ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೂ ಆಲೋಚಿಸದ ಮಾತು ಬರಲಿದೆ…

ಮೇಷ ರಾಶಿ:

ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌

ವೃಷಭ ರಾಶಿ:

ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ ಮುಂದುವರಿಯಿರಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬೇಡಿ ಅಥವಾ ಮಧ್ಯಪ್ರವೇಶಿಸಬೇಡಿ. ನಿಮ್ಮ ಖರ್ಚುಗಳ ಬಗ್ಗೆ ಗಮನ ಕೊಡಿ ಮತ್ತು ಯೋಚಿಸದೆ ಅಪಾಯಗಳನ್ನು ತಂದುಕೊಳ್ಳುವಿರಿ. ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಸಿಲುಕುವಿರಿ. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ‌ ಸಮಯವನ್ನು ವ್ಯರ್ಥ ಮಾಡುವಿರಿ.

ಮಿಥುನ ರಾಶಿ:

ನಿಮ್ಮವರೇ ನಕಾರಾತ್ಮಕ ಮಾತುಗಳನ್ನು ಹೇಳಿ ದಾರಿಬತಪ್ಪಿಸುವರು ಅಥವಾ ಅವಮಾನ ಮಾಡುವರು. ಸದ್ಭಾವವಿದ್ದರೆ ಎಲ್ಲವೂ ತಾನಾಗಿಯೇ ಒಲಿಯುವುದು. ಹೊಸ ಯೋಜನೆಗೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಇದು ಒಳ್ಳೆಯ ಸಮಯ. ಆದ್ದರಿಂದ, ಈ ಕೆಲಸದಲ್ಲಿ ನಿಮ್ಮ ಸಮಯವನ್ನು ಹೂಡಿಕೆ ಮಾಡಿ. ನಿಮ್ಮ ಕೊರತೆಯೇ ನಿಮಗೆ ಶಾಪವಾಗಬಹುದು. ಕೇಳಿದಷ್ಟು ಹಣವನ್ನು ಕೊಟ್ಟು ಹೊಸ ವಸ್ತುವನ್ನು ಖರೀದಿಸುವಿರಿ.

ಕರ್ಕಾಟಕ ರಾಶಿ:

ನೀವು ಇಂದು ಇರುವ‌ ಕೆಲಸಕ್ಕೆ ಮತ್ತೇನಾದರೂ ಸೇರಿಸಿಕೊಳ್ಳುವಿರಿ. ಹೊಸದಾಗಿ ಏನಾದರೂ ಕಲಿಯುವ ಅವಕಾಶ ಸಿಗಬಹುದು. ಕೆಲಸದ ಸ್ಥಳದಲ್ಲಿ ಹಳೆ ತಪ್ಪುಗಳಿಗಾಗಿ ಜನ ತಿರಸ್ಕರಿಸಬಹುದು – ತಾಳ್ಮೆಯಿಂದ ಉತ್ತರ ಕೊಡಿ. ಹಣದ ವ್ಯವಹಾರಗಳಲ್ಲಿ ನಿಮಗೆ ಆತ್ಮವಿಶ್ವಾಸ ಬೇಕಾಗಿರುತ್ತದೆ. ಉದ್ವೇಗದಲ್ಲಿ ನಿಮ್ಮ ವರ್ತನೆಗಳು ಸಾಮಾನ್ಯರಿಗೆ ಬೇರೆ ಅರ್ಥವನ್ನೇ ಕೊಡುವುದು. ವೈವಾಹಿಕ ಜೀವನವು ನಿಮಗೆ ಬೇಸರವೆನಿಸಬಹುದು. ಪ್ರಭಾವೀ ವ್ಯಕ್ತಿಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ.

ಸಿಂಹ ರಾಶಿ:

ಮಕ್ಕಳಿಗೆ ನಿಮ್ಮ ಪ್ರೀತಿ ಹೆಚ್ಚಾಗುವುದು. ಸವಾಲುಗಳ ಬಗ್ಗೆ ಮನದಟ್ಟಾಗಿ ಯೋಚಿಸಿ. ಹಣಕಾಸಿನಲ್ಲಿ ಚಿಕ್ಕದಾದ ಲಾಭಕಂಡುಬರುತ್ತದೆ. ಮನೆಯವರು ನಿಮ್ಮ ಬದಲಾವಣೆಗಳನ್ನು ಗುರುತಿಸಿ ಮೆಚ್ಚಬಹುದು. ಸ್ನೇಹಿತರಿಂದ ಪ್ರೋತ್ಸಾಹ ಸಿಗುತ್ತದೆ. ಆರೋಗ್ಯದಲ್ಲಿ ಸುಧಾರಣೆ. ಮಾತುಗಳನ್ನು ಕಡೆ ಆಡುವುವಿರಿ. ಇಂದು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಿದರೆ, ಅದು ನಿಮಗೆ ಒಳ್ಳೆಯದು. ನೆರೆ ಮನೆಯವರ ಜೊತೆ ಕಲಹವಾಗಬಹುದು.

ಕನ್ಯಾ ರಾಶಿ:

ಒಳ್ಳೆಯ ಕಾರಣಕ್ಕೆ ಯಥಾಯೋಗ್ಯ ದಾನವನ್ನೂ ನೀವು ಮಾಡಲಿದ್ದೀರಿ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಾಧಿಸಲಾಗದು. ಯಾರು ಏನೇ ಹೇಳಿದರೂ ನಿಮಗೆ ಬೇಕಾದುದನ್ನು‌ ಮಾತ್ರ ಪಡೆಯುವಿರಿ. ಇತರರಿಂದ ಏನನ್ನೂ ನಿರೀಕ್ಷಿಸಬೇಡಿ, ಇಲ್ಲದಿದ್ದರೆ ಫಲಿತಾಂಶಗಳು ನಕಾರಾತ್ಮಕವಾಗಿರಬಹುದು. ಸ್ತ್ರೀಯರು ಅವರಿಗೆ ಬೇಕಾದ ಕಾರ್ಯವನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಬಹಿಶ್ಶತ್ರುಗಳಿಗಿಂತ ಅಂತಶ್ಶತ್ರುಗಳ ಬಗ್ಗೆ ಎಚ್ಚರ ಅವಶ್ಯಕ.

ತುಲಾ ರಾಶಿ:

ನಿಮ್ಮ ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಹಳೆಯ ವಿವಾದಗಳು ಬಗೆಹರಿಯುತ್ತವೆ. ನೀವು ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಆದಾಯವು ಸುಧಾರಿಸುತ್ತದೆ. ತಾಯಿಯ ಆರೋಗ್ಯವು ಕೆಡಲಿದ್ದು ಚಿಕಿತ್ಸೆಯನ್ನು ಕೊಡಿಸುವಿರಿ. ನಿಮ್ಮ ಪೂರ್ವ ನಿಶ್ಚಯವು ತಲೆಕೆಳಗಾಗಬಹುದು. ನಿಮ್ಮ ಬಗ್ಗೆ ಸುಳ್ಳು ವದಂತಿಗಳು ಹರಡಬಹುದು. ನಿರ್ಮಾಣ ವ್ಯವಸ್ಥೆಯಲ್ಲಿ ಇರುವವರಿಗೆ ಸ್ವಲ್ಪ ಹಿನ್ನಡೆಯಾಗಲಿದೆ.

ವೃಶ್ಚಿಕ ರಾಶಿ:

ಇಂದು ಕೆಲಸದ ನಿಮಿತ್ತ ನೀವು ಪ್ರಯಾಣಿಸಬೇಕಾಗಬಹುದು. ಚಿಂತೆಗಳು ಕೊನೆಗೊಳ್ಳುತ್ತವೆ ಮತ್ತು ಹಣ ಸಿಗುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹೊಸ ಕೆಲಸಗಳು ಲಭ್ಯವಾಗುತ್ತವೆ. ನಿಮ್ಮ ಗುರಿಯನ್ನು ಸಾಧಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ದೀರ್ಘಾವಧಿಯ ಯೋಜನೆಗಳು ವೇಗವನ್ನು ಪಡೆಯಲಿ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ತಯಾರಿಯಲ್ಲಿ ಶ್ರಮಿಸಬೇಕಾಗುತ್ತದೆ. ವಾಹನದ ದಾಖಲೆಗಳನ್ನು ಪರಿಶೀಲಿಸಿಕೊಂಡು ಚಲಾಯಿಸಿ.

ಧನು ರಾಶಿ:

ನಿಮ್ಮ ಆರೋಗ್ಯದ ವಿಚಾರದಲ್ಲಿ ಚಿಂತೆ ಬೇಡ. ಸರಿಮಾಡಿಕೊಳ್ಳುವ ಬಗ್ಗೆ ಚಿಂತಿಸಿ. ಬಹಳಷ್ಟು ಕೆಲಸ ಇರುತ್ತದೆ ಮತ್ತು ಯಶಸ್ಸು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಮಧ್ಯದಲ್ಲಿ ನ್ಯಾಯಾಂಗ ವಿಷಯಗಳಲ್ಲಿ ಯಶಸ್ಸು ಮತ್ತು ಭೂಮಿಗೆ ಸಂಬಂಧಿಸಿದ ಪ್ರಯೋಜನಗಳು ದೊರೆಯುತ್ತವೆ. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ.

ಮಕರ ರಾಶಿ:

ದೂರದ ಊರಿಗೆ ಪ್ರಯಾಣ ಹೋಗುವ ಯೋಜನೆಗಳನ್ನು ಹಾಕಿಕೊಳ್ಳುವಿರಿ. ನೀವು ವಿವಾದಗಳಲ್ಲಿ ಜಯ ಸಾಧಿಸುವಿರಿ. ದಿನದ ಅಂತ್ಯದಲ್ಲಿ, ಕುಟುಂಬದ ವಾತಾವರಣ ಅನುಕೂಲಕರವಾಗಿರುತ್ತದೆ ಮತ್ತು ಸಂತೋಷವು ಮೇಲುಗೈ ಸಾಧಿಸುತ್ತದೆ. ವ್ಯವಹಾರವು ಉತ್ತಮವಾಗಿರುತ್ತದೆ, ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು.

ಕುಂಭ ರಾಶಿ:

ನಿಮ್ಮ ಗೆಳೆತನವು ಖುಷಿ ಕೊಡುವುದು‌. ಅತಿಯಾದ ಆಲೋಚನೆಗಳು ಮಾನಸಿಕ ನೆಮ್ಮದಿಯನ್ನು ದೂರಮಾಡಲಿವೆ. ದಿನದ ಆರಂಭದಲ್ಲಿ ಕಷ್ಟಗಳು ಎದುರಾಗುತ್ತವೆ. ಆದರೆ ನಂತರ ಸಂತೋಷ ಮತ್ತು ಹಣದ ಹರಿವು ಉತ್ತಮವಾಗಿರುತ್ತದೆ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮ ಸುಳ್ಳನ್ನು ಯಾರಾದರೂ ನಂಬಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡಬೇಕೆನಿಸುವುದು.

ಮೀನ ರಾಶಿ:

ಮನೆಗೆ ಅವಶ್ಯವಿರುವ ವಸ್ತುಗಳನ್ನು ಖರೀದಿಸುವಿರಿ. ಸಮಸ್ಯೆ ಇದ್ದರೆ, ಅದನ್ನು ಪರಿಹರಿಸಲು ಕೋಪಗೊಳ್ಳುವ ಬದಲು ಬುದ್ಧಿವಂತಿಕೆಯನ್ನು ಬಳಸಿ. ಮಕ್ಕಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಮತ್ತು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ. ಮುಖ್ಯವಾಗಿ ಈ ಸಮಯದಲ್ಲಿ ಹಳೆಯ ಸಮಸ್ಯೆಯನ್ನು ಪರಿಹರಿಸಲು ನಿಮಗೆ ಅವಕಾಶ ಸಿಗುತ್ತದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ‌ ಸ್ಥಿತಿಗೆ ಮರಳುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಶಿವ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:33 – 09:09, ಯಮಗಂಡ ಕಾಲ 10:46 – 12:22, ಗುಳಿಕ ಕಾಲ 13:59 – 15:35

-ಲೋಹಿತ ಹೆಬ್ಬಾರ್-8762924271 (what’s app only)

Source link

IPL 2026 Final: ಸತತ 2ನೇ ಟ್ರೋಫಿ; ಸಿಎಸ್​​ಕೆ, ಮುಂಬೈ ದಾಖಲೆ ಸರಿಗಟ್ಟಿದ ಆರ್​ಸಿಬಿ

Source link

IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ

ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕವೂ ಪ್ರಮುಖ ಪಾತ್ರವಹಿಸಿತು. ಗುಜರಾತ್ ನೀಡಿದ 156 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇದು ಕೊಹ್ಲಿ ಅವರ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕವೂ ಆಗಿದೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ಈ ಐತಿಹಾಸಿಕ ಅರ್ಧಶತಕ ಸಿಡಿದಿದ್ದು ಸ್ಮರಣೀಯವಾಗಿತ್ತು.

ಈ ಹಿಂದೆ ಕೊಹ್ಲಿ 2018 ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದೀಗ 25 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ತಮ್ಮ ಹಿಂದಿನ ದಾಖಲೆಯನ್ನು ಮುರಿದರು. ಬರೋಬ್ಬರಿ ಎಂಟು ವರ್ಷಗಳ ನಂತರ ಈ ಸಾಧನೆ ಮಾಡಿದ ಕೊಹ್ಲಿ, ಐಪಿಎಲ್ ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸುರೇಶ್ ರೈನಾ, ಡೇವಿಡ್ ವಾರ್ನರ್ ಮತ್ತು ವೆಂಕಟೇಶ್ ಅಯ್ಯರ್ ಅವರ ಹೆಸರಿನಲ್ಲಿದೆ. ಈ ಮೂವರು ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಜಂಟಿಯಾಗಿ ಎರಡನೇ ಸ್ಥಾನದಲ್ಲಿರುವ ಕೊಹ್ಲಿ ಜೊತೆಗೆ, ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಕೂಡ ಫೈನಲ್‌ನಲ್ಲಿ ತಲಾ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

Source link

IPL 2026 Final: ಈ ಸಲನೂ ಕಪ್ ನಮ್ದು..! ಸತತ 2ನೇ ಬಾರಿಗೆ ಆರ್​ಸಿಬಿ ಮುಡಿಗೇರಿದ ಐಪಿಎಲ್ ಕಿರೀಟ

ಆರ್​ಸಿಬಿ.. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ತಂಡ. ಈ ತಂಡದ ಪರವಾಗಿ ಹಲವು ದಿಗ್ಗಜ ಕ್ರಿಕೆಟಿಗರು ಸಾಕಷ್ಟು ವರ್ಷ ಕ್ರಿಕೆಟ್ ಆಡಿದ್ದಾರೆ. ಆದರೆ ಅಂತಹವರ ಉಪಸ್ಥಿತಿಯ ಹೊರತಾಗಿಯೂ ಸತತ 17 ವರ್ಷಗಳವರೆಗೆ ಆರ್​ಸಿಬಿಗೆ ಒಮ್ಮೆಯೂ ಚಾಂಪಿಯನ್‌ ಪಟ್ಟಕ್ಕೇರಲು ಸಾಧ್ಯವಾಗಲಿಲ್ಲ. ಆದರೆ ಕಳೆದ ಆವೃತ್ತಿಯಲ್ಲಿ ಆ ಟ್ರೋಫಿ ಬರವನ್ನು ನೀಗಿಸಿಕೊಂಡು ತನ್ನ ಅಭಿಮಾನಿಗಳು ನೀರಾಳರಾಗುವಂತೆ ಮಾಡಿದ್ದ ಆರ್​ಸಿಬಿ ಇದೀಗ 2026 ರ ಐಪಿಎಲ್‌ನಲ್ಲೂ ಟ್ರೋಫಿ ಎತ್ತಿಹಿಡಿಯುವ ಮೂಲಕ ತನ್ನ ಅಭಿಮಾನಿ ಬಳಗಕ್ಕೆ ಡಬಲ್ ಸಂತೋಷ ನೀಡಿದೆ. ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿ ತನ್ನ ಹಾಲಿ ಚಾಂಪಿಯನ್‌ ಪಟ್ಟವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

Published On – 11:26 pm, Sun, 31 May 26

Source link

RCB vs GT Final: ಫೈನಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್; ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ

2026 ರ ಐಪಿಎಲ್ ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 155 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿ ಗೆಲುವಿಗೆ 156 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿತು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟ ನೀಡಿದರು. ಇದಕ್ಕಾಗಿ ಇವರಿಬ್ಬರು ತೆಗೆದುಕೊಂಡಿದ್ದು ಕೇವಲ 27 ಎಸೆತಗಳು ಮಾತ್ರ.

ಈ ಹೈವೋಲ್ಟೇಜ್ ಕದನದಲ್ಲಿ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿದ ಆರ್​ಸಿಬಿ ಆರಂಭಿಕರು ಸ್ಫೋಟಕ ಆಟಕ್ಕೆ ಮುಂದಾದರು. ಇವರಿಬ್ಬರ ಸಿಡಿಲಬ್ಬದ ಬ್ಯಾಟಿಂಗ್​ನಿಂದ ಆರ್​ಸಿಬಿ ಕೇವಲ 3.3 ಓವರ್‌ಗಳಲ್ಲಿ 50 ರನ್​ಗಳ ಗಡಿ ದಾಟಿತು. ಈ ಮೂಲಕ ಆರ್​ಸಿಬಿ ಐಪಿಎಲ್ ಫೈನಲ್ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 50 ರನ್ ಬಾರಿಸಿದ ತಂಡವೆಂಬ ದಾಖಲೆ ಬರೆಯಿತು. ಅಲ್ಲದೆ ಇದೇ ಮೈದಾನದಲ್ಲಿ 2023 ರ ಐಪಿಎಲ್‌ನಲ್ಲಿ ಇದೇ ಗುಜರಾತ್ ವಿರುದ್ಧದ ಫೈನಲ್ ಪಂದ್ಯದಲ್ಲಿ 24 ಎಸೆತಗಳಲ್ಲಿ 50 ರನ್ ಬಾರಿಸಿದ್ದ ಸಿಎಸ್​ಕೆ ತಂಡದ ದಾಖಲೆಯನ್ನು ಮುರಿಯಿತು.

Source link

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!: ಮೈ ರೋಮಾಂಚನಗೊಳಿಸುವ ವಿಡಿಯೋ

ಅಹಮದಾಬಾದ್, ಮೇ,31: ಐಪಿಎಲ್ 2026 ರ ಫೈನಲ್ ಮಹಾಸಮರದ ಬ್ಯಾಟಿಂಗ್ ಹಾಗೂ ಬೌಲಿಂಗ್ ಅಬ್ಬರದ ನಡುವೆಯೇ, ಕ್ರೀಡಾಂಗಣದಲ್ಲಿದ್ದ ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳನ್ನು ಆಧ್ಯಾತ್ಮಿಕ ಲೋಕಕ್ಕೆ ಕೊಂಡೊಯ್ಯುವ ಭವ್ಯ ದೃಶ್ಯವೊಂದು ಸಾಕ್ಷಿಯಾಗಿದೆ. ಪಂದ್ಯದ ಮಧ್ಯಂತರದ ಬಿಡುವಿನ ವೇಳೆಯಲ್ಲಿ ಇಡೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ‘ಶಿವ ತಾಂಡವ ಸ್ತೋತ್ರ’ ಭರ್ಜರಿಯಾಗಿ ಮೊಳಗಿದ್ದು, ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳಲ್ಲಿ ಮೈರೋಮಾಂಚನ ಸೃಷ್ಟಿಸಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯದ ಮೊದಲ ಇನ್ನಿಂಗ್ಸ್ ಮುಗಿಯುತ್ತಿದ್ದಂತೆ ಹೈ-ವೋಲ್ಟೇಜ್ ಧ್ವನಿವರ್ಧಕಗಳಲ್ಲಿ ಕಿವಿಗೆ ಇಂಪಾಗುವ ಹಾಗೂ ಜೋಶ್ ತುಂಬುವ ‘ಶಿವ ತಾಂಡವ’ ಪ್ಲೇ ಮಾಡಲಾಯಿತು. ಇದರ ಬೆನ್ನಲ್ಲೇ ಸ್ಟೇಡಿಯಂನಲ್ಲಿದ್ದ ಸರಿಸುಮಾರು ಒಂದು ಲಕ್ಷಕ್ಕೂ ಅಧಿಕ ಕ್ರಿಕೆಟ್ ಅಭಿಮಾನಿಗಳು ಒಕ್ಕೊರಲಿನಿಂದ ‘ಹರ ಹರ ಮಹಾದೇವ’ ಎಂದು ಜಯಘೋಷಗಳನ್ನು ಕೂಗಲು ಆರಂಭಿಸಿದರು. ಕ್ರೀಡಾಂಗಣದ ಮೂಲೆ ಮೂಲೆಗಳಲ್ಲೂ ಭಗವಾನ್ ಶಿವನ ಆರಾಧನೆಯ ಮಂತ್ರಗಳು ಪ್ರತಿಧ್ವನಿಸುತ್ತಿದ್ದ ಈ ಅದ್ಭುತ ಕ್ಷಣದ ವಿಡಿಯೋಗಳು ಇಂಟರ್ನೆಟ್‌ನಲ್ಲಿ ಸನ್ಸೇಷನ್ ಸೃಷ್ಟಿಸಿವೆ. ಕ್ರಿಕೆಟ್ ಮೈದಾನವೊಂದು ಕಣ್ಣುಮುಚ್ಚಿ ತೆರೆಯುವುದರೊಳಗೆ ಆಧ್ಯಾತ್ಮಿಕ ಸಾಗರದಂತೆ ಬದಲಾದ ದೃಶ್ಯವನ್ನು ಕಂಡು ನೆಟ್ಟಿಗರು “ಗೂಸ್‌ಬಂಪ್ಸ್ ಗ್ಯಾರಂಟಿ!” ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲೇ ಇಂತಹದೊಂದು ಭಕ್ತಿ ಪ್ರಧಾನ ಜ್ವರ ಉತ್ತುಂಗಕ್ಕೆ ತಲುಪಿದ್ದು ಇದೇ ಮೊದಲು ಎಂದು ವಿಶ್ಲೇಷಿಸಲಾಗುತ್ತಿದೆ. ಈ ವಿಡಿಯೋವನ್ನು ಎಕ್ಸ್​​ನಲ್ಲಿ ಭಾರತೀಯ ಕ್ರಿಕೆಟ್​​​​​ ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೆಂಡತಿ ಮಾಡುವ ಈ ತಪ್ಪುಗಳು ದಾಂಪತ್ಯ ಜೀವನವನ್ನೇ ಹಾಳು ಮಾಡಬಹುದು

ಗಂಡ ಹೆಂಡತಿಯ ಸಂಬಂಧ (relationship) ಸುಂದರ ಮಾತ್ರವಲ್ಲ ಪವಿತ್ರವಾದುದು ಕೂಡ. ಈ ಸಂಬಂಧ ಜೀವನಪರ್ಯಂತ ಸುಂದರವಾಗಿರಲು ಗಂಡ-ಹೆಂಡತಿ ಒಬ್ಬರನ್ನೊಬ್ಬರು ಪ್ರೀತಿಸುವುದರ ಜೊತೆಗೆ ಸಂಗಾತಿಯನ್ನು ಅರ್ಥಮಾಡಿಕೊಂಡು ಅವರ ಆದ್ಯತೆಗಳಿಗೂ ಬೆಲೆ ಕೊಡುವುದು ಮುಖ್ಯವಾಗುತ್ತದೆ. ಅದೇ ಕೆಲವೊಂದು ತಪ್ಪು ತಿಳುವಳಿಕೆಗಳು, ಮನಸ್ತಾಪಗಳು ಸುಂದರ ಸಂಬಂಧವನ್ನು ಹಾಳು ಮಾಡುತ್ತದೆ. ಅದರಲ್ಲೂ ಹೆಂಡತಿಯ ಈ ನಡವಳಿಕೆಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ. ಆದ್ದರಿಂದ ವಿವಾಹಿತ ಸ್ತ್ರೀಯರು ತಮ್ಮ  ಈ ಕೆಲವೊಂದು ನಡವಳಿಕೆಗಳ ಬಗ್ಗೆ ಆದಷ್ಟು ಜಾಗೂರಕರಾಗಿರಬೇಕು.

ಹೆಂಡತಿಯ ಈ ನಡವಳಿಕೆಗಳು ದಾಂಪತ್ಯ ಜೀವನವನ್ನು ಹಾಳುಮಾಡಬಹುದು:

ಪ್ರತಿಯೊಂದು ಸಣ್ಣ ವಿಷಯಕ್ಕೂ ಅನುಮಾನ ವ್ಯಕ್ತಪಡಿಸುವುದು: ಪ್ರತಿಯೊಂದು ವಿಚಾರದಲ್ಲೂ ಗಂಡನ ಮೇಲೆ ಅನುಮಾನ ವ್ಯಕ್ತಪಡಿಸಬಹುದು. ಈ ಅನುಮಾನ ಎಂಬ ಸಣ್ಣ ಹುಳ ಸುಂದರ ಸಂಸಾರವನ್ನೇ ಹಾಳು ಮಾಡುತ್ತದೆ. ಹಾಗಾಗಿ ಸುಮ್ಮಸುಮ್ಮನೆ ಅನುಮಾನ ಪಟ್ಟು ಗಂಡನ ಜೊತೆ ಜಗಳವಾಡಬಾರದು. ಅನುಮಾನ ಪಟ್ಟರೆ ಸಂಬಂಧದಲ್ಲಿ ಅಂತರ ಇನ್ನಷ್ಟು ಹೆಚ್ಚಾಗುತ್ತದೆ. ಅದೇ ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಿದರೆ ಸಂಸಾರವೂ ತುಂಬಾನೇ ಚೆನ್ನಾಗಿರುತ್ತದೆ.

ಗಂಡನನ್ನು ಇತರರೊಂದಿಗೆ ಹೋಲಿಸುವುದು:  ಕೆಲವು  ಮಹಿಳೆಯರು ತಮ್ಮ ಗಂಡನನ್ನು ಇತರರೊಂದಿಗೆ ಹೋಲಿಸುತ್ತಾರೆ. ಹೌದು ಅವನು ತನ್ನ ಹೆಂಡತಿಗೆ ಗಿಫ್ಟ್‌ ತಂದುಕೊಟ್ಟ, ಹೆಂಡತಿಯನ್ನು ಟ್ರಿಪ್‌ ಕರೆದುಕೊಂಡು ಹೋದ, ಆದ್ರೆ ನೀವು ನನಗಾಗಿ ಏನು ಮಾಡಿಲ್ಲ ಅಂತೆಲ್ಲಾ ಇತರ ಪುರುಷರೊಂದಿಗೆ ಗಂಡನನ್ನು ಹೋಲಿಸುತ್ತಾರೆ.  ಹೆಂಡತಿಯರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುವ ಈ ಅಭ್ಯಾಸವನ್ನು ಗಂಡಂದಿರು ಇಷ್ಟಪಡುವುದಿಲ್ಲ, ಇದು ಪ್ರೀತಿಯ ಸಂಬಂಧವನ್ನು ಹಾಳುಮಾಡುತ್ತದೆ. ಅಲ್ಲದೆ ಯಾವುದೇ ಪುರುಷನು ಸಹ ತನ್ನ ಹೆಂಡತಿ ತನ್ನ ಮುಂದೆ ಇನ್ನೊಬ್ಬ ಪುರುಷನನ್ನು ಹೊಗಳುವುದನ್ನು ಸಹಿಸುವುದಿಲ್ಲ. ಇದು ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ.

ಇದನ್ನೂ ಓದಿ: ಮಹಿಳೆಯರೇ… ಗಾಜಿನ ಧರಿಸೋದು ಎಷ್ಟು ಪ್ರಯೋಜನಕಾರಿ ಗೊತ್ತೇ?

ಅತಿಯಾದ ಬೇಡಿ: ಕೆಲವು ಮಹಿಳೆಯರು ದೊಡ್ಡ ಮನೆ ಬೇಕು, ಚಿನ್ನ ಬೇಕು, ಶಾಪಿಂಗ್‌ ಮಾಡಲು ಸಾಕಷ್ಟು ಹಣ ಬೇಕು ಎಂದೆಲ್ಲಾ ಗಂಡನ ಮುಂದೆ ಬೇಡಿಕೆ ಇಡುತ್ತಾರೆ. ಈ ಅತಿಯಾದ ಬೇಡಿಕೆ ಅತಿಯಾಸೆ ಗಂಡನ ಮಾನಸಿಕ ಒತ್ತಡವನ್ನು ಹೆಚ್ಚು ಮಾಡುವುದಲ್ಲದೆ, ಹಣದ ವಿಚಾರವಾಗಿ ಜಗಳಗಳು ನಡೆಯಲು ಕಾರಣವಾಗುತ್ತದೆ. ಇದು ಸಂಬಂಧದ ಮಧುರತೆಯನ್ನು ಹಾಳು ಮಾಡುತ್ತದೆ.

ಇದಲ್ಲದೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡೋದು, ಕೆಲಸದಿಂದ ಬಂದ ತಕ್ಷಣ ಪ್ರೀತಿಯ ಮಾತುಗಳನ್ನಾಡದೆ ಕಿರಿಕಿರಿ ಮಾಡೋದು ಇವೆಲ್ಲವೂ ದಾಂಪತ್ಯ ಜೀವನದ ಅಂತರವನ್ನು ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು ಪ್ರಮುಖ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗಲಾಗುತ್ತಿದೆ. ಐಪಿಎಲ್ ಫೈನಲ್ ಪಂದ್ಯದ ನಂತರ ಅಭಿಮಾನಿಗಳು ನಿಯಮ ಮೀರಿ ಸಂಭ್ರಮಾಚರಣೆಯಲ್ಲಿ ತೊಡಗಿದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯಲು ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಪಬ್ ಮತ್ತು ಬಾರ್‌ಗಳಿರುವ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

ರಣ್ವೀರ್ ಸಿಂಗ್, ಬಾಲಿವುಡ್​​ನ (Bollywood) ಸ್ಟಾರ್ ನಟ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಭರ್ಜರಿ ಯಶಸ್ಸು ರಣ್ವೀರ್ ಅವರನ್ನು ಮತ್ತೊಮ್ಮೆ ಬೇಡಿಕೆಯ ನಟರನ್ನಾಗಿ ಮಾಡಿದೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು, ಕೆಲ ತಿಂಗಳ ಹಿಂದೆಯಷ್ಟೆ ಕರ್ನಾಟಕದಲ್ಲೂ ತಮ್ಮ ಉದ್ಯಮ ಲಾಂಚ್ ಮಾಡಿದ್ದಾರೆ.

ರಣ್ವೀರ್ ಸಿಂಗ್ ಈಗಾಗಲೇ ‘ಬೋಲ್ಡ್ ಕೇರ್’ ಮತ್ತು ‘ಸೂಪರ್ ಯೂ’ ಉದ್ಯಮಗಳನ್ನು ಹೊಂದಿದ್ದು, ಎರಡೂ ಸಹ ಲಾಭದಾಯಕವಾಗಿವೆ. ‘ಬೋಲ್ಡ್ ಕೇರ್’ ಮೂಲಕ ಲೈಂಗಿಕ ಆರೋಗ್ಯಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು ರಣ್ವೀರ್ ಸಿಂಗ್ ಮಾರಾಟ ಮಾಡುತ್ತಿದ್ದಾರೆ. ಸೂಪರ್ ಯೂ ಮೂಲಕ ದೇಹಾರೋಗ್ಯಕ್ಕೆ ಸಂಬಂಧಿಸಿದ ಪ್ರೋಟೀನ್, ಕ್ರಿಯೇಟೀನ್, ಪ್ರೋಟೀನ್ ಬಾರ್ ಇನ್ನೂ ಕೆಲವು ಸಪ್ಲಿಮೆಂಟ್​​ಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದೀಗ ರಣ್ವೀರ್ ಸಿಂಗ್ ಅವರು ಮದ್ಯದ ಉದ್ಯಮಕ್ಕೆ ಕಾಲಿರಿಸಿದ್ದಾರೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ರಣ್ವೀರ್ ಸಿಂಗ್ ಅವರು ‘ರಂಗೀಲಾ’ ಹೆಸರಿನ ವೋಡ್ಕಾ ಬ್ರ್ಯಾಂಡ್ ಅನ್ನು ಲಾಂಚ್ ಮಾಡಿದ್ದಾರೆ. ಎಬಿಡಿ ಪ್ರೈವೇಟ್ ಲಿಮಿಟೆಡ್ ಜೊತೆ ಕೈಜೋಡಿಸಿದ ‘ರಂಗೀಲಾ’ ವೋಡ್ಕಾ ಲಾಂಚ್ ಮಾಡಿದ್ದಾರೆ. ಈ ವೋಡ್ಕಾವನ್ನು ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ ಕರ್ನಾಟಕದಲ್ಲೂ ಲಾಂಚ್ ಮಾಡಲಾಗಿದ್ದು, ರಂಗೀಲಾ ವೋಡ್ಕಾ ಪ್ರಸ್ತುತ ಭಾರತದಾದ್ಯಂತ ಚೆನ್ನಾಗಿ ಮಾರಾಟ ಆಗುತ್ತಿದೆ. ಕರ್ನಾಟಕದಲ್ಲಿ ಈ ರಂಗೀಲಾ ವೋಡ್ಕಾದ 750 ಎಂಎಲ್ ಬಾಟಲಿ ಬೆಲೆ 2400 ರೂಪಾಯಿಗಳು ಇವೆಯಂತೆ.

ಇದನ್ನೂ ಓದಿ:ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ

ಇನ್ನುಳಿದಂತೆ ರಣ್ವೀರ್ ಸಿಂಗ್ ಮೇಲೆ, ಬಾಲಿವುಡ್​ನ ನೌಕರರ ಸಂಘ ನಿಷೇಧ ಹೇರಿದೆ. ‘ಡಾನ್ 3’ ಸಿನಿಮಾದ ಒಪ್ಪಂದ ಮುರಿದು, ನಷ್ಟ ಪರಿಹಾರ ತುಂಬಿಕೊಡಲು ನಿರಾಕರಿಸಿರುವ ಕಾರಣಕ್ಕೆ ನಿರ್ಮಾಪಕ ಫರ್ಹಾನ್ ಅಖ್ತರ್, ರಣ್ವೀರ್ ವಿರುದ್ಧ ದೂರು ನೀಡಿದ್ದರು. ಇದೇ ಕಾರಣಕ್ಕೆ ಇದೀಗ ಹಿಂದಿ ಸಿನಿಮಾ ನೌಕರರ ಸಂಘ ರಣ್ವೀರ್ ವಿರುದ್ಧ ಅನಧಿಕೃತ ನಿಷೇಧ ಹೇರಿದೆ. ಪ್ರಸ್ತುತ ರಣ್ವೀರ್ ಸಿಂಗ್ ಕೈಯಲ್ಲಿ ಯಾವುದೇ ಸಿನಿಮಾಗಳಿಲ್ಲ ಆದರೆ ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ ಅವರ ಮುಂದಿನ ಸಿನಿಮಾನಲ್ಲಿ ರಣ್ವೀರ್ ಅವರೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs GT Final: ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಕ್ರಿಕೆಟ್ ದೇವರೂ ಫಿದಾ..! ಏನಂದ್ರು ನೋಡಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ಟೈಟಾನ್ಸ್ ತಂಡ, ಆರ್​ಸಿಬಿಯ (GT vs RCB) ಸಾಂಘಿಕ ದಾಳಿಗೆ ಅಕ್ಷರಶಃ ನಲುಗಿ ಹೋಯಿತು. ಈ ಪಂದ್ಯದಲ್ಲಿ ಆರ್​ಸಿಬಿಯ ಪ್ರತಿಯೊಬ್ಬ ಬೌಲರ್​ಗಳು ಕರಾರುವಕ್ಕಾದ ದಾಳಿ ನಡೆಸಿದರು. ಹೀಗಾಗಿ ತವರಿನ ಲಾಭ ಪಡೆಯುವಲ್ಲಿ ವಿಫಲವಾದ ಗುಜರಾತ್ 156 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದ ಆರ್​ಸಿಬಿ ಬೌಲಿಂಗ್ ವಿಭಾಗಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ತಮ್ಮ ಮ್ಯಾಜಿಕಲ್ ಸ್ಪಿನ್ ಮೂಲಕ ಗುಜರಾತ್ ತಂಡದ ಅನುಭವಿ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅವರನ್ನು ಔಟ್ ಮಾಡಿದ ಕೃನಾಲ್ ಪಾಂಡ್ಯ (Krunal Pandya) ಅವರ ಬೌಲಿಂಗ್​ಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಟ್ಲರ್ ಬಲಿ ಪಡೆದ ಕೃನಾಲ್

ಫೈನಲ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದ ಕೃನಾಲ್ ಪಾಂಡ್ಯ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 23 ರನ್‌ಗಳನ್ನು ಬಿಟ್ಟುಕೊಟ್ಟು ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ ಅವರ ವಿಕೆಟ್ ಪಡೆದರು. ಗುಜರಾತ್ ಇನ್ನಿಂಗ್ಸ್‌ನ 13 ನೇ ಓವರ್ ಅನ್ನು ಕೃನಾಲ್ ಪಾಂಡ್ಯ ಬೌಲಿಂಗ್ ಮಾಡಿದರು. ಇತ್ತ ಸ್ಟ್ರೈಕ್​ನಲ್ಲಿದ್ದ ಜೋಸ್ ಬಟ್ಲರ್ ಈಗಾಗಲೇ ಕ್ರೀಸ್‌ನಲ್ಲಿ ನೆಲೆಸಿದ್ದರು. ಓವರ್‌ನ ಮೊದಲ ಎಸೆತದಲ್ಲೇ ಬಟ್ಲರ್ ದೊಡ್ಡ ಶಾಟ್ ಹೊಡೆಯಲು ಮುಂದಾಗಿ ಕ್ರೀಸ್​ನಿಂದ ಹೊರಬಂದರು.

ಈ ಹಂತದಲ್ಲಿ ಜಾಣತನ ತೊರಿದ ಕೃನಾಲ್, ಚೆಂಡನ್ನು ಸ್ವಲ್ಪ ವೇಗವಾಗಿ ಯಾರ್ಕರ್ ಬೌಲ್ ಮಾಡಿದರು. ಹೀಗಾಗಿ ಬಟ್ಲರ್​ಗೆ ಆ ಚೆಂಡನ್ನು ಆಡಲು ಸಾಧ್ಯವಾಗಲಿಲ್ಲ. ಇತ್ತ ಸ್ಟಂಪ್ಸ್ ಹಿಂದೆ ಇದ್ದ ಜಿತೇಶ್ ಶರ್ಮಾ ಯಾವುದೇ ತಪ್ಪು ಮಾಡದೆ ಬಟ್ಲರ್ ಅವರನ್ನು ಸ್ಟಂಪ್ ಮಾಡಿದರು. ಹೀಗಾಗಿ ಬಟ್ಲರ್ 23 ಎಸೆತಗಳಲ್ಲಿ ಕೇವಲ 18 ರನ್ ಬಾರಿಸಲಷ್ಟೇ ಶಕ್ತವಾದರು. ಬಟ್ಲರ್ ಅವರ ಈ ವಿಕೆಟ್ ಗುಜರಾತ್ ತಂಡದ ಸ್ಕೋರ್ ಬೋರ್ಡ್​ಗೆ ದೊಡ್ಡ ಬ್ರೇಕ್ ಹಾಕಿತು.

ಕೃನಾಲ್ ಬೌಲಿಂಗ್​ಗೆ ಸಚಿನ್ ಮೆಚ್ಚುಗೆ

ಇದೀಗ ಕೃನಾಲ್ ಅವರ ಈ ಜಾಣ್ಮೆಯ ಬೌಲಿಂಗ್​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಚಿನ್ ತೆಂಡೂಲ್ಕರ್ ತಮ್ಮ ಎಕ್ಸ್ ಖಾತೆಯಲ್ಲಿ, ‘ಕೃನಾಲ್ ಪಾಂಡ್ಯ ಅವರಿಂದ ಎಂತಹ ಅದ್ಭುತ ಎಸೆತ! ಕೊನೆಯವರೆಗೂ ಬ್ಯಾಟ್ಸ್‌ಮನ್‌ನ ಪಾದಚಲನೆಯನ್ನು ಗಮನಿಸಿ ಚೆಂಡನ್ನು ಬೌಲ್ ಮಾಡಿದರು. ಇದರೊಂದಿಗೆ ಜೋಸ್ ಬಟ್ಲರ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು’ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version