ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು? – Kannada News | Karnataka government Letter To election commission for Postpone GBA Election

ಬೆಂಗಳೂರು, (ಏಪ್ರಿಲ್ 17): ಇದೇ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ (GBA Election) ನಡೆಸುವಂತೆ ಸುಪ್ರೀಂಕೋರ್ಟ್ ಅದೇಶಿಸಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ (Karnataka Government), ನಾನಾ ಕಾರಣಗಳನ್ನು ನೀಡಿ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಮನವಿ ಮಾಡಿದೆ. ಈ ಸಂಬಂಧ ಸಿದ್ದರಾಮಯ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ (Karnataka Election Commission) ಪತ್ರ ಬರೆದಿದ್ದು, ಜನ ಗಣತಿ ಕಾರಣ ಮುಂದಿಟ್ಟು ಸೆಪ್ಟೆಂಬರ್ 30ರ ರವರೆಗೆ ವಿಸ್ತರಣೆಗೆ ಮನವಿ ಮಾಡಿದೆ.

ಸರ್ಕಾರ ಬರೆದ ಪತ್ರದಲ್ಲೆನಿದೆ?

ಜನಗಣತಿ ಕಾರ್ಯದಲ್ಲಿ ಇಡೀ ಆಡಳಿತ ಯಂತ್ರ ತೊಡಗಿಸಿಕೊಂಡಿದೆ. ಜನ ಗಣತಿಯನ್ನು ಸಮಯಕ್ಕೆ ಸೀಮಿತವಾಗಿ ಮುಗಿಸಬೇಕು . ಎಣಿಕೆ ಮೇಲ್ವಿಚಾರಣೆ, ತರಬೇತಿ ಮತ್ತು ಲಾಜಿಸ್ಟಿಕ್ಸ್ಗಾಗಿ ವ್ಯಾಪಕ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳಿಗೆ ಸೀಮಿತ ಅವಕಾಶವಿದೆ. ಮತದಾರರ ಪಟ್ಟಿಯ ವಿಶೇಷ ವರಿಷ್ಕರಣೆ (SIR) ಸಹ ಏಕಕಾಲದಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ. ಇದಕ್ಕೆ ಅದೇ ಕ್ಷೇತ್ರ ಮಟ್ಟದ ಕಾರ್ಯನಿರ್ವಾಹಕರನ್ನು ಒಳಗೊಂಡಿರುತ್ತದೆ . ಮೇ-ಜೂನ್ ಅವಧಿಯಲ್ಲಿ ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಇದರಿಂದ ಲಭ್ಯವಿರುವ ಮಾನವಶಕ್ತಿ ಮತ್ತಷ್ಟು ಕಡಿಮೆ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಾಲಾವಕಾಶ ಬೇಕಿದ್ದು, ಚುನಾವಣಾ ಕಾಲಮಿತಿಯನ್ನು ಸೆಪ್ಟೆಂಬರ್ 30, 2026 ರವರೆಗೆ ವಿಸ್ತರಿಸಿ ಎಂದು ಸರ್ಕಾರ, ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದೆ.

ಇದನ್ನೂ ನೋಡಿ: ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದ ಹೊರಡಿಸಿತ್ತು. ಕೋರ್ಟ್ ಆದೇಶ ಹಿನ್ನಲೆ ಚುನಾವಣೆಗೆ ಅಗತ್ಯವಿರುವ ಪ್ರಕ್ರಿಯೆಗಳನ್ನು ಸರ್ಕಾರ ಮುಗಿಸಿದ್ದು, ಚುನಾವಣೆ ನಡೆಸುವ ಸಂಬಂಧ ಆಯೋಗವು ಸಹ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ ಏಕಾಏಕಿ, ಚುನಾವಣೆಯನ್ನು ಮುಂದೂಡಿ ಎಂದು ಪತ್ರ ಬರೆದಿದೆ.

ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟಂಬರ್ 2020ರಲ್ಲಿ ಕೊನೆಗೊಂಡಿತ್ತು. ಅದಾದ ಬಳಿಕ ಇಲ್ಲಿವರೆಗೂ ಚುನಾವಣೆ ನಡೆದಿಲ್ಲ. ಇದೀಗ ಮತ್ತೆ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೊಗ ಯಾವ ರೀತಿ ಸ್ಪಂದಿಸುತ್ತೆ ಎನ್ನುವುದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಳೆದ 5 ವರ್ಷದಿಂದ ಅಕ್ಷಯ ತೃತೀಯದಂದು ಚಿನ್ನ ಖರೀದಿಸುತ್ತಿದ್ದರೆ ಇವತ್ತಿನ ಮೌಲ್ಯವೆಷ್ಟಿರುತ್ತಿತ್ತು ಗೊತ್ತಾ? – Kannada News | Akshaya Tritiya Gold Investment: 5 Year Returns Show How Your Wealth Could Grow

ಅಕ್ಷಯ ತೃತೀಯವು (Akshaya Tritiya) ಭಾರತೀಯರ ಪಾಲಿಗೆ ಬಹಳ ಪುಣ್ಯವೆಂದು ಭಾವಿಸಲಾಗಿರುವ ದಿನ. ಶುಭ ಕಾರ್ಯಗಳಿಗೆ ಈ ದಿನ ಶ್ರೇಷ್ಠ ಎನ್ನಲಾಗಿದೆ. ಚಿನ್ನ ಹಾಗೂ ಅದರ ಸಂಬಂಧಿತ ಉತ್ಪನ್ನಗಳನ್ನು ಖರೀದಿಸಿದರೆ ಸಂಪತ್ತು ಸಮೃದ್ಧವಾಗಿ ಸೇರುತ್ತದೆ ಎನ್ನುವ ನಂಬಿಕೆ ಇದೆ. ಅಂತೆಯೇ, ಬಹಳಷ್ಟು ಹಿಂದೂಗಳು ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸುತ್ತಾರೆ.

ಈ ವರ್ಷ (2026) ಅಕ್ಷಯ ತೃತೀಯವು ಏಪ್ರಿಲ್ 19ರಂದು ಇದೆ. ಭಾನುವಾರವೇ ಆಗಿರುವುದರಿಂದ ಹೆಚ್ಚಿನ ಜನರು ಒಡವೆ ಅಂಗಡಿಗಳಿಗೆ ಮುಗಿಬೀಳುವುದು ಹೌದು. ಅಕ್ಷಯ ತೃತೀಯದಂದು ಹೂಡಿಕೆಗಾಗಿ ಚಿನ್ನ ಖರೀದಿಸುವ ಟ್ರೆಂಡ್ ಶುರುವಾಗಿದೆ. ಹಲವು ಜನರು ಪ್ರತೀ ವರ್ಷವೂ ಅಕ್ಷಯ ತೃತೀಯದಂದು ಚಿನ್ನದ ನಾಣ್ಯವನ್ನು ಖರೀದಿಸಿ ಇಟ್ಟುಕೊಳ್ಳುವುದು ವಾಡಿಕೆಯಾಗಿದೆ.

ಇದನ್ನೂ ಓದಿ: ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್

2021ರಿಂದ, ಅಂದರೆ ಕಳೆದ 5 ವರ್ಷದಿಂದ ಅಕ್ಷಯ ತೃತೀಯ ದಿನದಂದು 10 ಗ್ರಾಮ್ ಚಿನ್ನದ ಖರೀದಿ ಮಾಡುತ್ತಾ ಬಂದರೆ ಹೇಗಿರುತ್ತಿತ್ತು? ಈ ಐದು ವರ್ಷದಲ್ಲಿ ಚಿನ್ನ ಖರೀದಿಸಲು ಎಷ್ಟು ವ್ಯಯಿಸುತ್ತಿದ್ದಿರಿ, ಈಗ ಅದರ ಮೌಲ್ಯ ಎಷ್ಟಿರುತ್ತಿತ್ತು ಎನ್ನುವ ಮಾಹಿತಿ ಇಲ್ಲಿದೆ.

10 ಗ್ರಾಮ್ ಗೋಲ್ಡ್ ಕಾಯಿನ್ ಮೇಲೆ ಹೂಡಿಕೆ

  • 2021ರಲ್ಲಿ 1 ಗ್ರಾಮ್ ಚಿನ್ನದ ಬೆಲೆ 46,500 ರೂ
  • 2022ರಲ್ಲಿ 1 ಗ್ರಾಮ್ ಚಿನ್ನದ ಬೆಲೆ 51,510 ರೂ
  • 2023ರಲ್ಲಿ 1 ಗ್ರಾಮ್ ಚಿನ್ನದ ಬೆಲೆ 61,300 ರೂ
  • 2024ರಲ್ಲಿ 1 ಗ್ರಾಮ್ ಚಿನ್ನದ ಬೆಲೆ 73,240 ರೂ
  • 2025ರಲ್ಲಿ 1 ಗ್ರಾಮ್ ಚಿನ್ನದ ಬೆಲೆ 96,500 ರೂ

ಈ ಐದು ವರ್ಷದಲ್ಲಿ ಖರೀದಿಸಲಾದ 50 ಗ್ರಾಮ್ ಚಿನ್ನಕ್ಕೆ ಹೂಡಿಕೆ ಮಾಡಲಾಗಿರುವುದು 3,29,050 ರೂ. ಇವತ್ತು ಒಂದು ಗ್ರಾಮ್ ಚಿನ್ನದ ಬೆಲೆ 1.55 ಲಕ್ಷ ರೂ ಇದೆ. ಇದನ್ನು ಪರಿಗಣಿಸಿ ಲೆಕ್ಕ ಮಾಡಿದರೆ 50 ಗ್ರಾಮ್ ಚಿನ್ನಕ್ಕೆ ಇವತ್ತಿನ ಮೌಲ್ಯ 7,75,000 ರೂ ಆಗುತ್ತದೆ. ಅಂದರೆ ನೀವು ಮಾಡಿದ ಹೂಡಿಕೆಯು ಎರಡು ಪಟ್ಟಿಗೂ ಹೆಚ್ಚು ಲಾಭ ತಂದಂತಾಗುತ್ತದೆ.

ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ; ಹಣ ಡಬಲ್ ಮಾಡುವ ಪೋಸ್ಟ್ ಆಫೀಸ್ ಸ್ಕೀಮ್

ನಿಯಮಿತ ಹೂಡಿಕೆಯನ್ನು ವಾರ್ಷಿಕ ರಿಟರ್ನ್​ನಲ್ಲಿ ಅಳೆಯಲು ಎಕ್ಸ್​ಐಆರ್​ಆರ್ ಅನ್ನು ಬಳಸಲಾಗುತ್ತದೆ. ಅದರ ಪ್ರಕಾರ ಚಿನ್ನವು ಕಳೆದ 5 ವರ್ಷದಲ್ಲಿ ಶೇ. 39-41 ಎಕ್ಸ್​ಐಆರ್​ಆರ್ ರಿಟರ್ನ್ ನೀಡಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಆರ್​ಸಿಬಿ- ಡೆಲ್ಲಿ ಕಾಳಗಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಬೆಂಗಳೂರು ಹವಾಮಾನ? – Kannada News | RCB vs DC IPL 2026 Match Preview: Chinnaswamy Pitch, Prediction and Head to Head

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಏಪ್ರಿಲ್ 18 ರಂದು ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದೆ. ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು. ಸತತ ಎರಡು ಪಂದ್ಯಗಳನ್ನು ಸೋತಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ.

ಮುಖಾಮುಖಿ ದಾಖಲೆ

ಈ ಪಂದ್ಯವು ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡಕ್ಕೂ ಬಹಳ ಮುಖ್ಯವಾಗಿದೆ. ಆರ್‌ಸಿಬಿ ಮೊದಲ ಸ್ಥಾನ ತಲುಪಲು ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಹಾದಿಗೆ ಬರಲು ಗೆಲುವು ಅಗತ್ಯ. ಇಲ್ಲಿಯವರೆಗೆ, ಎರಡೂ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯಧಿಕ 215 ರನ್ ಗಳಿಸಿದರೆ, 135 ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ 196 ರನ್‌ಗಳ ಅತ್ಯಧಿಕ ಸ್ಕೋರ್ ದಾಖಲಿಸಿದರೆ, 95 ಅತ್ಯಂತ ಕಡಿಮೆ ಸ್ಕೋರ್ ಆಗಿದೆ.

ಬೆಂಗಳೂರು ಪಿಚ್ ವರದಿ

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ತಂಡವು ರನ್ ಚೇಸ್‌ಗೆ ಆದ್ಯತೆ ನೀಡುತ್ತದೆ. ಇದು ಹೆಚ್ಚಿನ ಸ್ಕೋರಿಂಗ್ ಪಿಚ್ ಆಗಿದ್ದು, ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಲು ಕೇವಲ 15.1 ಓವರ್‌ಗಳಲ್ಲಿ 147 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಹೀಗಾಗಿ ಇಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡ ಕನಿಷ್ಠ 200 ರನ್ ಗಳಿಸಬೇಕಾಗುತ್ತದೆ.

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್

ಹವಾಮಾನ ಹೇಗಿರಲಿದೆ?

ಪಂದ್ಯದ ದಿನದಂದು ಅಂದರೆ ಏಪ್ರಿಲ್ 17, 2026 ರಂದು ಬೆಂಗಳೂರಿನಲ್ಲಿ ಹವಾಮಾನವು ಸ್ಪಷ್ಟವಾಗಿರಲಿದೆ. ಅಂದರೆ ಪಂದ್ಯದ ದಿನದಂದು ಮಳೆ ಬೀಳುವ ಸೂಚನೆಗಳಿಲ್ಲ. ಬದಲಿಗೆ ಪಂದ್ಯ ಮಧ್ಯಾಹ್ನ ನಡೆಯಲಿರುವ ಕಾರಣ ಸುಡುವ ಬಿಸಿಲು ಆಟಗಾರರನ್ನು ಹೈರಾಣಾಗಿಸಬಹುದು. ತಾಪಮಾನವು 32 ರಿಂದ 34 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ‘ಸನ್ ಪಿಕ್ಚರ್ಸ್’ ವಕ್ತಾರರು, ‘ನಮ್ಮ ಆ್ಯಂಟಿ ಪೈರಸಿ ತಂಡವು ಪರಿಸ್ಥಿತಿಯನ್ನು ಗಮನಿಸುತ್ತಿದೆ. ಲೀಕ್ ಆಗಿರುವ ವಿಡಿಯೋಗಳನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ. ಈ ವಿಡಿಯೋಗಳನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಅಭಿಮಾನಿಗಳಿಗೆ ಮತ್ತು ಮಾಧ್ಯಮಗಳಿಗೆ ಕೂಡ ಎಚ್ಚರಿಕೆ ನೀಡಿರುವ ಸಂಸ್ಥೆಯು, ‘ಈ ವಿಡಿಯೋವನ್ನು ಹಂಚಿಕೊಳ್ಳಬೇಡಿ ಅಥವಾ ಮರುಪೋಸ್ಟ್ ಮಾಡಬೇಡಿ. ಇದರಿಂದ ನಿಮ್ಮ ಖಾತೆಗಳು ಸಸ್ಪೆಂಡ್ ಆಗಬಹುದು ಅಥವಾ ನಿರ್ಬಂಧಕ್ಕೆ ಒಳಗಾಗಬಹುದು. ಒಂದು ವೇಳೆ ಖಾತೆ ಸಸ್ಪೆಂಡ್ ಆದರೆ ಅದಕ್ಕೆ ನಿರ್ಮಾಣ ಸಂಸ್ಥೆ ಜವಾಬ್ದಾರಿಯಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ.

ಏಪ್ರಿಲ್ 9ರಂದು ನಟ ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬರು ಬೇರೆ ಸಿನಿಮಾದ ಫ್ರೀಲಾನ್ಸ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ತಮಿಳು ಚಿತ್ರರಂಗಕ್ಕೆ ಪದೇ ಪದೇ ಲೀಕ್ ಕಾಟ ಎದುರಾಗುತ್ತಿದೆ. ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪನಿಗಳನ್ನೇ ಕಿಡಿಗೇಡಿಗಳು ಟಾರ್ಗೆಟ್ ಮಾಡುತ್ತಿದ್ದಾರೆ. ‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾದ ಶೂಟಿಂಗ್ ದೃಶ್ಯವನ್ನು ಸೋರಿಕೆ ಮಾಡಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಚಿತ್ರತಂಡಗಳಿಗೆ ತೊಂದರೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress

ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ 

ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ ವಾತಾವರಣ ಬೆಂಗಳೂರಿಗರನ್ನ ಹೈರಾಣಾಗಿಸಿದೆ. ಮುಂಜಾನೆ ಸೂರ್ಯನ ಉದಯವಾಗುತ್ತಿದ್ದಂತೆ ಬಿರುಬಿಸಿಲು, ರಾತ್ರಿ ಆದರೆ ಬಿಸಿ ಗಾಳಿ, ಈ ವರ್ಷದ ತಾಪಮಾನ ಹಾಗೂ ಸೆಕೆಯಿಂದ ಜನರು ಕಂಗಾಲಾಗಿದ್ದರೆ ಗರ್ಭಿಣಿಯರು, ವೃದ್ಧರು, ಮಕ್ಕಳ ಬಗ್ಗೆ ವೈದ್ಯರು ತುಸು ಎಚ್ಚರ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಕೂಲ್ ಕೂಲ್ ಸಿಟಿಗೆ ಈಗ ವೆದರ್ ಟ್ರಬಲ್ ಶುರುವಾಗಿದೆ. ಬಿಸಿಲಿನ ಎಫೆಕ್ಟ್ ಜನರ ಆರೋಗ್ಯಕ್ಕೆ ಸಂಕಷ್ಟ ತರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ವೆದರ್ ತೊಂದರೆ ಕೊಡುತ್ತಿದೆ. ಹೀಗಾಗಿ ಸಿಟಿಯ ಆಸ್ಪತ್ರೆಗಳಲ್ಲಿ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಏನು?

ಇನ್ನು ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ನೀಡಲಾಗಿದೆ. ತಾಪಮಾನ ಇಳಿಕೆಯವರೆಗೂ ಅಂದರೆ 11 ರಿಂದ 4 ಗಂಟೆ ವರೆಗೆ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಸಲಹೆ ನೀಡಲಾಗಿದೆ. ಇನ್ನು ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಬಿಸಿ ಗಾಳಿ ಬೀಸುವ ಪ್ರದೇಶಗಳ ಬಗ್ಗೆ ಗಮನ ಹರಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ಇದೆ. ಈ ತಿಂಗಳು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸೂಕ್ತ‌ ಎಚ್ಚರಿಕೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ತಾಪಮಾನ ಏರಿಕೆಯಿಂದ ನಿರ್ಜಲೀಕರಣ ಹಾಗೂ ಉಸಿರಾಟದ ಸಮಸ್ಯೆ ಎದುರಾಗುವ ಸಮಸ್ಯೆ ಇದ್ದು, ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳುವಂತೆ ತಿಳಿಸಲಾಗಿದೆ. ಹೀಗಾಗಿ‌ ಸಿಲಿಕಾ‌ನ್ ಸಿಟಿ ಜನರು ದೇಹದ ತಾಪಮಾನವನ್ನ ಚೆನ್ನಾಗಿ ಇಟ್ಟುಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ – Kannada News | NDA leaders protest in Parliament premises as the womens reservation bill fails to pass in Lok Sabha

ನವದೆಹಲಿ, ಏಪ್ರಿಲ್ 17: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ (Women’s Reservation) ನೀಡುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಕಾರಣದಿಂದಾಗಿ ಸಂಸತ್ತಿನ ಆವರಣದಲ್ಲಿ ಎನ್‌ಡಿಎ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ ಸೋಲನ್ನು ಅನುಭವಿಸಿತು. ಹೀಗಾಗಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ 2026, ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಕೂಡ ಕೈಬಿಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು.

ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ ದ್ವೇಷವಿರಲಿಲ್ಲ, ಅಸೂಯೆ ಇರಲಿಲ್ಲ. ಬದಲಿಗೆ, ಒಂದು ಮಂದಹಾಸವಿತ್ತು. ಆದರೆ ಆ ನಗುವಿನ ಹಿಂದೆ ಒಂದು ಭಾರವಾದ ಮೌನವಿತ್ತು. ಅವಳ ಕಣ್ಣುಗಳು ತುಂಬಿ ಬಂದಿದ್ದವು, ಆ ಕಣ್ಣುಗಳು ಏನೋ ಹೇಳಲು ಪ್ರಯತ್ನಿಸುತ್ತಿದ್ದವು, ಆದರೆ ನಮ್ಮ ವೇಗದ ಬದುಕಿನಲ್ಲಿ ಯಾರಿಗೂ ಅದು ಅರ್ಥವಾಗುತ್ತಿರಲಿಲ್ಲ. ಜೀವನ ಕೆಲವೊಮ್ಮೆ ಕಷ್ಟಗಳು ಬರಬಹುದು, ಆದರೆ ಅಂತಹ ಸಂದರ್ಭದಲ್ಲೂ ಈ ಪುಟ್ಟ ಹುಡುಗಿಯಂತೆ ನಗುನಗುತ್ತಾ ಬದುಕನ್ನು ಎದುರಿಸುವುದು ನಿಜವಾದ ಶೌರ್ಯ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಓವರ್ ಟೆಕ್ ಮಾಡಲು ಹೋದಾಗ ಘಟನೆ ಸಂಭವಿಸಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ – Kannada News | Lissy Lakshmi slams Kalyani Priyadarshan and Pranav Mohanlal wedding rumours

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ಇತ್ತೀಚೆಗೆ ಮಲಯಾಳಂ ಹೊಸ ವರ್ಷವಾದ ವಿಷು ಹಬ್ಬದ ಪ್ರಯುಕ್ತ ಲಿಸ್ಸಿ ಲಕ್ಷ್ಮಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶುಭಾಶಯ ಕೋರಿ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ಗೆ ಅಭಿಮಾನಿಯೊಬ್ಬರು, ‘ಕಲ್ಯಾಣಿ ಮತ್ತು ಪ್ರಣವ್ ಮದುವೆಯ ನಿರೀಕ್ಷೆಯಲ್ಲಿ..’ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಲಿಸ್ಸಿ, ‘ಇದು ಸುಳ್ಳು ಸುದ್ದಿ’ ಕಮೆಂಟ್ ಮಾಡುವ ಮೂಲಕ ಎಲ್ಲ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ಕಲ್ಯಾಣಿ ಮತ್ತು ಪ್ರಣವ್ ಬಾಲ್ಯದ ಸ್ನೇಹಿತರು. ಚಿತ್ರರಂಗಕ್ಕೆ ಬರುವ ಮೊದಲಿನಿಂದಲೂ ಇಬ್ಬರ ಕುಟುಂಬಗಳ ನಡುವೆ ಉತ್ತಮ ಸಂಬಂಧವಿದೆ. ಕಲ್ಯಾಣಿ ಅವರು ಪ್ರಣವ್ ಅವರನ್ನು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಾರೆ. ಅವರಿಬ್ಬರ ನಡುವೆ ಒಡಹುಟ್ಟಿದವರ ರೀತಿ ಬಾಂಧವ್ಯ ಇದೆ. ಆ ಬಗ್ಗೆ ಕಲ್ಯಾಣಿ ಪ್ರಿಯದರ್ಶನ್ ಅವರು ಈ ಮೊದಲು ಕೂಡ ಹೇಳಿದ್ದರು.

ತಮ್ಮ ಸಂಬಂಧದ ಬಗ್ಗೆ ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಲ್ಯಾಣಿ, ‘ನನ್ನ ಸ್ವಂತ ಸಹೋದರನಿಗಿಂತ ಅಪ್ಪು ಜೊತೆಗೇ ನನ್ನ ಫೋಟೋಗಳು ಹೆಚ್ಚಿವೆ. ನಮ್ಮದು ಒಡಹುಟ್ಟಿದವರ ರೀತಿಯ ಬಾಂಧವ್ಯ. ಚೆನ್ನೈನಲ್ಲಿ ನನ್ನ ಸ್ನೇಹಿತರಿಗೆ ನಾನು ಆತನನ್ನು ಕಸಿನ್ ಎಂದೇ ಪರಿಚಯಿಸುತ್ತಿದ್ದೆ’ ಎಂದು ಹೇಳಿದ್ದರು. ಆದರೂ ಜನರು ಗಾಸಿಪ್ ಮಾಡೋದು ನಿಲ್ಲಿಸಿಲ್ಲ.

ಇದನ್ನೂ ಓದಿ: ಮೋಹನ್​ಲಾಲ್ ಪುತ್ರ ಪ್ರಣವ್ ಜೀವನಕ್ಕೆ ವಿದೇಶಿ ಮಹಿಳೆ ಎಂಟ್ರಿ

‘ಹೃದಯಂ’ ಸಿನಿಮಾದಲ್ಲಿ ಕಲ್ಯಾಣಿ ಮತ್ತು ಪ್ರಣವ್ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಫಿದಾ ಆಗಿದ್ದ ಅಭಿಮಾನಿಗಳು, ಇವರು ನಿಜ ಜೀವನದಲ್ಲೂ ಒಂದಾಗಲಿ ಎಂದು ಹಾರೈಸುತ್ತಿದ್ದರು. ಆದರೆ ಲಿಸ್ಸಿ ಅವರ ಈ ಸ್ಪಷ್ಟನೆಯಿಂದ ಪ್ರಣವ್ ಮತ್ತು ಕಲ್ಯಾಣಿ ಕೇವಲ ಆತ್ಮೀಯ ಸ್ನೇಹಿತರು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು! – Kannada News | Lower Your Cancer Risk: 4 Science Backed Daily Habits

Lower Your Cancer Risk: 5 Science-Backed Daily HabitsImage Credit source: Getty Images

ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು ಮತ್ತು ಆಹಾರ ಪದ್ಧತಿಗಳೊಂದಿಗೆ ಸಂಬಂಧ ಹೊಂದಿವೆ. ಆದ್ದರಿಂದ ಜೀವನಶೈಲಿಯಲ್ಲಿ ಬದಲಾವಣೆ ತರುವುದು ಅತ್ಯಂತ ಮುಖ್ಯ ಎನ್ನುತ್ತಾರೆ. ಹಾಗಾದರೆ ಯಾವ ರೀತಿಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯಕರ ಆಹಾರ ಸೇವನೆ ಮಾಡಿ

ಹಸಿರು ತರಕಾರಿ, ಹಣ್ಣು ಮತ್ತು ಪೋಷಕಾಂಶಯುಕ್ತ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಕಿತ್ತಳೆ, ಮಾವಿನ ಹಣ್ಣುಗಳಂತಹ ಸಿಟ್ರಸ್ ಹಣ್ಣುಗಳು ಮತ್ತು ಡ್ರೈ ಫ್ರೂಟ್ಸ್‌ಗಳನ್ನು ಆಹಾರದಲ್ಲಿ ಸೇರಿಸುವುದು ಫ್ರೀ ರ್ಯಾಡಿಕಲ್‌ಗಳಿಂದ ರಕ್ಷಿಸುತ್ತದೆ. ಫಾಸ್ಟ್ ಫುಡ್ ಮತ್ತು ಹೆಚ್ಚು ಮಸಾಲೆ ಬಳಕೆಯನ್ನು ತಪ್ಪಿಸುವುದು ಉತ್ತಮ.

ತಂಬಾಕು ಮತ್ತು ಮದ್ಯಪಾನದಿಂದ ದೂರವಿರಿ

ತಂಬಾಕು ಮತ್ತು ಮದ್ಯಪಾನ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ ಮತ್ತು ತಂಬಾಕು ಸೇವನೆ ಬಾಯಿ, ಶ್ವಾಸಕೋಶ ಮತ್ತು ಗಂಟಲಿನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಮದ್ಯಪಾನ ಯಕೃತ್ತಿನ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಈ ಅಭ್ಯಾಸಗಳಿಂದ ದೂರವಿರುವುದು ಅತ್ಯಗತ್ಯ.

ಇದನ್ನೂ ಓದಿ: ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ತೂಕ ನಿಯಂತ್ರಣದಲ್ಲಿರಲಿ

ಅತಿಯಾದ ತೂಕ ಹಲವಾರು ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ. ದಿನಕ್ಕೆ ಕನಿಷ್ಠ 15– 20 ನಿಮಿಷ ವ್ಯಾಯಾಮ ಮಾಡುವ ಮೂಲಕ ತೂಕವನ್ನು ನಿಯಂತ್ರಿಸಬಹುದು.

ಕುಟುಂಬ ಇತಿಹಾಸ ಇದ್ದರೆ ಜಾಗೃತೆಯಲ್ಲಿರಿ

ಕುಟುಂಬದಲ್ಲಿ ಕ್ಯಾನ್ಸರ್ ಇತಿಹಾಸ ಇದ್ದರೆ ಹೆಚ್ಚಿನ ಎಚ್ಚರಿಕೆ ಅಗತ್ಯ. ವಿಶೇಷವಾಗಿ ಸ್ತನ ಕ್ಯಾನ್ಸರ್‌ನಂತಹ ಕಾಯಿಲೆಗಳು ತಲೆಮಾರಿನಿಂದ ತಲೆಮಾರಿಗೆ ಬರುವ ಸಾಧ್ಯತೆ ಇದೆ. ಆದ್ದರಿಂದ 20 ವರ್ಷದ ನಂತರ ನಿಯಮಿತ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version