ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ! – Kannada News | Makali Accident: Biker Killed in Multi Vehicle Crash as Onions Are Looted, Sparks Public Outrage
ನೆಲಮಂಗಲ, ಜನವರಿ 21: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಲಾರಿ, ಆಟೋ ಹಾಗೂ ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕ್ಯಾಂಟರ್ ಲಾರಿಗೆ…