ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ
ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ…