IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ಬದ್ಧ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಅಳಿಸಿ ಹಾಕಿದೆ.
ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು. ಈ ಬೃಹತ್ ಮೊತ್ತದೊಂದಿಗೆ ಸಿಎಸ್ಕೆ ಪಡೆ ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.
ಅಂದರೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 273 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 35 ಬಾರಿ 200+ ಸ್ಕೋರ್ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ಸ್ಕೋರ್ಗಳಿಸಿದ ತಂಡವೆಂಬ ದಾಖಲೆ ನಿರ್ಮಿಸಿದ್ದರು.
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಸಿಎಸ್ಕೆ ಪಡೆಯು 255 ಪಂದ್ಯಗಳಲ್ಲಿ 36 ಬಾರಿ 200+ ಸ್ಕೋರ್ ಗಳಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.
ಯಶ್, ರಣಬೀರ್ ಕಪೂರ್ ಮೊದಲಾದವರು ನಟಿಸಿರುವ ‘ರಾಮಾಯಣ’ ಸಿನಿಮಾ (Ramayana Movie) ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಏಪ್ರಿಲ್ 2ರಂದು ರಿಲೀಸ್ ಆಗಿದ್ದು ಕೆಲವರಿಂದ ಟೀಕೆ ಎದುರಿಸುತ್ತಿದೆ. ಸಿನಿಮಾದ ಟೀಸರ್ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಇದು ಎಐ ಎಂದಿದ್ದಾರೆ. ಅದಕ್ಕೆ ಪೂರಕವಾದ ಕೆಲವು ಸಾಕ್ಷಿಗಳನ್ನು ಕೂಡ ಒದಗಿಸಲಾಗಿದೆ. ಹೀಗಿರುವಾಗಲೇ ‘ರಾಮಾಯಣ’ ಬಿಹೈಂಡ್ ದಿ ಸೀನ್ (ಬಿಟಿಎಸ್) ವಿಡಿಯೋ ವೈರಲ್ ಆಗಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇಲ್ಲಿದೆ ವಿವರ.
‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗು ರಾವಣನಾಗಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ. ‘ಚಿಲ್ಲರ್ ಪಾರ್ಟಿ’, ‘ದಂಗಲ್’ ರೀತಿಯ ಸಿನಿಮಾ ನೀಡಿದ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಹನುಮ ಜಯಂತಿ ಪ್ರಯುಕ್ತ ರಿಲೀಸ್ ಆದ ಟೀಸರ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.
ಈ ಟೀಕೆಯ ಬೆನ್ನಲ್ಲೇ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ರಾಮಾಯಣ’ ಸಿನಿಮಾದ ಶೂಟ್ ಯಾವ ರೀತಿ ಮಾಡಲಾಗಿದೆ ಎಂಬುದನ್ನು ತೋರಿಸಲಾಗಿದೆ. ಸೆಟ್ಗಳಲ್ಲಿ ಅದ್ದೂರಿತನ ಕಾಣಿಸಿದೆ. ಇದು ನಿಜವಾದ ವಿಡಿಯೋ ಎಂದು ಕೆಲವರು ನಂಬಿದ್ದಾರೆ! ಅಸಲಿಗೆ ಇದು ನಿಜವಾದ ವಿಡಿಯೋ ಅಲ್ಲ. ಇದು ಎಐನಿಂದ ಮಾಡಲ್ಪಟ್ಟಿದ್ದಾಗಿದೆ.
ಈ ವಿಡಿಯೋಗೆ ಕೆಲವರು ಕಮೆಂಟ್ ಮಾಡಿದ್ದಾರೆ. ವಿಡಿಯೋದ ಅಸಲಿಯತ್ತೇನು ಎಂಬುದನ್ನು ಹೇಳಿದ್ದಾರೆ. ‘ಟೀಸರ್ ಎಐನಲ್ಲಿ ಮಾಡಲಾಗಿದೆ. ಅದನ್ನು ಸಮರ್ಥಿಸಿಕೊಳ್ಳಲು ಮಾಡಿದ ವಿಡಿಯೋ ಕೂಡ ಎಐನದ್ದು’ ಎಂದು ಕೆಲವರು ಹೇಳಿದ್ದಾರೆ. ಈ ವಿಡಿಯೋ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕೆಲವರು ಇದನ್ನು ನಿಜ ಎಂದು ನಂಬಿದ್ದಾರೆ.
‘ರಾಮಾಯಣ’ ಸಿನಿಮಾದ ಬಜೆಟ್ 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ವರದಿ ಆಗಿದೆ. ಈ ವರ್ಷದ ದೀಪಾವಳಿಗೆ ಮೊದಲ ಭಾಗ ಹಾಗೂ ಮುಂದಿನ ವರ್ಷದ ದೀಪಾವಳಿಗೆ ಎರಡನೇ ಭಾಗ ರಿಲೀಸ್ ಆಗಲಿದೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಸನ್ಯಾಸಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸನ್ಯಾಸಿಯಾಗಲು ನಿರ್ದಿಷ್ಟ ವಿಧಿ ವಿಧಾನಗಳು ಮತ್ತು ಕಟ್ಟುಪಾಡುಗಳಿವೆ. ಸನ್ಯಾಸತ್ವವು ಕೇವಲ ಮಠಗಳಿಗೆ ಸೀಮಿತವಲ್ಲ. ಸನ್ಯಾಸಿಯಾಗಲು ಬಯಸುವ ವ್ಯಕ್ತಿಯು ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ಜಯಿಸಿರಬೇಕು.
ಒಬ್ಬ ಸನ್ಯಾಸಿಯು ಕುಟುಂಬ ಸಂಬಂಧಗಳಿಂದ ಮುಕ್ತನಾಗಿರಬೇಕು, ಸುಖ-ದುಃಖಗಳನ್ನು ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ಆಹಾರದ ವ್ಯಾಮೋಹವಿಲ್ಲದೆ, ಸಿಕ್ಕಿದ್ದನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು. ಚಳಿ, ಮಳೆ, ಬಿಸಿಲಿಗೆ ಆತಂಕ ಪಡಬಾರದು. ಸಮಾಜದಿಂದ ದೊರೆತದ್ದನ್ನು ತನ್ನಲ್ಲೇ ಬಚ್ಚಿಡದೆ, ಇತರರಿಗೆ ನೀಡುವ ಮನೋಭಾವ ಇರಬೇಕು. ದುಶ್ಚಟಗಳಿಂದ ದೂರವಿರಬೇಕು. ಪಾದರಕ್ಷೆಗಳು, ಛತ್ರಿ, ಮಂಚ, ತಲೆದಿಂಬು, ಆಭರಣಗಳನ್ನು ತ್ಯಜಿಸಿ, ಸರಳ ಜೀವನ ನಡೆಸಬೇಕು. ಯಾವುದೇ ಪ್ರಾಣಿಗೆ ಹಾನಿ ಮಾಡದೆ, ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು. ಭಗವಂತನ ಆರಾಧನೆಯಲ್ಲಿ ತೊಡಗಿಕೊಂಡು, ವಾಕ್ಶುದ್ಧಿ ಮತ್ತು ಭಗವಂತನ ಕೃಪೆಗೆ ಪಾತ್ರನಾಗುವುದೇ ಸನ್ಯಾಸಿ ಜೀವನದ ನಿಜವಾದ ಮಾರ್ಗ ಎಂದು ಪರಿಗಣಿಸಿದ್ದಾರೆ ಎಂದು ಗುರೂಜಿ ಹೇಳಿದ್ದಾರೆ.
ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸತತ ಯುದ್ಧದ ಭೀತಿಯು ಇದೀಗ ಭಾರತದ (India) ಆರ್ಥಿಕತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಬಾರೀ ಹೊಡೆತ ನೀಡುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್ಪಿಜಿ ಗ್ಯಾಸ್ ಮಾತ್ರವಲ್ಲದೆ ಕಚ್ಚಾ ಡಾಂಬರು ಬಿಟುಮಿನ್ (Bitumen)ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ, ಎಲ್ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆ ಜತೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ಬಿಕೋ ಎನ್ನುತ್ತಿದೆ ಕಾರವಾರ ಬಂದರು
ಇರಾಕ್ ಮತ್ತು ಯುಎಇ (UAE) ರಾಷ್ಟ್ರಗಳಿಂದ ಕಾರವಾರ ವಾಣಿಜ್ಯ ಬಂದರಿಗೆ ಬರುತ್ತಿದ್ದ ಕಚ್ಚಾ ಡಾಂಬರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಯುದ್ಧ ಆರಂಭವಾದ ಬಳಿಕ ಮಾರ್ಚ್ 13ರಂದು ಕೇವಲ ಒಂದು ಹಡಗು ಮಾತ್ರ ಬಂದಿದ್ದು, ಅಂದಿನಿಂದ ಇಂದಿನವರೆಗೆ ಯಾವುದೇ ಸರಕು ಬಂದಿಲ್ಲ. ಇದರಿಂದಾಗಿ ಕಾರವಾರ ಬಂದರು ಚಟುವಟಿಕೆಗಳಿಲ್ಲದೆ ಬಿಕೋ ಎನ್ನುತ್ತಿದೆ.
ಗಗನಕ್ಕೇರಿದ ಡಾಂಬರು ದರ: ಈಗಷ್ಟಿದೆ ಬಿಟುಮಿನ್ ದರ?
ಪೂರೈಕೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಬಿಟುಮಿನ್ ದರ ಗಗನಕ್ಕೇರಿದೆ. ಈ ಹಿಂದೆ ಪ್ರತಿ ಟನ್ಗೆ 40 ರಿಂದ 45 ಸಾವಿರ ರೂಪಾಯಿ ಇದ್ದ ದರವು ಈಗ 60 ರಿಂದ 65 ಸಾವಿರ ರೂಪಾಯಿಗೆ ಏರಿಕೆಯಾಗಿದೆ. ಗುತ್ತಿಗೆದಾರರು 20 ಸಾವಿರ ರೂಪಾಯಿ ಹೆಚ್ಚುವರಿ ಹಣ ನೀಡಲು ಸಿದ್ಧರಿದ್ದರೂ ಡಾಂಬರು ಸಿಗುತ್ತಿಲ್ಲ. ಇದು ರಸ್ತೆ ಕಾಮಗಾರಿಗಳ ಮೇಲೆ ನೇರ ಪರಿಣಾಮ ಬೀರಿದೆ.
ಸ್ತಬ್ಧಗೊಂಡ ರಸ್ತೆ ಕಾಮಗಾರಿ
ಸಾಮಾನ್ಯವಾಗಿ ಡಿಸೆಂಬರ್ನಿಂದ ಏಪ್ರಿಲ್ ತಿಂಗಳವರೆಗೆ ಮಳೆಯ ಅಬ್ಬರ ಕಡಿಮೆ ಇರುವುದರಿಂದ ದೊಡ್ಡ ಮಟ್ಟದ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಆದರೆ ಈಗ ಡಾಂಬರು ಅಭಾವದಿಂದಾಗಿ ಗುತ್ತಿಗೆ ಕಂಪನಿಗಳು ಕೆಲಸ ಮಾಡಲಾಗದೆ ಕೈಚೆಲ್ಲಿ ಕುಳಿತಿವೆ.
ಅತ್ತ ಎಲ್ಪಿಜಿ ಸಿಗದೆ ಹೋಟೆಲ್ ಉದ್ಯಮಿಗಳು ಸೌದೆ ಒಲೆ ಮತ್ತು ಇಂಡಕ್ಷನ್ ಮೊರೆ ಹೋಗುತ್ತಿದ್ದರೆ, ಗ್ಯಾಸ್ ಸಿಗದೆ ಆಟೋ ಚಾಲಕರೂ ಕಂಗಾಲಾಗಿದ್ದಾರೆ. ಇದೀಗ ಕಚ್ಚಾ ಡಾಂಬರು ಬಾರದೆ ರಸ್ತೆ ಕಾಮಗಾರಿಗಳು ಸ್ಥಗಿತಗೊಳ್ಳುತ್ತಿವೆ. ಅತ್ತ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಿತೀಯಾ ತಿಥಿಯ ಶನಿವಾರದಂದು ವ್ಯಕ್ತಿತ್ವದ ಪರೀಕ್ಷೆ, ಕಾರ್ಯಕ್ಕೆ ಕೃತಜ್ಞತೆ, ಹಣಕಾಸಿನ ಶಿಸ್ತು, ಪರರ ನಿಂದನೆ ಇವೆಲ್ಲ ಈ ದಿನದ ವಿಶೇಷ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವ್ಯಾಘಾತ, ಕರಣ : ಬವ, ಸೂರ್ಯೋದಯ – 06 – 19 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:23 – 10:55, ಯಮಗಂಡ ಕಾಲ 13:59 – 15:32, ಗುಳಿಕ ಕಾಲ 06:19 – 07:51
ಮೇಷ ರಾಶಿ :
ಇಂದು ಸಂಬಂಧಗಳಲ್ಲಿ ನಿಮ್ಮ ನಂಬಿಕೆ ಉಳಿಸಿಕೊಳ್ಳುವಿರಿ. ನಿಮ್ಮ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಪಕ್ಷಪಾತ ಮಾಡದೇ ನೀವು ಸಮಾನಭಾವದಿಂದ ನೋಡಿ. ದೇಹವನ್ನು ದಂಡಿಸಿ ಹೆಚ್ಚು ಲಾಭವನ್ನು ಗಳಿಸುವಿರಿ. ಕೆಲಸದಲ್ಲಿ ನಿಯಮಗಳಿಗೆ ಸಂಪೂರ್ಣ ಗಮನವನ್ನು ನೀಡುವುದು ಅವಶ್ಯಕ. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು. ತನ್ನವರ ಬಗ್ಗೆ ನಂಬಿಕೆ ಇರದು. ಹಲವು ದಿನಗಳಿಂದ ನೀವು ಬಯಸಿದ್ದು ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ.
ವೃಷಭ ರಾಶಿ :
ನಿಮ್ಮ ನಾಯಕತ್ವದ ಸಾಮರ್ಥ್ಯ ಎಲ್ಲರಿಗೂ ಅರಿವಾಗಬಹುದು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುವುದು ಸಾಧ್ಯವಾಗದು. ವ್ಯಾಪಾರ ಮಾಡುವ ಜನರ ಸಂತೋಷಕ್ಕೆ ಕೊನೆಯೇ ಇರುವುದಿಲ್ಲ. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ ವಸ್ತುಗಳ ಖರೀದಿ ಮಾಡುವಿರಿ.
ಮಿಥುನ ರಾಶಿ :
ನಿಮ್ಮ ಕೆಲಸದಲ್ಲಿ ನೀವು ಹೆಚ್ಚು ಜವಾಬ್ದಾರಿಯಿಂದ ವರ್ತಿಸುವಿರಿ. ಕುಟುಂಬಕ್ಕೆ ನಿಮ್ಮಿಂದ ಶುಭ ವಾರ್ತೆಯು ಬರಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ಎಲ್ಲ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯವನ್ನು ಮಾಡಬಲ್ಲರು ಎಂಬ ದೃಢತೆಯು ಇರಲಿದೆ. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳುವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸುವರು.
ಕರ್ಕಾಟಕ ರಾಶಿ :
ನಿಮ್ಮ ಧಾರ್ಮಿಕ ಭಾವನೆಗೆ ತೊಂದರೆಯಾಗಬಹುದು. ನೀವು ಈ ಹಿಂದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ನೀವು ಅದನ್ನು ಪಡೆಯಬಹುದು. ನಿಮ್ಮ ಉತ್ಸಾಹಕ್ಕೆ ಬೇಕಾದ ಮೆಚ್ಚುಗೆಯೇ ಸಿಗದಾದೀತು. ನಿಮ್ಮ ವೃತ್ತಿಜೀವನದಲ್ಲಿ ನಿಮಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆಯಿದೆ. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಸುತ್ತಾಡುವರು.
ಸಿಂಹ ರಾಶಿ :
ವ್ಯಾಪಾರಸ್ಥರಿಗೆ ದಿನವು ಅಲ್ಪ ಲಾಭದಾಯಕವಾಗಲಿದೆ. ನಿಮ್ಮ ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡುವುದನ್ನು ನೀವು ತಪ್ಪಿಸುವಿರಿ. ಹಳೆಯ ಸಾಲವನ್ನು ಉಳಿಸಿಕೊಂಡೇ ಮತ್ತೆ ಸಾಲವನ್ನು ಮಾಡಬೇಕಾದೀತು. ಒತ್ತಡದಲ್ಲಿ ನಿಮ್ಮ ಕೆಲಸದ ಪ್ರದೇಶದಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪ್ರೀತಿಯಲ್ಲಿ ಸಡಿಲಿಕೆ ಬೇಡ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಪತ್ನಿಯಿಂದ ಪ್ರಚೋದಿತರಾಗುವಿರಿ.
ಕನ್ಯಾ ರಾಶಿ :
ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಕ್ರಿಯಾತ್ಮಕ ಕೆಲಸದಲ್ಲಿ ಉತ್ತಮ ಚಿಂತನೆ ಇರಲಿದೆ. ನಿಮ್ಮವರ ಕುರಿತ ವಿಮರ್ಷೆ ಸರಿಯಾಗಿ ಇರಲಿದೆ. ನೀವು ಏನಾದರೂ ದೊಡ್ಡದನ್ನು ಸಾಧಿಸಬೇಕು ಎಂಬ ಹಂಬಲವಿರಲಿದೆ. ಭೂಮಿಯ ವ್ಯವಹಾರವನ್ನು ನೀವು ಮಾಡುವುದು ಕಷ್ಟವೆನಿಸಬಹುದು. ನೀವು ಹೂಡಿಕೆ ವಿಷಯಗಳಲ್ಲಿ ಉತ್ತಮ ಆದಾಯವನ್ನು ಪಡೆಯುವ ಸಾಧ್ಯತೆಯಿದೆ. ಅತಿಯಾದ ಚಿಂತೆಯಿಂದ ಆರೋಗ್ಯ ಹಾಳು. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ಸಮಯಕ್ಕೆ ಸಿಗದು.
ತುಲಾ ರಾಶಿ :
ನಿಮ್ಮ ಮುಖ್ಯ ವಿಷಯಗಳು ಕುಟುಂಬದಲ್ಲಿ ಚರ್ಚೆಯಾಗಬಹುದು. ರಾಜಕೀಯದಲ್ಲಿ ಆಸಕ್ತಿಯಿದ್ದರೂ ಪ್ರವೇಶಕ್ಕೆ ದಾರಿಯ ಕೊರತೆ ಇದೆ ಎನ್ನಿಸಬಹುದು. ಯಾರನ್ನೋ ನಿಮಗೆ ಹೋಲಿಸಿಕೊಂಡು ಸಂಕಟಪಡುವಿರಿ. ಸಮಯದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಅಲ್ಪ ಸಂತೋಷಕ್ಕೆ ಹಣವನ್ನು ಹಾಕುವಿರಿ. ದುಡಿಮೆ ನ್ಯಾಯದ ಪರವಾಗಿದೆ. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ.
ವೃಶ್ಚಿಕ ರಾಶಿ :
ಯಾರನ್ನೋ ನಂಬಿ ವಸ್ತುವನ್ನಾಗಿ ಕೊಟ್ಟುಹೋಗುವುದು ಬೇಡ. ಸಹೋದರಿಯಿಂದ ಹಣಕಾಸಿನ ಬೆಂಬಲವನ್ನು ಪಡೆಯುವಿರಿ. ಅನಗತ್ಯ ಕೆಲಸವನ್ನು ಮೈಮೇಲೆ ತಂದುಕೊಳ್ಳುವಿರಿ. ಸ್ನೇಹಿತರ ಅನಾರೋಗ್ಯಕ್ಕೆ ಸಹಕಾರ ಮಾಡುವಿರಿ. ನಿಮ್ಮ ಜೀವನ ಸಂಗಾತಿಯ ಜೊತೆ ಉಪಯುಕ್ತವಾದ ವಿಚಾರದಲ್ಲಿ ಚರ್ಚೆ ಮಾಡುವಿರಿ. ಹೂಡಿಕೆಯ ಬಗ್ಗೆ ನಿಮ್ಮ ಸ್ನೇಹಿತರು ನಿಮ್ಮ ಜೊತೆ ಮಾತನಾಡಬಹುದು. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು.
ಧನು ರಾಶಿ :
ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ಕಛೇರಿಗೆ ಹೋಗಿ ಕೆಲಸ ಮಾಡುವ ಸನ್ನಿವೇಶ ಬರುವುದು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು.
ಮಕರ ರಾಶಿ :
ಪ್ರಯಾಣ ಇಂದು ಬಹಳ ಬೇಸರ ಕೊಡುವುದು. ನಿಮ್ಮ ಸಂಗಾತಿಗೆ ನೀವು ಉಡುಗೊರೆಯನ್ನು ತಂದುಕೊಡುವಿರಿ. ಖರ್ಚಿನ ಬಗ್ಗೆ ಸ್ಥೂಲ ಚಿತ್ರಣವಿರಲಿ. ಅತಿಯಾದ ಉತ್ಸಾಹ, ನಂಬಿಕೆಯಿಂದ ನೀವು ತೊಂದರೆಗೆ ಸಿಲುಕುವಿರಿ. ನಿಮ್ಮ ಮಾರ್ಗವು ನೇರವಾಗಿರಲಿ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.
ಕುಂಭ ರಾಶಿ :
ವಹಿವಾಟಿನಲ್ಲಿ ದೊಡ್ಡ ಗುರಿಯನ್ನು ಸಾಧಿಸಲು ಸಾಧ್ಯ. ಇಂದಿನ ಕಛೇರಿಯ ಕಾರ್ಯವನ್ನು ಸಂತೋಷದಿಂದ ಮಾಡುವಿರಿ. ನಿಮ್ಮ ಮನಶ್ಚಾಂಚಲ್ಯವನ್ನು ಕಡಮೆ ಮಾಡಿಕೊಳ್ಳುವುದು ಉತ್ತಮ. ಮಕ್ಕಳಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳುವಿರಿ. ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಇಲ್ಲದಿದ್ದರೆ ಸಮಸ್ಯೆಗಳಿರುತ್ತವೆ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ಆತುರದಲ್ಲಿ ಯಾವ ಕೆಲಸವನ್ನೂ ಮಾಡಲು ಹೋಗುವುದು ಬೇಡ.
ಮೀನ ರಾಶಿ :
ಪ್ರತಿಭೆಯ ಪ್ರಕಾಶಕ್ಕೆ ಅವಕಾಶ. ಸಹಕಾರದ ಮನೋಭಾವವು ನಿಮ್ಮ ಮನಸ್ಸಿನಲ್ಲಿ ಇರುವುದು. ಎಲ್ಲರ ಜೊತೆ ಬೆರೆಯಲು ನೀವು ಇಷ್ಟಪಡುವಿರಿ. ಕುಟುಂಬ ವ್ಯವಹಾರದಲ್ಲಿ ಸಂಗಾತಿಯ ಸಲಹೆಯು ಉಪಯುಕ್ತವೆನಿಸಬಹುದು. ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಡೆಯುವ ಕಾರ್ಯಗಳಿಂದ ಮೌನವಹಿಸುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯಿಂದ ನಿಮಗೆ ಬೆಂಬಲ ಸಿಗುವುದು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್ಗಳಲ್ಲಿ ಐದು ವಿಕೆಟ್ಗಳಿಗೆ 209 ರನ್ ಗಳಿಸಿತು. ತಂಡದ ಪರ ಆಯುಷ್ ಮ್ಹಾತ್ರೆ 73 ರನ್ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ 18.4 ಓವರ್ಗಳಲ್ಲಿ 5 ವಿಕೆಟ್ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಇದರೊಂದಿಗೆ ಪಂಜಾಬ್ ಲೀಗ್ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದರೆ, ಇತ್ತ ಸಿಎಸ್ಕೆ ಸತತ ಎರಡನೇ ಸೋಲು ಕಂಡಿತು.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಹಲವು ವರ್ಷಗಳಿಂದ ಅವರು ಯಾವುದೇ ಹೊಸ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಅವರು ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡದ ಸೆಲೆಬ್ರಿಟಿಗಳ ಜೊತೆಗೂ ಅವರು ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಈಗ ಅವರು ಸಿಂಪಲ್ ಸುನಿ (Simple Suni) ನಿರ್ದೇಶನದ ಹೊಸ ಸಿನಿಮಾಗೆ ಶುಭ ಕೋರಿದ್ದಾರೆ. ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಅವರ ‘ಚಮಕ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದರು. ಹಾಗಾಗಿ ಅವರಿಬ್ಬರ ನಡುವೆ ಬಾಂಧವ್ಯ ಇದೆ. ಈಗ ಸುನಿ ಅವರು ‘ಮೋಡ ಕವಿದ ವಾತಾವರಣ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಹೊಸ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಆಗಿದೆ. ಅದನ್ನು ರಶ್ಮಿಕಾ ಮಂದಣ್ಣ ಅವರು ಶೇರ್ ಮಾಡಿದ್ದಾರೆ.
ಸುನಿ ಅವರ ‘ಎಕ್ಸ್’ (ಟ್ವಿಟರ್) ಖಾತೆಯ ಪೋಸ್ಟ್ ಅನ್ನು ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು, ‘ಸುನಿ ಸರ್ ನಿಮಗೆ ಮತ್ತು ನಿಮ್ಮ ಸಿನಿಮಾ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ‘ತುಂಬು ಹೃದಯದ ಧನ್ಯವಾದಗಳು. ಸದಾ ಖುಷಿಯಾಗಿರಿ’ ಎಂದು ಸುನಿ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡದ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ವಿಶ್ ಮಾಡಿದ್ದು ನೋಡಿ ಹಲವರಿಗೆ ಅಚ್ಚರಿ ಆಗಿದೆ. ನೆಟ್ಟಿಗರು ಕಮೆಂಟ್ಗಳ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ.
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿ ಯುವ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ಶೀರ್ಷಿಕೆ ಮೂಲಕ ಈ ಸಿನಿಮಾ ಕುತೂಹಲ ಹೆಚ್ಚಿಸಿದೆ. ಜೂನ್ 26ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸುನಿ ಅವರ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ‘ರಾಮ್ ಮೂವೀಸ್’ ಸಂಸ್ಥೆಯೇ ಈಗ ‘ಮೋಡ ಕವಿದ ವಾತಾವರಣ’ ಚಿತ್ರಕ್ಕೆ ಬಂಡವಾಳ ಹೂಡಿದೆ.
ಈ ಸಿನಿಮಾಗೆ ಸಂತೋಷ್ ರೈ ಪಾತಾಜೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಅವರು ಸಂಗೀತ ನೀಡಿದ್ದಾರೆ. ಆದಿತ್ಯ ಕಶ್ಯಪ್ ಅವರ ಸಂಕಲನ ಈ ಚಿತ್ರಕ್ಕಿದೆ. ಸೈಂಟಿಫಿಕ್ ಫಿಕ್ಷನ್ ಲವ್ ಸ್ಟೋರಿ ಈ ಸಿನಿಮಾದಲ್ಲಿ ಇರಲಿದೆ. ಶೀಲಮ್ ಅವರ ಜೊತೆ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ.
ಬಾಗಲಕೋಟೆ, ಏಪ್ರಿಲ್ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15% ಮುಸ್ಲಿಮರನ್ನು ಓಲೈಸಲು ಹಿಂದೂಗಳ ಭಾವನೆಗೆ ಧಕ್ಕೆ ತಂದಂತೆ. 85% ಹಿಂದೂಗಳಿದ್ದರೂ ಹರಿದು ಹಂಚಿ ಹೋಗಿದ್ದಾರೆ. ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ, ಪಂಜಾಬ್ ತಂಡಕ್ಕೆ 210 ರನ್ಗಳ ಗುರಿ ನೀಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್ಗಳಲ್ಲಿ ಐದು ವಿಕೆಟ್ಗಳಿಗೆ 209 ರನ್ ಗಳಿಸಿತು. ಪಂಜಾಬ್ ಪರ ಆಯುಷ್ ಮ್ಹಾತ್ರೆ 73 ರನ್ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್ಗೆ ಆರಂಭಿಕ ಪ್ರಿಯಾಂಶ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು.
ಪ್ರಿಯಾಂಶ್ ಆರ್ಯ, ಖಲೀಲ್ ಅಹ್ಮದ್ ಎಸೆದ ಇನ್ನಿಂಗ್ಸ್ನ ಮೊದಲ ಓವರ್ನ ಮೊದಲ ಎಸೆತದಲ್ಲಿ ಬೌಂಡರಿಸಿದರೆ, ನಂತರದ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಎರಡನೇ ಓವರ್ನಲ್ಲೂ ಅಬ್ಬರಸಿದ ಪ್ರಿಯಾಂಶ್ ಆರ್ಯ, ಮ್ಯಾಟ್ ಹೆನ್ರಿ ಬೌಲಿಂಗ್ನಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. 3ನೇ ಓವರ್ನಲ್ಲೂ ಸಿಕ್ಸರ್ ಬಾರಿಸಿದ ಪ್ರಿಯಾಂಶ್ ಕೇವಲ 9 ಎಸೆತಗಳಲ್ಲಿ 33 ರನ್ ಕಲೆಹಾಕಿದರು.
ಪ್ರಿಯಾಂಶ್ ಅವರ ಸ್ಫೋಟಕ ಬ್ಯಾಟಿಂಗ್ನಿಂದಾಗಿ ಪಂಜಾಬ್ ಕೇವಲ 20 ಎಸೆತಗಳಲ್ಲಿ ಅರ್ಧಶತಕದ ಗಡಿ ದಾಟಿತು. ತನ್ನ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಪ್ರಿಯಾಂಶ್ ಐದನೇ ಓವರ್ನ ಮೊದಲ ಎಸೆತದಲ್ಲಿ ಮತ್ತೊಂದು ಸಿಕ್ಸರ್ ಬಾರಿಸಿದರು. ಆದರೆ ಮುಂದಿನ ಎಸೆತದಲ್ಲಿ ಮ್ಯಾಟ್ ಹೆನ್ರಿ ಬೌಲಿಂಗ್ನಲ್ಲಿ ಬೌಲ್ಡ್ ಆದರು. ಆದಾಗ್ಯೂ, ಪ್ರಿಯಾಂಶ್ ಕೇವಲ 11 ಎಸೆತಗಳಲ್ಲಿ ನಾಲ್ಕು ಸಿಕ್ಸರ್ಗಳು ಮತ್ತು ಮೂರು ಬೌಂಡರಿಗಳನ್ನು ಒಳಗೊಂಡಂತೆ 39 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್ಗಟ್ಟಲೇ ಹನುಮನ ಬಾಲದಂತೆ ಆಟೋಗಳ ಸಾಲು ಸಾಮಾನ್ಯವಾಗಿ ಬಿಟ್ಟಿದೆ. ಯಾವ ಬಂಕ್ ನೋಡಿದ್ರೂ ಕನಿಷ್ಠ 100 ರಿಂದ 200 ಆಟೋಗಳು ಇದ್ದೇ ಇರ್ತವೆ. ಮನೆ ಮಕ್ಕಳು ಬೀದಿಯಲ್ಲಿ ನಿಲ್ಲೋ ಸ್ಥಿತಿ ಬಂದೊದಗಿದೆ.