Headlines

IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕವೂ ಪ್ರಮುಖ ಪಾತ್ರವಹಿಸಿತು. ಗುಜರಾತ್ ನೀಡಿದ 156 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕವನ್ನು…

Read More

IPL 2026 Final: ಈ ಸಲನೂ ಕಪ್ ನಮ್ದು..! ಸತತ 2ನೇ ಬಾರಿಗೆ ಆರ್​ಸಿಬಿ ಮುಡಿಗೇರಿದ ಐಪಿಎಲ್ ಕಿರೀಟ

ಆರ್​ಸಿಬಿ.. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ತಂಡ. ಈ ತಂಡದ ಪರವಾಗಿ ಹಲವು ದಿಗ್ಗಜ ಕ್ರಿಕೆಟಿಗರು ಸಾಕಷ್ಟು ವರ್ಷ ಕ್ರಿಕೆಟ್ ಆಡಿದ್ದಾರೆ. ಆದರೆ ಅಂತಹವರ ಉಪಸ್ಥಿತಿಯ ಹೊರತಾಗಿಯೂ ಸತತ 17 ವರ್ಷಗಳವರೆಗೆ ಆರ್​ಸಿಬಿಗೆ ಒಮ್ಮೆಯೂ ಚಾಂಪಿಯನ್‌ ಪಟ್ಟಕ್ಕೇರಲು ಸಾಧ್ಯವಾಗಲಿಲ್ಲ. ಆದರೆ ಕಳೆದ ಆವೃತ್ತಿಯಲ್ಲಿ ಆ ಟ್ರೋಫಿ ಬರವನ್ನು ನೀಗಿಸಿಕೊಂಡು ತನ್ನ ಅಭಿಮಾನಿಗಳು ನೀರಾಳರಾಗುವಂತೆ ಮಾಡಿದ್ದ ಆರ್​ಸಿಬಿ ಇದೀಗ 2026 ರ ಐಪಿಎಲ್‌ನಲ್ಲೂ ಟ್ರೋಫಿ ಎತ್ತಿಹಿಡಿಯುವ ಮೂಲಕ ತನ್ನ ಅಭಿಮಾನಿ ಬಳಗಕ್ಕೆ…

Read More

RCB vs GT Final: ಫೈನಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್; ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ

2026 ರ ಐಪಿಎಲ್ ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 155 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿ ಗೆಲುವಿಗೆ 156 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿತು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟ ನೀಡಿದರು. ಇದಕ್ಕಾಗಿ ಇವರಿಬ್ಬರು ತೆಗೆದುಕೊಂಡಿದ್ದು…

Read More

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!: ಮೈ ರೋಮಾಂಚನಗೊಳಿಸುವ ವಿಡಿಯೋ

ಅಹಮದಾಬಾದ್, ಮೇ,31: ಐಪಿಎಲ್ 2026 ರ ಫೈನಲ್ ಮಹಾಸಮರದ ಬ್ಯಾಟಿಂಗ್ ಹಾಗೂ ಬೌಲಿಂಗ್ ಅಬ್ಬರದ ನಡುವೆಯೇ, ಕ್ರೀಡಾಂಗಣದಲ್ಲಿದ್ದ ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳನ್ನು ಆಧ್ಯಾತ್ಮಿಕ ಲೋಕಕ್ಕೆ ಕೊಂಡೊಯ್ಯುವ ಭವ್ಯ ದೃಶ್ಯವೊಂದು ಸಾಕ್ಷಿಯಾಗಿದೆ. ಪಂದ್ಯದ ಮಧ್ಯಂತರದ ಬಿಡುವಿನ ವೇಳೆಯಲ್ಲಿ ಇಡೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ‘ಶಿವ ತಾಂಡವ ಸ್ತೋತ್ರ’ ಭರ್ಜರಿಯಾಗಿ ಮೊಳಗಿದ್ದು, ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳಲ್ಲಿ ಮೈರೋಮಾಂಚನ ಸೃಷ್ಟಿಸಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯದ ಮೊದಲ ಇನ್ನಿಂಗ್ಸ್ ಮುಗಿಯುತ್ತಿದ್ದಂತೆ ಹೈ-ವೋಲ್ಟೇಜ್ ಧ್ವನಿವರ್ಧಕಗಳಲ್ಲಿ ಕಿವಿಗೆ ಇಂಪಾಗುವ ಹಾಗೂ ಜೋಶ್…

Read More

ಹೆಂಡತಿ ಮಾಡುವ ಈ ತಪ್ಪುಗಳು ದಾಂಪತ್ಯ ಜೀವನವನ್ನೇ ಹಾಳು ಮಾಡಬಹುದು

ಗಂಡ ಹೆಂಡತಿಯ ಸಂಬಂಧ (relationship) ಸುಂದರ ಮಾತ್ರವಲ್ಲ ಪವಿತ್ರವಾದುದು ಕೂಡ. ಈ ಸಂಬಂಧ ಜೀವನಪರ್ಯಂತ ಸುಂದರವಾಗಿರಲು ಗಂಡ-ಹೆಂಡತಿ ಒಬ್ಬರನ್ನೊಬ್ಬರು ಪ್ರೀತಿಸುವುದರ ಜೊತೆಗೆ ಸಂಗಾತಿಯನ್ನು ಅರ್ಥಮಾಡಿಕೊಂಡು ಅವರ ಆದ್ಯತೆಗಳಿಗೂ ಬೆಲೆ ಕೊಡುವುದು ಮುಖ್ಯವಾಗುತ್ತದೆ. ಅದೇ ಕೆಲವೊಂದು ತಪ್ಪು ತಿಳುವಳಿಕೆಗಳು, ಮನಸ್ತಾಪಗಳು ಸುಂದರ ಸಂಬಂಧವನ್ನು ಹಾಳು ಮಾಡುತ್ತದೆ. ಅದರಲ್ಲೂ ಹೆಂಡತಿಯ ಈ ನಡವಳಿಕೆಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ. ಆದ್ದರಿಂದ ವಿವಾಹಿತ ಸ್ತ್ರೀಯರು ತಮ್ಮ  ಈ ಕೆಲವೊಂದು ನಡವಳಿಕೆಗಳ ಬಗ್ಗೆ ಆದಷ್ಟು ಜಾಗೂರಕರಾಗಿರಬೇಕು. ಹೆಂಡತಿಯ ಈ ನಡವಳಿಕೆಗಳು ದಾಂಪತ್ಯ ಜೀವನವನ್ನು ಹಾಳುಮಾಡಬಹುದು:…

Read More

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು…

Read More

ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

ರಣ್ವೀರ್ ಸಿಂಗ್, ಬಾಲಿವುಡ್​​ನ (Bollywood) ಸ್ಟಾರ್ ನಟ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಭರ್ಜರಿ ಯಶಸ್ಸು ರಣ್ವೀರ್ ಅವರನ್ನು ಮತ್ತೊಮ್ಮೆ ಬೇಡಿಕೆಯ ನಟರನ್ನಾಗಿ ಮಾಡಿದೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು,…

Read More

RCB vs GT Final: ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಕ್ರಿಕೆಟ್ ದೇವರೂ ಫಿದಾ..! ಏನಂದ್ರು ನೋಡಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ಟೈಟಾನ್ಸ್ ತಂಡ, ಆರ್​ಸಿಬಿಯ (GT vs RCB) ಸಾಂಘಿಕ ದಾಳಿಗೆ ಅಕ್ಷರಶಃ ನಲುಗಿ ಹೋಯಿತು. ಈ ಪಂದ್ಯದಲ್ಲಿ ಆರ್​ಸಿಬಿಯ ಪ್ರತಿಯೊಬ್ಬ ಬೌಲರ್​ಗಳು ಕರಾರುವಕ್ಕಾದ ದಾಳಿ ನಡೆಸಿದರು. ಹೀಗಾಗಿ ತವರಿನ ಲಾಭ ಪಡೆಯುವಲ್ಲಿ ವಿಫಲವಾದ ಗುಜರಾತ್ 156 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದ…

Read More

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ…

Read More

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ ನಡೆದಿದ್ದೇನು?…

Read More