತೆ ನಟಿ ದೀಪಿಕಾ ಪಡುಕೋಣೆ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾ ತಂಡದ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು ಇದೇ ಕಾರಣಕ್ಕೆ ದೀಪಿಕಾರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ. ಇದೀಗ ದೀಪಿಕಾ ಪಡುಕೋಣೆ ಸ್ಥಾನವನ್ನು ಸಾಯಿ ಪಲ್ಲವಿ ತುಂಬಲಿದ್ದಾರೆ ಎನ್ನಲಾಗುತ್ತಿದೆ. ‘ಕಲ್ಕಿ 2898 ಎಡಿ’ ಸಿನಿಮಾದ ನಿರ್ದೇಶಕ ನಾಗ್ ಅಶ್ವಿನಿ ಈಗಾಗಲೇ ಸಾಯಿ ಪಲ್ಲವಿ ಜೊತೆ ಮಾತುಕತೆ ನಡೆಸಿದ್ದು ನಟಿ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನು ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಹಲವು ದೊಡ್ಡ ಕಲಾವಿದರು ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಮೊದಲ ಭಾಗ 2024ರಲ್ಲಿ ಬಿಡುಗಡೆ ಆಗಿತ್ತು. ಇದೀಗ ಎರಡನೇ ಭಾಗದ ಚಿತ್ರೀಕರಣ ಇದೇ ವರ್ಷ ಪ್ರಾರಂಭ ಆಗಲಿದೆ.
ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ.
ಕಳೆದ ವರ್ಷದ ಬಜೆಟ್ನಲ್ಲಿ (2025ರದ್ದು) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇನ್ಕಮ್ ಟ್ಯಾಕ್ಸ್ ವಿಚಾರದಲ್ಲಿ ಭರಪೂರ ಕೊಡುಗೆಗಳನ್ನು ಜನಸಾಮಾನ್ಯರಿಗೆ ಕೊಟ್ಟಿದ್ದರು. ಸ್ಲ್ಯಾಬ್ ದರಗಳು ಬದಲಾದವು, ಸರಳಗೊಂಡವು. 12 ಲಕ್ಷ ರೂ ಆದಾಯ ಇದ್ದವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಯಿತು. 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಒಳಗೊಂಡರೆ 12,75,000 ರೂ ವಾರ್ಷಿಕ ಆದಾಯ ಇರುವವರು ಇನ್ಕಮ್ ಟ್ಯಾಕ್ಸ್ ಬಾಧ್ಯತೆಯನ್ನೇ ಹೊಂದಿರುವುದಿಲ್ಲ.
ಭಾರತದಲ್ಲಿ ಹೆಚ್ಚಿನ ಆದಾಯ ತೆರಿಗೆ ಪಾವತಿದಾರರ ವಾರ್ಷಿಕ ಆದಾಯ 12.75 ಲಕ್ಷ ರೂ ಮಿತಿಯೊಳಗೆಯೇ ಇದೆ. ಹೀಗಾಗಿ, ಕಳೆದ ಬಾರಿಯ ಬಜೆಟ್ನಿಂದ ಕೋಟ್ಯಂತರ ಜನರು ಟ್ಯಾಕ್ಸ್ ರಿಲೀಫ್ ಪಡೆದಿದ್ದರು. ಆದರೆ, ಈ ಟ್ಯಾಕ್ಸ್ ರಿಲೀಫ್ ಕೊಡಲಾಗಿದ್ದು ಹೊಸ ಟ್ಯಾಕ್ಸ್ ರೆಜೀಮ್ನಲ್ಲಿ ಮಾತ್ರ. ಹಳೆಯ ಟ್ಯಾಕ್ಸ್ ರೆಜಿಮ್ ಹಾಗೆಯೇ ಇದೆ. ಇದು ಗೊಂದಲ ತಂದಿರುವ ಸಂಗತಿ.
ಈ ಬಾರಿಯ ಬಜೆಟ್ನಲ್ಲಿ ಹಳೆಯ ಟ್ಯಾಕ್ಸ್ ರೆಜಿಮ್ ವಿಚಾರದಲ್ಲಿ ಇರುವ ಗೊಂದಲವನ್ನು ನಿವಾರಿಸುವ ಪ್ರಯತ್ನವಾಗುತ್ತಾ ಎಂಬುದು ಪ್ರಶ್ನೆಯಾಗಿದೆ. ಹೊಸ ಟ್ಯಾಕ್ಸ್ ರೆಜೀಮ್ನಲ್ಲಿ ಸಿಕ್ಕಾಪಟ್ಟೆ ಟ್ಯಾಕ್ಸ್ ರಿಲೀಫ್ ಕೊಡಲಾಗಿದ್ದರೂ, ಹಳೆಯ ಟ್ಯಾಕ್ಸ್ ರೆಜಿಮ್ನ ಆಕರ್ಷಣೆ ಉಳಿದಿರುವುದು ಅದರ ಡಿಡಕ್ಷನ್ ಅವಕಾಶ.
ಓಲ್ಡ್ ಟ್ಯಾಕ್ಸ್ ರೆಜೀಮ್ನಲ್ಲಿ ಸುಮಾರು 3 ಲಕ್ಷ ರೂವರೆಗೆ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇದೆ. ಜನರು ಪಿಪಿಎಫ್ ಇತ್ಯಾದಿಯಲ್ಲಿ ಹೂಡಿಕೆ ಮಾಡಿ ಅದರಿಂದ ಟ್ಯಾಕ್ಸ್ ಡಿಡಕ್ಷನ್ ಪಡೆಯಬಹುದು. ಹೊಸ ಟ್ಯಾಕ್ಸ್ ಸಿಸ್ಟಂನಲ್ಲಿ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಬಿಟ್ಟರೆ ಬೇರೆ ಡಿಡಕ್ಷನ್ ಸೌಲಭ್ಯ ಇಲ್ಲ. ಹೀಗಾಗಿ, ಈಗಲೂ ಕೂಡ ಬಹಳ ಜನರು ಹಳೆಯ ಟ್ಯಾಕ್ಸ್ ರೆಜಿಮ್ ಅನ್ನೇ ಬಳಸುತ್ತಿರುವುದುಂಟು.
ಈ ಬಾರಿಯ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಳೆಯ ಟ್ಯಾಕ್ಸ್ ಸಿಸ್ಟಂ ಅನ್ನು ನಿಲ್ಲಿಸುವ ನಿರ್ಧಾರ ಮಾಡುತ್ತಾರಾ? ಹೊಸ ಟ್ಯಾಕ್ಸ್ ಸಿಸ್ಟಂನಲ್ಲಿ ಇನ್ನಷ್ಟು ಡಿಡಕ್ಷನ್ ಆಯ್ಕೆಗಳನ್ನು ಕೊಟ್ಟು ಹಳೆಯ ರೆಜಿಮ್ ಅನ್ನು ನಿಲ್ಲಿಸಿದರೂ ಅಚ್ಚರಿ ಇರುವುದಿಲ್ಲ.
ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು, ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ
ಫೆಬ್ರವರಿ 01- ವೇದವ್ಯಾಸ ಪೂಜೆ
ಫೆಬ್ರವರಿ 02- ಮಾಘ ಕೃಷ್ಣ ಪಕ್ಷ
ಫೆಬ್ರವರಿ 04- ಶಬೀ ಬರಾತ್
ಫೆಬ್ರವರಿ 05- ಸಂಕಷ್ಟಹರ ಚತುರ್ಥಿ
ಫೆಬ್ರವರಿ 06- ಮಹಾನಕ್ಷತ್ರ ಧನಿಷ್ಠಾ
ಫೆಬ್ರವರಿ 09- ಸೀತಾ ಜಯಂತಿ
ಫೆಬ್ರವರಿ 12-ಕುಂಭ ಸಂಕ್ರಮಣ
ಫೆಬ್ರವರಿ 13- ಸರ್ವೈಕಾದಶಿ ವಿಜಯಾ
ಫೆಬ್ರವರಿ 14- ಪ್ರದೋಷ
ಫೆಬ್ರವರಿ 15- ಮಹಾಶಿವರಾತ್ರಿ
ಫೆಬ್ರವರಿ 17 – ಅಮಾವಾಸ್ಯಾ
ಫೆಬ್ರವರಿ 18- ಫಾಲ್ಗುನ ಶುಕ್ಲ ಪಕ್ಷ
ಫೆಬ್ರವರಿ 19- ರಾಮಕೃಷ್ಣ ಪರಮ ಹಂಸ ಜನ್ಮದಿನ
ಫೆಬ್ರವರಿ 19- ರಂಜಾನ್ ಪ್ರಾರಂಭ
ಫೆಬ್ರವರಿ 24- ಶ್ರೀ ರಾಘವೇಂದ್ರ ಜಯಂತಿ
ಫೆಬ್ರವರಿ 27- ಸರ್ವೈಕಾದಶಿ ಆಮಲಕಿ
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಧಾರವಾಡ,(ಜನವರಿ 28): ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿರುವ 215 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆಲ್ರೌಂಡರ್ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ತಂಡವು 82 ರನ್ಗಳಿಗೆ ಪ್ರಮುಖ 5 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಶಿವಂ ದುಬೆ ಕಿವೀಸ್ ಬೌಲರ್ಗಳ ಎದುರು ಸಿಕ್ಸರ್ ಹಾಗೂ ಬೌಂಡರಿಗಳ ಮಳೆಗರೆದರು.
ಹಾರ್ದಿಕ್ ಪಾಂಡ್ಯ ಔಟಾದ ಬಳಿಕ ಕ್ರೀಸ್ಗೆ ಬಂದ ದುಬೆ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್ಗಟ್ಟುವ ಮೂಲಕ ಸ್ಫೋಟಕ ಆರಂಭ ಪಡೆದರು. ಆ ಬಳಿಕವೂ ತನ್ನ ಹೊಡಿಬಡಿ ಆಟ ಮುಂದುವರೆಸಿದ ದುಬೆ, ಸೋಧಿ ಬೌಲ್ ಮಾಡಿದ ಒಂದೇ ಓವರ್ನಲ್ಲಿ ಬರೋಬ್ಬರಿ 29 ರನ್ ಕಲೆಹಾಕಿದರು. ಈ ಓವರ್ನಲ್ಲಿ ದುಬೆ 3 ಸಿಕ್ಸರ್ ಹಾಗೂ 2 ಬೌಂಡರಿಗಳನ್ನು ಬಾರಿಸಿದರು. ಮುಂದಿನ ಓವರ್ನಲ್ಲಿ 2 ಸಿಕ್ಸರ್ಗಳನ್ನು ಬಾರಿಸಿದ ದುಬೆ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.
ಇದರೊಂದಿಗೆ ದುಬೆ ನ್ಯೂಜಿಲೆಂಡ್ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಭಾರತದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದರು. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಭಿಷೇಕ್ ಶರ್ಮಾ ಇದೇ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ಇನ್ನು ಈ ಪಂದ್ಯದಲ್ಲಿ ಏಕಾಂಗಿಯಾಗಿ ನಿಂತು ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದ ದುಬೆ ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್ಗೆ ಬಲಿಯಾದರು. ಅಂತಿಮವಾಗಿ ದುಬೆ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 65 ರನ್ ಬಾರಿಸಿದರು.
ಯದುವೀರ್ ಒಡೆಯರ್ ಅವರು ‘ತ್ರಿಕಾರಂ’ (Trikaaram) ಸಿನಿಮಾದ ಮೇಕಿಂಗ್ ದೃಶ್ಯಗಳನ್ನು ಒಳಗೊಂಡ ಟೈಟಲ್ ಸಾಂಗ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು..’ ಎಂದು ಆರಂಭ ಆಗುವ ಹಾಡಿಗೆ ಭರ್ಜರಿ ಚೇತನ್ಕುಮಾರ್ ಅವರು ಸಾಹಿತ್ಯ ನರೆದಿದ್ದಾರೆ. ಶಶಾಂಕ್ ಶೇಷಗಿರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಹರ್ಷವರ್ಧನ್ (Harshavardhan) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
‘ತ್ರಿಕಾರಂ’ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್ ಲೈನ್ ಇದೆ. ಹೊಸದುರ್ಗದ ಜಿ. ಗಣೇಶ್ ಮೂರ್ತಿ ಅವರು ‘ಸದ್ಗುರು ಸಿನಿ ಪ್ರೊಡಕ್ಷನ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನಿರ್ಮಾಣ ಮಾಡುವುದು ಜೊತೆಗೆ ವಿಲನ್ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ಅಜ್ಜಂಪುರದ ದಿಲೀಪ್ ಕುಮಾರ್ ಜೆ.ಆರ್. ಅವರು ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.
ಈಗ ಬಿಡುಗಡೆ ಆಗಿರುವ ಈ ಹಾಡಿನ ಸಾಹಿತ್ಯ ಅರ್ಥಪೂರ್ಣವಾಗಿದೆ. ಆ ಮೂಲಕ ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದೆ. ನಾಯಕ ಎದುರಾಳಿಗಳ ಎದುರು ಸಿಡಿದೇಳುವಾಗ ಬರುವ ಹಾಡು ಇದಾಗಿದೆ ಎಂದು ಚಿತ್ರತಂಡ ಹೇಳಿದೆ. ಹಾಡು ನೋಡಿದ ಸಿನಿಪ್ರಿಯರು ಚಿತ್ರದ ರಿಲೀಸ್ ದಿನಾಂಕ ಯಾವಾಗ ಎಂದು ಕೇಳುತ್ತಿದ್ದಾರೆ. ಈ ವರ್ಷವೇ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.
‘ತ್ರಿಕಾರಂ’ ಟೈಟಲ್ ಸಾಂಗ್:
‘ತ್ರಿಕಾರಂ’ ಸಿನಿಮಾದಲ್ಲಿ ಬೆಂಗಳೂರಿನ ಹರ್ಷವರ್ಧನ್ ಅವರು ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿಶ್ವಿತಾ ಶೆಟ್ಟಿ ಜೋಡಿ ಆಗಿದ್ದಾರೆ. ನಾಗೇಂದ್ರ ಅರಸ್, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಹೊನ್ನಾಳಿ ಯಾಸಿನ್ ಅವರು ‘ತ್ರಿಕಾರಂ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಸತೀಶ್ ಚಂದ್ರಯ್ಯ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಹೈಟ್ ಮಂಜು ಮತ್ತು ಕಂಬಿ ರಾಜ್ ಅವರ ನ್ಯೃತ್ಯ ನಿರ್ದೇಶನ ಈ ಸಿನಿಮಾಗಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಮಾರಿ ಕಣಿವೆ, ಸಾಣೆಹಳ್ಳಿ, ದಾವಣಗೆರೆ, ಸಿರಾ, ಮೈಸೂರಿನಲ್ಲಿ ಶೂಟಿಂಗ್ ಮಾಡಲಾಗಿದೆ. 50 ದಿನಗಳ ಚಿತ್ರೀಕರಣ ನಡೆದಿದೆ.
ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 215 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 165 ರನ್ಗಳಿಗೆ ಆಲೌಟ್ ಆಗುವ ಮೂಲಕ 50 ರನ್ಗಳಿಂದ ಸೋಲೊಪ್ಪಿಕೊಂಡಿತು. ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಶಿವಂ ದುಬೆ (Shivam Dube) 23 ಎಸೆತಗಳಲ್ಲಿ 65 ರನ್ ಬಾರಿಸುವ ಮೂಲಕ ಎದುರಾಳಿ ತಂಡದಲ್ಲಿ ಸೋಲಿನ ಭಯ ಹುಟ್ಟಿಸಿದ್ದರು. ಆದರೆ ದುರಾದೃಷ್ಟಕರ ರೀತಿಯಲ್ಲಿ ರನೌಟ್ಗೆ ಬಲಿಯಾದರು.
215 ರನ್ ಕಲೆಹಾಕಿದ ನ್ಯೂಜಿಲೆಂಡ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ಗಳಲ್ಲಿ 215 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಟಿಮ್ ಸೀಫರ್ಟ್ 36 ಎಸೆತಗಳಲ್ಲಿ 62 ರನ್ ಗಳಿಸಿದರೆ, ಡೆವೊನ್ ಕಾನ್ವೇ 23 ಎಸೆತಗಳಲ್ಲಿ 44 ರನ್ ಗಳಿಸಿ ಉಪಯುಕ್ತ ಇನ್ನಿಂಗ್ಸ್ ಆಡಿದರು. ಈ ಇಬ್ಬರೂ ಮೊದಲ ವಿಕೆಟ್ಗೆ ತ್ವರಿತ ಆರಂಭವನ್ನು ನೀಡಿದರು. ನಂತರ, ಡ್ಯಾರಿಲ್ ಮಿಚೆಲ್ 18 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ಸ್ಕೋರ್ ಅನ್ನು 200 ರನ್ಗಳ ಗಡಿ ದಾಟಿಸಿದರು. ಭಾರತದ ಪರ, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರಾದರೂ, ಒಟ್ಟಾರೆಯಾಗಿ ಭಾರತದ ಬೌಲರ್ಗಳು ನ್ಯೂಜಿಲೆಂಡ್ ಬ್ಯಾಟ್ಸ್ಮನ್ಗಳ ವೇಗಕ್ಕೆ ಕಡಿವಾಣ ಹಾಕಲು ವಿಫಲರಾದರು.
ಶಿವಂ ದುಬೆ ಏಕಾಂಗಿ ಹೋರಾಟ
ಈ ಗುರಿ ಬೆನ್ನಟ್ಟಿದ ಭಾರತ ಕಳಪೆ ಆರಂಭವನ್ನು ಕಂಡಿತು. ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್ ಆಗಿ ಔಟಾದರೆ, ನಾಯಕ ಸೂರ್ಯಕುಮಾರ್ ಯಾದವ್ ಕೂಡ ಬೇಗನೆ ನಿರ್ಗಮಿಸಿದರು. ಅಗ್ರ ಕ್ರಮಾಂಕ ಕುಸಿದ ನಂತರ, ಶಿವಂ ದುಬೆ ಮತ್ತೊಮ್ಮೆ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಸ್ಫೋಟಕ ಫಾರ್ಮ್ ಅನ್ನು ಪ್ರದರ್ಶಿಸಿ 23 ಎಸೆತಗಳಲ್ಲಿ 65 ರನ್ ಗಳಿಸಿದರು. ಆದರೆ ದುಬೆಗೆ ಇತರ ಬ್ಯಾಟ್ಸ್ಮನ್ಗಳಿಂದ ಬೆಂಬಲ ಸಿಗಲಿಲ್ಲ. ರಿಂಕು ಸಿಂಗ್ 30 ಎಸೆತಗಳಲ್ಲಿ 39 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 15 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರು. ಕೊನೆಯಲ್ಲಿ, ಭಾರತ ತಂಡ 18.4 ಓವರ್ಗಳಲ್ಲಿ 165 ರನ್ಗಳಿಗೆ ಆಲೌಟ್ ಆಯಿತು.
ನ್ಯೂಜಿಲೆಂಡ್ ಪರ ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ವಿಕೆಟ್ ಪಡೆದರೆ, ಇಶ್ ಸೋಧಿ ಮತ್ತು ಜಾಕೋಬ್ ಡಫಿ ಕೂಡ ತಲಾ ಎರಡು ವಿಕೆಟ್ ಪಡೆದರು. ಈ ಗೆಲುವು ಸರಣಿಯಲ್ಲಿ ನ್ಯೂಜಿಲೆಂಡ್ನ ಗೌರವವನ್ನು ಉಳಿಸಿದ್ದಲ್ಲದೆ, ಅವರ ಆತ್ಮವಿಶ್ವಾಸವನ್ನೂ ಹೆಚ್ಚಿಸಿತು. ಇತ್ತ ಈ ಸೋಲು ಭಾರತಕ್ಕೆ ಒಂದು ಪಾಠವಾಗಿದೆ, ವಿಶೇಷವಾಗಿ 2026 ರ ಟಿ20 ವಿಶ್ವಕಪ್ ಸಮೀಪಿಸುತ್ತಿರುವಾಗ ಟೀಂ ಇಂಡಿಯಾ ತನ್ನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆ ಕಾವು ಹೆಚ್ಚಾಗಿದೆ. ಈ ಬಾರಿ ಪ್ರಿಯಾ ಹಾಸನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಬಗೆಹರಿಸುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ‘ನಿರ್ಮಾಪಕರಿಗೆ ಇರುವ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು. ಕೇವಲ ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ. ಬೇರೆ ಬೇರೆ ಸಿನಿಮಾಗಳು ಕೂಡ ಬರಬೇಕು. ಆಗ ಎಲ್ಲರಿಗೂ ಕೆಲಸ ಸಿಗುತ್ತದೆ. ತುಂಬ ನಿರ್ಮಾಪಕರು ಈಗ ಸಿನಿಮಾ ಮಾಡಲು ಹೆದರುತ್ತಿದ್ದಾರೆ. ಈ ರೀತಿಯ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ನಮಗೆ ಇದೆ’ ಎಂದು ಪ್ರಿಯಾ ಹಾಸನ್ (Priya Hassan) ಅವರು ಹೇಳಿದ್ದಾರೆ.