Headlines

Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿ ಪ್ರಭಾವ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದ 7 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಯೆಲ್ಲೋ…

Read More

ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮೊರಾದಾಬಾದ್, ಜೂನ್ 1: ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಕ್‌ಫಜ್‌ಪುರ ಗ್ರಾಮದಲ್ಲಿ ಹಬ್ಬ ಮತ್ತು ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಆರು ಸಹೋದರರಲ್ಲಿ ಕಿರಿಯವನಾದ ಫರತ್ ಅಲಿ (20) ಎಂಬ ಯುವಕ, ತನ್ನ ತಂದೆಯ ಪರವಾನಗಿ ಪಡೆದ (Licensed) ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟImage Credit source: tv9 ಬೆಂಗಳೂರು, ಜೂನ್ 1: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು…

Read More

ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ಕೊಟ್ಟು, ಹೊಡೆದು ಚರಂಡಿಗೆ ಎಸೆದ ತಂದೆ

ಲಕ್ನೋ, ಜೂನ್ 1: ಎರಡೂವರೆ ವರ್ಷದ ತನ್ನ ಪುಟ್ಟ ಹೆಣ್ಣುಮಗಳ ಮೇಲೆ ಅತಿಮಾನುಷವಾಗಿ ಹಲ್ಲೆ ನಡೆಸಿ, ರಸ್ತೆ ಬದಿಯ ಚರಂಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ ತಂದೆಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೋನು ಅಲಿಯಾಸ್ ಯೋಗೇಂದ್ರ ಸಿಂಗ್ (50) ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ವಿಡಿಯೋ ಮೇ 30 ರಂದು ಮಧ್ಯಾಹ್ನ 2.30 ರ…

Read More

Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳು ಪರಿಹಾರವಾಗಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 1, ಸೋಮವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಜೇಷ್ಠ ನಕ್ಷತ್ರದ ಈ ದಿನದ ಮಹತ್ವವನ್ನು ತಿಳಿಸಲಾಗಿದೆ. ಇಂದು ವಿಶ್ವ ಪೋಷಕರ ದಿನ ಮತ್ತು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನಗಳಂದು ಹಾಲನ್ನು ದಾನ ಮಾಡುವುದು ಮಂಗಳಕರ ಎಂದು ಗುರೂಜಿ ಹೇಳಿದ್ದಾರೆ.    …

Read More

ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಲು ಮುಂದಾದ್ರಾ ಬಿಜೆಪಿ ನಾಯಕ ಅಣ್ಣಾಮಲೈ?

ಚೆನ್ನೈ, ಜೂನ್ 1: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ(K Annamalai) ಹೊಸ ಪಕ್ಷ ಕಟ್ಟಲು ಸಿದ್ಧತೆ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮಾನ ಮನಸ್ಕ ಜನರನ್ನು ಒಗ್ಗೂಡಿಸುವುದು ಮತ್ತು ತಳಮಟ್ಟದಲ್ಲಿ ಬಲಿಷ್ಠ ಸ್ವಯಂಸೇವಕರ ಪಡೆಯನ್ನು ನಿರ್ಮಿಸುವುದು ಈ ಆಂದೋಲನದ ಮುಖ್ಯ ಉದ್ದೇಶ ಎನ್ನಲಾಗಿದೆ. ಈ ಹೊಸ ಚಳವಳಿಗೆ “ಮಕ್ಕಳ್ ಶಕ್ತಿ ಇಯಕ್ಕಂ” (ಜನಶಕ್ತಿ ಆಂದೋಲನ) ಎಂದು ಹೆಸರಿಡಬಹುದು ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ….

Read More

Daily Devotional: ಸಾಯುವ ಮುನ್ನ ಮನುಷ್ಯನ 5 ನಿಮಿಷಗಳು ಹೇಗಿರುತ್ತೆ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಾಯುವ ಮುನ್ನ ಮನುಷ್ಯನ 5 ನಿಮಿಷಗಳು ಹೇಗಿರುತ್ತೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಪ್ರತಿಯೊಬ್ಬರ ಜೀವನದಲ್ಲೂ ಮರಣ ಅನಿವಾರ್ಯ. “ಜಾತಸ್ಯ ಮರಣಂ ಧ್ರುವಂ” ಎಂಬಂತೆ, ಜನಿಸಿದ ಪ್ರತಿಯೊಬ್ಬರೂ ಒಂದು ದಿನ ಮರಣ ಹೊಂದಲೇಬೇಕು. ಆದರೆ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಪ್ರಾಣ ದೇಹವನ್ನು ತೊರೆಯುವ ಕೊನೆಯ ಐದು ನಿಮಿಷಗಳಲ್ಲಿ ಏನಾಗುತ್ತದೆ ಎಂಬುದು ಅನೇಕರಿಗೆ ಕುತೂಹಲದ ವಿಷಯ. ಗ್ರಂಥಗಳು, ಅನುಭವಿಗಳು ಮತ್ತು ಮಹಾತ್ಮರು ಈ ಕುರಿತು ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

‘ಕರುಪ್ಪು’ ಸಿನಿಮಾ ಗೆದ್ದ ಖುಷಿಯಲ್ಲಿ ತಂಡದವರಿಗೆ ಕಾರು ಗಿಫ್ಟ್ ಕೊಟ್ಟ ನಟ ಸೂರ್ಯ

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಅವರಿಗೆ (Suriya) ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಈ ಗೆಲುವನ್ನು ಮತ್ತೆ ಮರಳಿಸಿ ಕೊಟ್ಟಿದ್ದು ‘ಕರುಪ್ಪು’ ಚಿತ್ರ. ತ್ರಿಷಾ ಜೊತೆ ನಟಿಸಿದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ದಿನದಿಂದಲೇ ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆದುಕೊಂಡಿರುವ ಈ ಚಿತ್ರ, ಈಗ ಕೇವಲ ಮೂರನೇ ವಾರದಲ್ಲೇ ವಿಶ್ವದಾದ್ಯಂತ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ನಟ ಸೂರ್ಯ ಅವರು…

Read More

Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (ಸಾಂದರ್ಭಿಕ ಚಿತ್ರ)Image Credit source: PTI ನವದೆಹಲಿ, ಜೂನ್ 1: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ (Commercial LPG cylinder) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜೂನ್ 1) ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ….

Read More